ಪ್ರೇಮಿಗಳ ದಿನಾಚರಣೆಯ ಸಂಭ್ರಮ ಸಲಹೆ : ಸಿಂಧು ಭಾರ್ಗವ್. ಬೆಂಗಳೂರು

ಈ ಪ್ರೀತಿಗೆ ಪರಿಧಿ ಎಂಬುದಿಲ್ಲ. ಭ್ರೂಣದಿಂದ ಮರಣದವರೆಗೂ ಪ್ರೀತಿ ವಿಸ್ತಾರವಾಗಿ ಮನಸ್ಸನ್ನು ಹರಡಿಕೊಳ್ಳುತ್ತದೆ. ಅಲ್ಲದೇ ಪ್ರೇಮಿಗಳ ದಿನವನ್ನು ಕೂಡ ಯುವಕ ಯುವತಿಯರು ಮಾತ್ರ ಆಚರಿಸಬೇಕೆಂದಿಲ್ಲ‌. ಪ್ರೀತಿಯನ್ನು ಆರಾಧಿಸುವ ಪ್ರತಿಯೊಬ್ಬನಲ್ಲೂ ಆ ಸಂಭ್ರಮ ಮನೆ‌ ಮಾಡುತ್ತದೆ‌. ತೋರಿಸಿಕೊಳ್ಳದೆ ಇರಬಹುದು. ಇಲ್ಲ ಮುಂಜಾನೆದ್ದು ಮಡದಿ ಕೆನ್ನೆಗೆ ಸಿಹಿ ಮುತ್ತನಿಟ್ಟು ಶುಭಾಶಯ ಕೋರಬಹುದು. ಮಗುವಿನ ಹಣೆಗೆ ಮುತ್ತನಿಟ್ಟು ಅಪ್ಪಿಕೊಂಡು ಮುದ್ದಾಡಬಹುದು. ವಯೋವೃದ್ದ ದಂಪತಿಗಳು ಕೂಡ ಒಂದು ಕೆಂಪು ಗುಲಾಬಿ ನೀಡಿ ಪರಸ್ಪರ ಖುಷಿಪಡಬಹುದು. ಆದರೂ ಪ್ರೇಮಿಗಳ ದಿನಾಚರಣೆ ಎಂದಾಗ ಎಲ್ಲರ ಕಣ್ಣು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿ-ಮರ ಮತ್ತು ಬಳ್ಳಿ: ಕು.ಸ.ಮಧುಸೂದನ ರಂಗೇನಹಳ್ಳಿ

ಅದೊಂದು ಹಳೆಯ ಮರ! ಹಸಿರಿನ ಯಾವ ಕುರಹೂ ಇರದ ಬೋಳು ಮರ. ಅದರ ರೆಂಬೆ-ಕೊಂಬೆಗಳೆಲ್ಲ ಒಣಗಿವೆ. ಮರದ ಬೇರುಗಳಿನ್ನೂ ಸತ್ತಿಲ್ಲವಾದರೂ ನೆಲದ ಕಸುವ ಹೀರಿ ಕಾಂಡ ರೆಂಬೆ ಕೊಂಬೆಗಳಿಗೆ ಜೀವರಸ ತುಂಬಿ ಮತ್ತೆ ಹಸಿರೊಡೆಸುವ ಶಕ್ತಿ ಕ್ಷೀಣವಾಗಿದೆ. ಅದು ಮುಂಚೆ ಹೀಗಿರಲಿಲ್ಲ. ಎಂತಾ ಬಿರು ಬೇಸಿಗೆಯಲ್ಲೂ ಮೈಯೆಲ್ಲಾ ಹಸಿರಾಗಿ ಕೈ ಇಟ್ಟಲ್ಲೆಲ್ಲಾ ಸಮೃದ್ದ ಹಣ್ಣುಗಳ ಖಜಾನೆ. ಅದರ ನೆರಳಲ್ಲಿ ದಣಿವಾರಿಸಿ ಕೊಂಡವರ, ಹಸಿವು ನೀಗಿಸಿಕೊಂಡವರ ಲೆಕ್ಕ ಸ್ವತ: ಅದಕ್ಕೂ ಸಿಕ್ಕಿಲ್ಲ. ಸದಾ ಹಕ್ಕಿಗಳ ಚಿಲಿಪಿಲಿಯಿಂದ ತುಂಬಿರುತ್ತಿದ್ದ ಮರವಿಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿ ಎಂದರೆ

ಪ್ರೀತಿ ಎಂದರೇನು?? ಪ್ರೀತಿ ಎಂಬ ಪದವೇ ಅಮೋಘ. ಆ ಶಬ್ದ ಕಿವಿಗೆ ಬೀಳುತ್ತಲೆ ನಮಗರಿವಿಲ್ಲದೆ ಅದೇಷ್ಟೋ ಭಾವಗಳು ಎದೆಯೊಳಗೆ ಒಮ್ಮೆ ಸುಳಿದಾಡಿಬಿಡುತ್ತವೆ. ಪ್ರೀತಿಯ ಮಧುರತೆಯೆ ಹಾಗೇ. ಅದರಲ್ಲಿ ಯಾವುದೇ ಸ್ವಾರ್ಥವಿಲ್ಲ ಪ್ರೀತಿಸುವ ಹೃದಯ ಸದಾ ಜೊತೆಯಿರಬೇಕು ಎಂಬುದೇ ಅದರ ಬಯಕೆ. ಇಲ್ಲಿ ಸಿರಿವಂತ-ಬಡವ, ಮೇಲು-ಕೀಳು ಎಂಬ ಮಾತೆ ಬರಲ್ಲ. ಯಾಕೆಂದರೆ ಪ್ರೀತಿಗೆ ಯಾವುದೇ ಅಡೆತಡೆಗಳಿಲ್ಲ. ಜಾತಿ, ಧರ್ಮ, ಅಂದ-ಚಂದ, ಮೇಲು-ಕೀಳು ದೊಡ್ಡಸ್ತಿಕೆ ಅದೆಲ್ಲವನ್ನು ಮೆಟ್ಟಿ ಏರಿರುವುದು ಪ್ರೀತಿ. ಪ್ರೇಮದಲ್ಲಿರುವುದು ಹೃದಯಗಳ ಪಿಸುಮಾತುಗಳು, ಭಾವನೆಗಳ ಸಮಾಗಮ, ಮೌನಕವಿತೆ. ಪ್ರೀತಿಯಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪುಲ್ವಾಮದಲ್ಲಿ ಬೆಂದ ಪ್ರೇಮದ ಹೂವು…. : ಲೋಕೇಶ್ ಪೂಜಾರಿ

ಅಂದು ಡಿಸೆಂಬರ್ 18 , ನಾನು 4-5 ತಿಂಗಳ ನಂತರ ಊರಿಗೆ ಹೊರಟಿದ್ದೆ. ಅವತ್ತು ಅವಳ ಜೊತೆ ಕಳೆದ ಕ್ಷಣಗಳು ನಮ್ಮ ಕೊನೆಯ ಕ್ಷಣಗಳು ಆಗಬಹುದು ಅನ್ನುವುದು ನನಗೆ ತಿಳಿದಿರಲಿಲ್ಲ. ಕಲ್ಪನೆಗಳಿಗೆ ಸಿಗದ ಆ ಸಂದರ್ಭ ಗಳನ್ನು ನೆನೆಯುತ ಮನಸ್ಸುಗಳು ಅಳದೇ ಇರಬಹುದೇ…… ನನ್ನ ಅವಳ ಪರಿಚಯ ಕಾಲೇಜು ದಿನಗಳಿಂದಲೇ ಹಸಿರು ಹುಲ್ಲಿನ ಮೇಲೆ ಪ್ರೀತಿಯ ಹೆಜ್ಜೆಗುರುತನ್ನು ಸಹಿ ಮಾಡಿತ್ತು. ಆ ಸಹಿ, ನಮ್ಮಿಬ್ಬರನ್ನು ಪ್ರೇಮದ ಬಂಧನದಲ್ಲಿ ಸಿಲುಕಿಸಿ ನಿತ್ಯವೂ ಖುಷಿ ಖುಷಿಯ ನೂತನ ಊಟವನ್ನು ಮನಸಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಹೊತ್ತೊಯ್ಯುವ ಮುಂಚೆ… ಕೋಳಿ ಪಿಳ್ಳಿಗಳ ಜತೆ ಓಡಾಟ ಹಸುಕರುಗಳೊಡನೆ ಕುಣಿದಾಟ ಗೆಳೆಯರೊಟ್ಟಿಗೆ ಕೆಸರಿನಾಟ ಅಪ್ಪ ಸಾಕಿದ್ದ ಕಂದು ಬಣ್ಣದ ಮೇಕೆಯ ತುಂಟಾಟ, ನಮಗೆಲ್ಲ ಅದರೊಂದಿಗೆ ಆಡುವದು ಇಷ್ಟ ಅಪ್ಪನಿಗೂ ಮೇಕೆಯಂದ್ರೆ ಪ್ರೀತಿ ಗಾಂಧಿತಾತನಂತೆ ಮೇಕೆ ಹಾಲು ಅವನ ಪಾಲಿಗೆ ಪಂಚಾಮೃತ ಅಪ್ಪ ಕೇಳಿದಾಗಲೆಲ್ಲ ಅವ್ವ ಮಾಡಿಕೊಡಲೇಬೇಕು ಚಹಾ ಹಾಲಿಗಿದೆಯಲ್ಲ ಮೊಗೆದಷ್ಟು ತುಂಬಿಕೊಡುವ ಕಾಮಧೇನು ಒಂದು ದಿನ ಅದೇನೋ ತಿಂದ ಮೇಕೆಗೆ ಹೊಟ್ಟೆಯುಬ್ಬರದ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದು, ಜೀವದಂತಿದ್ದ ಮೇಕೆ ಪ್ರಾಣ ಉಳಿಸದ ಪಶುವೈದ್ಯ ಕಟುಕನಂತೆ ಕಂಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಕ್ಕಳ ಕಥೆ: ಸುಳ್ಳು ಕಹಿಯಾಗಿರುವುದು: ಸಿಂಧು ಭಾರ್ಗವ್

ಜೀವಂತ್ ಅಪ್ಪ ಅಮ್ಮನ ಮುದ್ದಿನ ಮಗ. ಆದರೂ ಅವನಿಗೆ ಬೇಕು ಬೇಕಾದ್ದನೆಲ್ಲ ಕೊಡಿಸುತ್ತ ಇರಲಿಲ್ಲ. ಹಣದ ಬೆಲೆ ತಿಳಿಯಲೆಂದು ಹಾಗೆ ಮಾಡುತ್ತಿದ್ದರು. ಆದರೆ ಅಪ್ಪ ಅಮ್ಮ ಇಬ್ಬರೂ ಉದ್ಯೋಗಕ್ಕೆ ಹೋಗುತ್ತಿದ್ದರು. ಆದ ಕಾರಣ ಮನೆಗೆ ಬರುವಾಗ ರಾತ್ರಿ ಎಂಟು ಘಂಟೆಯಾಗುತ್ತಿತ್ತು. ಶಾಲೆಗೆ ಹೋಗುವ ಪುಟ್ಟ ಜೀವಂತ್, ಮನೆಗೆ ಬಂದರೆ ಯಾರೂ ಇರುತ್ತಿರಲಿಲ್ಲ‌. ಹತ್ತು ವರುಷದ ಹುಡುಗನಾದ್ದರಿಂದ ಹೆತ್ತವರಿಗೂ ಏನೂ ಭಯವಿರಲಿಲ್ಲ‌ ಅವನಾಗೇ ಮನೆಗೆ ಬಂದು ಬಾಗಿಲು ತೆರೆದು ಊಟ ಮಾಡಿ, ಹಾಲು ಕುಡಿದು ಟಿ.ವಿ.ನೋಡುತ್ತ ಕುಳಿತು ಕೊಳ್ಳುತ್ತಿದ್ದ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಸ್ತುತ ವಿಜ್ಞಾನ ತಂತ್ರಜ್ಞಾನದ ಬಳಕೆ: ಪ್ರಿಯಾಂಕಾ ಬನ್ನೆಪ್ಪಗೋಳ

ಭಾರತವು ಕೃಷಿ ಪ್ರಧಾನ ದೇಶ ಇಲ್ಲಿ ಹೆಚ್ಚಿನ ಜನರು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಪ್ರಸ್ತುತ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ಅಧಿಕ ಬೆಳೆ ಹಾನಿ ಸಂಭವಿಸಿ ರೈತನು ಆತಂಕಕ್ಕೀಡಾಗಿದ್ದಾನೆ. ರೈತನು ಕೃಷಿಯಲ್ಲಿ ವಿಜ್ಞಾನ ತಂತ್ರಜ್ಞಾನವನ್ನು ಬಳಸಿ ತನ್ನ ಉದ್ಯೋಗದಲ್ಲಿ ಹೆಚ್ಚಿನ ಲಾಭಗಳಿಸಿ ತನ್ನ ಜೀವನಮಟ್ಟವನ್ನು ಸುಧಾರಿಸಬಹುದು. ಇದರಿಂದಾಗಿ ರೈತರ ಜೀವನಮಟ್ಟ ಹೆಚ್ಚಾಗಿ ದೇಶದ ಆದಾಯವೂ ಸಹ ಹೆಚ್ಚಾಗುವುದು. ರೈತನನ್ನು ದೇಶದ ಬೆನ್ನೆಲುಬು ಎಂದು ಕರೆಯುವರು. ರೈತರು ಬೆಳೆಗಳನ್ನು ಬೆಳೆದರೆ ಮಾತ್ರ ನಮಗೆಲ್ಲರಿಗೂ ಆಹಾರ ದೊರೆಯುವುದು. ಇಲ್ಲದಿದ್ದರೆ ಅಧೋಗತಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 6): ಎಂ. ಜವರಾಜ್

-೬- “ಏಯ್, ಎದ್ರು ಮ್ಯಾಕ್ಕೆ..” ನಾನು ದಿಗ್ಗನೆದ್ದು ಅತ್ತಿತ್ತ ನೋಡ್ದಾಗ ಮಿಂಚು ಫಳಾರ್ ಅಂತ ಹೊಳಿತಲ್ಲಾ.. ಗಾಳಿ ಜೋರಾಗಿ ಬೀಸಿತಲ್ಲಾ.. ಕೂಗಿದ್ಯಾರಾ.. ಅಂತ ಅತ್ತಿತ್ತ ನೋಡ್ತ ಕಣ್ಕಣ್ಣು ಬಿಡೊ ಹೊತ್ತಲಿ “ಏಯ್ ಏನ ಕಣ್ಕಣ್ ಬುಡದು ಮಿಂಚು ಹೊಳಿತಿಲ್ವ ಗಾಳಿ ಬೀಸ್ತಿಲ್ವ ಗಡುಗುಡುಗುಡನೆ ಗುಡುಗು ಸದ್ದಾಗದು ಕೇಳ್ತಿಲ್ವ.. ಬಿರ್ಗಾಳಿನೇ ಬರ್ಬೊದು ನೋಡಾ..” ನಾ ಆ ಕಡೆ ದಿಗಿಲಿಂದ ನೋಡ್ತ “ಇಲ್ಲ ಇಲ್ಲ ಹಂಗೇನಿಲ್ಲ.. ಅಂತಂತ ಹಂಗೇ ಕುಂತರು ಬಿಡದ ಆ ಮೆಟ್ಟು ಬೆಂಕಿ ಕೆಂಡದಡೆತರ ಬೆಳಗಿ ಹಾಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಾಲು, ಮಾಲು, ಕೆಲಸ, ಆರಾಮು!!: ಸಹನಾ ಪ್ರಸಾದ್‌

“ಕೆಲಸ, ಕೆಲಸ, ಕೆಲಸ, ಬರೀ ಇದೇ ಆಗೋಯ್ತಲ್ಲ ನಿಂದು” ಶಾಲುಗೆ ಮಾಲು ಬೈಯುತ್ತ ಇದ್ದಿದ್ದು ಪಕ್ಕದ ರೂಮಿನಲ್ಲಿದ್ದ ನನಗೆ ಸ್ಪಷ್ಟವಾಗಿ ಕೇಳುತ್ತಿತ್ತು. “ಇರೋದು ಒಂದು ಜೀವನ, ಎಂಜಾಯ್ ಮಾಡೋದು ಕಲಿತುಕೊ. ರಜೆ ತೊಗೋ, ಮಜಾ ಮಾಡು. ಅದು ಬಿಟ್ಟು…” ಅವಳ ವಾಕ್ ಪ್ರವಾಹ ನಡೀತಾನೆ ಇತ್ತು. ಇವಳು ಮಾತ್ರ ಮೌನ. ಮಧ್ಯಾಹ್ನ ಲಂಚ್ ಗೆ ಶಾಲು ಸಿಕ್ಕಿದಾಗ ಅವಳ ಮುಖದಲ್ಲಿ ಯಾವ ಆತಂಕವೂ ಕಂಡು ಬರಲಿಲ್ಲ. ಹಾಯಾಗಿ ತಂದಿದ್ದ ಊಟ ಮುಗಿಸಿ ಕಾಫಿ ಕುಡೀತಾ ಕುಳಿತ್ತಿದ್ದವಳನ್ನು ನೋಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೊಬೈಲ್ ಸೆಲ್ ಫೋನ್ ಗಳ ಅತಿಯಾದ ಬಳಕೆಯಿಂದಾಗುವ ದುಷ್ಪರಿಣಾಮಗಳು: ಚಂದ್ರಿಕಾ ಆರ್ ಬಾಯಿರಿ

” ಒಂದು ಚಿತ್ರ ಸಾವಿರ ಪದಗಳಿಗಿಂತಲೂ ಮಿಗಿಲು”. ಆನೆಯ ಬಗ್ಗೆ ಸಾವಿರ ಪದಗಳಲ್ಲಿ ಬಣ್ಣಿಸುವುದಕ್ಕಿಂತಲೂ ಆನೆಯ ಒಂದು ಚಿತ್ರವನ್ನು ತೋರಿಸುವುದು ಉತ್ತಮ ಎಂದು ಹೇಳುವುದುಂಟು. ಚಿಕ್ಕ ಮಕ್ಕಳಿಗೆ ಪಾಠ ಮಾಡುವಾಗ ಕೇವಲ ವಿವರಣೆ ನೀಡುವುದಕ್ಕಿಂತಲೂ ಚಾರ್ಟ್ ಗಳನ್ನು ತೋರಿಸಿ ಬೋಧಿಸಿದರೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಈಗಿನ ಕಂಪ್ಯೂಟರ್ ಯುಗದಲ್ಲಿ ಪಾಠಕ್ಕೆ ಸಂಬಂಧಿಸಿದ ವೀಡಿಯೋಗಳನ್ನು ತೋರಿಸುವುದರಿಂದ ಪಾಠವು ನೈಜ ಅನುಭವವನ್ನು ನೀಡುತ್ತದೆ. ಇನ್ನು ಹಿಂದಿನ ಕಾಲದಲ್ಲಿ ಮನೆಮನೆಗಳಲ್ಲಿ ರೇಡಿಯೋಗಳಿತ್ತು. ಜನರು ವಾರ್ತೆಗಳನ್ನು, ಚಿತ್ರಗೀತೆಗಳನ್ನು ಕೇಳುತ್ತಲೇ ದಿನದ ಕೆಲಸಗಳನ್ನು ಲವಲವಿಕೆಯಿಂದ ಮಾಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನಸ್ಸು ಒಂದು ಅದ್ಬುತ ಶಕ್ತಿ!: ಕೆ ಟಿ ಸೋಮಶೇಖರ್ ಹೊಳಲ್ಕೆರೆ.

ಮನಸ್ಸು ಅದ್ಭುತವಾದುದು! ಅತ್ಯದ್ಬುತವಾದುದು! ಯಾರೂ ಅವರವರ ಮನಸ್ಸಿನ ಬಗ್ಗೆ ಚಿಂತಿಸಿದರೆ ಮನಸ್ಸಿನ ಅದ್ಭುತ ಶಕ್ತಿ ಗಮನಕ್ಕೆ ಬರುವುದು. ಅದರ ಬಗ್ಗೆ ಚಿಂತಿಸದಿರುವುದರಿಂದ ಅದರ ಅದ್ಭುತ ಶಕ್ತಿ ಗಮನಕ್ಕೆ ಬರುವುದಿಲ್ಲ! ಆದ್ದರಿಂದ ಯಾರೂ ಮನಸ್ಸಿನ ಅದ್ಭುತ ಶಕ್ತಿಯನ್ನು ಸದುಪಯೋಗ ಮಾಡಿಕೊಳ್ಳುವುದೇ ಇಲ್ಲ! ಆದನ್ನು ಬಳಸಿದರೆ ಅದಕ್ಕೆ ಇರುವ ಅದ್ಬುತ ಶಕ್ತಿ ತಿಳಿಯುವುದು! ಈಗ ಮನಸ್ಸಿಗೆ ಅದ್ಭುತ ಶಕ್ತಿ ಇದೆ ಎಂದು ಹೇಗೆ ನಂಬಬೇಕು ಎಂಬ ಪ್ರಶ್ನೆ ಎಲ್ಲರನ್ನೂ ಕಾಡಿರಬಹುದು. ಹೌದು! ಅದಕ್ಕಿರುವ ಶಕ್ತಿ ಗೊತ್ತಾಗುವುದಿಲ್ಲ! ಅದು ಜೀವಂತ ಮಾನವನಲ್ಲಿದ್ದರೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಸಾಧನಕೇರಿಯ ಬೇಂದ್ರೆ ಅಜ್ಜ ಕನ್ನಡ ನುಡಿಸೇವೆ ನಿನ್ನ ಕಜ್ಜ. ಪದ್ಯ ಕಟ್ಟಿ ಹಾಡಿದ್ಯಂದ್ರೆ ಕೇಳೋ ಕಿವಿಗಳಿಗೆ ಇಲ್ಲ ತೊಂದ್ರೆ… ಅಜ್ಜ ನಿನ್ನ ಬರೆಯೋ ಕೋಲ್ಗೆ ಎಂಥ ಶಕ್ತಿ ಇತ್ತು. ಅದ್ನೆ ನೀನು ಎತ್ತಿ ಹಿಡಿದೆ ನಿನ್ನ ಕೈ ಕಲ್ಪವೃಕ್ಷವಾಯ್ತು… ನಗ್ ನಗ್ತ್ ಹೇಳ್ದೀ ಬುದ್ಧಿಮಾತು ನಿನ್ ದುಃಖ ನೀನ್ ನುಂಗಿ. ಅಜ್ಜ ಅಂದ್ರ ನೆನಪಿಗ್ ಬರ್ತದ ತಲೆಗೆ ಪಟಗ ನಿಲುವಂಗಿ.. ಅಜ್ಜ ನಿನ್ ಪದಗಳಂತು ಸಜ್ಜಿತೆನಿ ತೊನೆದ್ಹಾಂಗ. ಕೇಳ್ತಾ ಕೇಳ್ತಾ ತಲೆದೂಗ್ತಾವಾ ಹಸುಕಂದಮ್ಗಳು ಹಾಂಗಾ.. ಬಾಳ್ಗೆ ನಾಕು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೋಕರ್ ಮತ್ತು ಅವನ ಹಿಂದಿನ ತಲೆಮಾರಿನವರು!!: ಸಂತೋಷ್ ಕುಮಾರ್ ಎಲ್.ಎಂ.

೨೦೧೯ರಲ್ಲಿ ಬಿಡುಗಡೆಯಾಗಿ ಬಾಕ್ಸಾಫೀಸಿನಲ್ಲಿ ಕೊಳ್ಳೆ ಹೊಡೆದು, ವಿಮರ್ಶಕರಿಂದ ಶಹಬ್ಬಾಷ್ ಅನ್ನಿಸಿಕೊಂಡ ಇಂಗ್ಲೀಷ್ ಸಿನಿಮಾ “ಜೋಕರ್”. ಈ ಸಿನಿಮಾ ನೋಡಿದ ಮೇಲೆಯೂ ಸಿಕ್ಕಾಪಟ್ಟೆ ಕಾಡುತ್ತದೆ. ಅಸಹಾಯಕತೆ, ಅವಮಾನ, ಹಿಂಸೆ, ತಾನು ಬೆಳೆದ ರೀತಿ, ಕೆಟ್ಟ ಬಾಲ್ಯ.. ಎಲ್ಲವೂ ಒಬ್ಬನನ್ನು ಹೇಗೆ ಹಿಂಸೆಗೆ ತಳ್ಳುತ್ತದೆ ಅನ್ನುವ ಸಿನಿಮಾ. ಗಮನಿಸಿದರೆ ಜೋಕರ್ ಮಾಡುವ ಪ್ರತೀ ಕೊಲೆಗೂ ಒಂದೊಂದು ಕಾರಣವಿದೆ ಈ ಸಿನಿಮಾ ನೋಡಿದ ಮೇಲೆ ಅದರ ವಿವರಗಳ ಬಗ್ಗೆ ಕಣ್ಣಾಯಿಸಿದಾಗ ಸಿಕ್ಕ ಎರಡು ಸಿನಿಮಾಗಳು “ಟ್ಯಾಕ್ಸಿ ಡ್ರೈವರ್(೧೯೭೬)” ಮತ್ತು “ದ ಕಿಂಗ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕತೆ: ಸೂರಿ ಹಾರ್ದಳ್ಳಿ

ಕಂಪನಿಯೊಂದರಲ್ಲಿ ಒಳ್ಳೆಯ ಉದ್ಯೋಗದಲ್ಲಿದ್ದು ಆರಂಕಿಯ ಸಂಬಳ ಪಡೆಯುತ್ತಿದ್ದ ಕಾಶೀಪತಿಗೆ ಸಾಲದ ತುರ್ತು ಅವಶ್ಯಕತೆಯೇನೂ ಇರದಿದ್ದರೂ ಆ ಜಾಹಿರಾತು ಅವನ ತಲೆಯಲ್ಲಿ ದುಷ್ಟ ಯೋಚನೆಗಳನ್ನು ತುಂಬಿದ್ದಂತೂ ನಿಜ. ಪತ್ರಿಕೆಯೊಂದರಲ್ಲಿ ಪ್ರಕಟವಾದ ‘ವೈಯಕ್ತಿಕ ಸಾಲ ಬೇಕಾಗಿದೆಯೇ? ಕೇವಲ ಮೂರು ಪರ್ಸೆಂಟ್ ಬಡ್ಡಿಯಲ್ಲಿ ಎರಡು ಕೋಟಿ ರೂ.ಗಳ ತನಕ ಸಾಲ ಪಡೆಯಿರಿ. ಸಂಪರ್ಕಿಸಿ..’ ಎಂಬ ಕ್ಲಾಸಿಫೈಡ್ ಜಾಹೀರಾತು ಬೆಳಗಿನ ಬಿಸಿ ಬಿಸಿ ಕಾಫಿ ಹೀರುತ್ತಿದ್ದ ಕಾಶೀಪತಿಯ ಕಣ್ಣಿಗೂ ಬಿದ್ದಿತ್ತು, ಅವನ ಹೆಂಡತಿ ಮಾದೇವಿಯ ಕಣ್ಣಿಗೂ ಬಿದ್ದಿತ್ತು. ಕಾಶೀಪತಿ ಪತ್ರಿಕೆಯ ಇತರ ಸುದ್ದಿಗಳನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಟಾವು: ವೀಣಾ ನಾಗರಾಜು

‘ಲಚ್ಚೀ ಏ ಲಚ್ಚೀ ಅದೇನು ಮಾಡ್ತಾ ಇದ್ದೀಯಮ್ಮೀ ಒಳಗೇ ಆಗಲೇ ಏಟೋತ್ತಾಗದೆ ಬಿರನೆ ಒಂದೆರಡು ತುತ್ತು ಉಂಡು ಬರಬಾರದಾ.? ಮಧ್ಯಾಹ್ನಕ್ಕೆ ಅಂತಾ ಒಂದು ಮುದ್ದೆ ಹೆಚ್ಚಾಗಿ ಬುತ್ತಿ ಕಟ್ಕೋ ಉಂಬಕೆ ವಸಿ ಸಮಯ ಆದರೂ ಸಿಗ್ತದೇ. ನೀ ಹಿಂಗೇ ಉಂಡಿದ್ದೆಲ್ಲಾ ಕೈಗೆ ಕಾಲಿಗೆ ಇಳಿಸ್ಕೊಂಡು ಕುಂತರೇ ಇವೊತ್ತೂ ಆ ಗುತ್ತಿಗೆದಾರ ಶಾಮಣ್ಣನ ತಾವ ಉಗಿಸಿಕೊಳ್ಳೋದರ ಜೊತಿಗೆ ಒಂದು ಗಂಟೆ ಸಂಬಳಕ್ಕೂ ಕತ್ತರಿ ಹಾಕಿಸ್ಕೋಬೇಕಾಗುತ್ತೆ. ಮೊದಲೇ ನಮ್ಮ ಗ್ರಹಚಾರ ಬೇರೆ ಸರಿ ಇಲ್ಲಾ ನಿನ್ನೆ ಸ್ವಲ್ಪ ತಡವಾಗಿ ಹೋಗಿದ್ದಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಬ್ಬರು ಗೆಳೆಯರು: ಆಶಾರಾಣಿ

ಮನೆಯ ಹೊರಗಿನ ಹೂದೋಟದಲ್ಲಿ ಒಂದು ಹೆಗ್ಗಣ ಮತ್ತು ಇಲಿ ವಾಸವಾಗಿದ್ದವು. ದಿನವೂ ಮನೆಯ ಯಜಮಾನಿ ಹೊರಗೆ ಚೆಲ್ಲುವ ಮುಸುರೆಯಲ್ಲಡಗಿರುವ ಅನ್ನ, ಕಾಳು, ತರಕಾರಿಗಳನ್ನು ಆಯ್ದಾಯ್ದು ತಿಂದುಂಡು ಸಂತೋಷದಿಂದ ದಿನಗಳನ್ನು ದೂಡುತ್ತಿದ್ದವು. ಹೀಗಿರಬೇಕಾದರೆ ಒಂದು ದಿನ ಹೆಗ್ಗಣಕ್ಕೊಂದು ಕೆಟ್ಟ ಆಲೋಚನೆ ಹೊಳೆಯಿತು. ಅದು ತನ್ನ ಗೆಳೆಯನಿಗೆ, “ಏಯ್, ಗೆಳೆಯಾ. . ಎಷ್ಟು ದಿನವೆಂದು ಈ ಮುಸುರೆಯನ್ನವನ್ನು ತಿಂದುಂಡು ಜೀವಿಸುವುದು!?ಹೊಟ್ಟೆಬಿರಿಯುವ ಹಾಗೆ ತಿನ್ನಲು ಏನಾದರೂ ಹೊಸ ಉಪಾಯ ಹುಡುಕೋಣ” ಎಂದಿತು. ಇಲಿಗೆ ಆಶ್ಚರ್ಯದೊಂದಿಗೆ ಸಂದೇಹವುಂಟಾಯಿತು “ಅಲ್ಲಾ ಗೆಳೆಯ, ಹೇಗೊ ಸಿಕ್ಕಿದ್ದನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಗೆಯ ಕೊಳಲು: ರೇಣುಕಾ ಕೋಡಗುಂಟಿ

ಅದೊಂದು ದಟ್ಟ ಅರಣ್ಯ. ಆ ಅರಣ್ಯದ ಒಂದು ಭಾಗವು ಗುಂಪು ಗುಂಪಾದ ಹಚ್ಚ ಹಸಿರಿನಿಂದ ಕೂಡಿತ್ತು. ಅಲ್ಲಿ ಎಲ್ಲಾ ಬಗೆಯ ಮರಗಳು ಬೆಳೆದು ನಿಂತು ತಂಪು ಸೂಸುತ್ತಾ, ಹೂವುಗಳ ಪರಿಮಳ ಬೀರುತ್ತಾ ಕಣ್ಣಿಗೆ ಮುದ ನೀಡುವಂತಿದ್ದವು. ಆ ಗಿಡಗಳ ಕಾಲ ಅಡಿಯಲ್ಲಿ ನೀರಿನ ಸಣ್ಣ ಹಳ್ಳ ಜುಳು ಜುಳು ಸದ್ದು ಮಾಡುತ್ತಾ ಹರಿಯುತ್ತಿತ್ತು. ಇದರೊಂದಿಗೆ ಹಕ್ಕಿಗಳ ಕಲರವವೂ ಜೊತೆಗೂಡಿ ಸಂಗೀತ ಹೊಮ್ಮಿದಂತಿತ್ತು. ಅರಣ್ಯದ ಈ ಒಂದು ಭಾಗವು ಹಕ್ಕಿಗಳಿಗೆ ಮೀಸಲಾಗಿತ್ತು. ಎಲ್ಲಾ ಬಗೆಯ ಹಕ್ಕಿಗಳು ಅಲ್ಲಿ ನೆಲೆಸಿದ್ದವು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ ೫): ಎಂ. ಜವರಾಜ್

-೫- ಅಯ್ಯೋ ದೇವ್ರೇ ಯಾಕಪ್ಪ ಈ ಕ್ವಾಟ್ಲ ಕೊಟ್ಟ ನಂಗ ಈ ಅಯ್ನೋರು ಒಳಗ ಹೋದೋರು ಇನ್ನುವ ಅದೇನ್ಮಾಡ್ತಿದ್ದರೋ.. ಈ ಅಯ್ನೋರ್ ದೆಸೆಯಿಂದ ಈ ಕತ್ಲೊಳ್ಗ ನಾ ಒಬ್ನೆ ಆದ್ನಲ್ಲೊ.. ಒಳಗೆ ಅದೇನೋ ಸದ್ದು ನಾ ನೋಡವ ಅಂದ್ರ ಬಾಗಿಲು ಮುಚ್ಚಿತ್ತು “ನೋಡು ಅವತ್ತು ಬಂದಾಗ ಏನಂದೆ ನೀನು ಬಂದು ಬಂದು ಹೋದ್ರ ನಾ ಬುಟ್ಟಿನಾ ತಂದು ಕೊಡಗಂಟ ನನ್ನ ಮುಟ್ಟಂಗಿಲ್ಲ” ಮಾತು ಬಾಗಿಲು ಸೀಳಿ ಬಂದದ್ದು ಗೊತ್ತು. ಈ ನಾಯಿ ಬಡ್ಡೆತದು ಈ ಕತ್ತಲ ಸಾಮ್ರಾಜ್ಯದಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂಬಿಕಾತನಯನ ಕಾವ್ಯಾನುಸಂಧಾನ: ಅಶ್ಫಾಕ್ ಪೀರಜಾದೆ

ದಿನಾಂಕ ೦೭/೦೧/೨೦೨೦ ರಂದು ಧಾರವಾಡದ ಬೇಂದ್ರೆ ಭವನದಲ್ಲಿ ವಿಜಯಶ್ರೀ ಸಾಹಿತ್ಯ ಪ್ರಶಸ್ತಿ ವಿಜೇತ ಯುವ ಸಾಹಿತಿ ಶ್ರೀ ಮಾರ್ತಾಂಡಪ್ಪ ಎಂ. ಕತ್ತಿಯವರು ರಚಿಸಿದ “ಅಂಬಿಕಾತನಯನ ಕಾವ್ಯಾನುಸಂಧಾನ” ಗ್ರಂಥ ಲೋಕಾರ್ಪಣೆಗೊಂಡಿತು. ಈ ಪ್ರಯುಕ್ತ ಕೃತಿ ಪರಿಚಯ ಇಲ್ಲಿದೆ. ಈ ಕೃತಿಯಲ್ಲಿ ಕತ್ತಿಯವರು ಒಟ್ಟು ಮೂವತ್ತಾರು ಬೇಂದ್ರೆ ಕವಿತೆಗಳೊಂದಿಗೆ ಹೃದಯ ಸಂಪರ್ಕ ಸಾಧಿಸಿದ್ದಾರೆ. ವರ ಕವಿ ಬೇಂದ್ರೆಯವರ ವಿವಿಧ ಕಾವ್ಯ ಸಂಕಲನಗಳಿಂದ ಅತಿಮುಖ್ಯ ಅನಿಸುವ ಕವಿತೆಗಳನ್ನು ಅಯ್ದುಕೊಂಡು ಅದರೊಂದಿಗೆ ಅನುಸಂಧಾನ ನಡೆಸಿದ್ದಾರೆ. ನಾಕು ತಂತಿ, ಜೋಗಿ, ಪರಾಗ, ಏಲಾಗೀತ, ನನ್ನವಳು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

3rd ಕ್ಲಾಸ್ ಕನ್ನಡ ಸಿನಿಮಾ ಫೆ. 7ಕ್ಕೆ ಬಿಡುಗಡೆ: ವೀರಣ್ಣ ಮಂಠಾಳಕರ್

ನಟ, ನಿರ್ಮಾಪಕ ನಮ್ ಜಗದೀಶ ಅಭಿನಯದ ಹಣೆ ಬರಹಕ್ಕೆ ಹೊಣೆ ಯಾರು? ಅಡಿ ಬರಹದ 3rd ಕ್ಲಾಸ್ ಕನ್ನಡ ಸಿನಿಮಾ ಫೆ. 7ಕ್ಕೆ ಬಿಡುಗಡೆಯಾಗಲಿದೆ. ಸಿನಿಮಾ ಎಂದರೆ ಇಂದಿನ ಯುವಪೀಳಿಗೆಗೆ ತುಂಬಾ ಅಚ್ಚುಮೆಚ್ಚು. ಅಂಥದರಲ್ಲಿ ಇತ್ತೀಚಿಗೆ ಹಲವು ಪ್ರತಿಭಾವಂತರು ಕನ್ನಡ ಚಿತ್ರರಂಗದಲ್ಲಿ ಪಾದಾರ್ಪಣೆ ಮಾಡುತ್ತಲೇ ತಮ್ಮ ಭವಿಷಕ್ಕೆ ತಾವೇ ಮುನ್ನುಡಿಯನ್ನು ಬರೆದುಕೊಳ್ಳುತಿದ್ದಾರೆ. ಆ ಒಂದು ದಾರಿಯಲ್ಲಿ ಸಾಗುತ್ತಿರುವ ನಮ್ ಜಗದೀಶ ಅವರು 3rd ಕ್ಲಾಸ್ (ಹಣೆ ಬರಹಕ್ಕೆ ಹೊಣೆ ಯಾರು?) ಎಂಬ ಅಡಿ ಬರಹದ ಹೊಚ್ಚ ಹೊಸ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ನೇಹಿತೆ….ಪತ್ನಿ…ಗೆಳತಿ…ಮಡದಿ..: ಸಹನಾ ಪ್ರಸಾದ್

ಶೀರ್ಷಿಕೆ ವಿಚಿತ್ರವಾಗಿದೆ ಅಂದಿರಲ್ಲಾ? ಹೌದು, ಗೆಳತಿಯೊಬ್ಬಳು ಮಡದಿಯಾದ ಮೇಲೂ ಮತ್ತೆ ಸ್ನೇಹಿತೆಯಾಗಬಲ್ಲಳೇ? ಈಗಿನ ಯುವ ಪೀಡಿಗೆಯಲ್ಲಿ ಗಂಡ ಹೆಂಡಿರ ನಡುವೆ ಸಾಕಷ್ಟು ಸ್ನೇಹವಿರುತ್ತದೆ. ನಾ ಇತ್ತೀಚಿಗೆ ಕಂಡಿರುವ ಚಿಕ್ಕ ವಯಸ್ಸಿನ ದಂಪತಿಗಳಲ್ಲಿ, ನಮ್ಮ ಜ಼ಮಾನದಲ್ಲಿ ಇದ್ದ ಕೆಲವು ಸಂಗತಿಗಳು ಕಾಣಸಿಗುವುದಿಲ್ಲ. ಅದೂ ನಗರಗಳಲ್ಲಿ. ಗಂಡನನ್ನು ” ನೀವು” ಅನ್ನುವುದು ಈ ಕಾಲದಲ್ಲಿ ಅಪರೂಪ. ಕೆಲಸಗಳನ್ನು ಇಬ್ಬರೂ ಸರಿ ಸಮಾನವಾಗಿ ಹಂಚಿಕೊಂಡು ಮಾಡುವುದೂ ಕೂಡ ಕಾಣಸಿಗುತ್ತದೆ. ಇಬ್ಬರೂ ಕೆಲಸಕ್ಕೆ ಹೋಗುವಾಗ ಇದು ಅತ್ಯಗತ್ಯ ಕೂಡ. ನಮ್ಮ ಕಾಲದ ” … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪರಸಗಡ ನಾಟಕೋತ್ಸವ 2020: ವೈ. ಬಿ. ಕಡಕೋಳ

ಜನೇವರಿ 25 ರಿಂದ ಪೆಬ್ರವರಿ 2 ರ ವರೆಗೆ ಸವದತ್ತಿ ಕೋಟೆಯಲ್ಲಿ ಪರಸಗಡ ನಾಟಕೋತ್ಸವ 2020 ಈ ವರ್ಷ ಸವದತ್ತಿ ಕೋಟೆಯ ಆವರಣದಲ್ಲಿ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಮತ್ತು ರಂಗ ಆರಾಧನಾ ಸಾಂಸ್ಕøತಿಕ ಸಂಘಟನೆ(ರಿ) ಸವದತ್ತಿ ಇವರ ಸಹಯೋಗದಲ್ಲಿ ಪರಸಗಡ ನಾಟಕೋತ್ಸವ ಇದೇ ಜನೇವರಿ 25 ರಿಂದ ಆರಂಭವಾಗುತ್ತಿದೆ. ಈ ಸಂಘಟನೆಯವರು ಶ್ರೀ ವಿಶ್ವೇಶ್ವರತೀರ್ಥ ಪೇಜಾವರ ಶ್ರೀಗಳ ಹಾಗೂ ಶ್ರೀ ಗಿರೀಶ್ ಕಾರ್ನಾಡ್ ಸ್ಮರಣೆಯೊಂದಿಗೆ ಈ ನಾಟಕೋತ್ಸವವನ್ನು ಹಮ್ಮಿಕೊಂಡಿದ್ದು. ಸವದತ್ತಿ ಸ್ವಾದಿಮಠದ ಶ್ರೀ ಶಿವಬಸವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಕ್ಕಳ ಕವನ: ವೆಂಕಟೇಶ್ ಚಾಗಿ, ದೀಪು

ನನ್ನ ತಂಗಿ ಪುಟ್ಟ ಪುಟ್ಟ ಹೆಜ್ಜೆ ಇಡುತಾ ನನ್ನ ತಂಗಿ ಬರುವಳು ಅಣ್ಣಾ ಎಂದು ತೊದಲುನುಡಿದು ನನ್ನ ಮನವ ಸೆಳೆವಳು || ತಿನ್ನಲು ಒಂದು ಹಣ್ಣು ಕೊಡಲು ನನ್ನ ಬಳಿಗೆ ಬರುವಳು ಅಲ್ಪಸ್ವಲ್ಪ ಹಣ್ಣು ತಿಂದು ಮನೆಯ ತುಂಬಾ ಎಸೆವಳು || ಕಣ್ಣೇ ಮುಚ್ಚೆ ಕಾಡೆಗೂಡೆ ಆಟ ಆಡು ಎನುವಳು ಅಮ್ಮನಿಂದ ಅಡಗಿ ಕುಳಿತು ನಕ್ಕು ನನ್ನ ಕರೆಯುವಳು || ನನ್ನ ಕಾರು ನನ್ನ ಗೊಂಬೆ ತನಗೂ ಬೇಕು ಎನುವಳು ಕೊಡುವ ತನಕ ಹಠವಮಾಡೇ ಅಪ್ಪ ಅಮ್ಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾಲ್ಯದಲ್ಲಿ ಪ್ರಭಾವಿತವಾದ ಯಕ್ಷಗಾನ ಕಲೆ-ಕರ್ನಾಟಕದ ಜಾನಪದ ಕಲೆ: ಚಂದ್ರಿಕಾ ಆರ್ ಬಾಯಿರಿ

ಕಂಬಳಿ ಹೊದ್ದು ತೆಂಗಿನ ಗರಿಯ ಚಾಪೆಯ ಮೇಲೆ ಕುಳಿತು ತೂಕಡಿಸುತ್ತ ಕಡಲೆಬೀಜ, ಚುರುಮುರಿ ತಿನ್ನುತ್ತ ಯಕ್ಷಗಾನ ನೋಡುವ ಪರಿ ಆಹಾ! ಎಷ್ಟು ಸುಂದರ. ರಾತ್ರಿ 7 ಗಂಟೆಗೆ ಊರಿನವರೆಲ್ಲಾ ಸೇರಿ ಕಿಲೋಮೀಟರ್ ಗಟ್ಟಲೆ ಟಾರ್ಚ್ ಹಿಡಿದು ನಡೆದೇ ಹೋಗುವುದು ನನಗಿನ್ನೂ ನೆನಪಿದೆ. ಹಾಗೆಯೇ ಅಪ್ಪನೊಂದಿಗೆ ಯಕ್ಷಗಾನ ತರಗತಿಗೆ ಹೋಗಿ ಅವರೊಂದಿಗೆ ಒಂದೆರಡು ಹೆಜ್ಜೆ ಹಾಕಿದ ಆ ರಸಮಯ ಕ್ಷಣಗಳು ನಿಜಕ್ಕೂ ಅವಿಸ್ಮರಣೀಯ. ಇಂತಹ ಬಾಲ್ಯ ಖಂಡಿತ ಇನ್ನೊಮ್ಮೆ ಸಿಗದು. ಆ ಕಾಲಘಟ್ಟದಲ್ಲಿ ಹುಟ್ಟಿದ ನಾವೆಲ್ಲರೂ ಪುಣ್ಯವಂತರು. ಕಂಬಳ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಏಳನೇ ಬಾರಿಗೆ ಕಸ ರವಾನೆ: ಸಂತೋಷ್‌ ಗುಡ್ಡಿಯಂಗಡಿ

ಇತ್ತೀಚಿಗಷ್ಟೆ ಹೆಗ್ಗಡಹಳ್ಳಿಯ ಮಕ್ಕಳ “ನಿಮ್ಮ ಕಸ ನಿಮಗೆ” ಅಭಿಯಾನಕ್ಕೆ ಪ್ರತಿಕ್ರಿಯೆ ನೀಡಿ ಇದೊಂದು ಶ್ಲಾಘನೀಯ ಕೆಲಸ, ನಿಮ್ಮ ಪರಿಸರ ಕಾಳಜಿಯನ್ನು ನಾವು ಮೆಚ್ಚಿಕೊಂಡಿದ್ದೇವೆ, ನಾವೂ ಕೂಡ ಈ ಪರಿಸರವನ್ನು ಉಳಿಸಲು ಮತ್ತು ನಮ್ಮ ಕಂಪೆನಿಯಿಂದ ಈ ಪರಿಸರಕ್ಕೆ ಆಗುವ ಹಾನಿಯನ್ನು ತಪ್ಪಿಸಲು ಬದ್ಧರಾಗಿದ್ದೇವೆ ಎಂದು ಹೇಳಿದ ಬೆನ್ನಲ್ಲೆ ಮಕ್ಕಳು ಮತ್ತೆ ಹನ್ನೊಂದು ಕಂಪೆನಿಗಳಿಗೆ ಇಂದು ಕಸ ರವಾನೆ ಮಾಡಿದ್ದಾರೆ. ಹೆಗ್ಗಡಹಳ್ಳಿಯ ಸರ್ಕಾರಿ ಪ್ರೌಢ ಶಾಲಾ ಮಕ್ಕಳು 2019ರ ಏಪ್ರಿಲೆ ತಿಂಗಳಿಂದ ನಿಮ್ಮ ಕಸ ನಿಮಗೆ ಎಂಬ ದೇಶದಲ್ಲೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಂಗಳತ್ತೆಯ ಮಿ ಟೂ ಅಭಿಯಾನ!: ಹುಳಗೋಳ ನಾಗಪತಿ ಹೆಗಡೆ

ಇತ್ತೀಚೆಗೆ ಟಿ.ವಿ. ಚಾನೆಲ್‍ಗಳಲ್ಲಿ ಹಾಗೂ ಪತ್ರಿಕೆಗಳಲ್ಲಿ ಪ್ರಸಾರವಾಗುತ್ತಿರುವ ‘ಮಿ ಟೂ’ ಅಭಿಯಾನ ದೇಶದೆಲ್ಲೆಡೆ ಭಾರೀ ಸಂಚಲನವನ್ನೇ ಸೃಷ್ಟಿಸಿತು. ಕೆಲವರು ರಾಜಕೀಯ ಮುಖಂಡರ ಕೈಗೆ ಕರವಸ್ತ್ರ ಕೊಡಿಸಿದರು; ಮಂತ್ರಿಗಳು ಮನೆಯ ಹಾದಿ ಹಿಡಿಯುವಂತಹ ಕಳವಳಕಾರೀ ಸನ್ನಿವೇಶÀವನ್ನೇ ಸೃಷ್ಟಿಸಿಬಿಟ್ಟರು. ಇನ್ನೂ ಕೆಲವು ಚಲನಚಿತ್ರ ರಂಗದ ಮಹಿಳೆಯರು ಹೆಸರು ಮಾಡಿದ ನಿರ್ದೇಶಕರು, ಸುಪ್ರಸಿದ್ಧ ನಾಯಕ ನಟರನ್ನು ಪಿಶಾಚಿಯಂತೆ ಬೆನ್ನತ್ತಿ ಕಾಡಿದರು. ಅವರು ಇವರ ಮೇಲೆ ಗೂಬೆ ಕೂಡ್ರಿಸಿದರು; ಇವರು ಅವರ ಮುಖಕ್ಕೆ ಮಸಿ ಬಳಿದರು. ಚಾನೆಲ್‍ಗಳಿಗಂತೂ ರೊಟ್ಟಿಯಲ್ಲ, ಹೋಳಿಗೆಯೇ ತುಪ್ಪದಲ್ಲಿ ಜಾರಿಬಿದ್ದಂತಾಗಿತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೇಂದ್ರೆಯವರ ಸಿರಿವಂತಳೆನಿಸುವ ‘ ನಾನು ಬಡವಿ ‘ !: ಕೆ ಟಿ ಸೋಮಶೇಖರ ಹೊಳಲ್ಕೆರೆ.

ಯುಗದ ಕವಿ ಜಗದ ಕವಿ ಶಬ್ದ ಗಾರುಡಿಗ ನಾದಬ್ರಹ್ಮ ನಾಕು ತಂತಿಯಿಂದ ಜ್ಞಾನಪೀಠಕ್ಕೇರಿದವರೂ ಆದ ಡಾ. ದ ರಾ ಬೇಂದ್ರೆಯವರ ‘ ನಾನು ಬಡವಿ ‘ ಎಂಬ ಪ್ರೀತಿಯ ಮಹತ್ವ ಸಾರುವ ಒಲವಿನ ಗೀತೆ ನನ್ನ ಮಿತಿಯೊಳಗೆ ನಾನು ಕಂಡಂತೆ! ಈ ಗೀತೆಯನ್ನು ಕವಿ ಬಡವಿಯ ಮೂಲಕ ತನ್ನ ಒಲವಿನ ದಾಂಪತ್ಯದ ವರ್ಣನೆ ಮಾಡುತ್ತಿರುವಂತೆ ರಚಿಸಿದ್ದಾರೆ. ಬಡವಿಯ ಸ್ವಗತದಂತಿದೆ. ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು ಬಳಸಿಕೊಂಡೆವದನೆ ನಾವು ಅದಕು ಇದಕು ಎದಕು. ಹತ್ತಿರಿರಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ