ಕೌಟುಂಬಿಕ ಮೌಲ್ಯ ಮತ್ತು ವಿಶ್ವಭ್ರಾತೃತ್ವ: ಡಿ. ಪಿ. ಭಟ್, ಪುತ್ತೂರು.

ಅನೇಕ ತೀರ್ಥ ಕ್ಷೇತ್ರಗಳನ್ನು, ಹಲವು ಪರಿಶುದ್ಧ ಪಾವಿತ್ರ್ಯತೆಯಿಂದ ಕೂಡಿದ ಕಲ್ಯಾಣಿಗಳನ್ನು, ಮಠ ಮಂದಿರಗಳನ್ನು, ವಿದ್ಯಾ ದೇಗುಲಗಳನ್ನು ಸೇರಿದಂತೆ ಹಿಮಾಲಯದಿಂದ ಕನ್ಯಾಕುಮಾರಿಯವರೆಗೆ ಒಳಗೊಂಡಿರುವ ಹಲವು ಪ್ರಕೃತಿ ವಿಸ್ಮಯಾತ್ಮಕ ರಮಣೀಯ ಸ್ಥಳಗಳ ಮೂಲಕ ಪ್ರವಹಿಸುತ್ತಿರುವ ಆಧ್ಯಾತ್ಮಿಕತೆಯ ಅಭಿವ್ಯಕ್ತಿಯಿಂದ ನಮ್ಮ ಭಾರತವು ಕಂಗೊಳಿಸುತ್ತಿದೆ. ಪರಮೋತ್ಕಟ ಭಕ್ತಿಭಾವೋನ್ಮಾದಸ್ನಾತರಾದ ರಾಮ, ಸೀತಾ, ಕೃಷ್ಣ,  ಶಂಕರರು, ರಾಮಾನುಜರು, ಮಾಧ್ವರು, ಶೀರಾಮಕೃಷ್ಣರು, ಶ್ರೀಮಾತೆ ಶಾರದಾದೇವಿ, ಸ್ವಾಮೀ ವಿವೇಕಾನಂದರಂತಹ ಭಗವದ್ ಸತ್ಪುರುಷರು, ಸಂತರು, ಶರಣರು, ದಾರ್ಶನಿಕರು ಓಡಾಡಿದ ದೇಶವಿದು. ಆಧ್ಯಾತ್ಮಿಕ ಶಕ್ತಿಯ ಪ್ರಬಲತೆಯಿಂದ ಕೂಡಿದ ಭರತ ಭೂಮಿಯಲ್ಲಿಂದು ಕೊಲೆ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಾಗದಿರಲಿ ನೋವು ಮರೆಸುವ ನಗು!: ಜಯಶ್ರೀ.ಜೆ. ಅಬ್ಬಿಗೇರಿ

ಬಹುತೇಕ ನಮ್ಮೆಲ್ಲರ ಇತ್ತೀಚಿನ ದೈನಂದಿನ ಜೀವನ ಒತ್ತಡದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದೆ. ಒತ್ತಡ ಹಾಗೂ ಬದ್ಧತೆಗಳ ಆರ್ಭಟಕ್ಕೆ ಮಣದಿರುವ ನಾವು ಅಕ್ಷರಶಃ ನಗುವುದನ್ನೇ ಮರೆತಿದ್ದೇವೆ. ಅಲ್ಲೊಮ್ಮೆ ಇಲ್ಲೊಮ್ಮೆ ಆಗೊಮ್ಮೆ ಈಗೊಮ್ಮೆ ನಕ್ಕರೂ ಅದು ಗೊಂಬೆ ನಗುವಿನಂತಿರುತ್ತದೆ. ಹೃದಯ ತುಂಬಿದ ನಗು ಅದೆಲ್ಲಿ ಮಾಯವಾಗಿದೆಯೋ ಹುಡುಕ ಬೇಕಿದೆ. ಕಿವಿಯಿಂದ ಕಿವಿಯವರೆಗಿನ ನಗು ಮರೆತು ಅದೆಷ್ಟೋ ವರ್ಷಗಳು ಕಳೆದವು ಅನಿಸುತ್ತಿದೆ ಅಲ್ಲವೇ? ನಗು ಮಾನವನ ಸಹಜ ಪ್ರಕ್ರಿಯೆ ಅದನ್ನೇ ಮರೆತು ಬಾಳುತ್ತಿರುವುದು ನಿಜಕ್ಕೂ ಖೇದಕರ ಸಂಗತಿಯೇ ಸರಿ. ಒಂದು ಅಧ್ಯಯನದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರೈತ (ಪುಟ್ಟ ಕತೆ): ವೆಂಕಟೇಶ ಚಾಗಿ

ಆಗ ನಾನಿನ್ನು  ಪುಟ್ಟ ಹುಡುಗ. ಎರಡೇ ತರಗತಿಯಲ್ಲಿ ಓದುತ್ತಿರುವಾಗಲೇ ಅಪ್ಪ ನನ್ನನ್ನು ಹೊಲಕ್ಕೆ ಕರೆದುಕೊಂಡು ಹೋಗುತ್ತಿದ್ದ. ಅಪ್ಪನಿಗೆ “ಅಪ್ಪಾ , ನಾನೂ ರೈತ ಆಗ್ಲಾ? ” ಅಂತ ಕೇಳಿದ್ದೆ.  ಅಪ್ಪನ ಕೆಲಸಗಳೋ ಒಂದಲ್ಲ ಎರಡಲ್ಲ. ನಸುಕಿನ ಜಾವ ಏಳುತ್ತಲೇ ಅಪ್ಪನ ಕಾಯಕ ಶುರುವಾಗುತ್ತಿತ್ತು. ಅಮ್ಮ ಮಾಡಿಕೊಟ್ಟ ನಾಲ್ಕೈದು ರೊಟ್ಟಿ  , ಪಲ್ಲೆ ಒಂದು ಬಟ್ಟೆಯಲ್ಲಿ ಕಟ್ಟಿಕೊಂಡು ಬಾಯಾರಿಕೆಗಾಗಿ ಮಣ್ಣಿನ ಬಾಟಲ್ ನಲ್ಲಿ ನೀರು ತುಂಬಿಕೊಂಡು ಎರಡು ಎತ್ತುಗಳನ್ನು ಹಿಡಿದು ಹೊರಟರೆ ಮುಗೀತು ಮತ್ತೆ ಸಂಜೆ ಆರಕ್ಕೆ ಅಪ್ಪ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಕಾರಾತ್ಮಕವಾಗಿಯೇ ಚಿಂತಿಸಬೇಕಲ್ಲವೆ?: ಸೋಮಶೇಖರ್ ಹೊಳಲ್ಕೆರೆ

ಬಹಳ ವರುಷ ಒಂದೇ ಸ್ಥಳದಲ್ಲಿ, ಒಂದೇ ವಾತಾವರಣದಲ್ಲಿ ವಾಸಿಸುವುದರಿಂದ, ಒಂದೇ ರುಚಿ ಆಹಾರ ಸೇವಿಸುವುದರಿಂದ ಬೇಸರ ಉಂಟಾಗುವುದು ಸಾಮಾನ್ಯ! ಅದಕ್ಕೇ ಆಗಾಗ ಹಬ್ಬಗಳು, ಜಾತ್ರೆಗಳು ಬಂದು ವಿಧವಿಧ ರುಚಿಯ ಭಕ್ಷ್ಯ ಬೋಜ್ಯಗಳ ತಂದು, ನೆಂಟರಿಷ್ಟರ ಮನೆತುಂಬಿಸಿ, ಪೂಜೆ ಪುರಸ್ಕಾರ ಗಂಟಾ ಘೋಷಗಳಲಿ ಮೀಯಿಸಿ, ಮನೆಯ ತಳಿರು ತೋರಣಗಳಿಂದ ಸಿಂಗರಿಸಿ ಮನೆಯ ವಾತಾವರಣವನ್ನು ಬದಲಾಯಿಸಿ ಏಕತಾನತೆಯ ಬೇಸರ ಕಳೆದು ಬದುಕುವ ಉತ್ಸಾಹವ ತುಂಬುವ ಹೊಸ ಹುರುಪು ತುಂಬುವ ಉಪಾಯಗಳ ನಮ್ಮ ಹಿರಿಯರು ವರುಷ ಪೂರ್ತಿ ಮಾಡಿರುವುದು! ಪ್ರವಾಸ, ತೀರ್ಥಯಾತ್ರೆಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಈ ಜಗದಾಗೆ ದೊಡ್ಡೋರು ಯಾರಿಲ್ಲ ಚಿಕ್ಕೋರು ಯಾರಿಲ್ಲ ಎಲ್ಲಾರೂ ಒಂದೇನೆ ಈ ಜಗದಾಗೆ ದೇವ್ರಾಟ ಆಡ್ಕೋತ ಬದುಕನ್ನ ಬೇಯಿಸ್ಕೊತ ಕಡೆಗೆಲ್ಲಾ ಮಣ್ಣು ಈ ಜಗದಾಗೆ || ಲೋಕಾನೆ ಗೆಲ್ಬೇಕು ಅಂದ್ಕೊಂಡು ಬಂದವ್ರು ಬರಿಗೈಲಿ ಹೋದ್ರಂತೆ ಇತಿಹಾಸ್ದಾಗೆ ಅಂತಸ್ತು ಬಿದ್ದೋಯ್ತು ನೆಲವೆಲ್ಲಾ ಮುಳುಗೋಯ್ತು ಗೊತ್ತಿಲ್ಲಾ ಬರ್ದದ್ದು ಹಣೆಬರ್ದಾಗೆ || ಕಷ್ಟಾನೂ ಬರ್ತಾದೆ ಸುಖಾನೂ ಬರ್ತಾದೆ ಬಂದದ್ದು ತಗೋಬೇಕು ಜೀವಂದಾಗೆ ಕಷ್ಟದಲಿ ಕುಗ್ಗದಂಗೆ ಸುಖದಲ್ಲಿ ಹಿಗ್ಗದಂಗೆ ದೇವ್ರೌನೆ ಅಂದ್ಕೊಂಡ್ರೆ ನೆಮ್ಮದಿತಾನೆ || ಗೆದ್ದದ್ದು ಗೆಲುವಲ್ಲ ಸೋತದ್ದು ಸೋಲಲ್ಲ ಜಿದ್ದಾಜಿದ್ದಿಯ ಕಾಣೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಮ್ಮ ಹೀಗೆ ಇರಬೇಕು: ಗಿರಿಜಾ ಜ್ಞಾನಸುಂದರ್

ಪುಟ್ಟ ಪುಟ್ಟ ಕೈಗಳು ಅಮ್ಮನನ್ನು ಹಿಡಿದಿದ್ದವು. ೮ ದಿನದ ಮಗು ಬಹಳ ಸಣ್ಣದಾಗಿ ಹುಟ್ಟಿದ್ದು, ಆ ಮಗುವನ್ನು ಹೇಗೆ ಎತ್ತಿಕೊಳ್ಳಬೇಕೆಂಬುದು ಸಹ ತಿಳಿದಿರಲಿಲ್ಲ ಅಮ್ಮನಿಗೆ. ಸರಸ್ವತಿ ತನ್ನ ೨೨ ನೇ ವರ್ಷಕ್ಕೆ ಮಗುವಿಗೆ ಜನನ ನೀಡಿದ್ದಳು. ಅವಳಿಗೆ ಇದೆಲ್ಲ ಹೊಸತು. ಮಗು ಅಳುತ್ತಿದ್ದರೆ ಏನು ಮಾಡಬೇಕೆಂಬುದೇ ಅವಳಿಗೆ ತಿಳಿಯುತ್ತಿರಲಿಲ್ಲ. ಯಾವ ಕಾರಣಕ್ಕೆ ಅಳುತ್ತಿದೆ ಎಂದು ಯೋಚಿಸುತ್ತಿದ್ದಳು. ಮಗು ತುಂಬ ಅಳುತ್ತಿತ್ತು, ಅವಳಿಗೆ ಅದನ್ನು ಸಮಾಧಾನ ಮಾಡುವುದೇ ಒಂದು ದೊಡ್ಡ ಸಾಹಸವಾಗಿತ್ತು. ಅವಳ ನಿದ್ದೆಗೆ, ಊಟಕ್ಕೆ ಪ್ರತಿಯೊಂದಕ್ಕೂ ಮಗು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇತಿ ತಮ್ಮ ವಿಶ್ವಾಸಿ: ಪ್ರಣವ್ ಜೋಗಿ

ಬಹುಶಃ ಶಾಲೆಯ ದಿನಗಳು ಇರಬೇಕು. ಯಾವುದೋ ಒಂದು ಪರೀಕ್ಷೆಯಲ್ಲಿ ಬರೆದ ಪತ್ರ. ಅದೇ ಕೊನೆಯ ಪತ್ರವಾಗಲಿದೆ ಎಂಬ ಸುಳಿವು ಆಗಲೇ ದೊರೆತ್ತಿದ್ದಿದ್ದರೆ, ಇನ್ನೂ ಒಂದಷ್ಟು ಸಾಲುಗಳನ್ನು ಬರೆದು ಬಿಡುತ್ತಿದ್ದೆ. ಆ ನಂತರ ಎಂದೂ ಪತ್ರ ಬರೆಯಲೇ ಇಲ್ಲ. ಕ್ಷಣ ಮಾತ್ರದಲ್ಲಿ ಸಂದೇಶ ತಲುಪುವ ತಂತ್ರಜ್ಞಾನ ಇರುವಾಗ, ಪತ್ರವೇಕೆ ಬರೆಯಬೇಕು ಎಂಬ ಆಲೋಚನೆ ಇದರ ರೂವಾರಿ. ದುರಂತರವೆಂದರೆ, ಮುಂಚೆ ಬರೆದ ಪತ್ರಗಳೂ ಕೂಡ ಪರೀಕ್ಷೆಗಳಲ್ಲೇ. ನಿಜ ಜೀವನದಲ್ಲಿ, ದೂರದ ಸಂಬಂಧಿಕರೊಬ್ಬರಿಗೆ ಒಂದೆರಡು ಬಾರಿ ಪತ್ರ ಬರೆದಿರಬಹುದಷ್ಟೇ. ಇಂದಿನ ಕಾಲದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಕ್ಕಳ ಕವನ: ವರದೇಂದ್ರ ಕೆ

ಪ್ರಾರ್ಥನೆ ನಾವೆಲ್ಲ ಮಕ್ಕಳು ನಿನ್ನ ಚರಣ ಪುಷ್ಪಗಳು| ಜ್ಞಾನ ಅರಸಿ ಬಂದಿಹೆವು ವಿದ್ಯೆ ಬುದ್ಧಿ ನೀಡಮ್ಮ, ಹೇ ಮಾತೆ ಶಾರದಾಂಬೆ|| ನಾವೆಲ್ಲ ಮಕ್ಕಳೂ…. ವಿದ್ಯಾದಾಯಿನಿ ವೀಣಾಪಾಣಿ| ರಾಗ ತಾಳ ಎಲ್ಲ ನಾವೆ ಜ್ಞಾನ ವೀಣೆ ನುಡಿಸು ತಾಯೆ|೧| ನಾವೆಲ್ಲ ಮಕ್ಕಳೂ… ನಿತ್ಯವೂ ನಿನ್ನ ಸ್ಮರಣೆ ಮಾಡುವೆವು ಭಕ್ತಿಯಿಂದ| ಕರುಣೆ ತೋರಿ ಒಲಿಯಮ್ಮ ಸತ್ಯವನ್ನೆ ನುಡಿಸು ತಾಯೆ|೨| ನಾವೆಲ್ಲ ಮಕ್ಕಳೂ…. ಜ್ಞಾನ ದೀಪ ಹಚ್ಚುವೆವು ನಿನ್ನ ಚರಣ ಕಮಲಕ್ಕೆ| ಜ್ಯೋತಿ ಆಗಿ ಬಾರಮ್ಮ ನಮ್ಮ ಬಾಳ ಬೆಳಗು ತಾಯೆ|೩| … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಂ-ಜನ: ಹೆಚ್. ಷೌಕತ್ ಆಲಿ, ಮದ್ದೂರು

ಒಂದು ತಾಲ್ಲೋಕಿನಿಂದ ಮತ್ತೊಂದು ತಾಲ್ಲೋಕಿನ ಒಂದು ಕಾಲೇಜಿನಲ್ಲಿ ನಾನು ಉಪನ್ಯಾಸಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದಿನಾ ಕೆ ಎಸ್ ಆರ್ ಟಿ ಸಿ ಬಸ್ನಲ್ಲಿ ಹೋಗಿ ಬರುವುದು ಮಾಮೂಲಿಯಾಗಿತ್ತು. ಸಮಯಕ್ಕೆ ಅರ್ಧಘಂಟೆ ಮುಂಚೆ ನಾನು ಬಸ್ಸ್ಟ್ಯಾಂಡ್ ನಿಂದ ಇಳಿದು ಕಾಲೇಜಿಗೆ ನಡೆದುಕೊಂಡೆ ಹೋಗುತ್ತಿದ್ದೆ. ನನ್ನ ಕೈಯಲ್ಲಿ ಟೀಫಿನ್ ಬಾಕ್ಸ್, ವಾಟರ್ ಬಾಟಲ್ ಅವುಗಳನ್ನು ಹೊತ್ತಿರೋ ಒಂದು ಬ್ಯಾಗ್ ಆ ಬ್ಯಾಗ್ ನನ್ನ ಕೈಯಲ್ಲಿ. ಆ ಬ್ಯಾಗ್ ಹಿಡಿದುಕೊಂಡು ನಾನು ಕಾಲೇಜಿಗೆ ಬರುವಾಗ, ಹೋಗುವಾಗ ನನ್ನ ವಾಕಿಂಗ್ ಸ್ಟೈಲ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇಹವೆ ದೇವಾಲಯ !: ಕೆ ಟಿ ಸೋಮಶೇಖರ ಹೊಳಲ್ಕೆರೆ

ದೇವಾಲಯ ಎಂಬುದು ನೆಮ್ಮದಿಯ ತಾಣ. ದೇವರು ಎಂಬುದು ಒಳ್ಳೆಯದರ ಸಂಕೇತ! ಮಾನವರು ದೇವರನ್ನು ಪೂಜಿಸುವುದು ಆರಾಧಿಸುವುದು ಎಂದರೆ ಒಳ್ಳೆಯತನದ ಆರಾಧನೆ ಎಂದು ಅರ್ಥ ! ಎಲ್ಲರೂ ದೇವಸ್ಥಾನಕ್ಕೆ ಹೋಗುತ್ತಿದ್ದಾರೆಂದರೆ ಒಳ್ಳೆಯದನ್ನು ಬಯಸುತ್ತಿದ್ದಾರೆಂದು ಅರ್ಥ. ಒಳ್ಳೆಯತನ ಸದಾ ಮಾನವರಿಗೆ ನೆಮ್ಮದಿ ನೀಡುತ್ತದೆ! ಅದಕ್ಕಾಗಿ ಅನೇಕರು ಅದನ್ನು ಅರಸಿ ದೇವಾಲಯಗಳಿಗೆ ಹೋಗುತ್ತಾರೆ. ಆದರೆ ಅದನ್ನು ಕೆಲವರು ಅರ್ಥೈಸುವಲ್ಲಿ ಆಚರಿಸುವಲ್ಲಿ ಪ್ರಮಾದಗಳಾಗಲು ಕಾರಣರಾಗಿರುವುದರಿಂದ ರೌದ್ರ ಭೀಭತ್ಸ ವಾತಾವರಣ ಉಂಟಾಗುತ್ತಿದೆ. ನೆಮ್ಮದಿಯ ತಾಣವಾಗಬೇಕಾದವು ನೆಮ್ಮದಿಯ ಕದಡಲು ಕಾರಣವಾಗುತ್ತಿವೆ. ಕೆಲವು ಮಹನಿಯರು ದೇಹವೆ ದೇವಾಲಯವಾಗಬೇಕೆಂದಿರುವರು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಹು ಮುಖದ ‘ ಚಿಲುಮೆ’: ಅರವಿಂದ ಚೊಕ್ಕಾಡಿ

ಸ್ನೇಹಿತ ಲಕ್ಷ್ಮೀಕಾಂತ ಮಿರಜಕರ ಮೊಳಕಾಲ್ಮೂರಿನ ದೇವಸಮುದ್ರದ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರು. ನನ್ನ ಇಲಾಖಾ ಸನ್ಮಿತ್ರರು. ನಮ್ಮದು ಬಹಳ ಸಣ್ಣ ವ್ಯವಸ್ಥಾಪನೆಯಾದುದರಿಂದ, ಸಂಕಷ್ಟಗಳು ಮತ್ತು ಅನುಭವಗಳು ಉಳಿದೆಲ್ಲ ಇಲಾಖೆಯವರಿಗಿಂತ ಭಿನ್ನವಾಗಿರುವುದರಿಂದ ಬೃಹತ್ ವ್ಯವಸ್ಥೆಯಲ್ಲಿ ಕಣ್ಣಿಗೆ ಕಾಣದಷ್ಟು ಸಣ್ಣ ಸಂಖ್ಯೆಯವರು ಇಟ್ಟಾಗಿ ಬಡಿದಾಡಬೇಕಾದ್ದರಿಂದ ಸಂಬಂಧಗಳು ಬಿಗಿಯಾಗಿರುತ್ತವೆ. ಇಂತಿಪ್ಪ ಲಕ್ಷ್ಮೀಕಾಂತರು ಇತ್ತೀಚೆಗೆ ನನಗೊಂದು ಪುಸ್ತಕವನ್ನು ಕಳಿಸಿಕೊಟ್ಟರು. ಅದು ತಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಬರೆದ ಬರಹಗಳ ಸಂಕಲನ-‘ಚಿಲುಮೆ’. ‘ಚಿಲುಮೆ’ಯ ವೈವಿಧ್ಯ ಬಹಳ ಮುದ ನೀಡಿತು. ಒಬ್ಬ ವಿದ್ಯಾರ್ಥಿ ಕವನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೋರಾಟದ ಹೆಜ್ಜೆ ಮೂಡಿಸಿ ಮರೆಯಾದ ಮಿತ್ರ ಈಶ್ವರ ಮಗದುಮ್: ಅಶ್ಫಾಕ್ ಪೀರಜಾದೆ

ಈಗ ಬರೆಯುತ್ತಿರುವ ಒಂದೊಂದು ಅಕ್ಷರಕೂಡ ನೇರವಾಗಿ ನನ್ನ ಹೃದಯದಿಂದ ತೊಟ್ಟಿಕುತ್ತಿರುವಂತೆ ಭಾಸವಾಗುತ್ತಲಿದೆ. ಅಂತಿಮವಾಗಿ ಅವನ ಮುಖದರ್ಶನ ಮಾಡಿಕೊಂಡು ಬಂದಾಗಿನಿಂದಲೂ ಮನಸ್ಸಿಗೆ ಸೊಗಸೇ ಇಲ್ಲದಂತಾಗಿದೆ. ಏನೋ ಕಳೆದುಕೊಂಡಿದ್ದು ಅಲ್ಲ ಎಲ್ಲವನ್ನು ಕಳೆದುಕೊಂಡಂತೆ ಹೃದಯ ತಬ್ಬಲಿಯಾಗಿ ಆಕ್ರಂದಿಸುತ್ತಲಿದೆ. ಜೀವ ಸಮಾಧನವಿಲ್ಲದೆ ಒದ್ದಾಡುತ್ತಿದೆ. ನನ್ನೊಳಗಿನ ತಬ್ಬಲಿತನದ ಭಾವನೆ ಶಬ್ಧಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ ಅನಿಸುತ್ತಲಿದೆ. ಅಣ್ಣ ಸಯಿದ ಮತ್ತು ಸ್ನೇಹಿತ ವಿಠ್ಠಲ ಕರೆ ಮಾಡಿ ನಮ್ಮ ಈಶ್ವರ ಇನಿಲ್ಲವೆಂದಾಗ ಒಂದು ಕ್ಷಣ ನನ್ನ ಕಾಲ ಕೆಳಗಿನ ಭೂಮಿಯೇ ಬಾಯ್ದೆರೆದು ನುಂಗಿದಂತೆ ಭಾಸವಾಯಿತು ನನಗೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಎದುರಿಸುವುದು ಒಂದು ಕಲೆ!: ಸಹನಾ ಪ್ರಸಾದ್

” ಯಾಕ್ರೀ ಜಾನಕಿ, ಎಫ್ ಬಿ ಯಲ್ಲಿ ಕಾಣುತ್ತಾನೇ ಇಲ್ಲ, ಈಚೀಚಿಗೆ. ನಿಮ್ಮ ನಿಲುಮೆಗಳು, ಪಟಗಳು ಇಲ್ಲದೆ ಫ಼ೇಸ್ಬುಕ್ಕು ಸೊರಗಿದೆಯಲ್ಲಾ!” ನನ್ನ ಮಾಮೂಲಿ ಹಾಸ್ಯದ ಧಾಟಿಯಲ್ಲಿ ಕಾಲೆಳೆದಾಗ ಜಾನಕಿಯ ಪ್ರತಿಕ್ರಿಯೆ ಅನಿರೀಕ್ಷಿತವಾಗಿತ್ತು. ” ಈ ಮುಖಪುಟ ಒಂದೇ ಸಾಕು, ನಮ್ಮ ಮನಸ್ಸಿನ ನೆಮ್ಮದಿ ಹಾಳು ಮಾಡಕ್ಕೆ ಇಲ್ಲಿ ಜನರು ಬಹಳ ಭಯಂಕರ. ನನ್ನ ಮುಂದೆ ಒಂದು ರೀತಿ, ಬೆನ್ನ ಹಿಂದೆ ಮತ್ತೊಂದೇ ತರಹ. ಅಲ್ಲಿ ಕಾಮೆಂಟ್ ಹಾಕುವುದು ಬೇರೆ, ಇನ್ಬಾಕ್ಸಲ್ಲಿ ಬರೀ ದೂಷಣೆ, ಜಾನಕಿ ಹಾಗೆ, ಅವಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಡುವೆ ಬಂದವರು: ಸಿಂಧು ಭಾರ್ಗವ್

ರೋಶನಿ ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿ. ವಯಸ್ಸು 35 ವರ್ಷವಿರಬಹುದು. ಮದುವೆಯಾಗಿ ಒಂದು ಮಗು ಇರುವ ಸಂಸಾರಸ್ಥೆ. ಹೀಗಿರುವಾಗ ರೋಹಿತ್ ಎಂಬ ಹೊಸ ಸಹೋದ್ಯೋಗಿಯ ಪರಿಚಯವಾಗಿ ಸ್ನೇಹ ಬೆಳೆದು ಪ್ರೀತಿಯ ನಾಮಕರಣ ಮಾಡಿದ್ದಳು. ಅವನೋ ಇನ್ನೂ ಯುವಕ. 23 ವರ್ಷ ವಯಸ್ಸಿರಬಹುದು. ನೋಡಲು ಸುರದ್ರೂಪಿ. ಉತ್ಸಾಹಿ ಕೆಲಸಗಾರ. ಅನುದಿನವೂ ಅವಳ ಜೊತೆ ಹರಟುವುದು, ಅವಳ ಸೌಂದರ್ಯವನ್ನು ಹೊಗಳುವುದು, ವೃತ್ತಿ ನಿಷ್ಠೆಯನ್ನು ಹೊಗಳುವುದು ಅವನ ದಿನಚರಿಯಾಗಿತ್ತು. ಹೆಣ್ಮಕ್ಕಳಿಗೆ ಸ್ವಲ್ಪ ಹೊಗಳಿದರೂ ಕರಗಿ ಹೋಗುವುದು ಅವರ ಮನೋ ದೌರ್ಬಲ್ಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಹದ ದುರ್ಗಂಧ- ಪರದ ಪರಿಮಳ: ಡಾ. ಹೆಚ್ ಎನ್ ಮಂಜುರಾಜ್

(ಹರಿದಾಸ ಪ್ರಸಿದ್ಧ ಶ್ರೀಪಾದರಾಜರ ಎರಡು ಕೀರ್ತನ ರಚನೆಗಳ ವಿಶ್ಲೇಷಣೆ) ರಚನೆ : ಶ್ರೀ ಶ್ರೀಪಾದರಾಜರು ಮರುದಂಶರ ಮತ ಪಿಡಿಯದೆ ಇಹ -ಪರದಲ್ಲಿ ಸುಖವಿಲ್ಲವಂತೆ || ಪ || ಅರಿತು ವಿವೇಕದಿ ಮರೆಯದೆ ನಮ್ಮಗುರುರಾಯರ ನಂಬಿ ಬದುಕಿರೋ || ಅ.ಪ.|| ಕ್ಷೀರವ ಕರೆದಿಟ್ಟ ಮಾತ್ರದಿ ಸಂಸ್ಕಾರವಿಲ್ಲದೆ ಘೃತವಾಗದಂತೆ ಸೂರಿಜನರ ಸಂಗವಿಲ್ಲದೆ ಸಾರವೈರಾಗ್ಯ ಭಾಗ್ಯ ಪುಟ್ಟದಂತೆ || ೧ || ಉಪದೇಶವಿಲ್ಲದ ಮಂತ್ರ ಏಸುಜಪಿಸಲು ಫಲಗಳ ಕೊಡದಂತೆ ಉಪವಾಸ ವ್ರತಗಳಿಲ್ಲದೆ ಜೀವತಪಸಿಯೆನಿಸಿಕೊಳ್ಳಲರಿಯನಂತೆ || ೨ || ಸಾರಮಧ್ವಶಾಸ್ತ್ರವೋದದೆ ಗುರುತಾರತಮ್ಯ ಜ್ಞಾನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿವಾಹ ಎಂಬ ಅನುಬಂಧವು, ಲಿವಿಂಗ್ ಟುಗೆದರ್ ಎಂಬ ಸಂಬಂಧವು!:ಕೆ ಟಿ ಸೋಮಶೇಖರ ಹೊಳಲ್ಕೆರೆ

ಮಾಂಗಲ್ಯಂ ತಂತುನಾನೇನ ಮಮಜೀವನ ಹೇತುನಾ … ಎಂಬ ಮಂತ್ರೋಚ್ಛಾರಣೆಯೊಂದಿಗೆ ಸಾವಿರಾರು ಗುರು ಹಿರಿಯರು, ಬಂಧು ಮಿತ್ರರು ಆಶೀರ್ವಾದ ಮಾಡಿಕೊಟ್ಟ ಪವಿತ್ರ ಮಾಂಗಲ್ಯ ಧಾರಣೆ ಮಾಡುವ ವಿವಾಹ ಎಂಬ ಏಳೇಳು ಜನುಮದ ಸಂಬಂಧ ಎಂಬ ಧರ್ಮೇಚ ಅರ್ಥೇಚ ಕಾಮೇಚ ನಾತಿಚರಾಮಿ – ಎಂದು ಪತಿ ಪತ್ನಿಗೆ ಮಾತು ಕೊಟ್ಟು, ಅಗ್ನೀ ಸಾಕ್ಷಿಯಾಗಿಸಿ ಸಪ್ತಪದಿ ತುಳಿಯುವ ಮದುವೆಗಳು ಸ್ವರ್ಗದಲ್ಲಿ ನಿರ್ಣಯಾವಾಗಿರತ್ತವೆಂದು ಬಿಡಿಸಿಕೊಳ್ಳಲಾಗದಂತೆ ಬಿಗಿಯಾಗಿ ಸಂಬಂಧವನ್ನು ಬೆಸೆದು ಅಕ್ರಮ ಸಂಬಂಧಗಳ ತಡೆಯುವ, ಸಂಗಾತಿಯನ್ನು ಅರ್ಧ ನಾರೀಶ್ವರರಂತೆ ಬೆಸೆಯುವ ಅಧ್ಭತ ಕಲ್ಪನೆ, ಪತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಬೇಸರದ ಬಾವಲಿಗಳಿಗೆ ಕಣ್ಣಿಲ್ಲ. ಬೀಸುವ ಗಾಳಿಗೆ ಎದೆಯ ಕಾಗುಣಿತ ಅಪಥ್ಯ. ಇದ್ದಲ್ಲೇ ನುರಿಯುವ ಈ ನಿರುದ್ದೇಶಿ ಕುರ್ಚಿಗೆ ಕಾಲುಗಳು, ನೆಪಕ್ಕೆ ಮಾತ್ರ ಪೋಣಿಸಿದ್ದಾನೆ-ಬಡಗಿ, ಇದು ಹಳೆಯ ಗುಟ್ಟು. ಒಪ್ಪಿಕೊಂಡು ಎಷ್ಟೋ ಕಾಲವಾಗಿದೆ. ಕೆಲವು ಕಾರಾಗೃಹಗಳಿಗೆ ಗೋಡೆಗಳಿರುವುದಿಲ್ಲ. ಕೆಲವು ಮಾತುಗಳಿಗೆ ಪದಗಳೂ.. ನಿಟ್ಟುಸಿರಿಗೆ ಮಾತ್ರ ಬಣ್ಣಗಳು – ಬಿನ್ನ ಬಿನ್ನ. ಯಾರದೋ ಒಬ್ಬಂಟಿತನದ ಬೇಟೆಗೆ ಮರಳ ಮಯ್ಯ ಮೇಲೆ ಬರೆದ ಚಿತ್ರಗಳಂತೆ ಬದುಕು. ಆದಿ ಅಂತ್ಯಗಳ ವಿಧಿ ಲಿಖಿತಗಳ ಗೊಡವೆ ಮರೆವೆಗೆ ಕೊಟ್ಟು, ಅಲೆ ಕೊಚ್ಚಿಕೊಂಡು ಹೋಗಲೆಂದೇ ಕಾಯುತ್ತಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಷ್ಟಕರವಾದ ಸಂಬಂಧಗಳು- ಏನು ಮಾಡುವುದು?: ಸಹನಾ ಪ್ರಸಾದ್

“ಅಯ್ಯೊ, ಇನ್ನೂ ಈ ಕೆಲಸದವಳ ಜತೆ ಹೆಣಗಾಡ್ತಾ ಇದೀಯ? ಇಷ್ಟು ಒದ್ದಾಡುತ್ತಾ ಇರೊ ಬದಲು ಬಿಡಿಸಿ ಬೇರೆಯವರನ್ನು ಇಟ್ಟುಕೊಳ್ಳಬಾರದಾ?” ಗೆಳತಿಯನ್ನು ತರಾಟೆಗೆ ತೆಗೆದುಕೊಂಡೆ. ಬಂದರೂ ನೂರು ಕುಂಟು ನೆಪ ತೆಗೆದು ಅರ್ಧಂಬರ್ಧ ಕೆಲಸ ಮಾಡಿ ಓಡಿಹೋಗುವುದು, ಸಣ್ಣಪುಟ್ಟ ಕಳ್ಳತನಗಳು, ಆಗಾಗ್ಗೆ ದುಡ್ಡು ಕೇಳುವುದು…ಇವಳ ಗುಣಗಾನ ಕೇಳಿ ನನಗೂ ತಲೆ ಚಿಟ್ಟು ಹಿಡಿದಿತ್ತು. ಈಗ ಸುಮಾರು ದಿನಗಳ ನಂತರ ಇವಳ ಮನೆಗೆ ಭೇಟಿ ಇತ್ತರೆ, ಮತ್ತೆ ಈ ಹೆಂಗಸು ಕಸ ಪರಿಕೆ ಹಿಡಿದಿದ್ದಾಳೆ. “ಏನಮ್ಮಾ, ನಿನ್ನ ಚಾಳಿ ಏನಾದರೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಜೀ : ವರದೇಂದ್ರ.ಕೆ

ನಿತ್ರಾಣನಾಗಿದ್ದ ಸೂರ್ಯ ವಿರಮಿಸಲು ಪಶ್ಚಿಮಕ್ಕೆ ಮಾಯವಾಗುತ್ತಿದ್ದ, ಇದನ್ನೇ ಕಾಯುತ್ತಿದ್ದವನಂತೆ ಚಂದಿರ ಮುಗುಳ್ನಗುತ್ತ ಹಾಲು ಬೆಳದಿಂಗಳ ಚೆಲ್ಲುತ್ತ ಚೆಲುವೆಯರ ಅಂದ ಪ್ರತಿಬಿಂಬಿಸುತ್ತ ಮೇಲೇರ ತೊಡಗಿದ. ಅವನ ಬೆಳಕೇ ಗತಿ ಎನ್ನುವ ಬಸ್ ನಿಲ್ದಾಣ, ಧೂಳು ತುಂಬಿಕೊಂಡಿತ್ತು. ಇಂದೋ ನಾಳೆಯೋ ನೆಲಕ್ಕೆ ಮುತ್ತಿಡುವಂತಹ ಸ್ಥಿತಿಯಲ್ಲಿದ್ದು, ವಿನಾಶದ ಅಂಚಿನಲ್ಲಿತ್ತು. ಅಂತಹ ನಿಲ್ದಾಣವೇ ನಮ್ಮ ಜನರಿಗೆ ಜೀವ ಎನ್ನುವಂತೆ; ಅದರಡಿಯಲ್ಲಿಯೇ ನಿಂತು ಧೂಳಿನೊಂದಿಗೆ, ಬೀಡಿ ಸಿಗರೇಟಿನ ವಾಸನೆಯೊಂದಿಗೆ ಒಡನಾಡಿಗಳಾಗಿ ನಿಂತಿದ್ದಾರೆ. ಅಲ್ಲಿ ಪೋಲಿ ಹುಡುಗರ ದಂಡು, ಊರಿಗೆ ಲೇಟಾಗಿ ಪರಿತಪಿಸುತ್ತಿರುವ ಹೆಂಗಳೆಯರು. ದೊಡ್ಡ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಮ್ಮೆ ನನ್ನನ್ನೂ  ಕಣ್ತುಂಬಾ ಕಾಡುವಾಸೆ ನಿನ್ನಲ್ಲಿ: ಅಮರದೀಪ್ ಪಿ.ಎಸ್.

ರಾತ್ರಿ ಮಲಗುವ ಮುನ್ನ ಬೆಳಿಗ್ಗೆ ಕರೆಕ್ಟಾಗಿ ಐದುವರೆಗೆಲ್ಲಾ ಎದ್ದುಬಿಡಬೇಕು.. ಅಲಾರ್ಮ್ ಇಡಬೇಕು ಅಂದುಕೊಂಡವನು ಮರೆತೆ. ಆದರೆ ನಿದ್ದೆಗೆ ಜಾರುವ ಮುಂಚೆ ತಲೆಯಲ್ಲಿತ್ತಲ್ಲ, ಅಂದುಕೊಂಡದ್ದು ನಿಖರವಾಗಿತ್ತು.  ಸರಿಸುಮಾರು ಒಂಭತ್ತು ತಿಂಗಳ ನಂತರ ವಾಕಿಂಗ್ ಹೋಗಬೇಕು,   ಅವಳು ಹೇಳಿದ್ದಳಲ್ಲ? ಒಂದಷ್ಟು ಯೋಗಾಭ್ಯಾಸ ಮಾಡಬೇಕು… ಹೂಂ… ಅಂದದಷ್ಟೇ ನಿಜ.  ಎದ್ದೇಳಲು ಮತ್ತದೇ ಸೋಮಾರಿತನ. ಎದ್ದ ನಂತರದ ಹಳಹಳಿ. ಅದಕ್ಕೆ ಪ್ರಾಯಶ್ಚಿತ್ತವಿಲ್ಲ….  ಹಾಗೇ ನಿದ್ದೆಗೆ ಜಾರಿಯೂ ಬಿಟ್ಟೆ…   ಥಟ್ಟನೇ ಎಚ್ಚರಾಗಿ  ಮೊಬೈಲ್ ನೋಡಿದರೆ ಆಗಲೇ ಐದು ಗಂಟೆ ಮೂವತ್ತು ನಿಮಿಷ. ಎದ್ದವನೇ  ಕ್ರಿಯಾಕರ್ಮಗಳನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಸ್ಪೃಶ್ಯತೆಯ ಕರಾಳ ದರ್ಶನ: ಅಶ್ಫಾಕ್ ಪೀರಜಾದೆ

“ಇನ್ನು ದಾಹವಾಗುವದಿಲ್ಲ ಬಿಡು” ಆನಂದ ಲಕ್ಕೂರ ಅವರ ವಿಭಾ ಸಾಹಿತ್ಯ ಪುರಸ್ಕೃತ ಕವನ ಸಂಕಲನ “ಉರಿವ ಏಕಾಂತ ದೀಪ” ಓದಿ ಮುಗಿಸಿದಾಗ ಅದರಲ್ಲಿ ನನಗೆ ಎರಡು ಕವನಗಳು ಪ್ರಮುಖ ಅನಿಸಿದವು. ಒಂದನೇಯದು ‘ಅವ್ವ’ ಮತ್ತು ಎರಡನೇಯದು ‘ಇನ್ನು ದಾಹವಾಗುವದಿಲ್ಲ ಬಿಡು’. ಇವೆರಡರಲ್ಲಿ ಯಾವದನ್ನು ಅಭಿಪ್ರಾಯಕ್ಕಾಗಿ ಎತ್ಕೋಬೇಕು ಎಂದು ಯೋಚಿಸುವಾಗ ‘ಅವ್ವ’ಕ್ಕಿಂತ ದಾಹವಾಗುದಿಲ್ಲ ಕವಿತೆ ಪ್ರಸ್ತುತ ಸಾಮಾಜಿಕ ಅರಾಜಕತೆ, ಅಸಹಿಷ್ಣತೆಯ ಹಿನ್ನಲೆಯಲ್ಲಿ ಮುಖ್ಯವೆನಿಸುದರಿಂದ ಇದನ್ನು ಮೊದಲು ಪರಿಚಯಿಸುವುದು ಅಗತ್ಯವೆನಿಸಿತು. ಇದರ ಜೊತೆಗೆ ಕವಿ ಇದನ್ನು ಒಂದು ಸತ್ಯ ಘಟನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂತರಾಗ್ನಿ (ಕೊನೆಯ ಭಾಗ): ಕಿರಣ್. ವ್ಹಿ

ಇಲ್ಲಿಯವರೆಗೆ ವಿಶಾಲವಾದ ಹಾಲ್. ಕಿಕ್ಕಿರಿದು ತುಂಬಿರುವ ಜನ, ಚಪ್ಪಾಳೆ ಹೊಡೆದಾಗಲೆಲ್ಲ ಸೀಲಿಂಗ್ ಸೀಳಿಹೋಗುವುದೇನೊ ಎಂಬಂತೆ ಭಾಸವಾಗುತ್ತಿತ್ತು. ಅದು ‘ Reflection ‘ ಎಂಬ ಅಂಧಮಕ್ಕಳ ಶಾಲೆಯ ಉದ್ಘಾಟನಾ ಸಮಾರಂಭವಾಗಿತ್ತು. ” ಈಗ ನಮ್ಮೆಲ್ಲರ ಅಕ್ಕರೆಯ ‘Reflection charitable trust’ ನ ಮುಖ್ಯಸ್ಥರಾದ ಶ್ರೀಯುತ ಹರಿಯುವರನ್ನು, ಈ ಸಂಸ್ಥೆಯ ಕುರಿತು ಒಂದೆರಡು ಮಾತನಾಡಬೇಕೆಂದು ಕೋರಿಕೊಳ್ಳುತ್ತೇನೆ.” ಎಂಬ ಆಹ್ವಾನಕ್ಕೆ ಎದ್ದುನಿಂತ ಹರಿ, ವೇದಿಕೆ ಮೇಲೆ ಹೊರಡಲು ಸಿದ್ಧನಾದ. ಚಪ್ಪಾಳೆಗಳ ಸುರಿಮಳೆಯೆ ಹರಿಯಿತು. ” ಎಲ್ಲರಿಗೂ ನಮಸ್ಕಾರ ನಮ್ಮ ಈ ‘Reflection … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಗರಣದಲ್ಲೇ ಅಂತ್ಯ: ದಯಾನಂದ ರಂಗಧಾಮಪ್ಪ

ಸುಮಾರು ಅರವತ್ತು ವರ್ಷದ ವೃದ್ಧ ಟೇಬಲ್ ಮೇಲಿದ್ದ ಖಾಲಿ ಕಾಗದದ ಮೇಲೆ “ದೇವರು ಇದಾನೆ , ಇಲ್ಲ …. ದೇವರು ಇದಾನೆ , ಇಲ್ಲ ” ಎಂದು ಬರೆಯುತ್ತಿದ್ದ ತನ್ನ ಗಂಡನನ್ನು ನೋಡಿ ‘ರೀ ಏನ್ರಿ ಇದು? ರಾಮ ರಾಮ ಬರೆಯೋ ವಯಸ್ಸಲ್ಲಿ ನೀವ್ಯಾಕೆ ಈ ರೀತಿ ಬರೆತ್ತಿದ್ದೀರಾ? ಎಂದು ಗದರಿದಳು. ನಿನ್ನ ಪ್ರಕಾರ ಇದಾನೆ ಅಂತೀಯಾ? ಅವಳು ಮೌನಿಯಾದಳು. ಬರೆಯೋದು ನಿಲ್ಲಿಸಿ ಮೆಲ್ಲಗೆ ನಿಟ್ಟುಸಿರು ಬಿಡುತ್ತಾ ಕುರ್ಚಿಗೆ ಹೊರಗಿ ” ಮಗ ನಮ್ಮ ಜೊತೆ ಮಾತು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಲೇಖನ ಕಳುಹಿಸಿ

ಸಹೃದಯಿಗಳೇ, “ಪಂಜು” ಅಂತರ್ಜಾಲ ವಾರ ಪತ್ರಿಕೆಗೆ ನಿಮ್ಮ ಅಪ್ರಕಟಿತ ಕತೆ, ಕವನ, ಲೇಖನ, ಪುಸ್ತಕ ವಿಮರ್ಶೆ, ಹಾಸ್ಯ ಬರಹ, ಚುಟುಕ, ಪ್ರವಾಸ ಕಥನ, ವ್ಯಂಗ್ಯಚಿತ್ರ, ಛಾಯಾಚಿತ್ರ, ಸಿನಿಮಾ ಸುದ್ದಿ, ಇತ್ಯಾದಿ ಸಾಹಿತ್ಯ ಸಂಬಂಧಿತ ಬರಹಗಳನ್ನು ಕಳುಹಿಸಿಕೊಡಿ. ಜೊತೆಗೆ ನಾಟಕ ಪ್ರದರ್ಶನ, ಪುಸ್ತಕ ಬಿಡುಗಡೆ ಇತ್ಯಾದಿ ಸಾಹಿತ್ಯ ಮತ್ತು ಕಲೆ ಸಂಬಂಧಿತ ಪ್ರಕಟಣೆಗಳನ್ನು ನೀಡಲು ಸಹ ನಮ್ಮನ್ನು ಸಂಪರ್ಕಿಸಿ. ಹಾಗೆಯೇ ಪಂಜು ಪುಟಗಳಲ್ಲಿನ ಕತೆ, ಕವನ, ಲೇಖನಗಳಿಗೆ ನಿಮ್ಮ ಕುಂಚದ ಕೈಚಳಕದಿಂದ ಚಿತ್ರಗಳನ್ನು ರಚಿಸಿ ಪಂಜಿಗೆ ಮತ್ತಷ್ಟು ಮೆರಗು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪರಿಸರದ ಮೇಲೆ ಮಾನವ ಹಲ್ಲೆ ನಿಲ್ಲುವುದು ಯಾವಾಗ?: ನರಸಿಂಹ ಮೂರ್ತಿ ಎಂ. ಎಲ್.

ನಾವು ಪ್ರತಿದಿನ ಪತ್ರಿಕೆಗಳಲ್ಲಿ ಓದುವಾಗ ದೇಶ ರಾಜಧಾನಿಯು ವಾಯುಮಾಲಿನ್ಯದ ಹೊಡೆತಕ್ಕೆ ತತ್ತರಿಸುತ್ತಿರುವ ಬಗೆಯನ್ನು ಗಮನಿಸುತ್ತಿರಬಹುದು. ಶುದ್ಧಗಾಳಿಯನ್ನು ಖರೀದಿಸಿ ಉಸಿರಾಡುವ ಪರಿಸ್ಥಿತಿಗೆ ಈ ದೇಶವು ಬಂದು ತಲುಪಿದೆ ಎಂದರೆ ಮುಂದಿನ ದಿನಗಳಲ್ಲಿ ಜೀವ ಜಗತ್ತಿನ ಉಳಿವಿನ ಬಗ್ಗೆಯೇ ಸಂಶಯ ಮೂಡುತ್ತದೆ. ತಾಲ್ಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಡಪ್ಪಲ್ಲಿ, ಹೊನ್ನಂಪಲ್ಲಿ, ಮದಕವಾರಪಲ್ಲಿ ಸೇರಿದಂತೆ ಹತ್ತಾರು ಹಳ್ಳಿಗಳಿಗೆ ಆಶ್ರಯ ತಾಣವಾಗಿದ್ದ ಕೊರ್ಲಗುಡ್ಡಂ ಬೆಟ್ಟವನ್ನು ಅಕ್ರಮ ಕಲ್ಲು ಗಣಿಗಾರುಕೆಯವರು ನಾಶ ಮಾಡುತ್ತಿದ್ದಾರೆ. ಇದರ ಪರಿಣಾಮ ಬೃಹತ್ ಕಲ್ಲುಬಂಡೆಗಳು ರೈತರ ಜಮೀನುಗಳಿಗೆ ಉರುಳುತ್ತಿವೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾವಿನ ಆಟ: ಜೆ.ವಿ.ಕಾರ್ಲೊ.

ಮೂಲ: ಇವಾನ್ ಹಂಟರ್ ಅನುವಾದ: ಜೆ.ವಿ.ಕಾರ್ಲೊ.   ಅವನ ಎದುರಿಗೆ ಕುಳಿತ್ತಿದ್ದ ಹುಡುಗ ಶತ್ರು ಪಾಳೆಯದವನಾಗಿದ್ದ. ಹೆಸರು ಟೀಗೊ. ಅವನು ಧರಿಸಿದ್ದ ಹಸಿರು ಬಣ್ಣದ ಜಾಕೆಟಿನ ಬಾಹುಗಳಿಗೆ ಕಿತ್ತಳೆ ಬಣ್ಣದ ಪಟ್ಟಿಯನ್ನು ಅಂಟಿಸಲಾಗಿತ್ತು. ಆ ಜಾಕೆಟ್ಟೇ ಅವನು ಶತ್ರು ಪಾಳೆಯದವನೆಂದು ಚೀರಿ ಚೀರಿ ಸಾರುತ್ತಿತ್ತು. “ಇದು ಚೆನ್ನಾಗಿದೆ!” ಮೇಜಿನ ಮಧ್ಯದಲ್ಲಿದ್ದ ರಿವಾಲ್ವರಿಗೆ ಬೊಟ್ಟು ಮಾಡಿ ಡೇವ್ ಹೇಳಿದ. “ಅಂಗಡಿಯಲ್ಲಿ ಕೊಳ್ಳುವುದಾದರೆ 45 ಡಾಲರುಗಳಿಗೆ ಕಡಿಮೆ ಇಲ್ಲ ಅಂತ ನನ್ನ ಅನಿಸಿಕೆ.” ಅದು ಸ್ಮಿತ್ ಅಂಡ್ ವೆಸ್ಸನ್ .38 … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಲೆಗೆ ರಾಜಕೀಯ ರಂಗು, ರಾಜಕೀಯಕ್ಕೆ ಕಲಾವಿದರ ಪ್ರವೇಶ ಸರಿಯೇ. . .?: ಕೆ.ಪಿ.ಎಮ್. ಗಣೇಶಯ್ಯ

ಚುನಾವಣಾ ಸಂದರ್ಭ ಕಲಾವಿದರ ಕಲೆಯ ಮಾನ ಮಾರಣ ಹೋಮ. ಇದು ಇತ್ತೀಚೆಗೆ ಚಿಂತನೆಗೀಡು ಮಾಡಿದ ವಿಷಯ. ಕಲಾವಿದ ಎಂದು ಗುರುತಿಸಿಕೊಂಡ ಮೇಲೆ ರಾಜಕೀಯಕ್ಕೆ ಬರಬಾರದು. ಇದು ನನ್ನ ಅಪೇಕ್ಷೆ. ಕಾರಣ ಇಷ್ಟೆ, ಹಲವಾರು ರಾಜಕೀಯ ಪಕ್ಷಗಳು ಭಿನ್ನ ವಿಭಿನ್ನವಾದ ಆಶೋತ್ತರಗಳನ್ನು ಇಟ್ಟುಕೊಂಡು ಗುಂಪುಗಾರಿಕೆಯ ಚಟುವಟಿಕೆ, ಹೀಯ್ಯಾಳಿಕೆ, ಕಾಲೆಳೆಯುವುದು, ತಮ್ಮತನವನ್ನು ತಾವು ಹೊಗಳಿಕೊಳ್ಳುವುದು, ಇತರರನ್ನು ತೆಗಳುವುದು. ಒಳಗಿಂದೊಳಗೆ ಆಮಿಷಕ್ಕೊಳಗಾಗುವುದು ಹೀಗೆ ರಾಜಕೀಯದಲ್ಲಿ ಎಲ್ಲವೂ ಸರಿ. ರಾಜಕೀಯ ಅಂದ್ರೆ ಹೀಗೇನೆ, ಒಪ್ಪೋಣ ಆದರೆ ರಾಜಕೀಯಕ್ಕೆ ಕಲಾವಿದರ ಪ್ರವೇಶ ಎಷ್ಟರ ಮಟ್ಟಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ