ವಿಜೀ : ವರದೇಂದ್ರ.ಕೆ
ನಿತ್ರಾಣನಾಗಿದ್ದ ಸೂರ್ಯ ವಿರಮಿಸಲು ಪಶ್ಚಿಮಕ್ಕೆ ಮಾಯವಾಗುತ್ತಿದ್ದ, ಇದನ್ನೇ ಕಾಯುತ್ತಿದ್ದವನಂತೆ ಚಂದಿರ ಮುಗುಳ್ನಗುತ್ತ ಹಾಲು ಬೆಳದಿಂಗಳ ಚೆಲ್ಲುತ್ತ ಚೆಲುವೆಯರ ಅಂದ ಪ್ರತಿಬಿಂಬಿಸುತ್ತ ಮೇಲೇರ ತೊಡಗಿದ. ಅವನ ಬೆಳಕೇ ಗತಿ ಎನ್ನುವ ಬಸ್ ನಿಲ್ದಾಣ, ಧೂಳು ತುಂಬಿಕೊಂಡಿತ್ತು. ಇಂದೋ ನಾಳೆಯೋ ನೆಲಕ್ಕೆ ಮುತ್ತಿಡುವಂತಹ ಸ್ಥಿತಿಯಲ್ಲಿದ್ದು, ವಿನಾಶದ ಅಂಚಿನಲ್ಲಿತ್ತು. ಅಂತಹ ನಿಲ್ದಾಣವೇ ನಮ್ಮ ಜನರಿಗೆ ಜೀವ ಎನ್ನುವಂತೆ; ಅದರಡಿಯಲ್ಲಿಯೇ ನಿಂತು ಧೂಳಿನೊಂದಿಗೆ, ಬೀಡಿ ಸಿಗರೇಟಿನ ವಾಸನೆಯೊಂದಿಗೆ ಒಡನಾಡಿಗಳಾಗಿ ನಿಂತಿದ್ದಾರೆ. ಅಲ್ಲಿ ಪೋಲಿ ಹುಡುಗರ ದಂಡು, ಊರಿಗೆ ಲೇಟಾಗಿ ಪರಿತಪಿಸುತ್ತಿರುವ ಹೆಂಗಳೆಯರು. ದೊಡ್ಡ … Read more