ನ್ಯಾನೋ ಕತೆಗಳು: ವೆಂಕಟೇಶ ಚಾಗಿ
೧) ಸ್ವಚ್ಛ ಭಾರತ ಬಸ್ ನಿಲ್ದಾಣದ ಕಟ್ಟೆಯ ಮೇಲೆ ಇಬ್ಬರು ಸ್ನೇಹಿತರು ಸರಕಾರದ ಮಹತ್ತರ ಯೋಜನೆಯ ಸಾಧಕ-ಬಾಧಕಗಳ ಕುರಿತು ಮಾತನಾಡುತ್ತಾ ಕುಳಿತಿದ್ದರು. ಸಮಯ ಕಳೆಯಲು ಬಾಯಿ ಚಟಕ್ಕಾಗಿ ಶೇಂಗಾ, ಪ್ಯಾಕೆಟ್ ತಿಂಡಿ, ಬಾಳೆಹಣ್ಣು ಇನ್ನಿತರೆ ವಸ್ತುಗಳನ್ನು ತಿನ್ನುತ್ತಾ ಮಾತನಾಡುತ್ತಿದ್ದರು. “ಛೇ, ಈ ಜನರಿಗೆ ಸರಕಾರದ ಈ ಮಹಾ ಯೋಜನೆ ಅರ್ಥವಾಗುವುದೇ ಇಲ್ಲ. ಇವರಿಗೆ ಯಾವಾಗ ಬುದ್ಧಿ ಬರುತ್ತೋ ” ಎನ್ನುತ್ತಾ ಹೊರಟುಹೋದರು. ಅವರಿದ್ದ ಜಾಗದ ಸುತ್ತಮುತ್ತ ಶೇಂಗಾ ಸಿಪ್ಪೆ, ಪ್ಲಾಸ್ಟಿಕ್ ಹಾಳೆಗಳು, ಬಾಳೆ ಸಿಪ್ಪೆ ಹರಡಿದ್ದವು. … Read more