ಮನುಷ್ಯನಿಗಿರಲಿ ಮಾನವೀಯತೆ: ತುಳಸಿ ನವೀನ್. ಬೆಂಗಳೂರು
ಮಾನವೀಯತೆಯು ಹುಟ್ಟಿನಿಂದಲೇ ಬರುವಂತದ ಗುಣ. ಆದರೆ ನಾವು ಬೆಳೆಯುವ ಪರಿಸರ,ವ್ಯವಹರಿಸುವ ಜನರು, ಅವರ ಮನಸ್ಥಿತಿಯಿಂದ ಬದಲಾಗುತ್ತಾ ಹೋಗುತ್ತದೆ. ಮುಗ್ಧತೆ ಮಾಯವಾಗಿ ಕುಕೃತ್ಯಕ್ಕೆ ತಿರುಗುತ್ತದೆ. ಮತ್ಸರ,ದ್ವೇಷ ಮನಸ್ಸಿನಲ್ಲಿ ಮನೆಮಾಡುತ್ತದೆ. ಆಸೆ-ದುರಾಸೆ ಲಾಲಸೀತನ ಮೈದಳೆಯುತ್ತದೆ. ನೀವು ಗಮನಿಸಬಹುದು, ಶಾಲಾ-ಕಾಲೇಜಿನಲ್ಲಿ ಪುಟ್ಟಪುಟ್ಟ ಮನಸ್ಸುಗಳು, ಮುಗ್ಧ ಮನಸ್ಸುಗಳೆಲ್ಲವೂ ಯಾವುದೇ ಜಾತಿ ಧರ್ಮದ ಹಂಗಿಲ್ಲದೇ ಸ್ವಚ್ಛಂದವಾಗಿ ಸ್ನೇಹಲೋಕದಲ್ಲಿ ವಿಹರಿಸುತ್ತಾ ಇರುತ್ತಾರೆ. ಪರಸ್ಪರ ಪ್ರೀತಿ, ಸ್ನೇಹ, ಸಹಾಯ ಮಾಡಿಕೊಂಡು ಸಂತೋಷದಿಂದ ಜೀವನ ಕಳೆಯುತ್ತಾ ಇರುತ್ತಾರೆ. ಆ ಮನಸ್ಸುಗಳಲ್ಲಿ ಯಾವುದೇ ಬೇಧಭಾವದ ಕಪ್ಪುಚುಕ್ಕೆಗಳಿರುವುದಿಲ್ಲ. ಅದೇ ಕಾಲೇಜು ಜೀವನದಿಂದ … Read more