ಮಕ್ಕಳ ಕಥೆ : ಅರಮನೆಯ ಅರಗಿಣಿ: -ಸಿಂಧು ಭಾರ್ಗವ್

ಒಂದು ಅರಮನೆಯಲ್ಲಿ ರಾಜ, ರಾಣಿ ತಮ್ಮ ಮಕ್ಕಳ ಜೊತೆಗೆ ಸುಖವಾಗಿದ್ದರು. ಐದು ಜನ ಮಕ್ಕಳಲ್ಲಿ ಕೊನೆಯವಳೇ ಹೆಣ್ಣುಮಗಳು. ಒಬ್ಬಳೆ ಹಾಗೂ ಕೊನೆಯ ಮಗಳಾದ ಕಾರಣ ಮುದ್ದಿನಿಂದ ಸಾಕಿ ಬೆಳೆಸುತ್ತಿದ್ದರು. ಹೆಸರು ಕನಕಕಲ್ಯಾಣಿ. ಊಟ-ನಿದಿರೆ ಎಲ್ಲವೂ ಅವಳ ಅಂತಃಪುರದೊಳಗೇ ನಡೆಯುತ್ತಿತ್ತು. ನೆಲದಲ್ಲಿ ಕಾಲಿಡಲೂ ಬಿಡುತ್ತಿರಲಿಲ್ಲ. ಪ್ರತಿಯೊಂದಕ್ಕೂ ಒಬ್ಬ ಕೆಲಸದಾಕೆ ಇದ್ದಳು. ಯುವರಾಣಿಯ ಯೋಗಕ್ಷೇಮ ನೋಡಿಕೊಳ್ಳುತ್ತಾ ಹೊರಗಿನ ಆಗುಹೋಗುಗಳನ್ನು ತಿಳಿಸಲು ತಂತಿಯಾಗಿದ್ದಳು. ಅವಳ ಕೋಣೆಯೊಳಗೆ ಕೇಳಿದ್ದೆಲ್ಲವೂ ಬರುತ್ತಿತ್ತು. ಹಾಗಾಗಿ ಯುವರಾಣಿಗೆ ಹೊರಗಿನ ಪ್ರಪಂಚದ ಅರಿವೇ ಇರಲಿಲ್ಲ. ಎಲ್ಲವನ್ನೂ ಕೇಳಿ ತಿಳಿದುಕೊಂಡಿದ್ದಳೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಮ್ಮೆಲ್ಲರ ಸಿಪಿಕೆ- ಎಂಬತ್ತರ ಮೊಹಬತ್ತು!: ಡಾ. ಹೆಚ್ ಎನ್ ಮಂಜುರಾಜ್

ಸಿಪಿಕೆ ಮತ್ತು ಅವರ ಕಾವ್ಯ ಕುರಿತ ಬರಹ ಅಪ್ರತಿಮ ವಿದ್ವತ್ತು; ಮಾತೋ ವಿದ್ಯುತ್ತು ! ಸಿಪಿಕೆಯವರನ್ನು ಬಲ್ಲ ಯಾರಿಗೂ ಅನಿಸುವ ಸತ್ಯವಿದು. ಮೈಸೂರಿನ ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿದ್ದ ಸಿ ಪಿ ಕೃಷ್ಣಕುಮಾರ್ ಅವರು ಕನ್ನಡ ಸಾಹಿತ್ಯದ ಹೆಮ್ಮೆಯ ಆಸ್ತಿ. ಹಳೆಯ ಮೈಸೂರು ಪ್ರಾಂತ್ಯದ ಸತ್ತ್ವ ಮತ್ತು ಸ್ವತ್ವ. ಇವರು ತಮ್ಮೆಲ್ಲ ಚೈತನ್ಯವನ್ನು ಸಾಹಿತ್ಯ ಕೃಷಿಗೆ ಮುಡಿಪಿಟ್ಟವರು. ಕನ್ನಡ ಸಾಹಿತ್ಯ ಸೇವೆಯೇ ಅವರ ಮತ್ತೊಂದು ಹೆಸರು; ಬರೆವಣಿಗೆ ಅವರ ಉಸಿರು. ಕನ್ನಡ, ಇಂಗ್ಲಿಷ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಕಣ್ಮಣಿ !: ಕೆ ಟಿ ಸೋಮಶೇಖರ ಹೊಳಲ್ಕೆರೆ.

ತಂದೆ ತಾಯಿಗೆ ತಮ್ಮ ಮಗ ಇಂಗ್ಲೀಷ್ ಮಾಧ್ಯಮದಲ್ಲಿ ಓದಿ ಇಂಗ್ಲೀಷ್ ಮಾತನಾಡುತ್ತಾ ದೊಡ್ಡ ಅಧಿಕಾರಿಯಾಗಿ ದೊಡ್ಡ ಪಟ್ಟಣದಲ್ಲಿ ದೊಡ್ಡ ಭಂಗಲೆಯಲ್ಲಿದ್ದು ಎಲ್ಲರ ಹತ್ತಿರ ಸೆಲ್ಯೂಟ್ ಹೊಡೆಸಿಕೊಳ್ಳುತ್ತಾ ಕಾರಲ್ಲಿ ಓಡಾಡಬೇಕಂತ ಕನಸು. ನನಸು ಮಾಡಿಕೊಳ್ಳಲು ಹಳ್ಳಿಯ ಕನ್ನಡ ಶಾಲೆ ಬಿಡಿಸಿ ಪೇಟೆ ಕಾನ್ವೆಂಟ್ ಶಾಲೆಗೆ ಸೇರಿಸುತ್ತಾರೆ. ಅವನಿಗೂ ಪೇಟೆ ಬಣ್ಣಬಣ್ಣದ ತಳುಕುಬಳುಕಿನ ಬದುಕು ಖುಷಿ! ಹೊಸ ಶಾಲೆ, ದೊಡ್ಡ ಸುಂದರ ಆಕರ್ಷಕ ಕಟ್ಟಡ , ಮನಸ್ಸೆಳೆಯುವ ವಾತಾವರಣ, ಶಿಸ್ತಾಗಿ ಬೆಳೆಸಿದ ಕೈತೋಟ, ಸ್ಮಾರ್ಟ್ ಕ್ಲಾಸ್ ಗಳು, ಸೈನ್ಸ್ ಲ್ಯಾಬು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಶೇಷಾಂಕಕ್ಕಾಗಿ ಲೇಖನ ಆಹ್ವಾನ

ಪ್ರಿಯ ಪಂಜುವಿನ ಓದುಗರೇ ಹಾಗು ಬರಹಗಾರರೇ, ಕನ್ನಡದ ಅನೇಕ ವೆಬ್‌ ತಾಣಗಳ ನಡುವೆಯೂ ತನ್ನದೇ ಆದ ಓದುಗ ಬಳಗವನ್ನು ಹೊಂದಿರುವ ಪಂಜು ಇಂಡಿಬ್ಲಾಗರ್‌ ವೆಬ್‌ ತಾಣದ ಕನ್ನಡ ತಾಣಗಳ ರ್ಯಾಂಕಿಗ್‌ ನಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ತಿಳಿಸಲು ಹರ್ಷಿಸುತ್ತೇವೆ. ಕಳೆದ ಏಳು ವರ್ಷಗಳ ಪಂಜುವಿನ ಪಯಣದಲ್ಲಿ ಪಂಜು ಆಗಾಗ ವಿಶೇಷ ಸಂಚಿಕೆಗಳನ್ನು ಹೊರ ತರುವುದು ವಾಡಿಕೆ. ಈ ವರ್ಷದ ವಿಶೇಷ ಸಂಚಿಕೆಯಾಗಿ ದೀಪಾವಳಿ ಹಾಗು ಕನ್ನಡ ರಾಜ್ಯೋತ್ಸವದ ವಿಶೇಷಾಂಕವನ್ನು ತರಲು ಪಂಜು ಬಯಸುತ್ತದೆ. ಆದ ಕಾರಣ ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಹೆಣ್ಣೊಂದು ತಾಯ್ತನದ ಕಣ್ಣು ಬಾಲ್ಯದಲಿ ಅಂಕುರ ಬೆಳೆಯುತ್ತ ಹೂವು ಸುಮಧುರ ಅಮ್ಮನಿಗೆ ಸಹೋದರಿ ಅಪ್ಪನಿಗೆ ಭಾಗ್ಯದ ಗರಿ ಮನೆ ಬೆಳಗುವ ಜ್ಯೋತಿ ನೀನಿಲ್ಲದ ಜಗವೊಂದು ಭೀತಿ ಹೆಣ್ಣೊಂದು ಅಗಾಧ ಶಕ್ತಿ ಪವಾಡದಂತೆ, ಇದೊಂದು ಸೃಷ್ಟಿ ಒಲಿದರೆ ನಾರಿ ಮುನಿದರೆ ಮಾರಿ ಈ ಗಾಧೆಗೆ ಸರಿ ಸಾಟಿ ಬರೋಬರಿ ಸಂಗೀತ ಸಾಹಿತ್ಯ ದೇವತೆ ಸುಂದರ, ನಯನ ಮನೋಹರ ನೀನಿಲ್ಲದ ಯುಗವೇ ಅವನತಿ ಹೆಣ್ಣೊಂದು ಭಕ್ತಿ, ಕೈ ಮುಗಿಯಲು ಜನ್ಮ ದಾತೆಯ ರೂಪ ಸದಾ ಮಿಗಿಲು ಒಡಲ ಪ್ರೀತಿಯ ಸಾರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಲೆಗೋಸ್ಕರ ಜೀವನವನ್ನೆ ಮುಡಿಪಾಗಿಟ್ಟ ಅಮಟೂರ ದಂಪತಿಗಳು: ಅಶ್ಫಾಕ್ ಪೀರಜಾದೆ, ಧಾರವಾಡ

ಧಾರವಾಡ ಜಿಲ್ಲೆ ಮತ್ತು ತಾಲೂಕೀನ ಹಾರೋಬೆಳಡಿ ಗ್ರಾಮದ ವಾಸಿಗಳಾದ ವೀರಬಸಪ್ಪ ಅಮಟೂರ ಇವರು ವೃತ್ತಿಯಿಂದ ರೈತರಾದರು ದೊಡ್ಡಾಟ ಕಲಾವಿದರು. ಸರಳ ಸಜ್ಜನಿಕೆಯ ವ್ಯಕ್ತಿಯಾದ ವೀರಬಸಪ್ಪನ್ನವರು ದೋಡ್ಡಾಟದಲ್ಲಿ ಸ್ತ್ರೀ ಪಾತ್ರ ಮಾಡುವದರಲ್ಲಿ ನಿಷ್ಣಾತರು. ಅವರ ಅಭಿನಯಕ್ಕೆ ಮನಸೋಲದ ಕಲಾಸಕ್ತರೇ ಇಲ್ಲ ಎಂದರೆ ಅತಿಶಯೋಕ್ತಿಯಲ್ಲ. ಅವರು ಮುಖಕ್ಕೆ ಬಣ್ಣಬಳಿದುಕೊಂಡು ಸ್ತ್ರೀಪಾತ್ರದಲ್ಲಿ ಅಭಿನಯಸಲು ನಿಂತರೆಂದರೆ ಸಾಕು ಪ್ರೇಕ್ಷಕರಿಂದ ಸಿಳ್ಳೆ ಚಪ್ಪಾಳೆಗಳ ಸುರಿಮಳೆ ಆಗುತ್ತದೆ. ಅವರ ಭಾವಾಭಿನಯವಂತೂ ಕಣ್ಣಲ್ಲಿ ನೀರು ಬರಿಸುವಂಥದ್ದು. ಸ್ಪುರದ್ರೂಪಿಯಾದ ವೀರಬಸಪ್ಪಗೆ ಅವರ ಶರೀರ ಮತ್ತು ಶಾರೀರಗಳೇ ಸಂಪತ್ತು. ತಮ್ಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವಮಾನವೇ ಆದರ್ಶವಾದ ಕಥೆ: ಅಯ್ಯಪ್ಪ ಕಂಬಾರ

ಊರ ಅಗಸಿ ಬಾಗಿಲಿನ ಬಳಿ ಕಾರು ಬಂದ ತಕ್ಷಣ ಡ್ರೈವರ್ ಸರ್. . ಸರ್. . ಎದ್ದೇಳಿ ಸರ್ ನಿಮ್ಮ ಊರು ಬಂತು ಎಂದ. ಆಗ ಸಮಯ 11 ಗಂಟೆ ರಾತ್ರಿ. ಆಜೀವ ದಡಬಡಾಯಿಸಿ ಎದ್ದು ಕಾರು ನಿಲ್ಲಿಸು ಎಂದವನೇ ಕಣ್ಣು ಪಿಚ್ಚು ಒರೆಸಿಕೊಳ್ಳುತ್ತ, ಮುಖದಲ್ಲಿ ಎಲ್ಲಿಂದಲೋ ನಗು ಕಡ ತಂದು ಕಾರಿನ ಗಾಜು ಇಳಿಸಿ ಆಕಡೆ ಈಕಡೆ ಹಿಂದೆ ಮುಂದೆ ಮೇಲೆ ಕೆಳಗೆ ನೋಡುತ್ತ, ಇದ್ದಕ್ಕಿದ್ದವನೆ ಕೆಳಗಿಳಿದು, ಬಾಗಿ ನೆಲ ಮುಟ್ಟಿ ನಮಸ್ಕರಿಸಿ ಮೇಲೆದ್ದ. ಬೀದಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬರೆಯುವುದು ಹೇಗೆ?: ಡಾ. ಹೆಚ್ ಎನ್ ಮಂಜುರಾಜ್, ಮೈಸೂರು

ಇತ್ತೀಚೆಗೆ ನನ್ನ ಪರಿಚಿತರೊಬ್ಬರು ‘ಬರೆಯುವುದು ಹೇಗೆ?’ ಎಂದು ಕೇಳಿಬಿಟ್ಟರು. ಇದುವರೆಗೂ ಇಂಥ ಪ್ರಶ್ನೆಯೊಂದನು ನಾನು ಕೇಳಿರಲೂ ಇಲ್ಲ; ಕೇಳಿಕೊಂಡಿರಲೂ ಇಲ್ಲ. ಅಚ್ಚರಿಯೆಂದರೆ ಏನೂ ಮಾತಾಡದೆ ಸುಮ್ಮನೆ ನಕ್ಕುಬಿಟ್ಟೆ. ಆಮೇಲನಿಸಿತು, ಗಂಭೀರನಾದೆ. ಇದು ಬರೆಹವೊಂದು ಉದಿಸುವ ಮುಹೂರ್ತ. ಅದನೇ ಬರೆದು ಬಿಡೋಣ ಎಂದು ಕುಳಿತು ಬರೆಯುತ್ತ ಹೋದೆ. ಈ ಬರೆಹ ಜನಿಸಿತು. ಅಂದರೆ ಬರೆಹದ ಪ್ರಾಥಮಿಕ ಲಕ್ಷಣವೇ ಕುಳಿತು ಬರೆಯುತ ಹೋಗುವುದು ಅಷ್ಟೇ. ಪರೀಕ್ಷೆಯಲ್ಲಿ ಮೂರು ಗಂಟೆಗಳ ಕಾಲ ಬರೆಯುತ್ತೇವೆ. ಹೇಗದು ಸಾಧ್ಯವಾಯಿತು? ಏಕಾಗ್ರತೆ, ಉದ್ದೇಶ, ಮನೋಭಾವ ಮತ್ತು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂತರಾಗ್ನಿ (ಭಾಗ ೪): ಕಿರಣ್. ವ್ಹಿ

ಇಲ್ಲಿಯವರೆಗೆ ರೂಮಿಗೆ ಬಂದ ಹರಿ ಅನೂಷಾಳಿಗೆ ಕಾಲ್ ಮಾಡಿದ. “ಹೇ ಅನೂಷ ಏನ್ ಮಾಡ್ತಿದ್ದೀಯಾ?” ” ಏನಿಲ್ಲಪ್ಪ. ಈಗ ಜಸ್ಟ್ ಊಟ ಆಯ್ತು, ಸುಮ್ಮನೆ ಕೂತಿದ್ದೀನಿ. ಮನೆಯಲ್ಲಿ ಫುಲ್ ಖುಷ್ ಕಣೋ, ಕೆಲಸ ಸಿಕ್ಕಿದ್ದಕ್ಕೆ” ” ಹೌದಾ… ನಮ್ಮನೇಲೂ ಅಷ್ಟೇ, ತುಂಬಾ ಖುಷಿಯಾಗಿದ್ದಾರೆ. ಆದ್ರೂ ನಮ್ಮಪ್ಪ, ಕೊನೆಗೊಂದು ಬಾಂಬ್ ಹಾಕಿನೆ ಹೋದ್ರು ನೋಡು.” ” ಹ್ಹ….ಹ್ಹ…. ಹಂಗೆ ಆಗ್ಬೇಕು ನಿನಗೆ. ಅಂದ್ಹಾಗೆ, ಏನ್ ಬಾಂಬು ಅದು ಮಿಸ್ಟರ್ ಹರಿ?”. ಎಂದು ರೇಗಿಸಿದಳು ಅನೂಷಾ. “ಏಯ್… ಸಾಕು ಸುಮ್ನಿರೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಹಾ ಶರಣ ಹರಳಯ್ಯ: ಜಯಶ್ರೀ ಭ ಭಂಡಾರಿ

ಮಹಾ ಶರಣ ಹರಳಯ್ಯ ಪಾರಪಯ್ಯ ಹೊನ್ನಮ್ಮ ದಂಪತಿಗೆ ದವಣದ ಹುಣ್ಣಿಮೆಯೆಂದು ಬಿಜಾಪೂರ ಜಿಲ್ಲೆಯ ಕಲಿಗೂಡು ಎಂಬಲ್ಲಿ ಜನಿಸಿದರು. ಆ ಮನೆತನ ಇಂದಿಗೂ ಹರಳಯ್ಯನ ಮಠ ಎಂದು ಗುರುತಿಸಲ್ಪಡುತ್ತದೆ. ಹರಳಯ್ಯನವರು ಬಾಲ್ಯದಲ್ಲಿಯೇ ಅನೇಕ ಪವಾಡಗಳನ್ನು ಮಾಡಿದ್ದಾರೆ. ಬಾಯಿಂದ ಬಂದ ಮಾತು ದಿಟವಾಗುವಂತ ಮಹಾನ ಚೇತನಶಕ್ತಿ ಹರಳಯ್ಯನದಾಗಿತ್ತು. ಬಸವಕಲ್ಯಾಣ ಸೇರುವ ಪೂರ್ವದಲ್ಲಿಯೇ ಹರಳಯ್ಯ ಸಾತ್ವಿಕ ಶರಣರಾಗಿದ್ದರು. ಇಡೀ ಬಡಾವಣೆಗೆ ಬೆಂಕಿ ಹತ್ತಿ ಉರಿಯುತ್ತಿರುವಾಗ ಮಳೆ ತರಿಸಿದ್ದರು, ತನ್ನ ಪ್ರದೇಶದ ರಾಜನಿಗೆ ಹಾವು ಕಚ್ಚಿದಾಗ ತಮ್ಮ ಶಕ್ತಿಯಿಂದ ಬದುಕುಳಿಯುವಂತೆ ಮಾಡಿದ್ದರು ಎಂಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನುಷ್ಯನಿಗಿರಲಿ ಮಾನವೀಯತೆ: ತುಳಸಿ ನವೀನ್. ಬೆಂಗಳೂರು

ಮಾನವೀಯತೆಯು ಹುಟ್ಟಿನಿಂದಲೇ ಬರುವಂತದ ಗುಣ. ಆದರೆ ನಾವು ಬೆಳೆಯುವ ಪರಿಸರ,ವ್ಯವಹರಿಸುವ ಜನರು, ಅವರ ಮನಸ್ಥಿತಿಯಿಂದ ಬದಲಾಗುತ್ತಾ ಹೋಗುತ್ತದೆ. ಮುಗ್ಧತೆ ಮಾಯವಾಗಿ ಕುಕೃತ್ಯಕ್ಕೆ ತಿರುಗುತ್ತದೆ. ಮತ್ಸರ,ದ್ವೇಷ ಮನಸ್ಸಿನಲ್ಲಿ ಮನೆಮಾಡುತ್ತದೆ. ಆಸೆ-ದುರಾಸೆ ಲಾಲಸೀತನ ಮೈದಳೆಯುತ್ತದೆ. ನೀವು ಗಮನಿಸಬಹುದು, ಶಾಲಾ-ಕಾಲೇಜಿನಲ್ಲಿ ಪುಟ್ಟಪುಟ್ಟ ಮನಸ್ಸುಗಳು, ಮುಗ್ಧ ಮನಸ್ಸುಗಳೆಲ್ಲವೂ ಯಾವುದೇ ಜಾತಿ ಧರ್ಮದ ಹಂಗಿಲ್ಲದೇ ಸ್ವಚ್ಛಂದವಾಗಿ ಸ್ನೇಹಲೋಕದಲ್ಲಿ ವಿಹರಿಸುತ್ತಾ ಇರುತ್ತಾರೆ. ಪರಸ್ಪರ ಪ್ರೀತಿ, ಸ್ನೇಹ, ಸಹಾಯ ಮಾಡಿಕೊಂಡು ಸಂತೋಷದಿಂದ ಜೀವನ ಕಳೆಯುತ್ತಾ ಇರುತ್ತಾರೆ. ಆ ಮನಸ್ಸುಗಳಲ್ಲಿ ಯಾವುದೇ ಬೇಧಭಾವದ ಕಪ್ಪುಚುಕ್ಕೆಗಳಿರುವುದಿಲ್ಲ. ಅದೇ ಕಾಲೇಜು ಜೀವನದಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಧೃತರಾಷ್ಟ್ರಾಲಿಂಗನ !: ಕೆ ಟಿ ಸೋಮಶೇಖರ. ಹೊಳಲ್ಕೆರೆ

‘ ಆಲಿಂಗನ ‘ ಎಂಬ ಪದವೇ ಆಪ್ಯಾಯಮಾನ ಅನಿಸುವಂತಹದ್ದು! ಹಿತಕರ ಅನುಭವ ಉಂಟು ಮಾಡುವಂತಹದ್ದು. ಆಲಿಂಗನವೆಂಬ ಕ್ರೀಯೆ ಎರಡು ದೇಹಗಳ ಬೆಸುಗೆ! ಮಧುರ ಅನುಭವ! ಗಾಢ ಪ್ರೀತಿ, ಸ್ನೇಹ, ಮಮತೆ ಆಲಿಂಗನದ ಸಂಕೇತಗಳು! ಆಲಿಂಗನದಲ್ಲಿ ದೇಹಗಳಷ್ಟೇ ಬೆಸೆದಿರುವಂತೆ ಕಂಡರೂ ಮನಸ್ಸುಗಳು ಮೊದಲೇ ಸೂಜಿಗಲ್ಲಿನಂತೆ ಸೆಳೆದು ಆಲಂಗಿಸಿಕೊಂಡಿರುತ್ತವೆ. ಮನಸ್ಸುಗಳು ಆಕರ್ಷಿಸದೆ ದೇಹಗಳು ಆಲಿಂಗನಗೊಳ್ಳುವುದಿಲ್ಲ! ದೇಹಗಳ ಆಲಿಂಗನದಿಂದ ಮನಸ್ಸುಗಳು ಸ್ಪರ್ಷಾನಂದದ ಅನುಭವ ಹೊಂದುತ್ತಿರುತ್ತವೆ! ಸ್ಪರ್ಷಾನುಭವ ವ್ಯಕ್ತಿಗಳು ಹೊಂದಿರುವ ಅನ್ಯೋನ್ಯತೆಯ ಆಧಾರದ ಮೇಲೆ ಸಂತಸ ಉಂಟು ಮಾಡುತ್ತಿರುತ್ತದೆ. ಹಾಗೇ ಗಾಢಾಲಿಂಗನ ಅವರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಅಜ್ಜ ಬರುವುದ ಇನ್ನೂ ಬಿಟ್ಟಿಲ್ಲ..!! ಅಗೋ..! ನೋಡು ಅಲ್ಲಿ..? ಗೋಡೆನೆತ್ತಿಯ ಮೊಳೆಯಲ್ಲಿ ಅಹಿಂಸಾ ಮೂರುತಿಯ ಬಂಧಿಸಿ ಕಟ್ಟಿ ಹಾಕಿದಂತೆ ನೇತು ಹಾಕಿದೆ ಬಿಟ್ಟ ಕಣ್ಣು ಬಿಟ್ಟ ಹಾಗೆ ಹುಬ್ಬುಗಂಟಿಕ್ಕದೆ ಒಮ್ಮೆ ನಸು ನಗುತ್ತಾ ಜೀಸಸ್ ಕ್ರಿಸ್ತನಂತೆ ಕಾಣುತ್ತಿದ್ದಾನೆ..!! ನನ್ನ ತಾತ ಕೋಲು ಹಿಡಿದು ಸುಕ್ಕುಗಟ್ಟಿದ ಮೈಯ್ಯಲ್ಲಿ ತುಂಡು ಬಟ್ಟೆ ತೊಟ್ಟು ಮೇಲೆ ಹೊದಿಕೆ ಹೊದ್ದು ಕಾಲ್ನಡಿಗೆಯಲ್ಲೇ ಯಾರನ್ನೋ ? ಯಾವುದನ್ನೋ ! ಅರಸುತ್ತಾ , ನಡೆಯುತ್ತಾ ಹೊರಟಂತಿದೆ…!! ಕಪ್ಪು ಜನಾಂಗೀಯ ನಿಂದನೆ ದಹಿಸಿ ಅಹಿಂಸೆಯಿಂದ ಹಿಂಸೆ ಜಯಿಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಟ್ರಿಣ್ ಟ್ರಿಣ್ . . . . . . . ದಾರಿಬಿಡಿ: ಸಂಗೀತ ರವಿರಾಜ್

ಸೈಕಲ್ ತುಳಿಯುತ್ತ, ಚಕ್ರ ತಿರುಗಿದ ಕಾಲಗತಿಯಲ್ಲಿ ಕಾಲಚಕ್ರವು ಸದ್ದಿಲ್ಲದೆ ಉರುಳುತ್ತಾ, ಈಗ ನನಗೆ ನಾನೆ ಹುಬ್ಬೇರುವಂತೆ ಎರಡು ಮಕ್ಕಳ ತಾಯಿಯಾಗಿ, ಮೂರು ಕತ್ತೆ ವಯಸ್ಸಾಗಿ, ಬಳುಕದ ಬಳ್ಳಿಯಾಗಿ ಬಾಳುತ್ತಿದ್ದರು ಸೈಕಲ್ ಕಂಡಾಗಲೊಮ್ಮೆ ತುಳಿಯಬೇಕೆಂಬ ಮನದ ಹುಚ್ಚು ವಾಂಛೆ ಈ ಕ್ಷಣಕ್ಕು ಹೋಗಿಲ್ಲ ಎಂದರೆ ಯಾರು ನಂಬಲಾರರು. ಬಾಲ್ಯದ ಬಾಗಿಲಲ್ಲಿಯೆ ಕಲಿತ ಸೈಕಲ್ ಸವಾರಿ, ಈಗಲು ನನ್ನ ಕಾಲತುದಿಯಲ್ಲಿ ಅದೇ ಆಸಕ್ತಿಯಿಂದ ಕುಳಿತಿದೆ ಅಂದರೆ ನನಗೆ ನಾನೆ ಪರಮಾಶ್ಚರ್ಯಗೊಳ್ಳುತ್ತೇನೆ. ಮನೆಗೆ ಯಾರಾದರೂ ಸೈಕಲಲ್ಲಿ ಬಂದರೆ, ಅಥವ ನಾವು ಹೋದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂತರಾಗ್ನಿ (ಭಾಗ 3): ಕಿರಣ್. ವ್ಹಿ

ಇಲ್ಲಿಯವರೆಗೆ ಹೊರಗೆ ಬಂದ ಇಬ್ಬರು ತಮ್ಮ ತಮ್ಮ ಕೆಲಸ ನೋಡಿಕೊಳ್ಳಲು ಮುಂದಾದರು. ಹರಿಗೆ ತನ್ನ ಬೈಕ್ ಸರಿಯಾದರೆ ಸಾಕಾಗಿತ್ತು. ಆ ನಡುರಸ್ತೆಯಲ್ಲಿ ಕೆಟ್ಟು ನಿಂತದ್ದು ಮತ್ತೊಂದು ತಲೆನೋವಾಗಿತ್ತು. ಸಹಾಯಕ್ಕೆಂದು ಮ್ಯಾನೇಜರ್ ರವಿಯ ಬಳಿ ಹೋದ. ಗೋಪಾಲ್ ವರ್ಮಾರವರು ಕೂಡ ತಮ್ಮ ಮನೆಯವರೆಲ್ಲರ ಜೊತೆ ಸಪ್ತಗಿರಿಯನ್ನು ನೋಡಲು ಹೊರಟರು. ರವಿ, ಹರಿಗೆ ಒಬ್ಬ ಮೆಕ್ಯಾನಿಕ್ನನ್ನು ಪರಿಚಯಿಸಿ ಅವನ ಜೊತೆಯಲ್ಲಿ ಹೋಗಿ ಬೈಕನ್ನು ರಿಪೇರಿ ಮಾಡಿ, ತೆಗೆದುಕೊಂಡು ಬರಲು ಹೇಳಿದ. ಇಬ್ಬರು ಮೆಕ್ಯಾನಿಕ್ ನ ಬೈಕ್ನಲ್ಲಿ ಹೋಗಿ ಗಾಡಿಯನ್ನು ರಿಪೇರಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಮಾಯಕನೊಬ್ಬನ ಕತೆ: ಸೂರಿ ಹಾರ್ದಳ್ಳಿ

ನಮ್ಮ ಗುಂಡ ಬರೀ ಅಮಾಯಕನಲ್ಲ, ಅಮಾಯಕರಲ್ಲಿ ಅಮಾಯಕ ಎಂಬುದರಲ್ಲಿ ಖಡಾಖಂಡಿತ ನಂಬಿಕೆಯುಳ್ಳವನು ನಾನು. ಇದಕ್ಕೆ ಕಾರಣಗಳಿಲ್ಲದಿಲ್ಲ. ಭಾರತದ ಹವಾಮಾನ ಇಲಾಖೆಯವರು ‘ಇನ್ನು ಮೂರು ದಿನ ಮಳೆ ಬರುತ್ತದೆ’ ಎಂದು ಹೇಳಿದರೆ ಮೂರೂ ದಿವಸ ತನ್ನ ಜೊತೆಯಲ್ಲಿ ತನ್ನ ಕೊಡೆಯನ್ನು ಹೊತ್ತೊಯ್ಯುವವನೇ ಅವನು. ‘ಇಲ್ಲವೋ ಮಂಕು ಮುಂಡೇದೇ, ನಿನಗೆಲ್ಲೋ ಭ್ರಮೆ. ಬರುತ್ತದೆ ಎಂದರೆ ಬರೋಲ್ಲ. ಮಳೆ ದೇವರಾದ ವರುಣನಿಗೆ ಈ ಇಲಾಖೆಯವರನ್ನು ಕಂಡರೆ ಕೋಪ. ಹಾಗಾಗಿ ಸದಾ ತದ್ವಿರುದ್ಧವಾಗಿರುತ್ತದೆ, ಇದು ಸತ್ಯಸ್ಯ ಸತ್ಯ,’ ಎಂದು ಬಿಡಿಸಿ ಬಿಡಿಸಿ ಹೇಳಿದರೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೀರ್ತನ ಸಾಹಿತ್ಯದಲ್ಲಿ ಸಾಮಾಜಿಕ ವಿಡಂಬನೆ: ನಾಗರೇಖಾ ಗಾಂವಕರ

ಸಾಹಿತ್ಯ ಪ್ರಜ್ಞಾಪೂರ್ವಕ ಸ್ಥಿತಿಯಲ್ಲಿ ಕನಸು ಮೂಡಿಸುವ ಶಕ್ತತೆಯುಳ್ಳದ್ದು, ಹಾಗೇ ಅಪ್ರಜ್ಞಾಪೂರ್ವಕ ನೆಲೆಯಲ್ಲೂ ಮೂಡಿ ಬೆರಗು ಹುಟ್ಟಿಸುವಂತಹುದು. ಕಾವ್ಯ ಹುಟ್ಟುವ ಇಲ್ಲ ಕಟ್ಟುವ ಸಮಯದಲ್ಲಿ ಅದು ಒಳ್ಳಗೊಳ್ಳಬೇಕಾದ ಸಂಗತಿಗಳನ್ನು ಪರಿಕರಗಳನ್ನು ಕುರಿತು ವಿಶ್ಲೇಷಿಸಿದರೆ ಅದು ಕಾವ್ಯ ಮೀಮಾಂಸೆ, ಹಾಗೇ ಪ್ರಾಚೀನ ಕಾಲದ ಸಾಹಿತ್ಯದ ರೂಪುರೇಷೆಗಳ ಕುರಿತು ಇಲ್ಲ ಆ ಕಾಲದ ಕಾವ್ಯದ ಮುಖೇನ ಆ ಯುಗದ ಸಾಮಾಜಿಕ , ರಾಜಕೀಯ ಧಾರ್ಮಿಕ ಸಂಗತಿಗಳನ್ನು ಜೀವನ ರೀತಿನೀತಿಗಳನ್ನು ಮೌಲ್ಯಗಳನ್ನು ಕುರಿತು ವಿಶ್ಲೇಷಿಸುವುದು ಸಂಶೋಧನೆ. ದಾಸ ಪರಂಪರೆಯಲ್ಲಿ ಕೀರ್ತನೆಗಳ ಮುಖೇನ ವಿಡಂಬನಾತ್ಮಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಗ್ಗದ ಅರ್ಥ ವಿವರಣೆ: ಜಗದೀಶ್ ಅಚ್ಚುತರಾವ್

ಧರೆಯ ಬದುಕೇನದರ ಗುರಿಯೇನು ಫಲವೇನು? । ಬರಿ ಬಳಸು ಬಡಿದಾಟ ಬರಿ ಪರಿಭ್ರಮಣೆ ॥ ತಿರುತಿರುಗಿ ಹೊಟ್ಟೆ ಹೊರಕೊಳುವ ಮೃಗಖಗಕಿಂತ ನರನು ಸಾಧಿಪುದೇನು? – ಮಂಕುತಿಮ್ಮ ॥ ೨೭ ॥ ಈ ಕಗ್ಗದಲ್ಲಿ ಡಿ.ವಿ.ಜಿ. ಬದುಕಿನ ಗುರಿ ಏನು ನಾವು ಬದುಕುವ ದಿನದ ಬದುಕಿಗೆ ಏನಾದರೂ ಅರ್ಥವಿದೆಯೇ ಎಂಬುದಾಗಿ ಪ್ರಶ್ನಿಸುತ್ತಾರೆ. ಮಾನವನ ಬದುಕಿಗೆ ಗುರಿಯಿರದೆ ಬಹಳಷ್ಟು ಜನ ಬದುಕಿರುತ್ತ ಇರುತ್ತಾರೆ. ದೇವರು ನಮಗೆ ಮಾನವ ಜನ್ಮ ಕೊಟ್ಟಿರುವುದು ವ್ಯರ್ಥ ಮಾಡುವುದಕ್ಕೆ ಅಲ್ಲ. ಎಲ್ಲ ಜನ್ಮಗಳಲ್ಲಿ ಮಾನವ ಜನ್ಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಚೌಕಟ್ಟಿನಾಚೆ” ಒಂದು ತೌಲನಿಕ ಕೃತಿ: ಕೆ.ಎಂ.ವಿಶ್ವನಾಥ ಮರತೂರ

ಅನುಭವಗಳಾದರೆ ಅಕ್ಷರಗಳ ಜೊತೆಗೆ ಆಟವಾಡಬಹುದು. ನಮ್ಮೊಳಗೆ ಕಾಡಿದ ಅದೆಷ್ಟೊ ವಿಷಯಗಳಿಗೆ ಧ್ವನಿಯಾಗಬಹುದು. ಇಂತಹದ್ದೆ ಪ್ರಯತ್ನ “ಚೌಕಟ್ಟಿನಾಚೆ” ಕೃತಿ ಪ್ರಯತ್ನ ಮಾಡಿದೆ. ಸಮಾಜದಲ್ಲಿರುವ ಅನೇಕ ವಿಷಯಗಳು ಸಮಯ ಬಂದಂತೆ ನಮಗೆ ಕಾಡಲಾರಂಭಿಸುತ್ತವೆ ಅವಶ್ಯಕ ಮತ್ತು ಅನಾವಶ್ಯಕ ಎನ್ನುವ ವಿಚಾರಗಳತ್ತ ತೊಳಲಾಡುತ್ತವೆ. ಯಾವುದು ಸರಿ ಯಾವುದು ತಪ್ಪು ಎನ್ನುವ ವಿಚಾರದತ್ತ ವಿನಮಯದತ್ತ ಕೇಂದ್ರಿಕೃತವಾಗುತ್ತವೆ. ಇಂತಹ ವಿಚಾರಗಳತ್ತ ಹೊರಳುವುದೇ “ಚೌಕಟ್ಟಿನಾಚೆ” ಕೃತಿಯ ಮುಖ್ಯ ಉದ್ದೇಶವಾಗಿದೆ. ಲೇಖಕರು ತಮ್ಮ ಲೇಖನಗಳ ಮೂಲಕ ಬೀದರ ಜಿಲ್ಲೆಯ ಸಾಹಿತ್ಯದ ಕೊಡುಗೆ ಅದರ ಆಳ ಅಗಲ ತಿಳಿಸುವುದಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿಂತಲ್ಲೇ ಎಲ್ಲವೂ ಆಗಬೇಕು: ಕೆ.ಪಿ.ಎಮ್. ಗಣೇಶಯ್ಯ,

ಎಲ್ಲಾದರೂ ಉಂಟೆ..? ನಿಂತಲ್ಲೇ ಎಲ್ಲವೂ ಆಗಬೇಕು ಅಂದ್ರೆ..? ನಿಮಗೆಲ್ಲೋ ತಲೆ ಕೆಟ್ಟಿರಬೇಕು, ಇಲ್ಲಾ ಯಾರೋ ತಲೆಗೆ ತುರುಕಿರಬೇಕು. ಏನಂತ..? ನೀನು ಈಗಿಂದೀಗ ಅದು ಆಗಬೇಕು ಅಷ್ಟೆಯಾ..! ಎಲ್ಲಿಯಾದರೂ ಉಂಟೆ..? ನೆಚ್ಚಿಕೊಂಡ ಕ್ಷೇತ್ರದ ಬಗ್ಗೆ ಮಾಹಿತಿ, ತರಬೇತಿ, ಮಾರ್ಗದರ್ಶನ, ಅಭ್ಯಾಸ ಹೀಗೆ ಏನನ್ನೂ ಪಡೆಯದೆ, ಇದ್ದಕ್ಕಿದ್ದ ಹಾಗೆ ಎಲ್ಲವೂ ನನ್ನದಾಗಬೇಕು ಅಂದರೆ ಹೇಗೆ ಸಾಧ್ಯ.? ಮುಖವಾಡದ ಮುಖಗಳನ್ನು ಹೊತ್ತ ಮುಖಗಳಿಗೆ ನಿಜವಾದ ಮುಖಗಳ ಪರಿಶ್ರಮ, ಗೊತ್ತಿದ್ದರೂ ಅವುಗಳನ್ನು ಹಿಂದಕ್ಕೆ ನೂಕಿ, ನಾನೂ ಅವನಂತೆ, ನನ್ನನ್ನು ಒಪ್ಪಿಕೊಳ್ಳಿರಿ ಎಂದು ದುಂಬಾಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಂಟಲ್ ಎಬಿಲಿಟಿ ಕೋಡಿಂಗ್ ಭಾಗ – 2: ಪ್ರವೀಣ್‌ ಕೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೋಡಿಂಗ್‌ ಕುರಿತ ಪ್ರಶ್ನೆಗಳನ್ನು ಉತ್ತರಿಸಲು ಈ ವಿಡಿಯೋ ನಿಮಗೆ ತುಂಬಾ ಸಹಕಾರಿ… ಕೋಡಿಂಗ್ ಭಾಗ –2:   ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಚ್ಛಾಮರಣಿಯ ತ್ಯಾಗದ ಜೀವನ, ತ್ಯಾಗದ ಮರಣ!: ಕೆ ಟಿ ಸೋಮಶೇಖರ ಹೊಳಲ್ಕೆರೆ.

ಮಹಾಭಾರತದ ಮಹಾಪಾತ್ರಗಳಲ್ಲಿ ಭೀಷ್ಮನದು ಬಹು ಮುಖ್ಯವಾದ ಪಾತ್ರವಾಗಿದೆ! ತ್ಯಾಗವೆಂಬ ಮಹಾಮೌಲ್ಯದಿಂದ ಕೂಡಿ ಪ್ರಸಿದ್ದವಾದುದಾಗಿದೆ. ಇವ ಕೌರವ ಪಾಂಡವರಿಗೆ ಅಜ್ಜನೂ ಗುರುವೂ ಆಗಿದ್ದು ಮಹಾಪರಾಕ್ರಮಿಯಾಗಿದ್ದವ! ಶಂತನು ಮತ್ತು ಗಂಗಾದೇವಿಯರ ಪುತ್ರನೇ ಭೀಷ್ಮ! ಒಂದು ಕಟ್ಟುಪಾಡಿನ ಮೇರೆಗೆ ಶಂತನು ಗಂಗಾದೇವಿಯನ್ನು ಮದುವೆಯಾಗಿರುತ್ತಾನೆ. ಶಂತನು ಗಂಗಾ ದೇವಿಯಲ್ಲಿ ಒಬ್ಬರಾದ ಮೇಲೆ ಒಬ್ಬರಂತೆ ಎಂಟು ಜನ ಗಂಡು ಮಕ್ಕಳನ್ನು ಪಡೆಯುತ್ತಾನಾದರೂ ಮಗು ಹುಟ್ಟುತ್ತಿದ್ದಂತೆ ಗಂಗಾದೇವಿ ಅದನ್ನು ತೆಗೆದುಕೊಂಡು ಗಂಗಾ ನದಿಯಲ್ಲಿ ಮುಳುಗಿಸಿ ಬರುತ್ತಿರುತ್ತಾಳೆ! ಪ್ರತಿ ಮಗು ಹುಟ್ಟಿದಾಗಲೂ ಶಂತನು ಅವಳ ಹಿಂದೆ ನದಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ನಿನ್ನ ಅಕ್ಷರ ಪ್ರೀತಿ ಅಮರವಾಗಲಿ (ಜಿಎಸ್‍ಎಸ್ ನೆನಪು) ಕನ್ನಡ ಸಾಹಿತ್ಯದ ಕಿರೀಟವಾದೆ ಕನ್ನಡಿಗರ ಮನದ ಮುಕುಟವಾದೆ ಪ್ರೀತಿ ಇಲ್ಲದ ಮೇಲೆ ಎಂದು ಎಲ್ಲರಿಗೂ ಪ್ರೀತಿಯ ಅರ್ಥ ತಿಳಿಸಿದೆ ಕಾಣದ ಊರಿಗೆ ನಿನ್ನ ಪಯಣ ಸದಾ ತುಂಬಿರುವೆ ಜನಮನ ಕನ್ನಡ ಭೂಮಿಯಲ್ಲಿರುವ ಒಂದೊಂದು ಕಣಕಣ ಹಾಡಿ ಹೊಗಳಿದೆ ನಿನ್ನ ಗುಣಗಾನ ಕನ್ನಡಾಂಬೆಯ ಪುತ್ರ ನೀ ಕನ್ನಡಿಗರೆಲ್ಲರ ಮಿತ್ರ ನೀ ದೇಹದಿ ಆತ್ಮ ಅಗಲಿದರೇನು ಭಾವದಿ, ಜೀವದಿ ನಿನ್ನ ನೆನಪು ಅಳಿಯುವುದೇನು? ನಾನು ನೊಂದೆ, ಒಮ್ಮೆ ನಿನ್ನ ನೋಡಬೇಕೆಂಬ ಆಸೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶ್ರೀ ಗುರೂಜಿ ಹೇಳಿದ ಕಥೆಗಳು: ಹೊರಾ.ಪರಮೇಶ್ ಹೊಡೇನೂರು

ಅದೊಂದು ಶನಿವಾರದ ಮಧ್ಯಾಹ್ನದ ಬಿಡುವಿನ ಸುದಿನ. ಅರಕಲಗೂಡಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ತಾಲ್ಲೂಕು ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಹಾಸನದ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ಶಂಭುನಾಥ ಸ್ವಾಮೀಜಿ ಅವರ ಸಲಹೆ ಮಾರ್ಗದರ್ಶನ ಪಡೆಯಲು, ಬಿಜಿಎಸ್ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ಹೊಡೇನೂರು ಅವರ ಸಲಹೆಯಂತೆ, ನಿಯೋಜಿತ ಅಧ್ಯಕ್ಷ ಗಂಗೇಶ್ ಬಸವನಹಳ್ಳಿ, ಶಿವಣ್ಣ ಕೆರೆಕೋಡಿ ಮತ್ತು ಆರ್. ಬಿ.ರಂಗನಾಥ್ ಅವರೊಂದಿಗೆ ಶ್ರೀ ಮಠಕ್ಕೆ ಪ್ರವೇಶಿಸಿದೆವು. ಈ ಪವಿತ್ರವಾದ ಮಠದೊಳಗೆ ನನ್ನ ಮೊದಲ ಪ್ರವೇಶವೂ ಅದೇ ಆಗಿತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಲಬುರ್ಗಿ: ರುಕ್ಮಿಣಿ ನಾಗಣ್ಣವರ

2018 ಫೆಬ್ರುವರಿ. ಕಲಬುರ್ಗಿಗೆ ಬೇಸಿಗೆಯ ಬಿಸಿಲು ಇನ್ನೂ ಆವರಿಸಿರಲಿಲ್ಲ. ಹುಬ್ಬಳ್ಳಿ-ದಾಂಡೇಲಿ ಪ್ರವಾಸ ಮುಗಿಸಿ, ರೈಲಿನಲ್ಲಿ ಬೆಳಿಗ್ಗೇನೆ ಕಲಬುರ್ಗಿಗೆ ಬಂದಿಳಿದ ನನಗೆ ಮೊದಲು ಕಾಣಿಸಿದ್ದೇ ಪುಟಾಣಿ ಚಹಾ ಅಂಗಡಿಗಳ ಸಾಲು. ಒಂದು ಅಂಗಡಿಯ ಹೆಸರು ಕರ್ನಾಟಕ ಟೀ ಸ್ಟಾಲ್, ಮತ್ತೊಂದರದ್ದು ಗಾಣಗಾಪುರ ಟೀ ಸ್ಟಾಲ್. ಮೊದಲ ಬಾರಿಗೆ ಕಲ್ಯಾಣ ನಾಡಿನ ನೆಲ ಸ್ಪರ್ಶಿಸಿದ ನನಗೆ ಬಿಸಿ ಬಿಸಿ ಚಹಾ ಕುಡಿದೇ ಮನೆಯತ್ತ ಹೆಜ್ಜೆ ಹಾಕಲು ಮನಸ್ಸು ಹೇಳಿತು. ಆದರೆ, ಮನೆ ತಲುಪಿದರೆ ಸಾಕು ಎಂಬಂತೆ ದಣಿವು ನನ್ನನ್ನು ಆಯಾಸಗೊಳಿಸಿತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾ ಬದಲಾಗೊ ಗಿರಾಕಿ ಅಲ್ಲಾ….: ಸಹನಾ ಪ್ರಸಾದ್

ಬಹುತೇಕ ಹೆಣ್ಣು ಮಕ್ಕಳಿಗೆ. ನಾನೂ ಸೇರಿದಂತೆ ಭಾವನೆಗಳು ಜಾಸ್ತಿ, ಬಹಳ ಬೇಗ ಬೇರೆಯವರಿಗೆ ಹತ್ತಿರವಾಗಿಬಿಡುತ್ತಾರೆ, ಅದೇ ರೀತಿ ಮುನಿಸು, ವಿರಸವೂ ಬೇಗ ಬಂದುಬಿಡುತ್ತದೆ,. ನಮ್ಮೆಜಮಾನ್ರು ನನಗೆ ಯಾವಾಗಲೂ ಹೇಳುತ್ತಿರುತ್ತಾರೆ” ನಿಂದೆಲ್ಲಾ ಯಾವಾಗಲೂ ಅತಿರೇಕದ ಪ್ರತಿಕ್ರಿಯೆಗಳು. ಹಚ್ಚಿಕೊಂಡರೆ ಅತಿಯಾಗಿ, ಅದೇ ಏನಾದರೂ ಸಣ್ಣ ವಿಷಯ ನಡೆಯಲಿ, ಕುಗ್ಗಿ ಹೋಗುತ್ತೀಯ. ಸ್ವಲ್ಪ ಸಮತೋಲನ ಇರಬೇಕು ಅಲ್ಲವಾ?” ಆಗೆಲ್ಲಾ ನನಗೆನಿಸುತ್ತದೆ ಹೌದಲ್ವಾ, ನಾನು ಸ್ವಲ್ಪ ಬದಲಾಗಬೇಕು ಎಂದು. ಆದರೆ ಆ ನಿರ್ಧಾರಗಳೆಲ್ಲ ತಾತ್ಕಾಲಿಕ. ಮೊನ್ನೆ ನಮ್ಮ ಪಕ್ಕದ ಮನೆಗೆ ನವ ದಂಪತಿಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆರೆ ಹೊರೆಯ ಸಂಬಂಧದ ಸವಿನೆನಪು: ಎನ್. ಶೈಲಜಾ ಹಾಸನ

ಅಕ್ಕಪಕ್ಕದ ಮನೆಯವರೊಂದಿಗೆ ಅಂದಿನ ದಿನಗಳಲ್ಲಿ ಅಪಾರವಾದ ಬಾಂಧವ್ಯವನ್ನು ಹೊಂದಿದ್ದು,ಕಷ್ಟ ಸುಖ ಎಲ್ಲಾದರಲ್ಲೂ ಪರಸ್ಪರ ಭಾಗಿಯಾಗಿ ಸ್ಪಂದಿಸುವ ಹೃದಯಗಳನ್ನು ಅಂದು ಹೆಚ್ಚು ಹೆಚ್ಚು ಕಾಣಬಹುದಿತ್ತು.ನಾವು ನಮ್ಮ ತಂದೆಯ ಉದ್ಯೋಗ ನಿಮಿತ್ತ ಎಲ್ಲಾ ಊರುಗಳನ್ನು ಸುತ್ತಿ ಕೊನೆಗೆ ಜಿಲ್ಲಾ ಕೇಂದ್ರಕ್ಕೆ ಬಂದು ನೆಲೆ ನಿಂತೆವು. ನಾವಿದ್ದ ಮನೆ ಒಂದು ವಠಾರದಲ್ಲಿ ಇತ್ತು.ಎಂಟು ಮನೆಗಳಿರುವ ಆ ವಠಾರದಲ್ಲಿ ಇಬ್ಬರು ಒಂದೊಂದು ಸಾಲಿನ ನಾಲ್ಕು ಮನೆಗಳ ಒಡೆಯರಾಗಿದ್ದರು. ವಠಾರವಾದರೂ ಮನೆ ದೊಡ್ಡದಿತ್ತು. ಹತ್ತು ಹದಿನೈದು ಜನ ವಾಸ ಮಾಡಬಹುದಾಗಿತ್ತು.ಒಂದು ರೂಮು,ಎರಡು ದೊಡ್ಡ ಹಾಲು,ಮಹಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಗಗನಸಖಿ: ಸೂರಿ ಹಾರ್ದಳ್ಳಿ

ಸಂದರ್ಶಕರು ಮಾದೇವಿಯನ್ನು ಕೇಳಿದರು: ‘ನೀವು ಎಂದಿಗಾದರೂ ವಿಮಾನದಲ್ಲಿ ಪ್ರಯಾಣಿಸಿದ್ದೀರಾ?’ ‘ಕ್ವಚಿತ್ತಾಗಿ.’ ‘ವಿಮಾನಗಳಲ್ಲಿ ಏರ್ ಹೋಸ್ಟೆಸ್‍ಗಳು ಪ್ರಯಾಣಿಕರಿಗೆ ಕೆಲವು ಸಲಹೆಗಳನ್ನು ಕೊಡುವುದನ್ನು ನೀವು ಕೇಳಿದ್ದೀರಿ. ಅದನ್ನು ಹೇಳಿ.’ ‘ಗೋ ಔಟ್ ವಿಮಾನದಲ್ಲಿ ಪ್ರಯಾಣಿಸುತ್ತಿರುವ ನಿಮಗೆಲ್ಲಾ ಆದರದ ಸ್ವಾಗತ. ಸ್ವಾಗತ ಎಂದರೆಷ್ಟು ಬಿಟ್ಟರೆಷ್ಟು, ಬಂದು ಅಂಡೂರಿ ಕುಳಿತುಬಿಟ್ಟಿದ್ದಿರಲ್ಲ, ಬೇರೇನೂ ಕ್ಯಾಮೆ ಇರದವರ ಹಾಗೆ.’ ‘ಏನೆಂದಿರಿ?’ ‘ಏನೂ ಇಲ್ಲ. ನಮ್ಮ ವಿಮಾನದಲ್ಲಿ ಮುಂದೆ ಎರಡು ಬಾಗಿಲುಗಳಿವೆ, ಹಿಂದೆ, ತಿರುಗಿಯೇನೂ ನೋಡಬೇಕಾಗಿಲ್ಲ. ಅಲ್ಲೇನೂ ಕರಡಿ ಕುಣಿಯುತ್ತಿಲ್ಲ, ಅಲ್ಲಿ ಎರಡು ನಿರ್ಗಮನ ದ್ವಾರಗಳಿವೆ. ನಡುವೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ