ಅಂತರಾಗ್ನಿ: ಕಿರಣ್. ವ್ಹಿ
ಧೋಧೋ ಎಂದು ಧಾರಾಕಾರವಾಗಿ ಸುರಿಯುತ್ತಿರುವ ಮಳೆ.ನೆಲವೆಲ್ಲ ತೋಯ್ದು ಘಮ್ ಎಂದು ಹೊರಸೂಸುವ ಮಣ್ಣಿನ ಸುವಾಸನೆಗೆ ಎಂತಹವರೆ ಆದರು ಮೈಮರೆಯುವರು. ಅಂತಹ ಸಮಯವದು. ಸಂಜೆಯಾಗಿದ್ದರಿಂದ, ಸೂರ್ಯ ತನ್ನ ಪ್ರತಾಪವನ್ನು ಇಳಿಮುಖಗೊಳಿಸಿ ಮರಳುತ್ತಿದ್ದ. ದೂರದ ಬಾನಂಚಿನಲ್ಲಿ ಮುಳುಗುತ್ತಿದ್ದ ನೇಸರನನ್ನೆ ದಿಟ್ಟಿಸಿ ನೋಡುತ್ತಿದ್ದ ಹರಿ. ಅವನ ಮನಸ್ಸು ಅಲ್ಲಿರಲಿಲ್ಲ. ಕೇವಲ ಶೂನ್ಯವೇ ಆವರಿಸಿತ್ತು ಅವನಲ್ಲಿ. ಇನ್ನೇನು ಜೀವನ ಮುಗಿದೇ ಹೋಯಿತು ಎನ್ನುವಂತೆ ನಿಂತಿದ್ದ. ರಪರಪನೆ ಹೊಡೆಯುವ ಹೊಡೆತವು ಅವನ ಅರಿವಿಗೆ ಬರಲಿಲ್ಲ. “ಥೋ ಇದೇನು ಮಳೆ. ಬೆಳಗ್ಗೆಯಲ್ಲ ನೆತ್ತಿ ಸುಡುವಂತೆ ಬಿಸಿಲಿರತ್ತೆ. … Read more