ಜೀವದ ಪ್ರಾಮುಖ್ಯತೆ: ಗಿರಿಜಾ ಜ್ಞಾನಸುಂದರ್

ಅಹ್! ದೇಹ ಹಗುರವಾಗುತ್ತಿರುವ ಅನುಭವ! ಏನಾಯಿತು ಅಷ್ಟೊಂದು ನೋವಾಗುತ್ತಿದ್ದ ದೇಹಕ್ಕೆ? ಪ್ರಸಾದ್ ಯೋಚಿಸುತಿದ್ದಂತೆ ತಿಳಿಯಿತು ಅವನ ಆತ್ಮ ದೇಹದಿಂದ ಹೊರಗೆ ಬಂದಿದೆ!! ಹಾಗಾಗಿ ನೋವು ಮರೆಯಾಗಿದೆ…. ತಾನು ಮನನೊಂದು ಆತ್ಮಹತ್ಯೆ ಮಾಡಿಕೊಂಡದ್ದು ನೆನಪಿಗೆ ಬಂತು….. ಕಷ್ಟಪಟ್ಟು ಓದಿ ಶಾಲೆಯಲ್ಲಿ ಮೊದಲನೆಯವನಾಗಿದ್ದ ಪ್ರಸಾದ್. ಎಲ್ಲದರಲ್ಲೂ ಮೊದಲು. ಆಟ ಪಾಠ, ವಿದ್ಯೆ, ಪರಿಶ್ರಮ, ಸಹನೆ, ಸ್ನೇಹ ಎಲ್ಲದರಲ್ಲೂ. ಅತ್ಯಂತ ಶ್ರದ್ಧೆಯಿಂದ ಓದಿ ಡಾಕ್ಟರ್ ಆಗಿದ್ದು ಆಯಿತು. ಉತ್ತಮ ರಾಂಕ್ ಗಳಿಸಿದ್ದಕ್ಕಾಗಿ ಸರ್ಕಾರಿ ಉದ್ಯೋಗವು ಆಯಿತು. ಡಾಕ್ಟರ್ ಆಗಿ ತನ್ನ ಕರ್ತವ್ಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬದಲಾಗುವ ಬಣ್ಣಗಳು (ಕೊನೆಯ ಭಾಗ): ಅಶ್ಫಾಕ್ ಪೀರಜಾದೆ

ಇಲ್ಲಿಯವರೆಗೆ -7 – ಪ್ರತೀಕ ಮೊದಲು ಬಂದವನೇ ಚೇತನನ್ನು ಭೇಟಿಯಾದ. ಚೇತನ ತನ್ನ ಹೆಂಡ್ತಿ ಮಕ್ಕಳನ್ನು ತೋರಿಸಿ ತಾನೀಗ ಸಂಸಾರ ಸಮೇತ ಹಾಯಾಗಿರುವುದಾಗಿ ಹೇಳಿದ “ಅವಳ ಸಂಗ ಬಿಟ್ಟು ಬಿಟ್ಟಿದ್ದೇನೆ. ಆದರೂ ಒಮ್ಮೊಮ್ಮೆ ಅವಳು ನೆನಪಾಗಿ ಕಾಡುತ್ತಾಳೆ ಒಂದೆರಡು ಪೆಗ್ಗು ಹಾಕಿ ಮಲಗಿ ಬಿಡುತ್ತೇನೆ” ಎಂದು ಹೇಳಿದಾಗ ಪ್ರತೀಕನಿಗೆ ಆಶ್ಚರ್ಯವಾಗುತ್ತದೆ. “ಗಂಡ ಹೆಂಡತಿಗಿಂತ ಹೆಚ್ಚಾಗಿ ಇದ್ದವರು ನೀವು… ಇಬ್ಬರೂ ಇಷ್ಟು ಸುಲಭವಾಗಿ ಹೇಗೆ ಅಗಲಿದಿರಿ..?” ಎಂದು ಪ್ರತೀಕ ಪ್ರಶ್ನೆಸಿದಾಗ ಏನು ಮಾಡಲಿ ಅನಿವಾರ್ಯವಾಯಿತು. ಈ ಮದುವೆ ಸಂಬಂಧ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಾಮಾಣಿಕತೆ ಎಂಬ ಪ್ರತಿಬಿಂಬ: ಎಂ.ಎಚ್. ಮೊಕಾಶಿ ವಿಜಯಪುರ

ಯಾವುದೇ ಸಂಸ್ಕೃತಿಯಾದರೂ ಕೆಲವು ಮೌಲ್ಯಗಳನ್ನು ಹೊಂದಿರುತ್ತದೆ. ಅದರಲ್ಲಿ ಪ್ರಾಮಾಣಿಕತೆ ಎಂಬುದು ಮಹಾಮೌಲ್ಯವಾಗಿದೆ ಎಂದು ಜಗತ್ತಿನ ಎಲ್ಲ ಸಂಸ್ಕೃತಿಗಳ ನಂಬಿಕೆ. ಪ್ರಾಮಾಣಿಕತೆ ಎನ್ನುವುದು ವ್ಯಕ್ತಿಯ ನಡತೆಯ ಅಂಶವನ್ನು ಸೂಚಿಸುವುದಾಗಿದೆ. ಪ್ರಾಮಾಣಿಕತೆಯಲ್ಲಿ ನಿಷ್ಠೆ, ನಿಷ್ಪಕ್ಷಪಾತ, ವಿಶ್ವಾಸರ್ಹ ಮೊದಲಾದ ಗುಣಗಳು ಸೇರಿವೆ. ಇಂದಿಗೂ ನಮ್ಮಲ್ಲಿ ಸತ್ಯ, ನಿಷ್ಟೆ, ಪ್ರಾಮಾಣಿಕತೆಯಂತಹ ಹಲವಾರು ಸದ್ಗುಣಗಳಿವೆ. ಆದರೆ ಅದನ್ನು ಗುರುತಿಸುವ ಒಳಗಣ್ಣು ಬೇಕಾಗಿದೆ. “ನಾನು ಸರಿ, ಉಳಿದವರು ಸರಿಯಿಲ್ಲ” ಎಂಬ ಭಾವನೆಗಳು ಪ್ರಸ್ತುತ ಹೆಚ್ಚಾಗುತ್ತಿವೆ. ನಾವು ಸತ್ಯ ನಿಷ್ಟರೇ? ಎಂಬುದನ್ನು ಮೊದಲು ಪರಾಮರ್ಶಿಸಿಕೊಳ್ಳಬೇಕು. ಪ್ರಾಮಾಣಿಕತೆಯ ಬಗ್ಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಈ ನೆಲಮೂಲದ ಅನುಭವ ಮತ್ತು ಅಧ್ಯಯನದ ಘಮಲು “ಹಾಣಾದಿ: ಕೆ.ಎಂ.ವಿಶ್ವನಾಥ ಮರತೂರ.

“ಈ ಬಿಸಿಲಂದ್ರೆ ಅಪ್ಪ ಇದ್ದಂಗೆ, ಮುಂಜಾನೆ ಎಳೆ ಮಗುವಿನಂತೆ, ಮಧ್ಯಾನ ಉರಿ ಬಿಸಿಲಿನಂತೆ ಸಿಡುಕಿನ ಮನುಷ್ಯ, ರಾತ್ರಿ ಬಿಸಿಲು ಬಿಟ್ಟು ಹೋದ ಅವಶೇಷದಂತಿರುತ್ತಿದ್ದ. ಬಿಸಿಲಿನಷ್ಟೆ ಸದ್ದಿಲ್ಲದೆ ಕುದಿಯುತ್ತಿರುವ ಮನುಷ್ಯ” “ನೀರು ಹರಿದು ನುಣುಪಾದ ಜಾರು ಕಲ್ಲುಗಳು. ಉಸುಕು ಮಣ್ಣು ಬೆರೆತು ನೆಲದಲ್ಲಿ ನೀರು ನಿಂತ ಅಗಲವಾದ ಜಾಗ. ಮಧ್ಯೆ ಮಧ್ಯೆ ವಿಚಿತ್ರ ಕೀಟಗಳ ಹಾರಾಟ” ಈ ಮೇಲಿನ ಸಾಲುಗಳು ನಾನು ಇತ್ತೀಚಗೆ ಓದಿರುವ ಕಪಿಲ ಪಿ ಹುಮನಾಬಾದೆ ಎನ್ನುವ ಪ್ರೀತಿಯ ಹರೆಯದ ಹುಡುಗನ “ಹಾಣಾದಿ” ಕಾದಂಬರಿಯ ಸಾಲುಗಳು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪರಿವರ್ತನೆಗೊಂದು ಅವಕಾಶಕೊಟ್ಟಾಗ: ಎಂ. ಡಿ. ಚಂದ್ರೇಗೌಡ ನಾರಮ್ನಳ್ಳಿ

ಬದುಕನ್ನು ರೂಪಿಸಿಕೊಳ್ಳಲು ಒಂದು ಕೆಲಸ ಬೇಕು. ಕೆಲವರು ವೈಟ್ ಕಾಲರ್ ವೃತ್ತಿಯನ್ನೆ ಹುಡುಕುತ್ತಾರೆ. ಕೆಲವರು ಕಮಾಯಿ ಅಧಿಕವಿರುವುದನ್ನು ಅಪೇಕ್ಷಿಸುತ್ತಾರೆ. ಮತ್ತೆ ಕೆಲವರು ಆದರ್ಶಗಳ ಬೆನ್ನು ಹತ್ತುತ್ತಾರೆ. ದೇಶ ಪ್ರೇಮದ ತುಡಿತವುಳ್ಳವರು ಸೈನಿಕರಾಗುತ್ತಾರೆ. ಅರ್ಪಣಾ ಮನೋಭಾವ ಇರುವವರು ಶಿಕ್ಷಕರಾಗುತ್ತಾರೆ. ಕೆಲವು ವಿದ್ಯಾರ್ಥಿಗಳು ‘ತಮ್ಮ ಗುರುಗಳನ್ನು ಅನುಕರಿಸಿ ಶಿಕ್ಷಕರಾಗಬೇಕೆಂದು’ ಹೊರಡುತ್ತಾರೆ . ಕೆಲವರು ಸ್ವ- ಉದ್ಯೋಗದ ದಾರಿ ಹಿಡಿದು ಬದುಕು ಕಟ್ಟಿಕೊಳ್ಳುತ್ತಾರೆ. ಎಷ್ಟೋ ದಿನಗಳ ನಂತರ, ಎದುರು ಸಿಕ್ಕಾಗಲೋ, ಪೋನ್ ಕರೆ ಮಾಡಿದಾಗಲೋ, ನೆನಪುಗಳಿಗೆ ಮತ್ತಷ್ಟು ಹಸಿರು ಬಣ್ಣ ಬಳಿಯುತ್ತಾರೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೆಳತ: ಕಿರಣ್. ವ್ಹಿ, ಧಾರವಾಡ

ಸುಧಾಕರ ಹಾಗು ಸ್ವಾತಿ ರಾತ್ರೋರಾತ್ರಿ ಊರು ಬಿಟ್ಟು ಹೊರಟು ಹೋದರು. ಇಬ್ಬರದು ಮೂರು ವರ್ಷಗಳ ಪ್ರೇಮ್ ಕಹಾನಿ ಆಗಿದ್ದರಿಂದ ಸೆಳತ ಹೆಚ್ಚಿಗೆಯೆ ಇತ್ತು. ಸುಧಾಕರ, ಆಟೊ ಓಡಿಸಿಕೊಂಡು ನಾಲ್ಕು ಕಾಸು ಸಂಪಾದನೆ ಮಾಡುತಿದ್ದ. ಅದ್ಹೇಗೊ ಇಬ್ಬರ ನಡುವೆ ಪ್ರೇಮಾಂಕುರವಾಗಿಬಿಟ್ಟಿತ್ತು. ಸುಧಾಕರನ ತಾಯಿ ಜಲಜಮ್ಮನಿಗೆ, ಗಂಡ ತೀರಿ ಹೋದಾಗಿನಿಂದ ಕೆಲಸ ಮಾಡಬೇಕಾದ ಅನಿವಾರ್ಯತೆ ಬಂದಿತ್ತು. ಬಡತನವೊ, ಅಥವ ಮನೆಯ ಯಜಮಾನನಿಲ್ಲವೆಂಬ ಕಾರಣಕೋ, ಸುಧಾಕರನಿಗೆ ವಿದ್ಯೆ ಅಷ್ಟೊಂದು ತಲೆಗೆ ಹೋಗಲಿಲ್ಲ. ಕಾಲಕಳದಂತೆ ಓದಬೇಕೆಂಬ ಹಂಬಲವು ಕಡಿಮೆಯಾಯಿತು. ತಾಯಿಗೆ ವಯಸ್ಸಾಗುತ್ತಿದೆ ಎಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನಸುಗಳು ನನಸಾಗುವುದು ಹೇಗೆ?: ಕೆ ಟಿ ಸೋಮಶೇಖರ ಹೊಳಲ್ಕೆರೆ. 

ಕನಸುಗಳು ಮನುಷ್ಯನನ್ನು ಪ್ರಾಚೀನ ಕಾಲದಿಂದಲೂ ವಿಸ್ಮಯಗೊಳಿಸಿವೆ. ಕನಸೆಂಬುದು ಮಾಯಾಲೋಕ! ನಿಜ ಜೀವನದಲ್ಲಿ ಆಗದಿರುವುದು ಕನಸಿನಲ್ಲಿ ಸಾಧ್ಯವಾಗಬಹು. ಮಲಗಿದ್ದಾಗ ಅರೆ ಎಚ್ಚರದ ಸ್ಥಿತಿಯಲ್ಲಿ ಬೀಳುವಂಥವು ‘ ಕನಸು ‘ . ಕನಸು ಎಂದರೆ ಮಿಥ್ಯ! ಅವು ನನಸು ಆಗಬಹುದು ಆಗದೇ ಇರಬಹುದು. ಬಹುತೇಕ ಆಗಲಾರವು! ರಾತ್ರಿ ಅರೆ ಎಚ್ಚರದ ಸ್ಥಿತಿಯಲ್ಲಿ ಬಿದ್ದು ಎಚ್ಚರವಾಗುತ್ತಿದ್ದಂತೆ ಮಾಯವಾಗುವಂಥವು ಎಷ್ಟರಮಟ್ಟಿಗೆ ನನಸಾಗಿಯಾವು? ಬೆಳಗಿನಜಾವದಲ್ಲಿ ಬಿದ್ದ ಕನಸುಗಳು ನನಸಾಗುತ್ತವಂತೆ ಅಂತ ಯಾರು ಹೇಳಿದರೋ ಏನೋ ಆ ನಂಬಿಕೆಯಿದೆ! ಮನಸ್ಸಿಗೆ‌ ಸಂತೋಷ ನೀಡುವ ಸಕಾರಾತ್ಮಕವಾದ ಕನಸಿರುವಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

**ಮಾರಿಬಲೆಯಾ ** ಬಲೆಯೆತ್ತಿ ಹೊರಟಿಹರು ಬೆಸ್ತರು ಸಡಗರದಿ ಜಡಿಮಳೇಲಿ ಕಡಲ ತಡಿಗೆ I ಇಂದು ಸಿಕ್ಕಾವೋ? ಭೂತಾಯಿ ಕೊಡವಾಯಿ ಕಂಡಿಕಿ ಜಾರಿ ನನ್ನ ಬಲಿಗೆ I ಬಂದಿಹುದು ಮಳೆಗಾಲ ಬೀಸುವುದೇ ಬಲೆ ಈಗ! ಸಿಕ್ಕೇ ಸಿಕ್ಕಾವು ಎಸುಡಿ ಸಿಗಡಿ I ಮರವಂತೆ ಕಡೆಹೋಪ ಬರುವುದು ಬಾರಿ ಬೆಲೆ ಸಿಕ್ಕರೆ ಭೂತಾಯಿ ಕಂಡಿಕಿ I ಬೋರ್ಗರೆವ ಕಡಲೆಡೆಗೆ ಬಂದಾನೋ ಮೊಗವೀರ ಬೀಸಿದಾ *ಮಾರಿ**ಬಲೆಯಾ I ನನ್ನಯ ಮನೆಯಿಂದ ದೂರಾದ ಮೈಲುವರೆಗೂ ಇಂದು ನನ್ನದೇ ಬಲೆಯೂ I ಬಲೆ ಬಿಡುವುದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

”ಸಲೂನೆಂಬ ಶೋಕಿಯ ಸುಖಗಳು”: ಪ್ರಸಾದ್‌ ಕೆ.

”ಮುನ್ನೂರು ರೂಪಾಯಿ ಸಾರ್…”, ಅಂದಿದ್ದೆ ನಾನು. ಪರಿಚಿತ ಹಿರಿಯರೊಬ್ಬರು ನನ್ನ ಈ ಮಾತನ್ನು ಕೇಳಿ ನಿಜಕ್ಕೂ ಹೌಹಾರಿಬಿಟ್ಟಿದ್ದರು. ಅಂದು ನಾವು ಮಾತನಾಡುತ್ತಿದ್ದಿದ್ದು ಕ್ಷೌರದ ಬಗ್ಗೆ. ಊರಿನಲ್ಲಿ ನಲವತ್ತು-ಐವತ್ತು ರೂಪಾಯಿಗಳಿಗೆ ಮುಗಿದುಹೋಗುತ್ತಿದ್ದ ಹೇರ್ ಕಟ್ಟಿಂಗಿಗೆ ಅಷ್ಟೊಂದು ಹಣ ಸುರಿಯುವಂಥದ್ದೇನಿದೆ ಎನ್ನುವ ಅಚ್ಚರಿ ಅವರದ್ದು. ‘ಇವೆಲ್ಲ ಬೇಕಾ ನಿಂಗೆ’ ಎಂದು ಕಣ್ಣಲ್ಲೇ ನುಂಗುವಂತೆ ನನ್ನನ್ನು ನೋಡಿದರು. ಎಲ್ಲರಿಗೂ ಈಗ ಶೋಕಿಯೇ ಬದುಕಾಗಿಬಿಟ್ಟಿದೆ ಎಂದು ಬೈದೂಬಿಟ್ಟರು. ಬೈದಿದ್ದು ನನಗೋ ಅಥವಾ ಕ್ಷೌರ ಮಾಡಿಸಿದವನಿಗೋ ಗೊತ್ತಾಗಲಿಲ್ಲ. ಆದರೆ ಭೌತಿಕವಾಗಿ ನಾನೇ ಅಲ್ಲಿ ಇದ್ದಿದ್ದರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಧರ್ಮಸಂಕಟ: ಗಿರೀಶ ಜಕಾಪುರೆ

ಹಿಂದಿ ಮೂಲ – ಪ್ರೇಮಚಂದ ಕನ್ನಡಕ್ಕೆ – ಗಿರೀಶ ಜಕಾಪುರೆ 1. ‘ಪುರುಷರಲ್ಲಿ ಸ್ತ್ರೀಯರಲ್ಲಿ ಬಹಳ ವ್ಯತ್ಯಾಸವಿರುತ್ತದೆ. ನಿಮ್ಮ ಮನಸ್ಸು ಕನ್ನಡಿಯಂತೆ ಕಠಿಣವಾಗಿರುತ್ತದೆ, ಮತ್ತೆ ನಮ್ಮದು ಹೂವಿನಂತೆ ಮೃದು. ಹೂಗಳು ವಿರಹದ ಶಾಖ ತಾಳಲಾರವು’ ‘ಹರಳು ತಾಗಿದರೂ ಸಾಕು ಕನ್ನಡಿ ಚೂರಾಗುತ್ತದೆ. ಮೃದು ವಸ್ತುಗಳಲ್ಲಿ ಲೌಚಿಕತೆ ಇರುತ್ತದೆ’ ‘ಬಿಡು, ಮಾತಲ್ಲಿ ಮರಳು ಮಾಡಬೇಡ. ದಿನವಿಡೀ ನೀ ಬರುವ ದಾರಿ ನೋಡುತ್ತೇನೆ, ರಾತ್ರಿಯಿಡಿ ಗಡಿಯಾರದ ಮುಳ್ಳುಗಳನ್ನು. ಇಷ್ಟಾದ ಮೇಲೆ ಹೇಗೋ ಕಷ್ಟಪಟ್ಟು ನಿನ್ನ ದರ್ಶನವಾಗುತ್ತದೆ’ ‘ನಾನು ಸದಾಕಾಲ ನಿನ್ನನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

”ಸಂಬಂಧಗಳು ನಮಗೆಷ್ಟು ಮುಖ್ಯ?”: ಪೂಜ ಗುಜಾರನ್‌

ಸಂಬಂಧಗಳು ನಮಗೆಷ್ಟು ಮುಖ್ಯ? ಯಾವ ಸಂಬಂಧಗಳು ನಮ್ಮನ್ನು ತುಂಬಾ ಭಾವನಾತ್ಮಕವಾಗಿ ಕಾಡುತ್ತದೆ.? ಯಾವ ಸಂಬಂಧಗಳನ್ನು ನಾವು ಯಾವತ್ತು ಬಿಟ್ಟು ಹೋಗುವುದಿಲ್ಲ.?ಯಾರು ನಮ್ಮನ್ನು ಅತಿಯಾಗಿ ಕಾಡುತ್ತಾರೆ.? ಇಲ್ಲಿ ಸಂಬಂಧಗಳನ್ನು ಬೆಳೆಸಲು ಯಾವ ಮಾನದಂಡಗಳ ಅಗತ್ಯವಿದೆ.? ಪ್ರಶ್ನೆಗಳು ಮುಗಿಯಲಾರದಷ್ಟಿವೆ.. ಉತ್ತರಗಳನ್ನು ನಾವು ಹುಡುಕಬೇಕಷ್ಟೆ.. ನಮ್ಮ ಬದುಕಿನಲ್ಲಿ ಬರುವ ಸಂಬಂಧಗಳು ಅರಿತೋ ಅರಿಯದೆನೋ ನಮ್ಮನ್ನು ಗಾಢವಾಗಿ ತನ್ನ ಬಾಹುಗಳಲ್ಲಿ ಬಂಧಿಸಿರುತ್ತದೆ. ಮಾನವ ಸಂಬಂಧಗಳೆ ಹೀಗೆ ಹುಟ್ಟಿದ ಕೂಡಲೇ ಸಂಬಂಧಗಳ ಸಂಕೋಲೆಯೊಳಗೆ ಬಂಧಿಯಾಗಿರುತ್ತಾನೆ. ತನ್ನ ತಾಯಿ ಜೊತೆ ಶುರುವಾದ ಈ ಸಂಬಂಧ ಇನ್ನಷ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬದಲಾಗುವ ಬಣ್ಣಗಳು (ಭಾಗ 3): ಅಶ್ಫಾಕ್ ಪೀರಜಾದೆ

ಇಲ್ಲಿಯವರೆಗೆ – 5 – ಚೇತನ ವಿವಾಹದ ನಂತರ ಇನ್ನಷ್ಟು ವಿಚಲಿತನಾದ. ಇನ್ನಷ್ಟು ದ್ವಂದ್ವಕ್ಕೆ ಒಳಗಾದ ಮಾನಸಿಕವಾಗಿ ಕಾವೇರಿಯೊಂದಿಗೆ ಹೊಂದಾಣಿಕೆ ಸಾಧ್ಯವಾಗುತ್ತಿರಲಿಲ್ಲ. ಪವಿತ್ರೆಯ ನೆನಪು ಅವನೆದೆಯಲ್ಲಿ ಬಿರುಗಾಳಿಯಾಗಿ ಬೀಸಿದಾಗ ಈತ ತರಗೆಲೆಯಂತಾಗಿ ಬಿಡುತ್ತಿದ್ದ. ತತ್ತರಿಸಿ ಹೋಗುತ್ತಿದ್ದ. ಮನದ ಯಾತನೆಯ ತೀವ್ರತೆ ಕಡಿಮೆಗೊಳಿಸಲು ಮತ್ತೇ ಮತ್ತೇ ಅವನು ಕುಡಿತಕ್ಕೆ ಶರಣಾಗುತ್ತಿದ್ದ. ಅದೇ ಅಮಲಿನಲ್ಲಿ ಎಲ್ಲ ಮನಸಿನ ಎಲ್ಲ ತಡೆಗೊಡೆಗಳು ದಾಟಿ ಮತ್ತೆ ಪವಿತ್ರೆಯ ಮನೆಯ ದಾರಿ ಹಿಡಿಯುತ್ತಿದ್ದ. ಪವಿತ್ರಳ ಮನೆ ಇವನಿಗೆ ಮಾನಸಿಕ ನೆಮ್ಮದಿಯ ಕೇಂದ್ರವಾಗಿತ್ತು. ಈತನ ಮದ್ವೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಲಪಿಯ ಹೌಸ್ ಬೋಟ್ ಎಂಬ ಸ್ವರ್ಗದತುಣುಕು!: ಭಾರ್ಗವ ಎಚ್ ಕೆ

ಸಮುದ್ರದದಂಡೆಗೆ ಬೌಂಡರಿ ಗೆರೆಗಳಂತೆ ಕಾಣುವ ಕಬ್ಬಿಣದ ರೈಲು ಹಳಿಗಳು!. ಅದರ ಮೇಲೆ ಎಡೆಬಿಡದೆ ಅತ್ತಿಂದಿತ್ತ ಓಡಾಡುವ ಕೊಂಕಣ ರೈಲುಗಳು. ಆ ಹಳಿಯ ದಾರಿಯಲ್ಲೊಂದು ಅಲಪಿ ಎಂಬ ಕುಟ್ಟ ನಾಡು!. ರೈಲಿನಲ್ಲಿ ಪಯಣಿಸುವಾಗ ಒಂದು ದಿಕ್ಕಿನಲ್ಲಿ ಮೀನು ಹಿಡಿಯುವ ಬೋಟ್ ಗಳು ಕಣ್ಣಿಗೆ ಕಂಡರೆ, ಇನ್ನೊಂದು ದಿಕ್ಕಿನಲ್ಲಿ ವೈಭವದ ಹವಾನಿಯಂತ್ರಿತ ನಯನ ಮನೋಹರ ಹೌಸ್ ಬೋಟ್ ಗಳ ಇರುವೆ ಸಾಲು! ಹೆಂಡತಿ, ಮಗಳೊಂದಿಗೆ ಕುಟುಂಬ ಸಮೇತ ದೇವರ ನಾಡಿನ ಪ್ರಸಿದ್ಧ ಹೌಸ್ ಬೋಟ್ ಪ್ರವಾಸಿ ತಾಣವಾದ ಅಲಪಿ ಊರಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆನಪುಗಳ ಮಾಲೀಕ………: ರಘು ಕ.ಲ.,

ಶಿಕ್ಷಣ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲಿ ಪಡೆದರೆ ಬಹಳ ಉತ್ತಮ ಎಂಬುದು ಅನೇಕರ ಅಭಿಪ್ರಾಯ. ಏಕೆಂದರೆ ವಿಜ್ಞಾನ, ತಂತ್ರಜ್ಞಾನ, ಸೃಜನಶೀಲತೆ, ನೃತ್ಯ, ಸಂಗೀತ …… ಹೀಗೆ ಇನ್ನೂ ಹತ್ತಾರು ವಿಚಾರಗಳಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಬಹಳ ಹತ್ತಿರವಾದದ್ದು, ಅನುಕೂಲವಾದದ್ದು ನಗರ ಪ್ರದೇಶ ಎಂಬ ಹಂಬಲದಲ್ಲಿಯೋ, ಬೆಂಬಲದಲ್ಲಿಯೋ ಏನೋ ಗ್ರಾಮೀಣ ಪ್ರದೇಶದ ಕೆಲವರು ನಗರದೆಡೆಗೆ ಮೊರೆ ಹೋಗುತ್ತಿದ್ದಾರೆ. ಎಲ್ಲವೂ ಸಿಗುತ್ತದೆಂಬುದು ಅವರ ಕಲ್ಪನೆಯಷ್ಟೇ ಸರಿ. ಸರಿಯೋ? ತಪ್ಪೋ? ಎಂದು ನಿರ್ದಿಷ್ಟವಾಗಿ ಹೇಳಲಾಗುವುದಿಲ್ಲ. ಅವರವರ ಮನಸ್ಸಿನಂತೆ ಅವರವರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಠಡಿ ಮೇಲ್ವಿಚಾರಣೆ ಎಂಬ ಗುಮ್ಮ…!: ಶೀಲಾ. ಗೌಡರ. ಬದಾಮಿ.

ಶೈಕ್ಷಣಿಕ ವರ್ಷ ಪ್ರಾರಂಭವಾದೊಡನೆ ಮೊದಲ ಸಭೆಯಲ್ಲೇ ಮುಖ್ಯಸ್ಥರು,”ಕಳೆದ ವರ್ಷ ಆದದ್ದಾಯ್ತು. ಈ ವರ್ಷ ಮಾತ್ರ ನಾವು 100/ ರಿಸಲ್ಟ ಮಾಡಬೇಕು.ಅದಕ್ಕಾಗಿ ಪರೀಕ್ಷೆ ಬಂದಾಗ ಗಡಿಬಿಡಿ ಮಾಡುವುದಕ್ಕಿಂತ ಈಗಿನಿಂದಲೇ ಗುರಿ ಸಾಧನೆಗೆ ಕಂಕಣಬದ್ದರಾಗಬೇಕು. “ ಎಂದು ಎಚ್ಚರಿಸುತ್ತಾರೆ. ಆಗಿನಿಂದಲೇ ಎಲ್ಲ ಶಿಕ್ಷಕರ, ಉಪನ್ಯಾಸಕರ ಎದೆ ಢವ….ಢವ…..ವಾರ್ಷಿಕ ಅಂದಾಜು,ಕ್ರಿಯಾಯೋಜನೆ ಸಿದ್ದಪಡಿಸಿ, ಡಿಸೆಂಬರ್ ಅಂತ್ಯಕ್ಕೆ ಸಿಲ್ಯಾಬಸ್ ಮುಗಿಸಿ, ಎರಡು ತಿಂಗಳು ರಿವಿಜನ್ ಮಾಡಬೇಕು ಎಂದು ಜೂನ್ ಒಂದರಿಂದಲೇ ಆನ್ ಯುವರ್ ಮಾರ್ಕ, ಗೆಟ್ ಸೆಟ್,ಗೋ……ಎಂದು ನಮ್ಮನ್ನು ರೇಸಿಗೆ ಬಿಟ್ಟು ಬಿಡುತ್ತಾರೆ. ಅದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

20ನೇ ಶತಮಾನ ಕಂಡ ಸಂತ ಶ್ರೇಷ್ಠ- ಈರೋಡು ವೆಂಕಟ ರಾಮಸ್ವಾಮಿ ನಾಯ್ಕರ್: ಶ್ರೀವಲ್ಲಭ ರಾ. ಕುಲಕರ್ಣಿ

ಭಾರತೀಯ ಸಮಾಜದ ರೂಢ ಮೂಲ ನಂಬಿಕೆಗಳ ಮೂಲ ಸ್ವರೂಪವನ್ನು ಪ್ರಶ್ನಿಸಿದ, ಅಲುಗಾಡಿಸಿದ ತೀಕ್ಷ್ಣ ವಿಚಾರವಾದಿ, 20ನೇ ಶತಮಾನದ ಭಾರತೀಯ ಮಹಾನ್ ಚಿಂತಕ ದ್ರಾವಿಡ ನಾಡಿನ ಈರೋಡು ವೆಂಕಟ ರಾಮಸ್ವಾಮಿ ನಾಯ್ಕರ್ 1879 ಸೆಪ್ಟೆಂಬರ್ 17ರಂದು ಮದ್ರಾಸ್ ರಾಜ್ಯದ ಕೊಯಿಮತ್ತೂರ್ ಜಿಲ್ಲೆಯ ಈರೋಡು ಎಂಬಲ್ಲಿ ಹುಟ್ಟಿದರು, ತಮ್ಮ ವಿಚಾರಗಳಿಗೆ ಚಳುವಳಿಯ ಸ್ಪರ್ಶ ನೀಡಿದ ಅವರ ಬದುಕು ಮತ್ತು ಚಿಂತನೆಗಳು ದ್ರಾವಿಡ ಅಸ್ಮಿತೆಯೊಂದನ್ನು ಹುಟ್ಟು ಹಾಕಿ, ತಮಿಳು ನಾಡಿನಲ್ಲಷ್ಟೇ ಅಲ್ಲದೇ ದೇಶ ವಿದೇಶಗಳಲ್ಲಿಯೂ ಪಸರಿಸುವಂತೆ ಮಾಡಿದ್ದು ಇತಿಹಾಸ. ಪೆರಿಯಾರ್ ರಾಮಸ್ವಾಮಿಯವರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಾವುದೇ ಗುಣಾಕಾರ 5 ಸೆಕೆಂಡಿನಲ್ಲಿ ಮಾಡಿ: ಪ್ರವೀಣ್‌ ಕೆ.

https://www.youtube.com/watch?v=Y0frHVjYAEo  ಈ ವಿಡಿಯೋದಲ್ಲಿ ಮನಸ್ಸಿನಲ್ಲಿಯೇ ಹೇಗೆ ಗುಣಾಕಾರಗಳನ್ನು ಮಾಡಬಹುದು ಎಂಬುದನ್ನು ತಿಳಿಸಲಾಗಿದೆ. ಇದನ್ನು ಪ್ರತಿಯೊಂದೂ ಲೆಕ್ಕದಲ್ಲಿ ಉಪಯೋಗಿಸಿದರೆ ನಿಮ್ಮ ಗಣಿತದ ವೇಗ ಹೆಚ್ಚುತ್ತದೆ. ಪ್ರಾಕ್ಟೀಸ್ ಮಾಡಲು ಇಲ್ಲಿ ಒತ್ತಿ : Practice Question 1   ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂತರ ರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರಕಾರ ಮಹೇಶ್: ಎಂ.ಎನ್.ಸುಂದರ ರಾಜ್

ಪ್ರಕೃತಿ ಛಾಯಾಚಿತ್ರಗಳು ಕೇವಲ ಬಣ್ಣಬಣ್ಣದ ಚಿತ್ರಗಳಲ್ಲ, ಪ್ರಕೃತಿಯಲ್ಲಿ ಮೂಡಿಬಂದ ಸುಂದರ ಕಲಾಕೃತಿಗಳು. ಅವುಗಳನ್ನು ಕೆಮರಾದಲ್ಲಿ ಸೆರೆಹಿಡಿದು ಕಣ್ಮನಗಳಿಗೆ ಮುದನೀಡುವಂತೆ ಸಮಾಜಕ್ಕೆ ನೀಡಿರುವುದರ ಹಿಂದೆ, ಅಪಾರ ಪರಿಶ್ರಮ ಮತ್ತು ತನ್ಮಯತೆಯಿದೆ. ಅದೊಂದು ತಪಸ್ಸು. ನಾವು ಆ ಚಿತ್ರಗಳನ್ನು ನೋಡಿ ಚೆನ್ನಾಗಿದೆ ಎಂದು ಒಂದೇ ಮಾತಿನಲ್ಲಿ ಹೇಳುತ್ತೇವೆ. ಆದರೆ ಅಂತಹ ಫೋಟೋ ತೆಗೆಯಲು ಪಟ್ಟ ಪಾಡು, ತಿರುಗಿದ ಕಾಡು ಮೇಡುಗಳು, ಜೀವದ ಹಂಗು ತೊರೆದು ವನ್ಯ ಜೀವಿಗಳ ಅಪಾಯವನ್ನೂ ಲೆಕ್ಕಿಸದೆ ಒಂದು ಉತ್ತಮ ಚಿತ್ರಕ್ಕೆ ದಿನಗಟ್ಟಲೆ ಆಹಾರ ನಿದ್ರೆಯಿಲ್ಲದೆ ಕಾದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೃಷ್ಣಂ ವಂದೇ ಜಗದ್ಗುರುಂ !: ಕೆ ಟಿ ಸೋಮಶೇಖರ ಹೊಳಲ್ಕೆರೆ

ರಾಮಾಯಣ ಮಹಾಭಾರತಗಳು ಭಾರತ ದೇಶದ ಮಹಾಕಾವ್ಯಗಳು, ಹಾಗೇ ಅವು ಇತಿಹಾಸ ಅಂತನೂ ಸಾಕ್ಷಸಮೇತ ಇತಿಹಾಸಕಾರರು ಹೇಳುತ್ತಿದ್ದಾರೆ. ‘ಮಹಾಭಾರತ’ ಪ್ರಪಂಚದಲ್ಲೇ ಅತಿ ದೊಡ್ಡ ಮಹಾಕಾವ್ಯ. ಇದರ ಕತೃ ವ್ಯಾಸ. ಮಹಾಭಾರತದಲ್ಲಿ ಭೀಷ್ಮ ಪರ್ವ ಬಹಳ ಮುಖ್ಯವಾದುದು. ಏಕೆಂದರೆ ಭೀಷ್ಮಪರ್ವದಲ್ಲೇ ಕುರುಕ್ಷೇತ್ರ ಯುದ್ದ ಆರಂಭವಾಗುವ ಕಥನವಿರುವುದು, ಕೃಷ್ಣಾರ್ಜುನರ ಸಂವಾದ ರೂಪದಲ್ಲಿರುವ ಭಗವದ್ಗೀತೆ ಇರುವುದು. ಅರ್ಜುನನ ವಿಷಾದ ಭಾವದಿಂದ ಆರಂಭವಾಗುವ ಭಗವದ್ಗೀತೆ ಶ್ರೀಕೃಷ್ಣ ಅರ್ಜುನನಿಗೆ ಅನುಗ್ರಹಿಸುವ ಪ್ರಸಾದದೊಂದಿಗೆ ಮುಗಿಯುತ್ತದೆ. ವೇದಗಳ ಸಾರ ಉಪನಿಷತ್ತುಗಳು, ಉಪನಿಷತ್ತುಗಳ ಸಾರಸರ್ವಸ್ವ ಭಗವದ್ಗೀತೆ ಅಂತ ಹೇಳುವರು. ಮಹಾಭಾರತದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

೧. *ಒಲವಿನ ಕನಸು * ಕಂಡಿರದ ಮೊಗದ ಮೂರ್ತಿಯನು ಕೆತ್ತಿ… ತನ್ನಿಷ್ಟದ ಭಾವಗಳ ಅದರೆದೆಗೆ ಮೆತ್ತಿ… ಕಣ್ಣಕಾಂತಿಯಲಿ ಸವಿದು ಒಲವ ಸೊಬಗನು… ನೆನಪು-ಕನಸುಗಳ ಜಂಟಿ ಓಲಗದಿ… ಸಾಕ್ಷ್ಯ ಬರೆದಿತ್ತು ಚಂದ್ರಮನ ಕಾಂತಿ… ೨. *ತೆರೆದ ಪುಸ್ತಕದಂತ ಬದುಕು* ತೆರೆದ ಪುಸ್ತಕದಂತ ಬದುಕು ಓದುಗರು ಹಲವರು ಹಲವು ತೆರನವರು ತೆಗಳುವವರು, ಹೊಗಳುವವರು ಓದಿಯು ಓದದಂತಿರುವವರು ಓದದೆಯು ಜರೆಯುವವರು ಓದದೆಯು ಹೊಗಳುವವರು ಎಲ್ಲರ ಬಾಯಿಗೆ ಆಹಾರವಾಗೋ ಬಾಳು ತೆರೆದ ಪುಸ್ತಕದಂತ ಬಾಳು ಎನ್ನ ನೋವುಗಳ ಜ್ವಾಲೆಯಲ್ಲಿ ಚಳಿ ಕಾಯಿಸಿಕೊಂಡವರೆಷ್ಟೋ ಎನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯೂಟ್ಯೂಬ್‌ ನಲ್ಲಿ ಮೊಟ್ಟಮೊದಲ ಬಾರಿಗೆ ಕನ್ನಡ ಮಾಧ್ಯಮದಲ್ಲಿ ಬ್ಯಾಂಕ್ ಪರೀಕ್ಷೆಯ ತರಬೇತಿ

ಆತ್ಮೀಯರೆ, ನನಗೆ ಬಹಳ ಖುಷಿ ಎನಿಸುತ್ತಿದೆ. ಯಾಕೆಂದರೆ ಕನ್ನಡ ಮಾಧ್ಯಮದಲ್ಲಿ ಉಚಿತವಾಗಿ ಬ್ಯಾಂಕ್ ಪರೀಕ್ಷೆ ತರಬೇತಿಯನ್ನು ಯೂಟ್ಯೂಬ್ ಮುಖಾಂತರ ಪ್ರಾರಂಭಿಸಿದ್ದೇನೆ. ನೀವೆಲ್ಲ ಕೈಜೋಡಿಸುವಿರಿ ಎಂದು ನಿರೀಕ್ಷಿಸುತ್ತೇನೆ. ನಾನು ಭಾರತೀಯ ಸ್ಟೇಟ್ ಬ್ಯಾಂಕಿನ ಸೇವೆಗೆ ರಾಜೀನಾಮೆ ನೀಡಿ ಸ್ಪರ್ಧಾಕಾಂಕ್ಷಿಗಳಿಗೆ ಬ್ಯಾಂಕ್ ಪರೀಕ್ಷೆಯ ತರಬೇತಿಯನ್ನು ಪ್ರಾರಂಭಿಸಿದೆ. ಬೆಳಗಾವಿ ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ನಮ್ಮ ಸಂಸ್ಥೆಗೆ ಬಂದು ತರಬೇತಿ ಪಡೆದು ಕೆಲವರು ಯಶಸ್ಸನ್ನೂ ಗಳಿಸಿದರು. ಆದರೆ ನಾನು ಕ್ಲಾಸರೂಮಿನಲ್ಲಿ ಕಲಿಸಲು ಸಾಧ್ಯವಾಗುತ್ತಿರುವುದು ಕೇವಲ ನಲವತ್ತು ಐವತ್ತು ಜನರಿಗೆ ಮಾತ್ರ. ಅವಶ್ಯವಿದ್ದವರಿಗೆಲ್ಲ ನನ್ನಲ್ಲಿರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಡಿದೊಗೆದ ಬಳ್ಳಿಯು ಕುಡಿಯೊಡೆಯುವಂತೆ: ಎಸ್. ಜಿ. ಸೀತಾರಾಮ್, ಮೈಸೂರು

“ತ್ಯಾಜ್ಯ ವಸ್ತು” ವಿಲೇವಾರಿಯ ಬಗ್ಗೆಯೇನೋ ಇಂದು ಎಲ್ಲೆಡೆ ಬಿಸಿಬಿಸಿ ಚರ್ಚೆಗಳಾಗುತ್ತಿವೆ; ಆದರೆ, ತಮ್ಮ ಕುಟುಂಬ, ಬಂಧು-ಬಳಗ, ಸಮುದಾಯ, ಯಾವುದಕ್ಕೂ ಬೇಡವಾದ “ತ್ಯಾಜ್ಯ ವ್ಯಕ್ತಿ”ಗಳ ಸ್ಥಿತಿಗತಿಯ ಬಗ್ಗೆ ‘ಕ್ಯಾರೇ?’ ಎನ್ನುವ ಮಂದಿ ಎಷ್ಟಿದ್ದಾರು? ಹಾಗೆನ್ನುವವರಲ್ಲೂ, ಈ ಪರಿಸ್ಥಿತಿಗೆ ಏನಾದರೊಂದು ಪರಿಹಾರ ಹೊಂದಿಸಬೇಕೆಂದು ನಿಜವಾಗಿ ‘ಕೇರ್’ ಮಾಡುವವರು ಅದೆಷ್ಟು ಇದ್ದಾರು? ಇಂಥ ದಾರುಣ ಅವಸ್ಥೆಯ ನಡುವೆ, ಸಮಾಜದ ಕುಪ್ಪೆಯಲ್ಲಿ ಕಾಲ ತೇಯುತ್ತ, ಬದುಕಾಟದ ಕೊಟ್ಟಕೊನೆಗೆ ಹೇಗೋ ‘ಜೋತುಬಿದ್ದಿರುವ’ ಸ್ತ್ರೀಯರಿಗೆ ಅನ್ನ, ಆರೈಕೆ, ನೆರಳು, ನೆಮ್ಮದಿ ನೀಡುವ ಸಲುವಾಗಿ, ವಿದ್ಯಾವಂತ, ದಯಾಶೀಲ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗುಲಾಮಿ: ಗಿರೀಶ ಜಕಾಪುರೆ

ಮೂಲ : ಖಲೀಲ ಜಿಬ್ರಾನ್ ಕನ್ನಡಕ್ಕೆ : ಗಿರೀಶ ಜಕಾಪುರೆ ಮಾನವರು ಬದುಕಿನ ಗುಲಾಮರು. ಜೀವನದ ಜೀತದಾಳುಗಳು. ಈ ಬದುಕು ಅವರ ಹಗಲುಗಳಲ್ಲಿ ದುಃಖ ಮತ್ತು ಕ್ಲೇಶದ ಬಿರುಗಾಳಿಯಾಗಿ ಬೀಸುತ್ತದೆ, ರಾತ್ರಿಗಳಲ್ಲಿ ಕಣ್ಣೀರು ಮತ್ತು ಸಂತಾಪದ ಮಹಾಪೂರವಾಗಿ ನುಗ್ಗುತ್ತದೆ. ಏಳು ಸಾವಿರ ವರ್ಷಗಳಾದವು ನಾನು ಜನಿಸಿ. ಅಂದಿನಿಂದಲೂ ನಾನು ತಮ್ಮ ಕೈಕಾಲುಗಳಿಗೆ ಸುತ್ತಿದ ಭಾರದ ಬೇಡಿಗಳನ್ನು ಎಳೆಯುತ್ತ ಹೆಜ್ಜೆ ಹಾಕುತ್ತಿರುವ ಬದುಕಿನ ಗುಲಾಮರನ್ನು ಕಾಣುತ್ತಿದ್ದೇನೆ. ನಾನು ಭೂಮಿಯ ಪೂರ್ವಪಶ್ಚಿಮಗಳಲ್ಲಿ ಸುತ್ತಾಡಿದ್ದೇನೆ, ಜೀವನದ ನೆರಳು ಬೆಳಕುಗಳಲ್ಲಿ ದಿಕ್ಕೇಡಿಯಾಗಿ ಅಲೆದಿದ್ದೇನೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬದಲಾಗುವ ಬಣ್ಣಗಳು (ಭಾಗ 2): ಅಶ್ಫಾಕ್ ಪೀರಜಾದೆ

ಇಲ್ಲಿಯವರೆಗೆ  – 3 – ತಿಂಗಳ ಬಳಿಕ ಪ್ರೇಮಾ ಮರಳಿ ಬಂದ ಸುದ್ದಿ ಕತ್ತಲೆ ಕವಿದ ಚೇತನನ ಮನಸ್ಸಿಗೆ ಸುರ್ಯೋದಯವಾಗಿತ್ತು. ತಿಂಗಳಿಂದ ಶೇವ್ ಕಾಣದ ಮುಖದ ತುಂಬ ಗಡ್ಡ ಮೀಸೆ… ಬಾಚನಿಗೆ ಕಾಣದ ತಲೆ… ಕೆದರಿದ ಕೂದಲು… ಮೈಮೇಲೆ ಕೊಳೆಯಾದ ಬಟ್ಟೆಗಳು… ಹಳ್ಳಿ ಹುಂಬನಂತೆ ಹುಚ್ಚನಂತೆ ತೋರುತ್ತಿದ್ದ. ಹಾಗೇ ಸೀದಾ ಪ್ರೇಮಾಳ ಮನೆಯತ್ತ ಹೆಜ್ಜೆ ಹಾಕಿದ್ದ. ಡೋರ ಮುಂದೆ ನಿಂತು ಬೆಲ್ ಮಾಡಿದ ಕೆಲವೇ ಕ್ಷಣಗಳಲ್ಲಿ ಪ್ರೇಮಾಳ ತಂದೆ ಬಾಗಿಲು ತೆರೆದು ಚೇತನನ ಸ್ಥಿತಿ ನೋಡಿ ಸ್ವಲ್ಪ ಗಾಬರಿಯಾದರು. ಏಕೆಂದರೆ ಮೊದಲಿನಿಂದಲೂ ಚೇತನ ಪ್ರೇಮಾಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾನು ಮತ್ತೆ ನಾನಾದದ್ದು….!: ಶೀಲಾ. ಗೌಡರ

ಆಹಾ….! ನಾನೂ ಸಾಮಾನ್ಯ ಗೃಹಿಣಿಯರಂತೆ ಸುಮ್ನೆ ಮನೆ ನಿಭಾಯಿಸಿಕೊಂಡು, ಮನೇಲಿ ಹಾಯಾಗಿ ಇರಬಹುದಿತ್ತು, ಅಂತ ಎಷ್ಟೋಸಲ ಅನಿಸಿದ್ದುಂಟು. ಕೆಲಸ ಬೇಡ ಅಂತ ಬಿಡುವಂತಿಲ್ಲ…! ಸರಕಾರಿ ಕೆಲಸ…! ಮೇಲಾಗಿ ಶಿಕ್ಷಕ ವೃತ್ತಿ…. ಎಷ್ಟೊಂದು ಸುರಕ್ಷಿತ, ನೆಮ್ಮದಿ. ಆದರೆ ಕೆಲವೊಮ್ಮೆ ಮನೆ, ಶಾಲೆ ಎರಡನ್ನೂ ನಿಭಾಯಿಸುವಾಗ ಉಶ್ಯಪ್ಪ ಅಂತ ಬಸವಳಿದು, ಕಾಲಿಗೆ ಗಾಲಿ ಕಟ್ಟಿ ಇಪ್ಪತ್ತು ವರ್ಷಗಳಿಂದಲೂ ಬಸ್ಸಿನ ಹಿಂದೆ ಓಡುವಾಗ, ಏನೋ ಟೆನ್ ಶನ್ ನಲ್ಲಿ ಮನೆಯವರ ಹತ್ರ ಬಯ್ಸಿಕೊಡಾಗ, ಮಕ್ಕಳ ಓದಿನ ಬಗ್ಗೆ-ಊಟದ ಬಗ್ಗೆ-ಆರೋಗ್ಯದ ಬಗ್ಗೆ ಸಮಸ್ಯೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಈ ಕ್ಷಣದಿಂದಲೇ ನೆಪಗಳಿಗೆಲ್ಲ ಗುಡ್ ಬೈ. . . . : ಆಶಾ ಹೆಗಡೆ

ಇನ್ನೂ ನೆನಪಿದೆ ನನ್ನ ಬಗ್ಗೆ ಗೆಳೆಯ ಗೆಳತಿಯರು ಆಡುತ್ತಿದ್ದ ಮಾತುಗಳು. . . ”ಹೇ, ಎಷ್ಟು ಚೆನ್ನಾಗಿ ಕತೆ, ಕವನ ಬರೀತಿಯಾ” “ಓ drawing ಕೂಡ ಮಾಡ್ತಿಯಾ?” “ಅರೆ ಎಷ್ಟು ಚೆನ್ನಾಗಿ ಹಾಡು ಹೇಳತೀಯಾ”, ”ಇವತ್ತಿನ speech ಎಷ್ಟು ಚೆನ್ನಾಗಿತ್ತು”, ”ನೀನ್ ಬಿಡು all rounder “,,, ಇವತ್ತಿಗೆ ಈ ಹೊಗಳಿಕೆ ಬರೀ ಹಿತವಾಗಿ ನೋಯಿಸುವ ನೆನಪುಗಳು ಮಾತ್ರ. ಹವ್ಯಾಸಕ್ಕೆ ಒರೆ ಹಚ್ಚಿ, ಅದ ಪ್ರತಿಭೆಯಾಗಿ ಪರಿವರ್ತಿಸಿ ಎಡಬಿಡದೆ ಅದೇ ದಾರಿಯಲಿ ಮುನ್ನಡೆದು ಏನಾದರೊಂದು ಸಾದಿಸಿದ್ದು ಮಾತ್ರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದು ಹಳ್ಳಿ ಜನರ ಉಳಿವಿನ ಹೋರಾಟ ಜಗದ್ವಿಖ್ಯಾತ ಪರಿಸರದ ಹೋರಾಟವಾಯಿತೆ ..!: ಕೆ ಟಿ ಸೋಮಶೇಖರ ಹೊಳಲ್ಕೆರೆ.

ಗಿಡ ಮರ ಪ್ರಾಣಿ ಪಕ್ಷಿ ಕ್ರಿಮಿ ಕೀಟಗಳು ತನ್ನಂತೆ ಪ್ರಕೃತಿಯ ಮಮತೆಯ ಮಕ್ಕಳು ಅವುಗಳಿಗೂ ಮಾನವನಂತೆ ಬದುಕುವ ಹಕ್ಕೂ, ಸ್ವಾತಂತ್ರ್ಯವೂ ಇದೆ ಎಂದು ಮಾನವ ಭಾವಿಸದೆ ಅವುಗಳನ್ನು ಮನಬಂದಂತೆ ತನಗೆ ಅನುಕೂಲವಾಗುವಂತೆ ದುಡಿಸಿಕೊಳ್ಳುತ್ತಲು ಹಿಂಸಿಸುತ್ತಲು ಕೊಲ್ಲುತ್ತಲೂ ಇದ್ದಾನೆ. ಇದು ಸರಿಯಲ್ಲ! ಇತ್ತೀಚೆಗೆ ಪ್ರಕೃತಿಯ ಉಳಿವಿನಲ್ಲಿ, ಬದುಕಿನಲ್ಲಿ, ನಲಿವಿನಲ್ಲಿ ಮಾನವನ ನಗು ಅಡಗಿದೆ! ಪ್ರಕೃತಿಯ ಗಿಡ ಮರ ಪ್ರಾಣಿ ಪಕ್ಷಿ ಜಲಚರಗಳನ್ನೂ ಮಾನವನ ಬದುಕು ಅವಲಂಬಿಸಿದೆ! ಅದರ ನಾಶ ಮಾನವನ ಸರ್ವನಾಶ! ಎಂದು ತಿಳಿದಾಗಿನಿಂದ ಪ್ರಕೃತಿಯನ್ನು ಅದನ್ನು ಆಶ್ರಯಿಸಿರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪರಿವರ್ತನೆ ನನ್ನಿಂದಲೇ . . . . .: ಜಯಲಕ್ಷ್ಮಿ ಕೆ. , ಮಡಿಕೇರಿ

” ನಿನ್ನ ಮಗನಿಗೆ ಎಷ್ಟು ಪರ್ಸೆಂಟು ಬಂತೂ . . ? 89% ?? ಅಯ್ಯೋ . . . ಇನ್ನು ಸ್ವಲ್ಪ ಓದಿದ್ದಿದ್ದರೆ 9ಂ% ಬರುತ್ತಿತ್ತು , ಹೋಗ್ಲಿ ಬಿಡು . . . ಇನ್ನೇನ್ ಮಾಡೋಕಾಗುತ್ತೆ . ನನ್ ಮಗಳಿಗೆ ಓದಿಸಿ ಓದಿಸಿ 98% ತೆಗೆಸೋ ಹೊತ್ತಿಗೆ ನಂಗೆ ಸಾಕಾಗಿ ಹೋಗಿತ್ತು. ಅಂದ ಹಾಗೆ ನಿನ್ನ ತಂಗಿ ಮಗಳೂ ಪಿ ಯು ಸಿ . . ಅಲ್ವಾ ? ಅವಳೆಷ್ಟು ಮಾರ್ಕ್ಸ್ ತಕೊಂಡಳು ??” … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಂಪೆಯ ಪಳುಯುಳಿಕೆಗಳು, ಪ್ರೇಯಸಿ ಮತ್ತು ನನ್ನ ಹೆಂಡತಿ: ಧೀರೇಂದ್ರ ನಾಗರಹಳ್ಳಿ

ಹಲೋ ಹನಿ , ಬೆಳಿಗ್ಗೇನೆ ವಿಡಿಯೋ ಕಾಲ್ ಮಾಡಿ ಆಗಿದೆ ಮತ್ತೇನು ಈ ‘ಅಕ್ಷರಗಳು ‘ ಅಂತ ಆಶ್ಚರ್ಯ ಆಗಬಹುದು. ಈ ಮೇಲಿಗೆ ಒಂದು ಕಾರಣವಿದೆ. ಈ ವಾರಾಂತ್ಯದಲ್ಲಿ ಬಿ. ಬಿ. ಸಿಯ ಹಂಪೆಯ ಬಗ್ಗೆ ಒಂದು ಡಾಕುಮೆಂಟರಿಯನ್ನು ನೋಡಿದೆ. ವಿಜಯನಗರ ಸಾಮ್ರಜ್ಯದ ವಿವರಗಳನ್ನು ಕಟ್ಟಿ ಕೊಟ್ಟರು. ಹಾಗೆಯೇ ಬಹಮನಿ ಸುಲ್ತಾನರಿಂದ ನಾಶವಾದ ಹಂಪೆಯ ವಿವರವನ್ನು ಕೊಡಲಾಯಿತು. ಹಂಪೆಯ ನಾಶದ ವಿಷಯವನ್ನು ತೋರಿಸುವಾಗಲಂತೂ – ನಾನು ನಿಜವಾಗಿಯೂ ಸತ್ತೆ ಹೋದೆ. ಆ ಸಾಲು ಸಾಲು ಮುರಿದು ಹೋದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪರೀಕ್ಷೆಯಲ್ಲಿ ಪಾಸಾದವರೊಂದಿಗೆ ಫೇಲಾದವರೂ ಉತ್ತಮ ಸಾಧಕರು…: ವೀರಣ್ಣ ಮಂಠಾಳಕರ್, ಬಸವಕಲ್ಯಾಣ

ಪರೀಕ್ಷೆಯ ಫಲಿತಾಂಶ ಬಂದ ತಕ್ಷಣ ಅದೇಷ್ಟೋ ವಿದ್ಯಾರ್ಥಿಗಳು ಮಾರ್ಕ್ಸ್ ಕಡಿಮೆ ಬಂತು/ ಫೇಲಾದೆ ಎಂಬ ಕಾರಣಕ್ಕೆ ಮಾನಸಿಕ ಸ್ಥೈರ್ಯವನ್ನು ಕಳೆದುಕೊಳ್ಳದೇ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು. ಪಾಸಾದವರು, ರ್ಯಾಂಕ್ ಪಡೆದವರಷ್ಟೇ ಪ್ರತಿಭಾವಂತರಲ್ಲ. ನೆನಪಿರಲಿ ಫೇಲಾದವರೂ ಜೀವನದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ನೆನಪಿಸಿಕೊಂಡು, ಮುಂದಿನ ಗುರಿ-ಛಲದೊಂದಿಗೆ ಮುನ್ನುಗ್ಗಬೇಕು. ಜೀವನ ಮತ್ತು ಸಾಧನೆಗೆ ಶಿಕ್ಷಣವೊಂದೇ ಮುಖ್ಯವಲ್ಲ. ಕನಿಷ್ಠ ಓದು ಬರಹ ಕಲಿತವರೆಷ್ಟೋ ಶೈಕ್ಷಣಿಕ ವಿದ್ಯಾಭ್ಯಾಸದಲ್ಲಿ ಉತ್ತಮ ಬರಹಗಾರರಾಗಿ ರಾಜ್ಯ/ರಾಷ್ಟ್ರ ಮಟ್ಟದಲ್ಲಿ ಹೆಸರಾಗಿದ್ದಾರೆ. ಸಾಮಾಜಿಕ ಚಿಂತಕರಾಗಿ, ಪತ್ರಕರ್ತರಾಗಿ, ಪತ್ರಿಕಾ ಸಂಪಾದಕರಾಗಿ, ಹೋರಾಟಗಾರರಾಗಿ ಒಳ್ಳೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ