ಹುದುಗಲಾರದ ದುಃಖ: ಜಯಶ್ರೀ.ಜೆ.ಅಬ್ಬಿಗೇರಿ
ಸಾಯಂಕಾಲ ಆಯಿತೆಂದರೆ ಗಾರ್ಡನ್ನಿನಲ್ಲಿ ಮಕ್ಕಳ ಚೆಲ್ಲಾಟದ ಸದ್ದು, ಜೋಕಾಲಿ ಜೀಕುವ ಸಪ್ಪಳ, ಮಹಿಳೆಯರ ಮಾತಿನ ಕಾವು ಏರುತ್ತಲೇ ಇರುತ್ತದೆ. ಆದರೆ ಅಂದು ಸಂಜೆ ಹೊತ್ತು ಗುಡುಗು ಸಿಡಿಲಿನ ಅಬ್ಬರದೊಂದಿಗೆ ಮಳೆಯಾಗಿದ್ದರಿಂದ ಗಾರ್ಡನ್ ಯಾವುದೇ ಸದ್ದು ಗದ್ದಲವಿಲ್ಲದೇ ಬಿಕೋ ಎನ್ನುತ್ತಿತ್ತು. ಬೆಂಚುಗಳು ಸೀನಿಯರ್ ಸಿಟಿಜನ್ಸ್ ಮತ್ತು ಮಾತು ಹೇಳುವ ಮಾತೆಯರಿಲ್ಲದೇ ಬಣಗುಡುತ್ತಿದ್ದವು. ಜೋರಾಗಿ ಬೀಸಿದ ಗಾಳಿಗೆ ಉದುರಿ ಬಿದ್ದ ಗಿಡದ ಎಲೆ-ಹೂಗಳು ಬೆರಳಣಿಕೆಯಲ್ಲಿ ವಾಕಿಂಗ್ ಮಾಡುತ್ತಿದ್ದ ನಮ್ಮನ್ನು ಸ್ವಾಗತಿಸುವಂತೆ ಭಾಸವಾಗುತ್ತಿತ್ತು.ಮಳೆಯಾದುದರಿಂದ ತಂಗಾಳಿ ಮೈಗೆ ತಂಪೆರೆಯುತ್ತಿತ್ತು. ಅದೇ ಸಮಯದಲ್ಲಿ ವಯಸ್ಸಾದವರೊಬ್ಬರು … Read more