ಅಮಾವಾಸ್ಯೆ: ಗಿರಿಜಾ ಜ್ಞಾನಸುಂದರ್

“ಏ ಬೇಡ ಮಕ್ಕಳಾ, ಅವು ನಮ್ಮ ಸೀಬೆ ಮರಗಳಲ್ಲ, ಬೇರೆಯವರದ್ದು. ಅವರನ್ನು ಕೇಳದೆ ಹಾಗೆಲ್ಲ ಕೀಳಬಾರದು” ಎಂದು ಕಾಮಾಕ್ಷಿ ಕೂಗುತ್ತಿದ್ದರು ಮಕ್ಕಳ ಸೈನ್ಯ ಅವಳ ಮಾತನ್ನು ಕಿವಿಗೆ ಹಾಕಿಕೊಳ್ಳದೆ ಹಣ್ಣುಗಳನ್ನು ಕಿತ್ತು ತಮ್ಮ ಚೀಲಕ್ಕೆ ಹಾಕುವುದರಲ್ಲಿ ಮುಳುಗಿತ್ತು. ಒಟ್ಟು ಹತ್ತು ಮೊಮ್ಮಕ್ಕಳು ಸೇರಿ ಲಗ್ಗೆ ಹಾಕಿದ್ದರು. ರಜಕ್ಕೆ ಅಜ್ಜಿ ಮನೆಗೆ ಬಂದಿದ್ದ ಎಲ್ಲರು ಮಂಗಗಳಾಗಿದ್ದರು. ಅವರನ್ನು ಹಿಡಿಯುವುದಕ್ಕೆ ಸೀನ ಮಾವನಕೈಯಲ್ಲಿ ಮಾತ್ರ ಸಾಧ್ಯ ಆಗುತ್ತಿತ್ತು. ಅವರು ಶಾಲೆಯ ಮುಖ್ಯೋಪಾಧ್ಯಾಪಕರಾಗಿ ಮಕ್ಕಳ ಮೇಲೆ ಒಳ್ಳೆ ಹಿಡಿತ ಹೊಂದಿದ್ದರು. ಆದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಗುವಿನ ಕಥೆ: ನಂದಾ ಹೆಗಡೆ

ಪ್ರೈಮರಿ ಸ್ಕೂಲ್ ಟೀಚರಾದ ನಾನು ಇಂದು ಶಾಲೆಯಿಂದ ಮನೆಗೆ ಬಂದರೂ ಶಾಲೆಯದೇ ಗುಂಗಿನಲ್ಲಿದ್ದೆ. ಆರನೇ ಕ್ಲಾಸ್ ನಲ್ಲಿ ಓದುತ್ತಿದ್ದ ಪ್ರಗತಿ ನನ್ನ ಯೋಚನೆಯ ವಿಷಯವಾಗಿದ್ದಳು. ಪ್ರಗತಿ ನಾನು ನೋಡುತ್ತಿದ್ದ ಹಾಗೆ ಚೂಟಿಯಾದ ಹುಡುಗಿ. ಓದುವುದರಲ್ಲಿ ಯಾವಾಗಲೂ ಮುಂದು. ಸಾಮಾನ್ಯವಾಗಿ ಅವಳು ಎಲ್ಲಾ ವಿಷಯಕ್ಕೂ ನೂರಕ್ಕೆ ನೂರು ಅಥವಾ ಅದರ ಆಜು ಬಾಜು ಅಂಕ ಗಳಿಸುತ್ತಿದ್ದಳು. ಆದರೆ ಈಗ ಎರಡು ಮೂರು ಪರೀಕ್ಷೆಗಳಲ್ಲಿ ಅಂಕಗಳ ಇಳಿಕೆಯಾಗತೊಡಗಿತ್ತು. ಏನೋ ಸ್ವಲ್ಪ ವ್ಯತ್ಯಾಸವಾಗಿರಬಹುದೆಂದು ನಾನೂ ವಿಶೇಷವಾಗಿ ಏನೂ ಹೇಳಿರಲಿಲ್ಲ. ಆದರೆ ಅರ್ಧ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕ್ಯಾಮೆರಾಮ್ಯಾನ್: ದಯಾನಂದ ರಂಗದಾಮಪ್ಪ

ಕ್ಯಾಮೆರಾ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಾ ಅರಿವಿಲ್ಲದೆ ನಿದ್ರೆಗೆ ಜಾರಿದ್ದೆ. ಸ್ಟುಡಿಯೋದಲ್ಲಿನ ಫೋನಿನ ರಿಂಗಿನ ಸದ್ದು ನನ್ನನ್ನು ಎಚ್ಚರಿಸಿತು. ನಿದ್ದೆಗಣ್ಣಲ್ಲೇ ಫೋನ್ ಸ್ವೀಕರಿಸಿದೆ. ಅತ್ತ ಕಡೆಯಿಂದ Is this Colors Studios? May I speak to Saurabh ಅಂದ. ನಾನು yes Speaking ಅಂದೆ. ನಾನು ಡೇನಿಯಲ್ ಅಂತ, ನಾಳೆ ಮಧುವೆಗೆ ಒಂದು ಫೋಟೋಶೂಟ್ ಮಾಡಿಕೊಡ್ತಿರಾ ಪ್ಲೀಸ್. ಮುಂದಿನ ವಾರ ನನ್ನ ಮದುವೆ. ಸುಮಾರು ಸ್ಟುಡಿಯೊಸ್ ಗೆ ಕರೆ ಮಾಡಿದೆ ಆದರೆ ಎಲ್ಲ ಸ್ಟುಡಿಯೊಸ್ ಬುಕ್ ಆಗಿವೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಮಲಿ: ಎನ್, ಶೈಲಜಾ ಹಾಸನ

ಇಸ್ಕೋಲಿನಲ್ಲಿ ಏಳಿದ್ದ ವಿಸಯದ್ದ ಬಗ್ಗೆನೇ ಅವತ್ತೇಲ್ಲ ಯೋಚ್ನೆ ಮಾಡ್ಕಂಡು ಏಟು ವೊತ್ತಿಗೆ ಮನಿಗೋಯ್ತಿನೊ, ಏಟು ಬ್ಯಾಗ ಅವ್ವಂಗೆ ಆ ವಿಸಯ ತಿಳ್ಸಿ ನಮ್ಮನೆಗೂ ಒಂದು ಸೌಚಾಲ್ಯ ಮಾಡಿಸ್ಕೊತಿನೋ ಅಂತ ವಿಮಲಿ ಮನಸ್ಸಿನಲ್ಲೆ ಮಂಡಿಗೆ ತಿಂತಿದ್ದಳು. ಮನೆಗೆ ಬಂದವ್ಳೆ ಅವ್ವನ್ನ ಕಾಡೊಕೆ ಸುರು ಹಚ್ಕಂಡ್ಳು. “ಏಂತದೇ ಅದು ಸೌಚಲ್ಯ” ಅಂತ ಇಟ್ಟಿಗೆ ವೊತ್ತು ಸುಸ್ತಾಗಿದ್ದ ಪಾರು ರೇಕಂಡ್ಳು. ವಿಮಲಿ ಅತ್ಯೂತ್ಸಹದಿಂದ “ಅದೇ ಕನವ್ವ, ಕಕ್ಸದಮನೆ, ಇವತ್ತು ನಮ್ಮಿಸ್ಕೋಲಿನಲ್ಲಿ ದೊಡ್ಡವರೆಲ್ಲ ಬಂದು ಬಾಷ್ಣ ಮಾಡಿದ್ರು ಕನವ್ವ ಬಯಲಾಗೆ ಎಲ್ಡಕ್ಕೆ ವೋಗಬಾರದಂತೆ,ಅಂಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಾನ ಕಾಪಾಡಿದ “ಫುಟೇಜ್”: ಚಂದ್ರೇಗೌಡ ನಾರಮ್ನಳ್ಳಿ

ಕೆಲವೊಮ್ಮೆ ಹೀಗಾಗುವುದುಂಟು. ಯಾರದೋ ತಪ್ಪಿಗೆ ಮತ್ತಾರಿಗೋ ಶಿಕ್ಷೆ, ಬಹುಮಾನ ನಿರೀಕ್ಷಿಸಿದ ಸಮಯದಲ್ಲಿ ಅವಮಾನ, ಕಾಣದ ಕೈಗಳ ಮೇಲಾಟ, ಸ್ಥಬ್ದ ತಿಳಿಗೊಳದಂತಿದ್ದ ದಿನಗಳಿಗೆ ಪ್ರಕ್ಷುಬ್ದ ಅಲೆಗಳ ಹೊಡೆತ. ಘಟನೆಯ ನೈಜತೆ ತಿಳಿಯುವವರೆಗೆ ತಳಮಳ. ಆಮೇಲೆ ಸಮಾಧಾನದ ಒಂದು ನಿಟ್ಟುಸಿರು. ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಶ್ರೇಷ್ಠ ಕವಿಯೊಬ್ಬರ ಸ್ಮರಣಾರ್ಥ ನಡೆದ ಕವಿಗೋಷ್ಟಿಯಲ್ಲಿ ಭಾಗವಹಿಸಿದ್ದೆನು. ಕಾರ್ಯಕ್ರಮ ತುಂಬಾ ಅಚ್ಚುಕಟ್ಟಾಗಿತ್ತು. ಬಿಡುವಿನಲ್ಲಿ ಹೊರಬಂದಾಗ ದಾಖಲೆ’ಯ ಪ್ರಕಾಶಕರೊಬ್ಬರು ಸಿಕ್ಕಿದರು. ಅವರನ್ನು ಮಾತನಾಡಿಸಿ ಫೋಟೋ ತೆಗೆಸಿಕೊಂಡೆವು. ಕೆಲವೇ ನಿಮಿಷಗಳಲ್ಲಿ ಉದ್ಘಾಟಿಸಿದ ಗಣ್ಯ ಸಾಹಿತಿಯೂ ಹೊರಬಂದರು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುಂದರ ಸಿಯಾಟೆಲ್: ಪ್ರಶಸ್ತಿ

ನಮಗೆ ಅದೇ ಹೆಸರೇಕೆ ಇಟ್ಟರು ಅನ್ನೋದರ ಹಿಂದೆ ನಮ್ಮಪ್ಪ ಹೇಳೋ ತರ ಪ್ರಸಿದ್ಧ ನಗರಗಳಿಗೂ ಆ ಹೆಸರುಗಳೇ ಯಾಕೆ ಬಂದವು ಅಂತ ಎಷ್ಟು ಸಲ ಯೋಚನೆ ಮಾಡಿರೋಲ್ಲ ನಾವು ? ಹೆಸರಲ್ಲೇನಿದೆ ಅಂದ್ರಾ ? ಪ್ರತೀ ನಗರಕ್ಕೂ ತನ್ನದೇ ಆದೊಂದು ಹೆಸರಿರುತ್ತೆ. ಆ ಹೆಸರೇಕೆ ಬಂತು ಅನ್ನೋದರ ಹಿಂದೊಂದು ಸುಂದರ ಕಥೆಯಿರುತ್ತೆ. ಹೆಸರ ಇತಿಹಾಸ ಥಟ್ಟನೆ ಗೋಚರಿಸದಿದ್ದರೂ ಕಾಲಗರ್ಭದಲ್ಲೆಲ್ಲೋ ಮರೆಯಾಗಿ ಕೆದಕುವವರಿಗಾಗಿ ಕಾದು ಕೂತಿರುತ್ತೆ. ದೇಶ ಸುತ್ತೋ ಜೋಶಿನಲ್ಲಿ ಸಿಕ್ಕಿದ್ದ ಸಿಯಾಟೆಲ್ಲಿಗೆ ಆ ಹೆಸರೇಕೆ ಬಂತೆನ್ನೋ ಪ್ರಶ್ನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಮ್ಮತನವ ಉಳಿಸಿಕೊಳ್ಳೋಣ: ಸ್ಮಿತಾ ಮಿಥುನ್

ಹಬ್ಬ ಗಳು ಅಂದ್ರೆ ನನ್ಗೆ ತುಂಬಾ ಇಷ್ಟ, ಯಾಕೆ ಅಂದ್ರೆ ಆವತ್ತು ಸಂಭ್ರಮ ಪಡೋ ದಿನ ಹಬ್ಬಗಳ ಮಹತ್ವ ಗೊತ್ತಾಗಿದೆ ನಾನು ಇಲ್ಲಿ ಅಂದ್ರೆ ದೂರದ ಗಲ್ಫ್ ಗೆ ಬಂದ ಮೇಲೆ. ಹಬ್ಬಗಳು ನಮ್ಮತನದ ಪ್ರತೀಕ. ಇವತ್ತು ನಾವು ನಮ್ಮತನವನ ಯಾಕೋ ಬಿಟ್ಟು ಬಿಡುತಿದ್ದೇವೋ ಅಂಥ ಅನಿಸೋಕೆ ಶುರು ಆಗಿದೆ. ನಾವು ಅಂದ್ರೆ ಕನ್ನಡಿಗರೇ ಹೀಗೆನಾ ? ಯಾಕೆ ಅಂದ್ರೆ ನೀವು ಗುಜರಾತಿಗಳನ್ನ ನೋಡಿ ಎಲ್ಲಿ ಹೋದ್ರು ಅಲ್ಲಿ ಒಂದು ಸಣ್ಣ ಗುಜರಾತ್ ನ ನಿರ್ಮಿಸಿಬಿಡ್ತಾರೆ. ಆದ್ರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೂವಾಗಿ ಅರಳಿ: ವೆಂಕಟೇಶ ಚಾಗಿ

  ಬೆಳಗಿನ ೬ ಗಂಟೆಯ ಸಮಯ. . ಕಣ್ಣಲ್ಲಿ ಇನ್ನೂ ನಿದ್ದೆ ಮಂಪರು. ಆದರೂ ಕಣ್ತೆರೆಯುವಂತೆ ಮಾಡಿತ್ತು ಮೊಬೈಲ್. ಯಾರದೋ ಮೆಸೆಜ್ ಬಂದಿರುವ ರಿಂಗ್ ಟೋನ್ ಆಗಾಗ ಕೇಳಿಸುತ್ತಿತ್ತು. ಚಳಿಗಾಲದ ಚಳಿಯಲ್ಲಿ ಮುದುಡಿಕೊಂಡು ಮಲಗಿದ್ದ ನಾನು ಮನಸ್ಸಿಲ್ಲದೇ ಕಣ್ತೆರೆಯಬೇಕಾಯಿತು. ಒಂಟಿ ಕಣ್ಣು ತೆರೆದು ಮೊಬೈಲ್ ತಡಕಾಡಿದೆ. ಮೆಸೆಜ್ ಟೋನ್ ನ ಶಬ್ದ ಮೊಬೈಲ್ ನ್ನು ಬೇಗ ಕೈಗೆ ಸಿಗುವಂತೆ ಮಾಡಿತ್ತು. ಆನ್ ಮಾಡುತ್ತಿದ್ದಂತೆ ಸುಮಾರು ೧೦ ಮೆಸೆಜ್ ಗಳಲ್ಲೂ ಸಾರಿ ಸಾರಿ ಸಾರಿ. . . ಹಿಂದಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇದು ಕಥೆಯಲ್ಲ ವ್ಯಥೆ: ಆರೀಫ ವಾಲೀಕಾರ

ಅವ್ವ..! ಅವ್ವ..! ಎಂದು ರಾಮ ಓಡುತ್ತಾ ಮನೆಗೆ ಬಂದ ರಾಮು, ಅಕ್ಕ ಎಲ್ಲಿ ಎಂದು ಕೇಳಿದ?. ಅದಕ್ಕೆ ಗುರವ್ವ(ರಾಮು ತಾಯಿ) ಅವಳು(ರುಕ್ಕು ರಾಮುನ ಅಕ್ಕ) ಹಳ್ಳಕ್ಕೆ ಕಟ್ಟಿಗೆ ತರಲು ಹೋಗಿದ್ದಾಳೆಂದು ಹೇಳಿ. ತನ್ನ ಕಾಯಕದಲ್ಲಿ ತಲ್ಲಿನಳಾದಳು. ನಾನು ಆಟ ಆಡೋಕೆ ಹೋಗುತ್ತೀನಿ ಎಂದು ರಾಮು ಓಡಿ ಹೋದ. ಗುರವ್ವ ಕುಳ್ಳು ಸರಿಮಾಡುತ್ತಾ ಗೋಣು ಹಾಕಿದಳು. ಸೂರ್ಯಸ್ತ ಆಗುತ್ತಿತ್ತು. ಧರೆಪ್ಪ(ಗುರವ್ವನ ಗಂಡ) ಗೌಡರ ಹೊಲದ ಕೆಲಸ ಮುಗಿಸಿಕೊಂಡು ಮನೆಗೆ ಬಂದ. ‘ಲೇ ಗುರಿ ಎಲ್ಲಿ ಇದ್ದಿಯೇ?. ಗುರವ್ವಾ ಚುಮಣಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪರೀಕ್ಷೆಯನ್ನು ಹಬ್ಬದಂತೆ ಆಚರಿಸಿ ಉತ್ತಿರ್ಣರಾಗಿರಿ: ಜಯಶ್ರೀ ಭ. ಭಂಡಾರಿ.

ಇಂದಿನ ಮಕ್ಕಳು ನಾಳಿನ ನಾಡ ಬೆಳಗುವ ನಾಯಕರು. ಅವರಿಗೆ ಸರಿಯಾದ ಮಾರ್ಗದರ್ಶನ ಬೇಕು. ಶಾಲೆಯಲ್ಲಿ ಗುರುಗಳು ಮನೆಯಲ್ಲಿ ಪಾಲಕರು ಮಕ್ಕಳ ಶ್ರೇಯಸ್ಸಿಗೆ ಶ್ರಮಿಸುತ್ತಾರೆ. ಹುಟ್ಟಿದ ಪ್ರತಿಮಗುವಿನಲ್ಲಿ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಅವನನ್ನು ಭಾವಿಭವಿಷ್ಯತ್ತಿಗೆ ಅಣಿಮಾಡುವ ಗುರುತರ ಜವಾಬ್ದಾರಿ ಶಿಕ್ಷಕರ ಹಾಗೂ ಪಾಲಕರ ಮೇಲಿದೆ. ಮಗ/ಳು ಶಾಲೆಗೆ ಹೋಗತಾರೆ ಅಂದರೆ ಅವರ ಬಗ್ಗೆ ಪಾಲಕರ ಕಾಳಜಿ ಬೇಕೆಬೇಕು. ತಯಾರಿ ಮಾಡಿ ಶಾಲೆಗೆ ಕಳಿಸಿದರೆ ಜವಾಬ್ದಾರಿ ಮುಗಿತು ಅವರ ಕೇಳಿದ್ದೆಲ್ಲ ಕೊಡಿಸಿದರೆ ಆಯ್ತಲ್ಲವಾ ಅನ್ನಬೇಡಿ. ನಿಮ್ಮ ಮಗು ನಿಮ್ಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾಣಸುದ್ದಿ 9: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ ಇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆನಪಾಗುತ್ತಾರೆ ಇನ್ನೂ ನಮ್ಮ ಅಪ್ಪಾಜಿ ಮೇಷ್ಟ್ರು : ಜಹಾನ್‍ ಆರಾ. ಎಚ್. ಕೋಳೂರು

ಬೆಳಗ್ಗೆ ಶಾಲೆ ಗಂಟೆ ಹೊಡೆದ ನಿಮಿಷಾರ್ಧದಲ್ಲಿ ಎಲ್ಲರೂ ಪ್ರಾರ್ಥನೆ ಕಡೆಗೆ. ಆಯಸ್ಕಾಂತವು ಕಬ್ಬಿಣದ ವಸ್ತುಗಳನ್ನು ಆಕರ್ಷಿಸಿದಂತೆ ಮೇಷ್ಟ್ರ ವಿಷಲ್ ನಮ್ಮನ್ನು ಆಕರ್ಷಿಸುತ್ತಿತ್ತು. ಗಟ್ಟಿ ಧ್ವನಿಯಲ್ಲಿ “ಸಾವಧಾನ” ಎಂದರೆ ಹುಮ್ಮಸ್ಸಿನಿಂದ “ಏಕ್” ಎನ್ನುವ ಧ್ವನಿ ಒಂದು ಕಡೆಯಾದರೆ ನೂರಾರು ಮಕ್ಕಳ ಕಿವಿಗಳವರೆಗೆ ತರುವ ಮತ್ತೊಂದು ಧ್ವನಿ “ವಿಶ್ರಾಮ್” ಮತ್ತೊಂದು ಕಡೆ,ಇ ದು ನಮ್ಮ ಶಾಲೆಯ ಪಿ.ಟಿ.ಮೇಷ್ಟ್ರಾದ ಅಪ್ಪಾಜಿಗೌಡ್ರ ಶಿಸ್ತಿನ ಪಾಠ. ಶಿಸ್ತು, ಸಜ್ಜನಿಕೆಗೆ ಮತ್ತೊಂದು ಹೆಸರೇ ಇವರು. ನೀಳಕಾಯದ ಬಿಳಿಗೂದಲಿನ ಇವರು ಯಾವಾಗಲೂ ಸಫಾರಿ ಬಟ್ಟೆ ಮೈಮೇಲೆ, ಎಲ್ಲರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಿಲಿಗಿಲಿ ಪುವ್ವಾ : ಕೃಷ್ಣ ಶ್ರೀಕಾಂತ ದೇವಾಂಗಮಠ

ಪಾತ್ರ ವರ್ಗ ಚಾರು – ಒಂದು ಕೈ ಮಾತ್ರ ಇರುವ ಕೇರಿಯ ಹುಡುಗ ಮಾನು – ಕೇರಿಯ ಹುಡುಗ ಮೀರಾ – ಕೇರಿಯ ಹುಡುಗಿ ಮಾದಪ್ಪ – ಮಾನುವನ ತಂದೆ ಅನಾಮಿಕ – ಧ್ವನಿ ಪುಟ್ಟಿ – ಲಂಬೋದರ & ಜಾನ್ನವಿಯ ಮಗಳು ಗೌರಿ – ಗೆಳತಿ ದೇವ್ರು – ಅಜ್ಜಿಯ ಮಮ್ಮಕ್ಕಳು ಅನಿ – ಅಜ್ಜಿಯ ಮಮ್ಮಕ್ಕಳು ಮಾಯಾ – ಅಕ್ಕನಂಥ ಗೆಳತಿ ಜಾನ್ನವಿ – ಪುಟ್ಟಿಯ ತಾಯಿ ಲಂಭೋದರ – ಪುಟ್ಟಿಯ ತಂದೆ ದೃಶ್ಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾವ್ಯಧಾರೆ 2

ಯುಗಾದಿ ನವ ಸಂತಸ ನವ ಸಂಭ್ರಮ ನವ ನವೋಲ್ಲಾಸ ತುಂಬಲು ಮತ್ತೆ ಬಂದಿದೆ ಯುಗಾದಿ ನವ ಚೇತನ ನವ ಭಾವನ ನವ ನವೋತ್ಸಾಹ ಬೀರಲು ಮತ್ತೆ ಬಂದಿದೆ ಯುಗಾದಿ ನವ ಪಲ್ಲವಿ ನವ ಕಿನ್ನರಿ ನವ ನವೋತ್ಕರ್ಷ ಹೊಂದಲು ಮತ್ತೆ ಬಂದಿದೆ ಯುಗಾದಿ ನವ ಬಂಧನ ನವ ಸ್ಪಂದನ ನವ ನವೋದಯ ಹೊಮ್ಮಲು ಮತ್ತೆ ಬಂದಿದೆ ಯುಗಾದಿ ನವ ಬದುಕಿಗೆ ನವ ದಾರಿಗೆ ನವ ನವೋದಕವೆರೆಯಲು ಮತ್ತೆ ಬಂದಿದೆ ಯುಗಾದಿ ನವ ಮಂಥನ ನವ ಚಿಂತನ ನವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೀವನದ ಅಂಚಿನಲ್ಲಿರುವ ಪುಟಗಳನ್ನು ಪ್ರೀತಿಯ ಬಣ್ಣದಿಂದ ತುಂಬೋಣ: ಜಯಶ್ರೀ. ಜೆ. ಅಬ್ಬಿಗೇರಿ

ಅದ್ಯಾಕೆ ಹೀಗೆ ಅಂತ ನನಗೂ ಗೊತ್ತಿಲ್ಲ. ಮೊದಲಿನಿಂದಲೂ ಹಾಗೆ ಗೆಳತಿಯರು ಅಂತ ಸಮೀಪವಿದ್ದವರೆಲ್ಲ ನನ್ನೊಂದಿಗೆ ಒಂದಿಷ್ಟು ಜಾಸ್ತಿನೇ ಅನ್ನುವಷ್ಟು ಆತ್ಮೀಯರಾಗ್ತಾರೆ. ತಮ್ಮ ಮನಸ್ಸಿನಲ್ಲಿರುವುದನ್ನು ನನ್ನ ಬಳಿ ಮುಕ್ತವಾಗಿ ಹೇಳಿಕೊಳ್ಳುತ್ತಾರೆ. ಬಹುಶಃ ನಾನು ನನ್ನದೇನೋ ಕೆಲಸವಿದೆ ಎಂದು ಅವರಿಗೆ ಬೆನ್ನು ಹಾಕಿ ಎದ್ದು ಹೋಗದೇ ಇರುವುದರಿಂದಲೋ, ಅವರು ಹೇಳಿದ್ದನ್ನೆಲ್ಲ ದೇವರ ಹಾಗೆ ಕೂತು ಕೇಳಿಸಿಕೊಳ್ಳುತ್ತೇನೆ ಎನ್ನುವುದಕ್ಕೋ ಅಥವಾ ಅವರು ಏನು ಹೇಳಿದರೂ ಅದನ್ನು ಪ್ರಶ್ನಿಸದೇ ಒಪ್ಪಿಕೊಳ್ಳುತ್ತೇನೆ ಎನ್ನುವ ಕಾರಣಕ್ಕೋ, ಏನೋ ಗೊತ್ತಿಲ್ಲ. ಒಟ್ಟಿನಲ್ಲಿ ವಯಸ್ಸಿನಲ್ಲಿ ಹೆಚ್ಚು ಕಡಿಮೆ ಹಿರಿಯರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯುಗಾದಿ: ವೈ. ಬಿ. ಕಡಕೋಳ

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ಎಂಬ ಬೇಂದ್ರೆಯವರ ಗೀತೆಯ ಸಾಲುಗಳಲ್ಲಿ ಯುಗಾದಿಯ ಬರುವಿಕೆ, ಅದರಲ್ಲಿನ ಸಡಗರ ವರ್ಣನಾತೀತ. ಋತುಗಳ ರಾಜ ವಸಂತನ ಆಗಮನದ ಸೂಚನೆಯ ಜೊತೆಗೆ ಯುಗಾದಿಯು ಎಲ್ಲ ಹಬ್ಬಗಳಿಗೂ ನಾಂದಿಯಾಗಿ ಪ್ರತಿ ಸಂವತ್ಸರದ ಚೈತ್ರ ಮಾಸ ಶುಕ್ಲಪಕ್ಷದ ಪಾಡ್ಯಮಿ ತಿಥಿಯಂದು ಆಚರಿಸಲ್ಪಡುವ ಹಬ್ಬ ಯುಗಾದಿ. ರಾಮಾಯಣ ಕಾಲಕ್ಕಿಂತ ಮೊದಲು ಉತ್ತರಾಯಣದಿಂದ ಹೊಸ ವರ್ಷದ ಗಣನೆ ಪ್ರಾರಂಭವಾಗುತ್ತಿತ್ತು. ಶ್ರೀರಾಮನು ಆವತರಿಸಿದ ಮಾಸ ಹಾಗೂ ಪಟ್ಟಾಭಿಷೇಕವಾದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವೈದ್ಯಕೀಯ ಲೋಕದ ಸಂಶೋಧನೆಗಳ ದಿಕ್ಕು ಬದಲಾಗಬೇಕು!: ಕೆ ಟಿ ಸೋಮಶೇಖರ ಹೊಳಲ್ಕೆರೆ

ಮಾನವನ ಚಿಂತನೆಗಳು ಪ್ರಕೃತಿಯ ನಿಯಮಗಳಿಗೆ ದೇಹ ಪ್ರಕೃತಿಗೆ ಪೂರಕವಾಗಿರಬೇಕು. ಸಹಜ ಚಿಂತನೆಗಳು ಪ್ರಕೃತಿಯ, ದೇಹ ಪ್ರಕೃತಿಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೊಡುತ್ತವೆ. ಅಸಹಜ ಚಿಂತನೆಗಳು ಸಮಸ್ಯೆಗಳ ಸರಣಿಯನ್ನೇ ಸೃಷ್ಟಿಸುತ್ತವೆ! ಸಹಜ ಚಿಂತನೆಗಳಿದ್ದರೂ ಮಾನವ ತನ್ನ ದುರಾಸೆಯಿಂದ ದುಡ್ಡಿನ ಪಿಶಾಚಿ ಯಾಗಿರುವುದರಿಂದ ಉದ್ದೇಶಪೂರ್ವಕವಾಗಿ ಅಸಹಜವಾಗಿ ಚಿಂತಿಸಿ ಪ್ರಕೃತಿಯ, ದೇಹ ಪ್ರಕೃತಿಯ ನೋವು ಯಾತನೆಗಳಿಗೆ ಕಾರಣವಾಗುತ್ತಿದ್ದಾನೆ. ಪರಿಸರ ಮಾಲಿನ್ಯಕ್ಕೂ ಕಾರಣನಾಗಿದ್ದಾನೆ! ಇತ್ತೀಚೆಗೆ ಜಗತ್ತಿನಾದ್ಯಂತ ಇದೆ ವಿಜೃಂಭಿಸಿ ಜೀವಜಲ, ಅನಾರೋಗ್ಯ ಸಮಸ್ಯೆಗಳು ಅತಿ ಆಗಲು ಯಾತನೆ ಮುಗಿಲು ಮುಟ್ಟಲು ಕಾರಣವಾಗಿದೆ. ಇಡೀ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾರ್ನ್ ಪಲಾವ್ ಮತ್ತು ಕರಬೂಜದ ಹಣ್ಣಿನ ಮಿಲ್ಕ್ ಶೇಕ್: ವೇದಾವತಿ ಹೆಚ್.ಎಸ್.

1.ಕಾರ್ನ್ ಪಲಾವ್. (Corn Pulao) ಮಕ್ಕಳಿಂದ ದೊಡ್ಡವರವರೆಗೂ ಇಷ್ಟವಾಗುವ ಕಾರ್ನ್ ಪಲಾವ್ ಆರೋಗ್ಯಕರವಾದ ಮತ್ತು ರುಚಿಕರವಾದ ಪಲಾವ್ ನಲ್ಲಿ ಒಂದಾಗಿದೆ. ಕಾರ್ನ್ ಪಲಾವ್ ವೊಂದಿಗೆ ರಯತಾ, ವೆಜ್ ಕೂರ್ಮ ಹಾಕಿ ಸವಿಯಲು ರುಚಿಯಾಗಿರುತ್ತದೆ. ಬೇಕಾಗುವ ಸಾಮಾಗ್ರಿಗಳು: ಬಾಸುಮತಿ ಅಕ್ಕಿ ಒಂದು ಕಪ್ ಕಾರ್ನ್ ಒಂದು ಕಪ್ ಈರುಳ್ಳಿ ಎರಡು/ಚಿಕ್ಕದಾಗಿ ಕತ್ತರಿಸಿ. ಟೊಮೆಟೊ ಎರಡು/ಚಿಕ್ಕದಾಗಿ ಕತ್ತರಿಸಿ ಕ್ಯಾರೆಟ್, ಬೀನ್ಸ್ ಒಂದು ಕಪ್/ಚಿಕ್ಕದಾಗಿ ಕತ್ತರಿಸಿ ಕ್ಯಾಪ್ಸಿಕಂ ಒಂದು/ಚಿಕ್ಕದಾಗಿ ಕತ್ತರಿಸಿ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಒಂದು ಟೀ ಚಮಚ ಗರಂಮಸಾಲೆ ಅರ್ಧ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತನ್ನ ಅಹಂನ ಮುಂದೆ ದೇಶ ಕಾಯುವ ಯೋಧರ ತ್ಯಾಗ ಬಹು ದೊಡ್ಡದು: ನಾಗರಾಜ್.ಮುಕಾರಿ (ಚಿರಾಭಿ)

ಬೇಸಿಗೆ ಕಾಲ ಬಂದಾಗಲೆಲ್ಲಾ ಊಟಿ ಅಥವಾ ಮನಾಲಿಯ ನೆನಪಾಗುತ್ತಿತ್ತು ಕಾರಣ ನಿಮಗೆ ಗೊತ್ತೇ ಇದೆ. ಅಲ್ಲಿಯ ವಾತಾವರಣ ದೇಹ ತಂಪು ಮಾಡುವುದರ ಜೊತೆಗೆ ಕಣ್ಣುಗಳಲ್ಲಿ ಅಲ್ಲಿಯ ಸ್ವರ್ಗರಮಣೀಯ ದೃಷ್ಯಗಳನ್ನು ತುಂಬಿ ಆನಂದ ಪಡೆಸುತ್ತದೆ. ಹಾಗಾಗಿ ಈ ಬಾರಿ ಮನಾಲಿಗೆ ಹೋಗುವುದಾಗಿ ನಿರ್ಧರಿಸಿ ತಿರುವನಂತಪುರಂ-ಡೆಲ್ಲಿಗೆ ಹೊರಡುವ ರಾಜಧಾನಿ ಎಕ್ಸ್‍ಪ್ರೆಸ್‍ನಲ್ಲಿ ಟಿಕೆಟ್ ಬುಕ್ ಮಾಡಿ ಕುಟುಂಬ ಸಮೇತರಾಗಿ ಹೊರಟೇ ಬಿಟ್ಟೆವು. ರೈಲಿನ ಒಳಹೊಕ್ಕೊಡನೇ ತಂಪಾದ ಗಾಳಿ ಮೈಯಲ್ಲಾ ತಣ್ಣಗಾಗಿಸಿತು. ಮನಾಲಿಯ ಸುಖ ಇಲ್ಲಿಂದಲೇ ಸಿಗಲು ಶುರುವಾಯಿತು. ನಮಗೆ ನಿಗಧಿ ಪಡಿಸಿದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ತ್ರೀ ಸ್ವತಂತ್ರ ಅಸ್ಥಿತ್ವದ ಅಗತ್ಯತೆ: ನಾಗರೇಖಾ ಗಾಂವಕರ

ಆಧುನಿಕ ಮಹಿಳಾ ಜಗತ್ತು ತನ್ನದೇ ಸ್ವಯಂಕೃತ ಸಾಧನೆಯ ಸರಣಿಯಲ್ಲಿ ಸಾಗಲು ಅತೀ ಜರೂರತ್ತು ಇರುವುದು ಆಕೆಗೆ ಶಿಕ್ಷಣದ ಅಗತ್ಯತೆ. ಶೈಕ್ಷಣಿಕ ಕ್ಷಮತೆಯಲ್ಲಿ ಆಕೆಯ ಹೆಜ್ಜೆಗಳು ದಿಟ್ಟ ದಾಪುಗಾಲು ಹಾಕಬೇಕಿದೆ. ಶೈಕ್ಷಣಿಕ ಅಗತ್ಯತೆತೆ ಅರಿವು ಇನ್ನೂ ಹಲವು ಹಳ್ಳಿಗಳಲ್ಲಿ ಮೂಡಿಲ್ಲ. ಅರ್ಧಕ್ಕೆ ಶಿಕ್ಷಣದಿಂದ ವಂಚಿತರಾಗುವ ಅದೆಷ್ಟೋ ಹುಡುಗಿಯರಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳನ್ನು ಅತಿ ಚಿಕ್ಕ ವಯಸ್ಸಿನಲ್ಲಿ ವಿವಾಹಮಾಡಿಕೊಡುವ ಸಂಪ್ರದಾಯಗಳು ನಿಂತಿಲ್ಲ. ಹೆಣ್ಣು ಕಲಿತು ಉದ್ಧಾರ ಮಾಡುವುದು ಅಷ್ಟೇ ಇದೆ. ಮುಸರೆ ತೊಳೆಯುವುದೇನೂ ತಪ್ಪೋಲ್ಲ ಅನ್ನೋ ಮನಸ್ಥಿತಿ ಇಂದಿಗೂ ಜೀವಂತ. ಹಿಂದೆಲ್ಲಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಧೈರ್ಯವೇ ಹಿಮಾಲಯ, ಗೆಲ್ಲು ನೀ ಅಧೈರ್ಯವಾ. . . . : ಸುನಂದಾ ಎಸ್ ಭರಮನಾಯ್ಕರ

ಧೈರ್ಯ ಎಂದರೆ ಛಾತಿ, ಕೆಚ್ಚು, ಎದೆಗಾರಿಕೆ. ಧೈರ್ಯವು ಭಯ, ನೋವು ಅಪಾಯ ಅನಿಶ್ಚಿತತೆ ಅಥವಾ ಬೆದರಿಕೆಯನ್ನು ಎದುರಿಸುವ ಸಾಮಥ್ರ್ಯ ಮತ್ತು ಇಚ್ಛೆಯಾಗಿದೆ. ಮನುಷ್ಯ ಯಾವುದೇ ಸಾಧನೆ ಮಾಡಬೇಕಾದರೂ ಆತನಲ್ಲಿ ಮೊದಲು ಇರಬೇಕಾದದ್ದು ಧೈರ್ಯ. “ಧೈರ್ಯಂ ಸರ್ವತ್ರ ಸಾಧನಂ”. ಮನುಷ್ಯನಲ್ಲಿ ಸಿಗುವ ಅತಿ ವಿರಳ ಹಾಗೂ ಅತಿ ಅಮೂಲ್ಯವಾದ ವಸ್ತುವೆಂದರೆ ಧೈರ್ಯವೇ ಆಗಿದೆ. ಅದನ್ನು ಪೇಟೆಯಲ್ಲಿ ಖರೀದಿ ಮಾಡಲಾಗುವುದಿಲ್ಲ. ಅದು ಮಾರಾಟದ ವಸ್ತುವಾಗಿದ್ದರೆ ಪುಕ್ಕಲರೂ, ಶ್ರೀಮಂತರಾದಿಯಾಗಿ ಎಲ್ಲರೂ ಅದನ್ನು ಕೊಂಡು ಕೊಂಡು ತಮ್ಮ ಬಳಿ ಇರಿಸಿಕೊಳ್ಳುತ್ತಿದ್ದರು. ಬದುಕು ಗೆಲ್ಲಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪದ್ದಕ್ಕಜ್ಜಿಯ ಅಂತಾಕ್ಷರಿ: ವೃಂದಾ. ಸಂಗಮ

ನಮ್ಮ ಪದ್ದಕ್ಕಜ್ಜಿ ನಿಮಗೆಲ್ಲಾ ಗೊತ್ತೇ ಇದೆಯಲ್ವಾ ? ಗೊತ್ತಿದ್ದೇ ಇರತ್ತೆ. ಅವರು ಇಡೀ ಊರಲ್ಲೇ ವರ್ಲ್ಡ ಫೇಮಸ್ಸು. ಅವರು ಇವತ್ತು ತಿಂಡಿಗೆ ಒತ್ತು ಶಾವಿಗೆ ಮಾಡಿದ್ದರು. ಅಲ್ಲರೀ, ಅದೇನೋ ಅಂತಾಕ್ಷರಿ ಅಂದು ಬಿಟ್ಟು, ಇದೇನು ತಿಂಡಿ ಬಗ್ಗೆ ಹೇಳ್ತಿದೀರಲ್ಲ, ಅಂತಿದೀರಾ ? ಪೂರ್ತಿ ಕೇಳಿಸಕೊಳ್ಳಿ. ಅಲ್ಲೇ ಇರೋದು ಮಜಾ, ಒತ್ತು ಶಾವಿಗೆಯ ಖಾರದ ತಿಂಡಿ ಹಾಗೂ ಅದಕ್ಕೆ ಸಿಹಿಯಾಗಿ ಗಸಗಸೆ ಪಾಯ್ಸ. ನಮ್ಮ ರಾಯರು, ಅದೇ ನಮ್ಮ ಪದ್ದಕ್ಕಜ್ಜಿ ಗಂಡ, ನಿಮಗೆ ಗೊತ್ತೇ ಇದೆಯಲ್ಲ, ನಾನು ಬೇರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇದರರ್ಥವೇನು?: ಸಹನಾ ಪ್ರಸಾದ್

ನಾನು ರಜಿತಾ. ರಂಜಿತಾ ಹೆಸರು ಬರೆಯುವಾಗ ಈ ರೀತಿ ತಿರುಚಲ್ಪಟ್ಟು, ಈ ಹೆಸರು ಖಾಯಂ ಆಯಿತು. ವಯಸ್ಸು ೫೫. ಗಂಡ ಸದಾಶಿವ, ದೊಡ್ಡ ಕಂಪನಿಯಲ್ಲಿ ಕೈ ತುಂಬಾ ಕೆಲಸ ಹಾಗು ಕೈ ತುಂಬಾ ದುಡ್ಡೂ ಸಹ. ಮೊದಲಿಂದಲೂ ಮಿತಭಾಷಿ. ಈಗ ವಯಸ್ಸಾದಂತೆ ಮಹಾ ಮೌನಿ. ಬೆಳಗ್ಗೆ ಎದ್ದು ತನ್ನ ಪ್ರಾತಃವಿಧಿಗಳನ್ನು ತೀರಿಸಿ, ೨೦ ನಿಮಿಷ ವ್ಯಾಯಾಮ ಮಾಡಿ , ತಿಂಡಿ ತಿನ್ನುತ್ತಾ ಪೇಪರ್ ಓದಿ ಹೊರಡುವರು. ಹೊಸ ಮಾದರಿಯ ಕಾರು, ಅದಕ್ಕೊಬ್ಬ ಡ್ರೈವರ್ ಇದಾನೆ. ಗಂಡನ ದಿನಚರಿಯಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬದುಕಿದು ಸುಂದರ. . .: ಧೀರೇಂದ್ರ ನಾಗರಹಳ್ಳಿ.

‘ಅವನು’  ವಿಪರೀತವಾದ ಗೊಂದಲದಲ್ಲಿ ಮುಳುಗಿದ್ದ. ತನ್ನ ಸ್ನೇಹಿತನಾದ ‘ಇವನಿ’ಗೆ ಯಾವುದೋ ಒಂದು ಮಾಹಿತಿ ಕೊಡಲು ವಿನಂತಿಸಿದ್ದ. ಅದಕ್ಕೆ ಪ್ರತ್ಯತ್ತರವಾಗಿ ಇವನು,  ಅವನು ಕೇಳಿದ್ದ ಮಾಹಿತಿಯನ್ನೇನೋ  ಒದಗಿಸಿದ್ದ. ಅದನ್ನು ಯಥಾವತ್ತಾಗಿ ಸ್ವೀಕರಸೊವುದೋ ಅಥವಾ ತುಸುವಷ್ಟೇ ತೆಗೆದು ಕೊಂಡು ಉಳಿದದ್ದನ್ನು ಬಿಟ್ಟುಬಿಡಬೇಕೋ?. ಅವನು ಆ ಮಾಹಿತಿಯನ್ನು ಈ ತರಹದ  ಗುಮಾನಿಯಿಂದ ನೋಡುವುದಕ್ಕೆ ಕಾರಣ, ಆ ಮಾಹಿತಿಯಲ್ಲಿ ಇವನು ಕುಳಿತಿದ್ದ. ಇವನು ಕುಳಿತಿದ್ದ ಆ ಮಾಹಿತಿಯಲ್ಲಿ ಅವನಾಗಿರುವ ಇವನಿರಲಿಲ್ಲ. ಹೀಗಾಗಿ ಈ ಮಾಹಿತಿಯನ್ನು ಸ್ವೀಕರಿಸುವುದೋ ಅಥವಾ ಬೇಡವೂ ಎನ್ನುವ ಗೊಂದಲದಲ್ಲಿದ್ದ. ಆದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೊಸ ಚೈತನ್ಯ ನೀಡುವ ಹಬ್ಬ ಯುಗಾದಿ: ಡಾ. ಶಿವಕುಮಾರ ಎಸ್‌. ಮಾದಗುಂಡಿ

ಪ್ರಾಚೀನ ರೋಮನ್ ಕವಿ ಓವಿಡ್ ಒಮ್ಮೆ ಜ್ಯೋತಿಷಿ ಜಾನುಸ್ನನ್ನು ಕೇಳಿದ: ‘ಹೊಸ ವಷ೯ ಜನವರಿಯಿಂದಲೇ ಏಕೆ ಆರಂಭವಾಗಬೇಕು’? ಎಂದು. ಅದಕ್ಕೆ ಜ್ಯೋತಿಷಿ ಹೇಳಿದರೂ ಜನವರಿ ತಿಂಗಳಿನಲ್ಲಿ ಸೂರ್ಯ ಮಕರ ರಾಶಿ ಪ್ರವೇಶಿಸುತ್ತಾನೆ. ಅಂದಿನವರೆಗೆ ಹಿಮದಿಂದ ಮಂಕಾಗಿದ್ದ ಜಗತ್ತು ಅಂದಿನಿಂದ ಸ್ವಚ್ಛವಾಗಿ ಜನತೆಯಲ್ಲಿ ಹೊಸ ಉತ್ಸಾಹ, ನವೋದಯ ಆರಂಭವಾಗುವುದರಿಂದ ಅಂದಿನಿಂದ ಹೊಸವರ್ಷದ ಆರಂಭ ಎಂದು ಹೇಳಿದರು. ಆದರೆ, ಸಾಮಾನ್ಯವಾಗಿ ಹೊಸ ವರ್ಷ ಎಂದರೆ ಜಗತ್ತಿನಲ್ಲಿ ಜನವರಿ ಒಂದು ಎಂದು ನಾವೆಲ್ಲರೂ ಭಾವಿಸುತ್ತೇವೆ. ಆದರೆ, ಆ ದಿನ ಮನೆಯ ಗೋಡೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನದಲಿ ಮೂಡಿದ ಸಂಭ್ರಮದ ಯುಗಾದಿ: ಪಿ. ಕೆ. ಜೈನ್ ಚಪ್ಪರಿಕೆ.

ಭೂಮಿಯು ಸೂರ್ಯನ ಸುತ್ತ ಸುತ್ತುವಾಗ ಹವಮಾನದಲ್ಲಿ ಹಾಗೂ ನಿಸರ್ಗದಲ್ಲಿ ಉಂಟಾಗುವ ಬದಲಾವಣೆಗಳಿಗೆ ಋತುಗಳು ಎನ್ನುತ್ತೇವೆ. ಭಾರತೀಯರ ಪದ್ಧತಿಯಲ್ಲಿ 6 ಋತುಗಳಿದ್ದು ವಸಂತ ಋತುವು ಹಿಂದೂ ವರ್ಷದ ಆರಂಭದ ಋತುವಾಗಿದೆ. ಒಂದೊಂದು ಋತುವಿಗೂ ಎರಡು ಮಾಸಗಳಿದ್ದು ಚೈತ್ರ ಮತ್ತು ವೈಶಾಖ ಮಾಸಗಳು ವಸಂತ ಋತುವಿನಡಿಯಲ್ಲಿ ಬರುತ್ತವೆ. ಹೀಗೆ ಚೈತ್ರ ಮಾಸ ಶುಕ್ಲ ಪಕ್ಷದಲ್ಲಿ ಬರುವ ಯುಗಾದಿಯನ್ನು ಹೊಸ ವರ್ಷವೆಂದು ಆಚರಿಸುತ್ತೇವೆ. ಯುಗಾದಿಯು ದಕ್ಷಿಣ ಬಾರತದ ಜನರಿಗೆ ವರ್ಷದ ಮೊದಲ ಹಬ್ಬವಾಗಿ ಉತ್ತರ ಭಾರತದವರಿಗೆ ಇದು ಹೋಳಿಯ ನಂತರ ಬರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹರಕೆ ಸಂದಾಯ: ಕೃಷ್ಣವೇಣಿ ಕಿದೂರು

ನಮ್ಮ ತುಳು ಭಾಷೆಯಲ್ಲಿ ಒಂದು ಮಾತಿದೆ. ಯಾರಿಗಾದರೂ ಒಂದು ಕೆಲಸ ಒಪ್ಪಿಸಿದಾಗ ಅಸಡ್ಡೆಯಿಂದ ಅಥವಾ ಉಡಾಫೆಯಿಂದ ಅರೆಬರೆ ಮಾಡಿದ್ದು ಕಂಡಾಗ ’ ಉಂದ್ ಎಂಚಿನ? ಪರಕೆ ಸಂದಾಯನಾ” (ಏನಿದು ? ಹರಕೆ ಸಂದಾಯವಾ ಅಂತ ಕೇಳುವುದು. ಕನ್ನಡದಲ್ಲಿಯೂ ಅದೇ ಅರ್ಥದ ಮಾತು ಉಂಟು. ಮಾಡುವ ಕಾರ್ಯವನ್ನು ಔದಾಸಿನ್ಯದಿಂದ ಅರ್ಧಮರ್ಧ ಮಾಡಿದಾಗ ಅದಕ್ಕೆ ಹೆಸರೇ’’ ಹರಕೆ ಸಂದಾಯವಾ” ಅಂತ ಸಣ್ಣಕ್ಕೆ ಗದರಿಸುವುದು. ಒಪ್ಪಿಸಿದ ಕೆಲಸ ಒಪ್ಪವಾಗಿ ಮಾಡಿದಾಗ ಅಂಥ ಮಾತಿಗಲ್ಲಿ ಎಡೆಯಿಲ್ಲ. ಬದಲಿಗೆ ಮೆಚ್ಚುಗೆ, ಪ್ರಶಂಸೆ , ಅಭಿಮಾನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಸವ ಕಾಲ….: ಆಶಾಜಗದೀಶ್

  ಮನೆ ಮುಂದಿನ ಮಲ್ಲಿಗೆ ತನ್ನ ಎಂದಿನ ತನ್ಮಯತೆಯಲ್ಲಿ ತಾರಸಿಯ ಮೇಲೆ ಧ್ಯಾನಸ್ಥವಾಗಿತ್ತು. ಮಿಸುಗಾಡುವ ಒಡಲು ಅದಕ್ಕೊಂದು ಗರ್ಭಿಣಿಯ ಕಳೆ ತಂದಿತ್ತಿತ್ತು. ಅದೂ ತೀರಾ ಇತ್ತೀಚಿನಿಂದ ಹೀಗೆ….. ಅದು ನವೆಂಬರ್ ಡಿಸೆಂಬರಿನ ಸಂದರ್ಭ… ಗುಬ್ಬಿಯೊಂದು ತನ್ನ ಸಂಗಾತಿಯೊಂದಿಗೆ ಬಾಣಂತನಕ್ಕಾಗಿ ಬಂದಿತ್ತು… ಹೀಗೆ ಹಕ್ಕಿಗಳು ಮೇಲಿಂದ ಮೇಲೆ ನಮ್ಮ ತೋಟವಲ್ಲದ ಪುಟ್ಟ ತೋಟಕ್ಕೆ ಬರುವುದು ಮಾಮೂಲೇ ಇತ್ತಾದರೂ ಪ್ರತಿ ಬಾರಿಯೂ ಹೋಸದೆಂಬಂತಹ ಉತ್ಸಾಹ ಮಾತ್ರ ನಮ್ಮನ್ನು ಅದೇಕೆ ತುಂಬುತ್ತಿತ್ತೋ ಗೊತ್ತಿಲ್ಲ… ಬಹುಶಃ ಹುಟ್ಟು ಎನ್ನುವುದು ಸಕಲ ಜೀವರಾಶಿಯೊಳಗೆ ಪ್ರವೇಶಿಸುವಾಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆ…?: ರಮೇಶ್ ವಿ

ಆಸೆ ಯಾರಿಗಿರಲ್ಲ  ಹೇಳಿ! ಪ್ರತಿಯೊಬ್ಬ ಮನುಷ್ಯನಿಗೂ ಅವನೆದೆಯಾದಂತ ಆಸೆ ಆಕಾಂಕ್ಷೆ ಇರುತ್ತೆ, ಅವನ ಆಸೆಯೇ ನಾಳೆಗೆ ಪ್ರೇರಣೆ, ಭರವಸೆ ಹಾಗು ಮುನ್ನುಡಿ. ಆದ್ರೆ ಅದು ದುಃಖದ ಮೂಲವು ಹೌದು. ನನಗು ನನ್ನ ತಂದೆ ಉಳಿಸಿಕೋ ಬೇಕೆಂಬ ಮಹದಾಸೆ ಇತ್ತು ಆದ್ರೆ ಕಡೆಯಲ್ಲಿ ನಮ್ಮಾಸೆ ಜೊತೆ ಅಪ್ಪನಿಗೂ ಎಳ್ಳು ನೀರು ಬಿತ್ತಂತಾಯಿತು! ನನ್ನ ಅನುಭವದ ಮಾತು…! ಮಾರ್ಚ್ ೨೦೧೭ ಅಪ್ಪನಿಗೆ ೬೦ ವಸಂತ ತುಂಬಿದಾಗ ಷಷ್ಠಿಪೂರ್ತಿ ಪೂಜೆ ಮಾಡಲಾಗಲಿಲ್ಲ, ಈಗ ೭೦ ನೇ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಷಷ್ಠಿಪೂರ್ತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಶೋದೆ: ಪ್ರೇಮಾ ಟಿ ಎಂ ಆರ್

ಲೇಡೀಸ್ ಕ್ಲಬ್ ನಲ್ಲಿ ನವರಾತ್ರಿ ಉತ್ಸವ. ಕೈಯ್ಯಲ್ಲಿ ಪೂಜಾ ಸಾಮಗ್ರಿ ಹಿಡಿದು ಹಿಡಿದು ಗಡಿಬಿಡಿಯಲ್ಲೇ ಹೊರಟಿದ್ದಳು ಕವನ. ಹಿಂದಿಂದ ಬಂದ ಬೈಕೊಂದು ಅವಳನ್ನು ದಾಟಿಕೊಂಡು ನಾಲ್ಕು ಮಾರು ಮುಂದೆ ನಿಂತಿತು. ಬೈಕ್ ಸವಾರ ಹೆಲ್ ಮೆಟ್ ತೆಗೆದು ಸಣ್ಣಗೆ ನಕ್ಕರು. ಈ ವ್ಯಕ್ತಿಯನ್ಬ ಎಲ್ಲೋ ನೋಡಿದ ನೆನಪು ಎಲ್ಲಿ ? ತಲೆಕೆರೆದುಕೊಂಡಳು ಕವನ. ಓ ಹೌದಲ್ವಾ ತಾನು ಗೇಟಿಗೆ ಬೀಗ ಸಿಕ್ಕಿಸುವಾಗ ಎದುರುಗಡೆ ಮನೆಯ ಅಂಗಳದಲ್ಲಿ ನಿಂತಿದ್ದರು ಆ ವ್ಯಕ್ತಿ . ಕಳೆದ ವಾರವಷ್ಟೇ ಆ ಮನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ