ಯುಗಾದಿ ವಿಶೇಷಾಂಕಕ್ಕೆ ಲೇಖನ ಆಹ್ವಾನ

ಪ್ರಿಯ ಪಂಜುವಿನ ಓದುಗರೇ ಹಾಗು ಬರಹಗಾರರೇ, ನಿಮ್ಮೆಲ್ಲರ ಅಭಿಮಾನದಿಂದ ಪಂಜು ಕಳೆದ ತಿಂಗಳು ಜನವರಿ 21 ರಂದು ಐದು ವರ್ಷ ತುಂಬಿ ಆರನೇ ವರ್ಷಕ್ಕೆ ಕಾಲಿಟ್ಟಿದೆ. ಹತ್ತಾರು ವೆಬ್ ತಾಣಗಳ ನಡುವೆಯೂ ತನ್ನದೇ ಆದ ಓದುಗ ಬಳಗವನ್ನು ಹೊಂದಿರುವ ಪಂಜು, ತಿಂಗಳಿಗೆ ಕಡಿಮೆ ಎಂದರೂ ಎರಡೂವರೆ ಲಕ್ಷ ಹಿಟ್ಸ್ ಜೊತೆಗೆ ಸುಮಾರು ಏಳೂವರೆ ಸಾವಿರ ಓದುಗರು ಪಂಜುಗೆ ಭೇಟಿ ನೀಡುತ್ತಾರೆ ಎಂಬುದು 2017ರ ಹೈಲೈಟ್ಸ್.. ಪಂಜು ಆಗಾಗ ವಿಶೇಷ ಸಂಚಿಕೆಗಳನ್ನು ಹೊರ ತರುವುದು ವಾಡಿಕೆ. ಈ ವರ್ಷದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಪಯಣ  ನಿರರ್ಥಕ ಹಾದಿಯಲ್ಲಿ ಅರ್ಥಹೀನ ಹಗಳಿರುಳುಗಳ ಸೆಳುವಲ್ಲಿ ಯಾನ ಹೊರಟ ದೋಣಿಯ ಪಯಣಿಗ ತಲುಪಬೇಕೆನ್ನುವ ಗಮ್ಯ ಇಲ್ಲದಂತೆನಿಸಿ ಬಿಟ್ಟ ಗಾಳಿಯ ದಿಕ್ಕಿಗೆ ಹೊಮ್ಮುವ ಅಲೆಗಳ ನಾಟ್ಯದೊಟ್ಟಿಗೆ ಸಾಗುವ ಹುಚ್ಚು ಪಯಣಿಗ ಬದುಕಿನ ನಾವೆ ಕಾಲದ ಶರಧಿಯಲ್ಲಿ ಅಂಡಲೆಯುತಲೇ ಇದೆ ಇಲ್ಲಿ ಸುಳ್ಳುಗಳನ್ನೇ ಸತ್ಯವೆಂದುಕೊಂಡ ಸಹಯಾತ್ರಿಕರ ಹಿಂಡೇ ಇದೆ ಸ್ವತಃ ವಂಚಿಸುತ್ತಾ ಸಾತ್ವಿಕತೆಯ ಭೋದಿಸುವ ತಂಡೋಪ ತಂಡವೇ ಇದೆ ಕಾಲದ ಸಾಗರ ಮಾತ್ರ ತನ್ನೊಡಲೊಳಗೆ ಎಲ್ಲವನ್ನೂ ಹುದುಗಿಸಿಕೊಳ್ಳುತ್ತ ಉಕ್ಕೇರುತ್ತಲೇ ಇದೆ ತಲೆತಲಾಂತರಗಳಿಂದ ಹಲವು ಬಾರಿ ಒಡಲೊಳಗಿನ ಕಿಚ್ಚನ್ನೆಲ್ಲ ಸುನಾಮಿಯಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೀವ ಜೀವನದ ಭಿನ್ನತೆಯೊಳಗಿನ ಸಂಭ್ರಮ: ಪಿ. ಕೆ. ಜೈನ್ ಚಪ್ಪರಿಕೆ

ಅಂದು ಪ್ರಕೃತಿಯು ತನ್ನ ವಸಂತಕ್ಕೆ ಕಾಲಿಟ್ಟ ಸಮಯ. ಆ ತಾಯಿಯು ತನ್ನೆಲ್ಲ ನೋವುಗಳನ್ನು ಮರೆತು ತನ್ನ ಸೌಂದರ್ಯವನ್ನು ಇಮ್ಮಡಿಗೊಳಿಸಿಕೊಳ್ಳುತ್ತಲ್ಲಿದ್ದಳು. ವಸಂತ ಎಂಬ ಪದವೇ ಹಾಗೆ. ಅವನಿಗೆ ಎಣೆ ಯಾರು? ಯಾರನ್ನಾದರೂ ಬಿಟ್ಟಿಹನೆ? ಸೃಷ್ಟಿಯ ರುವಾರಿಯಾದ ಬ್ರಹ್ಮನನ್ನೇ ಬಿಡದ ಮಾರ…ಪ್ರಕೃತಿಯನ್ನು ಬಿಡಬಲ್ಲನೆ? ಹಾಗೆಯೇ ವಸಂತಕ್ಕೆ ಕಾಲಿಟ್ಟ ಭೂಮಿ ತಾಯಿಯ ಜೊತೆ ಅನೋನ್ಯದಿಂದ ಜೀವಿಸುತ್ತಿದ್ದ ಪ್ರಾಣಿ ಪಕ್ಷಿಗಳು, ಗಿಡ ಮರಗಳಿಗೂ ಅದರ ಅನುಭವ ಆಗಬೇಕಲ್ಲವೇ… ಗಿಡ ಮರಗಳು ಮೈ ಕೊಡಗಿ ಚಿಗುರೊಡೆದು ಹಚ್ಚ ಹಸುರಿನಿಂದ ಕಂಗೊಳಿಸುತ್ತಿದ್ದವು…ಅವುಗಳನ್ನು ಅವಲಂಬಿಸಿದ ಪ್ರಾಣಿ ಪಕ್ಷಿಗಳಲ್ಲೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

e – ಸಂಭಾಷಣೆ !: ಸಂತೋಷ್ ಮೂಲಿಮನಿ

ಇಬ್ಬರೂ ತಮ್ಮ ತಮ್ಮ ಲ್ಯಾಪ್ಟಾಪ್ ಮುಂದೆ ಕುಳಿತಿದ್ದಾರೆ, ಇಬ್ಬರ ತೆರೆಯ ಮೇಲೂ ಫೇಸ್ಬುಕ್ ನ ಪರದೆ ಇಣುಕಿ ಇವರ ಮುಖವನ್ನ ಆವರಿಸಿಕೊಂಡಿದೆ. ಇವನು ತನ್ನ ಫೇಸ್ಬುಕ್ ಪ್ರೋಪೈಲಿನಲ್ಲಿ ಈಗ ತಾನೆ ತನ್ನ ಬ್ಲಾಗ್ ನಲ್ಲಿ ಪ್ರಕಟಿಸಿದ ಲೇಖನದ ಕೊಂಡಿಯನ್ನು ಎಲ್ಲರೊಂದಿಗೆ ಹಂಚುತ್ತಲಿದ್ದ. ಅಪ್ದೇಟ್ ಬಟನ್ ಒತ್ತಿದ ತಕ್ಷಣ, ‘ ಸುಮಿ, ಆಯ್ತು ನೋಡು ‘ ಎಂದು ಸ್ವಲ್ಪ ದೂರದಲ್ಲೆ ಕೂತಿದ್ದ ಹೆಂಡತಿಗೆ ಉಸಿರಿದ್ದ. ಅವಳು ಆಗಲೆ ಮೆಚ್ಚಿದ್ದ ಗಂಡನ ಪೊಸ್ಟ್ ನ್ನ ಲೈಕ್ ಮಾಡಿದಳು. ಹೀಗೆ ಅವನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾಣಸುದ್ದಿ 8: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ ಇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮುರಿದ ಟೊಂಗೆಯ ಚಿಗುರು ಪುಸ್ತಕಾವಲೋಕನ: ಸುರೇಶ ಎಲ್.ರಾಜಮಾನೆ

ಕವನಸಂಕಲನ; “ಮುರಿದ ಟೊಂಗೆಯ ಚಿಗುರು” ಲೇಖಕರು; ಸೂಗುರೇಶ ಹಿರೇಮಠ(ಸುಹಿ) ಪುಸ್ತಕಾವಲೋಕನ; ಸುರೇಶ ಎಲ್.ರಾಜಮಾನೆ. ಚಿಗುರಿನ ಕವಿತೆಗಳೊಂದಿಗೆ ಮಾತಿಗಿಳಿದಾಗ…. ಇತ್ತೀಚಿಗೆ ತಾಂತ್ರಿಕ ಜಗತ್ತು ತನ್ನದೇ ಆದ ವೇಗ ಪಡೆದುಕೊಳ್ಳುತ್ತಿರುವದು ನಮ್ಮೆಲ್ಲರ ಕಣ್ಮುಂದಿರುವ ಸತ್ಯ. ಇದರ ಹಿನ್ನೆಲೆಯಲ್ಲಿ ಮುಖಪುಟದ ಮೂಲಕ ಸಾಹಿತ್ಯ ಲೋಕಕ್ಕೆ ಹೊಸ ಹೊಸ ಪ್ರತಿಭೆಗಳು ಲಗ್ಗೆ ಇಡುತ್ತಿವೆ ಎಲ್ಲರ ಮನಸನ್ನು ಆವರಿಸುತ್ತಿವೆ. ಹೀಗೆ ಅಂತರ್ಜಾಲದ ಮೂಲಕ ನನ್ನ ಅಂತರಂಗವನ್ನು ಸೇರಿಕೊಂಡ ಗೆಳೆಯ ಸೂಗುರೇಶ ಹಿರೇಮಠ ಅದರಾಚೆಗೂ ಭಾವನಾತ್ಮಕ ಬದುಕಿನ ದಾರಿಯಲಿ ಬದುಕಿರುವ ಒಬ್ಬ ಭಾವುಕ ಜೀವಿ. ಕವಿತೆಗಳಿಂದಲೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವರ್ಣಮಯ ಬದುಕು ಆನಂದಮಯ: ಜಯಶ್ರೀ.ಜೆ. ಅಬ್ಬಿಗೇರಿ

ಮುದ್ದು ಕಂದಮ್ಮ ರಚ್ಚೆ ಹಿಡಿದು ಅಳುವಾಗ ಅದರ ಕೈಯಲ್ಲಿ ಬಣ್ಣದ ಗೊಂಬೆಯನ್ನು ಕೊಟ್ಟರೆ ಸಾಕು ತಕ್ಷಣಕ್ಕೆ ಅಳು ನಿಲ್ಲಿಸಿ ನಗು ಚೆಲ್ಲುತ್ತದೆ. ಬಣ್ಣದ ಆಕರ್ಷಣೆಯೇ ಅಂಥದು. ಬಣ್ಣವಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ ಇಲ್ಲ. ಎನ್ನುವಷ್ಟರ ಮಟ್ಟಿಗೆ ಬಣ್ಣ ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಬಣ್ಣಗಳು ತಮ್ಮ ಪ್ರಭಾವಲಯವನ್ನು ಅಷ್ಟೊಂದು ವ್ಯಾಪಕವಾಗಿ ವಿಸ್ತರಿಸಿಕೊಂಡಿವೆ. ದಿನಗಳೆದಂತೆ ನಾವೂ ಅವುಗಳ ಮೋಡಿಗೆ ಹೆಚ್ಚು ಹೆಚ್ಚು ಬೀಳಿತ್ತಲೇ ಇದ್ದೇವೆ.ನಮ್ಮಲ್ಲಿ ಬಣ್ಣಗಳಿಲ್ಲದೇ ಹಬ್ಬದ ರಂಗು ಹೆಚ್ಚುವುದೇ ಇಲ್ಲ. ನವರಾತ್ರಿಯಲ್ಲಿ ಶಕ್ತಿ ದೇವತೆಗೆ ಹಲವಾರು ರತ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆರೆಗೆ ಹಾರ ಭಾಗ 2: ಅಖಿಲೇಶ್ ಚಿಪ್ಪಳಿ

ಇಲ್ಲಿಯವರೆಗೆ [ಹಿಂದಿನ ವಾರ: ಉದ್ಘಾಟನೆಯ ಮಾರನೇ ದಿನವೇ ವಾಟ್ಸಪ್ ಗುಂಪು ಚುರುಕಿನಿಂದ ಕೆಲಸ ಮಾಡಿತು. ಸಲಹೆಗಳು ಹರಿದು ಬಂದವು. ಮತ್ತೂ ಮತ್ತೂ ಮರೆಯಬಾರದ ಸೂತ್ರವೊಂದಿದೆ. ಅದೇ ಸೂತ್ರವನ್ನು ಗಮನಿಸುತ್ತಲೇ ಇರಬೇಕು. ಅದೇ ಉತ್ಸಾಹ-ಸಲಹೆ-ಸೂಚನೆಗಳು ಕೆರೆಯ ಹೂಳನ್ನು ಎತ್ತಲಾರವು ಎಂಬುದೇ ಈ ಸೂತ್ರ. ಬಂಗಾರಮ್ಮನ ಕೆರೆಯ 600 ವರ್ಷಗಳ ಹೂಳನ್ನು ತೆಗೆಯಲು ಹಿಟಾಚಿ-ಟಿಪ್ಪರ್‍ಗಳು ಬೇಕು. ಇವಕ್ಕೆ ಮತ್ತೆ ಹಣಕಾಸು ಬೇಕು. ಅಗಾಧ ಪ್ರಮಾಣದ ಹೂಳನ್ನು ಹೊರಸಾಗಿಸಲು ಅಷ್ಟೇ ಪ್ರಮಾಣದ ಹಣಕಾಸು ಬೇಕು. ಕೆಲಸ ಶುರು ಮಾಡಿದ ವಾರದಲ್ಲೇ ಇಂಜಿನಿಯರ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಡತನ: ಅಣ್ಣಪ್ಪ ಆಚಾರ್ಯ

ಸುತ್ತಲೊಮ್ಮೆ ನೋಡಿದರೆ ಗವ್ವೆನ್ನುವ, ಬೆಳಕನ್ನೇ ನುಂಗಿ ನೀರ್ ಕುಡಿಯುವ, ನಿಂತಲ್ಲೇ ಉಚ್ಚೆ ಹುಯ್ಯಿಕೊಳ್ಳುವ ಕತ್ತಲು; ಕಗ್ಗತ್ತಲು. ಅಮಾವಾಸ್ಯೆಯಾದ್ದರಿಂದ ನರಮನುಷ್ಯರು ಓಡಾಡಿದ ವಾಸನೆಯೂ ಬರುತ್ತಿಲ್ಲ. ಒಂದೆರಡು ನಾಯಿ-ಪಕ್ಕಿಗಳ ಕೂಗು, ನರಿಗಳ ಊಳಿಡುವಿಕೆ ಬಿಟ್ಟರೆ ಉಳಿದಂತೆ ಇಡೀ ಊರಿಗೆ ಊರೇ ಮೌನವಾಗಿದೆ. ಜಗವೆಲ್ಲ ಬೇಕಾಗಿದ್ದು, ಬೇಡವಾಗಿದ್ದನ್ನೆಲ್ಲ ತಿಂದು, ಬಕ್ಕ ಬೋರಲಾಗಿ ಮಲಗಿದೆ. ಆದರೆ ಈ ಗುಡಿಸಲಿನಲ್ಲಿ..?! ಆಗಲೋ, ಈಗಲೋ ಆರಿಹೋಗುವಂತಹ ಚಿಮಣಿ ಬುಡ್ಡಿಯನ್ನು ಎದುರಿಗಿಟ್ಟುಕೊಂಡು ಬಾಗಿಲ ಬಳಿ ಅವ್ವ ಕುಳಿತಿದ್ದಾಳೆ. ಮಕ್ಕಳೆಲ್ಲವೂ ‘ಪಿಳಿ-ಪಿಳಿ’ ಕಣ್ಣ್ ಬಿಡುತ್ತಾ, ತೆಂಗಿನ ಗರಿಯ ಮಾಡನ್ನೇ(ಛಾವಣಿ) … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೇಮ ಪತ್ರ ತಂದ ಪೇಚು: ವೈ. ಬಿ. ಕಡಕೋಳ

ಆ ದಿನ ಎಂದಿನಂತಿರಲಿಲ್ಲ ವಿಜಯ್ ಗರಬಡಿದವನಂತೆ ಕುಳಿತಿದ್ದ. “ಯಾಕೋ ಹೀಗೆ ಕುಳಿತಿರುವೆ ಏನಾಗಿದೆ ನಿನಗೆ? “ಎಂದ ಅಮಿತ್. “ಮಾಡೋದೆಲ್ಲ ಮಾಡಿಬಿಟ್ಟು ಏನೂ ಗೊತ್ತಿಲ್ಲ ಅನ್ನುವಂತೆ ಇದ್ದೀಯಲ್ಲ ನೀನೂ ಒಬ್ಬ ಗೆಳೆಯನಾ? “ಎಂದ. “ಯಾಕಪ್ಪಾ ಅಂಥಾ ತಪ್ಪು ನನ್ನಿಂದ ಆಗಿದ್ದಾದರೂ ಏನು? ” ಎಂದು ಅಮಿತ್ ಕುತೂಹಲದಿಂದ ಪ್ರಶ್ನಿಸಲು “ನನ್ನ ಭಾವಿ ಪತ್ನಿಗೆ ಪತ್ರ ಬರೆದಿದ್ದು  ಎಡವಟ್ಟಾಗಿದೆ ಏನು ಮಾಡಲಿ? ” ಎಂದ ಸಪ್ಪೆ ಮೋರೆಯಿಂದ, “ಅದಕ್ಯ್ಕಾಕೋ ಬೇಜಾರು? ” ಎಂದ ಅಮಿತ್ . ಆಗ ವಿಜಯ್ “ನೀನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ತ್ರೀ ವ್ಯಕ್ತಿತ್ವ ವಿಕಸನದ ಅಡೆತಡೆಗಳು ವಸ್ತ್ರ ಸಂಹಿತೆ- ಗೋಷಾ ಪದ್ಧತಿ: ನಾಗರೇಖಾ ಗಾಂವಕರ

ಬದಲಾವಣೆಯ ಕಾಲಘಟ್ಟದಲ್ಲಿ ಹೆಣ್ಣು ಮತ್ತಾಕೆಯ ಸ್ಥಿತಿಗತಿಗಳ ಬಗ್ಗೆ ಸಮಾನತೆಯ ಬಗ್ಗೆ ಚರ್ಚಿಸುವ ಅದಕ್ಕಾಗಿ ಹೋರಾಟ ನಡೆಸುತ್ತಿರುವ ಉಚ್ಚ್ರಾಯ ಕಾಲವಿದು. ಆದರೆ ಅದರೊಂದಿಗೆ ಆಕೆಯ ಮೇಲಾಗುತ್ತಿರುವ ದೌರ್ಜನ್ಯಗಳ ಪ್ರಮಾಣಗಳೂ ಅಧಿಕವಾಗುತ್ತಿರುವ ಸಂದರ್ಭದಲ್ಲಿ ಧರ್ಮ ಕಾಲ ದೇಶಗಳ ವೈತ್ಯಾಸವಿರದೇ ಇಡೀ ಜಗತ್ತಿನಾದ್ಯಂತ ಈ ಶೋಷಣೆಗಳು ನಡೆಯುತ್ತಲೇ ಇರುವುದು ಕೂಡಾ ದಿನನಿತ್ಯದ ಸಂಗತಿ. ಸ್ತ್ರೀ ಶೋಷಣೆ ಎಂಬ ವಿಚಾರ ಬರಿಯ ಭಾರತದ ಮತ್ತು ಕೇವಲ ಹಿಂದೂ ಧರ್ಮದ ಆಚರಣೆಗಳಲ್ಲಿ ಮಾತ್ರ ಸೀಮಿತವಾಗಿರದೇ ಅದು ವಿಶ್ವವ್ಯಾಪಿಯಾದ ವಿಚಾರ. ಮಹಿಳಾ ಸ್ವಾತಂತ್ರ್ಯಕ್ಕೆ ಆಕೆಯ ಸರ್ವತೋಮುಖ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಲೋಕದೊಳಗೆ ಹುಟ್ಟಿದ ಬಳಿಕ.. ಕೋಪವತಾಳದೆ ಸಮಾಧಾನಿಯಾಗಿರಬೇಕು: ಕೆ ಟಿ ಸೇಮಶೇಖರ ಹೊಳಲ್ಕೆರೆ!

ಅರಿಷಡ್ವರ್ಗಗಳು ಮಾನವನನ್ನು ಉತ್ತಮನಾಗಲಿಕ್ಕೆ ಬಿಡುವುದಿಲ್ಲ. ಉತ್ತಮನಾಗಿ ರೂಪಿಸದಿದ್ದರೂ ಪರವಾಗಿಲ್ಲ, ದುಷ್ಟನಾಗುವಂತೆ ಮಾಡುತ್ತವೆ! ಅರಿಷಡ್ವರ್ಗಗಳಲ್ಲಿ ಕೋಪವೂ ಒಂದು. ಕೋಪ ಬೆಂಕಿಯಿದ್ದಂತೆ. ಕೋಪಕ್ಕೆ ತುತ್ತಾದವರ ಮೇಲೆ ದುಷ್ಪರಿಣಾಮ ಬೀರುತ್ತದಲ್ಲದೆ ಕೋಪಗೊಂಡವರನ್ನೇ ಸುಟ್ಟುಬಿಡುತ್ತದೆ. ಆದುನಿಕ ಬದುಕಿನಲ್ಲಿ ಸಮಾಧಾನವಾಗಿರುವುದು ಕಷ್ಟ. ಬೆಳಿಗ್ಗೆ ಹಾಸಿಗೆಯಿಂದ ಏಳುತ್ತಿದ್ದಂತೆ ಅಯ್ಯೋ! ಟೈಂ ಆಯ್ತು! ಅಯ್ಯೋ! ಟೈಂ ಆಯ್ತು! ನಿತ್ಯ ಕರ್ಮ ತೀರಿಸಬೇಕು, ಸ್ನಾನ ಇಲ್ಲ! ಪೂಜೆ ಇಲ್ಲ! ಆ ಕೆಲಸ ಆಗಿಲ್ಲ, ಈ ಕೆಲಸ ಆಗಿಲ್ಲ. ಎಲ್ಲಾ ಮುಗಿಸಿ ಹೊರಡುವುದು ಎಷ್ಟು ಹೊತ್ತಾಗುತ್ತದೋ ಏನೋ? ಎಂದು ಅವಸರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಮಂಗ ಮತ್ತು ಬೆಕ್ಕುಗಳು ಇಬ್ಬರ ಜಗಳದಿ ಯಾರಿಗೆ ಲಾಭವು ಬನ್ನಿರಿ ನಾವು ತಿಳಿಯೋಣ ನೀತಿಯ ಸಾರುವ ಕಥೆಯನು ಕೇಳಿ ಜೀವನ ಸುಂದರಗೊಳಿಸೋಣ|| ಸುಂದರವಾದ ಊರಿನಲಿ ಬೆಕ್ಕುಗಳೆರಡು ಜೊತೆಯಲ್ಲಿ ಆಡುತಲಿದ್ದವು ಅಲೆಯುತಲಿದ್ದವು ಬದುಕುತಲಿದ್ದವು ಸಂತಸದಿ|| ಹಸಿವನು ನೀಗಲು ಒಂದುದಿನ ಬೆಕ್ಕುಗಳಿಗೆ ಅದು ಸುದಿನ ಪ್ರತಿಮನೆಯಲ್ಲೂ ಬೆಣ್ಣೆಕದ್ದವು ಮರದಡಿ ಬಂದು ಸೇರಿದವು|| ಬೆಣ್ಣೆಯ ಆಸೆ ಹೆಚ್ಚಾಯ್ತು ಇಬ್ಬರ ಜಗಳವು ಶುರುವಾಯ್ತು ನನಗೂ ಜಾಸ್ತಿ ನಿನಗೂ ಜಾಸ್ತಿ ಬೆಣ್ಣೆಯು ಗೆಳೆತನ ಕೆಡಿಸಿತ್ತು|| ಮರದಲಿ ಕುಳಿತಿರೊ ಮಂಗಣ್ಣ ನೋಡುತಲಿದ್ದನು ಜಗಳವನ್ನ ಉಪಾಯ ಹೂಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸನ್ಮಾನಗಳು ಸಣ್ಮಾನಗಳಾಗಬಾರದಷ್ಟೇ..: ಪಿ.ಎಸ್. ಅಮರದೀಪ್

ಸಾಧನೆಗೆ ಹಲವು ಮುಖಗಳಿರುತ್ತವೆ. ಸಾಧಕರಿಗೆ ನೂರು ಯೋಚನೆಗಳಿರುತ್ತವೆ. ಒಂದು ಯೋಚನೆ ನೂರು ಸಾಧಕರನ್ನು ಸೃಷ್ಟಿಸಬಲ್ಲದು. ಅಂತಹ ಸಾಧನೆಗಳನ್ನು ಯಾರಾದರೂ ಕೇವಲ ಪ್ರಚಾರಕ್ಕಾಗಿ ಮಾಡಿರುವುದಿಲ್ಲ. ಒಂದೊಳ್ಳೆ ಉದ್ದೇಶವಿಟ್ಟುಕೊಂಡೇ ಪರಿಶ್ರಮದ ಹಾದಿ ತುಳಿದಿರುತ್ತಾರೆ. ನಾವು ಇಲ್ಲಿಯವರೆಗೂ ಕಣ್ಣೆದುರಿಗೆ, ಸುದ್ದಿ ಮೂಲಕ, ದೃಶ್ಯ ಮಾಧ್ಯಮದ ಮೂಲಕ ಸಾಧಕರನ್ನು ಗುರುತಿಸುವುದನ್ನು ನೋಡಿದ್ದೇವೆ. ಖುಷಿ ಪಟ್ಟಿದ್ದೇವೆ, ಹರಸಿದ್ದೇವೆ. ಕಿರಿಯರಿಗೆ ಮಾದರಿಯಾಗಿ ತೋರಿಸಿದ್ದೇವೆ. ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದವರ ಸಾಧಕರ ಪಟ್ಟಿಗೇನೂ ಕಮ್ಮಿಯಿಲ್ಲ. ಅಂತೆಯೇ ಅಂಥ ಸಾಧಕರ ಕುರಿತು ಬೆಳಕು ಚೆಲ್ಲುವ, ಸಾಧನೆಯ ಹಿಂದಿನ ಶ್ರಮದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾಣಸುದ್ದಿ 7: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ ಇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೆಣ್ಣು: ಸಹನಾ ಪ್ರಸಾದ್

ರಾತ್ರಿ ಎಲ್ಲ ಮಧುಸೂದನನಿಗೆ ನಿದ್ರೆ ಇಲ್ಲ. ಆ ಕಡೆ, ಈ ಕಡೆ ಹೊರಳಾಡಿ, ಎದ್ದು ಕುಳಿತು, ಮತ್ತೆ ಮಲಗಿ, ಹೀಗೆ ಅರ್ಧ ರಾತ್ರಿ ಕಳೆಯಿತು. ಸಧ್ಯ, ಹೆ0ಡತಿಗೆ ಬೇರೆ ಕೋಣೆಯಲ್ಲಿ ಮಲಗಿ ಅಭ್ಯಾಸ. ಇಲ್ಲದಿದ್ದರೆ ಇಷ್ಟು ಹೊತ್ತಿಗೆ ರ0ಪ ಮಾಡಿ ಬಿಟ್ಟಿರುತ್ತಿದ್ದಳು. ಅಬ್ಬಬ್ಬಾ, ರಾತ್ರಿಯೆಲ್ಲ ನಿಮ್ಮ ಗೊರಕೆ ಇಲ್ಲಾ ಹೊರಳಾಟ, ನನ್ಕೈಲಿ ಆಗುವುದಿಲ್ಲಪ್ಪ. ಆರಾಮವಾಗಿ ಹೊದ್ದು ಮಲಗಲು ನಿಮಗೇನು ಕಷ್ಟ? ಹೇಗು ನನಗೆ ಚಿಕ್ಕ ವಯಸ್ಸಿನಿ0ದ ಆಸೆ, ನನ್ನದೇ ರೂಮು ಇರಬೇಕೆ0ದು, ರಮ್ಯಳ ರೂಮು ಖಾಲಿಯಾಗಿದೆಯಲ್ಲ, ಅಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆರೆಗೆ ಹಾರ (ಭಾಗ 1): ಅಖಿಲೇಶ್ ಚಿಪ್ಪಳಿ

ಎಲ್ಲಾ ನಾಗರೀಕತೆಗಳು ಹುಟ್ಟಿ ವಿಕಾಸವಾಗಿದ್ದು ನದಿದಂಡೆಗುಂಟ ಎಂದು ಇತಿಹಾಸ ಹೇಳುತ್ತದೆ. ಗಾಳಿಯಲ್ಲಿರುವ ಆಮ್ಲಜನಕ ಪುಕ್ಕಟೆಯಾಗಿಯೇ ಸಿಗುತ್ತದೆ. ಅಂತೆಯೇ ನೀರು. ಗಾಳಿಯ ಲಭ್ಯತೆ ಇರುವಂತೆ ನೀರಿನ ಲಭ್ಯತೆ ಎಲ್ಲಾ ಸ್ಥಳಗಳಲ್ಲೂ ಇರುವುದಿಲ್ಲ. ಇಳಿಜಾರಿನತ್ತ ಸಾಗುವ ನೀರಿನ ಗುಣವೇ ಮನುಷ್ಯನನ್ನು ಸೆಳೆದು ತನ್ನ ದಂಡೆಗುಂಟ ಸಾಕಿಕೊಂಡಿತು. ಜೀವಜಲದ ಮಹತ್ವದ ಅರಿವು ಎಲ್ಲರಿಗೂ ಇರಬೇಕಿತ್ತು. ಅರಿವಿನ ಕೊರತೆ ನೀರಿನ ಅಗಾಧತೆಗಿಂತಲೂ ಹೆಚ್ಚಿದೆ. ತಗ್ಗಿನಲ್ಲಿ ನೀರು ಸಿಗುತ್ತದೆ ಎಂಬ ಅರಿವು ಮಾನವನಿಗೆ ಆದ ಕ್ಷಣ ಬಾವಿ-ಕೆರೆಗಳ ಹುಟ್ಟೂ ಆಯಿತು. ಒಂದು ಊರು ಆರೋಗ್ಯವಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೇಮಪತ್ರಗಳು: ನಳಿನ.ಡಿ., ಆರೀಫ ವಾಲೀಕಾರ

ನೋವು ನಿರಂತರ ಧ್ಯಾನದಂತೆ! ಆ ಹೊತ್ತು ನೀನು ಸಿಗಬಾರದಿತ್ತೇನೋ, ನೀನು ಸಿಕ್ಕು ಖಾಲಿ ಬಿದ್ದಿದ್ದ ನನ್ನ ಮೊಬೈಕ್ ನೊಳಗೆ ಪೆಟ್ರೋಲ್ ತುಂಬಿಸಲು ಬೆನ್ನ ಹಿಂದೆ ಹತ್ತಿಸಿಕೊಂಡು ಹೋದಿ. ಅಗ ಬರೀ ನನ್ನ ಗಾಡಿಯ ಎದೆಯೊಳಗೆ ಪೆಟ್ರೋಲ್ ಮಾತ್ರ ತುಂಬಿಸಲಿಲ್ಲ, ನನ್ನ ಎದೆಯ ತುಂಬಾ ನೀನೇ ತುಂಬಿಕೊಂಡೆ. ಭಾಷೆ ಗೊತ್ತಿಲ್ಲದ ಅನಾಮಿಕ ಭಾಷೆಯಲ್ಲಿ ನಾನು ನಿನ್ನನ್ನು ಕಷ್ಟಪಟ್ಟು ಇಷ್ಟವಾದದ್ದನ್ನು ಹೇಳಿದಾಗ ನೀನು ’ಥೂ, ಹೋಗಾಚೆ’ ಅಂದಿದ್ದರೆ ಸಾಕಿತ್ತು, ನೀನು ಹಾಗೆ ಮಾಡುತ್ತೀಯೇನೋ ಅಂತ ನಾನು ಎಷ್ಟು ಸಲ ನನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಹಂಕಾರ ದರ್ಪಗಳ ಮಧ್ಯೆ ಬಂದ ಅವನೊಬ್ಬ: ಬಸವರಾಜ ಕಾಸೆ

ಮಧ್ಯೆ ರಾತ್ರಿ ಎರಡು ಗಂಟೆಯ ಸಮಯ, ಸಿಟಿ ರೈಲು ನಿಲ್ದಾಣದ ಎದುರು ಪುಟಪಾತ್ ಅಲ್ಲಿ ಹೇಗೇಗೊ ಪೇಪರ್ ಹಾಸಿಕೊಂಡು ಮಲಗಿರುವ ಜನರು. ಗಾಢ ಅಂಧಕಾರದ ನಡುವೆ ಕುಂಟುತ್ತಿರುವ ಕುದುರೆ ನಿಂತಲ್ಲೇ ಎಗರಾಡಿ ಬರುತ್ತಿದೆ ಅವನ ಮೈಮೇಲೆ, ಇನ್ನೇನು ತುಳಿದು ಬಿಟ್ಟಿತು ಎನ್ನುವಷ್ಟರಲ್ಲಿ ಒಂದೆಡೆ ರಣಕೇಕೆ ಹಾಕಿ ನಗುತ್ತಿರುವ ರಾಜ ರಾಣಿ ಮಂತ್ರಿಗಳು, ಅಷ್ಟರಲ್ಲಿ ಜೋರಾಗಿ ತಿರುಗುತ್ತಿರುವ ಯಂತ್ರವೊಂದು ಕಳಚಿ ಭಯಾನಕವಾಗಿ ಬಿದ್ದು ಬಿಟ್ಟಿತು. ಹೊಡಿ ಆರು ನೂರಾ ಎಂಭತ್ತು ಎಂಬ ಕರಾಳ ಧ್ವನಿ…ಮಲಗಿದ್ದ ಅವನು ಇದ್ದಕ್ಕಿದ್ದಂತೆ ಬೆಚ್ಚಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವೃದ್ದಾಪ್ಯದಲ್ಲಿ ಮಕ್ಕಳ ಜವಾಬ್ದಾರಿ: ವೇದಾವತಿ ಹೆಚ್. ಎಸ್.

ಹಳ್ಳಿಯಿಂದ ಡೆಲ್ಲಿಯವರೆಗೆ ವೃದ್ದಶ್ರಾಮಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ದಿನೇ ದಿನೇ ಹೆಚ್ಚುತ್ತಿದೆ. ಕಾರಣ ಬೇಕಾದಷ್ಟು ಇರಬಹುದು. ಇಂದಿನ ಮಕ್ಕಳ ನಡವಳಿಕೆ,ಹೊಂದಾಣಿಕೆಯ ಕೊರತೆಯಿಂದಲೂ ಇರಬಹುದು. ಮೂವತ್ತು ವರ್ಷಗಳ ಹಿಂದೆ ತುಂಬಿದ ಕುಟುಂಬ ಇರುತ್ತಿದ್ದ ದಿನಗಳವು. “ಮನೆ ತುಂಬಾ ಮಕ್ಕಳಿರಲವ್ವ”ಎನ್ನುವ ಕಾಲವಾಗಿತ್ತು. ಒಂದು ಮನೆಯಲ್ಲಿ ಐದಾರು ಮಕ್ಕಳಿಂದ ತುಂಬಿ ತುಳುಕುತ್ತಿತ್ತು. ಮಕ್ಕಳಿಗೆ ತಂದೆ ತಾಯಿಯು ಮನೆಯಲ್ಲಿ ಸಂಸ್ಕಾರವನ್ನು ಕಲಿಸುತ್ತಿದ್ದರು. “ಮನೆಯೇ ಮೊದಲ ಪಾಠ ಶಾಲೆ”ಎಂಬ ಹಾಗೆ ದೊಡ್ಡವರಿಂದ ಹಿಡಿದು ಚಿಕ್ಕ ಮಕ್ಕಳವರೆಗೆ ಬೆರೆತು ಬಾಳಬೇಕು ಎನ್ನುವುದು ಮನೆಯ ಜನರಿಂದಲೇ ನೋಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯುವ ಜನತೆಗೆ ವಿವೇಕಾನಂದರ ಆದರ್ಶಗಳು: ವೈ. ಬಿ. ಕಡಕೋಳ

ಸ್ವಾಮಿ ವಿವೇಕಾನಂದ(ನರೇಂದನಾಥ ದತ್ತ)(ಜನೇವರಿ 12 1863 ಜನನ) ಭಾರತದ ಅತ್ಯಂತ ಪ್ರಸಿದ್ದ ಹಾಗೂ ಪ್ರಭಾವಶಾಲೀ ತತ್ವಜ್ಞಾನಿಗಳು. ನಿರ್ಭಯತೆ, ಆಶಾವಾದ, ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ  ವಿಶಾಲ ದೃಷ್ಟಿಯ ಸಂಕೇತವಾಗಿ ಇಡೀ ವಿಶ್ವಕ್ಕೆ ಮಾದರಿಯಾದ ಸನ್ಯಾಸಿ. ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನೇವರಿ 12 “ರಾಷ್ಟ್ರೀಯ ಯುವ ದಿನ”ವೆಂದು 1984 ರಿಂದ ಕೇಂದ್ರ ಸರಕಾರ ಸೂಚಿಸಿದ್ದು ಅಂದಿನಿಂದ ಇದನ್ನು ಆಚರಿಸಲಾಗುತ್ತಿದೆ. ಪ್ರತಿಯೊಬ್ಬರೂ ವಿವೇಕಾನಂದರ ಬದುಕಿನ ಆದರ್ಶಗಳ ಕುರಿತು ಈ ಸಂದರ್ಭದಲ್ಲಿ ಅರ್ಥೈಸಿಕೊಳ್ಳಬೇಕು. ವಿವೇಕಾನಂದರ ಪೂರ್ವಾಶ್ರಮದ ಹೆಸರು ನರೇಂದ್ರನಾಥ ದತ್ತ. ತಂದೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೇಮಿಗಳ ದಿನಾಚರಣೆಯನ್ನು ಹೇಗೆ ಆಚರಿಸಬೇಕು?: ಕೆ ಟಿ ಸೋಮಶೇಖರ ಹೊಳಲ್ಕೆರೆ.

ಪ್ರೀತಿ ಅತಿ ಅಮೂಲ್ಯ! ಜಗದ ತುಂಬ ತುಂಬಿದೆ. ಮಾನವನ ಜಗತ್ತನ್ನು ಆಳುತ್ತಿದೆ. ಸಕಲ ಜೀವಜಂತುಗಳಲ್ಲೂ ಮನೆ ಮಾಡಿದೆ. ಜಗತ್ತು ಆಗಿರುವುದೇ ಪ್ರೀತಿಯಿಂದ. ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ಪ್ರೀತಿ, ಪ್ರೇಮ ತೋರಿಸುವಂಥವು ಆಗಿರದೆ ನಡೆ, ನುಡಿ, ಮಾಳ್ಕೆಗಳಲ್ಲಿ ಕಂಡುಬರುವಂಥವು ಆಗಿವೆ. ಅವರವರ ಸಂಬಂಧ, ಭಾವನೆ, ಇಬ್ಬರಲ್ಲಿರುವ ಇಷ್ಟವಾಗುವ ಗುಣಗಳಿಂದ ಅವರ ಪ್ರೀತಿಯ ಅನ್ಯೋನ್ಯತೆ ತೀರ್ಮಾನವಾಗುತ್ತದೆ. ಪ್ರೀತಿ ಎಲ್ಲಾ ಜೀವಿಗಳಲ್ಲೂ ಸಹಜವಾಗಿ ಇರುವಂತಹದ್ದೇ! ಆದ್ದರಿಂದ ಪ್ರೇಮಿಗಳ ದಿನ, ಅಪ್ಪಂದಿರ ದಿನ, ಸ್ನೇಹಿತರ ದಿನ, ಅಮ್ಮಂದಿರ ದಿನ… ಆಚರಿಸುವುದು ಭಾರತೀಯ ಪರಂಪರೆಯಲ್ಲಿಲ್ಲ! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾವ್ಯಧಾರೆ

ನೀ ಮೌನ ಮುರಿಯಬೇಕು ನೀನು ಮತ್ತೆ ಎಂದಿನಂತೆ ಮಾತಾಡಬಹುದೆಂಬ ನಂಬಿಕೆ ಅರೆ ಘಳಿಗೆ ಸುಮ್ಮನಿರದ ಕನಸುಗಳು ಹುಟ್ಟುವುದನು ತಡೆಯುವವರು ಯಾರು..!? ನನಸಾಗುವ ಹೂ ಅರಳಲು ರವಿ ಹೊಸತಾಗಿಯೆ ಹುಟ್ಟಬೇಕು ನೀ ಮಾತಿಗೆ ಅಮೃತವನುಣಿಸುವ ಮನಸು ಮಾಡಬೇಕು ಒಲವಲಿ ಮೌನ ಮಾತಾಗಿ ಮುತ್ತಾಗುವುದು ಸಾಮಾನ್ಯ ತಾನೇ..? -ಅಕ್ಷತಾ ಕೃಷ್ಣಮೂರ್ತಿ         ಗಜಲ್ ನೀರಡಿಸಿದಾಗ ಬಾಂವಿ ತೋಡಿದಂಗಾತು ಸಾಯುಹೊತ್ತಾಗ ನಿನ್ನ ನೋಡಿದಂಗಾತು ಹ್ಯಾಂಗೈತಿ ನಮ್ಮ ಜೋಡಿ ಗೊತ್ತೇನ ಸಾಕಿ? ಚೂಡಾದ ಜೊತಿ ಚಹಾ ಕೂಡಿದಂಗಾತು.! ಮಾಡಿಲ್ಲದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭೂಜ್ವರ – 2017ರ ಹಿನ್ನೋಟ: ಅಖಿಲೇಶ್ ಚಿಪ್ಪಳಿ

ಹಳೆಯ ಕ್ಯಾಲೆಂಡರ್ ಹಾಗೂ ಡೈರಿಯನ್ನು ಬದಿಗಿಟ್ಟು ಹೊಸದನ್ನು ಪಡೆಯುವ ದಿನ ದಾಪುಗಾಲಿಕ್ಕುತ್ತಾ ಬರುತ್ತಿದೆ. ಮತ್ತೊಂದು ವರುಷ ಕಳೆಯಿತು. ಹಾಗಂತ ಹಳೆಯ ಡೈರಿ ಹಾಗೂ ಕ್ಯಾಲೆಂಡರ್‍ಗಳನ್ನು ಮರತೇ ಬಿಡುವುದು ಐತಿಹಾಸಿಕ ದಾಖಲೆಯನ್ನು ಮರೆತ ಹಾಗೆ ಆಗುತ್ತದೆ. ಅತಿಮುಖ್ಯವಾದ ಘಟನೆಗಳನ್ನು ನೆನಪಿಟ್ಟುಕೊಳ್ಳಲು ಇವು ಅಗತ್ಯ. ಹೊಸದನ್ನು ಸ್ವಾಗತಿಸುವು ಪೂರ್ವದಲ್ಲಿ ಒಮ್ಮೆ ಹಿಂತಿರುಗಿ ಅವಲೋಕನಗೈಯುವುದು ಕೂಡ ಮುಖ್ಯ. ಇಡೀ ಪ್ರಪಂಚ ಇವತ್ತು ನಮ್ಮ ಅಂಗೈ ತುದಿಯಲ್ಲಿದೆ. ಮಾಹಿತಿಗಳು ಭರಪೂರ ಲಭ್ಯ. ಹಾಗಂತ ಅಂಗೈತುದಿಗೆ ನಿಲುಕುವ ಪ್ರಪಂಚ ಎಷ್ಟು ಸುರಕ್ಷಿತ ಎಂದು ಕೇಳಿದರೆ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾಣಸುದ್ದಿ 6: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ ಇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಕೃತಿಯ ಹಾಡು: ಧನು ಮಲ್ಪೆ

ನೀವು ಎಂದಾದರೂ ಪ್ರಕೃತಿಯ ಸಂಗೀತ ಕೇಳಿದ್ದೀರಾ. . ? ಪಾಪ್ ಗೊತ್ತು ರಾಕ್‌ ಗೊತ್ತು ಇದ್ಯಾವುದಪ್ಪಾ ಹೊಸ ಪ್ರಕಾರದ ಸಂಗೀತ ಅಂತೀರಾ? ಹಾಗಾದರೆ ಇಲ್ಲಿ ಕೇಳಿ. ಪ್ರಕೃತಿಯ ಪ್ರತಿಯೊಂದು ಶಬ್ಧವೂ ಮಧುರ ಸಂಗೀತವೆ. ಆದರೆ ಸಿಟಿಯಲ್ಲಿ ಇರುವವರಿಗೆ ಆಟೋರಿಕ್ಷಾ ಬಸ್ಸುಗಳ ಇಂಜಿನ್ ಶಬ್ಧ, ಕರ್ಕಶ ಹಾರ್ನ್ ಬಿಟ್ಟು ಬೇರೆ ಶಬ್ದ ಮರೆತೇ ಹೋಗಿರಬಹುದು. ಪ್ರಕೃತಿಯ ಹಾಡು ಕೇಳಬೇಕಿದ್ದರೆ ನೀವು ಮಾನವ ನಿರ್ಮಿತ ಕೃತಕ ಶಬ್ಧಗಳೇ ಇಲ್ಲದ ದೊಡ್ಡ ಪರ್ವತವನ್ನೇರಬೇಕು ಅಥವಾ ಬಿಸಿಲೇ ನೆಲ ತಾಗದ ದಟ್ಟ ಅರಣ್ಯವನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾನಂಗಳದಲೊಮ್ಮೆ….: ಅನುರಾಧ ಪಿ. ಸಾಮಗ

ಚಂದ್ರನಿಗೆ ರೋಹಿಣಿಯೂ, ಉಳಿದ ಇಪ್ಪತ್ತಾರು ಪತ್ನಿಯರೂ, ಸುತ್ತಮುತ್ತ ರಾರಾಜಿಸುವ ಇನ್ನುಳಿದ ತಾರೆಯರೂ, ಜಲದ ನೈದಿಲೆಯೂ, ಮರದ ಆಕಾಶಮಲ್ಲಿಗೆಯೂ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಪ್ರೀತ್ಯರ್ಹರೇ. ಅಲ್ಲದೆ ಅವನು ಅವರೊಬ್ಬೊಬ್ಬರ ಜೊತೆಗೂ ಹೆಣೆದುಕೊಂಡ ಅನುಬಂಧದ ಪರಿಗೆ ಸರಿಯಾಗಿ ಒಬ್ಬೊಬ್ಬರೂ ಅವರವರದೇ ರೀತಿಯಲ್ಲಿ ಅವನ ಸಂತೋಷವನ್ನು ಪರಿಪೂರ್ಣವಾಗಿಸುತಿದ್ದರು. ಅವರಲ್ಲೊಬ್ಬರ ಕೊಡುಗೆಯ ವಿನಃವೂ ಅವನ ಸಂತೋಷ ಅಪರಿಪೂರ್ಣ. ಮತ್ತಾಗ ಚಂದ್ರ ಹುಣ್ಣಿಮೆ ಬಂದರೂ ತನ್ನ ತಾನು ಪೂರ್ಣವಾಗಿ ಕಂಡುಕೊಳ್ಳಲಾರ. ಇದು ಅವನ ಬಲಹೀನತೆಯೆಂದರೂ ಸರಿಯೇ, ಮತ್ತೆ ಮತ್ತೆ ಅಳಿಯುತ್ತ ಬೆಳೆಯುತ್ತ ಅದೆಷ್ಟೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವೆಂಕಜ್ಜ: ಗಿರಿಜಾ ಜ್ಞಾನಸುಂದರ್

ಬೆಳಗಿನ ಸೂರ್ಯನ ಕಿರಣ ಕಣ್ಣಿಗೆ ಚುಚ್ಚುತ್ತಿದ್ದು,   ವೆಂಕಜ್ಜನ ಕಣ್ಣು ಭಾರವಾಗಿದ್ದರೂ ನಿಧಾನವಾಗಿ ತೆಗೆಯುತ್ತಿದ್ದ. ದೇವಸ್ಥಾನದ ಒಂದು ಮೂಲೆಯಲ್ಲಿ ಮಲಗುವ ವೆಂಕಜ್ಜ ಯಾವಾಗಲು ಚುರುಕು. ಅಷ್ಟೊಂದು ನಿಧಾನವಾಗಿ ಎದ್ದವನೇ ಅಲ್ಲ. ಇಂದೇಕೋ ಅವನ ಮನಸ್ಸು ಎಂದಿನಂತೆ ಇರಲಿಲ್ಲ. ವಸುಧಾಳ ನೆನಪು ಬಹಳವಾಗಿ ಕಾಡುತ್ತಿತ್ತು. ಅವಳು ತನ್ನನ್ನು ಎಬ್ಬಿಸುತ್ತಿದ್ದ ರೀತಿ,   ಮುದ್ದು ಮಾಡುತ್ತಾ ಕಚಗುಳಿ ಇಡುತ್ತಿದ್ದ ನೆನಪು. ವೆಂಕಜ್ಜನ ಜೀವನದಲ್ಲಿ ವಸುಧಾ ಅವನ ಬಾಳ ಸಂಗಾತಿಗಿಂತ ಹೆಚ್ಚಾಗಿದ್ದಳು. ಅವನೆಲ್ಲ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಳು. ಚಿಕ್ಕವಯಸ್ಸಿನಲ್ಲಿ ತಂದೆ ತಾಯಿಯನ್ನು ಕಳೆದುಕೊಂಡಿದ್ದ ಅವನಿಗೆ ತನ್ನೆಲ್ಲ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ