ಅಹಂಕಾರ ದರ್ಪಗಳ ಮಧ್ಯೆ ಬಂದ ಅವನೊಬ್ಬ: ಬಸವರಾಜ ಕಾಸೆ
ಮಧ್ಯೆ ರಾತ್ರಿ ಎರಡು ಗಂಟೆಯ ಸಮಯ, ಸಿಟಿ ರೈಲು ನಿಲ್ದಾಣದ ಎದುರು ಪುಟಪಾತ್ ಅಲ್ಲಿ ಹೇಗೇಗೊ ಪೇಪರ್ ಹಾಸಿಕೊಂಡು ಮಲಗಿರುವ ಜನರು. ಗಾಢ ಅಂಧಕಾರದ ನಡುವೆ ಕುಂಟುತ್ತಿರುವ ಕುದುರೆ ನಿಂತಲ್ಲೇ ಎಗರಾಡಿ ಬರುತ್ತಿದೆ ಅವನ ಮೈಮೇಲೆ, ಇನ್ನೇನು ತುಳಿದು ಬಿಟ್ಟಿತು ಎನ್ನುವಷ್ಟರಲ್ಲಿ ಒಂದೆಡೆ ರಣಕೇಕೆ ಹಾಕಿ ನಗುತ್ತಿರುವ ರಾಜ ರಾಣಿ ಮಂತ್ರಿಗಳು, ಅಷ್ಟರಲ್ಲಿ ಜೋರಾಗಿ ತಿರುಗುತ್ತಿರುವ ಯಂತ್ರವೊಂದು ಕಳಚಿ ಭಯಾನಕವಾಗಿ ಬಿದ್ದು ಬಿಟ್ಟಿತು. ಹೊಡಿ ಆರು ನೂರಾ ಎಂಭತ್ತು ಎಂಬ ಕರಾಳ ಧ್ವನಿ…ಮಲಗಿದ್ದ ಅವನು ಇದ್ದಕ್ಕಿದ್ದಂತೆ ಬೆಚ್ಚಿ … Read more