ಪಂಜು ಕಾವ್ಯಧಾರೆ

ಒಂದು ಟೋಪಿಯ ಸುತ್ತ… ಊರ ಕೇರಿಯಿಂದ ಉದ್ದುದ್ದ ಹೆಜ್ಜೆಯನ್ನಿಟ್ಟು ಹೊರಟ ಊರಗೌಡ ಅಂದು ಕಂಡವರ ಕಣ್ಣಿಗೆ ಒಬ್ಬ ಬ್ರಿಟಿಷ ದಂಡನಾಯಕನಂತೆ ಕಾಣುತ್ತಿದ್ದ ಯಾವದೋ ವಸ್ತುಸಂಗ್ರಹಾಲಯದಿಂದ ಹೊತ್ತುತಂದಂತೆ ಬೆತ್ತದಿಂದ ಗೋಲಾಕಾರವಾಗಿ ಹೆಣೆದ ಹಳೆಯ ಟೋಪಿಯೊಂದು ಆತನ ತಲೆಯ ಮೇಲೆ ಕೂತು ಇಡೀ ಪ್ರಪಂಚವನ್ನೇ ಕೊಂದುಬಿಡಬೇಕೆನ್ನುವ ಅವಸರದಲ್ಲಿತ್ತು ಈಗಷ್ಟೇ ಉದಯಿಸಿದ ಆತನ ಕಣ್ಣಲ್ಲಿನ ಕೆಂಪು ಸೂರ್ಯ, ಸೆಟೆದುನಿಂತ ಮೈಮೇಲಿನ ರೋಮಗಳು, ಬಿಳಿಯ ಮೀಸೆ ಕಪ್ಪು ಬಣ್ಣಕ್ಕೆ ಪರಿವರ್ತನೆಯಾಗಿ ಆ ಮೀಸೆಯ ಬುಡದಲ್ಲಿ ಹುಟ್ಟಿಕೊಂಡ ಕೋರೆಹಲ್ಲಿನ ರಕ್ಕಸನಂತೆ ಒರಟು ಧ್ವನಿಯಲ್ಲಿ ನಕ್ಕ…. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶ್ರೇಷ್ಠ ಸಾಹಿತಿ ವಿಲಿಯಂ ಶೇಕ್ಸಪೀಯರ್ ಬದುಕು ಬರಹ ಮತ್ತು ಕಾಲ: ನಾಗರೇಖ ಗಾಂವಕರ

ಜಗತ್ತಿನ ಅತ್ಯಂತ ಶ್ರೇಷ್ಠ ಸಾಹಿತಿ ವಿಲಿಯಂ ಶೇಕ್ಸಪಿಯರ ಎಲ್ಲ ಕಾಲ ದೇಶಗಳಿಗೂ ಪ್ರಶ್ತುತ ಎನ್ನಿಸುವ ಸಾಹಿತ್ಯ ಕೃತಿಗಳ ರಚಿಸುವ ಮೂಲಕ ಸರ್ವಮಾನ್ಯ ಸಾಹಿತಿ ಎಂದೇ ಪ್ರಸಿದ್ಧ. ತನ್ನ ಜೀವನ ಮತ್ತು ಬರವಣಿಗೆಗಳಲ್ಲಿ ಪ್ರೌಢತೆಯನ್ನು ಬಿಂಬಿಸಿದ್ದ ಶೇಕ್ಸಪಿಯರ ಜ್ಞಾನ, ಔದಾರ್ಯ, ನಂಬಿಕೆ, ಯುವ ಪ್ರೇಮದ ತುಡಿತ, ಕ್ಷಮೆ ಹೀಗೆ ಮಾನವ ಸಂವೇದನೆಗಳ ಸುತ್ತ ಹೆಣೆದ ಆತನ ಕೃತಿಗಳು ಲೋಕ ಪ್ರಸಿದ್ಧವಾಗಿವೆ. ಇಂಗ್ಲೀಷ ಸಾಹಿತ್ಯ ಲೋಕದಲ್ಲಿ ಎಲಿಜಬೆತನ್ ಯುಗ ಸುವರ್ಣ ಕಾಲ. ಐತಿಹಾಸಿಕವಾಗಿ ಜ್ಞಾನಪುನರುಜ್ಜೀವನ, ಧಾರ್ಮಿಕ ಸುಧಾರಣೆ, ಭೌಗೋಲಿಕ ಅನ್ವೇಷಣೆಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೀನು ನೀನೇ ಎಂದವರ ನಡುವೆ: ಅಮರ್ ದೀಪ್

ಸಂಗೀತಕ್ಕೆ ವಯಸ್ಸಿನ ಹಂಗಿಲ್ಲ ಕಲಿಯಲಾಗಲಿ, ಕೇಳಿ ಖುಷಿಪಡಲಾಗಲಿ…. ನಾನಂತೂ ಸಮಯ ಸಿಕ್ಕಾಗಲೆಲ್ಲಾ ಸಂಗೀತವನ್ನು ಆಸ್ವಾದಿಸದೇ ಇರಲಾರೆ.  In fact ನನ್ನ ದು:ಖವನ್ನು ನೀಗಿಸುವುದೂ ಸಂಗೀತವೇ ಮತ್ತು ನನ್ನ ದಟ್ಟ ದರಿದ್ರ, ಸೋಮಾರಿತನದಿಂದ “ಎದ್ದೇಳಾ, ನಿನ್ನ ಸೋಮಾರಿತನಕ್ಕಿಷ್ಟು ಬೆಂಕಿ ಹಾಕ” ಎಂದು ಮತ್ತೆ ಮತ್ತೆ ಪುನಶ್ಚೇತನಗೊಳಿಸುವುದೂ ಸಂಗೀತವೇ…  ಇವತ್ತು, ಬಿಡಿ ಇವತ್ತಲ್ಲ ಸುಮಾರು ಮೂರು ತಿಂಗಳಾಯ್ತೇನೋ ಮಧ್ಯಾಹ್ನ ಊಟಕ್ಕೆ ಹೊರಡಬೇಕೆಂದರೆ ಸಾಕು, ಯಾಕಾದ್ರೂ ಊಟದ ಸಮಯವಾಗುತ್ತೋ? ಯಾವ ಖಾನಾವಳಿಯ ಸೋಡಾ ಹಾಕಿದ ಅನ್ನ ತಿನ್ನಬೇಕೋ… ಹೊಟ್ಟೆ ಕೆಡಿಸಿಕೊಳ್ಳಲು? ಎಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಳೆಗಾಲ ನಮ್ಮದೂ ಒಂದು ಕತೆ: ಭಾರ್ಗವಿ ಜೋಶಿ

ಅಂದೊಂದು ಸುಂದರ ಸಂಜೆ.. ಸೂರ್ಯನು ಭಾರತದ ಸೌಂದರ್ಯವನ್ನು ಮಿಂಚಿಸಿ ಈಗ ಬೇರೆ ದೇಶಗಳಲ್ಲಿ ಕಣ್ಣುತೆರೆಸುವ ಸರದಿ.. ಸೂರ್ಯ ನಿಧಾನವಾಗಿ ಹೆಜ್ಜೆಯಿಟ್ಟು ದಾಟುತ್ತಿದ್ದ.. ಚಂದ್ರನು ನಾನಿಲ್ಲೇ ಇದ್ದೀನಿ ಅಂತಾ ಮೋಡದ ಮರೆಯಿಂದ ಇಣುಕಿ ಇಣುಕಿ ನೋಡುತ್ತಿದ್ದ. ಅವನ ಬರುವಿಕೆಯನ್ನು ತಡೆಯಲು ಸಫಲವಾದ ಮೋಡಗಳು ಈಗ ನಮ್ಮ ಸಮಯ ಎಂದು ಮಳೆಸುರಿಸಲು ಸಿದ್ಧವಾಗಿದ್ದವು.. ಸಂಧ್ಯಾಕಾಲ, ತಂಪಾದಗಾಳಿ, ಮಸಕು ಬೆಳಕು, ತುಂತುರು ಮಳೆ… ಮನೆಯ ಅಟ್ಟದಮೇಲೆ ಈ ಅಂದವನ್ನು ಅನುಭವಿಸುತ್ತ ನಿಂತಿದ್ದಳು ನಮ್ಮ ಅರುಂದತಿ… (ಭಾಳ್ ದಿವಸದ ಮೇಲೆ ಕರ್ಕೊಂಡು ಬಂದೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾ ಕಂಡ ನಮ್ಮ ನಡುವಿನ ವಿಜ್ಞಾನದ ಸಂಪನ್ಮೂಲ ವ್ಯಕ್ತಿಗಳು: ಎಂ.ಎಲ್.ನರಸಿಂಹಮೂರ್ತಿ, ಮಾಡಪ್ಪಲ್ಲಿ

ಫೆ.೨೦.೨೦೧೬ ರಂದು ಬಾಗೇಪಲ್ಲಿಯ ಗಂಗಮ್ಮ ಗುಡಿ ರಸ್ತೆಯ ಶ್ರೀನಿವಾಸ್ ಮೆಸ್ ಹಿಂಭಾದಲ್ಲಿನ ಶ್ರೀ ವಾಸುದೇವ ಮೂರ್ತಿ ಎಂಬುವರ ಮನೆಗೆ ತೆರಳಿದ್ದೆ. ಏಕೆಂದರೆ 2013ರಲ್ಲಿ ನ್ಯಾಷನಲ್ ಕಾಲೇಜಿನ ನೆಚ್ಚಿನ ಗುರುಗಳಾದ ಬಿ.ಪಿ.ವಿ ಸರ್ ಅವರು ವಾಸುದೇವ ಸರ್ ಅವರ ಕುರಿತು ಒಂದಿಷ್ಟು ವಿಷಯ ತಿಳಿಸಿದ್ದರು. ನಂತರ ಅದೇವರ್ಷ ಜೂನ್ ತಿಂಗಳಲ್ಲಿ ಖುದ್ದಾಗಿ ಗಂಗಮ್ಮ ಗುಡಿ ರಸ್ತೆಯಲ್ಲಿನ ಅವರ ಮನೆಗೆ ಬೇಟಿ ನೀಡಿದಾಗ ಅವರು ಮನೆಯಲ್ಲಿರಲಿಲ್ಲ. ಕೆಲ ದಿನಗಳ ನಂತರ ಅವರ ಮನೆಗೆ ಹೋದಾಗ ಹಳೇ ತಾಮ್ರದ ತಂತಿಯಿಂದ ಯಾವುದೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 7): ಎಂ. ಜವರಾಜ್

-೭- ಈ ಅಯ್ನೋರು ಆ ಅವಳೂ ಕುಂತ ಜಾಗ್ದಲ್ಲೆ ಮುಸುಡಿ ಎಟ್ಗಂಡು ಈ ಅಯ್ನೋರ್ ಮೈ ಇನ್ನಷ್ಟು ಕಾಯ್ತಾ ನನ್ ಮೈಯೂ ಕಾದು ಕರಕಲಾಗುತ್ತಾ ಹೊತ್ತು ಮೀರ್ತಾ ಮೀರ್ತಾ ಆ ಅವಳು ಎದ್ದೋಗಿ ಈ ಅಯ್ನೋರೂ ಮೇಲೆದ್ದು ನನ್ನ ಭದ್ರವಾಗಿ ಮೆಟ್ಟಿ ನೆಲಕ್ಕೆ ಎರಡೆರಡು ಸಲ ಕುಟ್ಟಿ  ಅವಳೆಡೆ ಇನ್ನೊಂದು ನೋಟ ಬೀರಿ ಮೆಲ್ಲನೆ ತಿರುಗಿ ಮೋರಿ ದಾಟಿ  ಕಿರು ಓಣಿ ತರದ ಬೀದೀಲಿ  ಗಿರಿಕ್ಕು ಗಿರಿಕ್ಕು ಅಂತನ್ನಿಸಿಕೊಂಡು  ಬಿರಬಿರನೆ ನಡೆದರಲ್ಲೋ… ಆ ಅವಳ ನೋಟಕ್ಕೆ ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಪರೋಡ್..!: ತಿರುಪತಿ ಭಂಗಿ

ಕೆ.ಎ-28 ಎಫ್-6223 ಕರ್ನಾಟಕ ಸಾರಿಗೆ ಬಸ್ಸು ಗಾಳಿಯ ಎದೆ ಸೀಳಿಕೊಂಡು ಬಂವ್.. ವ್.. ವ್.. ಎಂದು ರಾಗ ಎಳೆಯುತ್ತ, ಕ್ಯಾಕರಸಿ ಹೊಗೆ ಉಗುಳುತ್ತ, ತಗ್ಗು ದಿನ್ನೆಯಲ್ಲಿ ಜಿಗಿದು, ಕುಣಿದು ದಣಿವರಿಯದೆ, ಚಾಲಕನ ಒತ್ತಡಕ್ಕೆ ಮನಿದು, ಮುನಿದು ‘ನಿಗಿನಿಗಿ’ ಕೆಂಡ ಉಗಳುವ ಸೂರಪ್ಪನ ಕಾಟಾಚಾರ ಸಹಿಸಿಕೊಂಡು ಬಿಜಾಪೂರದತ್ತ ಹೊರಟಾಗ ಬರೊಬ್ಬರಿ ಎರಡು ಗಂಟೆಯಾಗಿ ಮೇಲೆ ಒಂದಿಷ್ಟು ನಿಮಿಷಗಳಾಗಿದ್ದವು. ಖಾಸಗಿ ಬಸ್ಸಿನ ಸುಖಾಸನಗಳ ಮೇಲೆ ತಣ್ಣಗೆ ಕುಳಿತು ಬರಬೇಕೆಂದವನಿಗೆ, ಇದ್ದಕಿದ್ದಂತೆ ತಲೆಯಲ್ಲಿ ಅದೇನು ಸೇರಿಕೊಂಡಿತೋ, ವಿಠಲಸ್ವಾಮಿ ಸರಕಾರಿ ಬಸ್ಸಿನ ಬಾಗಿಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವರೆಲ್ಲಿ, ಇವನೆಲ್ಲಿ…???: ಬಸವರಾಜ ಕಾಸೆ

ಅನಿಲ್ ಮತ್ತು ಸುನೀಲ್ ಕೆಲಸ ಮಾಡುವ ಕಂಪನಿ ಮಾಲೀಕನ ಮಗನ ಅದ್ದೂರಿ ಮದುವೆ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿತ್ತು. ಸರದಿ ಸಾಲಿನಲ್ಲಿ ನಿಂತು ಶುಭಾಶಯ ಕೋರಿದ ನಂತರ ಔತಣಕೂಟಕ್ಕೆ ಆಗಮಿಸಿದರು. ವಿಧ ವಿಧವಾದ ಭಕ್ಷ್ಯ ಭೋಜನಗಳಿಂದ ಕೂಡಿದ ರುಚಿಯ ಪರಿಮಳ ಸುತ್ತಲೂ ಪಸರಿಸಿತ್ತು. ಎರಡು ನಿಮಿಷ ನಿಂತು ನೋಡಿದ ಸುನೀಲಗೆ ಆಶ್ಚರ್ಯ. “ಅರೇ ಅನಿಲ್, ಅಲ್ಲಿ ನೋಡೋ. ರಾಮಣ್ಣ, ಶಾಮಣ್ಣ, ಸೀನ ಎಲ್ಲಾ ಇಲ್ಲೇ ಇದಾರೆ” “ಎಲ್ಲೋ” “ಆ ಕಡೆ ಮತ್ತು ಈ ಕಡೆ ಎರಡು ಕೌಂಟರು ನೋಡೋ” … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವ್ವ ಮತ್ತು ಅಂಗಿ: ಮಹಾಂತೇಶ್. ಯರಗಟ್ಟಿ

ಅಂಗಿ ಅಂದ್ರೇ ಮಾನ ಮುಚ್ಚುತ್ತೆ, ಅಂಗಿ ಅಂದ್ರೇ ನಮ್ಮ ಅಂದ ಹೆಚ್ಚೀಸುತ್ತೆ ,ಅಂಗಿಗೆ ಹಲವಾರು ಬಣ್ಣ, ಅಂಗಿಗೆ ಹಲವಾರು ಗುಣಧರ್ಮ ಇದು ಕೊಳ್ಳುವವನ ಆರ್ಥಿಕತೆಯ ಮೇಲಿನ ಅವಲಂಬನೆ. ಹೀಗೆ ಅಂಗಿಯ ವಿಚಾರ ಬಂದಾಗಲೆಲ್ಲಾ ಹೀಗೆಲ್ಲ ಹೇಳಬಹುದು. ಬಹುಶಃ ನಾನ ಚಿಕ್ಕವನಿದ್ದಾಗಿನಿಂದ ಕೇಳಿದ್ದು ‘ಅ’ ಅಂದ್ರೇ ಅವ್ವ ‘ಅಂ’ ಅಂದ್ರೇ ಅಂಗಿ, ಸರ್ಕಾರಿ ಕನ್ನಡ ಪಾಠ ಶಾಲೆಯ ಪಾಠ ನಿಜ ನೋಡಿ, ಯಾಕಂದ್ರೇ ಕನ್ನಡ ಶಾಲೆಗಳು ಬದುಕುವ ಕಲೆಗಳನ್ನೂ ಕಲಿಸುತ್ತವೆ. ಅವ್ವ ಮತ್ತು ಅಂಗಿ ಯಾವತ್ತು ನಮ್ಮ ಮಾನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಲಾಗದ ಮಹಾನುಭಾವರು ತಲ್ಲೂರ ರಾಯನಗೌಡರು: ವೈ. ಬಿ. ಕಡಕೋಳ

“ನಿಮಗೇಕೆ ಕೊಡಬೇಕು ಕಪ್ಪ. ನೀವೇನು ನಮ್ಮ ನೆಂಟರೋ ಬಂಧುಗಳೋ. ನಮ್ಮ ಭೂಮಿಯನ್ನು ಉತ್ತಿ ಬಿತ್ತಿ ಬೆಳೆದವರೋ. ನಿಮಗೇಕೆ ಕೊಡಬೇಕು ಕಪ್ಪ. ” ಎಂಬ ಈ ಸಾಲುಗಳನ್ನು ಬಿ. ಸರೋಜಾದೇವಿ ಹೇಲುವ ಕಿತ್ತೂರು ಚನ್ನಮ್ಮ ಚಲನಚಿತ್ರದ ಈ ಸಂಭಾಷಣೆ ಇಂದಿಗೂ ಕಿತ್ತೂರು ಚನ್ನಮ್ಮ ಚಲನಚಿತ್ರ ವೀಕ್ಷಿಸಿದವರಿಗೆ ರೋಮಾಂಚನೆ ಉಂಟು ಮಾಡುತ್ತವೆ ಅಲ್ಲವೇ. ? ದೇಶಭಕ್ತಿಯ ಕಿಚ್ಚನ್ನು ಹಚ್ಚುವ ಸಾಲುಗಳ ಕತೆಯಾಧಾರಿತ ಕಿತ್ತೂರು ಚನ್ನಮ್ಮ ಚಲನಚಿತ್ರವಾಗಲು ಒಂದು ವ್ಯಕ್ತಿಯ ಶಕ್ತಿ ಬಹಳ ಶ್ರಮಿಸಿದ್ದು. ಕಿತ್ತೂರ ಚನ್ನಮ್ಮ ಚಲನಚಿತ್ರ ನಿರ್ದೇಶಕ ಬಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತ್ಯಾಗದಲ್ಲಿ ಅಪರಿಮಿತ ಆನಂದ ಅಡಗಿದೆ!: ಕೆ. ಟಿ. ಸೋಮಶೇಖರ್ ಹೊಳಲ್ಕೆರೆ

 ತ್ಯಾಗ ಎಂಬುದು ಉತ್ತಮ ಮೌಲ್ಯಗಳಲ್ಲಿ ಉತ್ತಮವಾದುದು. ಮಾನವನ ಗುಣಗಳಲ್ಲಿ ಅತಿ ಮುಖ್ಯವಾದುದು. ಮಾನವರೆಲ್ಲರಲ್ಲೂ ಇರಬೇಕಾದಂತಹದ್ದು. ಆದರ್ಶ ವ್ಯಕ್ತಿಗಳಲ್ಲಿ ಹೆಚ್ಚೇ ಇರಬೇಕಾದುದು. ಮಾನವನ ಬದುಕಿಗೆ ಮಾನವತೆಗೆ ಉತ್ತಮ ಸಮಾಜದ ನಿರ್ಮಾಣಕ್ಕೆ ಅವಶ್ಯವಾದುದು. ಬಹಳ ಶ್ರೀಮಂತರು ತ್ಯಾಗಿಗಳಲ್ಲ! ಕೆಲವು ಸಿರಿವಂತರು ತನಗೆ ಅವಶ್ಯವಲ್ಲದ್ದನ್ನು ಯಥೇಚ್ಛವಾಗಿ ಇರುವಂತಹುದನ್ನು ತ್ಯಾಗ ಮಾಡುವರು. ಅದು ತ್ಯಾಗ! ಆದರೆ ತನಗೆ ಅವಶ್ಯವಾಗಿ ಬೇಕಾದುದನ್ನು ಬೇರೊಬ್ಬರ ಕಷ್ಟ ಅಥವಾ ನೋವು ನಿವಾರಣೆಗಾಗಿ ತ್ಯಾಗ ಮಾಡುವುದು ಶ್ರೇಷ್ಠ ತ್ಯಾಗ! ತ್ಯಾಗ ಮಾಡಿದುದನ್ನು ಸ್ವೀಕರಿಸಿದವ ಬಳಸಿಕೊಂಡು ಕಷ್ಟ ನಿವಾರಿಸಿಕೊಂಡು ನಗುಬೀರಿದವನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೇಮ ಕಾವ್ಯಧಾರೆ

ರಾಗ-ರತಿ ಸೋನೆಸೋನೆಯಾಗಿ ಸುರಿವ ಸಂಜೆಮಳೆಗೆ ಕಣ್ಮಿಂಚಿನಲೆ ರಂಗೇರಿದ ರಾಗ-ರತಿ. ಬಾಗಿತಬ್ಬಿ ಬೆಸೆವ ಬಂಧದ ತವಕ ನಸು ಬಾಗಿದ ಬಾನು ತುಸು ಸರಿದ ಭುವಿ ಪ್ರತಿಕ್ಷಣಗಳ ಲೆಕ್ಕವಿಟ್ಟ ವಿರಹದುರಿಯಲ್ಲಿ ಹುಸಿಮುನಿಸು ನಸುಗೋಪ ಕಾದುಕುದ್ದ ಕ್ಷಣಗಳನೆಲ್ಲ ಕಾರಿ ಬಿಡುವ ತವಕ ರಾಜಿಸೂತ್ರದ ಸಂಭ್ರಮ ಕಣ್ಣ ತುದಿಗೇ ಕುಳಿತ ಸಾಂತ್ವ ಕಾಲಜಾರುವ ಮೊದಲೇ ಲೆಕ್ಕ ಕೂಡಿಸುವಾಟ ಸೋಲಬಾರದ ಹಠಕೆ ಸೋತುಗೆಲ್ಲುವ ಪ್ರೀತಿ ತುಟಿಯೊಡೆಯದೆಲೆ ಎದೆಮುಟ್ಟಿದ ಮಾತು ಕಣ್ಣನೋಟದ ಕೂಡುಬೇಟವ ದಾಟಿಬರುವ ಮೈಮರೆತ ಮುಟ್ಟಲಾರದ ಬೇಗುದಿಗೆ ಬಾಗಿ ಸೇರುವ ಬಯಕೆ ಶೃತಿಹಿಡಿದು ಒರತೆಯೊಡೆದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಥ್ಯಾಂಕ್ ಯೂ ಪೋಸ್ಟ್ ಮನ್: ಅಮರದೀಪ್. ಪಿ.ಎಸ್.

ಬರೆಯದ‌ ಪ್ರೇಮದ‌ ಕವಿತೆ ಹಾಡಾಯಿತು… ಎದೆಯಲಿ ನೆನಪಿನ ನೋವು ಸುಖ‌ ತಂದಿತು….. ಪಂಕಜ್‌ ಉಧಾಸ್‌ ಮತ್ತು ಕವಿತಾ ಕೃಷ್ಣಮೂರ್ತಿ ಹಾಡುತ್ತಿದ್ದರು. ನಾನು ಖಾಲಿ‌ ಕೂತ ಸಮಯದಲ್ಲಿ ಹಾಡು ಕೇಳುವುದು ಬಿಟ್ಟರೆ ಯಾವುದಾದರೂ ಪುಸ್ತಕ ನೆನಪಾಗಿ ಹುಡುಕುತ್ತೇನೆ. ಇವತ್ತು ಪುಸ್ತಕ ತಡಕಾಡಲು ಮನಸಾಗಲಿಲ್ಲ… ಹಾಡಿನ ಗುನುಗು ನಾಲಗೆಗೆ ನೆನಪಾಗಿದ್ದೇ ತಡ ಕೇಳುತ್ತಾ ಕುಳಿತೆ. ನಾನು ಡಿಪ್ಲೋಮಾ ಓದುವ ಕಾಲದಲ್ಲೂ ಏನೋ ಗೊತ್ತಿಲ್ಲ. ನನ್ನ ರೂಮೇಟ್ ನಾಗರಾಜ್ (ಡಿಂಗ್ರಿ) ಒಂದು ವಾಕ್ಮನ್ ತಂದಿದ್ದ. ಒಂದಿಷ್ಟು ಕೆಸೆಟ್ ಗಳಿದ್ದವು. ಅದೆಂಥ ಅಡಿಕ್ಷನ್‌ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೇಮಿಗಳಿಗೆ ದಿನವಿಲ್ಲ ! ದಿನವೆಲ್ಲಾ !!!!!: ಸತೀಶ್ ಶೆಟ್ಟಿ ವಕ್ವಾಡಿ

” ನಿನ್ನ ಬಿಟ್ಟು ಬದುಕುವ ಶಕ್ತಿ ನನಗಿಲ್ಲ ” ಆಕೆಯ ಬೆರಳಿಗೆ ತನ್ನ ಬೆರಳು ತೂರಿಸಿಕೊಂಡು, ಸಣ್ಣಗೆ ಕಂಪಿಸುತ್ತಿರುವ ಅದರದಿಂದ ಹೊರಬಿದ್ದ ಆತನ ಮಾತು, ಆಕೆಯ ಮೈಮನವನ್ನೆಲ್ಲ ರೋಮಾಂಚನಗೊಳಿಸಿತ್ತು.  “ಹೌದು ಕಾಣೋ ನೀನಿಲ್ಲದ ಬದುಕನ್ನು ನನಗೆ ಊಹಿಸಿಕೊಳ್ಳಲು ಆಗುತ್ತಿಲ್ಲ ” ಜೋರಾಗಿ ಬೀಸುತ್ತಿದ್ದ ಏರಿಕಂಡಿಷನಿನ ಗಾಳಿಯಲ್ಲಿ ಸಣ್ಣನೆ ಬೆವತ್ತಿದ್ದ ಆಕೆ ನುಡಿಯುತ್ತಾಳೆ. ಐಸ್ ಕ್ರೀಮ್ ಪಾರ್ಲರಿನ ಮೂಲೆಯ ಟೇಬಲಿನಲ್ಲಿ ಕುಳಿತ್ತಿದ್ದ ಅವರಿಬ್ಬರ  ಮುಂದಿದ್ದ ಅದೇ ಐಸ್ ಕ್ರೀಮ್ ಪಾರ್ಲರಿನ ಹೆಸರು ಹೊಂದಿರುವ ಸ್ಪೆಷಲ್ ಐಸ್ ಕ್ರೀಮನ್ನು ತನ್ನೊಡಲೊಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿ…ಹಾಗೆಂದರೇನು!!: ಸಹನಾ ಪ್ರಸಾದ್

ಮಾನಸಳನ್ನು ವರಿಸಲು ಪ್ರಜ್ವಲನಿಗೆ ಸುತರಾಂ ಇಷ್ಟ ಇರಲಿಲ್ಲ. ಮೊದಲನೆಯದಾಗಿ, ಅವಳನ್ನು ನೋಡಿದ ತಕ್ಷಣ ಯಾವ ಭಾವನೆಯೂ ಉದಯಿಸಿರಲಿಲ್ಲ. ಅವನ ಆಫೀಸ್ನಲ್ಲಿ ಕೆಲಸ ಮಾಡುತ್ತಿದ್ದ ಅನೇಕ ಹೆಣ್ಣುಗಳ ಹಾಗೆ ಕಂಡಿದ್ದಳು. ಹೇಳಿಕೊಳ್ಳುವಂತಹ ವಿಶೇಷವೇನೂ ಅವಳಲ್ಲಿರಲಿಲ್ಲ. ವಯಸ್ಸು 28 ಆದರೂ ಮುಖದಲ್ಲಿ ಪ್ರೌಢ ಕಳೆ, ವಯಸ್ಸಿಗೆ ಮೀರಿದ ಗಾಂಭೀರ್ಯ..ಎರಡನೆಯದಾಗಿ ಅವನು ಪ್ರೀತಿಸಿದ್ದ ರಮ್ಯಳ ಚಿತ್ರ ಮನಸ್ಸಲ್ಲಿ ಇನ್ನು ಹಸಿಯಾಗಿತ್ತು. ಬೇರೊಬ್ಬನನ್ನು ವರಿಸಿ ಆಸ್ಟ್ರೇಲಿಯಾಗೆ ಹಾರಿದ ಅವಳ ನೆನಪಿನಿಂದ ಇನ್ನೂ ಹೊರಬರಲಾಗಿರಲಿಲ್ಲ. 34 ಹತ್ತಿರ ಬಂದ ವಯಸ್ಸು, ಆಗಲೇ ಬಿಳಿ ಆಗುತ್ತಿರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೇಮ: ಕೊಟ್ರೇಶ್ ಕೊಟ್ಟೂರು

ಈ ಪ್ರೀತಿ ಅನ್ನೋದು ಒಂಥರಾ ಹಾವು ಏಣಿಯ ಆಟ. ಮೊದಮೊದಲು ಪ್ರೀತಿ ನಮಗೆ ಗೊತ್ತಿಲ್ಲದೇ, ಪರಿಚಯ ಇಲ್ಲದೇ ಇರೋರ ಮೇಲೆ ಸಡನ್ ಆಗಿ ಹುಟ್ಕೊಳುತ್ತೆ. ನೋಡಿದ ಕೂಡಲೇ ಹುಟ್ಟುವ ಪ್ರೀತಿ ನಿಜವಾ ಅಥವಾ ಇನ್‍ಫ್ಯಾಚುಯೇಷನ್ನಾ ? ತೀವ್ರ ಗೊಂದಲದಲ್ಲೇ ಇರುತ್ತೇವೆ ಅದು ಮಾನಸಿಕವಾ ? ಅಥವಾ ದೇಹದಲ್ಲಾಗುವ ದೈಹಿಕ ಬದಲಾವಣೆಗಳಾ ? ಹಾಗಂತ ಕಂಡ ಕಂಡವರ ಮೇಲೆ ಪ್ರೀತಿ ಹುಟ್ಟುವುದು ನಿಜವಾದ ಪ್ರೀತಿ ಅಲ್ಲವೇ ಅಲ್ಲ. ಈ ಪ್ರೀತಿಯ ಬಗೆಗೆ ಒಂದಷ್ಟು ಗೊಂದಲ ನನ್ನನ್ನು ಈಗಲೂ ಕಾಡಿದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಪ್ರೀತಿಗೂ ಒಂದು ದಿನ…”: ಪೂಜಾ ಗುಜರನ್, ಮಂಗಳೂರು

ಪ್ರೇಮಿಗಳ ದಿನ ಅಂದ್ರೆ ಯಾರಿಗೆ ತಾನೇ ನೆನಪಿರಲ್ಲ. ಫೆಬ್ರವರಿ 14 ರಂದು ವಿಶ್ವದದ್ಯಾಂತ “ವ್ಯಾಲೆಂಟೈನ್ಸ್ ಡೇ” ಆಚರಿಸಲಾಗುತ್ತದೆ. ಪ್ರೀತಿ ಪ್ರೇಮ ಅಂದಾಗ ಪ್ರತಿಯೊಬ್ಬರೂ ಕೂಡ ಪ್ರೇಮಿಗಳಾಗುತ್ತಾರೆ. ಈ ದಿನದ ಬಗ್ಗೆ ಕೇಳಿದರೆ ಕೆಲವರು ಸಣ್ಣಗೆ ನಗುತ್ತಾರೆ ಕೆಲವರು ನಾಚುತ್ತಾರೆ ಇನ್ನೂ ಕೆಲವರು ವಿರೋಧಿಸುತ್ತಾರೆ. ವ್ಯಾಲೆಂಟೈನ್ಸ್ ಡೇ ಅಂದ್ರೆ ಇದು ಬರಿ ಪ್ರೇಮಿಗಳಿಗೆ ಮಾತ್ರ ಇರುವ ದಿನವಲ್ಲ. ಇಲ್ಲಿ ವಯಸ್ಸು ಲಿಂಗ ಭೇದ ಮರೆತು ತಮ್ಮ ಪ್ರೀತಿಯ ನಿವೇದನೆಯನ್ನು ಯಾರು ಬೇಕಾದರೂ ಮಾಡಬಹುದು.. ಅದು ಅವರವರ ಅಭಿಪ್ರಾಯಕ್ಕೆ ಬಿಟ್ಟಿದ್ದು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

”ತನ್ನದೇ ಎಳಸು ಹೃದಯಕ್ಕೊಂದು ಪತ್ರ”: ಪ್ರಸಾದ್ ಕೆ.

ಪ್ರಿಯ ಹರೆಯದ ಎಳಸು ಹೃದಯ… ಹೇಗಿದ್ದೀಯಾ? ಇಂದು ವ್ಯಾಲೆಂಟೈನ್ಸ್ ದಿನವು ಬಂದಿರುವ ನೆಪದಲ್ಲಿ ನಿನ್ನ ಈವರೆಗಿನ ವ್ಯಾಲೆಂಟೈನ್ ಪಯಣಕ್ಕೊಂದು ಸುಮ್ಮನೆ ಮೆಲುಕು ಹಾಕಿ ನೋಡಿದೆ. ಅಬ್ಬಬ್ಬಾ, ಅದೆಷ್ಟು ಬಣ್ಣಗಳು, ಅದೆಷ್ಟು ಏರಿಳಿತಗಳು, ಅದೆಷ್ಟು ರೂಪಾಂತರ? ಅದೇನೇ ಇರಲಿ. ನೀನು ನಡೆದು ಬಂದ ಹಾದಿಯ ಬಗ್ಗೆ ನಿನಗೆ ಹೆಮ್ಮೆಯಿರಲಿ ಎಂಬ ಕಳಕಳಿಯ ವಿನಂತಿ ನನ್ನದು. ನಿನ್ನ ಈ ಹಾದಿಯು ಕಲ್ಲುಮುಳ್ಳುಗಳದ್ದು ಎಂಬುದು ಸತ್ಯ. ಮೊದಲ ಬಾರಿಗೆ ಎಲ್ಲವೂ ಹೊಸತಾಗಿದ್ದರಿಂದ ಸುಮ್ಮನೆ ಬೇಸ್ತು ಬಿದ್ದೆ, ವೃಥಾ ಮೋಸ ಹೋದೆ. ಎರಡನೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿಯ ದಿನದಂದು: ನಾಗರೇಖಾ ಗಾಂವಕರ

ಯಾವುದರಲ್ಲೂ ಆಸಕ್ತಿಯಿಲ್ಲ. ಗುರಿಯಿರದ ಶೂನ್ಯದೆಡೆ ದೃಷ್ಟಿ, ಚಂಚಲತೆ, ಮರೆವು, ನಾನು ಎನ್ನುವುದೇ ಮರೆತು ಹೋದ ಸ್ಥಿತಿ. ಹೌದು.. ಇದು ಪ್ರೀತಿಯ ಮೊದಲ ಕನವರಿಕೆಯ ದಿನಗಳ ಮಾನಸಿಕ ಸ್ಥಿತಿ. ಪ್ರೀತಿ ಎನ್ನುವದು ಅದೂ ಹೇಗೋ ಬೇಡ ಬೇಡವೆಂದರೂ ಬಂದು ಹೇಗಲೇರಿಕೊಂಡು ಆಡಬಾರದ ಆಟ, ನೋಟ, ಕಾಟಗಳ ಜೊತೆಗೆ ಬದುಕಿಗೆ ನೋವನ್ನು, ನಲಿವನ್ನು, ತೃಪ್ತಿಯನ್ನು, ಉನ್ಮತ್ತತೆಯನ್ನು ಕೆಲವು ಬಾರಿ ಅಧ್ವಾನವನ್ನೂ ಮಾಡಿಬಿಡುವ, ಆದರೂ ಜೀವ ಸಂಕುಲ ಜೀವ ಬಿಡುವ ಆಪ್ತ ಭಾವ. ಪ್ರೇಮ ಅನಿರ್ವಚನೀಯವಾದದ್ದು, ಪ್ರೀತಿ ಬಣ್ಣವಿಲ್ಲದ್ದು ಆದರೂ ಹಲವು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿಯ ಪರಿಧಿ: ಪ್ರವೀಣ ನಾಯಕ, ದಾಂಡೇಲಿ

ಪ್ರೀತಿ ಇದ್ದಲ್ಲಿ ಭೀತಿ ಇರದು. ಅದು ಭೀತಿಯನ್ನು ದೂರಕ್ಕೆಸೆಯುತ್ತದೆ. ಇದು ಏಸುಕ್ರೀಸ್ತನ ವಾಣಿ. ಮಾನವಕುಲವನ್ನು ಮೇಲಕ್ಕೆತ್ತುವ ಸ್ಪೂರ್ತಿಯನ್ನು ನೀಡುವುದೇ ಪ್ರೀತಿ. ಆಯುರಾಗೋಗ್ಯ, ಶಾಂತಿಯನ್ನು ನೀಡಬಲ್ಲದ್ದು ಪ್ರೀತಿ. ಕಷ್ಟದ ಆಳದಿಂದಲೂ ವ್ಯಕ್ತಿಯ ನೋವನ್ನು ನಿವಾರಿಸಬಲ್ಲದ್ದು ಪ್ರೀತಿ. ಆದರೆ ಇಂದಿನ ಕಾಲದಲ್ಲಿ ಈ ಪ್ರೀತಿಯ ಅಭಾವ ಕಂಡುಬರುತ್ತಿದೆ. ಬಾಲ್ಯವಸ್ಥೆಯಲ್ಲಿ ತಂದೆತಾಯಿಯರ ಪ್ರೀತಿ ಕಂಡರಿಯದ ಮಕ್ಕಳು ದುಷ್ಟರು ಭ್ರಷ್ಟರು ಕ್ರೂರಿಗಳು ಆಗುತ್ತಾರೆಂದು ಪ್ರಾಜ್ಞರು ಹೇಳಿರುವುದನ್ನು ನಾವು ಕೇಳಿದ್ದೇವೆ. ಮಕ್ಕಳನ್ನು ತಂದೆ ತಾಯಿಯರು ಯಾವಾಗಲೂ ಭಯದಲ್ಲಿರಿಸಬಾರದು. ಅಲ್ಲಿ ಸೇಡಿನ ಮನೋಭಾವ ಹಿಂಸಾಪ್ರವೃತ್ತಿ, ಹೃದಯಹೀನತೆಯು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ