ಹೀಗೆ ಒದಗಿದೊಂದು ಓದು: ಅನುರಾಧ ಪಿ. ಸಾಮಗ
ಉತ್ತರಕಾಂಡ ಓದಿ ಮುಗಿಸಿದ್ದಾಗಿತ್ತು. ಕತೆಯೊಂದಕ್ಕೆ ಎದುರಾದಾಗಲೆಲ್ಲ ಪಾತ್ರಗಳಿಂದ, ಅವುಗಳ ಪಾಡುಗಳಿಂದ ಅಂತರ ಕಾಯ್ದುಕೊಂಡು ಸಾಗುವುದು ಇಲ್ಲಿಯವರೆಗೂ ಸಾಧ್ಯವಾಗಿಲ್ಲದೆ, ಒಮ್ಮೊಮ್ಮೆ ಆ ಮನಸುಗಳ ಒಳಹೊಕ್ಕು, ಇನ್ನೊಮ್ಮೆ ಅವುಗಳನ್ನು ಒಳಗಿಳಿಸಿಕೊಂಡು ಅಂತೂ ಕೊನೆಯ ಪುಟಗಳ ಕಡೆಗೆ ಬರುತ್ತಾ ಪಾತ್ರಗಳು ನಡಕೊಂಡ ರೀತಿಯನ್ನು ಸಾಮಾನ್ಯ ಮನುಷ್ಯರ ಬಾಳ್ವೆಯಂತೆಯೇ ಬಿಂಬಿಸಿದ್ದರ ಪರಿಣಾಮವಾಗಿ ಉಮ್ಮಳಿಸಿ ಬಂದು ಢಾಳಾಗಿ ಉಳಕೊಂಡದ್ದೆಂದರೆ ಎಲ್ಲೆಡೆ ಮುಖ ಮಾಡಿದ ಜೀವಪ್ರೀತಿ! ಬಹುಶಃ ಕತೆಗಾರನೊಬ್ಬನಿಗೆ ತನ್ನ ಬರವಣಿಗೆಯ ಮೂಲಕ ಕತೆಗೆದುರಾದ ಮನಸಿನಲ್ಲಿ ಜೀವನಪ್ರೀತಿ, ಜೀವಪ್ರೀತಿಗಳನ್ನು ಫಳ್ಳಂತ ಮಿನುಗಿಸುವುದು ಸಾಧ್ಯವಾದರೆ ಅದು ಬರವಣಿಗೆಯ … Read more