ಹನ್ನೊಂದು ದಿನಗಳ ವನವಾಸ (ಕೊನೆಯ ಭಾಗ): ಪ್ರಸಾದ್ ಕೆ.
ಇಲ್ಲಿಯವರೆಗೆ ಇವೆಲ್ಲವೂ ಕಮ್ಮಿಯೆಂಬಂತೆ ಜೂಲಿಯಾನಳ ಹೆಜ್ಜೆಹೆಜ್ಜೆಗೂ ಅಪಾಯಗಳಿದ್ದವು. ನದಿಯ ಬದಿಯಲ್ಲಿ ನಡೆಯುತ್ತಿದ್ದರೆ ಅಪಾಯಕಾರಿ ಸ್ಟಿಂಗ್ ರೇಗಳಿಂದ ಮತ್ತು ನೋಡಲು ಮೊಸಳೆಗಳಂತಿರುವ ಕಾಯ್ಮನ್ ಗಳಿಂದ ರಕ್ಷಿಸಿಕೊಂಡು ನಡೆಯಬೇಕಾಗಿತ್ತು. ಇನ್ನು ಕಾಲ್ನಡಿಗೆಯು ನಿಧಾನವಾಗುತ್ತಿದೆ ಎಂದು ಅರಿವಾದಾಗಲೆಲ್ಲಾ ಆಗಾಗ ಈಜುತ್ತಲೂ ಇದ್ದುದರಿಂದ ಜೂಲಿಯಾನಳ ಬೆನ್ನಿನ ಚರ್ಮವು ಸೂರ್ಯನ ಬಿಸಿಲಿಗೆ ಸುಟ್ಟಂತಾಗಿ ಬಿಳಿಚಿಕೊಂಡಿತ್ತು. ಕೆಂಡ ಸುರಿದಂತೆ ನೋವಿನಿಂದ ಉರಿಯುತ್ತಿದ್ದ ತನ್ನ ಬೆನ್ನನ್ನು ಮೆಲ್ಲನೆ ಮುಟ್ಟಿ ನೋಡಿದಾಗ ಅವಳ ಬೆರಳುಗಳಿಗೆ ಸೋಕಿದ್ದು ರಕ್ತ. ಇನ್ನು ಮರದ ದಿಮ್ಮಿಗಳೂ ಕೂಡ ನದಿಯಲ್ಲಿ ತೇಲುತ್ತಿದ್ದರಿಂದ ಅವುಗಳಿಗೆ ಢಿಕ್ಕಿಯಾಗದಂತೆ … Read more