ತಾಯಿಯ ಆಶ್ರು ಒರೆಸಿದ ಪದ್ಮಶ್ರೀ ಪುರಸ್ಕೃತ ಮಲ್ಲೇಶಂ: ಉದಯ ಪುರಾಣಿಕ

ಭಾರತ ಜ್ಯೋತಿ ಲೇಖನ ಸರಣಿ : ತೆಲಂಗಾನಾದ ಚಿಂತಕಿಂಡಿ ಮಲ್ಲೇಶಂ, ಹುಟ್ಟಿದ್ದು ತೆಲಂಗಾನಾ ರಾಜ್ಯದಲ್ಲಿರುವ ಪುಟ್ಟ ಹಳ್ಳಿ ಶಾರ್ಜಿಪೇಟೆಯ ಬಡ ನೇಕಾರ ಕುಟುಂಬವೊಂದರಲ್ಲಿ. ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ, ಶಾಲೆಯಲ್ಲಿ 6ನೆ ತರಗತಿ ಓದುವಾಗಲೇ ತನ್ನ ವಿದ್ಯಾಭ್ಯಾಸ ನಿಲ್ಲಿಸಿದ್ದರು. ಆದರೆ ಅವರು ಮಾಡಿರುವ ಸಾಧನೆಗಾಗಿ ದೊರೆತಿರುವ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗೌರವಗಳನ್ನು ಒಮ್ಮೆ ನೋಡಿ. ಇವರು, ವರ್ಷ 2009ರಲ್ಲಿ ಭಾರತದ ರಾಷ್ಟ್ರಪತಿಗಳಿಂದ ಗೌರವ ಪುರಸ್ಕಾರ, ವರ್ಷ 2016ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಅಮೇಜಿಂಗ್ ಇಂಡಿಯನ್ ಗೌರವ ಪ್ರಶಸ್ತಿ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಕರೆದೊಡನೆ ಬಂದುದ ಕಂಡು ಯಾಮಾರಿದೆಯಾ.. ನಾ ಕಂದಮ್ಮನಲ್ಲ ಕಣ್ಣ ದಿಟ್ಟಿಸಿ ನೋಡು ಕ್ರೂರ ದೈತ್ಯನು ನಾನು ಎಷ್ಟೋ ತ್ವಚೆಯ ಸೀಳಿ ಹಸಿ ರಕುತವ ಕುಡಿದ ಹಲ್ಲಿನ ಮಸಿ ಕಂಡು ಕರಳು ನಡುಗುತಿದೆಯಾ… ಕಂದನೆಂದ್ ಯಾಮಾರಿದೆಯಾ..! ಅಂದೊಮ್ಮೆ ನೆನಪಿದೆಯಾ ಕತ್ತನು ಮುತ್ತಿಡಲು ಬಂದದು ಸರಸವಲ್ಲವದು ನೆತ್ತರಾಸೆ ತುಟಿಯ ತಾಕಲು ಉಸಿರ ಸೋಕುತ ಪಕ್ಕ ಸುಳಿದದು ರಕುತದಾಸೆ ನಂಬಿ ಕೆಟ್ಟೆ ನೀ ಪಾಪದ್ಹೆಣ್ಣೆ ಓಡಿ ಹೋದರೂ ಬಿಡೆನು ನಾನು ಶರಣು ಎಂದರೆ ಬಿಡುವೆನೇನು..? ಚೂಪು ಕಂಗಳ ನೋಟಗಾತಿ ಹಾಗೆ ನೋಡದಿರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವಸ್ಥೆ!: ಎಸ್.ಜಿ.ಶಿವಶಂಕರ್

`ನೆನ್ನೆ ರಾತ್ರಿ ದಾವಣಗೆರೆಯವರು  ಫೋನು ಮಾಡಿದ್ದರು..ಶಾಲಿನಿಯನ್ನು ಹುಡುಗ ಒಪ್ಪಿದ್ದಾನಂತೆ..ಆದ್ರೆ ಹುಡುಗ ಕಾರು ತಗೋಬೇಕಂತೆ, ಆರು ಲಕ್ಷ ವರದಕ್ಷಿಣೆ ಕೇಳ್ತಿದ್ದಾರೆ..ನೀನು ಹೂ ಅಂದರೆ..ನಿಮ್ಮಪ್ಪ ಫೋನು ಮಾಡಿ ಮಾತುಕತೆಗೆ ಕರೀಬೇಕೂಂತಿದ್ದಾರೆ…! ತಿಂಡಿಯ ತಟ್ಟೆ ಟೇಬಲ್ಲಿನ ಮೇಲಿಡುತ್ತಾ ತನ್ನ ತಾಯಿ ಹೇಳಿದಾಗ ರಾಜೀವನಿಗೆ ತನ್ನ ಶರೀರದ ಆ ಜಾಗ ನೆನಪಾಯಿತು. ಹೌದು ಸ್ನಾನ ಮಾಡುವಾಗ ನೋಡಿಕೊಂಡೆನಲ್ಲ..! ಅದರ ನೆನಪಿಂದ ಅವನಿಗೆ ವಿಚಿತ್ರವಾದ ಸಂಕಟವಾಯಿತು. ಆಹಾರ ಗಂಟಲಲ್ಲಿ ಇಳಿಯಲಿಲ್ಲ. ಕಿಟಿಕಿಯಿಂದಾಚೆ ನೋಡಿದ ಇನ್ನೂ ಕತ್ತಲಿತ್ತು. ಗಡಿಯಾರ ಆರೂವರೆಯನ್ನು ತೋರಿಸುತ್ತಿತ್ತು. `ಥೂ..ದರಿದ್ರದ ಟೈಮು! ಇದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಲ್ಲದ ಮನಸ್ಸಿನ ಮಾನಸ: ಗಿರಿಜಾ ಜ್ಞಾನಸುಂದರ್

ಮರದ ಮೇಲೆ ಹಸಿರೆಲೆ ನೋಡಿದಾಗ ಏನೋ ಒಂಥರಾ ಹೊಸತನ, ಮನಸ್ಸಲ್ಲಿ ಮಲ್ಲಿಗೆ ಹೂವಿನ ಪರಿಮಳ ಮತ್ತು ಏನೋ ಹೇಳಲಾಗದ ಸಡಗರ ಮತ್ತು ಸಂಕೋಚದ ಅನುಭವ.ತನ್ನ ಮದುವೆಯ ದಿನಗಳ ನೆನಪು ತರುವ ಪರಿಮಳ. ಆದರೆ ಇತ್ತೀಚಿಗೆ ಬರುಬರುತ್ತಾ ಆ ಭಾವನೆಗಳು ಎಲ್ಲೋ ಕಾಣೆಯಾಗುತ್ತಿರೋ ಹಾಗಿದೆ. ಹೊಸತನದ ಬದಲು ಭಾರವಾಗುತ್ತಿರುವ ಭಾವನೆಗಳು.. ಹೀಗೆ ಯೋಚಿಸುತ್ತಿರುವಾಗಲೇ ಕಣ್ಣಂಚಿನಲ್ಲಿ ಹನಿ …. "ಕುಕ್ಕರ್ ಎಷ್ಟ್ ಸಲ ವಿಸಿಲ್ ಆಯಿತು.. ಅಡುಗೆ ಮನೆಲ್ಲಿ ಯಾರು ಇಲ್ವಾ? ಏನ್ ರೋಗ ಬಂದಿದೆ ಮಾನಸಂಗೆ?"  ಅಂತ ಅತ್ತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಳಿರು-ತಿಲ್ಲಾನ: ಅನುರಾಧ ಪಿ. ಸಾಮಗ

“ನೋಡಮ್ಮಾ ಆ ಕರು ಅಷ್ಟು ಹೊತ್ತಿಂದ ಅಲ್ಲಿ ಅಂಬೇ ಅಂತ ಕರೆಯುತ್ತಾ ಇತ್ತು. ನಾನು ಗಿಡಕ್ಕೆ ನೀರು ಹಾಕಲಿಕ್ಕೆ ಹೊರಗೆ ಹೋಗಿದ್ದೆನಲ್ಲಾ, ಬಡಬಡಾಂತ ನಮ್ಮ ಗೇಟಿನ ಹತ್ತಿರ ಬಂತು, “ಏನೂ ಇಲ್ಲ ಮುದ್ದೂ” ಅಂದೆ, ತನ್ನಷ್ಟಕ್ಕೆ  ಹೋಯ್ತು. ಎಷ್ಟು ಅರ್ಥ ಆಗುತ್ತೆ ನೋಡಮ್ಮಾ. ಅದೇ ಆ ಕೆಂಪು ಕಣ್ಣಿನ  ದನ ಬಂದಿದ್ದರೆ ಮೊಂಡಾಟ ಮಾಡಿಕೊಂಡು ಇನ್ನೂ ಇಲ್ಲೇ ನಿಂತಿರುತ್ತಿತ್ತು ಅಲ್ವಾ?” ಅಂದಳು ಮಗಳು. ಹೌದಲ್ಲವೇ ಅನ್ನಿಸಿತು.  ನಮ್ಮ ಏರಿಯಾದಲ್ಲಿ ಒಂದಷ್ಟು ದನ ಕಟ್ಟಿಕೊಂಡು ಹಾಲು ಪೂರೈಸುವವನೊಬ್ಬನಿದ್ದಾನೆ. ಪ್ರತಿದಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪರಿವರ್ತನೆಗೆ ದಾರಿ ಯಾವುದಾದರೇನು?: ನಾಗರೇಖಾ ಪಿ. ಗಾಂವಕರ

                  ಹೊಸ ಸುತ್ತೋಲೆಯಂತೆ ಪದವಿ-ಪೂರ್ವ ಹಂತಕ್ಕೂ ಪ್ರಾರ್ಥನೆಯನ್ನು ಕಡ್ಡಾಯಗೊಳಿಸಿ ಇಲಾಖೆ ಆದೇಶ ಹೊರಡಿಸಿದ್ದು ಪಡ್ಡೆ ಹುಡುಗರಿಗೆ ಕೊಂಚವೂ ಇಷ್ಟವಿಲ್ಲ. ಆಗಾಗ ಆ ಬಗ್ಗೆ ತಕರಾರು ಮಾಡುವ ಗುಂಪು ಇದ್ದೆ ಇತ್ತು. ಆದರೂ ಪ್ರಾಚಾರ್ಯರು ಅದಕ್ಕೆಲ್ಲ ಅವಕಾಶ ಕೊಡದೆ ಕಡ್ಡಾಯ ಎಂದು ನೋಟೀಸು ತೆಗೆದು ಒತ್ತಡ ಹೇರಿದ್ದರು. ಹಾಗಾಗಿ  ವಿದ್ಯಾರ್ಥಿಗಳು ಪ್ರಾರ್ಥನೆಗೆ ಹಾಜರಾಗುವುದು ಅನಿವಾರ್ಯವಾಗಿತ್ತು. ವಾಣಿಜ್ಯ ವಿಭಾಗದ ಆ ತರಗತಿಯಲ್ಲಿ ಇರುವುದು ಬರೀಯ ಇಪ್ಪತೆಂಟು ವಿದ್ಯಾರ್ಥಿಗಳು ಮಾತ್ರ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನದಭಾವುಕತೆಗೊಂದು ದಿಕ್ಕು ತೋರಿಸಿದವಳಿಗೆ: ದೊರೇಶ

           ಆಸೆ ಹುಡುಗನ ಪತ್ರವಿದು. ಅತಿರೇಕ ಅಂದುಕೊಳ್ಳಬೇಡ . ತಿರುಗಿ ಬೀಳುವ ಮನಸ್ಸಿಗೆ ತುಂಬಾ ದಿನ ಸಮಾಧಾನ ಹೇಳಲಾರೆ. ಮನಸ್ಸಿನದು ಒಂದೇ ಹಠ, ತನಗೆಎಲ್ಲವೂ ಬೇಕು. ಎಷ್ಟುಸಲ ತಿಳಿ ಹೇಳಿದರೂ ಕೇಳಲೊಲ್ಲದು. ನಾನು ವಿಹ್ವಲನಾಗಿ ಹೋಗಿದ್ದೇನೆ. ಕಣ್ಣಂಚಿನಲ್ಲಿ ನೆನಪಿನ ನೀರು. ಎಲ್ಲವನ್ನೂ ಹೇಳಬೇಕು ಅಂದುಕೊಂಡಿದ್ದೆ. ನನ್ನ ಮಾತು ನಿರುಪಯಕ್ತವೆನಿಸುವುದು ನಿನ್ನ ಕಣ್ಣುಗಳ ನವಿಲ ನರ್ತನ ಕಂಡಾಗ. ನಿನಗೆ ಗೊತ್ತು! ಸುಮ್ಮನೆ ಕಾಲಕಳೆಯಲೆಂದು ಸಮುದ್ರದ ದಡದಲ್ಲಿ ನಿಂತವ ನಾನು. ಅಂದು ಅಂಬೆಗಾಲಿಟ್ಟುಕೊಂಡು ಮಗುವಿನಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗ್ರೇಟ್ ಬ್ಯಾರಿಯರ್ ಎಂಬ ಹವಳ ಸಮೂಹದ ಅವಸಾನ: ಅಖಿಲೇಶ್ ಚಿಪ್ಪಳಿ

ಬೆಂಗಳೂರಿನ ಹೊರವಲಯದಲ್ಲಿ ಮಾನವನ ದೌರ್ಜನ್ಯಕ್ಕೆ ತುತ್ತಾಗಿ ಕಾಲುಮುರಿದುಕೊಂಡು ಜೀವನ್ಮರಣಗಳ ನಡುವೆ ಒದ್ದಾಡುತ್ತಿರುವ ಸಿದ್ಧ ಎಂಬ ಹೆಸರಿನ ನಡುಹರಯದ ಆನೆಯನ್ನು ಕಡೆಗೂ ಜನರ ಒತ್ತಾಯಕ್ಕೆ ಮಣಿದು ಇಲಾಖೆ ಚಿಕಿತ್ಸೆ ನೀಡಲು ಪ್ರಾರಂಭಿಸಿದ ಹೊತ್ತಿನಲ್ಲೆ, ಏನೇ ಆದರೂ 800 ಚಿಲ್ಲರೆ ಮರಗಳನ್ನು ಕಡಿದು ಉಕ್ಕಿನ ಸೇತುವೆ ನಿರ್ಮಾಣ ಮಾಡಿಯೇ ಸಿದ್ಧ ಎಂದು ಹಠ ಹಿಡಿದು ಸರ್ಕಾರ ಗಟ್ಟಿ ನಿಲುವು ತಳೆದ ಹೊತ್ತಿನಲ್ಲೇ, ಜನರ ಅಭಿಪ್ರಾಯವನ್ನು ಕಡೆಗಣಿಸಿ ಯಾವುದೇ ಯೋಜನೆಯನ್ನು ಅದರಲ್ಲೂ ಉಕ್ಕಿನ ಸೇತುವೆಯನ್ನು ನಿರ್ಮಾಣ ಮಾಡಲು ಬಿಡುವುದಿಲ್ಲವೆಂದು ಪಟ್ಟು ಹಿಡಿದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

‘ಬುದ್ಧ ಹೇಳಿದ ಕಥೆ’ ನಾಟಕ ಪ್ರಯೋಗ : ಹಿಪ್ಪರಗಿ ಸಿದ್ಧರಾಮ

ಮಕ್ಕಳ ಲೋಕದ ಒಗ್ಗಟ್ಟಿನ ಸೂತ್ರ ಹೇಳುವ ‘ಬುದ್ಧ ಹೇಳಿದ ಕಥೆ’ ನಾಟಕ ಪ್ರಯೋಗ.  ಮಗು ಮನಸ್ಸಿನ ಧಾರವಾಡದ ಉದಯೋನ್ಮುಖ ಹವ್ಯಾಸಿ ರಂಗನಟಿ ಶ್ರೀಮತಿ ಗಿರಿಜಾ ಹಿರೇಮಠ ಅವರು ಬಹು ಆಸಕ್ತಿ-ಶ್ರಮವಹಿಸಿ ಎಸ್.ಮಾಲತಿ ವಿರಚಿತ ‘ಬುದ್ಧ ಹೇಳಿದ ಕಥೆ’ ನಾಟಕವನ್ನು ಇತ್ತೀಚೆಗೆ (ಡಿ.27) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಮಕ್ಕಳ ಮಂಟಪದ ಆಶ್ರಯದಲ್ಲಿ ಸಾಧನಕೇರಿಯ ಆಲೂರ ವೆಂಕಟರಾವ್ ಪದವಿ ಪೂರ್ವ ಮಹಾವಿದ್ಯಾಲಯದ ಮಕ್ಕಳು ಮುದ್ದು-ಮುದ್ದಾಗಿ ಅಭಿನಯಿಸಿ ನೆರದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಹಲವಾರು ಶಾಲಾ-ಕಾಲೇಜುಗಳ ಮಕ್ಕಳು ಕೇವಲ ಶಾಲಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೋದಿಯ ಹಾದಿ: ಕೆ ಟಿ ಸೋಮಶೇಖರ ಹೊಳಲ್ಕೆರೆ.

  ದೇಶವನ್ನು ಆಳುವವರ ಉದ್ದೇಶ ದೇಶದ ನೆಮ್ಮದಿ. ದೇಶವನ್ನು ಕಾಡುವ ಸಮಸ್ಯೆಗಳನ್ನು ಗುರುತಿಸಿ, ಹೋಗಲಾಡಿಸುವ ಮಾರ್ಗಗಳನ್ನು ತಿಳಿದು, ಅದಕ್ಕೆ  ಶಾಶ್ವತ ಯೋಜನೆಗಳನ್ನು ರೂಪಿಸಿ, ನಿಗಧಿತ ಸಮಯದೊಳಗೆ ಅವುಗಳನ್ನು ಪರಿಹರಿಸುವುದು ಉತ್ತಮ ಆಡಳಿತಗಳ ಲಕ್ಷಣ. ಆಗ ಸರ್ಕಾರಗಳ ಹೊರೆ  ಕಡಿಮೆಯಾಗಿ, ಹೆಸರು ಜಾಸ್ತಿಯಾಗಿ, ಜನಕ್ಕೆ ನೆಮ್ಮದಿ ಲಭಿಸೀತು. ಭಾರತ ವಿಜ್ಙಾನ, ತಂತ್ರಜ್ಙಾನ,  ಬಾಹ್ಯಾಕಾಶ … ಗಳಲ್ಲಿ ರಭಸವಾಗಿ ಮುನ್ನುಗ್ಗುತ್ತಿದೆ. ಸರ್ವತೋಮುಖ ಅಭಿವೃದ್ದಿಗೆ  ಅನೇಕ ಸಮಸ್ಯೆಗಳು ಅಡ್ಡಿಯಾಗಿವೆ. ಆ ಸಮಸ್ಯೆಗಳಲ್ಲಿ ಎರಡು ವಿಧ. ಆಂತರಿಕ ಮತ್ತು ಬಾಹ್ಯ ಸಮಸ್ಯೆಗಳು.  ಬಡತನ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ವಾರ್ಡ್ ನಂಬರ್ 6”, ಕನ್ನಡ ನಾಟಕದ ಎರಡನೇ ಪ್ರಯೋಗ

ಆತ್ಮೀಯರೆ,  "ವಾರ್ಡ್ ನಂಬರ್ 6", ಕನ್ನಡ ನಾಟಕದ ಎರಡನೇ ಪ್ರಯೋಗಕ್ಕೆ ತಮಗಿದು ಆದರದ ಆಹ್ವಾನ.  ಸ್ಥಳ: ಕೆ.ಹೆಚ್. ಕಲಾಸೌಧ, ಹನುಮಂತನಗರ, ರಾಮಾಂಜನೇಯ ಗುಡ್ಡದ ಪಕ್ಕದಲ್ಲಿ, ಬೆಂಗಳೂರು ದಿನಾಂಕ: 28, ಜನವರಿ 2017 (ಶನಿವಾರ) ಸಮಯ: ಸಂಜೆ 7.30ಕ್ಕೆ.  ಮೂಲಕತೆ: ಆಂಟನ್ ಚೆಕಾವ್ (ರಷ್ಯನ್ ಬರಹಗಾರ) ಮೂಲ ನಾಟಕ ರಚನೆ: ಡಿ.ಆರ್. ನಾಗರಾಜ್ ವಿಸ್ತೃತ ರಂಗರೂಪ: ಚನ್ನಕೇಶವ ಸಂಗೀತ: ಅಭಿ-ಜೋಯಲ್ ಬೆಳಕು: ಮಂಜು ನಾರಾಯಣ್ ವಿನ್ಯಾಸ-ನಿರ್ದೇಶನ: ಕೆ.ಎಸ್ ಪರಮೇಶ್ವರ ಗೆಳೆಯರೊಂದಿಗೆ ಮರೆಯದೆ ಬನ್ನಿ… ಧನ್ಯವಾದಗಳೊಂದಿಗೆ,  ಕಲಾಮಾಧ್ಯಮ ತಂಡ ದೂ: … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಶೋಧರ ಚರಿತದ ಸಂಕಲ್ಪಹಿಂಸೆಯ ಬಹುರೂಪಗಳು : ದೊರೇಶ ಬಿಳಿಕೆರೆ

      ಜನ್ನನ ಯಶೋಧರ ಚರಿತೆ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಿಭಿನ್ನವಾದ ಕೃತಿ. ಕಾವ್ಯದ ವಸ್ತು ಮತ್ತು ರೂಪದಲ್ಲೂ, ಅಭಿವ್ಯಕ್ತಿಯ ಸ್ವರೂಪದಲ್ಲೂ, ಕಾವ್ಯೋದ್ಧೇಶದಲ್ಲೂ ಇದೊಂದು ಭಿನ್ನ ದಾರಿಯನ್ನೇ ತುಳಿದದೆ. ಸಾಂಪ್ರದಾgಯಿಕ ಜೈನಕಾವ್ಯಗಳಿಗಿಂತಲೂ ಮಿಗಿಲಾಗಿ ಜೀವದಯೆ ಜೈನಧರ್ಮಂ ಅನ್ನುವ ಆಶಯದೊಂದಿಗೆ ಇಡೀ ಕಾವ್ಯ ಕಂದಪದ್ಯಗಳಲ್ಲಿಯೇ ರಚಿತವಾಗಿದೆ. ಬೆರಳೆಣಿಕೆಯಷ್ಟು ವೃತ್ತಗಳಿವೆ. ಸಮಕಾಲೀನ ಸಂದರ್ಭದಲ್ಲಿ ಜರುಗುತ್ತಿದ್ದ ಧಾರ್ಮಿಕ ಮತ್ತು ರಾಜಕೀಯ ಪಲ್ಲಟಗಳಿಂದಾಗಿ ಜನ್ನ ಅನುಸರಿಸಿದ ಮತ ಪ್ರತಿಪಾದನೆಯ ಮಾರ್ಗ ಆ ಕಾಲದ ಸರಿದಾರಿ ಎನಿಸಿತು. ಈ ಕೃತಿಯ ಮತಪ್ರತಿಪಾದನೆಯ ತತ್ವವನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಲ್ಲಿ ಟ್ರಂಪಾಯಣ – ಇಲ್ಲಿ ನೋಟುಗಳ ಮರಣ!!!: ಅಖಿಲೇಶ್ ಚಿಪ್ಪಳಿ

ಅತ್ಯಂತ ವಿವಾದಾತ್ಮಕ ಹೇಳಿಕೆ ನೀಡುತ್ತಾ, ಸದಾ ವಿವಾದದಲ್ಲೇ ಮುಳುಗೇಳುತ್ತಾ ಅಮೇರಿಕಾದ ಅಧ್ಯಕ್ಷ ಪದವಿಯನ್ನು ಏರಿದ ರಿಪಬ್ಲಿಕ್ ಬಣದ ಮಹಾನುಭಾವ ಟ್ರಂಪ್ ಮೂಲತ: ಉದ್ದಿಮೆದಾರ, ಬಂಡವಾಳಶಾಹಿ. ಇವನ ಎದುರಾಳಿ ಇವನಿಗಿಂತ ಹೆಚ್ಚು ಮತ ಪಡೆದರೂ ತಾಂತ್ರಿಕ ರಾಜಕಾರಣದ ಕಾರಣಗಳಿಂದಾಗಿ ಸೋಲಬೇಕಾಯಿತು. ಬಿಡಿ ಈ ಅಂಕಣದಲ್ಲೇಕೆ ರಾಜಕೀಯವೆಂದು ಮೂಗು ಮುರಿದೀರಿ. ಅಪಾಯವಿರುವುದು ಈ ಮನುಷ್ಯನ ಚಿಂತನೆಗಳಲ್ಲಿ ಹಾಗೂ ಧೋರಣೆಗಳಲ್ಲಿ ಎಂದು ಹೇಳಲೇಬೇಕಾಗಿದೆ. ಹವಾಗುಣ ಬದಲಾವಣೆ ಅಥವಾ ವಾತಾವರಣ ವೈಪರೀತ್ಯವೆನ್ನುವುದು ಬರೀ ಸುಳ್ಳು ಎಂದು ಹೇಳುವವರ ಗುಂಪಿನ ನಾಯಕನೀತ. ಇಂಗಾಲಾಮ್ಲ ಹೆಚ್ಚುವುದರಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕದ್ದು ತಿನ್ನುವ ರುಚಿ: ಸುನೀತಾ ಕುಶಾಲನಗರ

ನಾನು ಕುಳಿತಿದ್ದ ರೈಲು ಹೊರಡಲು ಇನ್ನೂ ಸಮಯವಿತ್ತು. ಜನರು ಹತ್ತುವ ಇಳಿಯುವ ಗಜಿಬಿಜಿಯ ಗಲಾಟೆ ಕಡೆ ಕಣ್ಣಾಯಿಸಿದೆ. ಕೆಲವರು ಬೋಗಿಯೊಳಗೆ ತಮ್ಮ ಆಸನ ಹುಡುಕುತ್ತಿದ್ದಾರೆ. ಮತ್ತೆ ಕೆಲವರು ತಮ್ಮ ಲಗೇಜು ಇಡುವ ಭರದಲ್ಲಿದ್ದಾರೆ. ಕೆಲವರ ಬ್ಯಾಗುಗಳನ್ನು ಅಪ್ಪರ್ ಬರ್ತ್‍ನಲ್ಲಿಡುತ್ತಿದ್ದಾರೆ. ಇನ್ನೂ ಕೆಲವರು ಇಡೀ ಮನೆ ಖಾಲಿ ಮಾಡಿ ಬಂದಷ್ಟು ಲಗೇಜ್ ತಂದು ಇಡಲು ಸ್ಥಳವಿಲ್ಲದೆ ಪೇಚಾಡುತ್ತಿದ್ದಾರೆ. ಈ ಎಲ್ಲಾ ಗಲಾಟೆಯ ಮಧ್ಯೆಯೂ ಸೀಬೆಬುಟ್ಟಿ ಹಿಡಿದ ಹುಡುಗಿಯೊಬ್ಬಳು ತೂರಿ ಬಂದಳು. ಅವಳು ಮಾರಲು ತಂದ ಬುಟ್ಟಿಯೊಳಗೆ ಬಿಸಿಲಿಗೆ ಬಾಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭೂಮಿಕಾ: ನಂದಾ ಹೆಗಡೆ

"ಭಟ್ರನ್ನ ಒಳಗೆ ಕರಿಲನೇ" ಎಂದು ನನ್ನವಳಿಗೆ ಕೇಳಿ ಒಪ್ಪಿಗೆ ಪಡೆದು ನಾನು ಇಬ್ಬರು ಭಟ್ಟರೊಂದಿಗೆ ದೇವರ ಮನೆ ಪ್ರವೇಶಿಸಿದೆ. ಇಂದು ನನ್ನಮ್ಮನ ಎಂಟನೇ ಶ್ರಾಧ್ದ. ಪ್ರತೀ ಶ್ರಾಧ್ದದ ದಿನವೂ ನಾನು ಒಂದು ರೀತಿಯ ಭಾವೋದ್ವೇಗಕ್ಕೆ ಒಳಗಾಗುತ್ತೇನೆ. ಅಮ್ಮನ ನೆನಪೇ ಹಾಗೆ. ನೋವು ನಲಿವಿನ ತಂತಿ ಎದೆಯಲ್ಲಿ ಮೀಟಿದ ಹಾಗೆ.  ನನ್ನಮ್ಮ ಹುಟ್ಟು ಹೋರಾಟಗಾರ್ತಿ. ಮದುವೆಗೆ ಮೊದಲೇ ತನ್ನ ಅಪ್ಪ, ಅಣ್ಣನ ಜೊತೆಗೆ ತೋಟ ಗದ್ದೆಗಳ ಕೆಲಸ ಮಾಡುವವಳಂತೆ. ನನ್ನಜ್ಜಿ ಯಾವಾಗಲೂ "ನಿನ್ನಮ್ಮ ಗಂಡಾಗಿ ಹುಟ್ಟಬೇಕಿತ್ತು"ಎಂದು ಹೇಳುತ್ತಿದ್ದರು. ಮದುವೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ವಾತಂತ್ರ್ಯ ಹೋರಾಟವು, ವ್ರತಗಳ ಬಂಧನವು: ಕೆ ಟಿ ಸೋಮಶೇಖರ ಹೊಳಲ್ಕೆರೆ,

    ಈ ಮನುಷ್ಯನಿಗೆ ತಲೆಬಾಗಿ ಹೃದಯಪೂರ್ವಕ ನಮಿಸಬೇಕೆನ್ನಿಸುವುದು ದೇಶದ ಸ್ವಾತಂತ್ರ್ಯ ಹೋರಾಟದ ಮುಂದಾಳು ಆಗಿದ್ದ ಎಂದು ಅಲ್ಲ. ಹೋರಾಡಲು ಆಯ್ದುಕೊಂಡ ಮಾರ್ಗ ಅತ್ಯುನ್ನತವಾದುದು ಆಗಿತ್ತೆಂದು. ಸ್ವಾತಂತ್ರ್ಯ ಎಂದರೆ ನಾವು ಬಯಸಿದಂತೆ ಬದುಕಲು ಸಾಧ್ಯವಾಗುವದು. ಬದುಕಿನ ಮೇಲೆ ಯಾರ, ಯಾವ ಒತ್ತಡವೂ ಇರದೆ ಬದುಕುವುದು. ಯಾರ ಕಟ್ಟುಪಾಡುಗಳಿಗೆ ದೌರ್ಜನ್ಯಕೂ ಒಳಗಾಗದೆ ಬದುಕುವುದು. ಕಟ್ಟುಪಾಡುಗಳೇನಾದರೂ ಹಾಕಿದರೆ, ಹಿಂಸೆ ಮಾಡಿದರೆ ಮಾನವನು ಬದುಕಲು ತೊಂದರೆಯಾಗುತ್ತದೆ.ಕಟ್ಟುಪಾಡುಗಳು, ಹಿಂಸೆ ಹೆಚ್ಚಿದಂತೆಲ್ಲ ಬದುಕಲು ತೊಂದರೆ ಹೆಚ್ಚಿ,ಉಸಿರುಗಟ್ಟಿದಂತಾಗುತ್ತದೆ. ವ್ಯಕ್ತಿ ಸ್ವಾತಂತ್ರ್ಯದ  ಹರಣವಾಗುತ್ತದೆ. ಇದೇ ವಾತಾವರಣ ಮುಂದುವರಿದರೆ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

★ಸುತ್ತೋಣ ಬನ್ನಿ ಕರ್ನಾಟಕ★ ಬನ್ನಿರಿ ಗೆಳೆಯರೆ ನಾಡನು ಸುತ್ತಿ ದಸರ ರಜೆಯನು ಕಳೆಯೋಣ|| ಸ್ವಚ್ಛ ನಗರ ಮೈಸೂರಿಗೆ ಹೋಗಿ ದಸರೆಯ ವೈಭವ ನೋಡೋಣ|| ರಾಜಧಾನಿ ಬೆಂಗ್ಳೂರಿಗೆ ಹೋಗಿ ಪ್ರೇಕ್ಷಣೀಯ ಸ್ಥಳ ಸುತ್ತೋಣ|| ಬಡವರ ಊಟಿ ಹಾಸನ ಜಿಲ್ಲೆಯ ಬೇಲೂರು ಹಳೇಬೀಡು ನೋಡೋಣ|| ಬಿಸಿಲು ನಗರಿ ಬಳ್ಳಾರಿಗೆ ಹೋಗಿ ಹಂಪಿಯ ಶಿಲ್ಪಗಳ ಸುತ್ತೋಣ|| ಬೆಳಕ ನೀಡುವ ರಾಯಚೂರಿನಲಿ ಶಕ್ತಿನಗರವನು ನೋಡೋಣ|| ಬಾದಾಮಿ ಐಹೊಳೆ ಪಟ್ಟದ ಕಲ್ಲಿನ ಕಲಾವೈಭವವ ಸವಿಯೋಣ|| ಬಂದರು ನಗರ ಮಂಗಳೂರಿನಲಿ ಕಡಲಿನ ಆರ್ಭಟ ಅರಿಯೋಣ|| ಕರುನಾಡ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಲೇಖನಗಳು: ರಘುಚರಣ್, ಸಹನಾ ಪ್ರಸಾದ್

ಜಸ್ಟ್ ಮಿಸ್ಸು..!! ಎರಡು ಜಿಲ್ಲೆಗಳ ಗಡಿಯಲ್ಲಿ ನೆಲೆಸಿ ಕಾಯುವ ಮ್ಯಾಗಲಟ್ಟಿ ಜಕ್ಕಪ್ಪನ ಮುಂದೆ ಸಣ್ಣೀರ ಬಕುತಿಯಿಂದ ಕೈ ಮುಗಿದು ಕೆನ್ನೆ ಬಡಿದುಕೊಂಡು ಮನಸಲ್ಲೇ ಅಪ್ಪಣೆ ಕೇಳಿಕೊಳುತಿದ್ದ. “ಸೈಕಲ್ ಪಕ್ಸಕ್ ಓಟಾಕ್ತೀನಿ ಅಂತವ ದುಡ್ ತಕಂಡ್ ಬುಟ್ಟಿದೀನಿ ನನ್ನಪ್ಪಾ.. ಅವ್ನಿಗೇ ಓಟ್ ಆಕದ್ ಒಳ್ಳೇದನ್ನಂಗಿದ್ರೆ ಬಲ್ಗಡಿಕ್ ಕೊಡೂ.. ಬ್ಯಾಡಾ ಚೆಂಡೂವಿನ್ ಪಕ್ಸಕ್ಕೇ ಓಟ್ ಆಕು ಅನ್ನಂಗಿದ್ರೆ ಎಡಗಡಿಕ್ ಕೊಡೂ..” ಜಕ್ಕಪ್ಪನಿಗೆ ಏನೋ ಕೋಪ, ಚೆಂಡೂವಿನ್ ಪಕ್ಸದೋನ್ ಗೆಲ್ಲಬಾರದು ಅಂತ. ಅದ್ಕೆ ಬಲದಾಗಡೆ ಊವಾನಾ ಪಳುಕ್ಕುನ್ ಉದುರಿಸಿಬಿಟ್ಟಾ. ಆದ್ರೆ ಅಷ್ಟರಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿ ಪ್ರೇಮ ಕಿರು ಲೇಖನಗಳು: ಹರೀಶ್ ಹೆಗಡೆ, ಅಭಿಷೇಕ್ ಪೈ

ಅವಳ ಡೈರಿಯ ಪುಟಗಳಿಂದ… ಆತ ವಿಕ್ರಮ್, ಆ ವರುಷ ತಾನೆ ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನಲ್ಲಿ ಎಮ್.ಎನ್.ಸಿ. ಕಂಪನಿಯೊಂದರಲ್ಲಿ ಕೆಲಸ ಮಾಡುತಿದ್ದ ಯುವಕ. ಆ ದಿನ ಶನಿವಾರ ಆಫಿಸ್ ಗು ರಜ, ಬೆಳಗ್ಗೆ ಎದ್ದು  ಸುಮ್ಮನೆ ಒಂದು ರೌಂಡ್ ತಿರುಗಾಡಿ ಬಂದು ಉಟ ಮಾಡಿ ಮಲಗಿ ಎದ್ದವನಿಗೆ  ಏನು ಮಾಡಲೂ ಮನಸಿಲ್ಲದ ಒಂದು ರೀತಿಯ ಜಡತ್ವ ಆವರಿಸಿತ್ತು. ಆಗಲೇ ನೆನಪಾಗಿದ್ದು ಕಳೆದ ವಾರ ತನ್ನ ಉರಿಗೆ ಹೋದಾಗ ಗೆಳತಿ ಸುನೀತಾ ಫ್ರೆಂಡ್ ಪ್ರೇಮ  ಕೊಟ್ಟ ಗಿಫ್ಟ್. ಬೇರೆ ಯಾರಾದರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಟಿ.ಎಸ್.ಗೊರವರ ಅವರ “ರೊಟ್ಟಿ  ಮುಟಗಿ” ಕಾದಂಬರಿ ಲೋಕಾರ್ಪಣೆ

ಧಾರವಾಡದ ರಂಗಾಯಣ ಆವರಣದಲ್ಲಿರುವ ಸುವರ್ಣ ಸಾಂಸ್ಕೃತಿಕ ಸಮುಚ್ಛಯದಲ್ಲಿ ಜನೆವರಿ 29, ರವಿವಾರ ಬೆಳಗ್ಗೆ 10.30ಕ್ಕೆ ಟಿ.ಎಸ್.ಗೊರವರ ಅವರ "ರೊಟ್ಟಿ  ಮುಟಗಿ" ಕಾದಂಬರಿ ಲೋಕಾರ್ಪಣೆ. ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ತುಂಡು ಬಟ್ಟೆಯ ಮಾನ…..  ನಡೆದು ಹೋಗಲು ಅವಳು ಹಾದಿಯಲಿ  ಹಸಿದ ಮೊಸಳೆಗಳಂತೆ ನಿಂತು  ಕಾಯುವರು ಚುಡಾಯಿಸಲು ……  ಸೂಜಿಯ ಕಣ್ಣೋಟಗಳಿಂದ ಕೊಲ್ಲುವರು  ಅವಳ ಉಡುಗೆಯ ಅಂಚು ಪಾಪ!! ಗಾಳಿಗೆ ಹಾರಲು….  ಸಣ್ಣ ಬಟ್ಟೆ ತೊಡಲೇ ಬೇಕಿಲ್ಲವಳು  ಕ್ಷಣ ಕ್ಷಣ ಒಳಒಳಗೆ ಸಾಯಲು , ಕಾಲು ಭೂಮಿಗೆ ಸೋಕಿದರೆ ಸಾಕು, ಸಿದ್ಧವಾಗಿವೆ ಸಮಾಜ, ಕಟ್ಟುನಿಟ್ಟು, ಲಿಂಗ ತಾರತಮ್ಯ ಗಳು  ಅವಳ ಇರಿಯಲು….  ತುಂಡು ಬಟ್ಟೆ ತೊಟ್ಟ ಮಾತ್ರಕ್ಕೆ ಹೆಣ್ಣು  ಪರವಾನಗಿ ನೀಡಿದಂತೆಯೇ ಮುಟ್ಟಲು?????? ಹೌದೆನ್ನುವವರೇ ಹೇಳಿ ಹಾಯುವಿರಾ ನೀವು  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

  ‘ಬಿ, ಎಡ್ನಲ್ಲಿ ಒಂದು ದಿನ’: ಯಲ್ಲಪ್ಪ ಹಂದ್ರಾಳ

ನಾಳೆ "ಕುಮಾರಗಂಧರ್ವ ಹಾಲ್ ನಲ್ಲಿ (ಬೆಳಗಾವಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಶಕ್ತರು ಭಾಗವಹಿಸಬೇಕು ಮತ್ತು ಆಸಕ್ತರು ಕಾರ್ಯಕ್ರಮವನ್ನು ವೀಕ್ಷಿಸಬೇಕು. ಒಟ್ಟಿನಲ್ಲಿ ಎಲ್ಲರೂ ಅಲ್ಲಿರಬೇಕು'' ಎಂದು ಪ್ರಿನ್ಸಿಪಾಲರಾದ ಶ್ರೀ ಬಿ. ಮಲ್ಲಿಕಾರ್ಜುನ ಸರ್ ಅವರು ಗಂಭೀರವಾಗಿ ಹೇಳಿದಾಗ ರೋಮಾಂಚನವಾಯಿತು. ಏಕೆಂದರೆ ಬಿ. ಎಡ್ ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಅಂದ್ರೆ ಮರುಭೂಮಿಯಲ್ಲಿ ಸಿಗುವ ಓಯಾಸಿಸ್ ಇದ್ದಹಾಗೆ. ಅದೂ ಕೆ. ಡಿ ದೇಶಪಾಂಡೆ ಮತ್ತು ಆನಂದ ಅಪ್ಪುಗೋಳ್(ಧರ್ಮದೇವತೆ, ನಂತರ ಸಂಗೊಳ್ಳಿರಾಯಣ್ಣ ಸಿನೆಮಾ ಖ್ಯಾತಿಯ)ಅವರುಗಳು ನಡೆಸುವ ಕಾರ್ಯಕ್ರಮ. ಸರಿ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹುರಿಗೆಜ್ಜಿಯ ಸದ್ದು ಮನಸಿನ ಕಿವಿತಾಕಿದಾಗ…: ಸುರೇಶ ಎಲ್.ರಾಜಮಾನೆ, ರನ್ನಬೆಳಗಲಿ

ಕೃತಿ: ಹುರಿಗೆಜ್ಜಿ ಲೇಖಕರು:  ರಾಜಕುಮಾರ್ ಮಡಿವಾಳರ ಅವಲೋಕನ:  ಸುರೇಶ ಎಲ್.ರಾಜಮಾನೆ, ರನ್ನಬೆಳಗಲಿ ಹುರಿಗೆಜ್ಜಿಯ ಸದ್ದು ಮನಸಿನ ಕಿವಿತಾಕಿದಾಗ… *** ರಾಜಕುಮಾರ್ ಮಡಿವಾಳರ ಅವರನ್ನು ಬೇಟಿಯಾಗಿ ಸರಿಯಾಗಿ ಎರಡು ವರ್ಷಗಳ ನಂತರ ಮತ್ತೊಮ್ಮೆ ಮೊನ್ನೆ ನಡೆದ ಮಕ್ಕಳ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ಎದುರುಗೊಂಡೆನು. ಈ ಕವಿ ಜೊತೆಗೆ ಬರೆತಾಗ ಕವಿ ಬೆರೆಯುವದಕ್ಕು ಬರೆಯುವದಕ್ಕೂ ವ್ಯತ್ಯಾಸವಿಲ್ಲ ಅನಿಸಿತು. ಪ್ರೀತಿಯಿಂದ ಹುರಿಗೆಜ್ಜಿ ಕೇಳಿದಾಗ ರಾಜಮರ್ಯಾದೆಯೊಂದಿಗೆ…  ಎಂದು ಬರೆದು ನನ್ನ ಕೈಗಿಟ್ಟ ಈವತ್ತು ಅವನ ಹುರಿಗೆಜ್ಜಿಯ ಸದ್ದನ್ನು ಮನಸಿನ ಕಿವಿ ನಿಮರಿಸಿಕೊಂಡು ಕೇಳುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿವೇಕವಾಣಿ !: ಕೆ ಟಿ ಸೋಮಶೇಖರ ಹೊಳಲ್ಕೆರೆ.

ತನಗೆ ನಲವತ್ತು ವರುಷ ತುಂಬುವ ಮುನ್ನ ಭಾರತವ ವಿಶ್ವಮಾನ್ಯವಾಗಿಸಿ, ಭಾರತದ ಧರ್ಮ, ಸಂಸ್ಕೃತಿಯ ಜಗಕೆ ಸಾರಿ, ಹಿಂದೂ ಧರ್ಮದ ಉದಾತ್ತತೆಯನ್ನು ಅರ್ಥೈಸಿ, ಭಾರತದ ಬಗೆಗೆ ಮಹಾನ್, ಉದಾತ್ತ ಭಾವನೆ, ಬರುವಂತೆ ಮಾಡಿ, ಅದ್ಬುತವ ಸಾಧಿಸಿ, ವಿಶ್ವಮಾನ್ಯನಾದ. ಆ ವೀರ ಸನ್ಯಾಸಿ  ತನ್ನ ಆಕರ್ಷಕ ನಿಲುವಿನಿಂದ, ಉದಾತ್ತ ಮಾತಿನಿಂದ, ಸಿರಿ ಕಂಠದಿಂದ ಜನರ ಮಂತ್ರಮುಗ್ದಗೊಳಿಸಿ ಜಗವ ಗೆದ್ದ ! ಭಾರತ ರೂಪುಗೊಳ್ಳದ ಮುನ್ನ ಭಾರತೀಯತೆಯ ಪರಿಚಯ ವಿಶ್ವಕ್ಕೆ ಅಷ್ಟಾಗಿ ಆಗಿರಲಿಲ್ಲ. ಆಗಲು ಸಾಧ್ಯವಿರಲಿಲ್ಲ. ಏಕೆಂದರೆ ೧೯೪೭ ಕ್ಕಿಂತ ಹಿಂದೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

 ಕೃಷ್ಣ ಚೆಲುವೆಯ ಚಿತ್ರ: ಅನಂತ ರಮೇಶ್

೧ ಆ ಮುಗ್ಧಮುಖದ ಕಪ್ಪು ಚೆಲುವೆಯ ಚಿತ್ರವಿರುವ ಫೋಟೊವನ್ನು ಸುದೀಪ ರಾಜುವಿನ ಕೈಗೆ ಕೊಡುತ್ತಾ ಹೇಳಿದ, 'ರಾಜು, ಬೇಜಾರು ಮಾಡಬೇಡ. ನಿನ್ನ ಹೆಂಡತಿಯ ಈ ಫೋಟೋ  ಕೊಡಲು ಸ್ವಲ್ಪ ತಡವಾಯಿತು'. ಸುದೀಪ ಕೊಟ್ಟ ಆ ಫ಼ೋಟೊ ನೋಡುತ್ತ ರಾಜು ಕಣ್ಣುಗಳಲ್ಲಿ ನೀರು ತುಂಬಿಕೊಂಡ. 'ನಿಮ್ಮಿಂದ ತುಂಬಾ ಉಪಕಾರವಾಯಿತು. ನನ್ನ ಹೆಂಡತಿಯ ನೆನಪಿಗೆ ಇದಕ್ಕಿಂತ ಒಳ್ಳೇದು ನಾನಿನ್ನೇನೂ ನಿರೀಕ್ಷೆ ಮಾಡ್ಲಿಲ್ಲ. ನಿಮ್ಮ ಕ್ಯಾಮರಾದಲ್ಲಿ ಆದಿನ ಫ಼ೋಟೊ ತೆಗೆಯದೆ ಹೋಗಿದ್ದರೆ ಅವಳ ನೆನಪಿಗೆ ಅಂತ ನನ್ನ ಹತ್ರ ಇನ್ನೇನೂ ಇರ್ಲಿಲ್ಲ' … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಮಕಿಂಕರರು: ಒಂದು ಭಯಾನಕ ಸತ್ಯಕಥೆ (ಕೊನೆಯ ಭಾಗ): ಪ್ರಸಾದ್ ಕೆ.

ಇಲ್ಲಿಯವರೆಗೆ ಕಾರ್ಲಾ ಹೊಮೋಲ್ಕಾ ಮಹಿಳೆಯರ ಕಿಂಗ್-ಸ್ಟನ್ ಜೈಲಿನಲ್ಲಿ ಬಂಧಿಯಾಗಿರುತ್ತಾಳೆ. ಮುಂದೆ 1997 ರಲ್ಲಿ ಆಕೆಯನ್ನು ಕ್ಯೂಬೆಕ್ ನಗರದ ಜೋಲಿಯೆಟ್ ಇನ್ಸ್ಟಿಟ್ಯೂಷನ್ ಗೆ ವರ್ಗಾಯಿಸಲಾಗುತ್ತದೆ. ಹಲವು ಮನಃಶಾಸ್ತ್ರಜ್ಞರು, ನ್ಯಾಯಾಲಯದ ಅಧಿಕಾರಿಗಳು, ಅಪರಾಧ ವಿಭಾಗದ ತಜ್ಞರ ತಂಡಗಳು ಸತತವಾಗಿ ಕಾರ್ಲಾಳನ್ನು ನಿಯಮಿತವಾಗಿ ಭೇಟಿ ಮಾಡುತ್ತಾ, ಅಗತ್ಯ ಚಿಕಿತ್ಸೆಯನ್ನು ನೀಡುತ್ತಿರುತ್ತವೆ. ಕಾರ್ಲಾ ಹೊಮೋಲ್ಕಾ ತೀವ್ರವಾದ ಗೃಹದೌರ್ಜನ್ಯಕ್ಕೆ ಬಲಿಯಾದ ಹೆಣ್ಣೆಂಬುದು ಸತ್ಯವಾದರೂ, ತನ್ನ ಪತಿಯ ಹಿಂಸಾಮನೋಭಾವಗಳೆಡೆಗೆ ವಿಪರೀತ ಎನ್ನುವಷ್ಟು ವ್ಯಾಮೋಹವಿದ್ದುದು ಅಧ್ಯಯನಗಳಿಂದಲೂ ತಿಳಿದುಬಂದವು. ಇಂಪಲ್ಸಿವ್ ಮತ್ತು ಸ್ಯಾಡಿಸ್ಟ್ ಗುಣಗಳನ್ನು ತನ್ನ ವ್ಯಕ್ತಿತ್ವದಲ್ಲಿ ಹೊಂದಿದ್ದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ