ಮಹಿಳಾ ಕಲಾವಿದರ “ಏಕಲವ್ಯ” ದೊಡ್ಡಾಟ ಪ್ರದರ್ಶನ: ಹಿಪ್ಪರಗಿ ಸಿದ್ಧರಾಮ
ದಲಿತ ಕವಿ ಡಾ.ಸಿದ್ದಲಿಂಗಯ್ಯನವರು ರಚಿಸಿದ ‘ಏಕಲವ್ಯ’ ನಾಟಕವನ್ನು ಉತ್ತರ ಕರ್ನಾಟಕದ ಜನಪದರ ದೊಡ್ಡಾಟ ಶೈಲಿಗೆ ಅಳವಡಿಸಿ ದಶಕಗಳಷ್ಟು ಹಿಂದೆಯೇ ಮೆಚ್ಚುಗೆ ಪಡೆದ ಹಿರಿಯ ಕಲಾವಿದ ಟಿ.ಬಿ.ಸೊಲಬಕ್ಕನವರ ಮಾರ್ಗದರ್ಶನದಲ್ಲಿ ಹರಪನಹಳ್ಳಿಯ ‘ಸಮಸ್ತರು’ ತಂಡದ ಮಹಿಳಾ ಕಲಾವಿದರು ಧಾರವಾಡದ ಕರ್ನಾಟಕ ವಿದ್ಯಾವರ್ಧಕ (ಕವಿವ) ಸಂಘದಲ್ಲಿ ಇತ್ತೀಚೆಗೆ (ಜ.17) ಬಿ.ಪರಶುರಾಮ ನಿರ್ದೇಶನದಲ್ಲಿ ಅಭಿನಯಿಸಿದರು. ಕವಿವ ಸಂಘದ ಕಲಾಮಂಟಪದ ಆಶ್ರಯದಲ್ಲಿ ಜರುಗಿದ ಈ ಪ್ರದರ್ಶನದಲ್ಲಿ ಒಂದೆರಡು ಪ್ರಮುಖ ಪಾತ್ರಗಳನ್ನು ಹೊರತುಪಡಿಸಿದರೆ ಎಲ್ಲರೂ ಮಹಿಳಾ ಕಲಾವಿದರು ದೊಡ್ಡಾಟದ ತಾಳಕ್ಕೆ ಹೆಜ್ಜೆಹಾಕಿದ್ದು ಇತ್ತೀಚಿನ ದಿನಗಳಲ್ಲಿ ಹೊಸಪ್ರಯೋಗವೆನಿಸಿ, … Read more