ಬೆವರಿಳಿಸಿದ ಸುಂಗ!!!: ಅಖಿಲೇಶ್ ಚಿಪ್ಪಳಿ

ಅಪ್ಪ ದೇಹದಾನ ಮಾಡಿದ ಬಗ್ಗೆ ಒಂದಿಷ್ಟು ಜನ ಅಸಮಧಾನ ವ್ಯಕ್ತಪಡಿಸಿದರು. ಇರಲಿ ಅವರವರ ಭಾವಕ್ಕೆ ತಕ್ಕಂತೆ ಎಂದು ಸುಮ್ಮನಾದೆ. ಧಾರ್ಮಿಕ ವಿಧಿ-ವಿಧಾನಗಳನ್ನು ಮಾಡಬೇಕಲ್ಲ. ಕಾಶಿಗಿಂತ ಪವಿತ್ರವಾದ ಸ್ಥಳ ಗೋಕರ್ಣ ಎಂದು ಬಲ್ಲವರು ಹೇಳಿದರು. ಸರಿ ಎಂದು ಸಕುಟುಂಬ ಸಮೇತನಾಗಿ ಗೋಕರ್ಣಕ್ಕೆ ಹೊರಟಾಯಿತು. ಹೋದ ಕೂಡಲೇ ಮೊಟ್ಟ ಮೊದಲ ಕೆಲಸವೆಂದರೆ, ತಲೆ ಬೋಳಿಸಿಕೊಂಡಿದ್ದು. ಕನ್ನಡಿಯಲ್ಲಿ ಒಂದು ಕ್ಷಣ ಗುರುತೇ ಸಿಗದಂತೆ ಆಗಿತ್ತು. ಸ್ನಾನ ಮಾಡಿಬಂದವನು ಮೊದಲು ಹುಡುಕಿದ್ದು ಬಾಚಣಿಕೆಯನ್ನು. ಅಭ್ಯಾಸ ಬಲದಂತೆ ತಲೆ ಬಾಚಲು ಹೋದರೆ ಅಲ್ಲಿ ಕೂದಲೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎರಡು ಮನಸ್ಸುಗಳ ಮಧ್ಯೆ (ಸಣ್ಣ ಕಥೆ): ಹೆಚ್ ಯಸ್ ಅರುಣ್ ಕುಮಾರ್

ವಾಸಂತಿ ಮಗಳು  ಮೃದುಲಾ ಗೆ ಫೋನ್ ಮಾಡಿದಳು. "ನಿನ್ನ ಅಣ್ಣ ನ ಲಗ್ನ ನಿಶ್ವಯವಾಗಿದೆ " ಒಂದು ವಾರದ ಮುಂಚೆಯೇ ಬರುವಂತೆ ಆಗ್ರಹ ಮಾಡಿದಳು. ಮೃದುಲಾ  ಬಂದರೆ ಅಮ್ಮ ಅಮ್ಮ ಅಂತ ಹಿಂದೆ  ಮುಂದೆ ಸುತ್ತುತ್ತ ಕೆಲಸಕ್ಕೆ ಸಹಾಯ ಮಾಡುತ್ತಾಳೆ ಎನ್ನಿಸಿತ್ತು. ಅವಳು ಮದುವೆಯಾಗಿ ಹೊರಟುಹೋದ ಮೇಲೆ ಒಂಟಿತನ ಕಾಡುತಿತ್ತು. ಅವಳ ಮದುವೆಯಾಗಿ ಎರಡು ವರ್ಷವಾಗಿದ್ದರೂ ಕೇವಲ ಒಂದುಸಾರಿ ಮನೆಗೆ ಬಂದಿದ್ದಳು. ದೂರದ ಹಳ್ಳಿ. ಬೇಸಾಯದ ಕುಟುಂಬ. ಬಿತ್ತನೆ ಕಾಲ,ಕೊಯ್ಲಿನ ಕಾಲ ಹೀಗೆ ಬಿಡುವಿಲ್ಲದ ಜೀವನ ಅವಳದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

unsung hero: ವಿಶ್ವಾಸ್ ವಾಜಪೇಯಿ

ಅಪ್ಪ, ತಂದೆ, ಬಾಬಾ.. ಈ ಎರಡಕ್ಷರದ ಮಹತ್ವ. ಈ ಸಂಬಂಧದ ಅರ್ಥ ತಿಳಿದುಕೊಳ್ಳೋದು ಎಷ್ಟೋ ಜನರಿಂದ ಬಹುಷಃ ಆಗಂಗೇ ಇಲ್ಲಾ.. ಅಂಥವರಾಗ ನಾನೂ ಒಬ್ಬ ಎಷ್ಟಾದ್ರೂ ಹಿರಿ ಮಗ ನೋಡ್ರಿ, ಅವ್ವನ ಮ್ಯಾಲೇ ಪ್ರೀತಿ ಜಾಸ್ತಿ ಎಲ್ಲಾರೂ ಅಂತಾರ ತಾಯಿಯಾದಮೇಲೆ ಹೆಣ್ಣೆಗೆ ಎರಡನೇ ಜೀವ ಸಿಗ್ತದ ಅಂತ, ಮತ್ತ ಅಪ್ಪಗ? ಅವನ ಬಗ್ಗೆ ಯಾರೂ ಜಾಸ್ತೀ ಮಾತಾಡಲೇ ಇಲ್ಲ ಯಾಕಂದ್ರ ಅವರ ಜೀವನದಾಗ ಅಪ್ಪನ ‘ರೋಲ್’ ಯಾವತ್ತೂ, ಯಾರಿಗೂ ಕ್ಲಿಯರ್ ಆಗ್ಲೇ ಇಲ್ಲ ಎಲ್ಲರ ಜೀವನದ ಕಥಿಯೊಳಗೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮುಕ್ತನಾದವ: ಶ್ರೀಪತಿ ಮಂಜನಬೈಲು

 “ಪ್ರತಿ ಸುಖದ ಹಿಂದೆ ಅನಿವಾರ್ಯವಾಗಿ ದುಃಖ ಬೆಂಬತ್ತುವುದೇ ಆದಲ್ಲಿ, ಆಗ ದುಃಖದಿಂದಲ್ಲ – ಸುಖದಿಂದಲೇ ಮುಕ್ತನಾಗುವ ಸ್ಪಷ್ಟತೆ ನಿನ್ನ ಜೀವನದಲ್ಲಿ ಫಲಿತವಾಗಬೇಕು.” (ಓಶೋ)   — ನಾನಾಗ ಬೆಳಗಾವಿಯವನಾಗಿದ್ದೆ. ನಾನು ನನ್ನ ಸಂಸಾರದೊಂದಿಗೆ ವಾಸಿಸುತ್ತಿದ್ದ ಬಾಡಿಗೆ ಮನೆ ಬೆಳಗಾವಿ ದಂಡು ಪ್ರದೇಶದಲ್ಲಿತ್ತು.  1999 ರ ಡಿಸೆಂಬರ ತಿಂಗಳ ಮೊದಲ ರವಿವಾರದ ದಿನ ಮುಂಜಾನೆಯ ಸಮಯ. ಮನೆಯ ಬಾಗಿಲ ಚಿಲಕ ಕಟಕಟ ಬಡಿದ ಶಬ್ಧ. ಬಾಗಿಲು ತೆಗೆದೆ, ಅವನು ನಿಂತಿದ್ದ. ಬಾರೋ ಒಳಗೆ ಅಂದೆ. ಬಂದ, ಕೈಲಿದ್ದ ಆವತ್ತಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾಷಾ ಮೋಡಿಗಾರ: ಜಯಲಕ್ಷ್ಮೀ ಪಾಟೀಲ್

ಗೋಪಾಲ್ ವಾಜಪೇಯಿ ಅನ್ನುವ ಹೆಸರು ಕೇಳಿದ ತಕ್ಷಣ ಸಿನಿಮಾದ ಹಾಡುಗಳ ಬಗ್ಗೆ ಗೊತ್ತಿರುವವರಿಗೆ ‘ಈ ಹಸಿರು ಸಿರಿಯಲಿ, ಮನಸು ನಲಿಯಲಿ ನವಿಲೇ’ ಮತ್ತು ‘ಕಂಬದಾ ಮ್ಯಾಲಿನ ಗೊಂಬೆಯೆ, ನಂಬಲೇನ ನಿನ್ನ ನಗೆಯನ್ನ’ ಹಾಡುಗಳಾದರೆ, ರಂಗಭೂಮಿಯ ಜನರಿಗೆ ‘ಅದ ಗ್ವಾಡಿ, ಅದ ಸೂರು ದಿನವೆಲ್ಲ ಬೇಜಾರು/ ತಿದಿಯೊತ್ತಿ ನಿಟ್ಟುಸಿರು ಎದಿಯಾಗ ಚುರುಚುರು..’, ‘ಯಾವ ದೇಸದ ರಮಣ ಬಂದು, ಏನ ಮೋಸವ ಮಾಡಿದಾ…’ ಇತ್ಯಾದಿ ಹಾಡುಗಳು ನೆನಪಿಗೆ ಬರುತ್ತವೆ. ಇತ್ತೀಚಿಗಷ್ಟೆ ಬಿಡುಗಡೆಯಾದ ಶಿವರಾಜಕುಮಾರ್ ನಟಿಸಿದ ‘ಸಂತೆಯಲ್ಲಿ ನಿಂತ ಕಬೀರ’ ಸಿನಿಮಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಷ್ಟು ಗಡಿಬಿಡಿ ಮಾಡ್ಕೊಂಡ್ ಯಾಕ ಹೋದ್ರಿ?: ಗುರುಪ್ರಸಾದ ಕುರ್ತಕೋಟಿ

ಅವತ್ತು ಎಪ್ರಿಲ್ ೨೧ ನೆ ತಾರೀಖು, ಮದ್ಯಾಹ್ನದ ಹೊತ್ತು. ಫೇಸ್ ಬುಕ್ ಮೆಸ್ಸೆಂಜರ್ ನಲ್ಲಿ ಬಂದ “ಎಂತದ್ರೋ” ಅನ್ನೋ ಮೆಸ್ಸಜು ನನ್ನ ಕಣ್ಣು ಹಿಗ್ಗಿಸಿತ್ತು. ಯಾವ ಹಿರಿಯರು ಆನ್ಲೈನ್ ಇದ್ದಾರೆ ಅಂತ ಗೊತ್ತಿದ್ರೂ, ಅವರು ನನಗೆ ಎಷ್ಟು ಚೆನ್ನಾಗಿ ಪರಿಚಯ ಇದ್ರೂ, ಅವರನ್ನ  ಮಾತಾಡಿಸಬೇಕು ಅಂತ ಆಸೆ ಆದರೂ ಪಿಂಗ್ ಮಾಡೋಕೆ ಹೆದರತಿದ್ನೋ, ಅವರೇ ನನಗೆ “ಎಂತದ್ರೋ” ಅನ್ನೋ ಮೆಸ್ಸೇಜ್ ಕಳಸಿದ್ರೆ ನನಗೆ ಎಷ್ಟು ಖುಷಿ ಆಗಬೇಡಾ? ಅವತ್ತಿನ ದಿನ ನಾನು ಅಮೇರಿಕದಲ್ಲಿ ಇದ್ದೆ, ಅವ್ರು ಬೆಂಗಳೂರಿನಲ್ಲಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗುರುವೆಂದರೆ..ಇವರೇ..!!: ಉಮೇಶ ದೇಸಾಯಿ

   ಇತ್ತೀಚೆಗೆ ಸಂಧ್ಯಾರಾಣಿ ತಾವು ಗೋಪಾಲ ವಾಜಪೇಯಿಯವರನ್ನು ಮೊದಲಬಾರಿ ಭೇಟಿಯಾದಾಗಿನ ಸನ್ನಿವೇಶ ಹೇಳುತ್ತಿದ್ದರು. ಅವರು ಮುಂದುವರೆಸುತ್ತ ಹೇಗೆ ಒಬ್ಬ ಕವಿ ತಾನೇ ಗೀತೆಗಳ ರಚಿಸಿದರೂ ಅದರ ಹಕ್ಕನ್ನು ಅನುಭವಿಸಲಾಗದ ಸಂಕಟವನ್ನು ಹೇಗೆ ಅನುಭವಿಸಿರಬಹುದು ಎಂದು ಹೇಳುತ್ತಿದ್ದರು. ಅದ್ಭುತ ಅನ್ನುವ ಸಾಹಿತ್ಯ ಹಾಡುಗಳ ಬರೆದರೂ ಇದು ನನ್ನದು ಅಂತ ಹೇಳಿಕೊಳ್ಳಲಾಗದ ವಿಚಿತ್ರ ಪರಿಸ್ಥಿತಿ ಗುರುಗಳಾದ ಗೋಪಾಲ ವಾಜಪೇಯಿ ಅನುಭವಿಸಿದರು. ಅದು ಆಗಿದ್ದು ನಾಗಮಂಡಲ ನಾಟಕ/ಸಿನೇಮಾಗೆ ಸಂಬಂಧಿತವಾಗಿ. ಶಾಮರಾಯರ ಕಣ್ಣು/ಕಿವಿ ತಪ್ಪಿಸಿ ಬರೆಯುವ ಪರಿಸ್ಥಿತಿ..ಇಂದಿಗೂ ನಾಗಮಂಡಲದ ಹಾಧು ಬರೆದವರು "ಗೋಪಾಲ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನ ಶಿಷ್ಯ ಗೋಪಾಲ!: ಶಶಿಕಾಂತ ಕುರ್ತಕೋಟಿ

ನನ್ನ ಮಗ ಗುರುಪ್ರಸಾದ ಅದೊಂದು ದಿನ ಬೆಳಿಗ್ಗೆ “ಅಪ್ಪ, ಗೋಪಾಲ ವಾಜಪೇಯಿಯವರ ಪುಸ್ತಕ ಬಿಡುಗಡೆ ಸಮಾರಂಭವಿದೆ ಬರುತ್ತೀಯಾ? ಅವರು ನಿನ್ನನ್ನು ಕರೆದುಕೊಂಡು ಬರಲು ಹೇಳಿದ್ದಾರೆ.” ಅಂತ ಕೇಳಿದ. ನಾನು ಕೂಡಲೇ ಹೂಂ ಅಂತ ಒಪ್ಪಿಕೊಂಡೆ. ಆ ಹೆಸರು ನನಗೆ ೪೩ ವರ್ಷ ಹಿಂದೆ ಕರೆದೊಯ್ದಿತು. ನಮ್ಮಿಬ್ಬರದು ಗುರು-ಶಿಷ್ಯ ಸಂಬಂಧ. ಆ ಸಮಾರಂಭಕ್ಕೆ ಜಾತಕ ಪಕ್ಷಿಯಂತೆ ಕಾಯತೊಡಗಿದೆ. ಅಷ್ಟು ವರ್ಷಗಳ ನಂತರ ನನ್ನ ಆತ್ಮೀಯ ಗೋಪಾಲನನ್ನು ನೋಡುವ ಅವಕಾಶ ಅದಾಗಿತ್ತು.  ನನ್ನ ಮಗನಿಗೆ ಚಿಕ್ಕಂದಿನಿಂದಲೂ ಸಾಹಿತ್ಯ, ನಾಟಕ ರಂಗದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ನಿನ್ನ ಮಾತುಗಳು ಬೇಡುತ್ತಿರುವಾಗ ಬಲಿ ನನ್ನೆದೆಯ ನೋವನ್ನು ಯಾರಲ್ಲಿ ಹೇಳಿಕೊಳ್ಳಲಿ? ಮಾತಿಗೂ ಮೊದಲು ಕೋಪವೇ ಹೆಡೆ ಬಿಚ್ಚಿ ನಿಲ್ಲುತ್ತಿರುವಾಗ ಪಾತಾಳ ಗರುಡದ ಮಂತ್ರ ಕೋಲನ್ನು ಹುಡುಕುತ್ತ ಎಲ್ಲಿ ಹೋಗಲಿ? ಪ್ರೀತಿಯ ಹೂದೋಟದಲ್ಲಿ ಝಳಪಿಸುವ ಕತ್ತಿ ನರ್ತಿಸುವಾಗ ಸಾಣೆ ಹಿಡಿಯುವವರನ್ನು ಎಷ್ಟೆಂದು ಹುಡುಕಿ ಗಡಿಪಾರು ಮಾಡಲಿ? ಮನದ ಗರ್ಭಗುಡಿಯಲ್ಲಿ ನಂದಾದೀಪವೇ ಹೊತ್ತಿ ಪ್ರಜ್ವಲಿಸುವಾಗ ತಣ್ಣಿರು ಸುರಿದು ಬೆಂಕಿ ನಂದಿಸುವವರನ್ನು ಹುಡುಕುತ್ತ ಎಲ್ಲಿ ಹೋಗಲಿ? ಹೃದಯದಲ್ಲಿ ಪ್ರತಿಷ್ಟಾಪಿಸಿ ಮೂರ್ತಿ ತನ್ನನ್ನೇ ಭಗ್ನಗೊಳಿಸಿಕೊಳ್ಳುವಾಗ ಮುಕ್ಕಾಗದಂತೆ ಗರ್ಭಗುಡಿಯನ್ನು ಕಾವಲು ಕಾಯುವ ಕೆಲಸವನ್ನು ಯಾರಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಪ್ಪ ಸತ್ತಾಗ: ಅಖಿಲೇಶ್ ಚಿಪ್ಪಳಿ

80 ವರ್ಷಗಳ ಹಿಂದೆ ಅಳುತ್ತಲೇ ಭೂಮಿಗೆ ಬಂದ ಮಗುವಿಗೆ ತಿಳುವಳಿಕೆ ಬರುವ ಮೊದಲೇ ತನ್ನ ತಂದೆಯನ್ನು ಕಳೆದುಕೊಂಡಿತ್ತು. ತಂದೆಯನ್ನು ನೋಡಿದ ನೆನಪು ಅದಕ್ಕಿರಲಿಲ್ಲ. ಕಡುಬಡತನದ ಆ ಮನೆಯಲ್ಲಿ ಮನೆ ತುಂಬಾ ಮಕ್ಕಳು ಎಲ್ಲರೂ ಸೇರಿದರೆ ಬರೋಬ್ಬರಿ 8 ಮಕ್ಕಳು ಹಾಗೂ ಎರಡು ವಿಧವೆಯರು! ಊರಲ್ಲಿ ಶಾಲೆಯಿದೆ, ಓದಲಿಕ್ಕೆ ಕಷ್ಟವಿದೆ. ಅಂತೂ-ಇಂತೂ ಕಷ್ಟಪಟ್ಟು ಆ ಮಗು 7ನೇ ತರಗತಿಯವರೆಗೆ ಕಲಿಯಿತು. ಹೆಚ್ಚು ಕನ್ನಡ ಹಾಗೂ ಸ್ವಲ್ಪ ಇಂಗ್ಲೀಷು. ಮತ್ತೆ ಬೇಸಾಯಕ್ಕಿಳಿದ ಆ ಯುವಕ ನಿರಂತರವಾಗಿ ದುಡಿಯುತ್ತಲೇ ಇದ್ದ. ಮಧ್ಯದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎಲೆಕ್ಷನ್ನು: ಸಿದ್ದರಾಮ ತಳವಾರ, ದಾಸ್ತಿಕೊಪ್ಪ

ಕೇರಿಯ ಜನ ಕಂಗಾಲಾಗಿದ್ದರು. ಗೋಡೆಯಲ್ಲಿದ್ದ ಗೂಟ ಸುಮ್ಮನೆ ತೆಗೆದು ಅದೆಲ್ಗೋ ಬಡ್ಕೊಂಡ್ರು ಅನ್ನೋ ಹಾಗೆ ಇದೆಲ್ಲಾ ನಮ್ಗೆ ಬೇಕಿತ್ತಾ ಅಂತ ಕೇರಿಯ ಹೆಣ್ಣು ಮಕ್ಕಳೆಲ್ಲಾ ಗುಸು ಗುಸು ಪಿಸು ಪಿಸು ಮಾತಾಡಲು ಶುರು ಮಾಡಿದ್ದರು. ಇರೋದಕ್ಕೆ ಸರಿಯಾದ ಸೂರಿಲ್ಲಾ ಕುಡಿಯೋದಕ್ಕೆ ನೀರಿದ್ರೂ ಕೇರಿಯಾಚೆ ಹೋಗಿ ಹಿಡ್ಕೊಂಡ ಬರೋ ಧೈರ್ಯ ಇಲ್ಲಾ. ಮನೇಲಿರೋ ಮುಟಗಿ ಹಿಟ್ಟು ಖಾಲಿ ಆಗಿರೋದ್ರಿಂದ ಮೂರು ದಿನದ ತಂಗಳ ರೊಟ್ಟಿಯನ್ನೇ ನೆನೆಸಿಕೊಂಡು ತಿನ್ನೋ ಟೈಮ್ ಬಂದೈತಿ. ಕೂಸುಗಳಿಗೆ ಹಾಲು ಕುಡಿದೇವಂದ್ರೂ ನಮ್ಮ ಹೊಟ್ಟೆಗ್ ಹಿಟ್ಟಿದ್ರೇ ತಾನೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಮಕಿಂಕರರು: ಒಂದು ಭಯಾನಕ ಸತ್ಯಕಥೆ (ಭಾಗ 10): ಪ್ರಸಾದ್ ಕೆ.

ಇಲ್ಲಿಯವರೆಗೆ ನ್ಯಾಯಮೂರ್ತಿ ಆರ್ಚಿ ಕ್ಯಾಂಪ್ಬೆಲ್ ರ ವರದಿಯು ಸ್ಕಾರ್-ಬೋರೋ ಸರಣಿ ಅತ್ಯಾಚಾರ ಪ್ರಕರಣಗಳಲ್ಲದೆ ಉಳಿದ ಪ್ರಕರಣಗಳ ಮೇಲೂ ಬೆಳಕು ಚೆಲ್ಲಿ ಉತ್ತಮ ಒಳನೋಟವನ್ನು ಕೊಡುತ್ತದೆ.  ಕಾರ್ಲಾ ಹೊಮೋಲ್ಕಾಳ ತಂಗಿ ಟ್ಯಾಮಿ ಹೊಮೋಲ್ಕಾಳ “ಆಕಸ್ಮಿಕ ಮತ್ತು ಸ್ವಾಭಾವಿಕ'' ಸಾವೆಂದು ತಪ್ಪಾಗಿ ದಾಖಲಾದ ಘಟನೆಯನ್ನು ಉಲ್ಲೇಖಿಸುತ್ತಾ, ಟ್ಯಾಮಿಯ ಎಡಕೆನ್ನೆ, ಮೇಲ್ದುಟಿ ಮತ್ತು ಎಡಭುಜದ ಮೇಲೆ ಕಂಡುಬಂದಿದ್ದ ದಟ್ಟಕೆಂಪುಕಲೆಗಳ ಬಗ್ಗೆ ವರದಿಯು ಒತ್ತಿಹೇಳುತ್ತದೆ. ಹಚ್ಚೆಯಂತೆ ದಟ್ಟವಾಗಿ ಮೂಡಿಬಂದಿದ್ದ ಈ ಅಪರೂಪದ ಕಲೆಗಳನ್ನು ಕಡೆಗಣಿಸುವುದು ಸಾಧ್ಯವೇ ಇರಲಿಲ್ಲ. ಅಸಲಿಗೆ ಆಕೆಯ ಉಸಿರಾಟ ನಿಂತುಹೋದಾಗಲೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಗೋಚರ: ಪ್ರಶಸ್ತಿ

ಏಳ್ಬೇಕು ಅಂತಷ್ಟೊತ್ತಿಗೆ ಏಳ್ಬೇಕು, ಮಲಗ್ಬೇಕು ಅಂದಷ್ಟೊತ್ತಿಗೆ ಮಲಗಿ ಬಿಡ್ಬೇಕು. ಈ ಫೇಸ್ಬುಕ್ಕು,ವಾಟ್ಸಾಪು, ಜೀಮೆಲುಗಳನ್ನೆಲ್ಲ ಡಿಲಿಟ್ ಮಾಡಿ ಎಲ್ಲಾದ್ರೂ ದೂರ ಹೋಗಿ ಬಿಡಬೇಕು ಗುರೂ ಅಂತಿದ್ದವ ಅದರಲ್ಲೇ ಮೂರೊತ್ತೂ ಮುಳುಗಿರುತ್ತಿದ್ದ. ರಾಶಿ ರಾಶಿ ಪುಸ್ತಕಗಳ ಗುಡ್ಡೆ ಹಾಕಿಕೊಂಡವ ಕ್ಲಾಶ್ ಆಫ್ ಕ್ಲಾನ್ಸು, ಫ್ಯೂಚರ್ ಫೈಟಗಳಲ್ಲಿ ಕಳೆದುಹೋಗಿರುತ್ತಿದ್ದ. ಆಟಗಳಲ್ಲಿ ಸಿಗುವ ಕಾಲ್ಪನಿಕ ಕಾಸ ಹಿಂದೆ ಆತನ ಇಂದು ಕಾಣದಷ್ಟು ಕುರುಡನಾಗಿದ್ದವ ಒಮ್ಮೆ ಇದನ್ನೆಲ್ಲಾ ಪಟ್ಟನೆ ಬಿಟ್ಟು ಎಲ್ಲೋ ಮರೆಯಾಗಿಬಿಡುವನೆಂದು ಯಾರೂ ಎಣಿಸಿರಲಿಲ್ಲ. ಬೆಳಗಿಂದ ರಾತ್ರೆಯವರೆಗೂ ಆಫೀಸಲ್ಲೇ ಕೊಳೆಯುತ್ತಾನೆ ಎಂದು ಹೀಗಳೆಯೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಮೌನಿ, ಗಿಜಿಗಿಡುವಂತೆ ಜನ ಸುತ್ತಲೆಲ್ಲರಿದ್ದರೂ ನಾ ನನ್ನೊಳು ಮಾತ್ರ ಮೌನಿ, ನನಗೆ ನಾನೇ ಮಿತ್ರ ನಾನೇ ಶತ್ರು ಏರಿಳಿತಗಳಲ್ಲೆಲ್ಲಾ ನನ್ನದು ಒಂದೇ ವೇಗ ಏರಿಗೆ ಕುಗ್ಗೇನು ಇಳಿವಿಗೆ ಹಿಗ್ಗೇನು ಜಾರಿದರೂ ಅಷ್ಟೇ ನೇಪಥ್ಯಕ್ಕೆ ಸರಿದರೂ ಅಷ್ಟೇ,, ಒಂಟಿ ದಾರಿಯಲಿ ನನಗೆ ನಾನೇ ಜಂಟಿ  ಒಬ್ಬೊಬ್ಬನೇ ಮಾತನಾಡಿಕೊಳ್ಳುತ್ತೇನೆ ಅಳುತ್ತೇನೆ, ನಗುತ್ತೇನೆ ಒಮ್ಮಮ್ಮೆ  ದು:ಖದಲಿ ಬಿಕ್ಕಿ ಬಿಕ್ಕಿ ಅಳುತ್ತೇನೆ, ಗೊತ್ತು ! ಈ ಜನರೆಲ್ಲ ನನ್ನ ಹಿಂದೆ ಆಡಿಕೊಳ್ಳುವರೆಂದು, ಹುಚ್ಚುಡುಗನೆಂದು ಲೊಚಗುಟ್ಟುವರೆಂದು, ಹರಿದ ಪ್ಯಾಂಟಿಗೆ ದಾರ ಕಟ್ಟಿ ಗೇಲಿ ಮಾಡುವರೆಂದು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಉಬ್ಬಿಯ ಸ್ವಗತ……..: ಅಮರ್ ದೀಪ್ ಪಿ.ಎಸ್.

ಗೆಳೆಯ, ಮೇರೆ ಬಾತೋ ಮೇ ತೇರಿ ಫಿಕರ್ ಸದಾ…………………. ಮೇರೆ ಯಾದೋಂ ಮೇ ತೇರಿ ಫಿಕರ್ ಸದಾ………………..   ಖುಷಿಯಾಗಬೇಡ, ನಿನ್ನ ನೆನಸ್ಕೊಂಡು ಈ ಹಾಡು ಗುನುಗುತ್ತಿಲ್ಲ.  ತುಂಬಾ ಹಾಯಾಗಿದ್ದೆ ಕಣೋ ನಾನು, ಸ್ವಾಭಿಮಾನಿ.  ಚಿಕ್ಕಂದಿನಲ್ಲಿ ನನ್ನಿಬ್ಬರು ಗೆಳತಿಯರೊಡನೆ ಹರಟುತ್ತಾ, ನಗುತ್ತಾ ಶಾಲೆಗೆ, ಕಾಲೇಜಿಗೆ ಹೋಗುವುದು ಓದು ಕಲಿಯಲು ಎನ್ನುವುದನ್ನೇ ಮರೆತು ತುಂಬಾ ನಲಿಯುತ್ತಿದ್ದೆ. ಕಾಲೇಜಿನಲ್ಲಿ ಚೂಡಿ ಹಾಕಿದರೆ ವೇಲ್ ಹಾಕದೇ ಹೊರಟರೆ, ಇದ್ದರೂ ಕೊರಳಿಗಷ್ಟೇ ಸುತ್ತಿಕೊಂಡು ತಿರುಗುವುದನ್ನು ನೋಡಿ ಫ್ಯಾಮಿಲಿ ಫ್ರೆಂಡ್ಸ್ ಥರವಿದ್ದ ಹುಡುಗನೊಬ್ಬ ಗದರಿಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

  ನಿಜದನಿ: ಕೆ ಟಿ ಸೋಮಶೇಖರ ಹೊಳಲ್ಕೆರೆ. 

ನಾವು ಯಾವುದನ್ನೂ  ಬಲವಂತವಾಗಿ  ಉಳಿಸಲಾಗದು. ಹಾಗೆ ಉಳಿಸಿದರೂ ಬಹಳ ವರ್ಷ ಬದುಕದು. ಯಾವುದನ್ನು ಬಳಸುತ್ತೇವೋ ಅದು ಬಹಳ ವರ್ಷ ಉಳಿಯುತ್ತದೆ ಬೆಳೆಯುತ್ತದೆ. ಬರಿ ಬಾಯಿಯಿಂದ ಕನ್ನಡ ಉಳಿಸಿ ಬೆಳೆಸಿ ಎಂದು ಅಬ್ಬರಿಸಿದ ಮಾತ್ರಕ್ಕೆ ಕನ್ನಡ ಉಳಿಯದು. ಕನ್ನಡ ಬಳಸಿದರೆ ಉಳಿದೀತು, ಪ್ರೀತಿಸಿದರೆ ಬೆಳೆದೀತು. ಇದು ಯಾವುದೇ ಸಂಘ, ಸಂಸ್ಥೆ,  ಒಕ್ಕೂಟಗಳ ಜವಾಬ್ದಾರಿಯಾಗಿರದೆ ಪ್ರತಯೊಬ್ಬ ಕನ್ನಡಿಗನ ಕರ್ತವ್ಯವಾಗಿರುತ್ತದೆ ಕನ್ನಡ ಸುಂದರ ಲಿಪಿಯಿರುವ ಮಧುರ ಭಾಷೆ. ಕನ್ನಡಿಗರನ್ನು, ಕನ್ನಡ ಸಂಸ್ಕೃತಿಯನ್ನು ರೂಪಿಸಿ, ದಾನ, ತ್ಯಾಗ ಉದಾತ್ತ ಗುಣಗಳಿಗೆ ಹೆಸರಾದ ಭಾಷೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎತ್ತರಕ್ಕೆ ಬೆಳೆಯಲು ಜಾಣನೆಂಬ ಅಹಂಗೆ ಪೆಟ್ಟಾಗಲೇ ಬೇಕು..: ನಾಗರಾಜ್. ಮುಕಾರಿ (ಚಿರಾಭಿ)

        ನಾಲ್ಕನೇ ತರಗತಿಯಲ್ಲಿ ಕ್ಲಾಸ್ ಟೀಚರ್ ಆಗಿ ಇದ್ದಿದ್ದು ಒಬ್ಬರೇ ಮಾಸ್ತರು. ಅವರು ನನ್ನ ಜೀವನದಲ್ಲಿ ನೆನಪಿಟ್ಟು ಕೊಳ್ಳುವಂತಹ ವ್ಯಕ್ತಿತ್ವದವರು. ಅದು ನನ್ನ ನೆಚ್ಚಿನ ಕೊಟ್ರಪ್ಪ ಮಾಸ್ತರು. ಅವರೊಬ್ಬರೇ ಕನ್ನಡ, ವಿಜ್ಞಾನ, ಸಮಾಜ ಮತ್ತು ಗಣಿತ ಪಾಠವನ್ನು ಅತೀ ಸಂತೋಷವಾಗಿ ಹೇಳಿಕೊಡುತ್ತಿದ್ದುದು. ತಿಂಗಳಿಗೊಮ್ಮೆ ಪರೀಕ್ಷೆ, ಗರಿಷ್ಟ ಅಂಕ ಇಪ್ಪತೈದು. ಸರಿಸುಮಾರು ಎಲ್ಲಾ ವಿಷಯಗಳಲ್ಲೂ ಇಪ್ಪತ್ತರ ಮೇಲೆಯೇ ಗಳಿಸಿದ ನೆನಪು ನನಗೆ, ಅದಕ್ಕೆಂದೇ ಒಮ್ಮೆ ತರಗತಿಯ ಮಾನಿಟರ್ ಅದದ್ದೂ ಉಂಟು.  ಹಾಗೆಯೇ ಇರಲು ಒಂದು ದಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಐದ್ಸಾವರ ಫ್ರೆಂಡ್ಸು ಮತ್ತು ನಾವು: ಪ್ರಶಸ್ತಿ

ಈ ಫೇಸ್ಬುಕ್ಕಿನ ಸಾಹಿತಿಗಳೆಲ್ಲಾ, ಅಥವಾ ಬೇರೆಡೆ ಸಾಹಿತ್ಯ ಬರೆಯುತ್ತಿದ್ದು ಸದ್ಯ ಫೇಸ್ಬುಕ್ಕಿನಲ್ಲಿ ಸಕ್ರಿಯರಾಗಿರೋ ಸ್ನೇಹಿತರೆಲ್ಲಾ ಯಾವುದೋ ಪಕ್ಷದ ವಕ್ತಾರರಂತೆ, ಮತ್ಯಾವುದೋ ಕೋಮಿನ ಹರಿಕಾರರಂತೆ ಯದ್ವಾ ತದ್ವಾ ಪೋಸ್ಟುಗಳನ್ನ ಹರಿಬಿಡೋದನ್ನು ನೋಡಿದಾಗ ಖೇದವಾಗುತ್ತೆ. ಮೋದಿಯೊಬ್ಬ ಸರ್ವಾಧಿಕಾರಿಯೆಂದಾಗ್ಲೋ, ಟಿಪ್ಪು ಜಯಂತಿ ಬೇಡವೆನ್ನುವವರಿಗೆ ಬುದ್ಧಿಯಿಲ್ಲವೆಂದಾಗ್ಲೋ , ಉರುಳು ಸೇವೆಗೋ, ಉಡುಪಿ ಚಲೋಗೋ ಪ್ರಶಂಸೆ, ಧಿಕ್ಕಾರಗಳನ್ನ ಬರೆದಾಗಾದ ಬೇಸರವಲ್ಲವದು. ಆದರೆ ಎಡವೇ ಸರಿಯೆಂದೋ, ಬಲವೇ ಸರ್ವೋತ್ತಮವೆಂದೋ ದಿನಂಪ್ರತಿ ಜಗಳ ಕಾಯೋ ಪರಿಗೆ ಕಸಿವಿಸಿಯಾಗುತ್ತೆ. ವೈಯುಕ್ತಿಕವಾಗಿ ಇಷ್ಟವಾಗೋ ಅವರು ಫೇಸ್ಬುಕ್ಕಿಗೆ ಬಂದಾಗ ಹಿಂಗ್ಯಾಕೆ ಅನ್ನೋದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಕತೆಗಳು: ಸಿಂಧುಭಾರ್ಗವ್, ಕೃಷ್ಣವೇಣಿ ಕಿದೂರ್.

ಅಹಂಕಾರವೂ ಕರಗುವುದು. ಆಗರ್ಭ ಶ್ರೀಮಂತನ ಮಗನಿಗೆ ಐಶಾರಾಮಿಯ ಜೀವನ ನಡೆಸಲು ಏನೆಲ್ಲ ಮಾಡಬೇಕೋ ಅದನ್ನು ಚೆನ್ನಾಗಿ ತಿಳಿದಿದ್ದ.. ಕಾರು, ಬಂಗಲೆ ಜೊತೆಗೆ ಆಳುಕಾಳು ಅಲ್ಲದೆ ಕುಡಿತ ದಿನಕ್ಕೊಬ್ಬಳು ದೇಹದಾನ ಮಾಡುವವಳು ಸಿಗುತ್ತಿದ್ದಳು.. ತಂದೆ ರಾಮುವಿನ ಸವೆತ, ಬೆವರ ಹನಿ, ದೇಹದಲ್ಲಿ ಬತ್ತಿ ಹೋದ ರಕ್ತ ಇದಾವುದೂ ಕಣ್ಣಿಗೆ ಕಾಣಿಸುತ್ತಲೇ ಇರಲಿಲ್ಲ..  * ರೈತನಾಗಿದ್ದ ರಾಮುವಿನ ತಂದೆ ತನ್ನ ಕೃಷಿಭೂಮಿಯನ್ನು ಮಗನ ಕೈಗೊಪ್ಪಿಸಿ ಕಣ್ಣುಮುಚ್ಚಿಕೊಂಡರು. ಇದ್ದ ಒಂದು ಎಕರೆ ಜಾಗದಲ್ಲಿ ಮೊದಲು ಕೃಷಿ ಆರಂಭಿಸಿದ್ದ ರಾಮು ದಿನವೂ ತಾನೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಲೇಖನಗಳು: ಬಸವರಾಜ ಪಟ್ಟಣಶೆಟ್ಟಿ , ವೇಣುಗೋಪಾಲ್ ಹೆಚ್.

ಕನ್ನಡ ನಾಡಿನ ಅಪರೂಪದ ನೃತ್ಯತಾರೆ ಜ್ಯೋತಿ ಬಳ್ಳಾರಿ ಹಾಗೂ ಕಲಾವಿದರ ತಂಡ ಜ್ಯೋತಿ ಬಳ್ಳಾರಿ ಕರ್ನಾಟಕ ಕಂಡ ಅಪರೂಪದ ನೃತ್ಯತಾರೆ.  ಈ  ತಾರೆ ಹಿಂದೊಮ್ಮೆ ಯಾವ ಪರಿ ಪ್ರೇಕ್ಷಕರಿಗೆ ತಮ್ಮ ನೃತ್ಯದ ಮೋಹಕತೆಯಿಂದ ಹುಚ್ಚು ಹಿಡಿಸಿದ್ದರೆಂದರೆ ಅದನ್ನು ಹಿಂದಿನ ಪ್ರೇಕ್ಷಕರು ಈಗಲೂ ನೆನಪಿಸಿ ಖುಷಿ ಪಡುತ್ತಾರೆ. ಆಶ್ಚರ್ಯವೆಂದರೆ ಈಗ ಕೂಡ ಜ್ಯೋತಿ ಬಳ್ಳಾರಿಯವರು  ಅದೇ ಮೋಹಕತೆಯ ನೃತ್ಯವನ್ನು ಮಾಡಿ  ಪ್ರೇಕ್ಷಕರ ಮನದಲ್ಲಿ ಅಭಿಮಾನದ  ತರಂಗಳನ್ನು  ಎಬ್ಬಿಸುತ್ತಾರೆ. ಮೂಲತಃ ಬಳ್ಳಾರಿಯವರಾದ ಜ್ಯೋತಿಯವರು ಕರ್ನಾಟಕದ ಎಲ್ಲ ವೃತ್ತಿ ರಂಗಭೂಮಿಗಳಲ್ಲಿ  ತಮ್ಮ ಮೋಹಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಮುಖವಾಡ!  ನಮಗೆ,  ಹುಟ್ಟುತ್ತಲೆ ತೊಡಿಸುತ್ತಾರೆ ಜಾತಿ ಧರ್ಮದ ಮುಖವಾಡ ದೊಡ್ಡವರಾಗುತ್ತಲೆ ಮತ್ತೆ ನಾವೆ ತೊಡುತ್ತೇವೆ ಬಣ್ಣ ಬಣ್ಣದ ಮುಖವಾಡ ನಂಬಿದ ಹೆಂಡತಿಯ ಎದರು ನಂಬದ ಗೆಳತಿಯೆದರೂ ಪ್ರೀತಿಸುವ ಮಿತ್ರನ ಎದರು ದ್ವೇಷಿಸುವ ಶತ್ರುಗಳೆದರೂ ನಮ್ಮ ವೃತ್ತಿಗೊಂದರಂತೆ ಇದೆ ಮುಖವಾಡ ಪ್ರವೃತ್ತಿಯಾಗಿ ಮತ್ತೆ ಬೇರೆ ಮುಖವಾಡ ಸಾರ್ವಜನಿಕ ಬದುಕಿನಲ್ಲಿ ಮುಖವಾಡಗಳದೆ ಮೇಲುಗೈ ಮುಖವಾಡವಿಲ್ಲದೆ ಕ್ಷಣಹೊತ್ತು ಬದುಕಲಾರೆವು ನಾವು ನಾವು ಮುಖವಾಡ ಕಳಚುತ್ತಲೆ ಇಲ್ಲ ಕನ್ನಡಿ ತೋರುವ ಮುಖ ನಮ್ಮದೆಂದು ನಂಬಿರುವೆವು ಎಲ್ಲ ನಿಜವಾಗಿ ನಾವು ನಾವೇ ಅಲ್ಲ ಯಾರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಲಂಕೇಶ್ ಮತ್ತು ಮನಶಾಸ್ತ್ರ: ಶ್ರೀಮಂತ್ ಯನಗುಂಟಿ

ಪಿ.ಲಂಕೇಶ್. ಕನ್ನಡ ಸಾಹಿತ್ಯದಲ್ಲಿ ತುಂಬಾ ಪರಿಚಿತ ಮತ್ತುಆತ್ಮಿಯ ಹೆಸರು. ಈಗಾಗಲೇ ಲಂಕೇಶ್‍ರ ಬದುಕು ಮತ್ತು ಬರಹದ ಬಗ್ಗೆ ಅನೇಕ ಬರಹಗಾರರು ಕೃತಿಗಳನ್ನು ರಚಿಸಿ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಏಕೆ ಸ್ವತಃ ಲಂಕೇಶರೇ ತಮ್ಮ ಆತ್ಮಚರಿತ್ರೆ "ಹುಳಿಮಾವಿನ ಮರ"ವನ್ನು ನಮ್ಮಕೈಗಿಟ್ಟು ಹೋಗಿದ್ದಾರೆ. ಆದರೆ ಒಂದು ಮಾತ್ರ ನಿಜ. ಆ ಬರಹಗಳನ್ನೆಲ್ಲ ಮತ್ತೆ ಮತ್ತೆಓದಿದ ಹಾಗೆ ಮತ್ತೆ ಮತ್ತೆ ಲಂಕೇಶರ ವಿಭಿನ್ನ ಮನಸ್ಥಿತಿಗಳ ಅರಿವು ಗಾಢವಾಗುತ್ತಾ ಹೋಗುತ್ತದೆ. ಮೊದಲಿಗೆ ಓದಿದಾಗ ಲಂಕೇಶ ಒಬ್ಬ ಉತ್ತಮ ವಿಚಾರವಾದಿ ಹಾಗೂ ಸಮಾಜವಾದಿ ಎನಿಸಬಹುದು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾತ್ಯಾಗೇನೈತಿ ಸುಡಗಾಡ: ತಿರುಪತಿ ಭಂಗಿ

       ಅಂವ ಉಳಿಯೋದ ಗ್ಯಾರಂಟಿ ಇಲ್ಲ. ನಾಂವ sಮಾಡಬೇಕಾದ ಪ್ರಯತ್ನಾ ಎಲ್ಲಾ ಮಾಡಾಕ ಹತ್ತೀವಿ. ಮಿಕ್ಕಿದ್ದ ಆ ದೇವ್ರಿಗೆ ಬಿಟ್ಟದ್ದ ಅನಕೋತ ಕೈಯಾಗ ಒಂದ ದೇಹಾ ಚಕ್ಕಮಾಡುವ ಮಶಿನ್ ಹಿಡಕೊಂಡ ಮಾತಾಡಕೋತ ಮಾತಾಡಕೋತ ಕಂಚಿ ಡಾಕ್ಟರ್ ಆಫ್ರೇಶನ್ ಥೇಟರ್ಗೆ ಹೊಂಟ. ಬಿಳಿ ಸೀರಿ,ಬಿಳಿ ಜಂಪರ್ ತೊಟ್ಟ, ಮೂಗಿಗೆ ಎತ್ತಗೊಳಿಗೆ ಹಾಕಿದಂಗ ಒಂದ ಬಾಯಿಬುಟ್ಟಿ ಹಕ್ಕೊಂಡ, ಮನಿ ಕಳ್ಳತನಾ ಮಾಡಾಕ ಬಂದ ಕಳ್ಳರಂತೆ ವೇಷಧಾರಿ ನರಸಬಾಯಿಗೋಳು ಡಾಕ್ಟರ್ ಹಿಂದ ಮುಂದ ಪಾದರಸದ ಹಂಗ ಆ ಕಡೆಯಿಂದ ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಕಲ ಕುಲತಿಲಕ ಶ್ರೀಕನಕದಾಸರು!: ಹೊರಾ.ಪರಮೇಶ್ ಹೊಡೇನೂರು

ಶ್ರೀ ಕನಕದಾಸರ ಮೂಲ ಹೆಸರು ತಿಮ್ಮಪ್ಪ ನಾಯಕ. ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಬಹಳ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರು ದಾಸ ಶ್ರೇಷ್ಠರೆಂದು ಇಂದಿಗೂ ಜನಮಾನಸದಲ್ಲಿ ಉಳಿದಿದ್ದಾರೆ. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಗಣನೀಯ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ "ಅಶ್ವಿನಿ ದೇವತೆ"ಗಳೆಂದು ಬಣ್ಣಿಸಲಾಗಿದೆ. ಕನಕದಾಸರು ಆರಂಭದಲ್ಲಿ ದಂಡನಾಯಕರಾಗಿದ್ದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುಬ್ರಹ್ಮಣ್ಯ ಸುತ್ತಮುತ್ತ: ಪ್ರಶಸ್ತಿ

ಸುಮಾರಷ್ಟು ಜನರಿಗೆ ಸುಬ್ರಹ್ಮಣ್ಯ ಅಂದ್ರೆ ಅಲ್ಲಿ ನಡೆಯೋ ನಾಗಪ್ರತಿಷ್ಟೆ, ಆಶ್ಲೇಷ ಬಲಿಗಳು ನೆನಪಾಗುತ್ತೆ. ಟ್ರೆಕ್ಕಿಂಗು ಅಂತ ಹೋಗೋರಿಗೆ ಅದಕ್ಕೆ ಸಮೀಪದಲ್ಲಿರೋ ಕುಮಾರ ಪರ್ವತ ನೆನಪಾಗಬಹುದು. ಆದರೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂದಿರುವ ಮರಕತ ಪರ್ವತ ಗೊತ್ತಾ ಎಂದರೆ, ಆದಿ ಸುಬ್ರಹ್ಮಣ್ಯ, ಕಾಶಿ ಕಟ್ಟೆ ಗಣಪತಿ, ಅಭಯ ಗಣಪತಿ, ವನದುರ್ಗಾ ದೇವಿ ನೋಡಿದ್ದೀರಾ ಎಂದರೆ ಎಲ್ಲಿದೆಯಪ್ಪಾ ಇವು ಎನ್ನಬಹುದು. ಸುಬ್ರಹ್ಮಣ್ಯದಿಂದ ೨೦ ಕಿಮೀ ದೂರದ ಒಳಗಿರುವ ಪಂಜ ಪಂಚಲಿಂಗೇಶ್ವರ ದೇವಸ್ಥಾನ, ಬಿಳಿನೆಲೆ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನ, ಬನವನ ಮೂಲೆ ಈಶ್ವರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂಕ ಪ್ರಾಣಿಯ ಪ್ರೀತಿ: ಪ್ರವೀಣ ಕಾಗಾಲ.ಕುಮಟಾ.

                 ಅದೊಂದು ಪುಟ್ಟ ಊರು.  ಆ ಊರಿನಲ್ಲಿ ಸೊಮೇಗೌಡ ಎಂಬ ಮಧ್ಯಮವರ್ಗದ ವ್ಯಕ್ತಿಯು ತನ್ನ ಹೆಂಡತಿ ಹಾಗೂ ಎರಡು ಮಕ್ಕಳೊಂದಿಗೆ ಬಾಳ್ವೆ ನಡೆಸುತ್ತಿದ್ದನು. ಸೊಮೆಗೌಡನು ಇತರರಿಗೆ ಯಾವಾಗಲೂ ಸಹಾಯ ಮಾಡುತ್ತ ತನ್ನ ಎರಡು ಮಕ್ಕಳನ್ನು ಒಳ್ಳೆಯ ವ್ಯಕ್ತಿಗಳನ್ನಾಗಿ ರೂಪಿಸಲು ಇವರು ಶ್ರಮಿಸುತ್ತಿದ್ದರು. ಸೊಮೇಗೌಡನ ಮಗನ ಹೆಸರು ನಿಖಿಲ್. ಹತ್ತನೆಯ ತರಗತಿಯಲ್ಲಿ ಓದುತ್ತಿದ್ದನು. ಮಗಳ ಹೆಸರು ರೂಪಾ. ಇವಳು ನಿಖಿಲ್ ಗಿಂತ ಎರಡು ವರ್ಷ ದೊಡ್ಡವಳಾಗಿದ್ದಳು. ನಗರದ ಕಾಲೇಜಿನಲ್ಲಿ ಪಿ. ಯು. ಸಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಮನದಾಳ”: ಟಿ.ಎ.ಗೋಪಾಲ 

    ಹಲವು ದಿನದ ಹಂಬಲ, ತಿಳಿಯುವ ಆಸೆ, ಅರಿಯುವ ಬಯಕೆ, ಬಂದನದಿಂದ ಹೊರಬರುವ ಚಿಂತನೆ. ಅದೇನೊ ನನ್ನ ಬೆನ್ನ ಹಿಂದೆ ಬಿದ್ದು ಎಳೆಯುತಿದೆ ಎಂದು ಕೆಲವು ಬಾರಿ ಬಾಸವಾಗುತ್ತದೆ. ಇದೆಲ್ಲವನ್ನು ತಿಳಿದುಕೊಳ್ಳಲು ಒಂದು ದಿನ ನನ್ನನ್ನು ನಾನು ವಿಶ್ಷ್ಲೇಷಿಸಿದೆ, ಹಲವಾರು ಸತ್ಯಾಂಶಗಳು ಕಂಡುಬಂದವು, ಅವು ಮನದಲ್ಲಿ ಗೊಂದಲ, ಜಂಜಾಟ, ಅಸಮಾದಾನ, ಅಶಾಂತಿ, ಉನ್ಮಾದ ಮತ್ತು ಎನೋ ಒಂದು ತರಹದ ಭಯ. ಇವೆಲ್ಲವು ಬೊರ್ಗರೆಯುವ ವೇಗದಲ್ಲಿ ಸಂಚಲಿಸುತ್ತಿವೆ, ಇದನ್ನು ಹಿಡಿದು ನಿಲ್ಲಿಸುವ ಯೋಚನೆ ಆದರೆ ಸಾದ್ಯವಾಗುತ್ತಿಲ್ಲ, ಹಲವು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ