ನಿಜದನಿ: ಕೆ ಟಿ ಸೋಮಶೇಖರ ಹೊಳಲ್ಕೆರೆ. 

ನಾವು ಯಾವುದನ್ನೂ  ಬಲವಂತವಾಗಿ  ಉಳಿಸಲಾಗದು. ಹಾಗೆ ಉಳಿಸಿದರೂ ಬಹಳ ವರ್ಷ ಬದುಕದು. ಯಾವುದನ್ನು ಬಳಸುತ್ತೇವೋ ಅದು ಬಹಳ ವರ್ಷ ಉಳಿಯುತ್ತದೆ ಬೆಳೆಯುತ್ತದೆ. ಬರಿ ಬಾಯಿಯಿಂದ ಕನ್ನಡ ಉಳಿಸಿ ಬೆಳೆಸಿ ಎಂದು ಅಬ್ಬರಿಸಿದ ಮಾತ್ರಕ್ಕೆ ಕನ್ನಡ ಉಳಿಯದು. ಕನ್ನಡ ಬಳಸಿದರೆ ಉಳಿದೀತು, ಪ್ರೀತಿಸಿದರೆ ಬೆಳೆದೀತು. ಇದು ಯಾವುದೇ ಸಂಘ, ಸಂಸ್ಥೆ,  ಒಕ್ಕೂಟಗಳ ಜವಾಬ್ದಾರಿಯಾಗಿರದೆ ಪ್ರತಯೊಬ್ಬ ಕನ್ನಡಿಗನ ಕರ್ತವ್ಯವಾಗಿರುತ್ತದೆ ಕನ್ನಡ ಸುಂದರ ಲಿಪಿಯಿರುವ ಮಧುರ ಭಾಷೆ. ಕನ್ನಡಿಗರನ್ನು, ಕನ್ನಡ ಸಂಸ್ಕೃತಿಯನ್ನು ರೂಪಿಸಿ, ದಾನ, ತ್ಯಾಗ ಉದಾತ್ತ ಗುಣಗಳಿಗೆ ಹೆಸರಾದ ಭಾಷೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎತ್ತರಕ್ಕೆ ಬೆಳೆಯಲು ಜಾಣನೆಂಬ ಅಹಂಗೆ ಪೆಟ್ಟಾಗಲೇ ಬೇಕು..: ನಾಗರಾಜ್. ಮುಕಾರಿ (ಚಿರಾಭಿ)

        ನಾಲ್ಕನೇ ತರಗತಿಯಲ್ಲಿ ಕ್ಲಾಸ್ ಟೀಚರ್ ಆಗಿ ಇದ್ದಿದ್ದು ಒಬ್ಬರೇ ಮಾಸ್ತರು. ಅವರು ನನ್ನ ಜೀವನದಲ್ಲಿ ನೆನಪಿಟ್ಟು ಕೊಳ್ಳುವಂತಹ ವ್ಯಕ್ತಿತ್ವದವರು. ಅದು ನನ್ನ ನೆಚ್ಚಿನ ಕೊಟ್ರಪ್ಪ ಮಾಸ್ತರು. ಅವರೊಬ್ಬರೇ ಕನ್ನಡ, ವಿಜ್ಞಾನ, ಸಮಾಜ ಮತ್ತು ಗಣಿತ ಪಾಠವನ್ನು ಅತೀ ಸಂತೋಷವಾಗಿ ಹೇಳಿಕೊಡುತ್ತಿದ್ದುದು. ತಿಂಗಳಿಗೊಮ್ಮೆ ಪರೀಕ್ಷೆ, ಗರಿಷ್ಟ ಅಂಕ ಇಪ್ಪತೈದು. ಸರಿಸುಮಾರು ಎಲ್ಲಾ ವಿಷಯಗಳಲ್ಲೂ ಇಪ್ಪತ್ತರ ಮೇಲೆಯೇ ಗಳಿಸಿದ ನೆನಪು ನನಗೆ, ಅದಕ್ಕೆಂದೇ ಒಮ್ಮೆ ತರಗತಿಯ ಮಾನಿಟರ್ ಅದದ್ದೂ ಉಂಟು.  ಹಾಗೆಯೇ ಇರಲು ಒಂದು ದಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಐದ್ಸಾವರ ಫ್ರೆಂಡ್ಸು ಮತ್ತು ನಾವು: ಪ್ರಶಸ್ತಿ

ಈ ಫೇಸ್ಬುಕ್ಕಿನ ಸಾಹಿತಿಗಳೆಲ್ಲಾ, ಅಥವಾ ಬೇರೆಡೆ ಸಾಹಿತ್ಯ ಬರೆಯುತ್ತಿದ್ದು ಸದ್ಯ ಫೇಸ್ಬುಕ್ಕಿನಲ್ಲಿ ಸಕ್ರಿಯರಾಗಿರೋ ಸ್ನೇಹಿತರೆಲ್ಲಾ ಯಾವುದೋ ಪಕ್ಷದ ವಕ್ತಾರರಂತೆ, ಮತ್ಯಾವುದೋ ಕೋಮಿನ ಹರಿಕಾರರಂತೆ ಯದ್ವಾ ತದ್ವಾ ಪೋಸ್ಟುಗಳನ್ನ ಹರಿಬಿಡೋದನ್ನು ನೋಡಿದಾಗ ಖೇದವಾಗುತ್ತೆ. ಮೋದಿಯೊಬ್ಬ ಸರ್ವಾಧಿಕಾರಿಯೆಂದಾಗ್ಲೋ, ಟಿಪ್ಪು ಜಯಂತಿ ಬೇಡವೆನ್ನುವವರಿಗೆ ಬುದ್ಧಿಯಿಲ್ಲವೆಂದಾಗ್ಲೋ , ಉರುಳು ಸೇವೆಗೋ, ಉಡುಪಿ ಚಲೋಗೋ ಪ್ರಶಂಸೆ, ಧಿಕ್ಕಾರಗಳನ್ನ ಬರೆದಾಗಾದ ಬೇಸರವಲ್ಲವದು. ಆದರೆ ಎಡವೇ ಸರಿಯೆಂದೋ, ಬಲವೇ ಸರ್ವೋತ್ತಮವೆಂದೋ ದಿನಂಪ್ರತಿ ಜಗಳ ಕಾಯೋ ಪರಿಗೆ ಕಸಿವಿಸಿಯಾಗುತ್ತೆ. ವೈಯುಕ್ತಿಕವಾಗಿ ಇಷ್ಟವಾಗೋ ಅವರು ಫೇಸ್ಬುಕ್ಕಿಗೆ ಬಂದಾಗ ಹಿಂಗ್ಯಾಕೆ ಅನ್ನೋದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಕತೆಗಳು: ಸಿಂಧುಭಾರ್ಗವ್, ಕೃಷ್ಣವೇಣಿ ಕಿದೂರ್.

ಅಹಂಕಾರವೂ ಕರಗುವುದು. ಆಗರ್ಭ ಶ್ರೀಮಂತನ ಮಗನಿಗೆ ಐಶಾರಾಮಿಯ ಜೀವನ ನಡೆಸಲು ಏನೆಲ್ಲ ಮಾಡಬೇಕೋ ಅದನ್ನು ಚೆನ್ನಾಗಿ ತಿಳಿದಿದ್ದ.. ಕಾರು, ಬಂಗಲೆ ಜೊತೆಗೆ ಆಳುಕಾಳು ಅಲ್ಲದೆ ಕುಡಿತ ದಿನಕ್ಕೊಬ್ಬಳು ದೇಹದಾನ ಮಾಡುವವಳು ಸಿಗುತ್ತಿದ್ದಳು.. ತಂದೆ ರಾಮುವಿನ ಸವೆತ, ಬೆವರ ಹನಿ, ದೇಹದಲ್ಲಿ ಬತ್ತಿ ಹೋದ ರಕ್ತ ಇದಾವುದೂ ಕಣ್ಣಿಗೆ ಕಾಣಿಸುತ್ತಲೇ ಇರಲಿಲ್ಲ..  * ರೈತನಾಗಿದ್ದ ರಾಮುವಿನ ತಂದೆ ತನ್ನ ಕೃಷಿಭೂಮಿಯನ್ನು ಮಗನ ಕೈಗೊಪ್ಪಿಸಿ ಕಣ್ಣುಮುಚ್ಚಿಕೊಂಡರು. ಇದ್ದ ಒಂದು ಎಕರೆ ಜಾಗದಲ್ಲಿ ಮೊದಲು ಕೃಷಿ ಆರಂಭಿಸಿದ್ದ ರಾಮು ದಿನವೂ ತಾನೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಲೇಖನಗಳು: ಬಸವರಾಜ ಪಟ್ಟಣಶೆಟ್ಟಿ , ವೇಣುಗೋಪಾಲ್ ಹೆಚ್.

ಕನ್ನಡ ನಾಡಿನ ಅಪರೂಪದ ನೃತ್ಯತಾರೆ ಜ್ಯೋತಿ ಬಳ್ಳಾರಿ ಹಾಗೂ ಕಲಾವಿದರ ತಂಡ ಜ್ಯೋತಿ ಬಳ್ಳಾರಿ ಕರ್ನಾಟಕ ಕಂಡ ಅಪರೂಪದ ನೃತ್ಯತಾರೆ.  ಈ  ತಾರೆ ಹಿಂದೊಮ್ಮೆ ಯಾವ ಪರಿ ಪ್ರೇಕ್ಷಕರಿಗೆ ತಮ್ಮ ನೃತ್ಯದ ಮೋಹಕತೆಯಿಂದ ಹುಚ್ಚು ಹಿಡಿಸಿದ್ದರೆಂದರೆ ಅದನ್ನು ಹಿಂದಿನ ಪ್ರೇಕ್ಷಕರು ಈಗಲೂ ನೆನಪಿಸಿ ಖುಷಿ ಪಡುತ್ತಾರೆ. ಆಶ್ಚರ್ಯವೆಂದರೆ ಈಗ ಕೂಡ ಜ್ಯೋತಿ ಬಳ್ಳಾರಿಯವರು  ಅದೇ ಮೋಹಕತೆಯ ನೃತ್ಯವನ್ನು ಮಾಡಿ  ಪ್ರೇಕ್ಷಕರ ಮನದಲ್ಲಿ ಅಭಿಮಾನದ  ತರಂಗಳನ್ನು  ಎಬ್ಬಿಸುತ್ತಾರೆ. ಮೂಲತಃ ಬಳ್ಳಾರಿಯವರಾದ ಜ್ಯೋತಿಯವರು ಕರ್ನಾಟಕದ ಎಲ್ಲ ವೃತ್ತಿ ರಂಗಭೂಮಿಗಳಲ್ಲಿ  ತಮ್ಮ ಮೋಹಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಮುಖವಾಡ!  ನಮಗೆ,  ಹುಟ್ಟುತ್ತಲೆ ತೊಡಿಸುತ್ತಾರೆ ಜಾತಿ ಧರ್ಮದ ಮುಖವಾಡ ದೊಡ್ಡವರಾಗುತ್ತಲೆ ಮತ್ತೆ ನಾವೆ ತೊಡುತ್ತೇವೆ ಬಣ್ಣ ಬಣ್ಣದ ಮುಖವಾಡ ನಂಬಿದ ಹೆಂಡತಿಯ ಎದರು ನಂಬದ ಗೆಳತಿಯೆದರೂ ಪ್ರೀತಿಸುವ ಮಿತ್ರನ ಎದರು ದ್ವೇಷಿಸುವ ಶತ್ರುಗಳೆದರೂ ನಮ್ಮ ವೃತ್ತಿಗೊಂದರಂತೆ ಇದೆ ಮುಖವಾಡ ಪ್ರವೃತ್ತಿಯಾಗಿ ಮತ್ತೆ ಬೇರೆ ಮುಖವಾಡ ಸಾರ್ವಜನಿಕ ಬದುಕಿನಲ್ಲಿ ಮುಖವಾಡಗಳದೆ ಮೇಲುಗೈ ಮುಖವಾಡವಿಲ್ಲದೆ ಕ್ಷಣಹೊತ್ತು ಬದುಕಲಾರೆವು ನಾವು ನಾವು ಮುಖವಾಡ ಕಳಚುತ್ತಲೆ ಇಲ್ಲ ಕನ್ನಡಿ ತೋರುವ ಮುಖ ನಮ್ಮದೆಂದು ನಂಬಿರುವೆವು ಎಲ್ಲ ನಿಜವಾಗಿ ನಾವು ನಾವೇ ಅಲ್ಲ ಯಾರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಲಂಕೇಶ್ ಮತ್ತು ಮನಶಾಸ್ತ್ರ: ಶ್ರೀಮಂತ್ ಯನಗುಂಟಿ

ಪಿ.ಲಂಕೇಶ್. ಕನ್ನಡ ಸಾಹಿತ್ಯದಲ್ಲಿ ತುಂಬಾ ಪರಿಚಿತ ಮತ್ತುಆತ್ಮಿಯ ಹೆಸರು. ಈಗಾಗಲೇ ಲಂಕೇಶ್‍ರ ಬದುಕು ಮತ್ತು ಬರಹದ ಬಗ್ಗೆ ಅನೇಕ ಬರಹಗಾರರು ಕೃತಿಗಳನ್ನು ರಚಿಸಿ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಏಕೆ ಸ್ವತಃ ಲಂಕೇಶರೇ ತಮ್ಮ ಆತ್ಮಚರಿತ್ರೆ "ಹುಳಿಮಾವಿನ ಮರ"ವನ್ನು ನಮ್ಮಕೈಗಿಟ್ಟು ಹೋಗಿದ್ದಾರೆ. ಆದರೆ ಒಂದು ಮಾತ್ರ ನಿಜ. ಆ ಬರಹಗಳನ್ನೆಲ್ಲ ಮತ್ತೆ ಮತ್ತೆಓದಿದ ಹಾಗೆ ಮತ್ತೆ ಮತ್ತೆ ಲಂಕೇಶರ ವಿಭಿನ್ನ ಮನಸ್ಥಿತಿಗಳ ಅರಿವು ಗಾಢವಾಗುತ್ತಾ ಹೋಗುತ್ತದೆ. ಮೊದಲಿಗೆ ಓದಿದಾಗ ಲಂಕೇಶ ಒಬ್ಬ ಉತ್ತಮ ವಿಚಾರವಾದಿ ಹಾಗೂ ಸಮಾಜವಾದಿ ಎನಿಸಬಹುದು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾತ್ಯಾಗೇನೈತಿ ಸುಡಗಾಡ: ತಿರುಪತಿ ಭಂಗಿ

       ಅಂವ ಉಳಿಯೋದ ಗ್ಯಾರಂಟಿ ಇಲ್ಲ. ನಾಂವ sಮಾಡಬೇಕಾದ ಪ್ರಯತ್ನಾ ಎಲ್ಲಾ ಮಾಡಾಕ ಹತ್ತೀವಿ. ಮಿಕ್ಕಿದ್ದ ಆ ದೇವ್ರಿಗೆ ಬಿಟ್ಟದ್ದ ಅನಕೋತ ಕೈಯಾಗ ಒಂದ ದೇಹಾ ಚಕ್ಕಮಾಡುವ ಮಶಿನ್ ಹಿಡಕೊಂಡ ಮಾತಾಡಕೋತ ಮಾತಾಡಕೋತ ಕಂಚಿ ಡಾಕ್ಟರ್ ಆಫ್ರೇಶನ್ ಥೇಟರ್ಗೆ ಹೊಂಟ. ಬಿಳಿ ಸೀರಿ,ಬಿಳಿ ಜಂಪರ್ ತೊಟ್ಟ, ಮೂಗಿಗೆ ಎತ್ತಗೊಳಿಗೆ ಹಾಕಿದಂಗ ಒಂದ ಬಾಯಿಬುಟ್ಟಿ ಹಕ್ಕೊಂಡ, ಮನಿ ಕಳ್ಳತನಾ ಮಾಡಾಕ ಬಂದ ಕಳ್ಳರಂತೆ ವೇಷಧಾರಿ ನರಸಬಾಯಿಗೋಳು ಡಾಕ್ಟರ್ ಹಿಂದ ಮುಂದ ಪಾದರಸದ ಹಂಗ ಆ ಕಡೆಯಿಂದ ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಕಲ ಕುಲತಿಲಕ ಶ್ರೀಕನಕದಾಸರು!: ಹೊರಾ.ಪರಮೇಶ್ ಹೊಡೇನೂರು

ಶ್ರೀ ಕನಕದಾಸರ ಮೂಲ ಹೆಸರು ತಿಮ್ಮಪ್ಪ ನಾಯಕ. ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಬಹಳ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರು ದಾಸ ಶ್ರೇಷ್ಠರೆಂದು ಇಂದಿಗೂ ಜನಮಾನಸದಲ್ಲಿ ಉಳಿದಿದ್ದಾರೆ. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಗಣನೀಯ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ "ಅಶ್ವಿನಿ ದೇವತೆ"ಗಳೆಂದು ಬಣ್ಣಿಸಲಾಗಿದೆ. ಕನಕದಾಸರು ಆರಂಭದಲ್ಲಿ ದಂಡನಾಯಕರಾಗಿದ್ದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುಬ್ರಹ್ಮಣ್ಯ ಸುತ್ತಮುತ್ತ: ಪ್ರಶಸ್ತಿ

ಸುಮಾರಷ್ಟು ಜನರಿಗೆ ಸುಬ್ರಹ್ಮಣ್ಯ ಅಂದ್ರೆ ಅಲ್ಲಿ ನಡೆಯೋ ನಾಗಪ್ರತಿಷ್ಟೆ, ಆಶ್ಲೇಷ ಬಲಿಗಳು ನೆನಪಾಗುತ್ತೆ. ಟ್ರೆಕ್ಕಿಂಗು ಅಂತ ಹೋಗೋರಿಗೆ ಅದಕ್ಕೆ ಸಮೀಪದಲ್ಲಿರೋ ಕುಮಾರ ಪರ್ವತ ನೆನಪಾಗಬಹುದು. ಆದರೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂದಿರುವ ಮರಕತ ಪರ್ವತ ಗೊತ್ತಾ ಎಂದರೆ, ಆದಿ ಸುಬ್ರಹ್ಮಣ್ಯ, ಕಾಶಿ ಕಟ್ಟೆ ಗಣಪತಿ, ಅಭಯ ಗಣಪತಿ, ವನದುರ್ಗಾ ದೇವಿ ನೋಡಿದ್ದೀರಾ ಎಂದರೆ ಎಲ್ಲಿದೆಯಪ್ಪಾ ಇವು ಎನ್ನಬಹುದು. ಸುಬ್ರಹ್ಮಣ್ಯದಿಂದ ೨೦ ಕಿಮೀ ದೂರದ ಒಳಗಿರುವ ಪಂಜ ಪಂಚಲಿಂಗೇಶ್ವರ ದೇವಸ್ಥಾನ, ಬಿಳಿನೆಲೆ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನ, ಬನವನ ಮೂಲೆ ಈಶ್ವರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂಕ ಪ್ರಾಣಿಯ ಪ್ರೀತಿ: ಪ್ರವೀಣ ಕಾಗಾಲ.ಕುಮಟಾ.

                 ಅದೊಂದು ಪುಟ್ಟ ಊರು.  ಆ ಊರಿನಲ್ಲಿ ಸೊಮೇಗೌಡ ಎಂಬ ಮಧ್ಯಮವರ್ಗದ ವ್ಯಕ್ತಿಯು ತನ್ನ ಹೆಂಡತಿ ಹಾಗೂ ಎರಡು ಮಕ್ಕಳೊಂದಿಗೆ ಬಾಳ್ವೆ ನಡೆಸುತ್ತಿದ್ದನು. ಸೊಮೆಗೌಡನು ಇತರರಿಗೆ ಯಾವಾಗಲೂ ಸಹಾಯ ಮಾಡುತ್ತ ತನ್ನ ಎರಡು ಮಕ್ಕಳನ್ನು ಒಳ್ಳೆಯ ವ್ಯಕ್ತಿಗಳನ್ನಾಗಿ ರೂಪಿಸಲು ಇವರು ಶ್ರಮಿಸುತ್ತಿದ್ದರು. ಸೊಮೇಗೌಡನ ಮಗನ ಹೆಸರು ನಿಖಿಲ್. ಹತ್ತನೆಯ ತರಗತಿಯಲ್ಲಿ ಓದುತ್ತಿದ್ದನು. ಮಗಳ ಹೆಸರು ರೂಪಾ. ಇವಳು ನಿಖಿಲ್ ಗಿಂತ ಎರಡು ವರ್ಷ ದೊಡ್ಡವಳಾಗಿದ್ದಳು. ನಗರದ ಕಾಲೇಜಿನಲ್ಲಿ ಪಿ. ಯು. ಸಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಮನದಾಳ”: ಟಿ.ಎ.ಗೋಪಾಲ 

    ಹಲವು ದಿನದ ಹಂಬಲ, ತಿಳಿಯುವ ಆಸೆ, ಅರಿಯುವ ಬಯಕೆ, ಬಂದನದಿಂದ ಹೊರಬರುವ ಚಿಂತನೆ. ಅದೇನೊ ನನ್ನ ಬೆನ್ನ ಹಿಂದೆ ಬಿದ್ದು ಎಳೆಯುತಿದೆ ಎಂದು ಕೆಲವು ಬಾರಿ ಬಾಸವಾಗುತ್ತದೆ. ಇದೆಲ್ಲವನ್ನು ತಿಳಿದುಕೊಳ್ಳಲು ಒಂದು ದಿನ ನನ್ನನ್ನು ನಾನು ವಿಶ್ಷ್ಲೇಷಿಸಿದೆ, ಹಲವಾರು ಸತ್ಯಾಂಶಗಳು ಕಂಡುಬಂದವು, ಅವು ಮನದಲ್ಲಿ ಗೊಂದಲ, ಜಂಜಾಟ, ಅಸಮಾದಾನ, ಅಶಾಂತಿ, ಉನ್ಮಾದ ಮತ್ತು ಎನೋ ಒಂದು ತರಹದ ಭಯ. ಇವೆಲ್ಲವು ಬೊರ್ಗರೆಯುವ ವೇಗದಲ್ಲಿ ಸಂಚಲಿಸುತ್ತಿವೆ, ಇದನ್ನು ಹಿಡಿದು ನಿಲ್ಲಿಸುವ ಯೋಚನೆ ಆದರೆ ಸಾದ್ಯವಾಗುತ್ತಿಲ್ಲ, ಹಲವು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶತಮಾನದ ಅಧ್ಬುತಗಳಲ್ಲೊಂದು-ಗೋಲ್ಡನ್ ಗೇಟ್ ಬ್ರಿಡ್ಜ್: ಪ.ನಾ.ಹಳ್ಳಿ.ಹರೀಶ್ ಕುಮಾರ್

ಇಲ್ಲೊಂದು ಸೇತುವೆಯಿದೆ. ಇದನ್ನು ನೋಡಿದವರೆಲ್ಲಾ ಇದೊಂದು ಇಪ್ಪತ್ತನೇ ಶತಮಾನದ ಅದ್ಭುತಗಳಲ್ಲೊಂದು ಎಂದು ಉಧ್ಗರಿಸುತ್ತಾರೆ. ಅಲ್ಲದೇ ಇದನ್ನು ಶತಮಾನದ ಅದ್ಬುತಗಳಲ್ಲೊಂದು ಎಂದೂ ಘೋಷಿಸಲಾಗಿದೆ. ಜಗತ್ತಿನ ಮೊದಲ ತೂಗುಸೇತುವೆಯೂ ಇದೇ ಆಗಿದೆ ಎಂದರೆ ಆಶ್ಚರ್ಯವಲ್ಲ. ಸ್ಯಾನ್ ಫ್ರಾನ್ಸಿಸ್ಕೋ ಕೊಲ್ಲಿಯ ಮೇಲಿರುವ ಈ ತೂಗುಸೇತುವೆಯು 1.7 ಮೈಲುಗಳಷ್ಟು ಉದ್ದವಿದ್ದು, ಸ್ಯಾನ್ ಫ್ರಾನ್ಸಿಸ್ಕೋದ ಉತ್ತರ ತುದಿಯನ್ನು ಮರೀನ್‍ಕೌಂಟಿಯ ಸಸಲಿಟೋದೊಂದಿಗೆ ಸೇರಿಸುತ್ತದೆ. ಆಧುನಿಕ ಜಗತ್ತಿನ 7 ಅಧ್ಬುತಗಳಲ್ಲಿ ಗೋಲ್ಡನ್ ಗೇಟ್ ಬ್ರಿಡ್ಜ್ ಕೂಡಾ ಒಂದು. ಸ್ಯಾನ್‍ಫ್ರಾನ್ಸಿಸ್ಕೋ ಕೊಲ್ಲಿಯ ಮೇಲಿರುವ ಈ ತೂಗುಸೇತುವೆ ಮುಖ್ಯವಾಗಿ ಎರೆಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಬೆಳಗಲಿ ದೀಪ *** ಹೊತ್ತಲಿ ದೀಪ ಹೊತ್ತಿ ಉರಿಯುತ್ತಿರುವ ಭ್ರಷ್ಟರ ನಡುವೆ ಹೊತ್ತೇರುವದರಲ್ಲಿ ಹೊಸತನವ ಹೊಮ್ಮಿಸಲಿ ಬೆಳಗಲಿ ದೀಪ ಬಡವರ ಬಾಗಿಲಲಿ ಗುಡಿಸಲುಗಳಲಿ ಬೆಳಕಾಗುವದರೊಳಗೆ ಬದುಕು ಕತ್ತಲಿಂದ ದೂರವಾಗಲಿ ವಿಜೃಂಭಿಸಲಿ ದೀಪ ಸೋಲನ್ನುಂಡು ಹತಾಸೆಗೊಳಗಾದ ಮನಸುಗಳಲಿ ಗೆದ್ದು ಬೀಗುವವರ ಸೊಕ್ಕುಮುರಿದು ಬಿದ್ದಲ್ಲೇ ಬಿದ್ದಿರುವ ವೃದ್ಧರ ಬಾಳಲಿ ಝೇಂಕರಿಸಲಿ ದೀಪ ಹಣದ ಆಸೆಗೆ ಹೆಣವ ಕೆಡವಿದವರ ಚಿತೆಯೆದುರು ಹೆಣ್ಣಿನ ದೇಹಕೆ ಕಣ್ಣ ಹಾಕುವ ಕಾಮುಕರ ಶವದೆದುರು ಸುಡುಗಾಡಲಿ ಶೃಂಗಾರಗೊಳ್ಳಲಿ ದೀಪ ಸಿಂಧೂರವಿಲ್ಲದ ಹಣೆಗಳಮೇಲೆ ಕಣ್ಣುಗಳಿಲ್ಲದ ಕುರುಡರೆದೆಯಲಿ ಬಣ್ಣವಿರದ ಬದುಕಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರಾಜ್ಯೋತ್ಸವ: ಪಾರ್ಥಸಾರಥಿ ಎನ್

ನಾಯಕ ನಟ ರೂಪೇಶನ ಮಾತು ಮುಂದುವರೆದಿತ್ತು, " ಕನ್ನಡ ನಾಡು ನುಡಿ ಜಲ ಭೂಮಿಗಾಗಿ, ನನ್ನ ಈ ಜನ್ಮವನ್ನು ಮೀಸಲಾಗಿಡುವೆ.  ನನ್ನ ಪ್ರೀತಿಯ ಅಣ್ಣ ತಮ್ಮಂದಿರೆ, ಇಂದು ನಾನು ಈ ನಾಡಿನಲ್ಲಿ  ಅನ್ನ ತಿನ್ನುತ್ತಿರುವೆ, ನಿಮ್ಮ ನಡುವೆ ಒಬ್ಬ ನೆಚ್ಚಿನ ನಟನಾಗಿ ನಿಂತಿರುವೆ ಎನ್ನುವದಾದರೆ ಅದಕ್ಕೆ ಈ ನಾಡಿನ ಸಮಸ್ತ ತಾಯಿಯರ ಪ್ರೀತಿ, ಅಕ್ಕ ತಂಗಿಯರ ವಾತ್ಸಲ್ಯ ಕಾರಣ. ಸ್ವಂತ ಅಣ್ಣ ತಮ್ಮಂದಿರು ನನ್ನ  ಜೊತೆ ಇರಲಿಲ್ಲ, ಆದರೆ ನೀವು ನನ್ನ ಕೈ ಬಿಡಲಿಲ್ಲ, ನನಗೆ ಅಣ್ಣನಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಮಕಿಂಕರರು: ಒಂದು ಭಯಾನಕ ಸತ್ಯಕಥೆ (ಭಾಗ 9): ಪ್ರಸಾದ್ ಕೆ.

ಇಲ್ಲಿಯವರೆಗೆ ಈ ಕುಖ್ಯಾತ ಪ್ರಕರಣಗಳಿಗೆ ಸಂಬಂಧಪಟ್ಟಂತೆ ನ್ಯಾಯಮೂರ್ತಿ ಆರ್ಚಿ ಕ್ಯಾಂಪ್ಬೆಲ್ ರ 1996 ರ ವಿಸ್ತøತ ವರದಿಯನ್ನು ಅವಲೋಕಿಸಿದರೆ ಈ ಪ್ರಕರಣಗಳ ಹಲವು ಭಯಾನಕ ರಹಸ್ಯಗಳು ಒಂದೊಂದಾಗಿ ತೆರೆದುಕೊಳ್ಳುವುದು ಸತ್ಯ.  ಸ್ಕಾರ್-ಬೋರೋದ ಸರಣಿ ಅತ್ಯಾಚಾರಗಳ ಪ್ರಕರಣಗಳ ಮೇಲೆ ಮೊದಲು ಸಂಕ್ಷಿಪ್ತವಾಗಿ ಕಣ್ಣಾಡಿಸೋಣ. ಸ್ಥಳೀಯ ಮೆಟ್ರೋ ಟೊರಾಂಟೋ ಪೋಲೀಸ್ ಇಲಾಖೆಯು ಶಂಕಿತ ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆಗೊಳಿಸಿದ ನಂತರ ಮಾಹಿತಿಗಳ ಮಹಾಪ್ರವಾಹವೇ ಹಲವು ಮೂಲಗಳಿಂದ ಹರಿದುಬಂದಿತ್ತು. ಮೊದಲೇ ಹೇಳಿದಂತೆ 1990 ರ ಅಕ್ಟೋಬರ್ ಅಂತ್ಯದ ಅವಧಿಯಲ್ಲಿ ಬರೋಬ್ಬರಿ ಒಂಭೈನೂರು ಹೆಸರುಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚಿಕ್ಕ ಬಿಲಗುಂಜಿಯ ಕಮಲೇಶ್ವರ ದೇವಸ್ಥಾನ: ಪ್ರಶಸ್ತಿ

ಹೋಗೋದು ಹೇಗೆ ?  ಸಾಗರ ತಾಲ್ಲೂಕಿನ ಸುತ್ತಮುತ್ತಲಿರೋ ಕೆಳದಿ,ಇಕ್ಕೇರಿ,ಕಲಸೆ, ಹೊಸಗುಂದ ಮುಂತಾದ ಇತಿಹಾಸ ಪ್ರಸಿದ್ಧ ತಾಣಗಳ ಬಗ್ಗೆ ಕೇಳಿರುತ್ತೀರಿ. ಆದರೆ ಸಾಗರಕ್ಕೆ ಹತ್ತಿರದಲ್ಲೇ ಹನ್ನೊಂದನೇ ಶತಮಾನದ ದೇವಸ್ಥಾನವೊಂದಿದೆ ಅನ್ನೋದು ಹೆಚ್ಚಿನವರಿಗೆ ತಿಳಿದಿರಲಾರದು. ಅದೇ ಸಾಗರದಿಂದ ಸುಮಾರು ೨೦ ಕಿ.ಮೀ ದೂರದಲ್ಲಿರುವ ಚಿಕ್ಕ ಬಿಲಗುಂಜಿಯ ಕಮಲೇಶ್ವರ ದೇವಸ್ಥಾನ. ಸಾಗರದಿಂದ ಚಿಕ್ಕಬಿಲಗುಂಜಿಗೆ ಹೋಗೋಕೆ ಎರಡು ಮಾರ್ಗಗಳಿವೆ. ಸಾಗರದಿಂದ ಶಿವಮೊಗ್ಗಕ್ಕೆ ಹೋಗೋ ಮಾರ್ಗದಲ್ಲಿ ಸಿಗೋ ತ್ಯಾಗರ್ತಿ ಕ್ರಾಸಿನಲ್ಲಿ ಹೋಗೋದು ಮೊದಲನೇ ಮಾರ್ಗವಾದರೆ ನಂತರ ಸಿಗೋ ಕಾಸ್ಪಾಡಿ ಎಂಬ ಊರಿನ ಬಳಿ ಎಡಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆರೋಗ್ಯದ ಮೇಲೆ ಸಕಾರಾತ್ಮಕ ಮನೋಭಾವದ ಪರಿಣಾಮ: ವೈ. ಬಿ. ಕಡಕೋಳ

ಮನುಷ್ಯನ ನಡೆ-ನುಡಿ ಆತನ ಮನೋಭಾವ, ಕ್ರಿಯೆ, ಪ್ರತಿಕ್ರಿಯೆಗಳು ಒಂದೇ ರೀತಿ ಇರುವುದಿಲ್ಲ. ಒಂದು ಸಾಮಾನ್ಯ ಪ್ರಚೋದನೆಗೆ ಹತ್ತಾರು ಜನ ಹತ್ತಾರು ರೀತಿಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಬಹುದು. ಉದಾಹರಣೆಗೆ ಒಂದು ಮಗು ಅಳುತ್ತಿದ್ದರೆ ಕೆಲವರು "ಅಯ್ಯೋ ಪಾಪ ಎನ್ನಬಹದು. ಇನ್ನು ಕೆಲವರು “ಛಿ ಏನು ಅನಿಷ್ಟ ಎಷ್ಟು ಅಳುತ್ತೆ” ಎನ್ನಬಹುದು. ಇನ್ನು ಕೆಲವರು “ಪಾಪ ಆ ಮಗುವನ್ನು ರಮಿಸಬೇಕು” ಎನ್ನಬಹುದು. ಒಬ್ಬರು ಮಗುವಿನ ಪಕ್ಕದಲ್ಲಿ ಕುಳಿತು ರಮಿಸಲು ಯತ್ನಿಸಬಹುದು. ಹೀಗೆ ಕೇವಲ ಒಂದು ಘಟನೆ ಹತ್ತಾರು ಜನರಲ್ಲಿ ಹತ್ತಾರು ಯೋಚನೆಗಳನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಧುನಿಕ ಬೆಳವಣಿಗೆಯಿಂದ ಮಾನವೀಯ ಮೌಲ್ಯಗಳ ಅವನತಿ: ಶಿವಣ್ಣ ಎಸ್.ಕೆ. 

ಇಂದು ಆಧುನಿಕತೆಯು ಅತ್ಯಂತ ವೇಗದಲ್ಲಿ ಬೆಳೆಯುತ್ತಿರುವುದು ನಿಜಕ್ಕೂ ಸಂತೋಷದ ವಿಷಯ. ಆದರೆ ಈ ತೀವ್ರಗತಿಯ ಆಧುನಿಕತೆಯ ಬೆಳವಣಿಗೆಯಿಂದಾಗಿ ಭಾರತದಲ್ಲಿ ಆಧುನಿಕತೆಯ ಬಿಸಿ (ಶಾಖ) ಹೆಚ್ಚು ತಟ್ಟಿರುವುದು ನಗರ/ಪಟ್ಟಣಗಳಲ್ಲಿ ಎಂದು ಹೇಳಬಹುದು. ಇಂದು ಸಾಮಾಜಿಕ ಸಂಬಂಧಗಳು ಗುರು-ಹಿರಿಯರು, ತಂದೆ-ತಾಯಂದಿರು, ಸ್ತ್ರೀಯರು ತಮ್ಮ ಸ್ಥಾನಮಾನಗಳನ್ನು ಕಳೆದುಕೊಳ್ಳುತ್ತಿರುವುದು ನಿಜಕ್ಕೂ ವಿಷಾದನೀಯ ಸಂಗತಿಯಾಗಿದೆ. ಸ್ವದೇಶಿ ಮತ್ತು ವಿದೇಶಿ ಚಾನೆಲ್‍ಗಳು ಮನೋರಂಜನೆಯ ಹೆಸರಿನಲ್ಲಿ ಬಿತ್ತರಿಸುತ್ತಿರುವ ಅಶ್ಲೀಲ ಚಿತ್ರಗಳಿಂದಾಗಿ ಭಾರತೀಯ ಸಂಸ್ಕøತಿಯ ಸಂಕೇತಗಳಾದ ಸೀರೆ, ಕುಂಕುಮ, ಹಸಿರು ಬಳೆಗಳು ಇಂದು ಕಾಣಸಿಗುವುದು ಅಪರೂಪವಾಗಿದೆ. ಹೀಗೆಯೇ ಮುಂದುವರೆದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭರತ ಮಾತೆಯ ಪುಣ್ಯ ಭೂಮಿಯನ್ನು ರಕ್ತದಿಂದ ತೋಯಿಸದಿರಿ ಸಹೋದರರೆ: ಸಿದ್ದುಯಾದವ್ ಚಿರಿಬಿ…

ನಿನ್ನೆ ಒಂದು ಕೆಲಸದ ವಿಷಯವಾಗಿ ಕೂಡ್ಲಿಗಿಯ ಸಾರ್ವಜನಿಕ ಅಸ್ಪತ್ರೆಗೆ ಹೋಗಿದ್ದೆ. ನಾನು ಹೋದಾಗ ಡಾಕ್ಟರ್ ಬಂದಿರಲಿಲ್ಲ. ಅದಕ್ಕಾಗಿ ಅಸ್ಪತ್ರೆಯ ಹೊರಗಡೆ ಕುಳಿಯು ಕಾಯ್ತಿದ್ದೆ. ಒಬ್ಬ ವ್ಯೆಕ್ತಿ ಬಂದು "ನೀವು ಸಿದ್ದುಯಾದವ್ ಅಲ್ವಾ?" ಅಂದ. 'ಹೌದು' ಎಂದೆ. ಅವ್ನು ಮರುಮಾತನಾಡದೆ ಯಾರ್ಗೊ ಪೋನ್ ಮಾಡ್ತ ಹೊರಟರಹೋದ. ಸ್ವಲ್ಪ ಸಮಯದ ನಂತರ ಇಬ್ಬರು ಬೈಕ್ ಮೆಲೆ ಬಂದು " ಸಿದ್ದುಯಾದವ್ " ಅಂದ್ರು ಹೌದು ಎಂದೆ. 'ನಿಮ್ಮ ಹತ್ತಿರ ಸ್ವಲ್ಪ ಮಾತಾಡ್ಬೆಕು ಬರ್ತಿರಾ!' ಅಂದ್ರು. ಯಾಕೆ ಎಂದೆ. ಪ್ಲೀಜ್ ಬನ್ನಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆ ಒಂದು ಪ್ರಶ್ನೆ: ಕೆ ಟಿ ಸೋಮಶೇಖರ ಹೊಳಲ್ಕೆರೆ

ಎಲ್ಲಾ  ಸಮಾಜಗಳಿಗೂ ಆದರ್ಶ ಪುರಷನಾದ, ಪುರಷೋತ್ತಮನಾದ ರಾಮನ ಆದರ್ಶದ ಕಥೆ ಅನನ್ಯ. ಆ ಕಥೆ ಸೊಗಸಾಗಿ ರಚಿಸಿದ ವಾಲ್ಮೀಕಿ ಧನ್ಯ. ಅನುಸರಿಸಿ ಆದರ್ಶವಾದ ಭಾರತೀಯ ಸಮಾಜ ಪರಮಧನ್ಯ. ರಾಮಾಮಾಯಣ ವಿಶ್ವದ ಮಹಾಕಾವ್ಯಗಳಲ್ಲಿ  ಒಂದು. ರಾಮಾಯಣ ಎಂದರೆ ' ರಾಮನ ಚರಿತೆ ' ಎಂದು ಅರ್ಥ. ' ರಾಮ '  ಎಂದರೆ  ಮನೋಹರ, ಸುಂದರ, ರಂಜಿಸು ಎಂಬ ಅರ್ಥಗಳಿವೆ. ' ಆಯನ '  ಎಂದರೆ ಚರಿತೆ, ಗತಿ, ಸ್ಥಾನ ಎಂಬ ಅರ್ಥಗಳಿವೆ. ಅವೆರಡು ಪದಗಳು ಸಮಾಸವಾಗಿ ರಾಮಾಯಣ ಪದವಾಗಿದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೋಸ್ತಿ ಖಾತೆಯವರಿಂದ ಕತೆ ಮಾತು ಆಹ್ವಾನ

ಬೆಳಗಾವಿಯಲ್ಲಿ ಒಂದಷ್ಟು ಕತೆಗಾರರು ಸೇರಿ ಒಬ್ಬರ ಕತೆಗಳ ಬಗ್ಗೆ ಇನ್ನೊಬ್ಬರು ಮಾತನಾಡುವ ವಿಶಿಷ್ಟ "ಕತೆ ಮಾತು" ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.  ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಜೊತೆಗೆ ಲಗತ್ತಿಸಲಾಗಿದೆ.   ಕಾರಣ, ಸಹೃದಯರಾದ ತಾವು ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ವಿನಂತಿ. ಕಾರ್ಯಕ್ರಮದ ವಿವರಗಳು ಕೆಳಗಿನಂತಿವೆ. 13ನೇ ನವೆಂಬರ್ 2016,  ಕೇಂದ್ರ ಗ್ರಂಥಾಲಯ, ಡಿ.ಸಿ. ಕಂಪೌಂಡ್, ಬೆಳಗಾವಿ ಕಾರ್ಯಕ್ರಮದ ಆಶಯ: ಸಮಕಾಲೀನ ಕತೆಗಾರ ಗೆಳೆಯರು ಕೂತು ಪರಸ್ಪರರ ಕೃತಿಗಳ ಬಗ್ಗೆ ಅನಿಸಿಕೆ ಹಂಚಿಕೊಳ್ಳುವ ತನ್ಮೂಲಕ ಹೊಸ ಹೊಳಹುಗಳನ್ನು ಅರಿಯುವ ಚಿಕ್ಕ ಪ್ರಯತ್ನ.  ಒಬ್ಬರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಸಂಕೋಲೆಯೊಳಗಿನ ನೀನು! ನೀನು ಬಂದಾಗ ನಿಜವಾಗಿ ಬೆಳದಿಂಗಳು ಹಾಲಿನಂತೆ ಸುರಿದಿತ್ತು ನೋಡಿದ್ದಷ್ಟೇ ಭಾಗ್ಯ! ಅದನ್ನು ತುಂಬಿಡಲು ಯಾವ  ಬಟ್ಟಲಿಗೂ ಸಾದ್ಯವಾಗಿರಲಿಲ್ಲ ನಿನ್ನ ಕಣ್ಣುಗಳೊಳಗೆ ಅಂತಹುದೇ  ಬೆಳಕಿರಬಹುದೆಂದು ಕಾದಿದ್ದೇ ಬಂತು: ಒಂದು ತಣ್ಣನೆಯ ಸಂಜೆ ನಿನ್ನ ಕಣ್ಣುಗಳಲ್ಲಿ ಕಣ್ಣಿಟ್ಟು ನೋಡಿ ಬೆವೆತು ಹೋದೆ ನಿನ್ನ ಕಣ್ಣುಗಳ ತುಂಬ ಬೆಂಕಿ ಕೆನ್ನಾಲಿಗೆಗಳು ನಿನ್ನ ತುಟಿಗಳಿಗೆ ಬಂದೆ ಹೊರಬಂದದ್ದೆಲ್ಲ ನಿಗಿನಿಗಿ ಕೆಂಡದಂತ ಶಬ್ದಗಳು ನಿನ್ನ  ಎದೆಗೆ ಬಂದೆ ಕೊತಕೊತ ಕುದಿಯುವ ಲಾವಾರಸದ  ಕಡಲು ನಿನ್ನ ಸೊಂಟಕ್ಕೆ ಬಂದೆ ಮಿರಮಿರ ಮಿಂಚುವ ಬಿಳಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡ ಭಾಷೆ ಮತ್ತು ಸಂಸ್ಕೃತಿ -ಮುಂದಿನ ದಿನಗಳಲ್ಲಿ!: ಎಸ್.ಜಿ.ಶಿವಶಂಕರ್

ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಭಾರತದ್ದಲ್ಲೇ ಉಜ್ವಲವಾದ ಸ್ಥಾನವಿದೆ. ಕರ್ನಾಟಕದ ಹೆಸರು ವ್ಯಾಸ ಭಾರತದಲ್ಲೇ ಉಲ್ಲೇಖವಾಗಿದೆ. ಕನ್ನಡ ಭಾಷೆಗೆ ಎರಡು ಸಾವಿರ ವರ್ಷಕ್ಕೂ ಮಿಗಿಲಾದ ಇತಿಹಾಸವಿದೆ. ಈ ನಾಡು ಕಾವೇರಿಯಿಂದ ಗೋದಾವರಿಯವರೆಗೂ ವ್ಯಾಪಿಸಿತ್ತು ಎಂದು ಇತಿಹಾಸ ಹೇಳುತ್ತದೆ. ಈ ನಾಡಿಗೆ ಕರ್ನಾಟಕ ಎಂಬ ಹೆಸರು ಬಂದಿರುವ ಬಗೆಗೆ ವಿದ್ವಾಂಸರು ಹಲವು ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಪ್ರದೇಶವನ್ನು ಮೊದಲಿಗೆ 'ಕರಿಯ ಮಣ್ಣಿನ ನಾಡು' ಎಂದೂ, 'ಕರುನಾಡು' ಎಂದರೆ ಎತ್ತರದ ಪ್ರದೇಶದಲ್ಲಿರುವ ನಾಡು ಎಂದೂ, 'ಕಮ್ಮಿತ್ತು ನಾಡು' ಎಂದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂಧಕಾರ ಅಳಿಸುವ ಬೆಳಕಿನ ಅರಿವು ದೀಪಾವಳಿ: ವೈ.ಬಿ.ಕಡಕೋಳ

ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ ಕೈಹಿಡಿದು ನಡೆಸೆನ್ನನು ಇರುಳು ಕತ್ತಲೆಯ ಗವಿ:ಮನೆ ದೂರ; ಕನಿಕರಿಸಿ ಕೈಹಿಡಿದು ನಡೆಸೆನ್ನನು ಹೇಳಿ ನನ್ನಡಿಯಿಡಿಸು;ಬಲುದೂರ ನೋಟವನು ಕೇಳಿದೊಡನೆಯೇ ಸಾಕು ನನಗೊಂದು ಹೆಜ್ಜೆ   ಅಜ್ಞಾನದ ಕತ್ತಲೆಯನ್ನು ಕಳೆಯಲು ಜ್ಞಾನದ ದೀಪ ಅಗತ್ಯ. ದೀಪಾವಳಿ ದೀಪಗಳ ಬೆಳಕಿನ ಹಬ್ಬ. ನರಕಚತುರ್ದಶಿಯಿಂದ ಆರಂಭಿಸಿ ಮೂರು ದಿನಗಳವರೆಗೆ ಆಚರಿಸುವುದುಂಟು. ಭಾರತದ ಎಲ್ಲೆಡೆಯಲ್ಲಿಯೂ ದೀಪಾವಳಿಯನ್ನು ಆಚರಿಸುತ್ತಾರೆ.      ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಸ್ತಾಪಗೊಳ್ಳುವ ಎರಡು ಮುಖ್ಯ ಹೆಸರುಗಳು. ನರಕ ಹಾಗೂ ಬಲಿ. ನರಕನು ಭೂದೇವಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವ್ವ: ಸಿದ್ದರಾಮ ತಳವಾರ, ದಾಸ್ತಿಕೊಪ್ಪ.

“ಅವ್ವ ಇದ್ದರೇ ಸಾಕು    ಅವಳಿರದ ಸಿರಿವಂತಿಕೆ ಯಾರಿಗೆ ಬೇಕು   ಅವಳಿರದ ಏಕಾಂತ ಯಾರಿಗೆ ಬೇಕು   ಅವಳಿರದ ಅರಮನೆಯದಾರಿಗೆ ಬೇಕು   ಅವಳಿರದ ಸಂತಸ, ಹಬ್ಬ, ಹರಿದಿನಗಳದಾರಿಗೆ ಬೇಕು   ಅವ್ವ ಇದ್ದರದೇ ಕ್ರಿಸ್‍ಮಸ್, ಅದೇ ಯುಗಾದಿ ಅದೇ ರಮ್ಜಾನ್   ಅವ್ವ ಇರಬೇಕು ಅವಳ ಜೊತೆ ನಾನೂ ಇರಬೇಕು”     ಅವ್ವನನ್ನು ಮಮ್ಮಿಯೆಂದು ಕರೆಯಲು ನನಗೆ ತುಂಬಾ ಮುಜುಗುರ ಯಾಕೆಂದರೆ ಮಮ್ಮಿ ಎಂದರೆ ಕೇವಲ ಶಬ್ದವಾದೀತು. ಅವ್ವ ಎಂದರೆ ಆಹಾ ಅದೇನೋ ಸೊಗಸು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ