ಸ್ವಾತಂತ್ರ್ಯೋತ್ಸವದ ಪಾವನ ದಿನ: ಹೊಳಲ್ಕೆರೆ ಲಕ್ಷ್ಮಿವೆಂಕಟೇಶ್

ನಮ್ಮ ದೇಶದ  ಸ್ವಾತಂತ್ರ್ಯೋತ್ಸವದ ಪಾವನ ದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ ! ಈ  ಹಬ್ಬದ ಆಚರಣೆ ಕೇವಲ ಸಿಹಿ-ತಿಂಡಿ ತಿನ್ನಲು, ಇಲ್ಲವೇ ಮಜಾಮಾಡುತ್ತಾ ಕಾಲಹರಣ ಮಾಡುವುದಕ್ಕಲ್ಲ ಎನ್ನುವುದನ್ನು ನಾವು ಮೊದಲು ತಿಳಿಯಬೇಕು, ಮತ್ತು ಇತರರಿಗೆ ತಿಳಿಸಬೇಕು ಸಹಿತ ! ಬಾಲಗಂಗಾಧರ ತಿಳಕ್, ಗಾಂಧಿ, ನೆಹರು, ಪಟೇಲ್, ಬೋಸ್, ಮತ್ತು ಸಾವಿರಾರು ಜನ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ತಮ್ಮ ತನುಮನ ಧನಗಳನ್ನು ಒತ್ತೆಯಿಟ್ಟು  ನಮ್ಮ ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ದುಡಿದಿದ್ದಾರೆ. ಆ ಎಲ್ಲಾ ಮಹನೀಯರು ಮಹಿಳೆಯರಿಗೆ ನಾವು ಶಿರಬಾಗಿ ನಮನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಸುರು ಪಾಚಿ ಮತ್ತು ಕೊಳಕು ನೀರು: ಅಖಿಲೇಶ್ ಚಿಪ್ಪಳಿ

ಸಮುದ್ರದ ನೀರು ಆವಿಯಾಗಿ ಮೋಡಗಟ್ಟಿ, ಗಾಳಿಯ ಸಹಾಯದಿಂದ ಭೂಪ್ರದೇಶದ ಮೇಲೆ ಹಾರುತ್ತಾ, ಕಾಲ-ಕಾಲಕ್ಕೆ ಮಳೆ ಸುರಿಸುತ್ತಾ, ಜೀವಜಲವಾಗಿ ಸಕಲವನ್ನು ಪೊರೆಯುತ್ತಾ ಸಾಗುತ್ತದೆ. ಮತ್ತದೇ ನೀರು ಹಳ್ಳ-ಕೊಳ್ಳಗಳ, ನದಿ-ತೊರೆಗಳ ಮೂಲಕ ಹರಿಯುತ್ತಾ ತನ್ನೊಂದಿಗೆ ನೆಲದ ಸಾವಯವ ತ್ಯಾಜ್ಯಗಳನ್ನು ಸೇರಿಸಿಕೊಂಡು ಸಮುದ್ರದ ಜೀವಿಗಳಿಗೆ ಆಹಾರವನ್ನು ಒಯ್ಯುತ್ತದೆ. ಉಪ್ಪುನೀರಿನ ಜೀವಿಗಳಿಗೂ ನೆಲದ ಸಾವಯವ ಸುರಿಗಳೇ ಆಹಾರವಾಗುತ್ತವೆ. ಈ ಜಲಚಕ್ರ ಏರುಪೇರಾದರೆ, ಎಲ್ಲೋ ಯಾವುದೋ ಜೀವಿ ಸಂಕಷ್ಟಕ್ಕೆ ಸಿಲುಕುತ್ತದೆ. ನಮ್ಮಲ್ಲಂತೂ ಮೋಡಗಳನ್ನು ಸೆಳೆಯುವ ಕಾಡುಗಳೇ ಮಾಯವಾಗುತ್ತಿವೆ. ದಕ್ಷಿಣದ ಚಿರಾಪುಂಜಿಯೆಂಬ ಖ್ಯಾತಿ ಹೊಂದಿದ ಆಗುಂಬೆಯಲ್ಲೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೋಡೆಗಳ ದಾಟುತ್ತ…: ಉಮೇಶ್ ದೇಸಾಯಿ

               ಅಂದು ಬೆಳಿಗ್ಗೆಯೇ ದತ್ತಣ್ಣಿ ತನ್ನ ಗೆಳೆಯ ದಸ್ತಗೀರನಿಗೆ ಫೋನು ಮಾಡಲು ಎರಡು ಕಾರಣಗಳಿದ್ದವು. ಅಂದು ದಸ್ತಗೀರನ ಹುಟ್ಟಿದಹಬ್ಬ ಅಂತೆಯೇ ನಿನ್ನೆ ಎಲ್ಲ ಟಿವಿ ಚಾನಲಗಳಲ್ಲಿ ಬಂದ ದಸ್ತಗೀರನ ಸಂದರ್ಶನ. ಗೆಳೆಯನ ಉತ್ತರಕ್ಕೂ ಕಾಯದೇ ಭೆಟ್ಟಿಯಾಗಲು ಬರುವುದಾಗಿ ಹೇಳಿ ಫೋನು ಇಟ್ಟ. ಕೇವಲ ಅಸೀೀಪನ ತಂದೆ ಆಗಿದ್ದಕ್ಕಾಗಿ ಅವ ಕೇಳಬಾರದ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿತ್ತು,ಮಾತ್ರವಲ್ಲ ಮಗ ಹೀಗೆ ಮಾಡಿದ ಅದಕ್ಕೆ ನನಗೇಕೆ ಈ ಶಿಕ್ಷೆ ಎಂಬ ಅವನ ಅಳಲು ಮೂಕರೋದನವಾಗಿತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಮಕಿಂಕರರು: ಒಂದು ಭಯಾನಕ ಸತ್ಯಕಥೆ (ಭಾಗ 4): ಪ್ರಸಾದ್ ಕೆ.

ಇಲ್ಲಿಯವರೆಗೆ 1991 ರ ಜೂನ್ 29 ರಂದು ಅತ್ತ ಲೇಕ್ ಗಿಬ್ಸನ್ ಕೊಳದಲ್ಲಿ ಭಾರವಾದ ಕಾಂಕ್ರೀಟಿನ ಡಬ್ಬಗಳನ್ನು ಹೊರತಂದು ಸುಳಿವಿಗಾಗಿ ತಡಕಾಡುತ್ತಿದ್ದರೆ, ಇತ್ತ ನಯಾಗರಾದ ಆಸುಪಾಸಿನ ಪ್ರಖ್ಯಾತ ಚರ್ಚ್ ಒಂದರಲ್ಲಿ ಅದ್ದೂರಿ ವಿವಾಹದ ಸಮಾರಂಭವೊಂದು ನಡೆಯುತ್ತಿರುತ್ತದೆ. ಕಾರ್ಲಾ ಹೊಮೋಲ್ಕಾ ಮತ್ತು ಪೌಲ್ ಬರ್ನಾರ್ಡೊ ಕೊನೆಗೂ ತಮ್ಮ ಸ್ನೇಹಿತರು, ಹೆತ್ತವರು ಮತ್ತು ಬಂಧುಬಳಗದ ಉಪಸ್ಥಿತಿಯಲ್ಲಿ ಆ ದಿನ ಅದ್ದೂರಿಯಾಗಿ ಆಯೋಜಿಸಲ್ಪಟ್ಟ ಸಮಾರಂಭದಲ್ಲಿ ದಂಪತಿಗಳಾಗುತ್ತಾರೆ. ಬರೋಬ್ಬರಿ ಎರಡು ಸಾವಿರ ಡಾಲರುಗಳನ್ನು ತೆತ್ತು ಖರೀದಿಸಿದ ಮದುವಣಗಿತ್ತಿಯ ದಿರಿಸು, ಬಿಳಿಕುದುರೆಗಳನ್ನೊಳಗೊಂಡ ಸಾರೋಟು, ಮಿತಿಯಿಲ್ಲದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಕೃತಿ ಧರ್ಮ: ವೈ.ಬಿ.ಕಡಕೋಳ

  ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ ಸುಳಿದು ಬೀಸುವ ಗಾಳಿ ನಿಮ್ಮಯ ದಾನ ನಿಮ್ಮ ದಾನವನುಂಡು ಅನ್ಯರ ಪೊಗಳುವ ಕುಣ್ಣಿಗಳನೆನೆಂಬೆ ರಾಮನಾಥ ಐದು ನೂರು ಕೋಟಿ ವರ್ಷಗಳ ಹಿಂದೆ ಭೂಮಿಯ ಉದಯವಾಯಿತು ಎಂದು ವಿಜ್ಞಾನಿಗಳು ಹೇಳುತ್ತಾರೆ.30 ಲಕ್ಷ ವರ್ಷದ ಹಿಂದೆ ಮಾನವ ವಿಕಾಸ ಈ ಭೂಮಿಯ ಮೇಲಾಯಿತು ಎನ್ನುವರು. 300 ವರ್ಷಗಳಿಂದೀಚೆಗೆ ಅಭಿವೃದ್ದಿಯ ಹೆಸರಿನಲ್ಲಿ ಪರಿಸರ ನಾಶ ನಮ್ಮ ಸುತ್ತ ಮುತ್ತ ನಡೆಯುತ್ತಿದೆ. ಜೂನ್ 5 ವಿಶ್ವ ಪರಿಸರ ದಿನ.ನಮ್ಮ ಸುತ್ತ ಮುತ್ತಲಿನ ಪರಿಸರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೀವನದ ಸಂತೆಯಲಿ ಮಂದವಾಗಿದೆ ಬೀದಿದೀಪ: ಸಿಂಧು ಭಾರ್ಗವ್.

ಪ್ರತಿ ಸಂಜೆಯಾಯಿತೆಂದರೆ ಹಬ್ಬದ ವಾತಾವರಣವಿರುವ ಮಲ್ಲೇಶ್ವರಂ ಎಂಟನೇ ತಿರುವಿನಲ್ಲಿ ಸುತ್ತಾಡುವುದೇ ಕಣ್ಣಿಗೆ ಹಬ್ಬ… ಹದಿನೈದನೇ ತಿರುವಿನವರೆಗೂ ಸಣ್ಣಸಣ್ಣ  ವ್ಯಾಪಾರದಂಗಡಿಗಳು ರಸ್ತೆ ಬದಿಯಲ್ಲಿ ತುಂಬಾ ಕಾಣಸಿಗುತ್ತವೆ. ಹೂವಿನ ರಾಶಿ, ಹಣ್ಣು-ಹಂಪಲು, ಆಟಿಕೆಗಳು, ಬಟ್ಟೆ ವ್ಯಾಪಾರಿಗಳು, ಚಪ್ಪಲ್ ಅಂಗಡಿ, ಬ್ಯಾಂಗಲ್ಸ್ ,ಬ್ಯಾಗ್ ಗಳು, ತಿನ್ನಲು ಸ್ವೀಟ್ ಕಾರ್ನ್,ಕತ್ತರಿಸಿ ಅಲಂಕರಿಸಿಟ್ಟ ಮಾವು , ಚರುಮುರಿ, ಸಮೋಸ, ಕಚೋರಿ, ಕುಡಿಯಲು ಕಾಫಿ, ಟೀ, ಜ್ಯೂಸ್ ಏನಿದೆ ?ಏನಿಲ್ಲ ? ಕೇಳುವುದೇ ಬೇಡ. ಅಪರೂಪಕ್ಕಾದರೂ ಬೇಟಿ ನೀಡುವುದೆಂದರೆ ನಮಗೂ ಖುಷಿ. ತುಂಬಿದ ಜೇಬಿನೊಂದಿಗೆ ಹೋದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಲೇಜ್ ಎಂಬ ಬಣ್ಣಬಣ್ಣದ ದೃಶ್ಯಕಾವ್ಯ: ಗಾಯತ್ರಿ ಬಡಿಗೇರ

ಮುಂಗಾರು ಮಳೆ ಶುರುವಾಗುವ ಅಮೃತ ಕ್ಷಣ. ಎಂತವರನ್ನೂ ಕನಸಿನ ಲೋಕಕ್ಕೆ ಕೊಂಡ್ಯೊಯುವ ಒಂದು ಅದ್ಭುತ ಘಳಿಗೆ. ಪರಸ್ಪರ ಅಪ್ಪಿಕೊಳ್ಳುವ ತಂಗಾಳಿಯ ತಂಪಿನೊಂದಿಗೆ, ಚಿಗುರುವ  ಕನಸಿನೊಂದಿಗೆ ವಿದ್ಯಾಲಯಕ್ಕೆ ಪ್ರವೇಶ ಪಡೆಯುವ ಇತರರು ಸುಮಾರು ವೇಷ-ಭೂಷಣದೊಂದಿಗೆ ಅಂಗಳವನ್ನು ಅಲಂಕರಿಸುವರು. ಮೊದ-ಮೊದಲು ಮೌನದಲ್ಲಿ, ಕಣ್ಣಿನ ಸಲಿಗೆಯಲ್ಲಿ ಪರಿಚಯವಾಗವ ಅನಾಮಿಕರು.  ರಿಪ್ರಸೇಂಟ್ ಮಾಡಲು ಹೊರಟ ಮಾಕ್ರ್ಸಕಾರ್ಡ್ ಹೊತ್ತ ಪ್ಲ್ಯಾಸ್ಟಿಕ ಕವರ್‍ಗಳ ಕಾರಬಾರು, ಮಾರುಕಟ್ಟೆಯಲ್ಲಿ ಸೇಲ್ ಆಗದೆ ಉಳಿದ ಮಾರ್ಡನ್ ಟಾಪ್‍ಗಳು, ರಂಬೆ, ಊರ್ವಶಿ,  ಮೇನಕೆಯರ ನಾಟ್ಯದ ಜಲಕನ್ನು ಉಂಟು ಮಾಡುವ ವರ್ತನೆಗಳು, ದೇಹದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದತ್ತಿನಿಧಿ ಸದ್ಭಳಕೆಯಾಗಲಿ ಲೂಸಿ ಸಾಲ್ಡಾನ: ಲಕ್ಕಮ್ಮನವರ್

ಧಾರವಾಡ ಅಗಸ್ಟ:19: ಧಾರವಾಡದ ನಿವೃತ್ತ ಶಿಕ್ಷಕಿ ಲೂಸಿ.ಸಾಲ್ಡಾನ ಅವರು ತಮ್ಮ 55ನೇ ದತ್ತಿನಿಧಿಯನ್ನು ಜೀರಿಗವಾಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀಡಿದರು. ದತ್ತಿ ನಿಧಿಯನ್ನು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯವರು ಮತ್ತು ಶಾಲಾ ಮುಖ್ಯ ಶಿಕ್ಷಕರುಗಳಿಗೆ ಹಸ್ತಾಂತರಿಸಿ ಮಾತನಾಡಿದ ಅವರು ಶ್ರೀಮಂತ ಕುಟುಂಬದಲ್ಲಿ ಜನಿಸಿದ ನಾನು ಅನಿರಿಕ್ಷಿತವಾಗಿ ತಂದೆ ತಾಯಿಯನ್ನು ಕಳೆದುಕೊಂಡು ಬಡತನವನ್ನು ಕಣ್ಣಾರೆ ಕಂಡು, ಎಲ್ಲೋ ಎದ್ದು ಬಿದ್ದು ಅಕ್ಷರ ಕಲಿತು ಶಿಕ್ಷಕಿಯಾಗಿ ಇಂದ ನಾನು ನಿವೃತ್ತನಾಗಿದ್ದೇನೆ. ಹಳ್ಳಿಗಾಡಿನಲ್ಲಿ ಮಕ್ಕಳನ್ನು ಪಾಲಕರು ಬಡತನದ ಕಾರಣಕ್ಕಾಗಿ ಶಾಲೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

"ಮೇಘ ಶಾಮಲೆ" ಹೊಳಪು ಕಣ್ಣು ನೀಳ ಮೂಗು  ಕೆಂದುಟೀಯ ಸುಂದರಿ ನೀಲ ಮೇಘ ಶಾಮಲೆದೆಗೆ ಕನ್ನ ಹೊಡೆದ ಕಿನ್ನರಿ ನುಣುಪು ಕೇಶ ನೀಳ ಹುಬ್ಬು ನಾಗಜಡೆಯ ಸುಂದರಿ ನೆನೆವ ಮನಕೆ ಕಂಪನೀವ ಮುದ್ದು ಮನದ ಕಿನ್ನರಿ ಜಗದ ಸೊಬಗ ಸೆರೆಯೊಳಿಟ್ಟ ಎದೆಯ ಭಾರ ನಿನ್ನದು ಕೊಂಚ ಕೆಳಗೆ ಬಳುಕುತಿರುವ ನಡುವು ತೀರಾ ಸಣ್ಣದು ನಿನ್ನ ಅಂದ ಹೊಗಳಲಿಕ್ಕೆ ಇಷ್ಟು ಮಾತ್ರ ಸಾಲದು ಪೂರ್ಣ ಬರೆದು ಹೇಳಲಿಕ್ಕೆ ನನ್ನಿಂದಂತೂ ಆಗದು -ಉಶಿರು       ಎರಡು ಸಾಮಾನ್ಯರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಮಕಿಂಕರರು: ಒಂದು ಭಯಾನಕ ಸತ್ಯಕಥೆ (ಭಾಗ 3): ಪ್ರಸಾದ್ ಕೆ.

ಇಲ್ಲಿಯವರೆಗೆ 1990 ರ ಡಿಸೆಂಬರ್ ನಲ್ಲಿ ಕೊಲೆಯಾದ ಟ್ಯಾಮಿಯ ಘಟನೆಯಿಂದ ಸ್ವಲ್ಪ ಹಿಂದಕ್ಕೆ ಹೋಗೋಣ. 1989 ಕಳೆದು 1990 ಆಗಲೇ ಬಂದಾಗಿದ್ದರೂ, ಅತ್ತ ಸ್ಕಾರ್-ಬೋರೋ ನಗರದ ವಿಶೇಷ ತನಿಖಾ ದಳದಿಂದ ಸರಣಿ ಅತ್ಯಾಚಾರದ ಬಗ್ಗೆ ಮಹತ್ವದ ಸುಳಿವೇನೂ ಸಿಕ್ಕಿರದಿದ್ದರೂ, ಸ್ಕಾರ್-ಬೋರೋದ ನಿವಾಸಿಗಳು ಯೋಚಿಸುತ್ತಿರುವಂತೆ ತನಿಖಾ ದಳವೇನೂ ನಿದ್ದೆ ಮಾಡುತ್ತಿರಲಿಲ್ಲ. ಏಕೆಂದರೆ ನಡೆದ ಪ್ರಕರಣಗಳನ್ನು ಆಧರಿಸಿ ಈ ಸ್ಯಾಡಿಸ್ಟ್ ರೇಪಿಸ್ಟ್ ನ ಒಂದು ಪ್ರೊಫೈಲ್ ಅನ್ನು ಇಲಾಖೆಯು ಪಕ್ಕದಲ್ಲೇ ಇರುವ ಅಮೇರಿಕಾದ ಎಫ್.ಬಿ.ಐ ಯ ಸಹಯೋಗದಿಂದ ಆಗಲೇ ತಯಾರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

(ಅ)ನ್ಯಾಯದಾನಕ್ಕೂ ಹದಿನೆಂಟು ವರ್ಷವೇ???: ಅಖಿಲೇಶ್ ಚಿಪ್ಪಳಿ

ಈ ದಿನ ಬೆಳಗ್ಗೆ (26/07/2016) ದಿನಪತ್ರಿಕೆಯ ಮುಖಪುಟದಲ್ಲೊಂದು ಸುದ್ಧಿಯಿತ್ತು. ಬಾಲಿವುಡ್ ನಟ ಸಲ್ಮಾನ್ ಖಾನ್ ನಿರಾಳ. ರಾಜಸ್ಥಾನದಲ್ಲಿ 1998ರಲ್ಲಿ ಕೊಂದ ಕೃಷ್ಣಮೃಗಗಳ ಮೊಕದ್ದಮೆಯಿಂದ ಬಿಡುಗಡೆ. ಪುಟ ತಿರುವಿದಾಗೆ ಇನ್ನೊಂದು ಸುದ್ದಿಯೂ ಇತ್ತು. ಮೂಡಿಗೆರೆಯಲ್ಲಿ ಅರಣ್ಯ ಪ್ರದೇಶವನ್ನು ಒತ್ತುವರಿ  ಮಾಡಿದವರಿಂದಲೇ 430 ಮರಗಳ ಮಾರಣ ಹೋಮ. ಇನ್ನೊಂದು ಪುಟ ಮಗುಚಿದರೆ ಬೀಜಿಂಗ್‍ನಲ್ಲಿ ಕಾರಿನಿಂದಿಳಿದ ಮಹಿಳೆಯನ್ನು ಹೊತ್ತೊಯ್ದ ಸಿಂಹ. ಇವು ಬೇರೆ ಬೇರೆ ಸುದ್ದಿಯೆಂದು ಮೇಲ್ನೋಟಕ್ಕೆ ಅನಿಸಿದರು, ಇವು ಒಂದಕ್ಕೊಂದು ಬೆಸೆದು ಕೊಂಡಿರುವುದನ್ನು ಕಾಣಬಹುದು. ಇರಲಿ ಇದು ಹೇಗೆ ಎಂಬುದನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೌನದೊಳಗೊಂದು ಜೀವಂತ ಪ್ರೀತಿ: ಸಿದ್ದುಯಾದವ್ ಚಿರಿಬಿ

ಅವಳು ಮತ್ತು ನಾನು ಕವಿತೆಗಳಲಿ ಬಳಸುವ ಪದ ಒಂದಿದೆ, ಯಾವ ಕವಿತೆಯೇ ಹಾಗಲಿ ಆ ಪದವಿಲ್ಲದೆ ಆರಂಭವಾಗುವುದಿಲ್ಲ, ಆ ಪದವಿಲ್ಲದೆ ಅಂತ್ಯಯಾಗುವುದಿಲ್ಲ. ನನಗರಿವಿಲ್ಲದೆ ಉದ್ಭವಿಸಿಬಿಡುವ ಆ ಒಂದೆ ಮಾತು ನಮ್ಮಿಬ್ಬರ ಮಧ್ಯೆ ಅದೇನೋ ಸಂಬಂಧಗಳನ್ನು ಸೃಷ್ಟಿಸಿದೆ. ನಮ್ಮಿಬ್ಬರಲ್ಲಿ ಮುಗಿಯಲಾಗದ ಸಂಭಾಷಣೆಯನ್ನು ಸೃಷ್ಟಿಮಾಡುತ್ತದೆ. ಒಲುಮೆ, ಪ್ರೀತಿ, ಮನಸು, ಕನಸು, ಭಾವನೆ, ಬದುಕು, ಉಸಿರು, ಇಂತಹ ಪದಗಳಿಗಿಂದ ಮೋದಲು ಮನಸಿನಲ್ಲಿ ಬಂದು ನಿಲ್ಲುವ ಆ ಒಂದು ಪದ ನಿಶ್ಶಬ್ದವಾದ ಹೃದಯ ಬಡಿತವನ್ನು ಶರವೇಗದಲ್ಲಿ ಭಾವನೆಗಳನ್ನು ಜಾಗೃತವಾಗಿಸಿಬಿಡುತ್ತದೆ. ನಮ್ಮಿಬ್ಬರ ಮಧ್ಯೆ ನೇರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರಾಜ್ಯಮಟ್ಟದ ಪ್ರಪ್ರಥಮ ಹಾಸ್ಯಸಾಹಿತ್ಯ ಸಮ್ಮೇಳನ: ಗುಂಡೇನಟ್ಟಿ ಮಧುಕರ

ಹಾಸ್ಯಸಾಹಿತ್ಯ : ಸಮ್ಮೇಳನಕ್ಕೆ ಪ್ರಥಮ ಪಾದಾರ್ಪಣೆ ನಗೆಮುಗುಳು ಹಾಸ್ಯ ಮಾಸಪತ್ರಿಕೆಯ 15 ನೇ ವಾರ್ಷಿಕೋತ್ಸವ ನಿಮಿತ್ತ ರಾಜ್ಯಮಟ್ಟದ ಪ್ರಪ್ರಥಮ ಹಾಸ್ಯಸಾಹಿತ್ಯ ಸಮ್ಮೇಳನ ಹಾಸ್ಯ ಸಾಹಿತ್ಯ ಕುರಿತು ಉಪನ್ಯಾಸ – ಹಾಸ್ಯ ದಿಗ್ಗಜರ ಮೆಲಕು –  ಹಾಸ್ಯ ಕವಿಗೋಷ್ಠಿ – ಹಾಸ್ಯಭಾಷಣಗಳು –ನಗೆನಾಟಕಗಳು      ತುಮಕೂರ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸೇರಿದ ಎಲ್ಲರ ಮುಖದಲ್ಲಿ ನಗು, ಸಂತೋಷಗಳು ಎದ್ದು ಕಾಣುತ್ತಿದ್ದವು. ಎಲ್ಲ ಹಾಸ್ಯಪ್ರಿಯರು. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹಾಸ್ಯಾಸಕ್ತರು ಆಗಮಿಸಿದ್ದರು. ಒಬ್ಬರು ಒಂದು ಹಾಸ್ಯಚಟಾಕಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಳ್ಳಿತೆರೆಯಲ್ಲಿ `ಮೇಲುಕೋಟೆ’ಯ ದೃಶ್ಯಕಾವ್ಯ!: ದಂಡಿನಶಿವರ ಮಂಜುನಾಥ್

ಕನ್ನಡವೂ ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳನ್ನು ನೋಡುತ್ತಿದ್ದಾಗ ಖಂಡಿತಾ ನೀವು ಅದರಲ್ಲಿ ಕಲ್ಯಾಣಿಯೊಂದರ ಹಿನ್ನೆಲೆ ಹೊಂದಿರುವ ಬೆಟ್ಟದ ತುದಿಯಲ್ಲಿ ದೇವಾಲಯದ ಗೋಪುರದ ದೃಶ್ಯವನ್ನು ಆಗಾಗ ನೋಡುತ್ತಿರುತ್ತೀರಿ.  ಹೆಚ್ಚಾಗಿ ಕಾಡುಗಳ ದೃಶ್ಯಗಳಲ್ಲಿ ಈ ಸ್ಥಳದ ಪರಿಚಯ ನಿಮಗಾಗಿರುತ್ತದೆ. ಇದು ನಮ್ಮ ನಾಡಿನ ಸ್ಥಳವೇ ಆಗಿದೆ ಎಂದು ತಿಳಿದಾಗ ನಿಜಕ್ಕೂ ನಿಮಗೆ ಆಶ್ಚರ್ಯವಾಗುವುದರಲ್ಲಿ ಅನುಮಾನವೇ ಇಲ್ಲ. ಅದುವೇ ಮೇಲುಕೋಟೆಯ ಮೋಹಕ ದೃಶ್ಯಕಾವ್ಯ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಈ ಸ್ಥಳ ಹಲವು ಭಾಷೆಗಳ ಚಿತ್ರರಂಗದವರನ್ನು ತನ್ನತ್ತ ಆಕರ್ಷಿಸುವುದರಲ್ಲಿ ಯಶಸ್ವಿಯಾಗಿದೆ. ಉತ್ತಮ ಶೂಟಿಂಗ್ ಸ್ಪಾಟ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿ ಮಾಡೋ ಮುಂಚೆ: ಮಲ್ಲಿಕಾರ್ಜುನ ದಾಸನಕೊಪ್ಪ

ಕಾಲೇಜು ಆರಂಭವಾಗಿ ಆರು ತಿಂಗಳುಗಳೇ ಕಳೆದಿವೆ. ಹೇಳದೆ ಪ್ರೀತಿಸುವ  ಹುಡುಗ ಹುಡುಗಿಯರಿಗೆ ತಮ್ಮ ಪ್ರೀತಿಯನ್ನು ನಿವೇದನೆ ಮಾಡಿಕೊಳ್ಳಲು ಒಂದು ವೇದಿಕೆ ಸಿದ್ಧವಾಗಿದೆ. ಹುಡುಗ ಹುಡುಗಿಯರೆಲ್ಲಾ ಸೂಕ್ತ ಪ್ರಿಯತಮ/ಮೆಯ ಹುಡುಕಾಟದಲ್ಲಿದ್ದಾರೆ. ಆ ಪ್ರಯತ್ನದಲ್ಲಿ ಕೆಲವರು  ಯಶಸ್ವಿಯು ಆಗಿದ್ದಾರೆ. ಇನ್ನು ಕೆಲವರು ತಮ್ಮ ಪ್ರೀತಿಯನ್ನು ಹೇಗೆ ಅವಳಿ/ನಿಗೆ ಅರಿಕೆ ಮಾಡಿಕೊಳ್ಳಬೇಕೆಂಬ  ತೋಳಲಾಟದಲ್ಲಿದ್ದಾರೆ. ಈ ಸಂದರ್ಭದಲ್ಲಿಯೇ “ವ್ಯಾಲೇಂಟೆನ್ಶ ಡೇ” ಸಮೀಪಸಿದೆ. ಹುಡುಗ ಹುಡುಗಿಯರ ಎದೆಯಲ್ಲಿ ಲಬ್-ಡಬ್ ಶುರುವಾಗಿದೆ.  ನಾನು ಪ್ರೀತಿಸಿದ ಹುಡುಗ/ಗಿ ನನ್ನಲ್ಲಿ ಬಂದು ಗುಲಾಬಿ ಹಿಡಿದು ಪ್ರೀತಿ ಯಾಚಿಸುತ್ತಾನಾ/ಳಾ??  ನನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎಸ್ ಎಫ್ ಹುಸೇನಿಯವರ ಗಣೇಶ ಕಲಾಕೃತಿಗಳ ಪ್ರದರ್ಶನ

ತ್ರಿವರ್ಣ ಗಣಪ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರೀಯ ಧ್ವಜದ ಬಣ್ಣದಿಂದ ಕಂಗೊಳಿಸುತ್ತಿರುವ ಎಸ್ ಎಫ್ ಹುಸೇನಿಯವರ ಗಣೇಶ ಕಲಾಕೃತಿಗಳ ಪ್ರದರ್ಶನ ಮೈಸೂರಿನಲ್ಲಿ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ನಂತರ ಸಾಲುಸಾಲು ಹಬ್ಬಗಳು ಆರಂಭವಾಗುತ್ತವೆ. ಇನ್ನೇನು ಕೆಲವೇ ದಿನಗಳಲ್ಲಿ ಗೌರಿ – ಗಣೇಶ ಹಬ್ಬವೂ ಬರಲಿದೆ. ಸ್ವಾತಂತ್ರ್ಯವೆನ್ನುವುದು ನಮ್ಮ ಸುತ್ತಲಿನ ಪರಿಸರ ರಕ್ಷಣೆಯ ಹೊಣೆಗಾರಿಕೆಯೊಂದಿಗೆ ಬರುತ್ತದೆ ಎನ್ನುತ್ತಾರೆ ಕಲಾವಿದ ಹುಸೇನಿ. ‘ಮುಂಬರಲಿರುವ ಗೌರಿ – ಗಣೇಶ ಹಬ್ಬದಲ್ಲಿ ರಾಸಾಯನಿಕ ಹಾಗೂ ಹಾನಿಕಾರಕ ಪದಾರ್ಥಗಳಿಂದ ಮುಕ್ತವಾದ ಗಣೇಶ ನಮ್ಮ ಮನೆಗಳನ್ನು ಪ್ರವೇಶಿಸಲಿ’ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಶ್ವಾಮಿತ್ರ!!: ಎಸ್.ಜಿ.ಶಿವಶಂಕರ್

ಅರಳೀಕಟ್ಟೆಯಲ್ಲಿ ಕೂತಿದ್ದ ಶತಾಯುಶಿ ಹನುಮಜ್ಜ ತನ್ನಷ್ಟೇ ವಯಸ್ಸಾದಂತೆ ಕಾಣುತ್ತಿದ್ದ ಕನ್ನಡಕವನ್ನು ಸರಿಪಡಿಸಿಕೊಂಡು ತನ್ನ ಮುಂದೆ ಧೂಳೆಬ್ಬಿಸುತ್ತಾ ಹೋದ ಕಾರು ನೋಡಿದ. ಇದು ಎಷ್ಟನೆಯ ಕಾರು ಎಂದು ಅಚ್ಚರಿಪಟ್ಟ. ಸುಮಾರು ಅರ್ಧ ಗಂಟೆಯಿಂದ ಏನಿಲ್ಲವೆಂದರೂ ಇಪ್ಪತ್ತಕ್ಕೂ ಹೆಚ್ಚು ಕಾರುಗಳು ಅವನು ಕೂತಿದ್ದ ಆರಳೀಕಟ್ಟೆಗೆ ಧೂಳಿನ ಅಭಿಷೇಕ ಮಾಡಿದ್ದವು.  "ಇವತ್ತೇನು ನಡೀತೈತೆ ಆ ಫಾರಮ್ಮಿನಾಗೆ..?" ಹನುಮಜ್ಜ ಗೊಗ್ಗರು ದನಿಯಲ್ಲಿ ತನಗೆ ತಾನೇ ಎಂಬಂತೆ ಹೇಳಿಕೊಂಡ. "ಏನು ನಡದ್ರೆ ನಮಗೇನು..? ನಾವು ಹೊಲಗೈಯಾದು ತಪ್ಪತೈತ..?" ಹನುಮಜ್ಜನಿಗಿಂತ ಹತ್ತು ವರ್ಷ ಕಿರಿಯ ಭರಮಜ್ಜ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ನಕ್ಷತ್ರಗಳೆಂದರಿಷ್ಟ  ಹೊಸ್ತಿಲು ದಾಟಿ ಬಂದಂತೆ ಕಂಡದ್ದು ಅರ್ಧಚಂದ್ರ ಚೆಲ್ಲಿದ ಮುದ್ದು ಬೆಳದಿಂಗಳು. ಹೊನಲಿನಲ್ಲಿ ಗೋಚರವಾಗಿ  ಹಗಲಲ್ಲಿ ಕಣ್ಮರೆಯಾಗುವ ದಿಗಂತದ ಪರದೆಯಲ್ಲಿ ಬೆಚ್ಚಿ ಬೀಳಿಸುವ  ಶಶಿಯ ಇಂದ್ರಜಾಲ. ನಭೋಮಂಡಲವೇ ರಾತ್ರೋರಾತ್ರಿ ಬೆತ್ತಲಾದಾಗ ನಕ್ಷತ್ರಗಳು ಜಿನುಗುತ್ತವೆ. ಬರಿಗಣ್ಣಿಗೆ ನಂಬಲಾರದಷ್ಟು ಹೆಸರಿಲ್ಲದ ತಾರಾ ಪುಂಜಗಳು ಮೋಡಿಗಾರನ ಕೈಯ ಅಂಕುಶದ ಮಾಯಾಜಾಲದೊಳಗೆ. ಯಾರೋ ದೇವಕನ್ನೆ ರಾತ್ರಿ ಆಕಾಶದಲ್ಲಿ ಜೋಡಿಸದೇ ಹಾಗೇ ಬಿಟ್ಟ ರಂಗೋಲಿ ಚುಕ್ಕಿಯಂತೆ ನೀವು. ನಗರದಾಚೆ ಗಲ್ಲಿಯಲ್ಲಿ ಮಲಗದೇ ಹಠ ಹಿಡಿದು ಅಳುತ್ತಿರುವ ಕಂದಮ್ಮನ ಕಣ್ಣಿಗೆ ನೀವೆಲ್ಲಾ ಹೊಳೆಯುವ ಆಟಿಕೆಗಳು. ಕಂಡಾಗಲೆಲ್ಲಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಮಕಿಂಕರರು: ಒಂದು ಭಯಾನಕ ಸತ್ಯಕಥೆ (ಭಾಗ 2): ಪ್ರಸಾದ್ ಕೆ.

ಇಲ್ಲಿಯವರೆಗೆ ಇತ್ತ ಕತ್ತಲಿನಲ್ಲಿ ಸುಳಿವಿಗಾಗಿ ತಡಕಾಡುತ್ತಿದ್ದ ಮೊಟ್ರೋಪಾಲಿಟನ್ ಟೊರಾಂಟೋ ಪೋಲೀಸರಿಗೆ ಮಹತ್ವದ್ದೇನೂ ಸಿಕ್ಕಿರಲಿಲ್ಲ. ಬದಲಿಗೆ 1987 ರ ಡಿಸೆಂಬರಿನಲ್ಲಿ ಹದಿನೈದರ ಪ್ರಾಯದ ಇನ್ನೊಬ್ಬ ಬಾಲಕಿ ಆಗಂತುಕನೊಬ್ಬನಿಂದ ಎಂದಿನ ರೀತಿಯಲ್ಲೇ ಅತ್ಯಾಚಾರಕ್ಕೊಳಗಾಗಿದ್ದಳು. ಸ್ಕಾರ್-ಬೋರೋ ನಗರದ ನಿವಾಸಿಗಳು ಸ್ವಾಭಾವಿಕವಾಗಿಯೇ ಕಂಗಾಲಾಗಿದ್ದರು. ಪೋಲೀಸರೂ ಕೈಚೆಲ್ಲಿ ಕುಳಿತಿರುವಾಗ ಯಾರ ಬಳಿ ಸಹಾಯಕ್ಕೆ ಧಾವಿಸುವುದೆಂಬುದೇ ಅವರಿಗೆ ತಿಳಿಯಲಿಲ್ಲ. ಪರಿಸ್ಥಿತಿ ಈಗಾಗಲೇ ಕೈಮೀರಿ ಹೋಗಿದ್ದು ಸ್ಪಷ್ಟವಾಗಿತ್ತು. ಕತ್ತಲಾದ ಬಳಿಕ ಹೆಣ್ಣುಮಕ್ಕಳು ಒಂಟಿಯಾಗಿ ಅಲೆದಾಡುವುದನ್ನು, ಓಡಾಡುವುದನ್ನು ಆದಷ್ಟು ಕಮ್ಮಿ ಮಾಡಬೇಕೆಂದೂ, ಪ್ರಕರಣದ ಬಗ್ಗೆ ಯಾವ ಸುಳಿವು ಸಿಕ್ಕರೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಿಸಿಲನಾಡಿನಲ್ಲೊಂದು ಕಾವ್ಯಮನೆಯ ಉದ್ಘಾಟನೆ: ಕೆ.ಎಂ.ವಿಶ್ವನಾಥ ಮರತೂರ.

ಕರ್ನಾಟಕ ರಾಜ್ಯ ಹಲವು ವಿಶೇಷಗಳನ್ನು ಹುಟ್ಟುಹಾಕಿದೆ. ಇಡಿ ದೇಶ ಹಾಗೂ ಪ್ರಪಂಚದಲ್ಲಿ ಹಲವು ಪ್ರಥಮಗಳನ್ನು ಸೃಷ್ಠಿಸಿದ ಕೀರ್ತಿ ಕರ್ನಾಟಕಕ್ಕೆ ಸಲ್ಲುತ್ತದೆ. ಸಾಹಿತ್ಯ ಲೋಕದಲ್ಲಿ ಎಂಟು ಜ್ಞಾನಪೀಠ ಪಡೆದು, ಕನ್ನಡವನ್ನು ಶಾಸ್ತ್ರೀಯ ಭಾಷೆಯಾಗಿ ಮಾಡಿರುವ ಸಾಧನೆ ನಮ್ಮದು. ಇದೆಲ್ಲವೂ ಕನ್ನಡದ ಹೆಸರಾಂತ ಕವಿಗಳ ಸಾಹಿತ್ಯ ಮತ್ತು ಹೋರಾಟದಿಂದ ಸಾಧ್ಯವಾಗಿದೆ. ಕನ್ನಡ ಇಂದು ಬಹು ಶ್ರೀಮಂತವಾಗಿ ಬೆಳೆಯಲು ಹಲವರ ಕೊಡುಗೆ ಅಪಾರವಾಗಿದೆ.      ಪ್ರಸ್ತುತ ದಿನಗಳಲ್ಲಿ ಕಾವ್ಯ, ಕಥೆ, ಕಾದಂಬರಿ ಅರ್ಥ ಕಳೆದುಕೊಂಡು “ಕವಿತೆ ಯಾರು ಕೊಳ್ಳತ್ತಾರೆ” ಎಂಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಲಯಾಳ ಸಿನೆಮಾ ರಂಗವೂ ಮಲಬಾರಿನ ಸಂಸ್ಕೃತಿಯೂ: ಕೃಷ್ಣವೇಣಿ ಕಿದೂರ್

            ಬಹಳಷ್ಟು  ಜನರಿಗೆ  ಮಲಯಾಳ   ಚಿತ್ರಗಳೆಂದರೆ  ಅದು ನೀಲಿ ಚಿತ್ರಗಳಿಗೆ  ಹತ್ತಿರದ್ದು ಎಂಬ  ತಪ್ಪು ಕಲ್ಪನೆಯಿದೆ.    ಜಾಹೀರಾತುಗಳು ತೋರಿಸುವ   ಚಿತ್ರಗಳು   ಹಾಗಿರುತ್ತದೆ ಎನ್ನಬಹುದು.   ಆದರೆ ಒಬ್ಬ ಕೇರಳೀಯಳಾಗಿ  ಮಲಯಾಳಂ  ಚಲನಚಿತ್ರಗಳೆಂದರೆ  ಅಲ್ಲಿ ಮಲಬಾರಿನ ( ಕೇರಳ) ಸಾಂಸ್ಕೃತಿಕ  ಹಿನ್ನಲೆಗೆ  ಹೆಚ್ಚಿನ ಒತ್ತು  ಸಿಗುತ್ತದೆ  ಎಂದು  ಕಂಡ  ಕಾರಣ ಆ ಮಿಥ್ಯೆಯನ್ನು  ಅಲ್ಲಗಳೆಯಬೇಕಾಗಿದೆ. ಅರಬ್ಬಿ ಸಮುದ್ರದ  ಪಕ್ಕದ ಪುಟ್ಟ ರಾಜ್ಯ  ಕೇರಳ.  ಇದಕ್ಕೆ ಕೇರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಡು(ವ) ಕಟ್ಟುವ ಕತೆ!! ಭಾಗ-8: ಅಖಿಲೇಶ್ ಚಿಪ್ಪಳಿ

ತಾನೊಂದು ಬಗೆದರೆ ದೈವವೊಂದು ಬಗೆಯಿತು ಎನ್ನುವ ಮಾತೊಂದು ಪ್ರಚಲಿತದಲ್ಲಿದೆ. ವರ್ಷದ ಎಲ್ಲಾ ಋತುಮಾನಗಳು ನಿಸರ್ಗದತ್ತವಾಗಿ ಸಸೂತ್ರವಾಗಿ ನಡೆದರೆ ಭೂಮಿಯ ಮೇಲೆ ವಾಸಿಸುವ ಜೀವಿಗಳು ಸುರಕ್ಷಿತವಾಗಿ ಇರಬಲ್ಲವು. ಭೂತಾಯಿಯ ಬುದ್ಧಿವಂತ ಮಕ್ಕಳಾದ ನಾವು ಮಾಡಿದ್ದೇ ಸರಿ ಎಂಬ ಅಹಂಕಾರವನ್ನು ಹೊಂದಿದ್ದೇವೆ. ಇಡೀ ಭೂಮಿ ಇರುವುದೇ ನಮ್ಮ ಲಾಭಕ್ಕಾಗಿ, ನಮ್ಮ ಸುಖಕ್ಕಾಗಿ ಎಂದು ಭಾವಿಸಿಕೊಂಡಿದ್ದೇವೆ. ಪ್ರಕೃತಿಯ ನೈಸರ್ಗಿಕ ಪ್ರಯೋಗಾಲವನ್ನು ಛಿಧ್ರ ಮಾಡಿ, ಇಡೀ ನಿಸರ್ಗವನ್ನು ನಮ್ಮ ಸುಖದ ಹುಡುಕುವಿಕೆಯ ಪ್ರಯೋಗಾಲಯವನ್ನಾಗಿ ಪರಿವರ್ತಿಸಿದ್ದೇವೆ. ಹವಾಗುಣ ಬದಲಾವಣೆಯಿಂದಾಗಿ ಇಡೀ ಪ್ರಪಂಚದ ಎಲ್ಲಾ ಪ್ರದೇಶಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಿಲ್ಪ ಕಲೆಯ ತವರು: ಕೈದಾಳ: ದಂಡಿನಶಿವರ ಮಂಜುನಾಥ್

ಮುಂಬೈನಿಂದ ಬಂದಿದ್ದ ಗೆಳೆಯ ಸಿನಿಮಾ ಛಾಯಾಗ್ರಾಹಕ ಶಿವಕುಮಾರ್ ಮತ್ತು ನಾನು ತುಮಕೂರಿನಿಂದ ಬೆಳ್ಳಂಬೆಳಿಗ್ಗೆ ಚಹಾ ಕುಡಿದು ಶಿಲ್ಪಕಲೆಯ ತವರೂರಾದ ಕೈದಾಳದತ್ತ ಪ್ರಯಾಣ ಬೆಳೆಸಿದವು. ಸೂರ್ಯ ಆಗ ತಾನೇ ಉದಯಿಸಿದ್ದರೂ ಸಹ ಚುಮುಚುಮು ಚಳಿಯ ವಾತಾವರಣ ನಮ್ಮ ಮನಸ್ಸಿಗೆ ಮುದ ನೀಡುತ್ತಿತ್ತು. ಕನ್ನಡನಾಡಿನ ಶಿಲ್ಪಕಲೆಗಳಿಗೆ ಪ್ರಸಿದ್ಧವಾದ ದೇವಾಲಯಗಳನ್ನು ಕೆತ್ತಿದ ಅಮರಶಿಲ್ಪಿ ಎಂದು ಹೆಸರಾದ ಜಕಣಾಚಾರಿಯ ಜನ್ಮಸ್ಥಳವನ್ನು ನೋಡುವ ಕುತೂಹಲ ನಮ್ಮಲ್ಲಿತ್ತು. ತುಮಕೂರು ನಗರದಿಂದ ಕುಣಿಗಲ್ ಮಾರ್ಗದಲ್ಲಿ ಕೇವಲ ನಾಲ್ಕು ಕಿಲೋಮೀಟರ್ ಸಾಗಿದ ನಮ್ಮ ಕಾರು ಕೆಲವೇ ನಿಮಿಷಗಳಲ್ಲಿ ಗೂಳೂರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಯ್ಯೋ! ಸಾಲಾ?: ಗುಂಡುರಾವ್ ದೇಸಾಯಿ

    ಪದ್ದು ಮುಂಜಾನೆ ಮಂಜಾನೆ ಹಾಸಿಗೆಲಿ ಇದ್ದಾಗಲೆ ಮನ್ಯಾಗ ಒಕ್ಕರಿಸಿಕೊಂಡ, ‘ಏನಾತೋ ಪದ್ದು ಹಿಂಗ್ಯಾಕ ಗಾಬರಿ ಆಗಿದಿ’ ಅಂದೆ. ‘ಇಲ್ಲ ದೊಸ್ತ್ಯಾ ಸಾಲಗಾರರ ಕಾಟ ಬಾಳ ಆಗ್ಯಾದ. ಮಾರ್ಯದೆಯಿಂದ ಬದುಕೊ ಮನುಷ್ಯ. ಸಾಲ ಸಕಾಲಕ್ಕ ತೀರಿಸುವುದಾಗವಲ್ತು ಮೂರು ತಿಂಗಳ ಟೈಮು ಸಿಕ್ರ ಎಲ್ಲಾನೂ ಅಡ್ಜೆಸ್ಟ ಮಾಡಬಹುದು. ಇವರು ಸಿಕ್ಕ-ಸಿಕ್ಕಲ್ಲಿ ವಾಮಾಗೋಚರವಾಗಿ ಬಯ್ಯತಾರ ಏನು ಮಾಡಲಿ’ ಎಂದು ತನ್ನ ಅಳಲು ತೋಡಿಕೊಂಡ.  ‘ಅದಕ್ಯಾಕ ಚಿಂತಿ ಮಾಡತಿ ಒಂದು ವ್ರತ ಅದ ಮಾಡ್ತಿ ಏನು?’  ‘ವ್ರತಾನ! ವ್ರತದಿಂದ ಸಾಲ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಸುಮತಿ ರಾಮಚಂದ್ರ ‘ಮಕ್ಕಳ ಮನೋಭೂಮಿ’ ಕೃತಿ ಪರಿಚಯ: ಗುಂಡೇನಟ್ಟಿ ಮಧುಕರ

ಮಕ್ಕಳ ಮನಸ್ಸನ್ನು ಅರಳಿಸುವ ಕೃತಿ ಕೃತಿಪರಿಚಯ: ಗುಂಡೇನಟ್ಟಿ ಮಧುಕರ  ಮೊ: 8904632798 ಈಗ ಮಕ್ಕಳ ಸಾಹಿತ್ಯ ರಚಿಸುವವರ ಸಂಖ್ಯೆ ಬೆರಳೆಣಿಕೆಯಷ್ಟು. ಪ್ರೌಢ ಸಾಹಿತ್ಯ ರಚಿಸುವುದಕ್ಕಿಂತ ಮಕ್ಕಳ ಸಾಹಿತ್ಯ ರಚನೆ ತುಂಬ ಕಷ್ಟದ ಕೆಲಸ. ನಾವು ಮಕ್ಕಳ ಮನಸ್ಸನ್ನರಿತು ನಾವೂ ಮಕ್ಕಳಾಗಿಯೇ ರಚಿಸಿದಾಗ ಮಾತ್ರ ಒಳ್ಳೆಯ ಮಕ್ಕಳ ಸಾಹಿತ್ಯ  ಹೊರಬರಲು ಸಾಧ್ಯ. ಇದಕ್ಕಾಗಿ ಮಕ್ಕಳ ಮನಸ್ಸನ್ನು ಅಭ್ಯಾಸ ಮಾಡಬೇಕಾದುದು ಅತ್ಯವಶ್ಯವಾಗಿದೆ. ಅದಕ್ಕಾಗಿ ನಾವು ಮಕ್ಕಳೊಂದಿಗೆ ಹೆಚ್ಚಿನ ಒಡನಾಟ ಹೊಂದಿದವರಿಂದ ಮಾತ್ರ ಉತ್ಕøಷ್ಟ ಮಕ್ಕಳ ಕೃತಿಗಳನ್ನು ರಚಿಸಲು ಸಾಧ್ಯ. ಹಿಂದಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆಗಡಿಯಾದಾಗ ಮೂಗನ್ನೇ ಕೊಯ್ದರೆ,,,!: ಆರ್.ಬಿ.ಗುರುಬಸವರಾಜ. ಹೊಳಗುಂದಿ

ಮೂಗು ಇದ್ದವರಿಗೆಲ್ಲಾ ನೆಗಡಿ ಬರುವುದು ಸರ್ವೇ ಸಾಮಾನ್ಯ. ಪದೇ ಪದೇ ನೆಗಡಿ ಬರುತ್ತದೆ ಅಂತ ಮೂಗನ್ನೇ ಕೊಯ್ದು ಹಾಕುತ್ತೇವೆಯೇ? ಇಲ್ಲವಲ್ಲ. ಆದರೆ ಈಗ ಕರ್ನಾಟಕ ರಾಜ್ಯದಲ್ಲಿ ಇಂತಹದ್ದೊಂದು ಮೂಗನ್ನು ಕೊಯ್ಯಲು ಮುಂದಾದ ಪ್ರಕ್ರಿಯೆ ಶುರುವಾಗಿದೆ. ಅದೇನೆಂದು ನಿಮಗೆ ಈಗಾಗಲೇ ಗೊತ್ತಾಗಿರಬಹುದು. ಅದೇ ಲೋಕಾಯುಕ್ತ ಸಂಸ್ಥೆಯನ್ನು ಕೋಲೇ ಬಸವನಂತೆ ಮಾಡ ಹೊರಟಿರುವುದು.      ಭ್ರಷ್ಟಾಚಾರ ನಿಗ್ರಹಕ್ಕಾಗಿ ಭಾರತದ ರಾಜ್ಯಗಳಲ್ಲಿ ನಿಯೋಜಿತಗೊಂಡಿರುವ ‘ಲೋಕಾಯುಕ್ತ’ ಸಂಸ್ಥೆಯ ಅಧಿಕಾರವನ್ನು ಮೊಟಕುಗೊಳಿಸಿ ಅದಕ್ಕೆ ಪರ್ಯಾಯವಾಗಿ ಇನ್ನೊಂದು ಭ್ರಷ್ಟಾಚಾರ ನಿಗ್ರಹ ದಳ(ಎ.ಸಿ.ಬಿ.) ಎನ್ನುವ ಸಂಸ್ಥೆಯನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಮಕಿಂಕರರು: ಒಂದು ಭಯಾನಕ ಸತ್ಯಕಥೆ: ಪ್ರಸಾದ್ ಕೆ.

  1987 ರ ದಿನಗಳು ಕೆನಡಾದ ಓಂಟಾರಿಯೋ ಪ್ರೊವಿನ್ಸಿನ ಸ್ಕಾರ್-ಬೋರೋ ಭಾಗದಲ್ಲಿ ಸೂರ್ಯ ಎಂದಿನಂತೆ ಮುಳುಗುತ್ತಾ ಕತ್ತಲೆಯ ಚಾದರವನ್ನು ಮೆಲ್ಲಗೆ ಎಳೆಯುತ್ತಿದ್ದ. ಅತ್ತ ಸಂಜೆಯೂ ಅಲ್ಲದ, ಇತ್ತ ಪೂರ್ಣ ಪ್ರಮಾಣದ ರಾತ್ರಿಯೂ ಇಲ್ಲದ ಈ ಹೊತ್ತಿನಲ್ಲಿ ಕೈ-ಕೈ ಹಿಡಿದು ಪಾರ್ಕುಗಳಿಗೆ ಹೋಗುವ ಜೋಡಿಗಳು, ವಾಕಿಂಗಿಗೆ ತೆರಳುವ ವೃದ್ಧರು, ಬಿಯರ್ ಕುಡಿಯುವ ನೆಪದಲ್ಲಿ ಸಂಗಾತಿಗಳನ್ನು ಅರಸಿಕೊಂಡು ಹೋಗುವ ಹದಿಹರೆಯದ ಯುವಕ-ಯುವತಿಯರು ಹೀಗೆ ಹಲವು ಬಗೆಯ ಜನರು ತಮ್ಮದೇ ಗುಂಗಿನಲ್ಲಿ ಅಡ್ಡಾಡುವುದು ಇತರರಂತೆ ಸ್ಕಾರ್-ಬೋರೋ ನಿವಾಸಿಗಳಿಗೂ ಹೊಸದೇನಲ್ಲ. ಆದರೆ ಕಳೆದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ