ಸ್ವಾತಂತ್ರ್ಯೋತ್ಸವದ ಪಾವನ ದಿನ: ಹೊಳಲ್ಕೆರೆ ಲಕ್ಷ್ಮಿವೆಂಕಟೇಶ್
ನಮ್ಮ ದೇಶದ ಸ್ವಾತಂತ್ರ್ಯೋತ್ಸವದ ಪಾವನ ದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ ! ಈ ಹಬ್ಬದ ಆಚರಣೆ ಕೇವಲ ಸಿಹಿ-ತಿಂಡಿ ತಿನ್ನಲು, ಇಲ್ಲವೇ ಮಜಾಮಾಡುತ್ತಾ ಕಾಲಹರಣ ಮಾಡುವುದಕ್ಕಲ್ಲ ಎನ್ನುವುದನ್ನು ನಾವು ಮೊದಲು ತಿಳಿಯಬೇಕು, ಮತ್ತು ಇತರರಿಗೆ ತಿಳಿಸಬೇಕು ಸಹಿತ ! ಬಾಲಗಂಗಾಧರ ತಿಳಕ್, ಗಾಂಧಿ, ನೆಹರು, ಪಟೇಲ್, ಬೋಸ್, ಮತ್ತು ಸಾವಿರಾರು ಜನ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ತಮ್ಮ ತನುಮನ ಧನಗಳನ್ನು ಒತ್ತೆಯಿಟ್ಟು ನಮ್ಮ ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ದುಡಿದಿದ್ದಾರೆ. ಆ ಎಲ್ಲಾ ಮಹನೀಯರು ಮಹಿಳೆಯರಿಗೆ ನಾವು ಶಿರಬಾಗಿ ನಮನ … Read more