ಗೋವಿಂದಯ್ಯನವರ ಗೃಹಬಂಧನ:ಕಿರಣ್ ಕುಮಾರ್ ಕೆ. ಆರ್.

'ನಾಳೆ ಅಪ್ಪನಿಗೆ ಟೌನಿಗೆ ಹೋಗ್ಲಿಕ್ಕೆ ಹೇಳ್ಬೇಕು.', ಎಂದುಕೊಂಡ ರಾಜಮೂರ್ತಿ. ಅಪ್ಪ ಗೋವಿಂದಯ್ಯನವರಿಗೆ ಎಂಬತ್ತರ ಆಸುಪಾಸು. ಅವರದು ಮೊದಲಿನಿಂದಲೂ ಸ್ವಲ್ಪ ದುರ್ಬಲ ಶರೀರ. ಶಾರೀರವೂ ಅಷ್ಟೆ, ದುರ್ಬಲ. ಆದರೂ ಅವರದು ಬಿಡುವಿಲ್ಲದ ಓಡಾಟ. ಒಂದೆಡೆ ಸುಮ್ಮನೆ ಕುಳಿತವರಲ್ಲ. ಎಲ್ಲೋ ಒಂದು ಮದುವೆ ಎಂದರೆ ಅಡಿಗೆಗೆ ಸಹಾಯಕ್ಕೆ, ಇನ್ನೆಲ್ಲೋ ಪೂಜೆ ಎಂದರೆ ಅಲ್ಲಿಗೆ 'ಸುಧಾರಿಸಲಿಕ್ಕೆ', ಮತ್ತೆಲ್ಲೋ ಶ್ರಾದ್ಧವೆಂದರೆ ಅಲ್ಲಿಗೂ ಕೆಲಸದಲ್ಲಿ ಕೈ ಜೋಡಿಸಲಿಕ್ಕೆ – ಒಟ್ಟಿನಲ್ಲಿ ಯಾವ ಸಮಾರಂಭವಾದರೂ ಗೋವಿಂದಯ್ಯ ಅಲ್ಲಿರುತ್ತಿದ್ದರು. ಅವರ ಜೀವನವಿಡೀ ಅವರು ಮಾಡಿದ್ದು ಇದನ್ನೇ. 'ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಾಯ.. ಪ್ರಾಯ..ಪ್ರಾಯ..: ಪ.ನಾ.ಹಳ್ಳಿ.ಹರೀಶ್ ಕುಮಾರ್

ಹರೆಯದ ಮಾತು ಬಲು ಸೊಗಸು, ಅಂದವಾಗಿರುವುದೆಲ್ಲ ನನ್ನದೆಂಬ ಭಾವನೆ, ಮೀಸೆ ಚಿಗುರುವ ವಯಸು, ನಾವೀನ್ಯತೆಗೆ ಚಡಪಡಿಸುವ ಮನಸು, ಸೊಲನ್ನೊಪ್ಪದೇ ಬರೀ ಗೆಲುವೇ ಬೇಕೆಂಬ ಹಂಬಲ, ಹದಿನೈದು ದಾಟಿ ಬಂದ ಈ ವಯಸ್ಸು ನೋಡಿದ್ದೆಲ್ಲಾ ಸುಂದರವಾಗೇ ಕಾಣಬೇಕು, ಕೇಳಿದ್ದೆಲ್ಲಾ ಸಂಗೀತವೇ ಆಗಿರಬೇಕು, ಕಷ್ಟಕಾರ್ಪಣ್ಯಗಳಿಲ್ಲದೇ ಕೇವಲ ಸುಖದಲ್ಲೇ ಒರಳಾಡಬೇಕೆಂಬ ತುಡಿತ ಈ ಹರೆಯದ್ದು. ಮನ್ಮಥನನ್ನೂ ನಾಚಿಸುವ ರಸಿಕತೆ, ಮದಕರಿಯನ್ನೂ ಮೀರಿಸುವ ಧೈರ್ಯ, ಜಗತ್ತನ್ನೇ ಗೆಲ್ಲಬಲ್ಲ ಆತ್ಮವಿಶ್ವಾಸ ಈ ಹುಚ್ಚುಕೋಡಿ ಮನಸ್ಸಿನದು. ಪರಾವಲಂಬನೆಯಿಂದ ಹೊರಬಂದು ಸ್ವಾವಲಂಬಿ ಜೀವನದತ್ತ ಮುಖಮಾಡುವ ಮಧ್ಯಂತರ ಅವಧಿಯೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಡಾಬಿಲಿಡೂಬ ಮತ್ತು ಟುಸ್ಕಿಲಿ ಪುಸ್ಕಿಲಿ: ಹರಿಪ್ರಸಾದ್ ಕೆ.ಆರ್.

     ಒಂದಾನೊಂದು ಕಾಡು. ಆ ಕಾಡಿನಲ್ಲಿ ಒಂದು ಸಿಂಹ ವಾಸವಾಗಿತ್ತು. ಆ ಸಿಂಹದ ಹೆಸರು ಡಾಬಿಲಿಡೂಬ. ಒಂದುದಿನ ಡಾಬಿಲಿಡೂಬಾಗೆ ತುಂಬಾ ಹಸಿವೆಯಾಯಿತು. ಅದು ಆಹಾರ ಹುಡುಕಿಕೊಂಡು ಹೊರಟಿತು. ಎಷ್ಟೇ ಅಲೆದರೂ ಅದಕ್ಕೆ ಆಹಾರ ಸಿಗಲಿಲ್ಲ. ಹುಡುಕಿ ಹುಡುಕಿ ಅದಕ್ಕೆ ಸುಸ್ತಾಗತೊಡಗಿತು. ಸುಸ್ತಿನಿಂದ ಅದಕ್ಕೆ ಸಿಟ್ಟು ಬರತೊಡಗಿತು.   ಅದೇ ಸಮಯಕ್ಕೆ ಕಿಚಕಿಚ ಅಂತ ಶಬ್ದ ಕೇಳಿತು. ಶಬ್ದ ಕೇಳಿ ಸಿಂಹ ತಿರುಗಿ ನೋಡಿತು. ನೋಡಿದರೆ ಒಂದು ಪುಟ್ಟ ಇಲಿ. ಸಿಂಹಕ್ಕೆ ಇಲಿ ನೋಡಿ ಸಂತೋಷವಾಯಿತು. ಗಬಕ್ಕನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಲೆ: ಪ್ರಸಾದ್ ಕೆ.

ಅವನು ಮಾತಿಲ್ಲದೆ ಒಳಬಂದ. ನನ್ನಷ್ಟಕ್ಕೆ ನಾನು ರೇಜರ್ ಬ್ಲೇಡನ್ನು ಹಿಂದಕ್ಕೂ ಮುಂದಕ್ಕೂ ಉಜ್ಜುತ್ತಾ ಹರಿತಗೊಳಿಸುತ್ತಿದ್ದೆ. ಅವನ ಗುರುತು ಹಿಡಿದಾಕ್ಷಣ ನಾನು ನನಗರಿವಿಲ್ಲದಂತೆಯೇ ಸಣ್ಣಗೆ ನಡುಗಿದೆ. ನನ್ನ ಪುಣ್ಯಕ್ಕೆ ಅದನ್ನವನು ಗಮನಿಸಲಿಲ್ಲ. ನಾನು ನನ್ನ ಭಯವನ್ನು ತೋರಗೊಡದೆ ಬ್ಲೇಡನ್ನು ಹರಿತಗೊಳಿಸುವುದನ್ನು ಮುಂದುವರಿಸಿದೆ. ರೇಜರ್ ಬ್ಲೇಡನ್ನು ಹೆಬ್ಬೆರಳಿಗೆ ಕೊಂಚ ಒತ್ತಿ ಹಿಡಿದು, ಬೆಳಕಿಗೂ ಹಿಡಿದು ಪರೀಕ್ಷಿಸುತ್ತಾ ಸಾಕಷ್ಟು ಹರಿತವಾಗಿದೆ ಎಂಬುದನ್ನು ಖಾತ್ರಿಪಡಿಸಿಕೊಂಡೆ. ಅತ್ತ ಅವನೂ ಮಾತನಾಡುವ ಗೋಜಿಗೆ ಹೋಗದೆ ತನ್ನ ಸೊಂಟಕ್ಕೆ ಬಿಗಿದುಕೊಂಡಿದ್ದ, ಬಂದೂಕಿನ ಬುಲೆಟ್ಟುಗಳನ್ನು ಉದ್ದಕ್ಕೂ ಜೋಡಿಸಿದ್ದ ಬೆಲ್ಟ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶತ್ರುಗಳು ಯಾರೆಂಬುದು ತಿಳಿಯಿತು! ಅದು ನಾವೇ!!!: ಅಖಿಲೇಶ್ ಚಿಪ್ಪಳಿ

ವಿಶ್ವ ಭೂದಿನದಂದು ಇಡೀ ಭೂಮಿಯನ್ನು ಕಾಪಾಡಲು ಕಾಡು ಬೇಕು. ಆದ್ದರಿಂದ ಮಾರ್ಚ್ 22ರಂದು ವಿಶ್ವದ ಎಲ್ಲಾ ದೇಶಗಳಲ್ಲೂ ಆದಷ್ಟು “ಗಿಡ ನೆಡಿ” ಎಂಬ ಘೋಷವಾಕ್ಯಕ್ಕೆ ಒತ್ತು ಕೊಟ್ಟಿದ್ದರು. ದೇಶದ ಪ್ರಧಾನಿಯಿಂದ ಹಿಡಿದು ಹೆಚ್ಚೂ-ಕಡಿಮೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭೂದಿನದ ಅಂಗವಾಗಿ ಆಕರ್ಷಕವಾದ ಹೇಳಿಕೆಗಳನ್ನು ನೀಡಿದರು. ನಮ್ಮಲ್ಲಿಯ ಮಾಧ್ಯಮಗಳು ಭೂದಿನವನ್ನು ವಿಶೇಷವಾಗಿ ಪರಿಗಣಿಸಲಿಲ್ಲವೆಂಬುದು ಇಲ್ಲಿ ಗಮನಾರ್ಹ. ಸಾಮಾನ್ಯವಾಗಿ ಭೂಮಿ ಗುಂಡಗಿದೆ ಎನ್ನುತ್ತೇವೆ. ನಿಜವಾಗಲೂ ಭೂಮಿ ಗುಂಡಗಿದೆಯೇ? ದಿನದ 24 ತಾಸುಗಳಲ್ಲಿ ರಾತ್ರಿಯೆಷ್ಟು? ಹಗಲೆಷ್ಟು? ಖಂಡಗಳು ಚಲಿಸುತ್ತವೆಯೇ? ಹೀಗೊಂದಿಷ್ಟು ನಮ್ಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಸಾರ್ಥಕತೆ! ನಗರ ವೃತ್ತ ಬದಿಯಲೊಂದು ವೃಕ್ಷ ಒಡಲಲ್ಲಿ ಹೊತ್ತಿತ್ತು ಹೊರಲಾರದ ಹೊರೆ ! ಎಸ್‍ಟಿಡಿ ಬೋರ್ಡು ಪಾರ್ಲರ್ ಕಾರ್ಡು ಜೆರಕ್ಸ್ ಅಂಗಡಿ ಬಾಣ ನೆರಳಲ್ಲೇ ಅಂಗಡಿ ಹೂಡಿದ ಪಾಷಾನ ಪಂಕ್ಚರು ಹತಾರೆ ಟ್ಯೂಬು ಟಯರುಗಳು ಸಿನೀಮಾ ಪೋಸ್ಟರುಗಳು ಮೈತುಂಬಾ ಉಡುಗೆ ಬಣ್ಣಬಣ್ಣದ ತೊಡಿಗೆ! ಮೊಳೆ ಚುಚ್ಚಿದ್ದರು ಹಗ್ಗ ಬಿಗಿದಿದ್ದರು ರೆಂಬೆ ಮುರಿದಿದ್ದರು ನೆತ್ತಿ ತರಿದಿದ್ದರು ಸುಣ್ಣ ಬಳಿದು ಚರ್ಮ ಸುಲಿದು ಕ್ರೌರ್ಯ ಉಣಿಸಿದ್ದರು! ದಟ್ಟ ನೆರಳು ನೀಡಿ ನೂರಾರು ಶುಕಪಿಕಗಳಿಗೆ ನೆಮ್ಮದಿಯ ಗೂಡಾಗಿ ಹಚ್ಚ ಹಸಿರಾಗಿ  ತನ್ನದೆಲ್ಲವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕುರುಡುಮಲೆ ಪ್ರವಾಸ: ಪ್ರಶಸ್ತಿ

ಸ್ಥಳವೊಂದರ ಹೆಸರು ಕಾಲಕಾಲಕ್ಕೆ ಹೇಗೆ ಬದಲಾಗುತ್ತಾ ಸಾಗುತ್ತೆ ಅನ್ನೋದಕ್ಕೆ ಕೋಲಾರ ಮತ್ತು ಕುರುಡುಮಲೆ ಒಳ್ಳೆಯ ಉದಾಹರಣೆ ಅನಿಸುತ್ತೆ. ಮೂರನೆಯ ಶತಮಾನದಲ್ಲಿ ಗಂಗರ ಅಧೀನದಲ್ಲಿದ್ದ ಒಂದು ನಗರಿ ಕೂವಲಾಲಪುರ. ಅದು ನಂತರ ಚೋಳ,ಹೊಯ್ಸಳ, ವಿಜಯನಗರ ಅರಸರಿಂದ ಆಳಲ್ಪಡುತ್ತಾ ಕೋಲಾರಮ್ಮನ ದೇವಸ್ಥಾನವನ್ನು ಹೊಂದಿ ಕೋಲಾರವಾಯಿತಂತೆ. ಅದೇ ರೀತಿ ಬ್ರಹ್ಮ, ವಿಷ್ಣು, ಮಹೇಶ್ವರರು ಧರೆಗಿಳಿದು ಬಂದು ಕೂಡಿ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದ್ದರಿಂದ ಕೋಲಾರದ ಹತ್ತಿರದ ಸ್ಥಳವೊಂದಕ್ಕೆ ಕೂಟುಮಲೆಯೆಂದು ಹೆಸರಾಯಿತಂತೆ. ಕೂಟುಮಲೆ, ಕೂಡುಮಲೆ ಜನರ ಬಾಯಲ್ಲಿ ಕುರುಡುಮಲೆಯಾಗಿದೆಯೀಗ. ಹೋಗುವುದು ಹೇಗೆ ?  ಕೋಲಾರದಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮುಂಬೈ ಮುಂಗಾರು ಮಳೆ: ಅಪರ್ಣಾ ರಾವ್

ನೀನು ಇನ್ನೇನು ಎರಡು ದಿನದಲ್ಲಿ ಬರ್ತೀಯ ಅಂತ ಗುಲ್ಲು ಹಬ್ಬಿತ್ತು.  ಎಲ್ಲಾ ಕಡೆ ನಿಂದೇ ಜಪ. ನನಗೂ ನೀನು ಬರೋ ನಿರೀಕ್ಷೆ  ಬೆಟ್ಟದಷ್ಟು..  ಆದ್ರೆ  ಯಾರ ಹತ್ರಾನೂ  ಹೇಳ್ಕೊಲ್ಲಿಲ್ಲ. ನಿನ್ನ ನೆನಪಾದಾಗಲೆಲ್ಲಾ ಒಂದು ದೀರ್ಘ ಬಿಸಿ ಉಸಿರು ಬಿಟ್ಟಿದ್ದಷ್ಟೇ. ನನಗೆ  ಸಿಟ್ಟೂ ಕೂಡ ನಿನ್ಮೇಲೆ.. ಅದೆಷ್ಟು ಜನರಿಗೆ ನೀನು ಪ್ರಿಯತಮ.? ನೀನು ನನಗಿಂತಾ ಹೆಚ್ಚು ಆ ಊರ್ಮಿಳೆ  ಇಳೆ ಜೊತೆ ಸರಸ ಆಡೋ ವಿಷ್ಯ ನನಗೇನು ಗೊತ್ತಿಲ್ವಾ? ನೀನು ಅವಳು ದೂರದಲ್ಲೆಲ್ಲೋ ಸೇರೋದನ್ನ ವಾಸನೆಯಲ್ಲೇ ಕಂಡು ಹಿಡಿತೀನಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕವಿತೆಯ ಜಾಡು ಹಿಡಿದು: ಸ್ಮಿತಾ ಅಮೃತರಾಜ್. ಸಂಪಾಜೆ.

ಈ ಕವಿತೆ ಒಮ್ಮೊಮ್ಮೆ ಅದೆಷ್ಟು ಜಿಗುಟು ಮತ್ತುಅಂಟಂಟು ಅಂದ್ರೆ ಹಲಸಿನ ಹಣ್ಣಿನ ಮೇಣದ ತರ. ಮತ್ತೆ ಮತ್ತೆ  ತಿಕ್ಕಿದಷ್ಟೂ ಅಂಟಿಕೊಳ್ಳುತ್ತಾ, ಬಿಡದೇ ಕಾಡುತ್ತಾ , ಸತಾಯಿಸುತ್ತಾ, ಹಿಂದೆ ಮುಂದೆ ಸುತ್ತಿ ಸುಳಿದು ಯಾವುದೋ ಭಾವನಾ ತೀರಕ್ಕೆ ಲಗ್ಗೆಯಿಡುತ್ತಾ ತನ್ನನ್ನು ತಾನು ಮರೆವಿಗೆ ನೂಕಿಬಿಡುತ್ತದೆ. ಅರೆ ಕ್ಷಣವೂ  ಬಿಟ್ಟೂ ಬಿಡದ ಆತ್ಮಸಂಗಾತಿಯಂತೆ ಪಕ್ಕಕ್ಕಿರುತ್ತದೆ. ಕವಿತೆ ಯಾವೊತ್ತೂ ನನ್ನ ಕೈ ಬಿಡಲಾರದು ಎಂಬ ಗುಂಗಿನಲ್ಲೇ, ತುಸು ಹೆಚ್ಚೇ ಹಚ್ಚಿಕೊಂಡು, ಯಾವುದಕ್ಕೂ ವಿನಾಕಾರಣ ತಲೆ ಕೆಡಿಸಿಕೊಳ್ಳದೇ, ಕವಿತೆಯನ್ನು ನನ್ನ ತೆಕ್ಕೆಯೊಳಗಿಟ್ಟೋ. . … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಗಿಸಲು ಪ್ರಯತ್ನಿಸಿದ ನಗೆ ನಾಟಕೋತ್ಸವ: ಹಿಪ್ಪರಗಿ ಸಿದ್ಧರಾಮ

ಸದಭಿರುಚಿಯ ನಾಟಕಕಾರ ಹುಬ್ಬಳ್ಳಿಯ ಡಾ.ಗೋವಿಂದ ಮಣ್ಣೂರ ಅವರು ಹಿಂದೊಂದು ಕಾಲದ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ ಪುಟ್ಟಣ್ಣ ಕಣಗಾಲ ನಿರ್ದೇಶನದ ಕನ್ನಡ ಚಿತ್ರ ‘ಉಪಾಸನೆ’ಯಲ್ಲಿ ನಾಯಕಿ ಆರತಿಗೆ ಸಮಸಮನಾಗಿ ನಾಯಕ ಪಾತ್ರದಲ್ಲಿ ನಟಿಸಿ, ಹೆಸರಾದವರು. ಮುಂದೆ ಏನಾಯಿತೋ ಗೊತ್ತಿಲ್ಲ, ಚಿತ್ರರಂಗದ ಸಹವಾಸ ಬಿಟ್ಟು, ಹುಬ್ಬಳ್ಳಿಯಲ್ಲಿ ಸೈಲೆಂಟಾಗಿ ತಮ್ಮ ವೃತ್ತಿಯೊಂದಿಗೆ ಆಗಾಗ ಧಾರವಾಡ ಆಕಾಶವಾಣಿಗೆ ಸದಭಿರುಚಿಯ ಹಾಸ್ಯ ನಾಟಕಗಳನ್ನು ರಚಿಸಿ ಕೊಡುವುದು, ಕಲಾವಿದರನ್ನು ಪ್ರೋತ್ಸಾಹಸಿ, ಸಂಘಟಿಸುವುದು, ಪತ್ರಿಕೆಗಳಿಗೆ ಕಾಲಮ್ ಬರೆಯುತ್ತಾ ತಮ್ಮಲ್ಲಿರುವ ಸೃಜನಶೀಲತೆಯನ್ನು ಇಂದಿಗೂ ಕಾಪಿಟ್ಟುಕೊಂಡು ಸಕ್ರೀಯರಾಗಿದ್ದಾರೆ. ಇಂತಹ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಲ್ತಪ್ಪವೂ ಒಂದಗುಳು ಅನ್ನವೂ: ಕೃಷ್ಣವೇಣಿ ಕಿದೂರ್

 ನಮ್ಮದು   ಕೇರಳ, ಕರ್ನಾಟಕದ  ಗಡಿಭಾಗದಲ್ಲಿ ಮನೆ. ಮನೆಯ ಎದುರಿಗೆ  ಅಂಗಳ ದಾಟಿದರೆ ವಿಸ್ತಾರವಾದ ಅಡಿಕೆ, ಬಾಳೆ, ಕೊಕ್ಕೋ ಮತ್ತುತೆಂಗಿನ ತೋಟ. ಪ್ರಾಥಮಿಕ  ಶಾಲೆ ಕೇರಳದಲ್ಲಿ. ಮನೆಯಿಂದ ಅರ್ಧ ಗಂಟೆಯ ಕಾಲ್ನಡಿಗೆಯ ಹಾದಿ. ಮಧ್ಯಾಹ್ನ ಶಾಲೆಯಲ್ಲಿ ಈಗಿನ ಹಾಗೆ ಬಿಸಿಯೂಟ ಇಲ್ಲ. ಮನೆಯಲ್ಲಿ ಬೆಳಗ್ಗೆ ಮಾಡಿದ ಗಂಜಿಗೆ ಇಷ್ಟು ಮಜ್ಜಿಗೆ ಸುರಿದು ಅದರ ಮೇಲೆ ಒಂದು ಮಾವಿನ ಮಿಡಿ ಉಪ್ಪಿನಕಾಯಿಯ ಮಿಡಿ ಹಾಕಿ ಲೆಫ್ಟ್, ರೈಟ್ ಮಾಡುತ್ತ ನಡೆದರೆ  ಎರಡು ರಾಜ್ಯಗಳಾಲ್ಲಿ ನಮ್ಮ ಸಂಚಾರ.  ಗಡಿ, ಬೇರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾ ಗೆಳೆಯಾ ಹಾರಿಸೋಣ ಗಾಳಿಪಟ: ಮಲ್ಲೇಶ ಮುಕ್ಕಣ್ಣವರ

ಹಾಯ್ ಫ್ರೆಂಡ್ … ಈಗೆಲ್ಲಿರುವಿರೋ? ಏನು ಮಾಡುತ್ತಿರುವಿರೋ? ಗೊತ್ತಿಲ್ಲ. ಆದರೆ ನಿನ್ನ ನೋಡಬೇಕು ಅಂತ ನನ್ನ ಮನಸ್ಸು ಪರಿ ಪರಿಯಾಗಿ ಹಂಬಲಿಸುತ್ತಿದೆ. ನಿನಗೆ ನೆನಪಿದೆಯಾ? ಆಗ ನನಗೆ ನಿನೇ ಜಗತ್ತು. ಊಟ, ಆಟ, ಪಾಠ ಎನೇ ಇದ್ದರೂ ಅದರಲ್ಲಿ ನಮ್ಮಿಬ್ಬರದ್ದು ಸಮಪಾಲು ಸಮಬಾಳು. ಕಿತ್ತು ತಿನ್ನುವ ಬಡತನವಿದ್ದರು ನನಗೆ ಅದ್ಯಾವುದರ ಅರಿವು ಬರದಂತೆ ನೋಡಿಕೊಂಡವನು ನೀನು. ಹಬ್ಬ ಬರಲಿ ಜಾತ್ರೆ ಇರಲಿ ಮನೇಲಿ ಗಲಾಟೆ ಮಾಡಿ ನಿನ್ನಂತ ಬಟ್ಟೆನ ನಂಗೂ ಕೊಡಿಸುವರೆಗೂ ಬಿಡತಾನೇಯಿರಲಿಲ್ಲಾ. ನನ್ನ ಮೇಲೆ ಸಿಟ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಜ಼ರುದ್ದೀನ್‌ನ ಚೆರಿಹಣ್ಣಿನ ತರ್ಕ ಪೇಟೆಯಲ್ಲಿ ಮಾರುವ ಉದ್ದೇಶದಿಂದ ಒಂದು ಚೀಲ ತುಂಬ ಚೆರಿಹಣ್ಣನ್ನು ತನ್ನ ಕತ್ತೆಯ ಮೇಲೆ ಹೇರಿಕೊಂಡು ನಜರುದ್ದೀನ್ ಪಟ್ಟಣಕ್ಕೆ ಹೋಗುತ್ತಿದ್ದ. ದಾರಿಯಲ್ಲಿ ಒಂದು ಡಜನ್‌ ಮಕ್ಕಳು ಅವನನ್ನೂ ಅವನು ಒಯ್ಯುತ್ತಿದ್ದ ಚೆರಿಹಣ್ಣುಗಳನ್ನೂ ನೋಡಿದರು. ಕೆಲವು ಚೆರಿಹಣ್ಣುಗಳು ತಿನ್ನಲು ಸಿಕ್ಕುತ್ತವೆಂಬ ಸಂತೋಷದಿಂದ ಅವರು ನಜ಼ರುದ್ದೀನ್‌ನ ಸುತ್ತಲೂ ಹಾಡುತ್ತಾ ಕುಣಿಯತೊಡಗಿದರು. ಅವರು ಕೇಳಿದರು, “ಮುಲ್ಲಾ, ನಮಗೆ ಕೆಲವು ಹಣ್ಣುಗಳನ್ನು ಕೊಡು.” ನಜ಼ರುದ್ದೀನ್‌ ಇಕ್ಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ. ಅವನಿಗೆ ಮಕ್ಕಳ ಮೇಲೆ ಬಲು ಪ್ರೀತಿ ಇತ್ತು, ಎಂದೇ ಅವರಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರಳುಗಾಡನ್ನೇ ತಡೆದ ಮಹಾಗೋಡೆ ಯಾಕುಬಾ: ಅಖಿಲೇಶ್ ಚಿಪ್ಪಳಿ

ಈ ಪ್ರಪಂಚದ ಬಹುತೇಕ ಜನಸಂಖ್ಯೆ ಕಾಡು ಇರುವುದು ಕಡಿಯಲಿಕ್ಕೆ, ಪ್ರಾಣಿಗಳು ಇರುವುದು ತಿನ್ನಲಿಕ್ಕೆ ಎಂಬು ಭಾವಿಸಿಕೊಂಡಂತಿದೆ. ಈ ಮನೋಭಾವದಿಂದಾಗಿಯೇ ಜಗತ್ತಿನ ಬಹಳಷ್ಟು ಕಾಡು ಹಾಗೂ ವನ್ಯಸಂಪತ್ತು ನಶಿಸಿಹೋಗುತ್ತಿದೆ. ಕಾಡು ಇಲ್ಲದೆ ಮಳೆಯಿಲ್ಲ, ಮಳೆಯಿಲ್ಲದೆ ನೀರಿಲ್ಲ, ನೀರಿಲ್ಲದೆ ಮನುಷ್ಯನ ಜೀವನವಿಲ್ಲ ಎಂಬ ಸತ್ಯ ಇದೀಗ ನಿಧಾನವಾಗಿ ಅರಿವಿನ ಹಂತಕ್ಕೆ ಬರುತ್ತಿದೆ. ಅದರಲ್ಲೂ ನೀರಿಗಾಗಿ, ಕಾಡಿಗಾಗಿ ಜೀವಮಾನವನ್ನೇ ತೇಯ್ದ ಹಲವರು ನಮ್ಮ ಮುಂದಿದ್ದಾರೆ. ಇವರ ನಿಸ್ವಾರ್ಥ ಸೇವೆ ಜಗತ್ತಿನ ಧುರೀಣರಿಗೆ ಮಾದರಿಯಾಗಬೇಕು ಅಂತದೊಂದು ಸಾಹಸಗಾಥೆಯನ್ನು  ಅನಾವರಣಗೊಳಿಸುವ ಮೊದಲು ನಮ್ಮ ಕಾಲಬುಡದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಂಟೆಯ ನೆಂಟನೆ ಓ ಗಡಿಯಾರ: ಸ್ಮಿತಾ ಅಮೃತರಾಜ್. ಸಂಪಾಜೆ

ಬೆಳಗು, ಮಧ್ಯಾಹ್ನ, ಸಂಜೆ ಇವೆಲ್ಲಾ ಕಾಲದ ಅಣತಿಯಂತೆ ನಿಯಮಾನುಸಾರ ನಡೆಯುವ ಸಂಗತಿಗಳು, ಇದು ಯಾವೊತ್ತೂ ಏರು ಪೇರಾಗುವುದಿಲ್ಲ, ಒಂದು ದಿನವೂ ಶೀತ, ನೆಗಡಿ, ಜ್ವರ ಅಂತ ರಗಳೆಗಳನ್ನು ನೀಡಿ ನುಣುಚಿಕೊಂಡು ಗೈರು ಹಾಜಾರಾಗುವುದಿಲ್ಲ, ಅತೀ ಹೊಂದಾಣಿಕೆಯಿಂದ ಹಗಲು ಪಾಳಿ ರಾತ್ರೆ ಪಾಳಿಯನ್ನು ಯಾವೊತ್ತೂ ಅದಲು ಬದಲು ಮಾಡಿಕೊಳ್ಳುವುದಿಲ್ಲ, ಅಸಲಿಗೆ ಅವರಿಬ್ಬರೂ ಯಾವೊತ್ತೂ ಮುಖಾ ಮುಖಿ ಸಂಧಿಸಿಕೊಳ್ಳುವುದಿಲ್ಲವೆಂಬ ಸತ್ಯ ಎಳೆ ಮಕ್ಕಳಿಗೂ ಗೊತ್ತಿರಬಹುದಾದ ವಿಚಾರ.  ಕಾಲ ನಮಗೆ ಏನೆಲ್ಲಾ ಸಾವಕಾಶಗಳನ್ನು, ಅವಕಾಶಗಳನ್ನು, ಮಾನ ಮರ್ಯಾದೆಯನ್ನು, ಸೋಲು ಗೆಲುವುಗಳನ್ನು ತಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ: ಸಿರಿ, ಅರುಣ್ ಕುಮಾರ್ ಹೆಚ್ ಎಸ್, ಎಸ್.ಜಿ.ಶಿವಶಂಕರ್

ಬದುಕುವುದು ಕೆಲವೇ ದಿನ ಎಂದ ಮೇಲೆ…. ಬದುಕುವುದು ಇನ್ನು ಕೆಲವೇ ದಿನ ಎನ್ನುವ ಸತ್ಯ ತಿಳಿದ ಮೇಲೆ….. ನೀನು ದೂರವಾದ ದಿನಗಳ  ಲೆಕ್ಕ ಹಾಕುತ್ತ ಕಣ್ಣೀರು ಹಾಕುವುದಿಲ್ಲ ಕೊನೆಯ ಭೇಟಿಯಲ್ಲಿ  ನೀನಾಡಿದ ಮಾತುಗಳನ್ನು ಮೆಲಕು ಹಾಕುತ್ತ  ಮನಸ್ಸನ್ನು ರಾಡಿಯಾಗಿಸಿಕೊಳ್ಳುವುದಿಲ್ಲ ನೀನು ಕೊನೆಯದಾಗಿ ಕಳಿಸಿದ ಸಂದೇಶವನ್ನು ಪುನಃ ಪುನಃ ಓದುತ್ತ ನಿನ್ನ ದ್ವೇಷಕ್ಕೆ ಹೊಸ ಅರ್ಥ ಹುಡುಕುವುದಿಲ್ಲ ಯಾಕೆಂದರೆ, ನಾನು ಬದುಕ ಬೇಕಿದೆ ನಿನ್ನ ಧೂರ್ತ, ಕುತಿತ್ಸ ಮಾತುಗಳನ್ನು ಮರೆತು ಬರೀ ನನ್ನೊಳಗಿನ ಮಾತನ್ನಷ್ಟೇ ಕೇಳಬೇಕಿದೆ ನನ್ನೆದೆಯೊಳಗಿನ ಪ್ರೀತಿಯನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬದುಕಿನ ಸುಳಿಯಲ್ಲಿ: ಪ್ರಕಾಶ ತದಡಿಕರ

  “ಹುಚ್ಚಿ… ಹುಚ್ಚಿ”  ಎಂದು ಹಿಯಾಳಿಸುತ್ತ  ಕೇಕೆ ಹಾಕುವ ಮಕ್ಕಳ ಗುಂಪು ನನ್ನನ್ನು ಅಟ್ಟಿಸಿ ಕುಷಿಪಡುತ್ತಿತ್ತು. ರಸ್ತೆ ಬದಿಯಲ್ಲಿ ಅಸ್ತವ್ಯಸ್ತವಾಗಿ ನಿಂತ ನಾನು ಮಕ್ಕಳೆಸೆಯುವ ಕಲ್ಲಿನ ಪೆಟ್ಟು ಸಹಿಸದೇ ಬಿಕ್ಕಿ ಬಿಕ್ಕಿ ಅಳುತ್ತಿದ್ದೆ. ಯುವಕರು, ಹಿರಿಯರೂ ಎನ್ನದೇ  ಎಲ್ಲರೂ ನನ್ನ ಅವಸ್ಥೆ ಕಂಡು ನಗುತ್ತಿದ್ದರು. ಹಸಿವಾದಾಗ ಊರಿನ ಖಾನವಳಿಯ ಮುಂದೆ ನಿಲ್ಲುವ ನನ್ನ ಗೋಳು ಪ್ರತಿ ನಿತ್ಯ ಪೇಟೆಯ ರಸ್ತೆಯಲ್ಲಿ ಕಾಣಬಹುದಾದ ದೃಶ್ಯ. ಕೆದರಿದ ತಲೆಗೂದಲು, ಕೊಳಕು ದೇಹ , ಆ ದೇಹವನ್ನು ಮುಚ್ಚಲು ಹೆಣಗುವ  ಹಳೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಟೀನೇಜೆಂದರೆ ಬರೀ ಮೋಜಲ್ಲ. . . . : ಸವಿತಾ ಗುರುಪ್ರಸಾದ್

  ಟೀನೇಜಿನಲ್ಲಿ ಲವ್ ಮಾಡದಿದ್ದರೆ ಆತ ಅಂಜುಬುರುಕ, ಸಿಗರೇಟು ಸೇದದಿದ್ದರೆ ಈ ಶತಮಾನದಲ್ಲಿ ಆತ ಬದುಕುವುದಕ್ಕೇ ನಾಲಾಯಕ್ಕು, ಗುಂಡು ಹಾಕಿ ಗಲಾಟೆ ಎಬ್ಬಿಸಿ ಹೊಡೆದಾಟ ಮಾಡದಿದ್ದರೆ ಆತ ಗಂಡಸೇ ಅಲ್ಲ, ರಸ್ತೆಯಲ್ಲಿ ಹುಡುಗಿಯರಿಗೆ ಕಾಮೆಂಟ್ ಪಾಸ್ ಮಾಡಿ ಚುಡಾಯಿಸದಿದ್ದರೆ ಅವ ದಂಡ ! ಇದು ನಮ್ಮ ಟೀನೇಜ್ ಹುಡುಗರ ಮನದಿಂಗಿತ. ಕಾರಣ ಇವೆಲ್ಲಾ ಪೌರುಷದ ಸಂಕೇತ.  ಇನ್ನು ಹುಡುಗಿಯರೂ ಇದಕ್ಕೆ ಹೊರತಾಗಿಲ್ಲ ಬಿಡಿ. ತನ್ನ ಹಿಂದೆ ಒಬ್ಬ ಹುಡುಗನಾದರೂ ಓಡಾಡದಿದ್ದರೆ ಆಕೆ ಕಾಲೇಜು ಹಂತಕ್ಕೆ ತಲುಪಿದ್ದೇ ವೇಸ್ಟ್, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕರಿಯ ಮತ್ತು ಕೆಂದಿಯ ಕಥೆ: ನವೀನ್ ಮಧುಗಿರಿ

ಮಲ್ಲಿಗೆಪುರದ ಗಾಳೇರ ಓಣಿಯಲ್ಲಿ ಹನುಮಂತಪ್ಪನ ಮನೆ. ಹನುಮಂತಪ್ಪ ಒಂದು ಕಪ್ಪು ಬಣ್ಣದ ನಾಯಿ ಸಾಕಿದ್ದ. ತುಂಬಾ ದಷ್ಟಪುಷ್ಟ ಹಾಗೂ ನಂಬಿಕಸ್ಥ ನಾಯಿ ಅದು. ಹನುಮಂತಪ್ಪ ಅದನ್ನ ಕರಿಯ ಅಂತ ಕರೆಯುತ್ತಿದ್ದ. ಅಪ್ಪಿತಪ್ಪಿ ಅವನೆದುರು ಯಾರಾದರೂ ಅದನ್ನ ನಾಯಿ ಅಂದರೆ, "ಅದುಕ್ಕೆ ಹೆಸರಿಲ್ವಾ? ನಾಯಿ ಅಂತ್ಯಾಕಂತೀರ? ಕರಿಯ ಅಂತ ಕರೀರಿ" ಎಂದು ದಬಾಯಿಸುತ್ತಿದ್ದ. ಆ ಕರಿಯನ ದೆಸೆಯಿಂದಾಗಿ ಹನುಮಂತಪ್ಪನ ಮನೆಯಂಗಳದ ಮೇಲೆ  ಹೆಜ್ಜೆಯಿಡಲು ಜನ ಹೆದರುತ್ತಿದ್ದರು. ಕರಿಯ ಮನೆಯ ಹಜಾರದಲ್ಲಿ ಮಲಗುತ್ತಿದ್ದ. ಹಾಕಿದ ಊಟ ತಿನ್ನುತ್ತಿದ್ದ. ಯಾರಾದರೂ ಮನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವನಿ: ಪ್ರಶಸ್ತಿ

ಅರಳಗುಪ್ಪೆಯ ಹೊಯ್ಸಳರ ಕಾಲದ ಚನ್ನಕೇಶವ ದೇವಸ್ಥಾನ ನೋಡಹೋದಾಗ ಅಲ್ಲಿ ಅದಕ್ಕಿಂತ ಹಳೆಯದಾದ ಒಂಭತ್ತನೇ ಶತಮಾನದ ಆಸುಪಾಸಿನಲ್ಲಿ ಕಟ್ಟಿಸಿದ ಕಲ್ಲೇಶ್ವರ ದೇವಾಲಯವಿದೆ ಅಂತ ಗೊತ್ತಾಯ್ತು. ಅದನ್ನು ಕಟ್ಟಿಸಿದವರು ನೋಲಂಬ ಅರಸರು ಅಂತಲೂ ತಿಳಿಯಿತು. ಚಾಲುಕ್ಯರು ಗೊತ್ತು. ಅವರಿಗಿಂತ ಮುಂಚೆ ಬಂದ ನೆರೆ ರಾಜ್ಯಗಳಲ್ಲಿದ್ದ ಚೋಳರು, ರಾಷ್ಟ್ರಕೂಟರ ಬಗ್ಗೆ ಗೊತ್ತು. ಅದಕ್ಕಿಂತಲೂ ಮುಂಚೆ ಬಂದ ಗಂಗರು, ಕದಂಬರು ಕಟ್ಟಿಸಿದ ದೇವಾಲಯಗಳ ಬಗ್ಗೆಯೂ ಚೂರ್ಚೂರು ಗೊತ್ತು. ಇದ್ಯಾರು ನೋಲಂಬ ಅರಸರು ಅಂದರಾ ? ರಾಷ್ಟ್ರಕೂಟರ ಸಾಮಂತರಾಜರಾಗಿದ್ದ ಇವರು ಒಂಭತ್ತರಿಂದ ಹನ್ನೆರಡನೆಯ ಶತಮಾನದವರೆಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಡು, ನುಡಿಯ ಮೇಲಿನ ಅಭಿಮಾನ: ಕೃಷ್ಣವೇಣಿ ಕಿದೂರ್

ಛತ್ತೀಸ್ ಘಡದಲ್ಲಿ ಒಂದು  ಅಖಿಲ ಭಾರತ ಮಹಿಳಾ ಕಾನ್ ಫರೆನ್ಸಿಗೆ   ನಾವು ಬಂದಿದ್ದೆವು. ಭಾರತದ ಎಲ್ಲೆಡೆಯಿಂದ ಬಂದ ಮಹಿಳೆಯರು ಅಲ್ಲಿದ್ದರು. ವಿವಿಧ ಉಡುಗೆ ತೊಡುಗೆ, ವೈವಿಧ್ಯಮಯ ಆಹಾರ, ವಿವಿಧ ಭಾಷೆ ಎಲ್ಲವನ್ನೂ ಗಮನಿಸುತ್ತಿದ್ದೆವು. ನಾವು ಕೇರಳದವರು ನಾಲ್ಕು ಮಂದಿ ಒಟ್ಟಾಗಿದ್ದೆವು. ಕಾನ್ ಫರೆನ್ಸ್ ನ ಎರಡನೆಯ ದಿನ. ನಾವುಈ ಮೊದಲೇ ಮಾತಾಡಿಕೊಂಡ ಹಾಗೆ ಕೇರಳದ ಮಲಯಾಳಿ ಸೀರೆ ಉಟ್ಟಿದ್ದೆವು. ನಸು ಕ್ರೀಂ ಬಣ್ಣದ   ಖಾಲಿ(ಪ್ಲೈನ್)   ಸೀರೆಗೆ ಚಿನ್ನದ ಬಣ್ಣದ ಜರಿಯ ಅಂಚು, ಅದೇ ರೀತಿಯ ಜರಿಯ ಸೆರಗು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಜ಼ರುದ್ದೀನ್‌ ಹಣ್ಣುಗಳನ್ನು ಮಾರಿದ್ದು ಬೇಸಿಗೆಯಲ್ಲಿ ವಿಪರೀತ ಸೆಕೆ ಇದ್ದ ಒಂದು ದಿನ ನಜ಼ರುದ್ದೀನ್‌ ಹಣ್ಣುಗಳನ್ನು ಮಾರುತ್ತಿದ್ದ.  ಗಿರಾಕಿ: “ಒಂದು ಮಿಣಿಕೆ ಹಣ್ಣಿನ ಬೆಲೆ ಎಷ್ಟು?” ನಜ಼ರುದ್ದೀನ್‌: “ನಾಲ್ಕು ದಿನಾರ್‌ಗಳು.” ಗಿರಾಕಿ: “ಮಿತಿಮೀರಿದ ಬೆಲೆ ಹೇಳುತ್ತಿರುವೆ. ಅಷ್ಟು ಹೆಚ್ಚು ಬೆಲೆ ಹೇಗೆ ಕೇಳುತ್ತಿರುವೆ? ನಿನಗೇನು ನ್ಯಾಯ ನೀತಿ ಎಂಬುದೇ ಇಲ್ಲವೇ?” ನಜ಼ರುದ್ದೀನ್‌: “ಇಲ್ಲ. ನೀವು ಹೇಳುತ್ತಿರುವ ಯಾವ ಸರಕುಗಳೂ ನನ್ನ ಹತ್ತಿರ ದಾಸ್ತಾನು ಇಲ್ಲ!” ***** ೨. ನಜ಼ರುದ್ದೀನ್‌ನ ರೋಗಪೀಡಿತ ಕತ್ತೆ ತನ್ನ ರೋಗಪೀಡಿತ ಕತ್ತೆಯ ಹತ್ತಿರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವನಿಕ – ಐ ಮಿಸ್ ಯೂ: ಅಮರ್ ದೀಪ್ ಪಿ.ಎಸ್.

ಡಿಯರ್ ಅವನಿಕ, ನಿನಗಲ್ಲದೇ ನಾನ್ಯಾರಿಗೆ ಹೇಳಿಕೊಳ್ಳಲಿ,  ಈಗತಾನೇ ಎರೆಡೆರಡು ಅಪಘಾತವಾಗುವ ಕಂಟಕದಿಂದ ತಪ್ಪಿಸಿಕೊಂಡು ಬಂದು ಹೂಳು ತುಂಬಿದ ತುಂಗಭಧ್ರ ನದಿ ತಟದಲ್ಲಿ ಒಬ್ಬನೇ ಕೂತು ನಡುಗುತ್ತಿದ್ದೇನೆ. ಅದೇನಾಗಿತ್ತು ನಂಗೆ? ಬೈಕ್ ಓಡಿಸುವಾಗ ನಾನೆಂಥ “ಚಿತ್ತ”ದಲ್ಲಿದ್ದರೂ ಹದ ತಪ್ಪುತ್ತಿರಲಿಲ್ಲ.  ಯಾವ ಯೋಚನೆಯಲ್ಲಿ ಬೈಕ್ ಓಡಿಸುತ್ತಿದ್ದೆನೋ? ಎರಡು ಕ್ಷಣ ಮೈಮರೆತಿದ್ದರೆ ಟಿಪ್ಪರ್ ಗಾಡಿಯ ಗಾಲಿಗೆ  ಅಂಟಿಕೊಳ್ಳುತ್ತಿದ್ದೆ. ಯಾರಿಗಾದ್ರೂ ಫೋನ್ ಮಾಡಿ ಹೇಳಿಕೊಳ್ಲಾ ಅಂದರೆ ಮತ್ತೆ ನನಗೇ ಬೈಗುಳ.  ನಿನಗೊಬ್ಬಳಿಗೆ ಸುಮ್ಮನೇ ಮೆಸೇಜ್ ಕುಟ್ಟಿ ಮೊಬೈಲ್ ಜೇಬಲ್ಲಿಟ್ಟುಕೊಂಡೆ.  ಹೆದ್ದಾರಿಯಲ್ಲಿ ಈಗತಾನೇ ಕಣ್ಣುಬಿಟ್ಟುಕೊಂಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಲ ಸಂಕಷ್ಟ: ಅಖಿಲೇಶ್ ಚಿಪ್ಪಳಿ

ಮನುಷ್ಯನನ್ನು ಸುಸ್ತು ಮಾಡಲು ಯಾವುದಾದರೂ ಒಂದು ಕಾಯಿಲೆ ಸಾಕು. ಅದೇ ಮಾರಣಾಂತಿಕ ಕಾಯಿಲೆಗಳಾದ ಕ್ಯಾನ್ಸರ್-ಏಡ್ಸ್ ಎಲ್ಲಾ ಒಟ್ಟೊಟ್ಟಿಗೆ ಅಮರಿಕೊಂಡರೆ ಏನಾಗಬಹುದು. ಯಾವ ಡಾಕ್ಟರ್ ಕೂಡಾ ಚಿಕಿತ್ಸೆ ನೀಡಿ ಬದುಕಿಸಲು ಸಾಧ್ಯವಿಲ್ಲದಂತೆ ಆಗುತ್ತದೆ. ಈ ಭೂಮಿಯ ಮೇಲೆ ನೀರಿನ ವಿಚಾರದಲ್ಲೂ ಇದೇ ಆಗಿದೆ. ಅತ್ತ ಎಲ್‍ನಿನೋ ಪೀಡನೆಯಾದರೆ, ಇತ್ತ ಮನುಷ್ಯರೇ ಸ್ವತ: ಹವಾಮಾನ ವೈಪರೀತ್ಯವೆಂಬ ಭೂತವನ್ನು ಮೈಮೇಲೆ ಎಳೆದುಕೊಂಡದ್ದು. ಎಲ್‍ನಿನೋ ಪ್ರಭಾವ ಪ್ರಪಂಚದ ಎಲ್ಲಾ ಭಾಗದಲ್ಲೂ ತನ್ನ ಪರಿಣಾಮವನ್ನು ಬೀರದೇ ಇದ್ದರೂ, ಹವಾಮಾನ ವೈಪರೀತ್ಯ ನಿಶ್ಚಿತವಾಗಿ ಇಡೀ ಜಗತ್ತನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನಸಲ್ಲಿ ಕಂಡವಳು!: ಎಸ್.ಜಿ.ಶಿವಶಂಕರ್

                   `ನೋ…ಇದು ಸಾಧ್ಯವಿಲ್ಲ!' ಕಪಿಲನ ದನಿ ನಡುಗುತ್ತಿತ್ತು!  ಮಿದುಳಿಗೆ ಒಮ್ಮೆಲೇ ರಕ್ತ ಪ್ರವಾಹದಂತೆ ನುಗ್ಗಿ ಕಿವಿಗಳು ಗುಂಯ್ ಎಂದವು! ಎದುರು ಕುಳಿತಿದ್ದ ಆ ಅಪ್ರತಿಮ ಸುಂದರಿಯನ್ನು ಕಂಡು ಕಪಿಲ ಬೆದರಿ, ಬೆವರಿಬಿಟ್ಟಿದ್ದ! ಮೇರೆ ಮೀರಿದ ಅಚ್ಚರಿ, ಅನುಮಾನ, ಸಂತೋಷ  ಎಲ್ಲವೂ ಏಕ ಕಾಲದಲ್ಲಿ ಆಗಿದ್ದವು! ಜೊತೆಗೆ ಆಕೆ ತನ್ನ ಸಂಗಾತಿಯಾಗಲಿರುವಳು ಎಂಬ ಅನಿವರ್ಚನೀಯ ಆನಂದ ಬೇರೆ! `ಎಸ್.. ಇಟ್ ಇಸ್ ರಿಯಲ್! ಯಾವುದೂ ಅಸಾಧ್ಯವಲ್ಲ!' ಅಂಕುರನದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎರಡು ಕವಿತೆಗಳು: ನಾ”ನಲ್ಲ”, ವಿನಾಯಕ ಅರಳಸುರಳಿ

ಬಾಳ ದಾರಿಯಲಿ ಬಂದು ಹೋಗುವವರಾರು, ಕೈ ಹಿಡಿದು ಜೊತೆಗೂಡಿ ಮುಂದೆ ಸಾಗುವವರಾರು, ಬರುವೆನೆಂದವರೀಗ ಬಿಟ್ಟು ಹೋಗುತಿರಲು, ಮನದಿ ಮುಡಿತು ಪ್ರಶ್ನೆ "ಇಲ್ಲಿ ನನ್ನವರಾರು?" ಪ್ರಾಣ ಪಣವಿಟ್ಟು ನಾ ಹೋರಾಡುತಿರುವಾಗ, ಜನರ ನಿಯಮಕ್ಕೆಂದೂ ಎದೆಗುಂದದಿರುವಾಗ, ನನ್ನನು ತೊರೆದು ಹೋಗುವವರನು ನೋಡಿ, ಮತ್ತೆ ಮುಡಿತು ಪ್ರಶ್ನೆ "ಇಲ್ಲಿ ನನ್ನವರಾರು?" ಮನಸೊಂದು ಬಯಸುವುದು ಅಪರಾಧವೇನಲ್ಲ, ಬಯಸಿದ್ದು ಪಡೆಯುವುದು ಹುಡುಗಾಟವೂ ಅಲ್ಲ, ಬಯಸಿ ಪಡೆದವರಿಂದು ಕೇಳುತಿಹರು ನನ್ನನ್ನು, "ಜೊತೆಯಾಗಿ ಉಳಿಯೋಕೆ ನೀನು ನನಗ್ಯಾರು?" ಕಣ್ಣಂಚಿನ ಹನಿ ಕೇಳು, ತುಟಿಯಂಚಿನ ನಗು ಕೇಳು, ಮರೆಯಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೋಲಾರಮ್ಮ ದೇವಸ್ಥಾನ: ಪ್ರಶಸ್ತಿ ಪಿ.

ಕರ್ನಾಟಕದಲ್ಲಿನ ಪುರಾತನ ದೇವಾಲಯಗಳಲ್ಲಿ ಹೆಚ್ಚಿರುವುದು ಹೊಯ್ಸಳರ ದೇಗುಲಗಳು. ಅವುಗಳಿಗಿಂತಲೂ ಹಿಂದಿನ ದೇಗುಲಗಳು ಅಂದರೆ ನೆನಪಾಗೋದು ಚೋಳರ ಕಾಲದ್ದು ಮತ್ತು ಅದಕ್ಕಿಂತಲೂ ಹಿಂದೆ ಅಂದರೆ ಕದಂಬರ, ಗಂಗರ ಕಾಲದ ಅಳಿದುಳಿದ ದೇಗುಲಗಳು. ಕೋಲಾರದಲ್ಲಿ ೧೦೧೨ರಲ್ಲಿ ಕಟ್ಟಿಸಲಾದ ದೇವಸ್ಥಾನವೊಂದಿದೆ, ಇನ್ನೂ ಒಳ್ಳೆಯ ಸ್ಥಿತಿಯಲ್ಲಿಯೇ ಇದೆಯೆಂಬ ಸುದ್ದಿ ಕೇಳಿದಾಗ ಅಲ್ಲಿಗೆ ಹೋಗದಿರಲಾಗಲಿಲ್ಲ. ಆ ದೇಗುಲವೇ ಕೋಲಾರಕ್ಕೆ ಇಂದಿನ ಹೆಸರು ಬರಲು ಕಾರಣವಾದ ಕೋಲಾರಮ್ಮ ದೇವಸ್ಥಾನ.  ಇತಿಹಾಸ: ಮೂರನೇ ಶತಮಾನದ ಶುರುವಿನಿಂದಲೂ ಕೂವಲಾಲಪುರ(ಇಂದಿನ ಕೋಲಾರವು) ಗಂಗರ ಆಳ್ವಿಕೆಗೆ ಒಳಪಟ್ಟಿತ್ತು ಎಂದು ಶಾಸನಗಳು ತಿಳಿಸುತ್ತದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಜ಼ರುದ್ದೀನ್‌ ಒಂದು ಹೊತ್ತಿನ ಊಟ ತಯಾರಿಸಲು ಸಹಾಯ ಮಾಡುವುದು ಮಾಂಸ, ಅಕ್ಕಿ ಹಾಗು ತರಕಾರಿ ಉಪಯೋಗಿಸಿ ಒಂದು ಹೊತ್ತಿನ ಊಟ ತಯಾರಿಸಲು ಅಗತ್ಯವಾದ ಸಾಮಗ್ರಿಗಳನ್ನು ನಜ಼ರುದ್ದೀನ್‌ ಹಾಗು ಅವನ ಗೆಳೆಯ ಕೊಂಡುತಂದರು. ಗೆಳೆಯ: “ನಜ಼ರುದ್ದೀನ್‌ ನೀನು ಅನ್ನ ಮಾಡು ನಾನು ತರಕಾರಿಗಳನ್ನು ಬೇಯಿಸುತ್ತೇನೆ.” ನಜ಼ರುದ್ದೀನ್‌: “ನಿಜ ಹೇಳುವುದಾದರೆ ಅನ್ನ ಮಾಡುವುದು ಹೇಗೆಂಬುದರ ಕುರಿತು ನನಗೇನೂ ಗೊತ್ತಿಲ್ಲ.” ಗೆಳೆಯ: “ಸರಿ ಹಾಗಾದರೆ, ನೀನು ತರಕಾರಿ ಕತ್ತರಿಸು ನಾನು ಅನ್ನ ಮಾಡುತ್ತೇನೆ.” ನಜ಼ರುದ್ದೀನ್‌: “ನಿಜ ಹೇಳುವುದಾದರೆ ನನಗೆ ತರಕಾರಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ