ಮರಳುಗಾಡನ್ನೇ ತಡೆದ ಮಹಾಗೋಡೆ ಯಾಕುಬಾ: ಅಖಿಲೇಶ್ ಚಿಪ್ಪಳಿ

ಈ ಪ್ರಪಂಚದ ಬಹುತೇಕ ಜನಸಂಖ್ಯೆ ಕಾಡು ಇರುವುದು ಕಡಿಯಲಿಕ್ಕೆ, ಪ್ರಾಣಿಗಳು ಇರುವುದು ತಿನ್ನಲಿಕ್ಕೆ ಎಂಬು ಭಾವಿಸಿಕೊಂಡಂತಿದೆ. ಈ ಮನೋಭಾವದಿಂದಾಗಿಯೇ ಜಗತ್ತಿನ ಬಹಳಷ್ಟು ಕಾಡು ಹಾಗೂ ವನ್ಯಸಂಪತ್ತು ನಶಿಸಿಹೋಗುತ್ತಿದೆ. ಕಾಡು ಇಲ್ಲದೆ ಮಳೆಯಿಲ್ಲ, ಮಳೆಯಿಲ್ಲದೆ ನೀರಿಲ್ಲ, ನೀರಿಲ್ಲದೆ ಮನುಷ್ಯನ ಜೀವನವಿಲ್ಲ ಎಂಬ ಸತ್ಯ ಇದೀಗ ನಿಧಾನವಾಗಿ ಅರಿವಿನ ಹಂತಕ್ಕೆ ಬರುತ್ತಿದೆ. ಅದರಲ್ಲೂ ನೀರಿಗಾಗಿ, ಕಾಡಿಗಾಗಿ ಜೀವಮಾನವನ್ನೇ ತೇಯ್ದ ಹಲವರು ನಮ್ಮ ಮುಂದಿದ್ದಾರೆ. ಇವರ ನಿಸ್ವಾರ್ಥ ಸೇವೆ ಜಗತ್ತಿನ ಧುರೀಣರಿಗೆ ಮಾದರಿಯಾಗಬೇಕು ಅಂತದೊಂದು ಸಾಹಸಗಾಥೆಯನ್ನು  ಅನಾವರಣಗೊಳಿಸುವ ಮೊದಲು ನಮ್ಮ ಕಾಲಬುಡದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಂಟೆಯ ನೆಂಟನೆ ಓ ಗಡಿಯಾರ: ಸ್ಮಿತಾ ಅಮೃತರಾಜ್. ಸಂಪಾಜೆ

ಬೆಳಗು, ಮಧ್ಯಾಹ್ನ, ಸಂಜೆ ಇವೆಲ್ಲಾ ಕಾಲದ ಅಣತಿಯಂತೆ ನಿಯಮಾನುಸಾರ ನಡೆಯುವ ಸಂಗತಿಗಳು, ಇದು ಯಾವೊತ್ತೂ ಏರು ಪೇರಾಗುವುದಿಲ್ಲ, ಒಂದು ದಿನವೂ ಶೀತ, ನೆಗಡಿ, ಜ್ವರ ಅಂತ ರಗಳೆಗಳನ್ನು ನೀಡಿ ನುಣುಚಿಕೊಂಡು ಗೈರು ಹಾಜಾರಾಗುವುದಿಲ್ಲ, ಅತೀ ಹೊಂದಾಣಿಕೆಯಿಂದ ಹಗಲು ಪಾಳಿ ರಾತ್ರೆ ಪಾಳಿಯನ್ನು ಯಾವೊತ್ತೂ ಅದಲು ಬದಲು ಮಾಡಿಕೊಳ್ಳುವುದಿಲ್ಲ, ಅಸಲಿಗೆ ಅವರಿಬ್ಬರೂ ಯಾವೊತ್ತೂ ಮುಖಾ ಮುಖಿ ಸಂಧಿಸಿಕೊಳ್ಳುವುದಿಲ್ಲವೆಂಬ ಸತ್ಯ ಎಳೆ ಮಕ್ಕಳಿಗೂ ಗೊತ್ತಿರಬಹುದಾದ ವಿಚಾರ.  ಕಾಲ ನಮಗೆ ಏನೆಲ್ಲಾ ಸಾವಕಾಶಗಳನ್ನು, ಅವಕಾಶಗಳನ್ನು, ಮಾನ ಮರ್ಯಾದೆಯನ್ನು, ಸೋಲು ಗೆಲುವುಗಳನ್ನು ತಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ: ಸಿರಿ, ಅರುಣ್ ಕುಮಾರ್ ಹೆಚ್ ಎಸ್, ಎಸ್.ಜಿ.ಶಿವಶಂಕರ್

ಬದುಕುವುದು ಕೆಲವೇ ದಿನ ಎಂದ ಮೇಲೆ…. ಬದುಕುವುದು ಇನ್ನು ಕೆಲವೇ ದಿನ ಎನ್ನುವ ಸತ್ಯ ತಿಳಿದ ಮೇಲೆ….. ನೀನು ದೂರವಾದ ದಿನಗಳ  ಲೆಕ್ಕ ಹಾಕುತ್ತ ಕಣ್ಣೀರು ಹಾಕುವುದಿಲ್ಲ ಕೊನೆಯ ಭೇಟಿಯಲ್ಲಿ  ನೀನಾಡಿದ ಮಾತುಗಳನ್ನು ಮೆಲಕು ಹಾಕುತ್ತ  ಮನಸ್ಸನ್ನು ರಾಡಿಯಾಗಿಸಿಕೊಳ್ಳುವುದಿಲ್ಲ ನೀನು ಕೊನೆಯದಾಗಿ ಕಳಿಸಿದ ಸಂದೇಶವನ್ನು ಪುನಃ ಪುನಃ ಓದುತ್ತ ನಿನ್ನ ದ್ವೇಷಕ್ಕೆ ಹೊಸ ಅರ್ಥ ಹುಡುಕುವುದಿಲ್ಲ ಯಾಕೆಂದರೆ, ನಾನು ಬದುಕ ಬೇಕಿದೆ ನಿನ್ನ ಧೂರ್ತ, ಕುತಿತ್ಸ ಮಾತುಗಳನ್ನು ಮರೆತು ಬರೀ ನನ್ನೊಳಗಿನ ಮಾತನ್ನಷ್ಟೇ ಕೇಳಬೇಕಿದೆ ನನ್ನೆದೆಯೊಳಗಿನ ಪ್ರೀತಿಯನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬದುಕಿನ ಸುಳಿಯಲ್ಲಿ: ಪ್ರಕಾಶ ತದಡಿಕರ

  “ಹುಚ್ಚಿ… ಹುಚ್ಚಿ”  ಎಂದು ಹಿಯಾಳಿಸುತ್ತ  ಕೇಕೆ ಹಾಕುವ ಮಕ್ಕಳ ಗುಂಪು ನನ್ನನ್ನು ಅಟ್ಟಿಸಿ ಕುಷಿಪಡುತ್ತಿತ್ತು. ರಸ್ತೆ ಬದಿಯಲ್ಲಿ ಅಸ್ತವ್ಯಸ್ತವಾಗಿ ನಿಂತ ನಾನು ಮಕ್ಕಳೆಸೆಯುವ ಕಲ್ಲಿನ ಪೆಟ್ಟು ಸಹಿಸದೇ ಬಿಕ್ಕಿ ಬಿಕ್ಕಿ ಅಳುತ್ತಿದ್ದೆ. ಯುವಕರು, ಹಿರಿಯರೂ ಎನ್ನದೇ  ಎಲ್ಲರೂ ನನ್ನ ಅವಸ್ಥೆ ಕಂಡು ನಗುತ್ತಿದ್ದರು. ಹಸಿವಾದಾಗ ಊರಿನ ಖಾನವಳಿಯ ಮುಂದೆ ನಿಲ್ಲುವ ನನ್ನ ಗೋಳು ಪ್ರತಿ ನಿತ್ಯ ಪೇಟೆಯ ರಸ್ತೆಯಲ್ಲಿ ಕಾಣಬಹುದಾದ ದೃಶ್ಯ. ಕೆದರಿದ ತಲೆಗೂದಲು, ಕೊಳಕು ದೇಹ , ಆ ದೇಹವನ್ನು ಮುಚ್ಚಲು ಹೆಣಗುವ  ಹಳೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಟೀನೇಜೆಂದರೆ ಬರೀ ಮೋಜಲ್ಲ. . . . : ಸವಿತಾ ಗುರುಪ್ರಸಾದ್

  ಟೀನೇಜಿನಲ್ಲಿ ಲವ್ ಮಾಡದಿದ್ದರೆ ಆತ ಅಂಜುಬುರುಕ, ಸಿಗರೇಟು ಸೇದದಿದ್ದರೆ ಈ ಶತಮಾನದಲ್ಲಿ ಆತ ಬದುಕುವುದಕ್ಕೇ ನಾಲಾಯಕ್ಕು, ಗುಂಡು ಹಾಕಿ ಗಲಾಟೆ ಎಬ್ಬಿಸಿ ಹೊಡೆದಾಟ ಮಾಡದಿದ್ದರೆ ಆತ ಗಂಡಸೇ ಅಲ್ಲ, ರಸ್ತೆಯಲ್ಲಿ ಹುಡುಗಿಯರಿಗೆ ಕಾಮೆಂಟ್ ಪಾಸ್ ಮಾಡಿ ಚುಡಾಯಿಸದಿದ್ದರೆ ಅವ ದಂಡ ! ಇದು ನಮ್ಮ ಟೀನೇಜ್ ಹುಡುಗರ ಮನದಿಂಗಿತ. ಕಾರಣ ಇವೆಲ್ಲಾ ಪೌರುಷದ ಸಂಕೇತ.  ಇನ್ನು ಹುಡುಗಿಯರೂ ಇದಕ್ಕೆ ಹೊರತಾಗಿಲ್ಲ ಬಿಡಿ. ತನ್ನ ಹಿಂದೆ ಒಬ್ಬ ಹುಡುಗನಾದರೂ ಓಡಾಡದಿದ್ದರೆ ಆಕೆ ಕಾಲೇಜು ಹಂತಕ್ಕೆ ತಲುಪಿದ್ದೇ ವೇಸ್ಟ್, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕರಿಯ ಮತ್ತು ಕೆಂದಿಯ ಕಥೆ: ನವೀನ್ ಮಧುಗಿರಿ

ಮಲ್ಲಿಗೆಪುರದ ಗಾಳೇರ ಓಣಿಯಲ್ಲಿ ಹನುಮಂತಪ್ಪನ ಮನೆ. ಹನುಮಂತಪ್ಪ ಒಂದು ಕಪ್ಪು ಬಣ್ಣದ ನಾಯಿ ಸಾಕಿದ್ದ. ತುಂಬಾ ದಷ್ಟಪುಷ್ಟ ಹಾಗೂ ನಂಬಿಕಸ್ಥ ನಾಯಿ ಅದು. ಹನುಮಂತಪ್ಪ ಅದನ್ನ ಕರಿಯ ಅಂತ ಕರೆಯುತ್ತಿದ್ದ. ಅಪ್ಪಿತಪ್ಪಿ ಅವನೆದುರು ಯಾರಾದರೂ ಅದನ್ನ ನಾಯಿ ಅಂದರೆ, "ಅದುಕ್ಕೆ ಹೆಸರಿಲ್ವಾ? ನಾಯಿ ಅಂತ್ಯಾಕಂತೀರ? ಕರಿಯ ಅಂತ ಕರೀರಿ" ಎಂದು ದಬಾಯಿಸುತ್ತಿದ್ದ. ಆ ಕರಿಯನ ದೆಸೆಯಿಂದಾಗಿ ಹನುಮಂತಪ್ಪನ ಮನೆಯಂಗಳದ ಮೇಲೆ  ಹೆಜ್ಜೆಯಿಡಲು ಜನ ಹೆದರುತ್ತಿದ್ದರು. ಕರಿಯ ಮನೆಯ ಹಜಾರದಲ್ಲಿ ಮಲಗುತ್ತಿದ್ದ. ಹಾಕಿದ ಊಟ ತಿನ್ನುತ್ತಿದ್ದ. ಯಾರಾದರೂ ಮನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವನಿ: ಪ್ರಶಸ್ತಿ

ಅರಳಗುಪ್ಪೆಯ ಹೊಯ್ಸಳರ ಕಾಲದ ಚನ್ನಕೇಶವ ದೇವಸ್ಥಾನ ನೋಡಹೋದಾಗ ಅಲ್ಲಿ ಅದಕ್ಕಿಂತ ಹಳೆಯದಾದ ಒಂಭತ್ತನೇ ಶತಮಾನದ ಆಸುಪಾಸಿನಲ್ಲಿ ಕಟ್ಟಿಸಿದ ಕಲ್ಲೇಶ್ವರ ದೇವಾಲಯವಿದೆ ಅಂತ ಗೊತ್ತಾಯ್ತು. ಅದನ್ನು ಕಟ್ಟಿಸಿದವರು ನೋಲಂಬ ಅರಸರು ಅಂತಲೂ ತಿಳಿಯಿತು. ಚಾಲುಕ್ಯರು ಗೊತ್ತು. ಅವರಿಗಿಂತ ಮುಂಚೆ ಬಂದ ನೆರೆ ರಾಜ್ಯಗಳಲ್ಲಿದ್ದ ಚೋಳರು, ರಾಷ್ಟ್ರಕೂಟರ ಬಗ್ಗೆ ಗೊತ್ತು. ಅದಕ್ಕಿಂತಲೂ ಮುಂಚೆ ಬಂದ ಗಂಗರು, ಕದಂಬರು ಕಟ್ಟಿಸಿದ ದೇವಾಲಯಗಳ ಬಗ್ಗೆಯೂ ಚೂರ್ಚೂರು ಗೊತ್ತು. ಇದ್ಯಾರು ನೋಲಂಬ ಅರಸರು ಅಂದರಾ ? ರಾಷ್ಟ್ರಕೂಟರ ಸಾಮಂತರಾಜರಾಗಿದ್ದ ಇವರು ಒಂಭತ್ತರಿಂದ ಹನ್ನೆರಡನೆಯ ಶತಮಾನದವರೆಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಡು, ನುಡಿಯ ಮೇಲಿನ ಅಭಿಮಾನ: ಕೃಷ್ಣವೇಣಿ ಕಿದೂರ್

ಛತ್ತೀಸ್ ಘಡದಲ್ಲಿ ಒಂದು  ಅಖಿಲ ಭಾರತ ಮಹಿಳಾ ಕಾನ್ ಫರೆನ್ಸಿಗೆ   ನಾವು ಬಂದಿದ್ದೆವು. ಭಾರತದ ಎಲ್ಲೆಡೆಯಿಂದ ಬಂದ ಮಹಿಳೆಯರು ಅಲ್ಲಿದ್ದರು. ವಿವಿಧ ಉಡುಗೆ ತೊಡುಗೆ, ವೈವಿಧ್ಯಮಯ ಆಹಾರ, ವಿವಿಧ ಭಾಷೆ ಎಲ್ಲವನ್ನೂ ಗಮನಿಸುತ್ತಿದ್ದೆವು. ನಾವು ಕೇರಳದವರು ನಾಲ್ಕು ಮಂದಿ ಒಟ್ಟಾಗಿದ್ದೆವು. ಕಾನ್ ಫರೆನ್ಸ್ ನ ಎರಡನೆಯ ದಿನ. ನಾವುಈ ಮೊದಲೇ ಮಾತಾಡಿಕೊಂಡ ಹಾಗೆ ಕೇರಳದ ಮಲಯಾಳಿ ಸೀರೆ ಉಟ್ಟಿದ್ದೆವು. ನಸು ಕ್ರೀಂ ಬಣ್ಣದ   ಖಾಲಿ(ಪ್ಲೈನ್)   ಸೀರೆಗೆ ಚಿನ್ನದ ಬಣ್ಣದ ಜರಿಯ ಅಂಚು, ಅದೇ ರೀತಿಯ ಜರಿಯ ಸೆರಗು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಜ಼ರುದ್ದೀನ್‌ ಹಣ್ಣುಗಳನ್ನು ಮಾರಿದ್ದು ಬೇಸಿಗೆಯಲ್ಲಿ ವಿಪರೀತ ಸೆಕೆ ಇದ್ದ ಒಂದು ದಿನ ನಜ಼ರುದ್ದೀನ್‌ ಹಣ್ಣುಗಳನ್ನು ಮಾರುತ್ತಿದ್ದ.  ಗಿರಾಕಿ: “ಒಂದು ಮಿಣಿಕೆ ಹಣ್ಣಿನ ಬೆಲೆ ಎಷ್ಟು?” ನಜ಼ರುದ್ದೀನ್‌: “ನಾಲ್ಕು ದಿನಾರ್‌ಗಳು.” ಗಿರಾಕಿ: “ಮಿತಿಮೀರಿದ ಬೆಲೆ ಹೇಳುತ್ತಿರುವೆ. ಅಷ್ಟು ಹೆಚ್ಚು ಬೆಲೆ ಹೇಗೆ ಕೇಳುತ್ತಿರುವೆ? ನಿನಗೇನು ನ್ಯಾಯ ನೀತಿ ಎಂಬುದೇ ಇಲ್ಲವೇ?” ನಜ಼ರುದ್ದೀನ್‌: “ಇಲ್ಲ. ನೀವು ಹೇಳುತ್ತಿರುವ ಯಾವ ಸರಕುಗಳೂ ನನ್ನ ಹತ್ತಿರ ದಾಸ್ತಾನು ಇಲ್ಲ!” ***** ೨. ನಜ಼ರುದ್ದೀನ್‌ನ ರೋಗಪೀಡಿತ ಕತ್ತೆ ತನ್ನ ರೋಗಪೀಡಿತ ಕತ್ತೆಯ ಹತ್ತಿರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವನಿಕ – ಐ ಮಿಸ್ ಯೂ: ಅಮರ್ ದೀಪ್ ಪಿ.ಎಸ್.

ಡಿಯರ್ ಅವನಿಕ, ನಿನಗಲ್ಲದೇ ನಾನ್ಯಾರಿಗೆ ಹೇಳಿಕೊಳ್ಳಲಿ,  ಈಗತಾನೇ ಎರೆಡೆರಡು ಅಪಘಾತವಾಗುವ ಕಂಟಕದಿಂದ ತಪ್ಪಿಸಿಕೊಂಡು ಬಂದು ಹೂಳು ತುಂಬಿದ ತುಂಗಭಧ್ರ ನದಿ ತಟದಲ್ಲಿ ಒಬ್ಬನೇ ಕೂತು ನಡುಗುತ್ತಿದ್ದೇನೆ. ಅದೇನಾಗಿತ್ತು ನಂಗೆ? ಬೈಕ್ ಓಡಿಸುವಾಗ ನಾನೆಂಥ “ಚಿತ್ತ”ದಲ್ಲಿದ್ದರೂ ಹದ ತಪ್ಪುತ್ತಿರಲಿಲ್ಲ.  ಯಾವ ಯೋಚನೆಯಲ್ಲಿ ಬೈಕ್ ಓಡಿಸುತ್ತಿದ್ದೆನೋ? ಎರಡು ಕ್ಷಣ ಮೈಮರೆತಿದ್ದರೆ ಟಿಪ್ಪರ್ ಗಾಡಿಯ ಗಾಲಿಗೆ  ಅಂಟಿಕೊಳ್ಳುತ್ತಿದ್ದೆ. ಯಾರಿಗಾದ್ರೂ ಫೋನ್ ಮಾಡಿ ಹೇಳಿಕೊಳ್ಲಾ ಅಂದರೆ ಮತ್ತೆ ನನಗೇ ಬೈಗುಳ.  ನಿನಗೊಬ್ಬಳಿಗೆ ಸುಮ್ಮನೇ ಮೆಸೇಜ್ ಕುಟ್ಟಿ ಮೊಬೈಲ್ ಜೇಬಲ್ಲಿಟ್ಟುಕೊಂಡೆ.  ಹೆದ್ದಾರಿಯಲ್ಲಿ ಈಗತಾನೇ ಕಣ್ಣುಬಿಟ್ಟುಕೊಂಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಲ ಸಂಕಷ್ಟ: ಅಖಿಲೇಶ್ ಚಿಪ್ಪಳಿ

ಮನುಷ್ಯನನ್ನು ಸುಸ್ತು ಮಾಡಲು ಯಾವುದಾದರೂ ಒಂದು ಕಾಯಿಲೆ ಸಾಕು. ಅದೇ ಮಾರಣಾಂತಿಕ ಕಾಯಿಲೆಗಳಾದ ಕ್ಯಾನ್ಸರ್-ಏಡ್ಸ್ ಎಲ್ಲಾ ಒಟ್ಟೊಟ್ಟಿಗೆ ಅಮರಿಕೊಂಡರೆ ಏನಾಗಬಹುದು. ಯಾವ ಡಾಕ್ಟರ್ ಕೂಡಾ ಚಿಕಿತ್ಸೆ ನೀಡಿ ಬದುಕಿಸಲು ಸಾಧ್ಯವಿಲ್ಲದಂತೆ ಆಗುತ್ತದೆ. ಈ ಭೂಮಿಯ ಮೇಲೆ ನೀರಿನ ವಿಚಾರದಲ್ಲೂ ಇದೇ ಆಗಿದೆ. ಅತ್ತ ಎಲ್‍ನಿನೋ ಪೀಡನೆಯಾದರೆ, ಇತ್ತ ಮನುಷ್ಯರೇ ಸ್ವತ: ಹವಾಮಾನ ವೈಪರೀತ್ಯವೆಂಬ ಭೂತವನ್ನು ಮೈಮೇಲೆ ಎಳೆದುಕೊಂಡದ್ದು. ಎಲ್‍ನಿನೋ ಪ್ರಭಾವ ಪ್ರಪಂಚದ ಎಲ್ಲಾ ಭಾಗದಲ್ಲೂ ತನ್ನ ಪರಿಣಾಮವನ್ನು ಬೀರದೇ ಇದ್ದರೂ, ಹವಾಮಾನ ವೈಪರೀತ್ಯ ನಿಶ್ಚಿತವಾಗಿ ಇಡೀ ಜಗತ್ತನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನಸಲ್ಲಿ ಕಂಡವಳು!: ಎಸ್.ಜಿ.ಶಿವಶಂಕರ್

                   `ನೋ…ಇದು ಸಾಧ್ಯವಿಲ್ಲ!' ಕಪಿಲನ ದನಿ ನಡುಗುತ್ತಿತ್ತು!  ಮಿದುಳಿಗೆ ಒಮ್ಮೆಲೇ ರಕ್ತ ಪ್ರವಾಹದಂತೆ ನುಗ್ಗಿ ಕಿವಿಗಳು ಗುಂಯ್ ಎಂದವು! ಎದುರು ಕುಳಿತಿದ್ದ ಆ ಅಪ್ರತಿಮ ಸುಂದರಿಯನ್ನು ಕಂಡು ಕಪಿಲ ಬೆದರಿ, ಬೆವರಿಬಿಟ್ಟಿದ್ದ! ಮೇರೆ ಮೀರಿದ ಅಚ್ಚರಿ, ಅನುಮಾನ, ಸಂತೋಷ  ಎಲ್ಲವೂ ಏಕ ಕಾಲದಲ್ಲಿ ಆಗಿದ್ದವು! ಜೊತೆಗೆ ಆಕೆ ತನ್ನ ಸಂಗಾತಿಯಾಗಲಿರುವಳು ಎಂಬ ಅನಿವರ್ಚನೀಯ ಆನಂದ ಬೇರೆ! `ಎಸ್.. ಇಟ್ ಇಸ್ ರಿಯಲ್! ಯಾವುದೂ ಅಸಾಧ್ಯವಲ್ಲ!' ಅಂಕುರನದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎರಡು ಕವಿತೆಗಳು: ನಾ”ನಲ್ಲ”, ವಿನಾಯಕ ಅರಳಸುರಳಿ

ಬಾಳ ದಾರಿಯಲಿ ಬಂದು ಹೋಗುವವರಾರು, ಕೈ ಹಿಡಿದು ಜೊತೆಗೂಡಿ ಮುಂದೆ ಸಾಗುವವರಾರು, ಬರುವೆನೆಂದವರೀಗ ಬಿಟ್ಟು ಹೋಗುತಿರಲು, ಮನದಿ ಮುಡಿತು ಪ್ರಶ್ನೆ "ಇಲ್ಲಿ ನನ್ನವರಾರು?" ಪ್ರಾಣ ಪಣವಿಟ್ಟು ನಾ ಹೋರಾಡುತಿರುವಾಗ, ಜನರ ನಿಯಮಕ್ಕೆಂದೂ ಎದೆಗುಂದದಿರುವಾಗ, ನನ್ನನು ತೊರೆದು ಹೋಗುವವರನು ನೋಡಿ, ಮತ್ತೆ ಮುಡಿತು ಪ್ರಶ್ನೆ "ಇಲ್ಲಿ ನನ್ನವರಾರು?" ಮನಸೊಂದು ಬಯಸುವುದು ಅಪರಾಧವೇನಲ್ಲ, ಬಯಸಿದ್ದು ಪಡೆಯುವುದು ಹುಡುಗಾಟವೂ ಅಲ್ಲ, ಬಯಸಿ ಪಡೆದವರಿಂದು ಕೇಳುತಿಹರು ನನ್ನನ್ನು, "ಜೊತೆಯಾಗಿ ಉಳಿಯೋಕೆ ನೀನು ನನಗ್ಯಾರು?" ಕಣ್ಣಂಚಿನ ಹನಿ ಕೇಳು, ತುಟಿಯಂಚಿನ ನಗು ಕೇಳು, ಮರೆಯಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೋಲಾರಮ್ಮ ದೇವಸ್ಥಾನ: ಪ್ರಶಸ್ತಿ ಪಿ.

ಕರ್ನಾಟಕದಲ್ಲಿನ ಪುರಾತನ ದೇವಾಲಯಗಳಲ್ಲಿ ಹೆಚ್ಚಿರುವುದು ಹೊಯ್ಸಳರ ದೇಗುಲಗಳು. ಅವುಗಳಿಗಿಂತಲೂ ಹಿಂದಿನ ದೇಗುಲಗಳು ಅಂದರೆ ನೆನಪಾಗೋದು ಚೋಳರ ಕಾಲದ್ದು ಮತ್ತು ಅದಕ್ಕಿಂತಲೂ ಹಿಂದೆ ಅಂದರೆ ಕದಂಬರ, ಗಂಗರ ಕಾಲದ ಅಳಿದುಳಿದ ದೇಗುಲಗಳು. ಕೋಲಾರದಲ್ಲಿ ೧೦೧೨ರಲ್ಲಿ ಕಟ್ಟಿಸಲಾದ ದೇವಸ್ಥಾನವೊಂದಿದೆ, ಇನ್ನೂ ಒಳ್ಳೆಯ ಸ್ಥಿತಿಯಲ್ಲಿಯೇ ಇದೆಯೆಂಬ ಸುದ್ದಿ ಕೇಳಿದಾಗ ಅಲ್ಲಿಗೆ ಹೋಗದಿರಲಾಗಲಿಲ್ಲ. ಆ ದೇಗುಲವೇ ಕೋಲಾರಕ್ಕೆ ಇಂದಿನ ಹೆಸರು ಬರಲು ಕಾರಣವಾದ ಕೋಲಾರಮ್ಮ ದೇವಸ್ಥಾನ.  ಇತಿಹಾಸ: ಮೂರನೇ ಶತಮಾನದ ಶುರುವಿನಿಂದಲೂ ಕೂವಲಾಲಪುರ(ಇಂದಿನ ಕೋಲಾರವು) ಗಂಗರ ಆಳ್ವಿಕೆಗೆ ಒಳಪಟ್ಟಿತ್ತು ಎಂದು ಶಾಸನಗಳು ತಿಳಿಸುತ್ತದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಜ಼ರುದ್ದೀನ್‌ ಒಂದು ಹೊತ್ತಿನ ಊಟ ತಯಾರಿಸಲು ಸಹಾಯ ಮಾಡುವುದು ಮಾಂಸ, ಅಕ್ಕಿ ಹಾಗು ತರಕಾರಿ ಉಪಯೋಗಿಸಿ ಒಂದು ಹೊತ್ತಿನ ಊಟ ತಯಾರಿಸಲು ಅಗತ್ಯವಾದ ಸಾಮಗ್ರಿಗಳನ್ನು ನಜ಼ರುದ್ದೀನ್‌ ಹಾಗು ಅವನ ಗೆಳೆಯ ಕೊಂಡುತಂದರು. ಗೆಳೆಯ: “ನಜ಼ರುದ್ದೀನ್‌ ನೀನು ಅನ್ನ ಮಾಡು ನಾನು ತರಕಾರಿಗಳನ್ನು ಬೇಯಿಸುತ್ತೇನೆ.” ನಜ಼ರುದ್ದೀನ್‌: “ನಿಜ ಹೇಳುವುದಾದರೆ ಅನ್ನ ಮಾಡುವುದು ಹೇಗೆಂಬುದರ ಕುರಿತು ನನಗೇನೂ ಗೊತ್ತಿಲ್ಲ.” ಗೆಳೆಯ: “ಸರಿ ಹಾಗಾದರೆ, ನೀನು ತರಕಾರಿ ಕತ್ತರಿಸು ನಾನು ಅನ್ನ ಮಾಡುತ್ತೇನೆ.” ನಜ಼ರುದ್ದೀನ್‌: “ನಿಜ ಹೇಳುವುದಾದರೆ ನನಗೆ ತರಕಾರಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಾಯಿಯ ಮನಸ್ಸು: ಹೆಚ್ ಎಸ್ ಅರುಣ್ ಕುಮಾರ್

ಕಾರು "ಚೈತನ್ಯ ಧಾಮ" ದ ಮುಂದೆ ನಿಂತಿತು. ಅವಳು ಕಾರಿನಿಂದ ಆತುರವಾಗಿ ಇಳಿದಳು. "ಇಂದಿರಾ ನಿಧಾನ" ತಂದೆಯ ಮಾತು ಮುಗಿಯುವ ಮುನ್ನವೇ ಅನಾಥಾಶ್ರಮದಲ್ಲಿ ನುಗ್ಗಿದಳು. ನಾಲ್ಕು ವರ್ಷಗಳಲ್ಲಿ ಅವಳು ತಿರುಗಿದ ಅನಾಥಾಶ್ರಮಗಳು ಏಷ್ಟೊ. ಅಂದು ಒಂದು ಸ್ವಷ್ಟ ಸುಳಿವಿನ ಆಧಾರದ ಮೇಲೆ ತುಂಬು ನಂಬಿಕೆ ಯಿಂದ ಶಿವಮೊಗ್ಗದಿಂದ ಬೆಂಗಳೊರಿಗೆ ಬಂದಿದ್ದಳು. ಶಾರದಮ್ಮ ಅವಳನ್ನು ಕುಳಿತುಕೊಳ್ಳಲು ಹೇಳಿ ಮಕ್ಕಳನ್ನು ಕರೆದು ತರಲು ಆಯಗೆ ಹೇಳಿದಳು. ಅವಳ ಕಣ್ಣು ಬಾಗಿಲ ಕಡೆಗೆ ಇತ್ತು. ಮನಸ್ಸು "ಅಕ್ಷಯ" "ಅಕ್ಷಯ" ಎಂದು ಚೀರುತ್ತಿತ್ತು. ಇಂದಿರಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸತ್ತವನ ಶಿಕಾಯತ್ತುಗಳು : ಪ್ರಸಾದ್ ಕೆ.

  1977 ರ ದಿನಗಳು ಇಪ್ಪತ್ತೆರಡರ ಯುವಕನೊಬ್ಬನಿಗೆ ಬ್ಯಾಂಕಿನಿಂದ ಲೋನ್ ಬೇಕಾಗಿತ್ತು. ಲೋನ್ ಅಂದಾಗ ಕಾಗದ ಪತ್ರಗಳ ಅವಶ್ಯಕತೆ, ಓಡಾಟ ಎಲ್ಲವೂ ಸಹಜವೇ ಅನ್ನಿ. ಆಗಿನ ಕಾಲದಲ್ಲಿ ಈಗಿನಂತೆ ಕರೆದು ಸಾಲ ಕೊಡುತ್ತಿರಲಿಲ್ಲವೋ ಏನೋ! ಇರಲಿ, ವಿಷಯಕ್ಕೆ ಬರೋಣ. ಸೋ ಈ ನಮ್ಮ ಬಡಪಾಯಿ ಯುವಕ ಆ ಸರ್ಟಿಫಿಕೇಟು, ಈ ಸರ್ಟಿಫಿಕೇಟು ಅಂತ ಕಾಗದ ಪತ್ರಗಳನ್ನು ಲಗುಬಗೆಯಿಂದ ಹೊಂದಿಸುತ್ತಲೇ ಇದ್ದ. ಬಹುತೇಕ ಎಲ್ಲಾ ಮುಗಿದ ನಂತರ ತನ್ನ ಗುರುತು ಪ್ರಮಾಣಪತ್ರದ ಸಲುವಾಗಿ ಆತ ರೆವೆನ್ಯೂ ಆಫೀಸಿನ ಬಾಗಿಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾಡಿಗೆ ಮನೆ: ಗುಂಡುರಾವ್ ದೇಸಾಯಿ

                                                     ಒಂದು ಕಾಲ ಇತ್ತು. ನೌಕರದಾರರಿಗೆ ಅಂದ್ರ ಭಾರಿ ಮರ್ಯಾದೆ. ಅದರಲ್ಲಿ ಶಿಕ್ಷಕರಿಗಂತೂ ಮನೆ-ಗಿನೆನ ಪ್ರತಿಫಲಾಕ್ಷೆ ಇಲ್ಲದೆ  ಕೊಡೋರು. ಊರಾಗ ಹೊಸದಾಗಿ ನೌಕರದಾರರು ವರ್ಗವಾಗಿ ಬಂದರ ಅಂದ್ರ ಸಾಕು ಎಷ್ಟು ಇಂತಿಜಾಮ್ ಮಾಡೋರು. `ನಮ್ಮ ಮನಿಗೆ ಬರ್ರೀ, ಇಲ್ಲ ನಮ್ಮನಿಗೆ ಬರ್ರೀ’ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಂದಿನ ಫಲಿತಾಂಶವೇ ಕೊನೆಯಲ್ಲಾ: ಮಲ್ಲೇಶ ಮುಕ್ಕಣ್ಣವರ

ಅವತ್ತು ನನ್ನ ಹತ್ತನೇ ತರಗತಿಯ ಫಲಿತಾಂಶ  ಬಂದ ದಿನ. ಒಂದು ಕಡೆ ಬರುವ ಫಲಿತಾಂಶದ ಕುರಿತು ಇನ್ನಿಲ್ಲದ ಆತಂಕ. ಮತ್ತೊಂದೆಡೆ ಸ್ಕೂಲ್ ಲೈಪ್‍ಗೆ ಬೈ ಹೇಳಿ ಕಾಲೇಜ ಮೆಟ್ಟಿಲು ಏರುವ ಸಂತಸ. ಈ ಯಾವ ಭಾವಕ್ಕೂ ಸ್ಪಂದಿಸಿದೆ ಕೈ ಕಾಲುಗಳು ಅತ್ತಿಂದಿತ್ತ ತೂರಾಡುತ್ತಿದ್ದರೆ. ಮನದ ತುಂಬಾ ಅದ್ಯಾವದು ಭಯ ಆವರಿಸಿತ್ತು.  ಅದೇ ಹೆದರಿಕೆಯಲ್ಲಿ ಫಲಿತಾಂಶವನ್ನು ನೋಡಿದೆ. ಅಷ್ಟೊಂದು ಹೇಳಿಕೊಳ್ಳುವ ಮಾಕ್ರ್ಸ ಪಡಿಯದೆಯಿದ್ದರು. ನನ್ನ ಪ್ರಯತ್ನಕ್ಕೆ ತಕ್ಕದಾದದ ಅಂಕಗಳು ಸಿಕ್ಕಿದ್ದವು. ಇದರ ಜೊತೆ ಫಸ್ಟ್ ಕ್ಲಾಸ್ ಎನ್ನುವ  ಸಮಾಧಾನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಒಲೆ ನಜ಼ರುದ್ದೀನ್‌ ತನ್ನ ಮನೆಯ ಅಂಗಳದಲ್ಲಿ ಒಲೆಯೊಂದನ್ನು ನಿರ್ಮಿಸಿದ. ತದನಂತರ ನೆರೆಹೊರೆಯವರನ್ನು ಕರೆದು ಅದನ್ನು ತೋರಿಸಿದ. ಅವರ ಪೈಕಿ ಒಬ್ಬ ಹೇಳಿದ, “ಒಲೆಯೇನೋ ಚೆನ್ನಾಗಿದೆ. ಉತ್ತರಾಭಿಮುಖವಾಗಿರುವುದರಿಂದ ಚಳಿಗಾಲದಲ್ಲಿ ಬೀಸುವ ಶೀತಗಾಳಿಗೆ ಬೆಂಕಿ ಬೇಗನೆ ನಂದಿ ಹೋಗುತ್ತದೆ.” ನಜ಼ರುದ್ದೀನ್‌ ಆ ಒಲೆಯನ್ನು ಕಿತ್ತುಹಾಕಿ ದಕ್ಷಿಣಾಭಿಮುಖವಾಗಿ ಇರುವ ಇನ್ನೊಂದು ಒಲೆಯನ್ನು ನಿರ್ಮಿಸಿದ. ತದನಂತರ ನೆರೆಹೊರೆಯವರನ್ನು ಕರೆದು ಅದನ್ನು ತೋರಿಸಿದ. ಅವರ ಪೈಕಿ ಒಬ್ಬ ಹೇಳಿದ, “ಒಲೆಯೇನೋ ಗಟ್ಟಿಮುಟ್ಟಾಗಿ ಬಲು ಚೆನ್ನಾಗಿದೆ. ಆದರೂ ದಕ್ಷಿಣಾಭಿಮುಖವಾಗಿರುವುದರಿಂದ ಒಂದು ನಿರ್ದಿಷ್ಟ ದಿಕ್ಕಿನಿಂದ ಗಾಳಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರಳೆಂಬ ಚಿನ್ನದ ಪುಡಿ: ಅಖಿಲೇಶ್ ಚಿಪ್ಪಳಿ

ಈ ಅಂಕಣವನ್ನು ನಿಯಮಿತವಾಗಿ ಓದುತ್ತಿರುವವರಿಗೆ ಈ ಹಿಂದೆ ಬರೆದ “ಕರಿಯನ ಕತೆ” ನೆನಪಿರಬಹುದು. ಅದೊಂದು ನಾಯಿಮರಿಯನ್ನು ತಂದು ಸಾಕಿದ್ದೆ. ಮನೆಯೆದುರಿನ ನುಣ್ಣನೆಯ ರಸ್ತೆಯಲ್ಲಿ ನಸುಕಿನ ಹೊತ್ತು ಅಕ್ರಮ ಮರಳು ಲಾರಿಗಳು ಅತ್ಯಂತ ವೇಗವಾಗಿ ಸಾಗುತ್ತವೆ. ಒಂದು ದಿನ ಮರಳಿನ ಲಾರಿಗೆ ಸಿಕ್ಕುವುದರಿಂದ ಸ್ವಲ್ಪದಲ್ಲಿ ಕರಿಯ ಪಾರಾದ. ಅವತ್ತೇ ಲೆಕ್ಕ ಹಾಕಿ, ಅನಂತಪುರದ ಒಬ್ಬರಿಗೆ ಕರಿಯನನ್ನು ದಾಟಿಸಿ ಬಂದೆ. ಲಾರಿ ಮಾಫಿಯಾ ಯಾವ ಪರಿ ಬೆಳೆದಿದೆಯೆಂದರೆ, ಅದರ ಲೆಕ್ಕಾಚಾರ, ಅನೈತಿಕ ಸಾಮಾನ್ಯರಿಗೆ ನಿಲುಕುವುದೇ ಇಲ್ಲ. ಬೆಂಗಳೂರಿನಲ್ಲಿ ಉಳುಮೆ ಮಾಡುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾವ್ಯಧಾರೆ ಬಿದಲೋಟಿ ರಂಗನಾಥ್, ಯಲ್ಲಪ್ಪ ಎಮ್ ಮರ್ಚೇಡ್, ಸಿಪಿಲೆನಂದಿನಿ

ಕಲ್ಲೆದೆಯ ಮೇಲೆ ಪ್ರೀತಿ ಕೊನರಿಸಿ ಕಲ್ಲೆದೆಯ ಮೇಲೆ  ಪ್ರೀತಿ ಕೊನರಿಸಿ ಹೋದ ಅವಳು ತಿರುಗಿ ನೋಡಿದ್ದು ಕಂಕುಳಲ್ಲಿ ಮಗು ಎತ್ತುಕೊಂಡು. ನೆನಪ ಮರೆಯಲು ಕುಡಿತದ ಬೆನ್ನೇರಲು ನಯಾ ಪೈಸಾ ಕಾಸಿರಲಿಲ್ಲ ದಿನಂಪ್ರತಿ ಸುಡುತ್ತಾ ಹೋದ ಅವಳ ನೆನಪಿಗೆ ಮುಲಾಮು ಹಚ್ಚಲು ಆಗಲಿಲ್ಲ ನೈಜತೆಯ ಹುಡುಕುತ್ತಾ ಹೋದೆ ಅವಳ ಪ್ರೀತಿಯ ಮೇಲೆ ಜಾತಿ ಎಂಬ ಬೆಂಕಿ ಉರಿದ ಹೊಗೆಯ ನಿಶಾನೆ ಇತ್ತು !! ಅವಾಗ್ಗಾಗಲೇ ನೆತ್ತಿಗೇರಿದ್ದ ಪ್ರೀತಿಗೆ ಬೆಂಕಿ ಆರಿಸುವ ನೀರಾಗಲು ಧೈರ್ಯಕ್ಕೆ ಕಣ್ಣು ಕಾಣುತ್ತಿರಲಿಲ್ಲ ಸೋಲಲೇ ಬೇಕಾಗಿತ್ತು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಲೇಖನಗಳು: ಹೆಚ್ ಎಸ್ ಅರುಣ್ ಕುಮಾರ್, ಅಭಿಷೇಕ್ ಪೈ

ಅವನು ಮತ್ತು ಅವಳು (ಸಣ್ಣ ಕಥೆ) ಸುಂದರ ಸಂಜೆಯಲ್ಲಿ ಸಮುದ್ರದ ತೀರದಲ್ಲಿ ಅವನು ಕುಳಿತಿದ್ದ. ಸುತ್ತಲೂ ಆಡುತ್ತಿದ್ದ ಮಕ್ಕಳು. ಕೈ ಕೈ ಹಿಡಿದು ನಡೆದಾಡುವ ಜೋಡಿಗಳು.ಅವನು ನೋಡುತ್ತಿದಂತೆ ಅವಳು ಸ್ವಲ್ಪ ದೂರದಲ್ಲಿ ಮರಳ ಮೇಲೆ ಬಟ್ಟೆ ಹಾಸಿ ಕುಳಿತಳು.ಮೊಬೈಲಿನಲ್ಲಿ ಏನೋನೋಡುತ್ತಿರುವಂತೆ ಅನಿಸುತ್ತಿತ್ತು.ತಟ್ಟನೆ ತಲೆ ಎತ್ತಿ ನೋಡಿದಳು.ಅವನು ಅವಳನ್ನೇ ನೋಡುತ್ತಿದ್ದ.ಇಬ್ಬರ ಮಖದಲ್ಲೂ ಮಂದಹಾಸ ಮೂಡಿತು.ಅವಳು ಮೆಲ್ಲನೆ ಹತ್ತಿರ ಬಂದು ಕುಳಿತಳು. "ಒಬ್ಬರೇ ಬಂದಿದ್ದೀರಾ ?" ಅವಳ ಪ್ರಶ್ನೆಗೆ ತಲೆಯಾಡಿಸಿದ. ಇಬ್ಬರ ಮಾತಿಗೂ ಕೊಂಡಿ ಸಿಕ್ಕಿತು. "ನೀವು ಕಥೆ ಕವನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಟ್ಟೂರ ಜಾತ್ರೆ ಮತ್ತು ಜಯಂತ: ಪಾರ್ಥಸಾರಥಿ ಎನ್

ಜಯಂತ ಅಮ್ಮನ ಕೈ ಹಿಡಿದು ನಡೆಯುತ್ತಿರುವಂತೆ ಸುತ್ತಲು ಕಾಣುತ್ತಿದ್ದ ರಂಗು ರಂಗು ಅವನ ಕಣ್ಣು ತುಂಬುತಿತ್ತು.  ಅಮ್ಮ, ಸರೋಜ ತನ್ನದೆ ರಸ್ತೆಯ ಅಕ್ಕಪಕ್ಕದ ಮನೆಯ ಗೆಳತಿಯರೊಡನೆ ಜಾತ್ರೆಯ  ಸಂಭ್ರಮ   ನೋಡಲು ಹೊರಟಾಗ ಜಯಂತನದೇ ಚಿಂತೆ ಸರೋಜಳಿಗೆ, ಮನೆಯಲ್ಲಿ ಬಿಟ್ಟು ಹೋಗುವಂತಿಲ್ಲ, ಕರೆದುಕೊಂಡು ಹೋಗುವಂತಿಲ್ಲ. ಅಂತಹ ವಯಸ್ಸು ಅವನದು. ಬೆಳೆಯುವ ವಯಸಿನ ಮಕ್ಕಳದೆ ಒಂದು ಸಮಸ್ಯೆ ಬಿಡಿ, ತೀರ ಚಿಕ್ಕ ಮಕ್ಕಳಾದರೆ ಅಮ್ಮಂದಿರು ಎತ್ತಿ ಸೊಂಟದ ಮೇಲೆ ಕೂಡಿಸಿಕೊಂಡು, ಆ ಕಡೆ ಈಕಡೆ ಎನ್ನುತ್ತ ಬಾರ ಬದಲಾಯಿಸುವಂತೆ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿಲ್ಲಿಸದಿರು ವನಮಾಲಿ ಕೊಳಲಗಾನವ..: ಅನುರಾಧ ಪಿ. ಸಾಮಗ

ಎಂದಿನಂಥದೇ ಒಂದು ಬೆಳಗು, ಸುಂದರ ಬೆಳಗು. ನಿನ್ನೆಯೊಡಲಿನೆಲ್ಲ ನೋವಿಗೂ ಮುಲಾಮಾಗಬಲ್ಲ ಮುದ್ದಿಸಿ ಎದ್ದೇಳಿಸುವ ಅಮ್ಮನ ನಗುಮುಖದಂಥ, ಅಪ್ಪನ ಮುಖದ ಆಶ್ವಾಸನೆಯಂಥ ಬೆಳ್ಳಂಬೆಳಗು.  ಯಮುನೆ ಹರಿಯುತ್ತಿದ್ದಾಳೆ ಮಂಜುಳಗಮನೆಯಾಗಿ; ಒಡಲಲ್ಲಿ ಮಾತ್ರ ಅತ್ಯುತ್ಸುಕತೆಯ ಉಬ್ಬರ, ಅದೇ ಪರಿಚಿತ ಸುಖದ ಭಾವ. ಎಂದಾಗಿತ್ತೋ ಈ ಅನುಭವ! ತಕ್ಷಣಕ್ಕೆ ನೆನಪಾಗದು, ಹೆಣ್ಣೊಡಲಿನ ಭರತವಿಳಿತಗಳೆಲ್ಲವನ್ನೂ ಸುಮ್ಮಸುಮ್ಮನೆ ಹೊರಗೆಡಹಿ ಉಕ್ಕಿ ಹರಿಯಬಿಡಲಾದೀತೇ, ಜನ ಏನಂದಾರು? ಹಾಗಾಗಿ ತೋರಗೊಡದೆ ಹೊರಗವಳದು ಅದೇ ಗಂಭೀರ ಹರಿವು, ಆದರೂ ಒಳಗಿನ ಅಲೆಗಳ ಏರಿಳಿತವದೆಷ್ಟು ಹೊತ್ತು ಬಚ್ಚಿಡಬಲ್ಲಳೋ ಆಕೆಗೇ ಗೊತ್ತಿಲ್ಲ. ದಡದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆನಪಾಗುವರು: ಶೈಲಜ ಮಂಚೇನಹಳ್ಳಿ

ಈ ಹಿಂದೆ ಸಂಕ್ರಾಂತಿಯ ಮುನ್ನಾದಿನ ನನ್ನ ಪುಟ್ಟ ಕಂಪ್ಯೂಟರ್ ಸೆಂಟರ್‍ಗೆ ಒಂದು ಪ್ರಿಂಟರನ್ನು ಕೊಂಡು ತರಲು ಎಸ್.ಪಿ. ರಸ್ತೆಗೆ ಹೋಗಿದ್ದೆ, ಜೊತೆಯಲ್ಲಿ ನನ್ನಕ್ಕನ ಕಿರಿ ಮಗನನ್ನು ಕರೆದುಕೊಂಡು ಹೋಗಿದ್ದೆ. ಹಲವಾರು ಅಂಗಡಿಗಳಲ್ಲಿ ಹಲವಾರು ಬಗೆಯ ಪ್ರಿಂಟರ್‍ಗಳನ್ನು ಅವುಗಳ ಗುಣ-ಲಕ್ಷಣಗಳನ್ನು, ಬೆಲೆಗಳನ್ನು ಕೇಳಿ ತಿಳಿದುಕೊಂಡು ಅಲ್ಲಿರುವ ಒಂದು ಕಾಂಪ್ಲೆಕ್ಸ್‍ನಲ್ಲಿದ್ದ ಕೆಲವು ಅಂಗಡಿಯಲ್ಲಿ ಕೆಲವು ಪ್ರಿಂಟರ್‍ಗಳನ್ನು ವಿಚಾರಿಸಿ ಕಡೆಗೆ ಒಂದು ಅಂಗಡಿಯಲ್ಲಿ, ನಾನು ತೆಗೆದುಕೊಳ್ಳಬೇಕೆಂದಿದ್ದ ಪ್ರಿಂಟರ್ ಮತ್ತು ಇನ್ನೂ ಹಲವಾರು ಬಗೆಯ ಪ್ರಿಂಟರ್‍ಗಳನ್ನು ಮಾಲೀಕ ಕುಳಿತುಕೊಳ್ಳುವ ಜಾಗವನ್ನು ಸುತ್ತುವರೆದು ಪಟ್ಟಿಯಂತಿದ್ದ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ