ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಜ಼ರುದ್ದೀನ್‌ ಹಣ್ಣುಗಳನ್ನು ಮಾರಿದ್ದು ಬೇಸಿಗೆಯಲ್ಲಿ ವಿಪರೀತ ಸೆಕೆ ಇದ್ದ ಒಂದು ದಿನ ನಜ಼ರುದ್ದೀನ್‌ ಹಣ್ಣುಗಳನ್ನು ಮಾರುತ್ತಿದ್ದ.  ಗಿರಾಕಿ: “ಒಂದು ಮಿಣಿಕೆ ಹಣ್ಣಿನ ಬೆಲೆ ಎಷ್ಟು?” ನಜ಼ರುದ್ದೀನ್‌: “ನಾಲ್ಕು ದಿನಾರ್‌ಗಳು.” ಗಿರಾಕಿ: “ಮಿತಿಮೀರಿದ ಬೆಲೆ ಹೇಳುತ್ತಿರುವೆ. ಅಷ್ಟು ಹೆಚ್ಚು ಬೆಲೆ ಹೇಗೆ ಕೇಳುತ್ತಿರುವೆ? ನಿನಗೇನು ನ್ಯಾಯ ನೀತಿ ಎಂಬುದೇ ಇಲ್ಲವೇ?” ನಜ಼ರುದ್ದೀನ್‌: “ಇಲ್ಲ. ನೀವು ಹೇಳುತ್ತಿರುವ ಯಾವ ಸರಕುಗಳೂ ನನ್ನ ಹತ್ತಿರ ದಾಸ್ತಾನು ಇಲ್ಲ!” ***** ೨. ನಜ಼ರುದ್ದೀನ್‌ನ ರೋಗಪೀಡಿತ ಕತ್ತೆ ತನ್ನ ರೋಗಪೀಡಿತ ಕತ್ತೆಯ ಹತ್ತಿರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವನಿಕ – ಐ ಮಿಸ್ ಯೂ: ಅಮರ್ ದೀಪ್ ಪಿ.ಎಸ್.

ಡಿಯರ್ ಅವನಿಕ, ನಿನಗಲ್ಲದೇ ನಾನ್ಯಾರಿಗೆ ಹೇಳಿಕೊಳ್ಳಲಿ,  ಈಗತಾನೇ ಎರೆಡೆರಡು ಅಪಘಾತವಾಗುವ ಕಂಟಕದಿಂದ ತಪ್ಪಿಸಿಕೊಂಡು ಬಂದು ಹೂಳು ತುಂಬಿದ ತುಂಗಭಧ್ರ ನದಿ ತಟದಲ್ಲಿ ಒಬ್ಬನೇ ಕೂತು ನಡುಗುತ್ತಿದ್ದೇನೆ. ಅದೇನಾಗಿತ್ತು ನಂಗೆ? ಬೈಕ್ ಓಡಿಸುವಾಗ ನಾನೆಂಥ “ಚಿತ್ತ”ದಲ್ಲಿದ್ದರೂ ಹದ ತಪ್ಪುತ್ತಿರಲಿಲ್ಲ.  ಯಾವ ಯೋಚನೆಯಲ್ಲಿ ಬೈಕ್ ಓಡಿಸುತ್ತಿದ್ದೆನೋ? ಎರಡು ಕ್ಷಣ ಮೈಮರೆತಿದ್ದರೆ ಟಿಪ್ಪರ್ ಗಾಡಿಯ ಗಾಲಿಗೆ  ಅಂಟಿಕೊಳ್ಳುತ್ತಿದ್ದೆ. ಯಾರಿಗಾದ್ರೂ ಫೋನ್ ಮಾಡಿ ಹೇಳಿಕೊಳ್ಲಾ ಅಂದರೆ ಮತ್ತೆ ನನಗೇ ಬೈಗುಳ.  ನಿನಗೊಬ್ಬಳಿಗೆ ಸುಮ್ಮನೇ ಮೆಸೇಜ್ ಕುಟ್ಟಿ ಮೊಬೈಲ್ ಜೇಬಲ್ಲಿಟ್ಟುಕೊಂಡೆ.  ಹೆದ್ದಾರಿಯಲ್ಲಿ ಈಗತಾನೇ ಕಣ್ಣುಬಿಟ್ಟುಕೊಂಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಲ ಸಂಕಷ್ಟ: ಅಖಿಲೇಶ್ ಚಿಪ್ಪಳಿ

ಮನುಷ್ಯನನ್ನು ಸುಸ್ತು ಮಾಡಲು ಯಾವುದಾದರೂ ಒಂದು ಕಾಯಿಲೆ ಸಾಕು. ಅದೇ ಮಾರಣಾಂತಿಕ ಕಾಯಿಲೆಗಳಾದ ಕ್ಯಾನ್ಸರ್-ಏಡ್ಸ್ ಎಲ್ಲಾ ಒಟ್ಟೊಟ್ಟಿಗೆ ಅಮರಿಕೊಂಡರೆ ಏನಾಗಬಹುದು. ಯಾವ ಡಾಕ್ಟರ್ ಕೂಡಾ ಚಿಕಿತ್ಸೆ ನೀಡಿ ಬದುಕಿಸಲು ಸಾಧ್ಯವಿಲ್ಲದಂತೆ ಆಗುತ್ತದೆ. ಈ ಭೂಮಿಯ ಮೇಲೆ ನೀರಿನ ವಿಚಾರದಲ್ಲೂ ಇದೇ ಆಗಿದೆ. ಅತ್ತ ಎಲ್‍ನಿನೋ ಪೀಡನೆಯಾದರೆ, ಇತ್ತ ಮನುಷ್ಯರೇ ಸ್ವತ: ಹವಾಮಾನ ವೈಪರೀತ್ಯವೆಂಬ ಭೂತವನ್ನು ಮೈಮೇಲೆ ಎಳೆದುಕೊಂಡದ್ದು. ಎಲ್‍ನಿನೋ ಪ್ರಭಾವ ಪ್ರಪಂಚದ ಎಲ್ಲಾ ಭಾಗದಲ್ಲೂ ತನ್ನ ಪರಿಣಾಮವನ್ನು ಬೀರದೇ ಇದ್ದರೂ, ಹವಾಮಾನ ವೈಪರೀತ್ಯ ನಿಶ್ಚಿತವಾಗಿ ಇಡೀ ಜಗತ್ತನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನಸಲ್ಲಿ ಕಂಡವಳು!: ಎಸ್.ಜಿ.ಶಿವಶಂಕರ್

                   `ನೋ…ಇದು ಸಾಧ್ಯವಿಲ್ಲ!' ಕಪಿಲನ ದನಿ ನಡುಗುತ್ತಿತ್ತು!  ಮಿದುಳಿಗೆ ಒಮ್ಮೆಲೇ ರಕ್ತ ಪ್ರವಾಹದಂತೆ ನುಗ್ಗಿ ಕಿವಿಗಳು ಗುಂಯ್ ಎಂದವು! ಎದುರು ಕುಳಿತಿದ್ದ ಆ ಅಪ್ರತಿಮ ಸುಂದರಿಯನ್ನು ಕಂಡು ಕಪಿಲ ಬೆದರಿ, ಬೆವರಿಬಿಟ್ಟಿದ್ದ! ಮೇರೆ ಮೀರಿದ ಅಚ್ಚರಿ, ಅನುಮಾನ, ಸಂತೋಷ  ಎಲ್ಲವೂ ಏಕ ಕಾಲದಲ್ಲಿ ಆಗಿದ್ದವು! ಜೊತೆಗೆ ಆಕೆ ತನ್ನ ಸಂಗಾತಿಯಾಗಲಿರುವಳು ಎಂಬ ಅನಿವರ್ಚನೀಯ ಆನಂದ ಬೇರೆ! `ಎಸ್.. ಇಟ್ ಇಸ್ ರಿಯಲ್! ಯಾವುದೂ ಅಸಾಧ್ಯವಲ್ಲ!' ಅಂಕುರನದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎರಡು ಕವಿತೆಗಳು: ನಾ”ನಲ್ಲ”, ವಿನಾಯಕ ಅರಳಸುರಳಿ

ಬಾಳ ದಾರಿಯಲಿ ಬಂದು ಹೋಗುವವರಾರು, ಕೈ ಹಿಡಿದು ಜೊತೆಗೂಡಿ ಮುಂದೆ ಸಾಗುವವರಾರು, ಬರುವೆನೆಂದವರೀಗ ಬಿಟ್ಟು ಹೋಗುತಿರಲು, ಮನದಿ ಮುಡಿತು ಪ್ರಶ್ನೆ "ಇಲ್ಲಿ ನನ್ನವರಾರು?" ಪ್ರಾಣ ಪಣವಿಟ್ಟು ನಾ ಹೋರಾಡುತಿರುವಾಗ, ಜನರ ನಿಯಮಕ್ಕೆಂದೂ ಎದೆಗುಂದದಿರುವಾಗ, ನನ್ನನು ತೊರೆದು ಹೋಗುವವರನು ನೋಡಿ, ಮತ್ತೆ ಮುಡಿತು ಪ್ರಶ್ನೆ "ಇಲ್ಲಿ ನನ್ನವರಾರು?" ಮನಸೊಂದು ಬಯಸುವುದು ಅಪರಾಧವೇನಲ್ಲ, ಬಯಸಿದ್ದು ಪಡೆಯುವುದು ಹುಡುಗಾಟವೂ ಅಲ್ಲ, ಬಯಸಿ ಪಡೆದವರಿಂದು ಕೇಳುತಿಹರು ನನ್ನನ್ನು, "ಜೊತೆಯಾಗಿ ಉಳಿಯೋಕೆ ನೀನು ನನಗ್ಯಾರು?" ಕಣ್ಣಂಚಿನ ಹನಿ ಕೇಳು, ತುಟಿಯಂಚಿನ ನಗು ಕೇಳು, ಮರೆಯಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೋಲಾರಮ್ಮ ದೇವಸ್ಥಾನ: ಪ್ರಶಸ್ತಿ ಪಿ.

ಕರ್ನಾಟಕದಲ್ಲಿನ ಪುರಾತನ ದೇವಾಲಯಗಳಲ್ಲಿ ಹೆಚ್ಚಿರುವುದು ಹೊಯ್ಸಳರ ದೇಗುಲಗಳು. ಅವುಗಳಿಗಿಂತಲೂ ಹಿಂದಿನ ದೇಗುಲಗಳು ಅಂದರೆ ನೆನಪಾಗೋದು ಚೋಳರ ಕಾಲದ್ದು ಮತ್ತು ಅದಕ್ಕಿಂತಲೂ ಹಿಂದೆ ಅಂದರೆ ಕದಂಬರ, ಗಂಗರ ಕಾಲದ ಅಳಿದುಳಿದ ದೇಗುಲಗಳು. ಕೋಲಾರದಲ್ಲಿ ೧೦೧೨ರಲ್ಲಿ ಕಟ್ಟಿಸಲಾದ ದೇವಸ್ಥಾನವೊಂದಿದೆ, ಇನ್ನೂ ಒಳ್ಳೆಯ ಸ್ಥಿತಿಯಲ್ಲಿಯೇ ಇದೆಯೆಂಬ ಸುದ್ದಿ ಕೇಳಿದಾಗ ಅಲ್ಲಿಗೆ ಹೋಗದಿರಲಾಗಲಿಲ್ಲ. ಆ ದೇಗುಲವೇ ಕೋಲಾರಕ್ಕೆ ಇಂದಿನ ಹೆಸರು ಬರಲು ಕಾರಣವಾದ ಕೋಲಾರಮ್ಮ ದೇವಸ್ಥಾನ.  ಇತಿಹಾಸ: ಮೂರನೇ ಶತಮಾನದ ಶುರುವಿನಿಂದಲೂ ಕೂವಲಾಲಪುರ(ಇಂದಿನ ಕೋಲಾರವು) ಗಂಗರ ಆಳ್ವಿಕೆಗೆ ಒಳಪಟ್ಟಿತ್ತು ಎಂದು ಶಾಸನಗಳು ತಿಳಿಸುತ್ತದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಜ಼ರುದ್ದೀನ್‌ ಒಂದು ಹೊತ್ತಿನ ಊಟ ತಯಾರಿಸಲು ಸಹಾಯ ಮಾಡುವುದು ಮಾಂಸ, ಅಕ್ಕಿ ಹಾಗು ತರಕಾರಿ ಉಪಯೋಗಿಸಿ ಒಂದು ಹೊತ್ತಿನ ಊಟ ತಯಾರಿಸಲು ಅಗತ್ಯವಾದ ಸಾಮಗ್ರಿಗಳನ್ನು ನಜ಼ರುದ್ದೀನ್‌ ಹಾಗು ಅವನ ಗೆಳೆಯ ಕೊಂಡುತಂದರು. ಗೆಳೆಯ: “ನಜ಼ರುದ್ದೀನ್‌ ನೀನು ಅನ್ನ ಮಾಡು ನಾನು ತರಕಾರಿಗಳನ್ನು ಬೇಯಿಸುತ್ತೇನೆ.” ನಜ಼ರುದ್ದೀನ್‌: “ನಿಜ ಹೇಳುವುದಾದರೆ ಅನ್ನ ಮಾಡುವುದು ಹೇಗೆಂಬುದರ ಕುರಿತು ನನಗೇನೂ ಗೊತ್ತಿಲ್ಲ.” ಗೆಳೆಯ: “ಸರಿ ಹಾಗಾದರೆ, ನೀನು ತರಕಾರಿ ಕತ್ತರಿಸು ನಾನು ಅನ್ನ ಮಾಡುತ್ತೇನೆ.” ನಜ಼ರುದ್ದೀನ್‌: “ನಿಜ ಹೇಳುವುದಾದರೆ ನನಗೆ ತರಕಾರಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಾಯಿಯ ಮನಸ್ಸು: ಹೆಚ್ ಎಸ್ ಅರುಣ್ ಕುಮಾರ್

ಕಾರು "ಚೈತನ್ಯ ಧಾಮ" ದ ಮುಂದೆ ನಿಂತಿತು. ಅವಳು ಕಾರಿನಿಂದ ಆತುರವಾಗಿ ಇಳಿದಳು. "ಇಂದಿರಾ ನಿಧಾನ" ತಂದೆಯ ಮಾತು ಮುಗಿಯುವ ಮುನ್ನವೇ ಅನಾಥಾಶ್ರಮದಲ್ಲಿ ನುಗ್ಗಿದಳು. ನಾಲ್ಕು ವರ್ಷಗಳಲ್ಲಿ ಅವಳು ತಿರುಗಿದ ಅನಾಥಾಶ್ರಮಗಳು ಏಷ್ಟೊ. ಅಂದು ಒಂದು ಸ್ವಷ್ಟ ಸುಳಿವಿನ ಆಧಾರದ ಮೇಲೆ ತುಂಬು ನಂಬಿಕೆ ಯಿಂದ ಶಿವಮೊಗ್ಗದಿಂದ ಬೆಂಗಳೊರಿಗೆ ಬಂದಿದ್ದಳು. ಶಾರದಮ್ಮ ಅವಳನ್ನು ಕುಳಿತುಕೊಳ್ಳಲು ಹೇಳಿ ಮಕ್ಕಳನ್ನು ಕರೆದು ತರಲು ಆಯಗೆ ಹೇಳಿದಳು. ಅವಳ ಕಣ್ಣು ಬಾಗಿಲ ಕಡೆಗೆ ಇತ್ತು. ಮನಸ್ಸು "ಅಕ್ಷಯ" "ಅಕ್ಷಯ" ಎಂದು ಚೀರುತ್ತಿತ್ತು. ಇಂದಿರಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸತ್ತವನ ಶಿಕಾಯತ್ತುಗಳು : ಪ್ರಸಾದ್ ಕೆ.

  1977 ರ ದಿನಗಳು ಇಪ್ಪತ್ತೆರಡರ ಯುವಕನೊಬ್ಬನಿಗೆ ಬ್ಯಾಂಕಿನಿಂದ ಲೋನ್ ಬೇಕಾಗಿತ್ತು. ಲೋನ್ ಅಂದಾಗ ಕಾಗದ ಪತ್ರಗಳ ಅವಶ್ಯಕತೆ, ಓಡಾಟ ಎಲ್ಲವೂ ಸಹಜವೇ ಅನ್ನಿ. ಆಗಿನ ಕಾಲದಲ್ಲಿ ಈಗಿನಂತೆ ಕರೆದು ಸಾಲ ಕೊಡುತ್ತಿರಲಿಲ್ಲವೋ ಏನೋ! ಇರಲಿ, ವಿಷಯಕ್ಕೆ ಬರೋಣ. ಸೋ ಈ ನಮ್ಮ ಬಡಪಾಯಿ ಯುವಕ ಆ ಸರ್ಟಿಫಿಕೇಟು, ಈ ಸರ್ಟಿಫಿಕೇಟು ಅಂತ ಕಾಗದ ಪತ್ರಗಳನ್ನು ಲಗುಬಗೆಯಿಂದ ಹೊಂದಿಸುತ್ತಲೇ ಇದ್ದ. ಬಹುತೇಕ ಎಲ್ಲಾ ಮುಗಿದ ನಂತರ ತನ್ನ ಗುರುತು ಪ್ರಮಾಣಪತ್ರದ ಸಲುವಾಗಿ ಆತ ರೆವೆನ್ಯೂ ಆಫೀಸಿನ ಬಾಗಿಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾಡಿಗೆ ಮನೆ: ಗುಂಡುರಾವ್ ದೇಸಾಯಿ

                                                     ಒಂದು ಕಾಲ ಇತ್ತು. ನೌಕರದಾರರಿಗೆ ಅಂದ್ರ ಭಾರಿ ಮರ್ಯಾದೆ. ಅದರಲ್ಲಿ ಶಿಕ್ಷಕರಿಗಂತೂ ಮನೆ-ಗಿನೆನ ಪ್ರತಿಫಲಾಕ್ಷೆ ಇಲ್ಲದೆ  ಕೊಡೋರು. ಊರಾಗ ಹೊಸದಾಗಿ ನೌಕರದಾರರು ವರ್ಗವಾಗಿ ಬಂದರ ಅಂದ್ರ ಸಾಕು ಎಷ್ಟು ಇಂತಿಜಾಮ್ ಮಾಡೋರು. `ನಮ್ಮ ಮನಿಗೆ ಬರ್ರೀ, ಇಲ್ಲ ನಮ್ಮನಿಗೆ ಬರ್ರೀ’ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಂದಿನ ಫಲಿತಾಂಶವೇ ಕೊನೆಯಲ್ಲಾ: ಮಲ್ಲೇಶ ಮುಕ್ಕಣ್ಣವರ

ಅವತ್ತು ನನ್ನ ಹತ್ತನೇ ತರಗತಿಯ ಫಲಿತಾಂಶ  ಬಂದ ದಿನ. ಒಂದು ಕಡೆ ಬರುವ ಫಲಿತಾಂಶದ ಕುರಿತು ಇನ್ನಿಲ್ಲದ ಆತಂಕ. ಮತ್ತೊಂದೆಡೆ ಸ್ಕೂಲ್ ಲೈಪ್‍ಗೆ ಬೈ ಹೇಳಿ ಕಾಲೇಜ ಮೆಟ್ಟಿಲು ಏರುವ ಸಂತಸ. ಈ ಯಾವ ಭಾವಕ್ಕೂ ಸ್ಪಂದಿಸಿದೆ ಕೈ ಕಾಲುಗಳು ಅತ್ತಿಂದಿತ್ತ ತೂರಾಡುತ್ತಿದ್ದರೆ. ಮನದ ತುಂಬಾ ಅದ್ಯಾವದು ಭಯ ಆವರಿಸಿತ್ತು.  ಅದೇ ಹೆದರಿಕೆಯಲ್ಲಿ ಫಲಿತಾಂಶವನ್ನು ನೋಡಿದೆ. ಅಷ್ಟೊಂದು ಹೇಳಿಕೊಳ್ಳುವ ಮಾಕ್ರ್ಸ ಪಡಿಯದೆಯಿದ್ದರು. ನನ್ನ ಪ್ರಯತ್ನಕ್ಕೆ ತಕ್ಕದಾದದ ಅಂಕಗಳು ಸಿಕ್ಕಿದ್ದವು. ಇದರ ಜೊತೆ ಫಸ್ಟ್ ಕ್ಲಾಸ್ ಎನ್ನುವ  ಸಮಾಧಾನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಒಲೆ ನಜ಼ರುದ್ದೀನ್‌ ತನ್ನ ಮನೆಯ ಅಂಗಳದಲ್ಲಿ ಒಲೆಯೊಂದನ್ನು ನಿರ್ಮಿಸಿದ. ತದನಂತರ ನೆರೆಹೊರೆಯವರನ್ನು ಕರೆದು ಅದನ್ನು ತೋರಿಸಿದ. ಅವರ ಪೈಕಿ ಒಬ್ಬ ಹೇಳಿದ, “ಒಲೆಯೇನೋ ಚೆನ್ನಾಗಿದೆ. ಉತ್ತರಾಭಿಮುಖವಾಗಿರುವುದರಿಂದ ಚಳಿಗಾಲದಲ್ಲಿ ಬೀಸುವ ಶೀತಗಾಳಿಗೆ ಬೆಂಕಿ ಬೇಗನೆ ನಂದಿ ಹೋಗುತ್ತದೆ.” ನಜ಼ರುದ್ದೀನ್‌ ಆ ಒಲೆಯನ್ನು ಕಿತ್ತುಹಾಕಿ ದಕ್ಷಿಣಾಭಿಮುಖವಾಗಿ ಇರುವ ಇನ್ನೊಂದು ಒಲೆಯನ್ನು ನಿರ್ಮಿಸಿದ. ತದನಂತರ ನೆರೆಹೊರೆಯವರನ್ನು ಕರೆದು ಅದನ್ನು ತೋರಿಸಿದ. ಅವರ ಪೈಕಿ ಒಬ್ಬ ಹೇಳಿದ, “ಒಲೆಯೇನೋ ಗಟ್ಟಿಮುಟ್ಟಾಗಿ ಬಲು ಚೆನ್ನಾಗಿದೆ. ಆದರೂ ದಕ್ಷಿಣಾಭಿಮುಖವಾಗಿರುವುದರಿಂದ ಒಂದು ನಿರ್ದಿಷ್ಟ ದಿಕ್ಕಿನಿಂದ ಗಾಳಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರಳೆಂಬ ಚಿನ್ನದ ಪುಡಿ: ಅಖಿಲೇಶ್ ಚಿಪ್ಪಳಿ

ಈ ಅಂಕಣವನ್ನು ನಿಯಮಿತವಾಗಿ ಓದುತ್ತಿರುವವರಿಗೆ ಈ ಹಿಂದೆ ಬರೆದ “ಕರಿಯನ ಕತೆ” ನೆನಪಿರಬಹುದು. ಅದೊಂದು ನಾಯಿಮರಿಯನ್ನು ತಂದು ಸಾಕಿದ್ದೆ. ಮನೆಯೆದುರಿನ ನುಣ್ಣನೆಯ ರಸ್ತೆಯಲ್ಲಿ ನಸುಕಿನ ಹೊತ್ತು ಅಕ್ರಮ ಮರಳು ಲಾರಿಗಳು ಅತ್ಯಂತ ವೇಗವಾಗಿ ಸಾಗುತ್ತವೆ. ಒಂದು ದಿನ ಮರಳಿನ ಲಾರಿಗೆ ಸಿಕ್ಕುವುದರಿಂದ ಸ್ವಲ್ಪದಲ್ಲಿ ಕರಿಯ ಪಾರಾದ. ಅವತ್ತೇ ಲೆಕ್ಕ ಹಾಕಿ, ಅನಂತಪುರದ ಒಬ್ಬರಿಗೆ ಕರಿಯನನ್ನು ದಾಟಿಸಿ ಬಂದೆ. ಲಾರಿ ಮಾಫಿಯಾ ಯಾವ ಪರಿ ಬೆಳೆದಿದೆಯೆಂದರೆ, ಅದರ ಲೆಕ್ಕಾಚಾರ, ಅನೈತಿಕ ಸಾಮಾನ್ಯರಿಗೆ ನಿಲುಕುವುದೇ ಇಲ್ಲ. ಬೆಂಗಳೂರಿನಲ್ಲಿ ಉಳುಮೆ ಮಾಡುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾವ್ಯಧಾರೆ ಬಿದಲೋಟಿ ರಂಗನಾಥ್, ಯಲ್ಲಪ್ಪ ಎಮ್ ಮರ್ಚೇಡ್, ಸಿಪಿಲೆನಂದಿನಿ

ಕಲ್ಲೆದೆಯ ಮೇಲೆ ಪ್ರೀತಿ ಕೊನರಿಸಿ ಕಲ್ಲೆದೆಯ ಮೇಲೆ  ಪ್ರೀತಿ ಕೊನರಿಸಿ ಹೋದ ಅವಳು ತಿರುಗಿ ನೋಡಿದ್ದು ಕಂಕುಳಲ್ಲಿ ಮಗು ಎತ್ತುಕೊಂಡು. ನೆನಪ ಮರೆಯಲು ಕುಡಿತದ ಬೆನ್ನೇರಲು ನಯಾ ಪೈಸಾ ಕಾಸಿರಲಿಲ್ಲ ದಿನಂಪ್ರತಿ ಸುಡುತ್ತಾ ಹೋದ ಅವಳ ನೆನಪಿಗೆ ಮುಲಾಮು ಹಚ್ಚಲು ಆಗಲಿಲ್ಲ ನೈಜತೆಯ ಹುಡುಕುತ್ತಾ ಹೋದೆ ಅವಳ ಪ್ರೀತಿಯ ಮೇಲೆ ಜಾತಿ ಎಂಬ ಬೆಂಕಿ ಉರಿದ ಹೊಗೆಯ ನಿಶಾನೆ ಇತ್ತು !! ಅವಾಗ್ಗಾಗಲೇ ನೆತ್ತಿಗೇರಿದ್ದ ಪ್ರೀತಿಗೆ ಬೆಂಕಿ ಆರಿಸುವ ನೀರಾಗಲು ಧೈರ್ಯಕ್ಕೆ ಕಣ್ಣು ಕಾಣುತ್ತಿರಲಿಲ್ಲ ಸೋಲಲೇ ಬೇಕಾಗಿತ್ತು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಲೇಖನಗಳು: ಹೆಚ್ ಎಸ್ ಅರುಣ್ ಕುಮಾರ್, ಅಭಿಷೇಕ್ ಪೈ

ಅವನು ಮತ್ತು ಅವಳು (ಸಣ್ಣ ಕಥೆ) ಸುಂದರ ಸಂಜೆಯಲ್ಲಿ ಸಮುದ್ರದ ತೀರದಲ್ಲಿ ಅವನು ಕುಳಿತಿದ್ದ. ಸುತ್ತಲೂ ಆಡುತ್ತಿದ್ದ ಮಕ್ಕಳು. ಕೈ ಕೈ ಹಿಡಿದು ನಡೆದಾಡುವ ಜೋಡಿಗಳು.ಅವನು ನೋಡುತ್ತಿದಂತೆ ಅವಳು ಸ್ವಲ್ಪ ದೂರದಲ್ಲಿ ಮರಳ ಮೇಲೆ ಬಟ್ಟೆ ಹಾಸಿ ಕುಳಿತಳು.ಮೊಬೈಲಿನಲ್ಲಿ ಏನೋನೋಡುತ್ತಿರುವಂತೆ ಅನಿಸುತ್ತಿತ್ತು.ತಟ್ಟನೆ ತಲೆ ಎತ್ತಿ ನೋಡಿದಳು.ಅವನು ಅವಳನ್ನೇ ನೋಡುತ್ತಿದ್ದ.ಇಬ್ಬರ ಮಖದಲ್ಲೂ ಮಂದಹಾಸ ಮೂಡಿತು.ಅವಳು ಮೆಲ್ಲನೆ ಹತ್ತಿರ ಬಂದು ಕುಳಿತಳು. "ಒಬ್ಬರೇ ಬಂದಿದ್ದೀರಾ ?" ಅವಳ ಪ್ರಶ್ನೆಗೆ ತಲೆಯಾಡಿಸಿದ. ಇಬ್ಬರ ಮಾತಿಗೂ ಕೊಂಡಿ ಸಿಕ್ಕಿತು. "ನೀವು ಕಥೆ ಕವನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಟ್ಟೂರ ಜಾತ್ರೆ ಮತ್ತು ಜಯಂತ: ಪಾರ್ಥಸಾರಥಿ ಎನ್

ಜಯಂತ ಅಮ್ಮನ ಕೈ ಹಿಡಿದು ನಡೆಯುತ್ತಿರುವಂತೆ ಸುತ್ತಲು ಕಾಣುತ್ತಿದ್ದ ರಂಗು ರಂಗು ಅವನ ಕಣ್ಣು ತುಂಬುತಿತ್ತು.  ಅಮ್ಮ, ಸರೋಜ ತನ್ನದೆ ರಸ್ತೆಯ ಅಕ್ಕಪಕ್ಕದ ಮನೆಯ ಗೆಳತಿಯರೊಡನೆ ಜಾತ್ರೆಯ  ಸಂಭ್ರಮ   ನೋಡಲು ಹೊರಟಾಗ ಜಯಂತನದೇ ಚಿಂತೆ ಸರೋಜಳಿಗೆ, ಮನೆಯಲ್ಲಿ ಬಿಟ್ಟು ಹೋಗುವಂತಿಲ್ಲ, ಕರೆದುಕೊಂಡು ಹೋಗುವಂತಿಲ್ಲ. ಅಂತಹ ವಯಸ್ಸು ಅವನದು. ಬೆಳೆಯುವ ವಯಸಿನ ಮಕ್ಕಳದೆ ಒಂದು ಸಮಸ್ಯೆ ಬಿಡಿ, ತೀರ ಚಿಕ್ಕ ಮಕ್ಕಳಾದರೆ ಅಮ್ಮಂದಿರು ಎತ್ತಿ ಸೊಂಟದ ಮೇಲೆ ಕೂಡಿಸಿಕೊಂಡು, ಆ ಕಡೆ ಈಕಡೆ ಎನ್ನುತ್ತ ಬಾರ ಬದಲಾಯಿಸುವಂತೆ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿಲ್ಲಿಸದಿರು ವನಮಾಲಿ ಕೊಳಲಗಾನವ..: ಅನುರಾಧ ಪಿ. ಸಾಮಗ

ಎಂದಿನಂಥದೇ ಒಂದು ಬೆಳಗು, ಸುಂದರ ಬೆಳಗು. ನಿನ್ನೆಯೊಡಲಿನೆಲ್ಲ ನೋವಿಗೂ ಮುಲಾಮಾಗಬಲ್ಲ ಮುದ್ದಿಸಿ ಎದ್ದೇಳಿಸುವ ಅಮ್ಮನ ನಗುಮುಖದಂಥ, ಅಪ್ಪನ ಮುಖದ ಆಶ್ವಾಸನೆಯಂಥ ಬೆಳ್ಳಂಬೆಳಗು.  ಯಮುನೆ ಹರಿಯುತ್ತಿದ್ದಾಳೆ ಮಂಜುಳಗಮನೆಯಾಗಿ; ಒಡಲಲ್ಲಿ ಮಾತ್ರ ಅತ್ಯುತ್ಸುಕತೆಯ ಉಬ್ಬರ, ಅದೇ ಪರಿಚಿತ ಸುಖದ ಭಾವ. ಎಂದಾಗಿತ್ತೋ ಈ ಅನುಭವ! ತಕ್ಷಣಕ್ಕೆ ನೆನಪಾಗದು, ಹೆಣ್ಣೊಡಲಿನ ಭರತವಿಳಿತಗಳೆಲ್ಲವನ್ನೂ ಸುಮ್ಮಸುಮ್ಮನೆ ಹೊರಗೆಡಹಿ ಉಕ್ಕಿ ಹರಿಯಬಿಡಲಾದೀತೇ, ಜನ ಏನಂದಾರು? ಹಾಗಾಗಿ ತೋರಗೊಡದೆ ಹೊರಗವಳದು ಅದೇ ಗಂಭೀರ ಹರಿವು, ಆದರೂ ಒಳಗಿನ ಅಲೆಗಳ ಏರಿಳಿತವದೆಷ್ಟು ಹೊತ್ತು ಬಚ್ಚಿಡಬಲ್ಲಳೋ ಆಕೆಗೇ ಗೊತ್ತಿಲ್ಲ. ದಡದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆನಪಾಗುವರು: ಶೈಲಜ ಮಂಚೇನಹಳ್ಳಿ

ಈ ಹಿಂದೆ ಸಂಕ್ರಾಂತಿಯ ಮುನ್ನಾದಿನ ನನ್ನ ಪುಟ್ಟ ಕಂಪ್ಯೂಟರ್ ಸೆಂಟರ್‍ಗೆ ಒಂದು ಪ್ರಿಂಟರನ್ನು ಕೊಂಡು ತರಲು ಎಸ್.ಪಿ. ರಸ್ತೆಗೆ ಹೋಗಿದ್ದೆ, ಜೊತೆಯಲ್ಲಿ ನನ್ನಕ್ಕನ ಕಿರಿ ಮಗನನ್ನು ಕರೆದುಕೊಂಡು ಹೋಗಿದ್ದೆ. ಹಲವಾರು ಅಂಗಡಿಗಳಲ್ಲಿ ಹಲವಾರು ಬಗೆಯ ಪ್ರಿಂಟರ್‍ಗಳನ್ನು ಅವುಗಳ ಗುಣ-ಲಕ್ಷಣಗಳನ್ನು, ಬೆಲೆಗಳನ್ನು ಕೇಳಿ ತಿಳಿದುಕೊಂಡು ಅಲ್ಲಿರುವ ಒಂದು ಕಾಂಪ್ಲೆಕ್ಸ್‍ನಲ್ಲಿದ್ದ ಕೆಲವು ಅಂಗಡಿಯಲ್ಲಿ ಕೆಲವು ಪ್ರಿಂಟರ್‍ಗಳನ್ನು ವಿಚಾರಿಸಿ ಕಡೆಗೆ ಒಂದು ಅಂಗಡಿಯಲ್ಲಿ, ನಾನು ತೆಗೆದುಕೊಳ್ಳಬೇಕೆಂದಿದ್ದ ಪ್ರಿಂಟರ್ ಮತ್ತು ಇನ್ನೂ ಹಲವಾರು ಬಗೆಯ ಪ್ರಿಂಟರ್‍ಗಳನ್ನು ಮಾಲೀಕ ಕುಳಿತುಕೊಳ್ಳುವ ಜಾಗವನ್ನು ಸುತ್ತುವರೆದು ಪಟ್ಟಿಯಂತಿದ್ದ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುಬ್ಬೀ ಮದುವೆ: ಕೃಷ್ಣವೇಣಿ ಕಿದೂರ್

   ಮಗಳನ್ನು  ಕರೆದುಕೊಂಡು  ರೈಲು  ಹತ್ತಿದ್ದ  ಭಟ್ಟರು  ಪ್ರಯಾಣದ ಉದ್ದಕ್ಕೂ  ಸುಬ್ಬಿ ಹತ್ತಿರ  ಒಂದೇಒಂದು  ಮಾತನ್ನೂ ಆಡಲಿಲ್ಲ.  ಅಪ್ಪನ  ದೂರ್ವಾಸಾವತಾರಕ್ಕೆ ಹೆದರಿ ಕೈಕಾಲು ಬಿಟ್ಟಿದ್ದ  ಅವಳು  ತೆಪ್ಪಗೆ  ಕುಸುಕುಸು  ಮಾಡುತ್ತ   ಮುಖ  ಊದಿಸಿಕೊಂಡೇ  ಕೂತಳು. ಎರ್ನಾಕುಲಂ   ನಿಲ್ದಾಣ  ಹತ್ತಿರವಾಗಿ ಇನ್ನೇನು  ಇಳಿಯುವ  ಹೊತ್ತು ಬಂತು ಅನ್ನುವಾಗ  ಭಟ್ಟರು  ಕೆಂಗಣ್ಣು  ಬಿಟ್ಟು  ಮಗಳತ್ತ  ದುರುಗುಟ್ಟಿದರು.                         " ಬಾಯಿ ಮುಚ್ಚಿಕೊಂಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾದಿದೆ ಈ ಮನ ಪ್ರಮೋಷನ್ ಗಾಗಿ: ಚೈತ್ರ ಎಸ್.ಪಿ.

ಎಂದಿಗೂ ವೈವಾಹಿಕ ಜೀವನದ ಕನಸು ಕಂಡವಳಲ್ಲ. ಇಂದು ಕಂಡೆ. ಒಬ್ಬ ಪರಿಪೂರ್ಣ ಮಹಿಳೆಯಾಗಿ ನಾನು ನನ್ನ ಪೂರ್ಣ ಪೂರ್ಣವಾಗಿ ತನ್ನ ಜೀವನವನ್ನು ಸಂತೊಷದಿಂದ ಕಳೆಯುವ ಕನಸ ಕಂಡೆ. ಸಣ್ಣ ಸಣ್ಣ ಕನಸುಗಳು. ಅದು ನಸುಕಿನ ಮಂಜಿನಲ್ಲಿ ಅವನ ಬಿಟ್ಟೇಳಲು ಮನಸ್ಸಿಲ್ಲದಿದ್ದರೂ ತಬ್ಬಿದ ಅವನ ಕೈಯನ್ನು ಬಿಡಿಸಿ ಅವನ ಕಾಲುಗಳಿಗೊಂದು ಸಿಹಿ ಮುತ್ತಿಟ್ಟು ದಿನದ ಕೆಲಸ ಪ್ರಾರಂಭ ಮಾಡುವುದೇ ಅಗಿರಬಹುದು. ಮಾತೃ ಸಮಾನವಾಗಿ ನೋಡುವ ನನ್ನ ಪ್ರೀತಿಯ ಗೋವುಗಳ ಸೇವೆಗೆ ಅವನು ಕೊಟ್ಟ ಪ್ರೋತ್ಸಾಹಕ್ಕೆ ಪ್ರತಿಯಾಗಿ ನಾ ಅವುಗಳೊಂದಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೇಮಖೈದಿ-೩: ಅಭಿಸಾರಿಕೆ

ಇಲ್ಲಿಯವರೆಗೆ ಹೀಗೆ ಯೋಚಿಸುತ್ತಿದ್ದ ವಿಶ್ವನಿಗೆ ಸಮಯವಾಗಿದ್ದೆ ತಿಳಿಯಲಿಲ್ಲ, ಈ ಮಧ್ಯೆ ನರ್ಸ್ ಬಂದು ಎರಡು ಬಾರಿ ಡ್ರಿಪ್ಸ್ ಬದಲಾಯಿಸಿ ಹೋಗಿದ್ದಳು. ವಿಶ್ವ ಬೆಳಗ್ಗೆ ಸ್ಪಂದನ ಕೊಟ್ಟ ಮೊಬೈಲ್ ತೆಗೆಯಲು ಪ್ರಯತ್ನಿಸಿದ, ತುಂಬಾ ಕಷ್ಟವಾಯಿತು ಕೈಗಳಿಗೆ ಆದರೂ ತೆಗೆದು ಸಮಯ ನೋಡಿದ, ಸಂಜೆ ಐದಾಗಿತ್ತು ಸ್ಪಂದನ ಬರಬಹುದೆಂದು ಕಾದು ಕುಳಿತ, ಅವಳ ಸುಳಿವಿರಲಿಲ್ಲ, ಆರಕ್ಕೆ ವಿಶ್ವನಿಗೆ ಕರೆ ಮಾಡಿದ ಸ್ಪಂದನ ತನಗೆ ತುಂಬಾ ಕೆಲಸವಿರುವುದಾಗಿಯೂ ತಾನಿಂದು ಬರುವುದಿಲ್ಲವೆಂದು ಹೇಳಿದಳು, "ನಿನ್ನ ಸ್ನೇಹಿತ ಪ್ರಕಾಶ್ ಫೋನ್ ಮಾಡಿದ್ದರು ಬೆಳಿಗ್ಗೆ ನಿನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೋಹಪುರವೆಂಬ ಸಾಮಾಜಿಕ ಮಾಯೆ: ಕೆ.ಎಂ.ವಿಶ್ವನಾಥ ಮರತೂರ.

  ಪುಸ್ತಕದ ಹೆಸರು : “ಮೋಹಪುರ”                                          ಪ್ರಕಾರ : ಕಾದಂಬರಿ ಪ್ರಕಾಶಕರು : ಕನ್ನಡ ನಾಡು ಪ್ರಕಾಶನ              ಬೆಲೆ : ರೂ.90            ಪುಟಗಳು : 88 ಪ್ರಕಟಣೆಯ ವರ್ಷ : 2015   … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು ಕು.ಸ.ಮಧುಸೂದನರಂಗೇನಹಳ್ಳಿ, ಅನಿತಾ ಕೆ.ಗೌಡ, ರಾಜೇಶ್ವರಿ ಎಂ.ಸಿ.

ಅದೊಂದು ರಾಜ್ಯದಲ್ಲಿ! ಅಷ್ಟೆತ್ತರದ ಅರಮನೆ ಅಂಬರ ಮುಟ್ಟುವ ಕಳಸಗೋಪುರಗಳು ಸುತ್ತೇಳು ಕೋಟೆ ಗೋಡೆಗಳ ಮೇಲೆ ಫಿರಂಗಿಗಳ  ಹಿಂಡು ಸುತ್ತ ಶಸ್ತ್ರಸಜ್ಜಿತ ಸೈನಿಕರ ದಂಡು ಅಲ್ಲಲ್ಲಿ ವಿಶಾಲ ದೇವಳಗಳು ಸಾಹಿತ್ಯ ಸಂಗೀತ ಸಭಾಭವನಗಳು ಮೀಟಿದರೆ ನಾದ ಹೊಮ್ಮಿಸುವ ತಂತಿವಾದ್ಯಗಳು! ಕಲ್ಯಾಣಮಹೋತ್ಸವಕ್ಕಾಗಿ ಕಟ್ಟಿಸಿದಷ್ಟಗಲದ ಛತ್ರಗಳು ಕಸದ ತೊಟ್ಟಯ ಸುತ್ತ ಕಂತ್ರಿನಾಯಿಗಳು ತಲೆ ಹಿಡಿಯಲು ಗಿರಾಕಿಯನುಡುಕಿ ಹೊರಟ ಛತ್ರಿಗಳು ಬರೆದಿಟ್ಟ ಬೊಗಳೆ ಗ್ರಂಥಗಳು ಆಳುವ ಅರಸರು ಅವರ ಹೆಂಡಂದಿರು ಹೆಂಡಂದಿರ ಮಿಂಡರು ಮನೆಹಾಳು ವಂದಿಮಾಗದಿಗರಿಗಾಗಿ ಕಟ್ಟಿಸಿದ ಮಹಲುಗಳು ಅದರೊಳಗಿನವರ ತೆವಲುಗಳು ಐದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಡು(ವ) ಕಟ್ಟುವ ಕತೆ!! ಭಾಗ-7: ಅಖಿಲೇಶ್ ಚಿಪ್ಪಳಿ

ತುಡುಗು ದನಗಳ ಕಾಟವನ್ನು ತಡೆಯಲು ಬೇರಾವುದೇ ಉಪಾಯ ಕಾಣಲಿಲ್ಲ. ಇಡೀ ದಿನ ಕಾಯುವುದಂತೂ ಸಾಧ್ಯವಿಲ್ಲ. ನೀರಿನ ಅಭಾವದಿಂದ ಸಾಯುತ್ತಿರುವ ಗಿಡಗಳನ್ನು ಉಳಿಸುವುದು ಹೇಗೆ ಎಂಬುದೇ ಪ್ರಶ್ನೆ. ಬಾವಿಯನ್ನೋ, ಕೊಳವೆ ಬಾವಿಯನ್ನೋ ತೆಗೆಸಲು ತಕ್ಷಣದಲ್ಲಿ ಸಾಧ್ಯವಿಲ್ಲ. ನೀರಿನ ಅಭಾವಕ್ಕೆ ಮೊಟ್ಟಮೊದಲಿಗೆ ಬಲಿಯಾಗುತ್ತಿರುವುದು ಊರಹೊನ್ನೆಯೆಂಬ ಗಿಡಗಳು. ಇವುಗಳನ್ನು ಹೊನ್ನಾವರ-ಕುಮುಟದ ಕಡೆಯಿಂದ ತರಿಸಿದ್ದೆ. ಮೊದಲ ವರ್ಷ ನೀರು ಬೇಡುವ ಸಸ್ಯಗಳವು. ನೀರನ್ನು ಕೊಡದಿದ್ದರೆ ಊರಹೊನ್ನೆ ಗಿಡಗಳು ಬದುಕಲಾರವು. ಈಗ ನೆರೆಯವರಿಗೆ ಕೊಂಚ ಹೊರೆಯಾದರೆ ಹೇಗೆ ಎಂಬ ಯೋಚನೆಯೊಂದು ಬಂತು. ಪಕ್ಕದ ಆಶ್ರಮದವರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾಲ: ಪ್ರಶಸ್ತಿ ಪಿ.

ಆಗಾಗ ಒಳಸೇರೋ ಶುದ್ಧ ನೀರು ಖುಷಿ ಕೊಡುತ್ತೆ, ಆರೋಗ್ಯವನ್ನೂ. ಆದ್ರೆ ಆ ನೀರೊಳಗೇ ನಾವು ಸೇರಿದ್ರೆ ? ಕಚ್ಚೋ ಸೊಳ್ಳೆಯ ಸಾವಾಗೋ ಚಪ್ಪಾಳೆ ಹಿತವೀಯುತ್ತೆ. ಆದ್ರೆ ಸಾವೇ ಚಪ್ಪಾಳೆ ಹೊಡೆದು ನಮ್ಮ ಕರೆದ್ರೆ ? ಓದೋ ಕಥೆಯೊಂದು ಖುಷಿ ಕೊಡುತ್ತೆ. ಆದ್ರೆ ಅದೇ ಜಾಲವಾಗಿ ನಮ್ಮ ಸೆಳೆದ್ರೆ ?  ಊರಲ್ಲೊಂದು ಹೊಸ ಅಂಗಡಿ. ಹೆಸರು ಊರಾಗಿದ್ರೂ ಅದು ಹಳ್ಳಿಯೇನಲ್ಲ.ಹಂಗಂತ ಮಹಾನಗರಿಯೂ ಅಲ್ಲ. ಸಾವಿರದ ಸುಮಾರಿಗೆ ಜನರಿದ್ದ ಜಾಗವದು. ಅಲ್ಲಿನ ಜನಕ್ಕೆ ಅಂಗಡಿಗಳು ಹೊಸದಲ್ಲದಿದ್ದರೂ ತಮ್ಮೂರಿಗೆ ಪುಸ್ತಕದಂಗಡಿಯೊಂದು ಬಂದಿದ್ದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಕುದುರೆ ವ್ಯಾಪಾರಿ ಮಾರುಕಟ್ಟೆಯಲ್ಲಿ ಕುದುರೆ ವ್ಯಾಪಾರಿಯೊಬ್ಬ ತಾನು ಮಾರುತ್ತಿದ್ದ ಕುದುರೆಯ ಗುಣಗಾನ ಮಾಡುತ್ತಿದ್ದದ್ದನ್ನು ಕೇಳುತ್ತಾ ನಿಂತಿದ್ದ ನಜ಼ರುದ್ದೀನ್‌. “ಇಡೀ ಹಳ್ಳಿಯಲ್ಲಿ ಇರುವ ಕುದುರೆಗಳ ಪೈಕಿ ಅತ್ಯಂತ ಉತ್ಕೃಷ್ಟವಾದ್ದು ಇದು. ಇದು ಮಿಂಚಿನ ವೇಗದಲ್ಲಿ ಓಡುತ್ತದೆ. ಎಷ್ಟುಹೊತ್ತು ಓಡಿದರೂ ಸುಸ್ತಾಗುವುದೇ ಇಲ್ಲ. ನಿಜ ಹೇಳಬೇಕೆಂದರೆ, ಈಗ ನೀವು ಈ ಕುದುರೆಯನ್ನೇರಿ ಇಲ್ಲಿಂದ ಹೊರಟರೆ ಬೆಳಗ್ಗೆ ೫ ಗಂಟೆಯ ವೇಳೆಗೆ ಸಮರ್‌ಕಂಡ್‌ನಲ್ಲಿ ಇರುತ್ತೀರಿ.” ತಕ್ಷಣ ನಜ಼ರುದ್ದೀನ್‌ ಪ್ರತಿಕ್ರಿಯಿಸಿದ: “ಅಯ್ಯೋ ದೇವರೇ! ಅಷ್ಟು ಬೆಳಗಿನ ಜಾವ ಸಮರ್‌ಕಂಡ್‌ ಸೇರಿ ಮಾಡಬೇಕಾದದ್ದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಲಿ ಪಡಸಾಲಿ: ತಿರುಪತಿ ಭಂಗಿ

ನಾನು ಕೆಲಸವಿಲ್ಲದೆ ಅಲೆದಾಡುತ್ತಿದ್ದೆ. ಆದ್ರೆ ಯಾರೂ ನನಗೆ ನಿರುದ್ಯೋಗಿ ಅಂದಿರಲಿಲ್ಲ.ಪಾಪ..! ನಮ್ಮೂರ ಜನರು ನನ್ನ ಮೇಲೆ ತುಂಬಾ ಪ್ರೀತಿ ಇಟ್ಟುಕೊಂಡಿದ್ದರು. ನಮ್ಮ ಅಪ್ಪನಿಗಂತೂ  ಒಬ್ಬನೆ ಮಗಾ. ಹಿಂಗಾಗಿ ನಾ ಮಾಡಿದ್ದೆ ಮಾರ್ಗ ಎಂದು ನನ್ನ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ನಾನು ನಾಲ್ಕು ಸಾರಿ ಹತ್ತನೇ ತರಗತಿ ಪೇಲಾದರೂ ನನ್ನ ಅಪ್ಪ ಮಗಾ ಮನಸಿಗೆ ಬೇಜಾರ ಮಾಡ್ಕೊಂಡಿತು ಎಂದು ತಿಳಿದು “ಮಗನೇ ನಿನ್ನ ಪಾಸ ಮಾಡಿದ್ರೆ ಎಲ್ಲಿ ನೀ ಡಿ.ಸಿ ಅಕ್ಕಿ ಅನ್ನೋ ಹೊಟ್ಟೆ ಕಿಚ್ಚು ಆ ಮಾಸ್ತರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ