ಇದೀಗ ನಮ್ಮದೇ ಕಥೆ .. : ಅನಿತಾ ನರೇಶ್ ಮಂಚಿ

                                   ಒಲೆಯ ಮೇಲೆ ಹಾಲು ಬಿಸಿಯಾಗುತ್ತಿತ್ತು. ಪಕ್ಕದ ಒಲೆಯಲ್ಲಿ ಸಿಡಿಯುತ್ತಿದ್ದ ಒಗ್ಗರಣೆಯಿಂದ  ಸಾಸಿವೆ ಕಾಳೊಂದು ಟಪ್ಪನೆ  ಸಿಡಿದು  ಹಾಲಿನ ಪಾತ್ರೆಯೊಳಗೆ ಬಿದ್ದಿತು..  ನೆಂಟರು ಬರುತ್ತಾರೆಂದೇ ಹೆಚ್ಚು ಹಾಲು ತರಿಸಿದ್ದೆ. ಒಗ್ಗರಣೆಯ ಸಾಸಿವೆಯಿಂದಾಗಿ ಬಿಸಿ ಹಾಲು ಒಡೆದರೆ..  ಚಮಚದಿಂದ ಮೆಲ್ಲನೆ ತೆಗೆಯೋಣ ಎಂದುಕೊಂಡೆ. ಸ್ವಲ್ಪ ಮೊದಲಷ್ಟೇ ಅದೇ ಚಮಚದಲ್ಲಿ ನಿಂಬೆಹಣ್ಣಿನ ಶರಬತ್ತಿನಲ್ಲಿದ್ದ ಬೀಜಗಳನ್ನು ಎತ್ತಿ ಬಿಸುಡಿದ್ದೆ.  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

’ಕಪ್ಪು ಹಣ’ವೆಂಬ ಮಾಯಾಮೃಗದ ದರ್ಬಾರು…?: ವಿಜಯಕುಮಾರ ಎಮ್. ಕುಟಕನಕೇರಿ

ನಮ್ಮ ದೇಶದ ಆಡಳಿತ ವ್ಯವಸ್ಥೆಯು ಬೇಲಿಯೇ ಎದ್ದು ಹೊಲವನ್ನು ಮೇಯ್ದ ಹಾಗಿದೆ. ದೇಶದ ಪ್ರಜೆಗಳು ರಾಜಕೀಯ ಅಥವಾ ಯಾವುದೇ ಮೇಲ್ದರ್ಜೆಯ ಸರ್ಕಾರಿ ಹುದ್ದೆಯನ್ನು ಪಡೆದುಕೊಂಡ ತಕ್ಷಣ ಅಧಿಕಾರದ ಚುಕ್ಕಾಣಿ ಹಿಡಿದು, ಇಡಿ ಆಡಳಿತ ವ್ಯವಸ್ಥೆಯನ್ನೆ ತಮ್ಮ ಕಪಿ ಮುಷ್ಟಿಯಲ್ಲಿರಿಸಿಕೊಳ್ಳುವ ಸ್ವಾರ್ಥತೆ ಬೆಳೆಯುತ್ತಿದೆ. ಇದರ ಬೆನ್ನಲ್ಲೆ ಅಧಿಕಾರವನ್ನು ಹಿಡಿಯಲು ಕಾರಣೀಕರ್ತರಾದ ಜನತೆಗೆ ಕಡೆಗಣನೆಯ ಶಾಪ ತಟ್ಟುತ್ತಿದೆ. ಸಮಾಜದಲ್ಲಿ, ಭ್ರಷ್ಟ ಅಧಿಕಾರದ ದಬ್ಬಾಳಿಕೆಯಲ್ಲಿ ಭ್ರಷ್ಟಾಚಾರದ ಪರಮಾಧಿಕಾರ ತಲೆಯೆತ್ತಿ, ಅಭಿವೃದ್ಧಿಯ ಹೆಸರಿನಲ್ಲಿ ಪ್ರಜೆಗಳ ಹಿತಾಸಕ್ತಿಗೆ ಮುಸುಕು ಮೆತ್ತಿಕೊಳ್ಳುತ್ತಿದೆ. ದೇಶದ ಪ್ರಜೆಗಳಿಂದ ಅಕ್ರಮವಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವನ ಪತ್ರ: ಪ್ರಾಣ್

ಹೇಗೆ ಕರೆಯಲಿ ಎಂದು ತಿಳಿಯದೆ ಹಾಗೆ ಶುರು ಮಾಡ್ತಾ ಇದ್ದೀನಿ. ಎಂದಿನಂತೆ 'ಮುದ್ದು' ಎಂದು ಕರೆಯೋಣ ಅಂದ್ಕೊಂಡೆ, ಅದ್ಯಾಕೋ ಹಾಗೆ ಕರೆಯಬೇಕು ಅನಿಸಲಿಲ್ಲ.  ಹೊರಡುವಿಕೆಯ ಹೊಸ್ತಿಲ ಬಳಿ  ನಿಂತು ಹಿಂತಿರುಗಿ ನಿನ್ನ ನೋಡಿ, ಹೇಳಲು ನಿಂತರೆ ಮತ್ತೆ ಹೋಗಬೇಕು ಅನಿಸೋದಿಲ್ಲ ! ಅದಕ್ಕೆ ಹಿಂದಕ್ಕೆ ತಿರುಗಿ ನೋಡದೆ ಹೊರಟಿದ್ದೀನಿ . ಆದರು ಹೊರಡುವ ಮುನ್ನ ನಿನಗೆ ಹೇಳದೆ ಹೋಗಬೇಕು ಅಂತ ಕೂಡ ಅನಿಸಲಿಲ್ಲ. ಬಹುಶಃ ಒಂದ್ಹತ್ತು ವರುಷವಾಗಿದೆಯಲ್ಲವೇ ನಮ್ಮಿಬ್ಬರ ಪರಿಚಯವಾಗಿ !? ಪರಿಚಯ ಗೆಳೆತನವಾಗಿ, ಗೆಳೆತನ ಅಭಿಮಾನವಾಗಿ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರಾಮಕುಂಜದಿಂದ ರಾಷ್ಟ್ರ ಪ್ರಶಸ್ತಿಯವರೆಗೆ: ಹೊರಾ.ಪರಮೇಶ್ ಹೊಡೇನೂರು

(ನಾರಾಯಣ ಭಟ್ ಶಿಕ್ಷಕರ ಯಶೋಗಾಥೆ) ************************* ಪ್ರತಿಯೊಬ್ಬರ ಬದುಕಿನಲ್ಲಿ ಪ್ರಭಾವ ಬೀರುವ ವ್ಯಕ್ತಿಗಳಲ್ಲಿ ತಾಯಿ ತಂದೆಯರದ್ದು ಒಂದು ರೀತಿಯದಾದರೆ, ಗುರುವಿನದ್ದು ಮತ್ತೊಂದು ಬಗೆಯದ್ದಾಗಿರುತ್ತದೆ. ಹೆತ್ತವರು ದೈಹಿಕ ಮತಾತು ಮಾನಸಿಕ ಸದೃಢತೆ ಸುರಕ್ಷತೆ ಮತ್ತು ಪೋಷಣೆಯ ಹೊಣೆ ನಿರ್ವಹಿಸಿದರೆ ಗುರುವು ಬೌದ್ಧಿಕ ಜ್ಞಾನ, ಅಕ್ಷರಾಭ್ಯಾಸದ ಜೊತೆಗೆ ಬದುಕಿಗೆ ಬೇಖಾದ ಮಾರ್ಗದರ್ಶನವನ್ನು ಒದಗಿಸುತ್ತಾರೆ. ಹಾಗಾಗಿಯೇ ಗುರುವಿನ ಸ್ಥಾನವು ಸಹಜವಾಗಿ ಸಮಾಜದಿಂದ ಗೌರವಕ್ಕೆ ಪಾತ್ರವಾಗುತ್ತದೆ. ಸ್ಥಾನ ಮಾತ್ರದಿಂದಲೇ ಗೌರವ ಪಡೆಯುವುದು ಒಂದು ರೀತಿಯದಾದರೆ, ವೃತ್ತಿ ನಿರ್ವಹಣಿಯ ವೈಖರಿಯಿಂದಲೂ ನಿಸ್ಪೃಹ ನಡತೆಯಿಂದಲೂ ಗುರುವಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವರದಾಮೂಲ: ಪ್ರಶಸ್ತಿ

ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಚಿತ್ರಗಳ ಮಾಹಿತಿ ಕಲೆಹಾಕಿ ಅದನ್ನು ವಿಕಿಪೀಡಿಯಾದಲ್ಲಿ ಎಲ್ಲರಿಗೂ ತಲುಪುವಂತೆ ದಾಖಲಿಸೋ ಒಂದು ಕಾರ್ಯಕ್ರಮ ವಿಕಿಪೀಡಿಯಾ ಫೋಟೋವಾಕ್.ಸಾಗರದಲ್ಲಿ ಈ ಕಾರ್ಯಕ್ರಮವನ್ನು ಮಾಡಬೇಕೆಂದುಕೊಂಡಾಗ ನಾವು ಅದನ್ನು ಶುರುಮಾಡಿದ್ದು ವರದಾಮೂಲದಿಂದ. ವರದಾಮೂಲವೆನ್ನೋ ಸ್ಥಳದ ಬಗ್ಗೆ ಸಾಗರದ ಸುತ್ತಮುತ್ತಲಿನವರಿಗೆ ಹೊಸದಾಗಿ ಹೇಳೋ ಅವಶ್ಯಕತೆಯಿಲ್ಲದಿದ್ದರೂ ಈ ಭಾರಿಯ ಭೇಟಿಯಲ್ಲಿ ಸಿಕ್ಕ ಒಂದಿಷ್ಟು ಆಸಕ್ತಿಕರ ಮಾಹಿತಿಯನ್ನು ಹಂಚಿಕೊಳ್ಳಲೇಬೇಕೆಂಬ ಹಂಬಲ ಹುಟ್ಟಿದ್ದು ಸಹಜ. ಅದರ ಫಲವೇ ಈ ಲೇಖನ.  ಹೋಗೋದು ಹೇಗೆ ?  ವರದಾಮೂಲಕ್ಕೆ ಸಾಗರದಿಂದ ೬ ಕಿ.ಮೀ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ವೇಗ ಹೆಚ್ಚಿದಷ್ಟೂ — ಮುಲ್ಲಾ ನಜ಼ರುದ್ದೀನ್‌ ತನ್ನ ತೋಟದಲ್ಲಿ ಯಾವುದೋ ಬೀಜ ಬಿತ್ತನೆ ಮಾಡುತ್ತಿದ್ದ. ಬಿತ್ತನೆ ಮಾಡುತ್ತಾ ಮುಂದೆಮುಂದೆ ಹೋದಂತೆ ಬೀತ್ತನೆ ಮಾಡುವ ವೇಗ ಹೆಚ್ಚುತ್ತಿದ್ದದ್ದನ್ನು ಅವನ ಹೆಂಡತಿ ನೋಡಿ ಹೇಳಿದಳು, “ಮುಲ್ಲಾ, ಅದೇಕೆ ಅಷ್ಟು ವೇಗವಾಗಿ ಬೀಜಗಳನ್ನು ಎರಚುತ್ತಿರುವೆ? ನಿಧಾನವಾಗಿ ಜಾಗರೂಕತೆಯಿಂದ ಬೀಜ ಬಿತ್ತುವುದು ಒಳ್ಳೆಯದಲ್ಲವೇ?” ನಜ಼ರುದ್ದೀನ್‌ ಹೇಳಿದ, “ಸಾಧ್ಯವಿಲ್ಲ. ಏಕೆಂದರೆ ಇನ್ನು ಹೆಚ್ಚು ಬೀಜ ಉಳಿದಿಲ್ಲ. ಅದು ಮುಗಿಯುವುದರೊಳಗಾಗಿ ಬಿತ್ತನೆ ಕೆಲಸ ಮುಗಿಸಬೇಕಾಗಿದೆ!” ***** ೨. ಅಂದುಕೊಳ್ಳುವಿಕೆಗಳು ಖ್ಯಾತ ಮುಲ್ಲಾ ನಜ಼ರುದ್ದೀನನನ್ನು ಒಬ್ಬಾತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 88): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು ೧.    ಕಲ್ಯಾಣ ಚಾಲುಕ್ಯರ ವಿಕ್ರಮಾದಿತ್ಯ ಆರಂಭಿಸಿದ ಹೊಸ ಕಾಲಗಣನೆ ಯಾವುದು? ೨.    ಯು.ಎನ್.ಐ ನ ವಿಸ್ತೃತ ರೂಪವೇನು? ೩.    ನ್ಯಾಷನಲ್ ಜಿಯೋಫಿಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಎಲ್ಲಿದೆ? ೪.    ಸಾವಿರ ಸರೋವರಗಳ ನಾಡು ಎಂದು ಯಾವುದನ್ನು ಕರೆಯುತ್ತಾರೆ? ೫.    ’ಬುಲ್ಸ್’ ’ಬೇರ್ಸ್’ ಎಂಬ ಪದಗಳು ಯಾವ ಉದ್ಯಮಕ್ಕೆ ಸಂಬಂಧಿಸಿವೆ? ೬.    ಅರ್ಥಶಾಸ್ತ್ರವು ಮಾನವ ಜೀವನದ ದೈನಂದಿನ ವ್ಯವಹಾರಗಳನ್ನು ಕುರಿತು ಅಧ್ಯಯನವಾಗಿದೆ. ಈ ವ್ಯಾಖ್ಯೆ ನೀಡಿದವರು ಯಾರು? ೭.    ಭಾರತೀಯ ದ್ವಿದಳ ಧಾನ್ಯ ಸಂಶೋಧನಾ ಸಂಸ್ಥೆ ಎಲ್ಲಿದೆ? ೮.   … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪುಣ್ಯಕೋಟಿ-ಜಾನಪದ ಕಥನ ನಾಟಕ ಪ್ರದರ್ಶನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಮೈಸೂರು ಸರ್ಕಾರಿ ಪ್ರೌಢಶಾಲಾ, ಕುಕ್ಕರಹಳ್ಳಿ ಮೈಸೂರು ಸರ್ವೋದಯ ದಿನಾಚರಣೆ ಉಪನ್ಯಾಸ ಮತ್ತು ನಾಟಕ ಪ್ರದರ್ಶನ  ನಮ್ಮೊಂದಿಗೆ ಶ್ರೀ ಎಂ.ಕೆ.ಬೋರೇಗೌಡ ನಿವೃತ್ತ ಮುಖ್ಯ ಶಿಕ್ಷಕರು      ಶ್ರೀ ಎನ್.ಎಸ್.ಗೋಪಿನಾಥ್ ಮಾಜಿ ಸಿಂಡಿಕೇಟ್ ಸದಸ್ಯರು,ಮೈಸೂರು ವಿಶ್ವವಿದ್ಯಾಲಯ ಮಕ್ಕಳು ಅಭಿನಯಿಸುವ ಜಾನಪದ ಕಥನ ಪುಣ್ಯಕೋಟಿ ಪರಿಕಲ್ಪನೆ ಮತ್ತು ವಿನ್ಯಾಸ :ಜೀವನ್ ಹೆಗ್ಗೋಡು ವಸ್ತ್ರ ವಿನ್ಯಾಸ : ಶೀಲಾ.ಎಸ್  ಪರಿಕರ ಮತ್ತು ಪ್ರಸಾಧನ : ಮಂಜು ಕಾಚಕ್ಕಿ ನಿರ್ದೇಶನ : ದೀಪಕ್ ಮೈಸೂರು ದಿನಾಂಕ : 30.01.16 … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾವ್ಯಧಾರೆ: ಕು.ಸ.ಮಧುಸೂದನ ರಂಗೇನಹಳ್ಳಿ, ಮಂಗಳ.ಎನ್, ಬಿದಲೋಟಿ ರಂಗನಾಥ್, ಅರುಣ್ ಅಲೆಮಾರಿ

ಹೂ-ನದಿ ಮುಂಜಾನೆಯರಳಿ ಸಂಜೆಗೆ  ಬಾಡುವ ಹೂವು ಶಾಶ್ವತವಲ್ಲದಿದ್ದರೂ ಬಾಡುವ ಮುಂಚೆ ಸೇರುವುದು ತಾಯಂದಿರ ಮುಡಿಯ ದೇವರ ಗುಡಿಯ ಮಳೆಗಾಲದಿ ಉಕ್ಕಿ ಬೇಸಿಗೆಯಲಿ ಬತ್ತಿ ಹರಿಯುವ ನದಿ ನಿರಂತರವಲ್ಲದಿದ್ದರೂ ಬತ್ತುವ ಮುಂಚೆ ತೊಳೆಯುವುದು ನಮ್ಮ ಕೊಳೆಗಳ ಬೆಳೆಯುವುದು ಜೀವಿಗಳಿಗೆ ಬೆಳೆಗಳ! ಧ್ಯಾನದ ಕೊನೆಗೆ! ಮೌನದಲ್ಲಿ ಧ್ಯಾನಸ್ಥನಾಗಿದ್ದ ಬುದ್ದ ಮೆಲ್ಲಗೆದ್ದ ಕಣ್ಣರಳಿಸಿ ಮುಗುಳ್ನಗೆ ಬೀರಿದ ಮಂಜಿನ ಬೆಟ್ಟ ಕರಗಿ ನದಿಯಾಗಿ ಹರಿಯತೊಡಗಿತು ಕಗ್ಗಲ್ಲ ಬೆಟ್ಟಕೆ ರೆಕ್ಕೆ ಬಂದು ಹಕ್ಕಿಯಾಗಿ ಹಾರತೊಡಗಿತು ಕಗ್ಗತ್ತಲಕೂಪದಲಿ ಮುಳುಗೆದ್ದ ಭೂಮಿ ದಿವಿನಾಗಿ ಬೆಳಗತೊಡಗಿತು ಸುತ್ತ ನೆರೆದಿದ್ದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಡು(ವ) ಕಟ್ಟುವ ಕತೆ!! ಭಾಗ-೧: ಅಖಿಲೇಶ್ ಚಿಪ್ಪಳಿ

ಲೋಕೋಬಿನ್ನರುಚಿ: ಎನ್ನುವ ಮಾತು ಸಾರ್ವಕಾಲಿಕ ಸತ್ಯವಾದದು. ಒಬ್ಬೊಬ್ಬರದೂ ಒಂದೊಂದು ತರಹದ ವಿವೇಕ, ವಿವೇಚನೆ, ಹವ್ಯಾಸ, ಅಭ್ಯಾಸ ಹೀಗೆ ಏನೇ ಹೇಳಿ ಒಬ್ಬರಿಂದೊಬ್ಬರು ಬಿನ್ನ. ಕೆಲವರಿಗೆ ಚೆನ್ನಾಗಿ ಓದಬೇಕು, ದೊಡ್ಡ ಕೆಲಸ ಹಿಡಿಯಬೇಕು, ಕೈತುಂಬಾ ಸಂಬಳ, ಇರಲೊಂದು ಐಷಾರಾಮಿ ಮನೆ, ದೊಡ್ಡದೊಂದು ಕಾರು, ಮುದ್ದಿನ ಮಡದಿ, ಮಡದಿಗೆ ಮೈತುಂಬಾ ಬಂಗಾರ, ಮನೆಯಲ್ಲಿ ಎಲ್ಲಾ ತರಹದ ಆಧುನಿಕ ತಂತ್ರಜ್ಞಾನದ ಸಲಕರಣೆಗಳು, ಜೊತೆಗೆರೆಡು ಮಕ್ಕಳು, ಅವು ಅಸಾಧಾರಣ ಬುದ್ಧಿವಂತರಾಗಿರಬೇಕು, ದೊಡ್ಡವರಾಗುತ್ತಿದ್ದ ಹಾಗೆಯೇ ಎಲ್ಲರ ಮಕ್ಕಳಿಗಿಂತ ವಿದ್ಯಾವಂತರಾಗಬೇಕು, ಕ್ಲಾಸಿಗೆ, ಶಾಲೆಗೆ, ರಾಜ್ಯಕ್ಕೆ ಮೊದಲಿಗರಾಗಬೇಕು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನೀನೇಕೆ ಇಲ್ಲಿರುವೆ? ಒಂದು ದಿನ ನಜ಼ರುದ್ದೀನ್‌ ನಿರ್ಜನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಕತ್ತಲಾಗುತ್ತಿದ್ದಾಗ ಕುದುರೆ ಸವಾರರ ತಂಡವೊಂದು ಅವನತ್ತ ಬರುತ್ತಿದ್ದದ್ದನ್ನು ನೋಡಿದ. ಅವನ ಕಲ್ಪನಾಶಕ್ತಿ ಬಲು ಚುರಕಾಗಿ ಕಾರ್ಯೋನ್ಮುಖವಾಯಿತು. ಅವರು ತನ್ನನ್ನು ದರೋಡೆ ಮಾಡಲೋ ಅಥವ ತನ್ನನ್ನು ಸೈನ್ಯಕ್ಕೆ ಸೇರಿಸಿಕೊಳ್ಳಲೋ ಬರುತ್ತಿದ್ದಾರೆಂದು ಅವನು ಊಹಿಸಿಕೊಂಡು ಭಯಭೀತನಾದ. ಭಯ ಎಷ್ಟು ತೀವ್ರವಾಗಿತ್ತೆಂದರೆ ಅವರಿಂದ ತಪ್ಪಿಸಿಕೊಳ್ಳಲೇಬೇಕೆಂಬ ಛಲ ಮೂಡಿ ಪಕ್ಕದಲ್ಲಿದ್ದ ಎತ್ತರದ ಗೋಡೆಯೊಂದನ್ನು ಹೇಗೋ ಹತ್ತಿ ಇನ್ನೊಂದು ಪಕ್ಕಕ್ಕೆ ಹಾರಿದ. ಅದೊಂದು ಸ್ಮಶಾನ ಎಂಬುದು ಅವನಿಗೆ ಆಗ ತಿಳಿಯಿತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಲ್ವರ ಕವಿತೆಗಳು: ಸಿರಿ ಹೆಗ್ಡೆ, ಚಿದು, ಬಿದಲೋಟಿ ರಂಗನಾಥ್, ಕಿರಣ್ ಬಾಗಡೆ

ಕ್ಷಮಿಸಿ ನನ್ನನ್ನು … ಇಷ್ಟು ವರ್ಷಗಳ ಕಾಲ ಕುಣಿಸಿದೆ, ಗೆಜ್ಜೆಯ ಗೀಳು ಹತ್ತಿಸಿದೆ, ನಿಮ್ಮಿಂದ ನಾ ಹೆಸರು ಗಳಿಸಿದೆ, ಆದರಿಂದು …? ಕ್ಷಮಿಸಿ ನನ್ನನ್ನು… ನೋವೆಂದು ನೀವಳುತ್ತಿದ್ದ ದಿನಗಳವು, ಬೇಡ ಸಾಕೆಂದು ಗೋಗರೆಯುತ್ತಿದ್ದ ಕಾಲ, ಕೇಳಲಿಲ್ಲ ನಾನು, ಅಹಂಕಾರಿ ! ಮತ್ತೆ ಕಟ್ಟಿಸಿದೆ ಗೆಜ್ಜೆ, ಕುಣಿಸಿದೆ, ಆದರಿಂದು …? ಕ್ಷಮಿಸಿ ನನ್ನನ್ನು… ನಿಮ್ಮ ಸಾಮರ್ಥ್ಯಕ್ಕಿಂತ ಜಾಸ್ತಿ ದುಡಿಸಿದೆ, ಇಂದು ನನ್ನ ಹೊಗಳುತ್ತಾರೆ, ನಿಮ್ಮಿಂದ, ನಾ ಸದಾ ಕೃತಜ್ನೆ, ಆದರಿಂದು …? ಕ್ಷಮಿಸಿ ನನ್ನನ್ನು… ಬಂದನವನು ನನ್ನ ಬಾಳಲ್ಲಿ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾವಗಳ ಬಂಡಿಯೇರಿ: ಪ್ರಶಸ್ತಿ

ಭಾವಲಹರಿಯೆನ್ನೋದೇ ಹಾಗೆ. ಈ ಭಾವಗಳ ಮಡಿಲಲ್ಲಿದ್ದಾಗ ಶಬ್ದಗಳ ಹಂಗಿಲ್ಲ, ಕಾಲದ ಅರಿವಿಲ್ಲ,ಸುತ್ತಣ ಪರಿಸರದ ಪರಿವೆಯೂ ಇಲ್ಲದ ಪರಿಸ್ಥಿತಿ. ಪಕ್ಕದ ಯಾವುದೋ ಘಟನೆ ನಮ್ಮ ತಟ್ಟೆಬ್ಬಿಸೋ ತನಕ ಕಲ್ಪನಾಲೋಕದಲ್ಲಿ ನಮಗೆ ನಾವಲ್ಲದೆ ಇನ್ಯಾರೂ ಇಲ್ಲ.ಭಾವಗಳ ಬಂಡಿಯೇರಿದ ಆ ಪಯಣ ಸಾಗೋ ಪರಿಯೇ ಅದಮ್ಯ.ಆ ಕ್ಷಣಕ್ಕೆ ಮೂಡೋ ಭಾವಕ್ಕೊಂದು ಆಕಾರವಿಲ್ಲದಿದ್ದರೆ ಕಳೆದೇ ಹೋದೀತೆಂದು ಸಿಕ್ಕ ಮೊಬೈಲಲ್ಲೋ ಪೇಪರಲ್ಲೋ ಕಂಪ್ಯೂಟರಲ್ಲೋ ಗೀಚುವವರದು ಒಂದು ಲಹರಿ.ಕಡಲಲೆಗಳಲ್ಲಿ ಕಂಡ ಸುಂದರ ಅಲೆಯೊಂದು ಕಾಲದ ಗರ್ಭದಲ್ಲಿ ಕರಗಿಹೋಗೋ ಹಾಗೆ ಮುಂಬರುವ ಭಾವ ಪ್ರವಾಹದಲ್ಲಿ ಈಗಿನ ಭಾವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

’ಮಂಗಳಮುಖಿ’ಯರಿಗೆ ಮರೀಚಿಕೆಯಾದ ಸಮಾನತೆಯ ಬದುಕು: ಗುರುರಾಜ್ ಎನ್

ಪ್ರಿಯಾಂಕ, ಮಮತ, ಚೆಲುವೆ, ಅಪ್ಸರ, ಜಯಶ್ರೀ, ವಿಧ್ಯಾ, ಹೀಗೆ  ಎಷ್ಟೋಂದು ಸುಂದರ ಹೆಸರುಗಳು, ಇವು ಒಂದು ವಿಭಿನ್ನ ಸಾಮಜಿಕ ಗುಂಪಿಗೆ ಸೇರಿದ ಹಿಜ್ರಾ, ಕೋಥಿ, ಮಂಗಳಮುಖಿ, ಜೋಗಪ್ಪ, ಡಬಲ್ ಡೆಕ್ಕರ್,  ದ್ವಿಲಿಂಗ ಕಾಮಿ, ಟ್ರಾನ್ಸ್‌ಜೆಂಡರ್, ಅಂತರ್‌ಲಿಂಗಿ, ಇಕ್ವಿಯರ್, ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳ ಹೆಸರುಗಳು. ಗಂಡು ದೇಹದಲ್ಲಿ ಬಂದಿಯಾಗಿರುವ ಹೆಣ್ಣುಗಳ ಹೆಸರುಗಳಿವು ಹಾಗೇನೆ ಹೆಣ್ಣು ದೇಹದಲ್ಲಿ ಗಂಡುಗಳ ಹೆಸರುಗಳು ಬಂದಿಯಾಗಿರುವವರು ಇದ್ದಾರೆ. ಸಮಾಜದ ಕಣ್ಣಿಗೆ ಅವರು ಯಾರು? ಅವರ ನೋವು ಸಂಕಟಗಳೇನು? ಅವರ ತೊಂದರೆಗಳೇನು? ಎಂದು ಊಹಿಸಲು ಸಾದ್ಯಾವಾಗುವುದಿಲ್ಲ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಗೆ ಹನಿ: ರಾಮಪ್ರಸಾದ.ಬಿ.

ಸಂಗೀತ ಮೇಷ್ಟ್ರು:ಏನಮ್ಮ ರಾಗಿಣಿ! ಸ…ರಿ…ಅನ್ನು…. ರಾಗಿಣಿ:ಸಾರಿ ಅನ್ನೋಂತಹ ತಪ್ಪು ನಾನೇನು ಮಾಡಿದ್ದೇನೆ ಗುರುಗಳೇ?! **** ರಮ್ಯ:ಡ್ಯಾಡಿ,ನನಗೆ ಟೀಚರ್ ಶಿಕ್ಷೆ ಕೊಟ್ರು … ತಂದೆ:ಯಾಕೋ ಪುಟ್ಟ ಅಂತಾ ತಪ್ಪು ನೀನೇನು ಮಾಡಿದೆ?! ರಮ್ಯ:ನಮ್ ಟೀಚರ್ ನನ್ಹತ್ರ ಸ್ಕೇಲ್ ತೋರಿಸಿ ಎಲ್ರ ಮುಂದೆ ಹೇಳ್ತಿದ್ರು-"ಈ ಸ್ಕೇಲ್ ತುದಿಗೆ ಒಬ್ಬ ಮೂರ್ಖ ವ್ಯಕ್ತಿ ನಿಂತಿದ್ದಾಳೆ…" ಆಗ ನಾನು ಸ್ಕೇಲ್ ನ ಯಾವ ತುದಿ ಟೀಚರ್ ಅಂತ ಕೇಳಿದೆಯಷ್ಟೇ!" **** ಡಾಕ್ಟರ್:ನೀವೇನು ಭಯಪಡಬೇಡಿ!ಆಪರೇಷನ್ ಆದಕೂಡಲೇ ನೀವು ಹಾಯಾಗಿ ನಿಮ್ಮ ಮನೆಗೆ ನಡೆದುಕೊಂಡೇ ಹೋಗಬಹುದು…. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 87): ಮಹಾಂತೇಶ್ ಯರಗಟ್ಟಿ

  ಪ್ರಶ್ನೆಗಳು: ೧.    ರೋಮನ್ನರ ಎರಡು ಮುಖಗಳ ಯಾವ ದೇವತೆಯ ಹೆಸರಿನಿಂದ ಜನವರಿ ತಿಂಗಳಿಗೆ ಹೆಸರನ್ನಿಡಲಾಗಿದೆ? ೨.    ಐ.ಎಫ್.ಆರ್.ಐ (IFRI)ನ ವಿಸ್ತೃತ ರೂಪವೇನು? ೩.    ನವಗಿರಿನಂದ ಇದು ಯಾರ ಕಾವ್ಯನಾಮಗಿದೆ? ೪.    ಭೂಮಿಗೆ ಅತಿ ಸಮೀಪದಲ್ಲಿರುವ ಸೌರವ್ಯೂಹದಾಚೆಗಿನ ನಕ್ಷತ್ರ ಯಾವುದು? ೫.    ರಣರಿಸಕ ಎಂಬ ಬಿರುದನ್ನು ಪಡೆದಿದ್ದ ಚಾಲಕ್ಯ ದೊರೆ ಯಾರು? ೬.    ಐಸ್ ಕ್ರೀಂ ಬೇಗ ಗಡ್ಡೆಕಟ್ಟಲು ಏನನ್ನು ಬೆರೆಸುತ್ತಾರೆ? ೭.    ಶಿಲೀಂಧ್ರಗಳ ಅಧ್ಯಯನಕ್ಕೆ ಆಂಗ್ಲ ಭಾಷೆಯಲ್ಲಿ ಏನೆಂದು ಕರೆಯುತ್ತಾರೆ? ೮.    ಕುತುಬ್ ಮಿನಾರ್ ಆವರಣದಲ್ಲಿರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾರ್ಟೂನ್ ಕಾರ್ನರ್: ಮೋಹನ್ ಕುಮಾರ್, ಬಿ.ರಾಮಪ್ರಸಾದ ಭಟ್, ರಂಗನಾಥ್ ಸಿದ್ಧಾಪುರ, ಅರುಣ್ ನಂದಗಿರಿ, ನಾಷೀರ್

        ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಮಯ ಪರಿಪಾಲನೆ: ಅನಿತಾ ನರೇಶ್ ಮಂಚಿ

                           ನನ್ನ ಲ್ಯಾಪ್ಟಾಪಿಗೆ ಜ್ವರ ಬಂದಿತ್ತು. ಜ್ವರ ಅಂದರೆ ಅಂತಿಂಥಾ ಜ್ವರವಲ್ಲ..ಮೈಯ್ಯೆಲ್ಲಾ ಬಿಸಿಯೇರಿ ತೇಲುಗಣ್ಣು  ಮಾಲುಗಣ್ಣು ಮಾಡಿಕೊಂಡು ಕೋಮಾ ಸ್ಥಿತಿಗೆ ಹೋಯಿತು. ಹೋಗುವಾಗ ಸುಮ್ಮನೇ ಹೋಗಲಿಲ್ಲ. ನಾನು ಕಷ್ಟಪಟ್ಟು ತಾಳ್ಮೆಯಿಂದ ಬರೆಯುತ್ತಿದ್ದ  ಇನ್ನೇನು ಮುಕ್ತಾಯ ಹಂತಕ್ಕೆ ಬಂದಿದ್ದ ಘನ ಗಂಭೀರ  ಲೇಖನವೊಂದನ್ನು ಕರೆದುಕೊಂಡೇ ಹೋಯಿತು. ಅದೆಷ್ಟು ತಪಸ್ಸುಗಳ ಫಲವೋ ನಾನು ಅಷ್ಟೊಂದು ಸೀರಿಯಸ್ ವಿಷಯದ ಬಗ್ಗೆ ಬರೆಯಹೊರಟಿದ್ದು. ಒಂದೆರಡು ಬಾರಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುಡುವ ಬೆಂಕಿಯ ನಗು ಪುಸ್ತಕ ವಿಮರ್ಶೆ: ಸಚಿನ್‍ಕುಮಾರ ಬಿ.ಹಿರೇಮಠ

                                                                                                              … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅರಣ್ಯ ಹಕ್ಕು ಮಾನ್ಯತೆ ಕಾಯಿದೆ ಮತ್ತು ಹವಾಮಾನ ಬದಲಾವಣೆ (ಕೊನೆಯ ಭಾಗ): ಅಖಿಲೇಶ್ ಚಿಪ್ಪಳಿ

ಇಲ್ಲಿಯವರೆಗೆ ಈ ಮಟ್ಟದ ಹಾಗೂ ಈ ಮೊತ್ತದ ಕಾಡು ನಾಶ ಈ ಹಿಂದೆಯೂ ಆಗಿತ್ತು. ಬಗರ್ ಹುಕುಂ ಕಾಯ್ದೆ 1989-90ರಲ್ಲಿ ಜಾರಿಯಾದ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯ ಮಿಣಿಸುತ್ತಿನ ಮರಗಳ ಮಾರಣ ಹೋಮವಾಗಿತ್ತು. ಮರಗಳ ಬುಡಕ್ಕೆ ಬೆಂಕಿ ಹಚ್ಚಿ ಸುಡಲಾಗಿತ್ತು. ಆ ಕಾರಣಕ್ಕಾಗಿಯೇ ಕಳೆದ 10 ವರ್ಷಗಳಲ್ಲಿ ತಾಲ್ಲೂಕಿನಲ್ಲಿ 40% ಮಳೆ ಪ್ರಮಾಣ ಕಡಿಮೆಯಾಗಿದೆ. ರಾಜಕೀಯ ದೂರದೃಷ್ಟಿಯ ಕೊರತೆ, ಅತಿಯಾಸೆ, ರೈತರಲ್ಲಿ ಪರಸ್ಪರ ಪೈಪೋಟಿ ಮನೋಭಾವ (ಸರ್ಕಾರಿ ಕೃಪಾಪೋಷಿತ ಇಲಾಖೆಗಳೇ ಹಸಿರು ಕ್ರಾಂತಿಯ ನೆಪದಲ್ಲಿ ಕ್ಷೇತ್ರೋತ್ಸವ ಎಂಬ ಸಂಭ್ರಮಾಚರಣೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾವ್ಯಧಾರೆ: ಪ್ರವೀಣ್ ಕುಮಾರ್ ಜಿ., ಚಾರುಶ್ರೀ ಕೆ ಎಸ್, ಸಿಪಿಲೆನಂದಿನಿ, ಸಂದೇಶ್.ಎಚ್.ನಾಯ್ಕ್

-: ನಿಂತ ನಾವೆ :-  ಮುಗುಚಿಬಿದ್ದ ನಾವೆ  ಅತ್ತ ದಡಕ್ಕಿರದೆ  ಇತ್ತ ಕಡಲ ಒಡಲಲಿ  ತೇಲದೆ ನಿಂತಿದೆ  ಕಾಲದ ಕೊಂಡಿಯಾ ಕಳಚಿಕೊಂಡು.  ಬೀಸುವ ಗಾಳಿಗೂ  ಮಿಸುಕಾಡದೆ ಅಬ್ಬರಿಸಿ  ಬರುವ ಅಲೆಗಳಿಗು  ಅತ್ತಿತ್ತಾಗದೆ ನಿಂತಿಹುದು ನಾವೆ  ಕಾಲದ ಕೊಂಡಿಯಾ ಕಳಚಿಕೊಂಡು.  ವಿಶಾಲ ಸಾಗರದ  ಎದೆಯ ಮೇಲೆ  ಮಿಸುಕದೆ ಕುಂತ ನಾವೆಯ  ಹೊತ್ತೊಯ್ಯುವವರಿರದೆ ಅನಾಥವಾಗಿ  ಕುಳಿತಿಹುದು ಕಾಲದ ಕೊಂಡಿಯಾ ಕಳಚಿಕೊಂಡು.  -ಪ್ರವೀಣ್ ಕುಮಾರ್ ಜಿ.         ನೈಜ ಪ್ರೀತಿ ನಿನ್ನ ನನ್ನ ಮರೆತು ಪ್ರೀತಿಸಿದೆ. ನನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರೋಹಿಣಿ: ಸಾವಿತ್ರಿ ವಿ. ಹಟ್ಟಿ

ಆ ಒಂಟಿ ಕೋಣೆಯಲ್ಲಿ ಅವಳನ್ನು ಹೊರತುಪಡಿಸಿದರೆ, ಒಂದೆರಡು ತಟ್ಟೆ ಲೋಟಗಳು, ಒಂದೆರಡು ಪಾತ್ರೆಗಳು, ಪ್ಲಾಸ್ಟಿಕ್ ಕೊಡ, ಬಕೆಟ್, ಚೊಂಬು ಹಾಗೂ ಒಂದಷ್ಟು ಪುಸ್ತಕಗಳು ಮಾತ್ರ. ಕೋಣೆಯಲ್ಲಿ ನಿಃಶಬ್ದ ಕವಿದಿತ್ತು. ಅಪರೂಪಕ್ಕೆ ಕೈಜಾರಿಸಿದರೆ ಪಾತ್ರೆಗಳ ಸದ್ದಷ್ಟೆ. ಆ ಮೌನ ಅವಳನ್ನು ಅದೆಷ್ಟು ಹಿಂಸಿಸುತ್ತಿತ್ತೆಂದರೆ ಇನ್ನೂ ತಾಸು ಮುಂಚಿತವಾಗಿಯೇ ಕಾಲೇಜಿಗೆ ಹೊರಟು ಬಿಡುತ್ತಿದ್ದಳು. ಅಲ್ಲಿಯಾದರೆ ವಿದ್ಯಾರ್ಥಿಗಳ, ಸಹೋದ್ಯೋಗಿಗಳ ಒಡನಾಟ ಸಿಗುತ್ತದೆ. ಬಿಡುವಿನ ವೇಳೆಯಲ್ಲಿ ಗ್ರಂಥಾಲಯದಲ್ಲಿಯ ಪುಸ್ತಕಗಳಿರುತ್ತವೆ ಎಂಬುದು ರೋಹಿಣಿಯ ಯೋಚನೆಯಾಗಿರುತ್ತಿತ್ತು. ಆದರೆ ಅವಳಿಗೆ ಮೊದಲಿನಂತೆ ತನ್ಮಯಳಾಗಿ ಪಾಠ ಮಾಡಲಾಗುವುದಿಲ್ಲ. ಮೈಮರೆತು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ವಿದ್ವಾಂಸ ಸಾರಥಿ ಮುಲ್ಲಾ ನಜರುದ್ದೀನ್‌ ಒಮ್ಮೆ ಕುದುರೆಗಾಡಿಯ ಸಾರಥಿಯ ಕೆಲಸವನ್ನು ಮಾಡಲು ಒಪ್ಪಿಕೊಂಡ. ಒಂದು ದಿನ ಆತ ಪಟ್ಟಣದ ಕುಖ್ಯಾತ ಭಾಗಕ್ಕೆ ಮಾಲಿಕನನ್ನು ಒಯ್ಯಬೇಕಾಗಿತ್ತು. ಗಮ್ಯಸ್ಥಾನ ತಲುಪಿದ ನಂತರ ಗಾಡಿಯಿಂದಿಳಿದ ಮಾಲಿಕ ಸಲಹೆ ನೀಡಿದ, “ಬಲು ಜಾಗರೂಕನಾಗಿರು. ಇಲ್ಲಿ ತುಂಬಾ ಕಳ್ಳರಿದ್ದಾರೆ.” ತುಸು ಸಮಯ ಕಳೆದ ನಂತರ ಹೊಸ ಸಾರಥಿ ಏನು ಮಾಡುತ್ತಿದ್ದಾನೆಂಬುದನ್ನು ತಿಳಿಯಲು ಇಚ್ಛಿಸಿದ ಮಾಲಿಕ ತಾನಿದ್ದ ಮನೆಯ ಕಿಟಕಿಯೊಂದರಿಂದ ತಲೆ ಹೊರಹಾಕಿ ಬೊಬ್ಬೆಹಾಕಿದ, “ಎಲ್ಲವೂ ಸರಿಯಾಗಿದೆಯಷ್ಟೆ? ಈಗ ನೀನೇನು ಮಾಡುತ್ತಿರುವೆ?” “ಒಬ್ಬ ವ್ಯಕ್ತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಲಿಯೋ: ಪ್ರಶಸ್ತಿ

ಬೆಂದಕಾಳೂರಿನ ಕುಂದಲಹಳ್ಳಿ ಅನ್ನೋ ಒಂದು ಹಳ್ಳಿಯಲ್ಲದ ಹಳ್ಳಿಯ ಕೆರೆಯ ಪಕ್ಕದಲ್ಲಿ ನಮ್ಮ ಪೀಜಿಯಿದೆ ಅನ್ನೋ ವಿಚಾರವನ್ನ ಹಿಂದಿನ ಲಹರಿಗಳಲ್ಲಿ ಓದೇ ಇರುವ ನಿಮಗೆ ಅದ್ರ ಹೆಸರು ಹೇಳೋ ಅಗತ್ಯ ಇಲ್ಲದಿದ್ದರೂ ಅಲ್ಲಿನ ಆಲಿಯೋ ಕತೆಯನ್ನಂತೂ ಹೇಳಲೇಬೇಕು. ಆಲಿಯೋನಾ ? ಅದ್ಯಾರು ಅಂತ ಊಹೆ ಮಾಡೋಕೆ ಶುರು ಮಾಡಿದ್ರಾ ?  ನಾ ಹೇಳಹೊರಟಿದ್ದು ಲವ್ ಯೂ ಆಲಿಯಾ ಬಗ್ಗೆಯಲ್ಲ, ಮಾತಾಡಿದ್ದೆಲ್ಲಾ ಕಾಮಿಡಿಯಾಗೋ ಆಲಿಯೋ ಭಟ್ ಬಗ್ಗೆಯೋ ಅಲ್ಲ. ನಮ್ಮ ಪೀಜಿ ಕಿಶೋರ್ ಭಯ್ಯಾನ ಆಲಿಯೋ ಬಗ್ಗೆ. ಈಗ ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇವದಾಸಿಯರನ್ನು ರಕ್ಷಿಸುವುದೆಂದು?: ಜಯಶ್ರೀ ಎಸ್. ಎಚ್.

ಜಗತ್ತಿನಲ್ಲಿ ತೃತೀಯ ಲಿಂಗದ ಜನರನ್ನು ಜನರೆಂದು ಬಾವಿಸದೆ ನಿರಂತರ ಶೋಷಣೆಗೆ ಒಳಪಡುವಂತ ಸಮುದಾಯ ಇದು .ಅವರಷ್ಟೆ ಶೋಷಣೆಗೆ ಒಳಗಾದ ಇನ್ನೊಂದು ಸಮುದಾಯ ಇದೆ ಅದು ದೇವದಾಸಿ ಸಮುದಾಯ. ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ದಲಿತ  ಹೆಣ್ಣು ಮಕ್ಕಳನ್ನು ಮೇಲ್ಜಾತಿಯವರು ತಮ್ಮ ಭೋಗಕ್ಕೆ ಬಳಸಿಕೊಳ್ಳುತ್ತಿದ್ದಾರೆ ಅವರನ್ನು ಹೀನಾಯವಾಗಿ ಶೋಷಣೆ ಮಾಡುವ ಪ್ರವೃತ್ತಿಯು ಇನ್ನು ಕೆಲವೊಂದು ಸ್ಥಳಗಳಲ್ಲಿ ಜೀವಂತವಾಗಿದೆ. ಅನೇಕ ಮುಗ್ಧ ಹೆಣ್ಣು ಮಕ್ಕಳು ಈ ಪಾಪದ  ಪದ್ದತಿಗೆ ತಿಳಿದೋ ತಿಳಿಯದೆಯೋ ಬಲಿಯಾಗುತ್ತಿದ್ದಾರೆ. ಮೂಢನಂಬಿಕೆ ಮತ್ತು ಬಡತನ ಕಾರಣ ನೀಡಿ ಒಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೌರ್ಮೆಂಟ್ ಇಸ್ಕೂಲು..!: ಪ.ನಾ.ಹಳ್ಳಿ.ಹರೀಶ್ ಕುಮಾರ್

ಪಾರಿ  ಶಾಲೆ ಕಡೆಯಿಂದ ಯಾರನ್ನೋ  ಬೈಯ್ದುಕೊಳ್ಳುತ್ತಾ  ಬರ್ತಿರೋದು ನೋಡಿ ಅವಳನ್ನ ತಡೆದು ನಿಲ್ಲಿಸಿದ ಸಿದ್ಧ ಕೇಳಿದ, ‘ಯಾಕಮ್ಮೀ, ಎತ್ತಕಡೆಯಿಂದ ಬರ್ತಿದ್ದೀ ?’ ಅದಕ್ಕೆ ಏದುಸಿರು ಬಿಡುತ್ತಿದ್ದ ಪಾರಿ, ‘ಏ.. ಕಾಣಕಿಲ್ವಾ.. ಇಸ್ಕೂಲ್ತಾಕೆ ಹೋಗಿದ್ದೆ.’ ಅಂದಳು. ಅವರೀರ್ವರ ಮಾತುಕತೆ ಹೀಗೇ ಮುಂದುವರೆಯುತ್ತದೆ. ‘ ಇಸ್ಕೂಲ್ತಾಗೆ ಏನಿತ್ತವೀ ನಿಂದು ಅಂತಾ ಕೆಲ್ಸಾ..?’  ‘ ಏ..ನಂದೇನಿದ್ದತು ಬಿಡು. ಆ ನಮ್ಮ  ಮೂದೇವಿ ಐತಲ್ಲಾ. ವೆಂಕಟೇಸ ಅಂತಾ..ಅದುನ್ನ ಒಳಿಕ್ಕೆ ಕೂಡಿ ಬರೋಕೆ ಹೋಗಿದ್ದೆ.’ ‘ ಯಾಕಂತೆ ಪಾರವ್ವ, ಅವುನ್ಗೆ ಇಸ್ಕೂಲು ಬ್ಯಾಡಂತೇನು ?’ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಕ್ಕಳ ಭವಿಷ್ಯಕ್ಕೆ ಮುಳ್ಳಾಗುವ ‘ಬಾಲ ಕಾರ್ಮಿಕ’ ಪದ್ಧತಿ…: ಹುಸೇನಮ್ಮ ಪಿ.ಕೆ. ಹಳ್ಳಿ

  ಮಕ್ಕಳನ್ನು ‘ನಂದವನದ ಹೂಗಳು’ ಎನ್ನುತ್ತಾರೆ. ಮಕ್ಕಳು ಅಷ್ಟು ಮೃದು, ಅಮೂಲ್ಯ ಮತ್ತು  ಶ್ರೇಷ್ಠ ಎಂಬ ಭಾವನೆ ಎಲ್ಲರಲ್ಲೂ ಇದ್ದೆ ಇರುತ್ತದೆ. ಮಕ್ಕಳು, ಪ್ರೀತಿಯ ಲಾಲನೆ-ಪಾಲನೆಯಲ್ಲಿ ಬೆಳೆಯಬೇಕಾದ ಅವಶ್ಯಕತೆ ಇರುತ್ತದೆ. ಒಂದು ವೇಳೆ ಇಂತಹ ವಾತ್ಸಲ್ಯ ದೊರಕದೆ ಹೋದರೆ, ಆರೋಗ್ಯ ಬೆಳವಣಿಗೆಯ ಜೊತೆಗೆ ಅವರ ಎಳೆಯ ಮನಸ್ಸಿನ ಮೇಲೂ ಇದು ದುಷ್ಪರಿಣಾಮ ಬೀರುತ್ತದೆ. ಆಡಿ ನಲಿಯಬೇಕಾದ ಸುಂದರ ಬಾಲ್ಯವನ್ನು ಅವರಿಂದ ಕಸಿದುಕೊಂಡಂತಾಗುತ್ತಿದೆ.  ಬಹಳಷ್ಟು ಮಕ್ಕಳು ಶಿಕ್ಷಣದಿಂದ ವಂಚಿತರಾಗಿ, ಬಾಲ್ಯದ ಸಂತೋಷವನ್ನು ಅನುಭವಿಸಲಾಗದೆ, ನಿರಾಶದಾಯಕ ಭವಿಷ್ಯದಲ್ಲಿ ತೊಳಲಾಡುವ ಪರಿಸ್ಥಿತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆರಳು-ಬೆಳಕಿನ ಮಾಯಾಲೋಕದ ಮಹಿಳಾ ಭಾರತ: ಹಿಪ್ಪರಗಿ ಸಿದ್ಧರಾಮ, ಧಾರವಾಡ

ಜೋಗುಳ ಹಾಡುವ ತಾಯಿಯ ಇಂಪಾದ ಧನಿಗೆ ತೊಟ್ಟಿಲ ಮಗು ನಿದ್ರೆಗೆ ಜಾರುವುದರೊಂದಿಗೆ ತೆರೆದುಕೊಳ್ಳುವ ಪುರಾಣ, ಇತಿಹಾಸ ಮತ್ತು ಸಮಕಾಲೀನಗಳ ಸಮಾಗಮದ ಸಂದರ್ಭಗಳ ಸಮ್ಮೀಶ್ರಣದ ಹದವಾದ ಪಾಕದಂತಹ ನಾಟಕ ಪ್ರದರ್ಶನ. ಕಾಲಬೇಧ ಮತ್ತು ಭಾಷಾಬೇಧಗಳಿಲ್ಲದೇ ಮಹಿಳಾ ಆಲಾಪದ ಕಲಾಪಗಳು ರಂಗದಲ್ಲಿ ನಡೆಯುತ್ತಾ, ಹಲವಾರು ಪ್ರಸಂಗಗಳ ಚರ್ಚೆ, ವಿಮರ್ಶೆಯ ಗಂಭೀರ ಕಥನವು ಕುತೂಹಲವನ್ನು ಹುಟ್ಟಿಸುತ್ತಲೇ ಪ್ರೇಕ್ಷಕ ಪ್ರಭುವಿನ ಗ್ರಹಿಕೆಯನ್ನು ವಿಸ್ತರಿಸುತ್ತಾ ಸಾಗುವ “ಮಹಿಳಾ ಭಾರತ” ನಾಟಕ ಪ್ರದರ್ಶನವು ಅದ್ಬುತವಾಗಿ ಇತ್ತೀಚೆಗೆ (03.01.2016) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಕರ್ನಾಟಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೀಗೊಂದು ಕಥೆ : ಇಬ್ಬನಿಯ ಹುಡುಗ ರಾಮು

ಅವನು ಕಡುಬಡವ ಕುಟುಂಬದಿಂದ ಬಂದಿದ್ದ, ತಾಯಿಯ ಪ್ರೀತಿಯ ಬೆಲೆ ತಿಳಿದಿದ್ದ, ಕಷ್ಟ ಏನಂತ ಸ್ವತಃ ಅನುಭವಿಸಿದ್ದ ಕೂಡ, ಕಿತ್ತು ತಿನ್ನುವ ಬಡತನದ ಮಧ್ಯೆ ಬದುಕಿನಲ್ಲಿ.ಸಾಧಿಸಬೇಕೆಂಬ ಕನಸು ಕಂಡಿದ್ದ ಆ ಕನಸುಗಳನ್ನು ನನಸಾಗಿಸಲು ಹೊರಟ ಹಾದಿಯಲ್ಲಿ ಎದುರಾದ ಸವಾಲುಗಳೇ ಈ "ಹಿಗೋಂದು ಕಥೆ" ಎಂಬ ಲೇಖನ. ತಂದೆಯನ್ನು ಕಳೆದುಕೊಂಡಾಗ ಅವನ ವಯಸ್ಸು ೭ ವರ್ಷ, ಬೀದಿಪಾಲಾಗಿ ಒಂದು ಒಪ್ಪತ್ತು ಅನ್ನ ನೀರಿಗೂ ಕಷ್ಟ ಪಡುವ ಪರಿಸ್ಥಿತಿ ಎದುರಿಸಿದ್ದ, ಅವ್ವನ ತವರು ಮನೆಯಲ್ಲಿ ಆಶ್ರಯಿಸಿದ್ದ ಅಲ್ಲೆಯೆ ಅವನ ಕನಸಿಗೆ ಕಲ್ಪನೆಯೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ