ಕಾವ್ಯಧಾರೆ: ಕು.ಸ.ಮಧುಸೂದನ ರಂಗೇನಹಳ್ಳಿ, ಮಂಗಳ.ಎನ್, ಬಿದಲೋಟಿ ರಂಗನಾಥ್, ಅರುಣ್ ಅಲೆಮಾರಿ
ಹೂ-ನದಿ ಮುಂಜಾನೆಯರಳಿ ಸಂಜೆಗೆ ಬಾಡುವ ಹೂವು ಶಾಶ್ವತವಲ್ಲದಿದ್ದರೂ ಬಾಡುವ ಮುಂಚೆ ಸೇರುವುದು ತಾಯಂದಿರ ಮುಡಿಯ ದೇವರ ಗುಡಿಯ ಮಳೆಗಾಲದಿ ಉಕ್ಕಿ ಬೇಸಿಗೆಯಲಿ ಬತ್ತಿ ಹರಿಯುವ ನದಿ ನಿರಂತರವಲ್ಲದಿದ್ದರೂ ಬತ್ತುವ ಮುಂಚೆ ತೊಳೆಯುವುದು ನಮ್ಮ ಕೊಳೆಗಳ ಬೆಳೆಯುವುದು ಜೀವಿಗಳಿಗೆ ಬೆಳೆಗಳ! ಧ್ಯಾನದ ಕೊನೆಗೆ! ಮೌನದಲ್ಲಿ ಧ್ಯಾನಸ್ಥನಾಗಿದ್ದ ಬುದ್ದ ಮೆಲ್ಲಗೆದ್ದ ಕಣ್ಣರಳಿಸಿ ಮುಗುಳ್ನಗೆ ಬೀರಿದ ಮಂಜಿನ ಬೆಟ್ಟ ಕರಗಿ ನದಿಯಾಗಿ ಹರಿಯತೊಡಗಿತು ಕಗ್ಗಲ್ಲ ಬೆಟ್ಟಕೆ ರೆಕ್ಕೆ ಬಂದು ಹಕ್ಕಿಯಾಗಿ ಹಾರತೊಡಗಿತು ಕಗ್ಗತ್ತಲಕೂಪದಲಿ ಮುಳುಗೆದ್ದ ಭೂಮಿ ದಿವಿನಾಗಿ ಬೆಳಗತೊಡಗಿತು ಸುತ್ತ ನೆರೆದಿದ್ದ … Read more