ಮೂವರ ಕವನಗಳು: ದಿವ್ಯ ಆಂಜನಪ್ಪ, ಪುನೀತ್, ದುರ್ಯೋಧನ (ರವೀಂದ್ರ ಕತ್ತಿ)
"ಇಂದು ನೆನ್ನೆಗೆ ನಾಳೆಯಾದವನು" ಮಿಣುಕು ಹುಳುಗಳು ಮಿನುಗಿ ಕರೆದಾವೊ ಅಗೋ, ಆಗೊಂದು ಈಗೊಂದು ಕತ್ತಲಿನೂರಿನೊಳು ಗುಡಿಸಲ ಅಂಚಿನೆದೆಯಲಿ ಇಣುಕಿ ಇಣುಕಿ ನೋಡಿವೆ ಪಿಳಿಪಿಳಿ ಕಣ್ಣುಗಳು ಅದೇನೋ ಹೊಳಪು, ಅದೇನೋ ಹುರುಪು ಈ ಕಾಡಿನೂರಿನಲಿ ಹೀಗೊಂದು ನಡುರಾತ್ರಿಯ ಮಿಂಚಿನ ಬೆಳಕು ಕರೆದಿಹುದು ಬಡವನ ನೆತ್ತಿಯ ಕಣ್ಮಣಿಗಳ ಸೆಳೆಸೆಳೆದು ಅಂಧಕಾರವ ಮೆಟ್ಟಿ ನಿಂತಿದೆ ಅದೋ, ಆ ಮಣ್ಣಿನ ಹಣತೆ ಪಕ್ಕದೂರಿನ ಬೀದಿ ಬೀದಿಯ ಕೊನೆಯ ತಿರುವುಗಳಲಿ ಸಾಲುಗಟ್ಟಿ ನಿಂತಿಹವು ಕೈಗಳು ಕೈಚಾಚಿ ಪಟ್ಟಣವೆಂಬೊ ಸಂತೆಯಲಿ ಜಾತಿಯ ಹಣೆಪಟ್ಟಿಗಳು ಕಾಲೆಳೆದು ಮೆರೆದಿದೆ … Read more