ಗುರುಶಾಪವೂ … ಲಘು ಬರಹವೂ..: ಅನಿತಾ ನರೇಶ್ ಮಂಚಿ
ಮೊಣ್ಣಪ್ಪ ಸರ್ ನ ಕ್ಲಾಸ್ ಎಂದರೆ ಯಾಕೋ ನಮಗೆಲ್ಲಾ ನಡುಕ. ಅವರ ಜೀವಶಾಸ್ತ್ರದ ಕ್ಲಾಸ್ ವಾರಕ್ಕೆರಡೇ ಪಿರಿಯೆಡ್ ಇದ್ದರೂ ಅದನ್ನು ನೆನೆಸಿಕೊಂಡರೆ ನಮಗೆಲ್ಲಾ ಹೆದರಿಕೆ. ಕ್ಲಾಸಿನೊಳಗೆ ಬರುವಾಗ ಚಾಕ್ಪೀಸಿನ ಡಬ್ಬ ಮತ್ತು ಡಸ್ಟರ್ ಮಾತ್ರ ತರುವ ಅವರು ಒಳ ನುಗ್ಗಿದೊಡನೇ ಕಣ್ಣಲ್ಲೇ ಅಟೆಂಡೆನ್ಸ್ ತೆಗೆದುಕೊಳ್ಳುತ್ತಿದ್ದರು. ಈಗಿನ ಸಿ ಸಿ ಕ್ಯಾಮೆರಾ ಅವರ ಕಣ್ಣೊಳಗೆ ಫಿಕ್ಸ್ ಆಗಿತ್ತೇನೋ.. ಆಫೀಸ್ ರೂಮಿಗೆ ಹೋಗಿಯೇ ನಮ್ಮೆಲ್ಲರ ಹಾಜರಿಯನ್ನು ಪುಸ್ತಕದೊಳಗೆ ಮಾರ್ಕ್ ಮಾಡ್ತಾ ಇದ್ದರು. ಪ್ರಶ್ನೆಗಳಿಗೆ ತಪ್ಪು ಉತ್ತರ ನೀಡಿದವರ ಅಟೆಂಡೆನ್ಸ್ ಹಾಕುವುದಿಲ್ಲ … Read more
ಅಯ್ಯಯ್ಯೋ.. ದೆವ್ವಾ…!!: ತಿರುಪತಿ ಭಂಗಿ
ಅಂದು ಮಟಮಟ ಮದ್ಯಾಹ್ನ ಆಕಾಶದಲ್ಲಿ ಸೂರ್ಯ ಸೀಮೆ ಎಣ್ಣೆ ಸುರುವಿಕೊಂಡು ಅತ್ತೆಯ ಕಾಟ ಸಹಿಸಿಕೊಳ್ಳದ ಸೊಸೆ ಆತ್ಮಹತ್ತೆ ಮಾಡಿಕೊಂಡು ಧಗಧಗಿಸುವಂತೆ ಉರಿಯುತ್ತಿದ್ದ. ಡಾಂಬರ ರಸ್ತೆ ಸ್ಮಾಶಾನ ಮೌನವಾಗಿ ಮಲಗಿತ್ತು. ಗಿಡಮರಗಳು ಮಿಲ್ಟಟ್ರೀ ಯೋಧರಂತೆ ವಿಶ್ರಾಮ್ ಸ್ಥಿತಿಯಲ್ಲಿ ನಿಂತುಕೊಂಡಿದ್ದವು. ಒಂದು ಎಲೆಯೂ ಅಲಗಾಡುತ್ತಿರಲಿಲ್ಲ. ಗಾಳಿ ಭೂಮಂಡಲದಿಂದ ಗಡಿಪಾರಾಗಿ ಹೋದಂತೆ ಇತ್ತು. ಅಂತ ಭಯಂಕರ ರಸ್ತೆಯ ಮೇಲೆ ಒಂದು ಮೋಟಾರಿನ ಸುಳಿವಿಲ್ಲ. ಅಪ್ಪಿತಪ್ಪಿ ಆ … Read more
ಹೊಸ ವಿದ್ಯೆ ಕಲಿತು ಬಂದ ಲಗೋರಿಬಾಬಾ: ಫ್ಲಾಪಿಬಾಯ್
“ಬಾಬಾ ಎಲ್ಲೋಗಿದ್ದೆ ಇಷ್ಟು ದಿನ? ನೀನಿಲ್ಲದೆ ನಂಗಿಲ್ಲಿ ಒಬ್ನಿಗೆ ತಲೆ ಕೆಟ್ಟೋಗಿತ್ತು! ಜೀವನಾನೇ ಶೂನ್ಯ ಅನ್ನೋ ಸ್ಥಿತಿಗೆ ಬಂದು ಬಿಟ್ಟಿದ್ದೆ! ಒಂದೂ ಸ್ಟೇಟಸ್ ಅಪ್ಡೇಟ್ ಇಲ್ಲಾ, ಫೋಟೋ ಅಪ್ಲೋಡ್ ಇಲ್ಲ.. ಎಲ್ಲಾ ಬೋರಿಂಗ್ ಲೈಫ್ ಬಾಬಾ ನೀನಿಲ್ದೆ..” ಓವರ್ ಎಕ್ಸೈಟ್ ಆಗಿ ಒಂದೇ ಸಮನೇ ಬಡಬಡಿಸಹತ್ತಿದ ಫ್ಲಾಪಿಬಾಯ್. ಲಗೋರಿಬಾಬಾಗೆ ಗೊತ್ತಿದ್ತೆ, ಫ್ಲಾಪಿಬಾಯ್ ತನ್ನ ಎಷ್ಟು ಹಚ್ಕೊಂಡಿದಾನೆ ಅಂತ! ಪಾಪ ಅತನಿಗಾದ್ರೂ ನನ್ನ ಬಿಟ್ರೆ ಯಾರಿದ್ದಾರೆ? ಆಂದುಕೊಂಡ್ರೂ ಅದನ್ನ ತೋರಿಸಿಕೊಳ್ಳದೇ, “ಸಾರಿ ಫ್ಲಾಪಿ, ಒಂದು ರಹಸ್ಯ ವಿದ್ಯೆಯನ್ನು ತ್ವರಿತವಾಗಿ … Read more
ನೂರನೇ ಕೋತಿ: ಅಖಿಲೇಶ್ ಚಿಪ್ಪಳಿ
ಅತ್ತ ಪ್ಯಾರಿಸ್ ನಲ್ಲಿ ಹವಾಮಾನ ಬದಲಾವಣೆ ಕುರಿತು ಜಾಗತಿಕ ಶೃಂಗ ಸಭೆ ನಡೆಯುತ್ತಿದ್ದಾಗಲೇ ಇತ್ತ ಚೆನೈ ಪಟ್ಟಣ ನೀರಿನಲ್ಲಿ ಮುಳುಗಿ ಹೋಗಿತ್ತು. ಅಧಿಕೃತ ಲೆಕ್ಕಾಚಾರದಂತೆ ಸುಮಾರು 200 ಜನ ಅತಿವೃಷ್ಟಿಯ ಕಾರಣಕ್ಕೆ ಸತ್ತಿದ್ದಾರೆ ಎಂದು ಪತ್ರಿಕಾ ವರದಿಗಳು ಹೇಳುತ್ತಿದ್ದವು. ಸಹಿಷ್ಣು-ಅಸಹಿಷ್ಣು ಚರ್ಚೆಗಳು ನಡೆಯುತ್ತಲೇ ಇದ್ದವು. ಮಲೆನಾಡಿನಲ್ಲಿ ಮಳೆಯ ಕೊರತೆಯಿಂದಾಗಿ ಬತ್ತದ ಗದ್ದೆಗಳು ಒಣಗಿಹೋಗುತ್ತಿದ್ದವು. ತೀರಾ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿಯಿಲ್ಲದಿದ್ದರೂ, ರೈತರಿಗೆ ಆತಂಕದ ಪರಿಸ್ಥಿತಿ ಏರ್ಪಟ್ಟಿರುವುದು ಬೀಸಾಗಿಯೇ ತೋರುತ್ತಿದೆ. ಈ ಮಧ್ಯೆ ಕಾರ್ಯಕ್ರಮ ನಿಮಿತ್ತ ನಮ್ಮಲ್ಲಿಗೆ ಬಂದಿದ್ದ ಶ್ರೀ … Read more
ಬಾಲೀ ಲೆಕ್ಕಾಚಾರ: ಸೂರಿ ಹಾರ್ದಳ್ಳಿ
‘ಬಾಲಿಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಲೇ ನಿಮ್ಮ ವೀಸಾಕ್ಕೆ ‘ಆನ್ ಅರೈವಲ್ ವೀಸಾ’ದಂತೆ ತಲಾ 35 ಡಾಲರ್ ಕೊಡಬೇಕು,’ ಎಂದು ಮೇಕ್ಮೈಟ್ರಿಪ್ನವರು ತಪ್ಪಾಗಿ ಹೇಳುತ್ತಲೆ ನನ್ನ ತಲೆ ಬಿಸಿಯಾಗಿತ್ತು. ನೂರರ ನಾಲ್ಕು, ಅಂದರೆ ನಾಲ್ಕು ನೂರು ಡಾಲರ್ (ಅಮೆರಿಕದ್ದು) ಖರೀದಿಸಿದ್ದೆ. ತೆರಿಗೆ, ಕಮಿಷನ್ ಇತ್ಯಾದಿ ಸೇರಿ ಪ್ರತೀ ಡಾಲರ್ನ ವಿನಿಯಮ ಬೆಲೆ ರೂ. 65.79 ಆಗಿತ್ತು. ಒಬ್ಬರಿಗೆ ಮೂವತ್ತೈದು ಡಾಲರ್ ಎಂದರೆ ಮೂವರಿಗೆ ನೂರೈದು ಡಾಲರ್. ಅಕಸ್ಮಾತ್ ವೀಸಾ ಕೊಡುವಾತ ಚಿಲ್ಲರೆ ಇಲ್ಲ ಎಂದು ಐದು ಡಾಲರ್ ಚಿಲ್ಲರೆ … Read more
ಕಲಾತ್ಮಕ ನೇಯ್ಗೆಕಾರ ಗೀಜಗಹಕ್ಕಿ: ಪ.ನಾ.ಹಳ್ಳಿ..ಹರೀಶ್ ಕುಮಾರ್
ಮಕ್ಕಳೇ ಪಕ್ಷಿಲೋಕ ಬಹು ವೈವಿಧ್ಯಮಯವಾದುದು. ಪ್ರತೀ ಪಕ್ಷಿಯೂ ತನ್ನದೇ ಆದ ವಿಭಿನ್ನತೆಯನ್ನು ಹೊಂದಿರುತ್ತದೆ. ಅವುಗಳ ನೋಟ, ದೇಹರಚನೆ, ಗೂಡುಕಟ್ಟುವಿಕೆ ವೈವಿಧ್ಯವಾಗಿರುತ್ತದೆ. ಅಂತಹ ವೈವಿಧ್ಯತೆಯನ್ನು ಹೊಂದಿದ ಹಕ್ಕಿಗಳಲ್ಲಿ ವಿಶೇಷವಾದುದು ಗೀಜಗ ಹಕ್ಕಿ, ಗೀಜಗನ ಹಕ್ಕಿಯು ಪೆಸ್ಸಾರಿಡೇ ಕುಟುಂಬಕ್ಕೆ ಸೇರಿದ ಹಕ್ಕಿಯಾಗಿದ್ದು, ನೇಯ್ಗೆ ಹಕ್ಕಿ ಎಂದೇ ಚಿರಪರಿಚಿತ. ಆಪ್ರಿಕಾ ಮತ್ತು ದಕ್ಷಿಣ ಏಷ್ಯಾದ ರಾಷ್ಟ್ರಗಳಾದ ಭಾರತ, ಶ್ರೀಲಂಕಾ ಮತ್ತು ಬರ್ಮಾಗಳಲ್ಲಿ ಮಾತ್ರ ಕಂಡುಬರುವ ಗೀಜಗ ಹಕ್ಕಿಯು ನೋಡಲು ಗುಬ್ಬಿಯಷ್ಟೇ ಚಿಕ್ಕದು. ಇದು ಗುಬ್ಬಿಯ ಸಂತತಿಗೆ ಹತ್ತಿರವೂ ಹೌದು. ಈ ಹಕ್ಕಿಯು … Read more
ಮೂವರ ಕವನಗಳು: ಕು.ಸ.ಮಧುಸೂದನ್ ರಂಗೇನಹಳ್ಳಿ, ಅನುರಾಧಾ ಪಿ ಎಸ್., ನಾಗೇಶ ಮೈಸೂರು
ವ್ಯತ್ಯಾಸ! ನಾನು ಗೇಯುತ್ತ ಬಂದೆ ನೀನು ತಿಂದು ತೇಗುತ್ತ ಬಂದೆ ನಾನು ಗೋಡೆಗಳ ಕೆಡವುತ್ತ ಬಂದೆ ನೀನು ಮತ್ತೆ ಅವುಗಳ ಕಟ್ಟುತ್ತ ಬಂದೆ ನಾನು ಭೇದಗಳ ಇಲ್ಲವಾಗಿಸುತ್ತ ಬಂದೆ ನೀನು ಹೊಸ ಭೇದಗಳ ಸೃಷ್ಠಿಸುತ್ತ ಬಂದೆ ನಾನು ಸಹನೆಯ ಕಲಿಸುತ್ತ ಬಂದೆ ನೀನು ಸಹಿಷ್ಣುತೆಯ ಭೋದಿಸುತ್ತ ಬಂದೆ! *** ವಾಸ್ತವ ಮಂದಿರಕ್ಕೆ ಹೋದೆ ಮಸೀದಿಗೆ ಹೋದೆ ಇಗರ್ಜಿಗೆ ಹೋದೆ ದೇವರು ಸಿಗಲೇ ಇಲ್ಲ! ಬೆಟ್ಟಗಳ ಹತ್ತಿದೆ ಕಣಿವೆಗಳ ದಾಟಿದೆ ನದಿಗಳ ಈಜಿದೆ ನಿಸರ್ಗದಲೊಂದಾದೆ ಆತ್ಮದೊಳಗೊಂದು … Read more
ಬಲವಂತದ ಬ್ರಹ್ಮಚಾರಿಗಳು: ಕೃಷ್ಣವೇಣಿ ಕಿದೂರ್
ನಾವು ಕಾಸರಗೋಡಿನ ಕನ್ನಡಿಗರು. ಕರ್ನಾಟಕದ ಉತ್ತರ ಗಡಿಭಾಗದ ಊರು ಕಾಸರಗೋಡು. ಮನೆಗೊಬ್ಬರು, ಇಬ್ಬರ ಹಾಗೆ ಗಲ್ಫ್ ನಲ್ಲಿ ದುಡಿಯುವವರು ಹೆಚ್ಚಿನ ಮನೆಗಳಲ್ಲಿದ್ದಾರೆ. ಅದರಿಂದ , ಅಲ್ಲಿನ ದುಡ್ಡು ಇಲ್ಲಿ ಭವ್ಯ … Read more
ಪ್ರೀತಿಯೆಂದರೆ ಬರೀಯ ಭಾವವಲ್ಲ. . . ನಂಬಿಕೆ !: ಜಯಪ್ರಕಾಶ್ ಪುತ್ತೂರು
ಪ್ರೀತಿ ಬರಿಯ ಎರಡಕ್ಷರ ಅಷ್ಟೇ, ಅಷ್ಟೇನಾ? ಖಂಡಿತಾ ಅಲ್ಲ. ಬರೆಯುತ್ತಾ ಹೋದಂತೆ ಅದೊಂದು ಕಾದಂಬರಿ, ಬರೆದಷ್ಟು ಮುಗಿಯದು ಈ ಪ್ರೀತಿಗೆ ವ್ಯಾಖ್ಯಾನ. ಪ್ರೀತಿ ಒಂದು ಅವ್ಯಕ್ತ ಭಾವ, ಹೆಸರು ಹೇಳುತಿದ್ದಂತೆ ನಮ್ಮನ್ನು ನಾವೇ ಮರೆಸುವ ಸುಂದರ ಶಕ್ತಿ ಈ ಪ್ರೀತಿ. ಕೆಲವೊಮ್ಮೆ ಅನ್ನಿಸುತ್ತೆ ಮಾನವ ಏನೇನೋ ಕಂಡು ಹಿಡಿದ, ಕಂಡು ಹಿಡಿಯುತ್ತಲೇ ಇದ್ದಾನೆ, ಮತ್ತೆ ಈ ಪ್ರೀತಿನಾ ಯಾರು ಹುಡುಕಿದ್ರು? ಗೊತ್ತಾ ಖಂಡಿತಾ ಇಲ್ಲಾರಿ, ಮನಸಲ್ಲಿ ಹುಟ್ಟಿ ಮನಸಲ್ಲೇ ಸಂಚರಿಸೋ ಇದೊಂದು ತರಹ ವಿದ್ಯುತ್, ಇದನ್ನ ಯಾರು … Read more
ನಜರುದ್ದೀನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ
೧. ಹೋಜನ ಕತ್ತೆ ನಜರುದ್ದೀನ್ ಹೋಜ ತನ್ನ ಕತ್ತೆಯನ್ನು ಮಾರುಕಟ್ಟೆಗೆ ಒಯ್ದು ೩೦ ದಿನಾರ್ಗಳಿಗೆ ಮಾರಿದ. ಅದನ್ನು ಕೊಂಡುಕೊಂಡವನು ತಕ್ಷಣವೇ ಕತ್ತೆಯನ್ನು ಹರಾಜಿನಲ್ಲಿ ಮಾರಲು ನಿರ್ಧರಿಸಿದ. “ಅತ್ಯುತ್ತಮ ಗುಣಮಟ್ಟದ ಈ ಪ್ರಾಣಿಯನ್ನು ನೋಡಿ!” ದಾರಿಹೋಕರನ್ನು ತನ್ನತ್ತ ಆಕರ್ಷಿಸಲೋಸುಗ ಅವನು ಬೊಬ್ಬೆಹಾಕಲಾರಂಭಿಸಿದ. “ಇದಕ್ಕಿಂತ ಉತ್ತಮವಾದ ಕತ್ತೆಯನ್ನು ನೀವು ಎಂದಾದರೂ ನೋಡಿದ್ದೀರಾ? ನೋಡಿ, ಇದು ಎಷ್ಟು ಸ್ವಚ್ಛವಾಗಿದೆ, ಎಷ್ಟು ಬಲವಾಗಿದೆ.” ಆ ಕತ್ತೆಯ ಇನ್ನೂ ಅನೇಕ ಒಳ್ಳೆಯ ಗುಣಗಳನ್ನು ಪಟ್ಟಿಮಾಡಿದ. ಇದನ್ನೆಲ್ಲ ಕೇಳಿದ ಒಬ್ಬಾತ ಅದಕ್ಕೆ ೪೦ … Read more
ಸಾಮಾನ್ಯ ಜ್ಞಾನ (ವಾರ 83): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು 1. ರಾಜ್ಯದ ಪ್ರಥಮ ಕ್ಷೀರೋತ್ಪನ್ನ ಘಟಕ ಸ್ಥಾಪನೆಯಾದ ಜಿಲ್ಲೆ ಯಾವುದು? 2. ಐಬಿಆರ್ಡಿ ನ ವಿಸ್ತೃತ ರೂಪವೇನು? 3. ಭೂಮಿ ಒಂದು ಕಾಂತ ಎಂಬ ಪರಿಕಲ್ಪನೆಯನ್ನು ಪ್ರತಿಪಾಧಿಸಿದವರು ಯಾರು? 4. ಸೋಲಾರ್ ವ್ಯವಸ್ಥೆಯ ಬಳಿ ತೆರಳಿದ ಪ್ರಥಮ ಬಾಹ್ಯಾಕಾಶ ನೌಕೆ ಯಾವುದು? 5. ಭಾರತೀಯ ಕೃಷಿ ಸಂಶೋಧನಾ ಮಂಡಳಿ ನೀಡುವ ಪ್ರಶಸ್ತಿ ಯಾವುದು? 6. ಪ್ರಿನ್ಸ್ ಆಫ್ ವೇಲ್ಸ್ ಮ್ಯೂಸಿಯಂ ಎಲ್ಲಿದೆ? 7. ಪ್ರಸಿದ್ಧ ಇತಿಹಾಸ ಕೃತಿ ತೊಘಲಕ್ ನಾಮಾ ಬರೆದವರು ಯಾರು? 8. 2013 … Read more
ಸೌಲಭ್ಯಗಳ ನಿರೀಕ್ಷೆಯಲ್ಲಿಯೇ ಆದಿವಾಸಿಗರು?!: ವಿಜಯಕುಮಾರ ಎಮ್. ಕುಟಕನಕೇರಿ
“ಜನಜೀವನವನ್ನು ಎಚ್ಚರಿಸುವ ದ್ವನಿ ಸಾಹಿತ್ಯದಿಂದ ಬರುತ್ತದೆ. ಸಾಹಿತ್ಯ ಜನಜೀವನದ ಇಂದಿನ ಸ್ಥಿತಿಯನ್ನು ವರ್ಣಿಸಿ ಮುಂದಿನ ಗತಿಯನ್ನು ನಿರ್ಣಯಿಸುತ್ತದೆ. ಕೃತವಿಧ್ಯರಾದ ಯುವಕರು ತಮ್ಮ ಆಕಾಂಕ್ಷೆಗಳನ್ನು ಬರೆದು ಓದಿ, ಮತ್ತೆ ಮತ್ತೆ ಹೇಳಿ ಹೇಳಿ, ಜನರ ಹೃದಯಗಳಲ್ಲಿ ಕಿಡಿಗಳನ್ನು ಬಿತ್ತಬೇಕು” ರಾಷ್ಟ್ರಕವಿ ಕುವೆಂಪು ಅವರ ಲೇಖನಗಳ ಸಾಲುಗಳು ಅಭಿವೃದ್ಧಿಯ ಕೆಚ್ಚೆದೆಯನ್ನು ಹುಟ್ಟಿ ಹಾಕುತ್ತದೆ. ಜ್ಞಾನ ಮತ್ತು ಸಹಕಾರದಿಂದ ಯುವಕರು ಆಧುನಿಕ ಜಗತ್ತಿನಲ್ಲಿ ಪರದೆಯ ಹಿಂದುಳಿದಿರುವ ಜನರನ್ನು ಬೆಳಕಿಗೆ ತರಬೇಕು. ಆದರೆ, ಅಂತಹ ಕಾರ್ಯ ಸಾಧನೆಗೆ ಯುವಕರು ಮುಂದಾಗದೆ, ತಮ್ಮನ್ನು ತಾವು … Read more
ಜಾಗತಿಕ ಹವಾಗುಣ ಬದಲಾವಣೆ ಜಾಥಾ ಹಾಗೂ ವಿಚಾರ ಸಂಕಿರಣದ ಸಂಕ್ಷಿಪ್ತ ವರದಿ: ಅಖಿಲೇಶ್ ಚಿಪ್ಪಳಿ
ಸಾರ್ವಜನಿಕವಾಗಿ ಕಾರ್ಯಕ್ರಮವನ್ನು ಮಾಡದೇ ಹತ್ತಿರ-ಹತ್ತಿರ ವರ್ಷವಾಗಿತ್ತು. ಜಾಗತಿಕ ಹವಾಮಾನ ಬದಲಾವಣೆ ಜಾಥಾವನ್ನು ಹಠಕ್ಕೆ ಬಿದ್ದು ಆಯೋಜಿಸಿದ್ದೆ, ಯಾವುದೇ ಕಾರ್ಯಕ್ರಮ ಮಾಡುವುದಾದರೂ ಮುಖ್ಯವಾಗಿ ಹಣದ ಅವಶ್ಯಕತೆ ಇರುತ್ತದೆ. ಹಣ ಹೊಂದಿಸುವುದು ಸಮಸ್ಯೆಯೇ ಸರಿ. ಜಗದ ಉಳಿವಿಗೆ, ನಾಳಿನ ಮಕ್ಕಳ ಭವಿಷ್ಯಕ್ಕೆ ಏನಾದರೂ ಮಾಡಲೇಬೇಕೆಂದು ಶುರು ಹಚ್ಚಿಕೊಂಡ ಕಾರ್ಯಕ್ರಮಕ್ಕೆ ಹದಿನೈದು ದಿನಗಳಿಂದ ತಯಾರಿ ಮಾಡಲಾಗಿತ್ತು. ಸಾಗರದಂತಹ ಸ್ಥಳದಲ್ಲಿ ಭಾನುವಾರ ಒಂದು ತರಹ ಕಪ್ರ್ಯೂ ಹಾಕಿದ ಹಾಗೆ ಇರುತ್ತದೆ. ಎಲ್ಲಾ ಅಂಗಡಿ ಮುಗ್ಗಟ್ಟುಗಳಿಗೂ ರಜೆ. ಪ್ಯಾರಿಸ್ನಲ್ಲಿ ನಡೆಯಲಿರುವ ಜಾಗತಿಕ ಹವಾಮಾನ ಶೃಂಗ … Read more
ಸಹಜ ಕೃಷಿ-ಬದುಕು ಖುಷಿ: ಮಂಗಳ ಎನ್ ಅಗ್ರಹಾರ
ಕೃಷಿಯು ಆದಿಮ ಕಾಲದಿಂದಲೂ ಮನುಶ್ಯನ ಬದುಕಿನ ಭಾಗವಾಗಿ ಬಂದಿರುವ ವೃತ್ತಿ. ಇಂದಿಗೂ ಕೂಡ ದೇಶದ ಬಹುಪಾಲು ಜನರ ಮೂಲಕಸುಬು ಕೃಷಿಯಾಗಿದೆ. ಸರಳವಾದ ಜೀವನಕ್ರಮವನ್ನು ಪ್ರತಿಪಾದಿಸುತ್ತಾ ರೈತರು ತಾವು ಆಥ್ರ್ರಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಗಳಾಗಿ ಬದುಕಲು ಪ್ರೇರೇಪಿಸುತ್ತದೆ. ಇದರೊಟ್ಟಿಗೆ ಜನರ ಆಲೋಚನೆ, ನೆಲದ ಜೊತೆಗಿನ ಸಂಬಂದ, ಸಂಸ್ಕøತಿ ಮತ್ತು ಪರಿಸರದೊಟ್ಟಿಗಿನ ಭಾವನಾತ್ಮಕ ಒಡನಾಟವನ್ನು ಗಟ್ಟಿಗೊಳಿಸುತ್ತದೆ. ಪರಸ್ಪರ ಆಳು-ಕಾಳುಗಳನ್ನು ವಿನಿಮಯ ಮಾಡಿಕೊಳ್ಳುತ್ತಾ ಹಣದ ಅವಶ್ಯಕತೆಯೇ ಇಲ್ಲದೆ ಬದುಕುತ್ತಿದ್ದ ‘ಆ ದಿನಗಳು’ ಬರಲಾರವು ಎಂಬ ನೋವು ಇಂದಿನ ಪ್ರಗತಿಪರ ರೈತರಲ್ಲಿದೆ. ಸ್ಥಳೀಯವಾಗಿ … Read more
ಅಭಿವೃದ್ದಿ ಯಾರಿಗೆ?: ಕಿರಣ ಆರ್.
ಆದಿವಾಸಿ ಎಂದರೆ ನಮ್ಮಲ್ಲಿ ಅದೆಂತಹದ್ದೋ ಪ್ರೀತಿ ಮತ್ತು ಖುಷಿ. ನಾವು ಸಹ ಆ ಹಂತವನ್ನು ದಾಟಿ ಬಂದಿದ್ದೇವೆ ಎಂದರೆ ನಂಬಲಾಗದ ಸತ್ಯ. ಅವರ ಜೀವನ ಶೈಲಿಯನ್ನು ತಿಳಿಯಲು ಕಾತರತೆಯಿಂದ ಕಾಯುತ್ತೇವೆ. ಅದೆಷ್ಟೋ ಅಂತಹ ಸಿನಿಮಾಗಳನ್ನು ನೋಡಿ ಆಶ್ಚರ್ಯಪಡುವುದುಂಟು. ಗಿಣಿಯ, ಮಾರ, ಸಿಕ್ಕ, ಕಾಸ್ಯಾಲ, ಸೋಲಿಗ, ಜೇನುಕುರುಬ ಎಂಬ ಸಮುದಾಯದ ಮುದ್ದಾದ ಹೆಸರುಗಳು, ಕಾಡಿನೊಂದಿಗಿನ ಅವರ ನಂಟು, ಆಧುನಿಕತೆಯ ಬೂತದೊಂದಿಗೆ ಅವರು ತಮ್ಮನ್ನೊಳಗೊಳ್ಳದೇ, ತಮ್ಮದೇ ಒಂದು ಜೀವನ ಶೈಲಿಯನ್ನು ಗತಕಾಲದಿಂದಲೂ ಸಹ ಪಾಲಿಸಿಕೊಂಡು ಬಂದಿರುವುದು ಅದೆಷ್ಟೋ ಭಾರಿ ನನ್ನನ್ನು … Read more
ತಾಯಿ ಭಾಗ್ಯ: ಸಾವಿತ್ರಿ ವಿ. ಹಟ್ಟಿ
-ಒಂದು- ಅಂವ ರಾತ್ರಿ ಆದ್ರ ಸಾಕು ಹೆದರಿದ ಮೊಲ ಆಕ್ಕಿದ್ದ. ಆಕಿ ಏನು ಕೇಳೂದ ಬ್ಯಾಡ ಹಸಿದ ಹೆಣ್ಣು ಹುಲಿ ಆಕ್ಕಿದ್ಲು. ಆಕೀ ಮೂಲಭೂತ ಬೇಡಿಕೆ ಅಂವಂಗ ಅತಿ ದುಬಾರಿದಾಗಿ ಕಾಣ್ತಿತ್ತು. ರಾತ್ರಿಯಾದ್ರ ಸಾಕು; ಬಡವರು ಸಂತೀಗಿ ಹೋಗುವಾಗ ಪುಡಿಗಾಸ್ನ ಎಣಿಸಿ ಎಣಿಸಿ ನೋಡಿಕೊಂಡು ಹೋಗುವಂಗ ಅಂವ ಇದ್ದಷ್ಟು ತನ್ನ ಗಂಡಸ್ತನನೆಲ್ಲಾ ಒಟ್ಟುಗೂಡಿಸಿಕೊಂಡು ಇವತ್ತರ ಆಕೀನ್ನ ತೃಪ್ತಿಪಡಿಸಲೇಬೇಕು ಅಂತ ಹೋದ್ರೂ ಆಕೀ ಬೇಡಿಕೆಯ ಕಾಲು ಭಾಗನಾದ್ರೂ ಪೂರೈಸದಾ ಹೈರಾಣಾಕ್ಕಿದ್ದ. ‘ನಿನ್ನ ಹಾಡು ಇಷ್ಟಾ ಹೋಗಾ ಮೂಳ’ ಅಂತ … Read more
ಮೂವರ ಕವನಗಳು: ಬಿದಲೋಟಿ ರಂಗನಾಥ್, ನಂದಾ ದೀಪ, ರೇಣುಕಾ ಹೆಳವರ್
ಜೋಲಿ ಕಟ್ಟಿ ತೂಗುವ ನೆಲದವ್ವ ನೆಲದ ಕರುಣೆಯ ತೊರೆಯಲು ಮನಸ್ಸಿಗೆ ಮಾರುದ್ದ ದುಃಖ ಕನಸಿನ ಗುಹೆಗೆ ಭಯದ ಭೈರಿಗೆ ನೆಲದ ಕರುಳ ಮಾತೃಕೆಗೆ ಸೋತು ಭಾವ ಉಕ್ಕಿದ ಮನಸ್ಸೆಂಬ ಸಮುದ್ರ ಮಂಥನಕೆ ಸಾಕ್ಷಿಯೇ ಇಲ್ಲದ ದಾವೆ ಸಿಟ್ಟೆಂಬ ಬೀಜ ಸಿಡಿದರು ಮೊಳಕೆಯಾಗದ ಅನುಬಂಧ ಆದರೂ ನನ್ನವ್ವ ಭೂತಾಯಿಗೆ ನಾನು ಸದಾ ಆಳುಮಗನೆ. ಗುಡಿಸಿದರೂ ಸವೆಯದೆ ಅಗೆದು ಬಗೆದರೂ ಹರಿಯದ ನನ್ನವ್ವಳ ಜೀವದ ಗಟ್ಟಿತನಕ್ಕೆ ಸರ್ವರು ಸವಕಲೇ. ಆದಿಯನ್ನು ಗುಡಿಸದೆ ಇತಿಹಾಸ ನಿರ್ಮಾತೃ ಹೃದಯಕೆ ಜೋಲಿಕಟ್ಟಿ ತೂಗುವ ನೆಲದವ್ವಳ … Read more
ಸಾಬ್ಯ: ಶ್ರೀಮಂತ ರಾಜೇಶ್ವರಿ ಯನಗುಂಟಿ
ಅವನ ಹೆಸರು ಸಾಹೇಬಗೌಡ ಅಂತ. ಅವನನ್ನು ಪ್ರೀತಿಸುವವರು ಪ್ರೀತಿಯಿಂದ ಸಾಬು ಅಂತ ಕರೀತಾರೆ. ಮೊನ್ನೆ ಸಿಕ್ಕಿದ್ದ. ನಮ್ಮ ಪರಿಚಯದವರೊಬ್ಬರ ಮದುವೆಯಲ್ಲಿ. ಅವನೂ ಸಹ ನಮ್ಮ ಊರಿನವನೇ ಆದ್ದರಿಂದ ಊರಿನವರೆಗೂ ಹೋಗಿ ಎಲ್ಲರಿಗೂ ಆಮಂತ್ರಣವನ್ನು ಕೊಟ್ಟು ಅವನೊಬ್ಬನಿಗೆ ಕೊಡದಿರುವುದು ಸರಿಯೆನಿಸುವುದಿಲ್ಲವೆಂಬ ದೃಷ್ಟಿಯಿಂದ ಅವನಿಗೂ ಮದುವೆಗೆ ಆಹ್ವಾನಿಸಿ ಬರಲಾಗಿತ್ತು. ನಮ್ಮ ಪಾಡಿಗೆ ನಾವೂ ಆ ಕೆಲಸ ಈ ಕೆಲಸ ಅಂತ ಓಡಾಡಿಕೊಂಡಿದ್ವಿ. … Read more
ಎಳಸು ಮನಸು ಕಂಡ ಮೊದಲ ನೈಟ್ ಷೋ: ಎಚ್.ಕೆ.ಶರತ್
ಆ ದಿನವೇ ರಿಲೀಸ್ ಆದ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ಮಾರ್ನಿಂಗ್ ಷೋಗೆ ಹೋಗೋಣವೆಂದರೆ ಕೆಲಸದ ಬಾಧೆ. ಎಲ್ಲ ಹಲ್ಲಂಡೆಗಳನ್ನು ಮುಗಿಸಿಕೊಂಡು ಹೊರಟಾಗ ಗಂಟೆ ಏಳಾಗಿತ್ತು. ನಗರ ತುಂಬಾ ಆಕ್ಟೀವ್ ಆಗಿತ್ತು. ಬಿಂಕದ ಮೊರೆ ಹೋದ ಯುವಕ-ಯುವತಿಯರು, ಹಗಲೆಲ್ಲ ಬೆವರು ಸುರಿಸಿ ಬೆಂದಿದ್ದ ಕೂಲಿ ಕಾರ್ಮಿಕರು, ನಾಲಿಗೆಯ ಚಪಲಕ್ಕೆ ಶರಣಾಗಿ ಗೋಬಿ, ಪಾನಿಪೂರಿ, ಕಬಾಬ್ ಗಾಡಿಗಳ ಮುಂದೆ ಕ್ಯೂ ನಿಂತ ನನ್ನಂಥ ತಿಂಡಿ ಪೋತರು… ಒಟ್ಟಾರೆ ನಗರದ ಮುಖ್ಯರಸ್ತೆ ರಂಗು ಬಳಿದುಕೊಂಡಿತ್ತು. ಥಿಯೇಟರ್ನ ಕಾಂಪೌಂಡ್ ಒಳಗೆ ಕಾಲಿಡೋಣವೆಂದರೆ … Read more
ಯುವ ಮನಸ್ಸಿಗೊಂದು ಕಿವಿಮಾತು: ವಸಂತ ಬಿ. ಈಶ್ವರಗೆರೆ.
ಯೌವನಾವಸ್ಥೆ ಪ್ರಾರಂಭದ ಪೂರ್ವದಲ್ಲೇ ವಿವಿಧ ಭಾವನೆಗಳು ಯುವ ಪೀಳಿಗೆಯ ಮನಸ್ಸಿನಲ್ಲಿ ಉದಯಿಸಿರುತ್ತವೆ, ಆದರೆ ಅವು ರೂಪ ಪಡೆದು ನಿಜವಾದ ಆಕಾರವನ್ನು ಪಡೆಯುವುದು ಬಣ್ಣದ ಬದುಕಿನ ಕಾಲೇಜು ಜೀವನಕ್ಕೆ ಕಾಲಿಟ್ಟ ಆನಂತರ. ಒಂದೊಂದು ರೀತಿಯಲ್ಲಿ ಅವರ ಚಿಂತನೆಯ ಆವಿಷ್ಕಾರದ ರೂಪ ಕೆಲವು ಅವಘಡಗಳು ಸಂಭವಿಸಿ ಉತ್ತಮ ರೀತಿಯ ಚಿಂತನೆಯನ್ನು ಮನಸ್ಸಿನಲ್ಲಿ ಮೂಡಿಸಬಹುದು. ಇಲ್ಲವೇ ಅವು ನಕಾರಾತ್ಮಕ ಚಿಂತನೆಯನ್ನು ಪಡೆದು ಸಮಾಜ ಘಾತುಕ ಚಟುವಟಿಕೆಯಲ್ಲಿ ತೊಡಗಲೂ ಪ್ರೇರೇಪಿಸ ಬಹುದು. ಯುವ ಮನಸ್ಸಿನ ಚಿಂತನೆಗಳು ಸಕಾರಾತ್ಮಕವಾಗಿದ್ದಾಗ ಅಂತಹ ವ್ಯಕ್ತಿಗಳಿಂದ ಸಮಾಜಕ್ಕೆ ಉತ್ತಮ ಮಹತ್ವ … Read more
ನಜರುದ್ದೀನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ
೧. ಕಿಕ್ಕಿರಿದ ಮನೆ ಮುಲ್ಲಾ ನಜರುದ್ದೀನ್ ನೆರೆಮನೆಯವನೊಂದಿಗೆ ಒಂದು ದಿನ ಮಾತನಾಡುತ್ತಿರುವಾಗ ಆತ ಬಲು ಸಂಕಟ ಪಡುತ್ತಿರುವವನಂತೆ ಕಾಣುತ್ತಿದ್ದ. ಅವನಿಗೇನು ತೊಂದರೆ ಇದೆ ಎಂಬುದನ್ನು ಮುಲ್ಲಾ ವಿಚಾರಿಸಿದ. ತನ್ನ ಮನೆಯಲ್ಲಿ ಸ್ಥಳಾವಕಾಶದ ಕೊರತೆ ಇರುವುದನ್ನು ಆತ ವಿವರಿಸುತ್ತಾ ಹೇಳಿದ, “ನನ್ನದು ಬಲು ಚಿಕ್ಕ ಮನೆ, ಮುಲ್ಲಾ. ನಾನು, ನನ್ನ ಹೆಂಡತಿ, ನನ್ನ ಮೂರು ಮಕ್ಕಳು, ನನ್ನ ಅತ್ತೆ ಎಲ್ಲರೂ ಇಷ್ಟು ಚಿಕ್ಕ ಮನೆಯಲ್ಲಿ ಒಟ್ಟಿಗೇ ವಾಸ ಮಾಡಬೇಕಾಗಿದೆ. ಸ್ಥಳ ಕಮ್ಮಿ ಇರುವುದರಿಂದ ಓಡಾಡಲು ಸ್ಥಳವೇ ಇಲ್ಲ.” … Read more
ಶ್ರೀ ಗಿರೀಶ್ ರಾವ್ ಹತ್ವಾರ್ (ಜೋಗಿ) ರವರಿಂದ “ಹೊಂಗೆ ಮರದಡಿ” ಕಥಾಸಂಕಲನ ಲೋಕಾರ್ಪಣೆ
ಚಿತ್ರದಲ್ಲಿ : ಹೊಂಗೆ ಮರದ ಕೃತಿ ಲೋಕಾರ್ಪಣೆ ಮಾಡಿದ, ಶ್ರೀ ಗಿರೀಶ್ ರಾವ್ ಹತ್ವಾರ್ (ಜೋಗಿ) ಯವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಮಂಜುನಾಥ ಕೊಳ್ಳೇಗಾಲರವರು, 3K ಬಳಗದ ಅಧ್ಯಕ್ಷೆ ಶ್ರೀಮತಿ ರೂಪ ಸತೀಶ್ ಹಾಗು ಕಾರ್ಯಕಾರಿ ಸಮಿತಿಯ ಸದಸ್ಯರು. ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಸಕ್ರಿಯವಾಗಿರುವ ಹಾಗು ಅಪಾರ ಕನ್ನಡ ಭಾಷಾಭಿಮಾನದ ಸಮಾನ ಮನಸ್ಕರಿಂದ ಕೂಡಿರುವ 3K – ಕನ್ನಡ ಕವಿತೆ ಕಥನ ಬಳಗದ ಮೂರನೇ ಪ್ರಸ್ತುತಿ "ಹೊಂಗೆ ಮರದಡಿ – ನಮ್ಮ ನಿಮ್ಮ ಕತೆಗಳು" ಎಂಬ 26 … Read more
ಸಾಮಾನ್ಯ ಜ್ಞಾನ (ವಾರ 82): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು:- 1. ವಿಶ್ವಸಂಸ್ಥೆಯು ಯಾವ ವರ್ಷವನ್ನು ಅಂತರಾಷ್ಟ್ರೀಯ ಭತ್ತದ ವರ್ಷವೆಂದು ಘೋಷಿಸಿತು? 2. ಐಎಮ್ಸಿ (IMC) ಯ ವಿಸ್ತೃತ ರೂಪವೇನು? 3. ಸೌರಾಷ್ಟ್ರ ಸೋಮೇಶ್ವರ ಇದು ಯಾರ ಅಂಕಿತನಾಮವಾಗಿದೆ? 4. ಗುಲ್ಮಾರ್ಗ ಗಿರಿಧಾಮ ಯಾವ ರಾಜ್ಯದಲ್ಲಿದೆ? 5. ಕರ್ನಾಟಕದ ಶಿವಕಾಶಿ ಎಂದೇ ಪ್ರಸಿದ್ಧ ಪಡೆದ ಊರು ಯಾವುದು? 6. ದಕ್ಷಿಣ ಪಿನಾಕಿನಿ ನದಿಯ ಉಗಮ ಸ್ಥಳ ಯಾವುದು? 7. ನೇಪಾಳದ ಪ್ರಪ್ರಥಮ ಅಧ್ಯಕ್ಷರು ಯಾರಾಗಿದ್ದರು? 8. ಬುದ್ಧಿ ಲಬ್ಧವನ್ನು ಕಂಡುಹಿಡಿಯುವ ಸೂತ್ರದ ಬಗ್ಗೆ ತಿಳಿಸಿದ ಪ್ರೆಂಚ್ ಮನೋವಿಜಾÐನಿ … Read more
ಹಿರೋಶಿಮಾ ನಾಗಸಾಕಿಯ ದುರಂತ ಭಾರತದಲ್ಲಿ ಮರುಕಳಿಸದಿರಲಿ: ಮಂಜುಳ ಎಸ್.
ಬಂಡಾವಾಳವನ್ನು ಮಾತ್ರ ಕೇಂದ್ರವಾಗಿಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಅರ್ಥವ್ಯವಸ್ಥೆಯನ್ನು, ನಿಯಂತ್ರಣದಲ್ಲಿಟ್ಟುಕೊಳ್ಳಲು ಆರಂಭಿಸಿದಾಗಿನಿಂದ ಪರಿಸರ ಮತ್ತು ಪರಿಸರಕ್ಕೆ ಸೇರಿದ ಕೆಲವು ಜನಸಮುದಾಯಗಳು ಜಾಗತಿಕ ಮಟ್ಟದಲ್ಲಿ ಚರ್ಚೆಯ ವಸ್ತುವಾಗಿವೆ. ಪರಿಸರಕ್ಕೆ ನಾವು ಸೇರಿದವರಲ್ಲ, ಪರಿಸರ ನಮಗೆ ಸೇರಿದ್ದು ಎಂದು ಅಲ್ಪಸಂಖ್ಯಾತರಾದ ಬಂಡವಾಳಶಾಹಿಗಳು ಪರಿಸರವನ್ನು ಮತ್ತು ಪರಿಸಕ್ಕೆ ಸೇರಿದ ಕೆಲವು ಜನ ಸಮುದಾಯಗಳನ್ನು ವಿಕೃತವಾಗಿ ಮನಬಂದಂತೆ ದುಡಿಸಿಕೊಳ್ಳುತ್ತಲೇ ಬಂದಿದ್ದಾರೆ. ಈ ದುಡಿಸಿಕೊಳ್ಳುವ ಪ್ರಕ್ರಿಯೆಯ ಪರಿಣಾಮವನ್ನು ಯಾಕೆ ಪರಿಸರವನ್ನೇ ನಂಬಿ, ಪರಿಸರದ ಜೊತೆಯಲ್ಲಿಯೇ ಬದುಕುತ್ತಿರುವವರು ಮತ್ತು ಬಹು ಸಂಖ್ಯಾತರಾದ ಜನ ಸಾಮಾನ್ಯರೇ ಅನುಭವಿಸುತ್ತಿರುವುದು…? ಇದು … Read more
ಮುಂದುವರೆದ ರೈತರ ಆತ್ಮಹತ್ಯೆಗಳು ಸಾವಿನ ಮನೆಯ ತಲ್ಲಣಗಳು: ಎನ್. ಕವಿತಾ
(ಇಡೀ ರಾಜ್ಯದಲ್ಲೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆ ಮಂಡ್ಯ. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಭೇಟಿ ಕೊಟ್ಟು, ಅನ್ನದಾತನ ಸಾವಿಗೆ ಕಾರಣಗಳೇನು? ಸಾವಿನ ನಂತರ ರೈತನ ಕುಟುಂಬ ಸದಸ್ಯರು ಬದುಕಲು ಯಾವ ರೀತಿ ಪಾಡು ಪಡುತ್ತಿದ್ದಾರೆ? ಆ ಕುಟುಂಬಗಳಿಗೆ ಸರ್ಕಾರಗಳು ಮತ್ತು ಸಮಾಜ ಯಾವ ರೀತಿ ಸ್ಪಂದಿಸಿವೆ? ಮಾಧ್ಯಮಗಳ ಸ್ಪಂದನೆ ಯಾವ ರೀತಿಯಿದೆ? ಇತ್ಯಾದಿ ಕುರಿತಂತೆ ಉತ್ತರ ಕಂಡುಕೊಳ್ಳಲು ಯತ್ನಿಸಲಾಗಿದೆ). ಒಕ್ಕಲಾ ಕೇರ್ಯಾಗ ಮಳೀರಾಯ ಮಕ್ಕಳ ಮಾರ್ಯಾರ ಮಳೀರಾಯ! ಒಕ್ಕಲಾ ಕೇರ್ಯಾಗ ಮಕ್ಕಳ ಮಾರಿ … Read more
ಜಾಗತಿಕ ಹವಾಗುಣ ಜಾಥಾ: ಅಖಿಲೇಶ್ ಚಿಪ್ಪಳಿ
ನವಂಬರ್ 30 2015ರಿಂದ ಡಿಸೆಂಬರ್ 11 2015ರ ವರೆಗಿನ ಜಾಗತಿಕ ಹವಾಗುಣ ಶೃಂಗಸಭೆ ಪ್ಯಾರಿಸ್ನಲ್ಲಿ ನಡೆಯಲಿದೆ. 190 ವಿಶ್ವನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ, ಜೊತೆಗೆ ವಿಜ್ಞಾನಿಗಳು, ಹೂಡಿಕೆದಾರರು, ವಿವಿಧ ಕ್ಷೇತ್ರಗಳ ತಜ್ಞರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಭೂಮಿಯ ಮೇಲಿನ ಚರಾಚರಗಳ ಭವಿಷ್ಯದ ದೃಷ್ಟಿಯಿಂದ ಈ ಸಭೆ ಅತ್ಯಂತ ಮಹತ್ವ್ತದ ಸಭೆಯಾಗಲಿದೆ ಎಂದು ತರ್ಕಿಸಲಾಗಿದೆ. ಈ ಸಭೆಯಲ್ಲಿ ಕೈಗೊಳ್ಳುವ ಜಾಗತಿಕ ನಿರ್ಣಯಗಳು ಭೂಮಿಯ ಆರೋಗ್ಯದ ಸೂಚ್ಯಂಕವನ್ನು ಬದಲಿಸಲಿವೆ ಎಂದು ಭಾವಿಸಲಾಗಿದೆ. ಈ ಹಿಂದೆ ಇದೇ ತರಹದ 20 ಶೃಂಗಸಭೆಗಳು … Read more
ಕಡ್ಲೆಕಾಳು ಗಣೇಶನಿಗೆ ಜೈ ಎನ್ನುತ್ತಾ: ಪ್ರಶಸ್ತಿ
ಏಕಶಿಲಾ ನಂದಿಯ ಬಳಿಯಿದ್ದ ಸೈಕಲ್ ಪಡೆದ ನಾವು ಹಂಪಿಬಜಾರಿನ ಮೂಲಕ ಹಂಪಿ ಬಸ್ಟಾಂಡವರೆಗೆ ಬಂದೆವು. ಇಲ್ಲೇ ಹತ್ತಿರದಲ್ಲಿರೋದ್ರಿಂದ ಕಡ್ಲೆಕಾಳು ಗಣೇಶ ಮತ್ತು ಹೇಮಕೂಟದಲ್ಲಿರೋ ದೇಗುಲಗಳನ್ನು ನೋಡೋಣ ಅಂತ ಸೈಕಲ್ ಅತ್ತ ತಿರುಗಿಸಿದೆವು. ಘಂಟೆ ನಾಲ್ಕಾಗುತ್ತಾ ಬಂದಿದ್ದರೂ ಮಧ್ಯಾಹ್ನದ ಊಟ ಮಾಡಿಲ್ಲವೆಂಬ ಚಿಂತೆ ಕಾಡುತ್ತಿರಲಿಲ್ಲ. ಬಾಡಿಗೆ ಸೈಕಲ್ ತಗೊಂಡಿದ್ರೂ ನಡೆದಾಟದಲ್ಲೇ ಅರ್ಧದಿನ ಕಳೆದಾಗಿದೆ. ಮುಂದಿನ ಸ್ಥಳಗಳನ್ನಾದರೂ ಸೈಕಲ್ಲಲ್ಲಿ ನೋಡಬೇಕೆಂಬ ಬಯಕೆ ಆಲೋಚನೆ ಮೂಡುತ್ತಿತ್ತು. ಆ ಆಲೋಚನೆಯಲ್ಲೇ ಕಡ್ಲೆಕಾಳು ಗಣೇಶ ದೇವಸ್ಥಾನಕ್ಕೆ ಸಾರೋ ಏರುಹಾದಿಯಲ್ಲಿ ಸೈಕಲ್ ಓಡಿಸಿದೆವು. ಸೈಕಲ್ಲಿನ ಬಂಪರ್ … Read more