ಹೊಂಗೆ ಮರದ ನೆರಳಿನಲ್ಲಿ: ಅನಿತಾ ನರೇಶ್ ಮಂಚಿ
ಸಾಮಾಜಿಕ ಜಾಲ ತಾಣದಲ್ಲಿ ಒಂದೇ ಬಗೆಯ ವಿಷಯಗಳ ಒಲುಮೆಯ ಆಧಾರದಲ್ಲಿ ಹಲವಾರು ಗುಂಪುಗಳು ನಿತ್ಯವೂ ಹುಟ್ಟಿಕೊಳ್ಳುತ್ತಲೇ ಇರುತ್ತವೆ. ಕೆಲವೊಂದು ಅಲ್ಪಾಯುಷ್ಯದಲ್ಲೇ ಕಾಲನರಮನೆಯನ್ನು ಸೇರಿದರೆ ಇನ್ನು ಕೆಲವು ನಮ್ಮ ಸಮ್ಮಿಶ್ರ ಸರಕಾರಗಳನ್ನು ನೆನಪಿಸುತ್ತವೆ. ತಾವೂ ಏನೂ ಧನಾತ್ಮಕ ವಿಷಯಗಳನ್ನು ನೀಡದೇ, ನೀಡುವವರ ಬಗ್ಗೆಯೂ ಮೆಚ್ಚುಗೆಯ ಮಾತನ್ನಾಡದೇ ಕೇವಲ ಕಾಲೆಳೆಯುವುದನ್ನೇ ಉದ್ಯೋಗವಾಗಿಸಿಕೊಂಡಂತವು. ಮತ್ತೆ ಹಲವು ಹೊಸಾ ಅಗಸ ಬಟ್ಟೆ ಒಗೆದಂತೆ ಮೊದ ಮೊದಲು ಶುಭ್ರವಾಗಿಯೂ, ಸ್ವಚ್ಚವಾಗಿಯೂ ಕಾಣುತ್ತಿರುತ್ತವೆ. ದಿನ ಕಳೆದಂತೆ ಕೊಳಕುಗಳೇ ಉಳಿದು, ಅಲ್ಲಿಂದ ಹೊರ ಬೀಳುವ ದಾರಿಗಾಗಿ ಚಡಪಡಿಸುವಂತಾಗುತ್ತದೆ. … Read more