ಗಣಪನೆಂಬ ಅದ್ಭುತ: ಪ್ರಸಾದ್ ಕೆ.

ಕತೆ, ಕವಿತೆ, ಕ್ರೈಮು, ಕಾರ್ಟೂನು, ಸಿನಿಮಾ, ಟೀಕೆ-ಟಿಪ್ಪಣಿ, ಸತ್ವವಿಲ್ಲದ ಸರ್ಕಾರಿ ಪತ್ರಗಳು, ಆಫೀಸಿನ ನೀರಸ ಮಣಭಾರದ ರಿಪೋರ್ಟುಗಳು ಹೀಗೆ ಹಿರಿ, ಕಿರಿ, ಕಿರಿಕಿರಿಯೆನ್ನಿಸುವ ಏನೇನೋ ವಿಷಯಗಳ ಬಗ್ಗೆ ಬರೀತಾ ಬರೀತಾ ಚೌತಿಯ ಗಣೇಶನ ಬಗ್ಗೆ ವಾರದ ವಿಶೇಷ ಪುರವಣಿಗೆ ಬರೆಯುವುದೇ ಒಂದು ಖುಷಿ. ಗಣಪತಿ ಎಂದರೆ ನನಗೆ ಹೊಸ ಜಗತ್ತು ತೆರೆದುಕೊಳ್ಳುತ್ತದೆ. ನನಗೆ ಗಣಪ ಎಂದರೆ ಏನೆಲ್ಲಾ, ಎಷ್ಟೆಲ್ಲಾ… ಅತಿಮಧುರ ಸಂಸ್ಕøತ ಶ್ಲೋಕಗಳನ್ನು ಬದಿಗಿಟ್ಟುಕೊಂಡರೂ ಗಣಪತಿಯೆಂದರೆ ನನ್ನದೇ ಹಲವು ವರ್ಷನ್ನುಗಳು ನನಗೆ. 'ಗಣೇಶ' ಎಂದರೆ ಗಣೇಶನ ಮದುವೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಹೊಸತಾಗಿ ಮತಾಂತರಗೊಂಡವನು ಒಂದು ಊರಿನಲ್ಲಿ ಒಬ್ಬ ಮುಸಲ್ಮಾನ ಹಾಗು ಒಬ್ಬ ಕ್ರೈಸ್ತಮತೀಯ ಸ್ನೇಹಿತರು ನೆರೆಹೊರೆವಾಸಿಗಳಾಗಿದ್ದರು. ಇವರೀರ್ವರಲ್ಲಿ ಪ್ರತಿಯೊಬ್ಬನಿಗೂ ಇನ್ನೊಬ್ಬನ ಯೋಗಕ್ಷೆಮದ ಕಾಳಜಿ ಇದ್ದದ್ದರಿಂದ ಆರೋಗ್ಯದ ಹಾಗು ಇನ್ನಿತರ ಖಾಸಗಿ ವಿಷಯಗಳ ಕುರಿತು ಆಗಾಗ್ಗೆ ವಿಚಾರವಿನಿಮಯ ಮಾಡಿಕೊಳ್ಳುತ್ತಿದ್ದರು. ಬಲು ಶ್ರದ್ಧೆಯಿಂದ ಇಸ್ಲಾಂ ಮತಾಚರಣೆಗಳನ್ನು ಮಾಡುತ್ತಿದ್ದ ಮುಸಲ್ಮಾನನು ತನ್ನ ಮತದ ಹಿರಿಮೆಯನ್ನು ಬಹುವಾಗಿ ಹೇಳುತ್ತಿದ್ದದ್ದರ ಪರಿಣಾಮವಾಗಿ ಕ್ರೈಸ್ತಮತೀಯನು ಇಸ್ಲಾಂ ಮತಕ್ಕೆ ಮಾತಾಂತರಗೊಂಡನು.  ಮತಾಂತರಗೊಂಡ ಮಾರನೆಯ ದಿನ ಬೆಳಗಿನ ಜಾವದಲ್ಲಿ ಅವನ ಮನೆಯ ಬಾಗಿಲನ್ನು ಯಾರೋ ಜೋರಾಗಿ ಬಡಿಯುತ್ತಿದ್ದದರಿಂದ ಅರೆನಿದ್ದೆಯಲ್ಲಿದ್ದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒತ್ತಡ ರ(ಸ!)ಹಿತ ಶಿಕ್ಷಣ: ಗುರುಪ್ರಸಾದ್ ಕುರ್ತಕೋಟಿ

"ರೀ ನಿಮ್ಮ ಮಗಳು ಹೋಂ ವರ್ಕ್ ಮಾಡಿಲ್ಲ" ಮಗಳ ಅಮ್ಮ ಕೂಗುತ್ತಿದ್ದಳು! ಆ ದನಿ ನನಗೆ ಅಂತರಿಕ್ಷ ವಾಣಿ ಥರ ಕೇಳುತ್ತಿತ್ತು. ಯಾಕಂದ್ರೆ, ನಮ್ಮ ಕಂಪನಿಯವರು ಇವನು ಸಮಧಾನದಿಂದಿರಲೇ ಕೂಡದು ಅಂತ ನಿರ್ಧರಿಸಿ, ದಯಪಾಲಿಸಿದ್ದ ಬ್ಲ್ಯಾಕ್ ಬೆರ್ರಿ (ವರ್ರಿ ಅಂತಿದ್ರೆ ಇನ್ನೂ ಚೆನ್ನಾಗಿರುತ್ತಿತ್ತೇನೋ) ಎಂಬ ಮೊಬೈಲ್ ನಲ್ಲಿ ಇಮೇಲ್ ಗಳ ಮಧ್ಯೆ ನಾನು ಹುದುಗಿ ಹೋಗಿದ್ದೆ.  ಮೊದಲೆಲ್ಲಾ ನಮ್ಮ ಹಿರಿಯರು ಬೆಳಿಗ್ಗೆ ಎದ್ದ ಕೂಡಲೇ ಅಂಗೈ ನೋಡಿಕೊಂಡು "ಕರಾಗ್ರೆ ವಸತೇ ಲಕ್ಷ್ಮಿ…" ಹೇಳುತ್ತಿದ್ದರೆ ಕಲಿಯುಗದಲ್ಲಿ ನಾವು ಅಂಗೈಯಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೃಷ್ಣ ಪ್ರೇಮದಲ್ಲಿ ನಾವೆಲ್ಲರೂ….: ಅಭಿ ಸಾರಿಕೆ

ಅಚ್ಯುತಮ್, ಕೇಶವಂ ಕೃಷ್ಣ ದಾಮೋದರಂ ಜಾನಕಿವಲ್ಲಭಂ ವಾಸುದೇವಂ ಭಜೇ… ಕೃಷ್ಣ ಎಂಬ ಹೆಸರೇ ಮನಕ್ಕೆ ಒಂದು ರೀತಿಯ ಆನಂದ ತರುತ್ತದೆ, ಕೃಷ್ಣ ಸರ್ವಾಂತರ್ಯಾಮಿ ಅಂದರೆ ಸರ್ವರ ಅಂತರಂಗಗಳಲ್ಲೂ ಅಲೆವವನು, ಅವನಿಲ್ಲದ ಉಸಿರಿಲ್ಲ. 'ಕೃಷ್ಣಂ ವಂದೇ ಜಗದ್ಗುರು' ಕೃಷ್ಣನೇ ಜಗದ ಗುರು, ಜಗದ ಗುರುವಾದ ಕೃಷ್ಣನೇ ನಿನಗೆ ವಂದಿಸುವೆ.  ನಾವೆಷ್ಟೆ ದೇವರನ್ನು ಪೂಜಿಸಿದರು ಆ ಪೂಜೆಯಲ್ಲೊಂದು ಭಯವಿರುತ್ತದೆ. ಆದರೆ ಕೃಷ್ಣನ ವಿಷಯ ಹಾಗಲ್ಲ ಆತನ ಪೂಜಿಸಲು ಭಯ ಪಡಬೇಕಿಲ್ಲ ಪ್ರೇಮ ಮಿಳಿತವಾದ ಭಕ್ತಿಯೊಂದಿದ್ದರೆ ಸಾಕು, ಕೃಷ್ಣನನ್ನು  ನಮಗೆ ಬೇಕಾದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕುಕ್ಕೆಯಲ್ಲೊಂದು ಪಂಕ್ಚರ್ ಕತೆ: ಪ್ರಶಸ್ತಿ

ಹಿಂದಿನ ಭಾಗದಲ್ಲಿ ಓದಿದಂತೆ ಟ್ರಿಪ್ಪಿನುದ್ದಕ್ಕೂ ಯೋಗಾಯೋಗಗಳೆಂಬ ನಾಣ್ಯದ ಮುಖಗಳು ಕ್ಷಣಕ್ಷಣಕ್ಕೂ ನಮಗೆ ಮುಖಾಮುಖಿಯಾಗುತ್ತಲೇ ಇದ್ದವು. ಬಿಸಿಲೆಯಲ್ಲಿ ಹಾಸನ ಸಂರಕ್ಷಿತ ಅರಣ್ಯ ಪ್ರದೇಶ ಅನ್ನೋ ಬೋರ್ಡು ಕಂಡಿದ್ದರೂ ಅದರ ಕೆಳಗೆ ಸಣ್ಣಕ್ಕಿದ್ದ ಬಿಸಿಲೆ ವೀವ್ ಪಾಯಿಂಟಿಗೆ ದಾರಿಯೆಂಬ ಬೋರ್ಡು ಕಾಣದೇ ಬಿಸಿಲೆಯ ಮೊದಲ ವೀವ್ ಪಾಯಿಂಟ್ ಮಿಸ್ಸಾಗಿತ್ತು. ಕುಕ್ಕೆಗೆ ಬಂದ ಬಹುತೇಕ ಮಂದಿ ಬಂದೇ ಹೋಗುವ ಗಡಿಮಾರಮ್ಮನ ದೇವಸ್ಥಾನ ಮಿಸ್ಸಾಗೇ ಹೋಗ್ತಿತ್ತೇನೋ ಅಲ್ಲಿನ ಗೇಟು ಹಾಕಿ, ಅದನ್ನ ತೆಗಿಯೋಕೆ ಅಂತ ನಾನು ಕೆಳಗಿಳಿಯದೇ ಹೋಗಿದ್ದರೆ. ಮೊದಲೆರಡು ಪಂಕ್ಚರ್ರುಗಳಾಗದೇ ಹೋಗಿದ್ದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾರತೀಯ ಸನ್ನಿವೇಶದಲ್ಲಿ ಹವಾಮಾನ ಬದಲಾವಣೆ – ಒಂದು ನೋಟ– 7: ಅಖಿಲೇಶ್ ಚಿಪ್ಪಳಿ

ಕೊನೆಯ ಕಂತು: ವಸ್ತುಗಳು ಇವತ್ತು ಜನರನ್ನು ಆಳುತ್ತಿವೆ. ಟಿ.ವಿ.ಯಲ್ಲಿ ಬರುವ ಪ್ರತಿಯೊಂದು ವಸ್ತುವೂ ಮನುಷ್ಯನಿಗೆ ಅತಿ ಅಗತ್ಯ ಎಂದು ಬಿಂಬಿಸಲಾಗುತ್ತಿದೆ. ಪ್ರತಿಯೊಂದಕ್ಕೂ ಯಂತ್ರಗಳ ಬಳಕೆ ಶುರುವಾಗಿದೆ. ನಿಮ್ಮಲ್ಲಿ ವಾಶಿಂಗ್ ಮಷಿನ್ ಇಲ್ಲ ಅಂದರೆ ನಿಮ್ಮ ಸಾಮಾಜಿಕ ಸ್ತರದಲ್ಲಿ ಒಂದು ಮೆಟ್ಟಿಲು ಕಡಿಮೆಯಾಗುತ್ತದೆ. ಯಂತ್ರಗಳ ಸಂಖ್ಯೆ ನಿಮ್ಮ ಮನೆಯಲ್ಲಿ ಹೆಚ್ಚು-ಹೆಚ್ಚು ಇದ್ದ ಹಾಗೆ ನಿಮ್ಮ ಸಾಮಾಜಿಕ ಸ್ತರ ಸದಾ ಮೇಲ್ಮುಖಿಯಾಗಿಯೇ ಇರುತ್ತದೆ. ಹವಾಮಾನ ಬದಲಾವಣೆಗೂ ಹಾಗೂ ವೈಯಕ್ತಿಕ ಬದುಕಿಗೂ ನೇರ ಸಂಬಂಧವಿದೆ. ನಿಮ್ಮ ಜೀವನಶೈಲಿಯ ಬದಲಾವಣೆಯಿಂದಾಗಿ ನೀವೊಬ್ಬ ಪರಿಸರಸ್ನೇಹಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಬಿದಲೋಟಿ ರಂಗನಾಥ್, ರಾಘವ ಹರಿವಾಣಂ, ಕು.ಸ.ಮಧುಸೂದನ್ ನಾಯರ್

ಏಕ ಶೀಲಾ ಬೆಟ್ಟ ನೋಡುತ್ತಲೇ ಇದ್ದೇನೆ ಬೆಳೆಯದೇ ಕೊರಗದೆ ಕರಗದೆ ಜುಮ್ಮನ್ನದೇ ಕೂತಿದೆ ಎದೆಯ ಭಾಗಕ್ಕೆ ಅಂಗಾಲೂರಿ ಸಾಗಿದರೆಷ್ಟೋ ಜನ ನಾನೂ ಕೂಡಿ. ಸಾಯದೆ ಹಿಗ್ಗುತ್ತಿದೆ ಸೊಗಸು ಬಿನ್ನಾಣ. ನನ್ನಿಂದೆ ಬಂದೋದವರ ಬಿಸಿಯುಸಿರ ಪಿಸುನುಡಿ ಏದುಸಿರ ಬಿಚ್ಚು ಮೆದೆ ಜೀವಂತ ಸದಾ… ನರ ಹೊತ್ತ ಬೆಳ್ಳಕ್ಕಿಗಳ ಕೋಮಲ ಪಾದಗಳ ಸ್ಪರ್ಶ ಸೋಕಿ ನಿರಂತರ ಎಚ್ಚರ ರಸಿಕತೆಯಲಿ ಒಳಗೊಳಗೆ ಖುಷಿಯ ಮೈದವಡುತ ಕೂತಿದೆ ಸುಮ್ಮನೆ ಬಿಮ್ಮನೆ ಯಾರು ಹತ್ತಿದರು ಅಪ್ಪಿದರು ಒದ್ದರು  ಬೇಸರವಿಲ್ಲ ಜಗಜಟ್ಟಿ ಮಲ್ಲನಿಗೆ ಬೆತ್ತಲ ಮನಸ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಫ್ಲಾಪಿಬಾಯ್ ಮತ್ತು ಲಗೋರಿಬಾಬಾ-4

ಬೆಳಕಿನ ಮರಗಳ ರಹಸ್ಯ     “ಲಗೋರಿಬಾಬಾ ಫ್ರೀ ಇದೀರಾ ಈ ವಾರ? ಸಾಧ್ಯವಾದ್ರೆ ನನ್ನ ಜೊತೆ ಶ್ರೀಲಂಕಾಗೆ ಬನ್ನಿ. ಒಂದು ರಹಸ್ಯದ ಬಗ್ಗೆ ಅಧ್ಯಯನ ಮಾಡಲು ಡಾ.ಕೋವೂರ್ ಜೊತೆ ಹೋಗೋಣ.” ಫ್ಲಾಪಿಬಾಯ್ ಕೇಳಿದ ಲಗೋರಿಬಾಬಾನಿಗೆ.     “ಏನು ರಹಸ್ಯ? ಡಾ. ಕೋವೂರ್ ಅಂದ್ರೆ ಯಾರು? ಸಿಲೋನ್‍ಗೆ ಅವಶ್ಯವಾಗಿ ಹೋಗೋಣ. ನಾನು ಎಲ್ಲಿಗಾದರೂ ಸೈ” ಲಗೋರಿಬಾಬಾ ಪ್ರತ್ಯುತ್ತರಿಸಿದ.     “ಶ್ರೀಲಂಕಾದ ಉತ್ತರ ಭಾಗದಲ್ಲಿ ಮನ್‍ಕುಳಮ್ ಅಂತ ಊರಿದೆ. ಆ ಊರಿನ ಕಾಡಿನ ಬೇಟೆಗೆ ಬೇರೆ ಬೇರೆ ಕಡೆಯಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾರತದಲ್ಲಿ ಜಾತಿವ್ಯವಸ್ಥೆ: ದ್ಯಾವನೂರ್ ಮಂಜುನಾಥ್

“ಮಳೆಯ ಭರದಿ ತಿಳಿಯ ಮಣ್ಣು ಒಳಗು ಹೊರಗೂ ಏಕವಾಗಿ ಸೋರುತಿಹುದು ಮನೆಯ ಮಾಳಗಿ ಅಜ್ಞಾನದಿಂದ…..” ಇದನ್ನು ಬಗೆಹರಿಸಲು ಬುದ್ಧ ಬಸವಣ್ಣನಂತಹ ಮಹಾತ್ಮರು ಎಲ್ಲಿ ಸೋತರು ಎನ್ನುವ ಪ್ರಶ್ನೆ ನನ್ನಲಿ ಸದಾ ಪ್ರಶ್ನಿಸುತ್ತಿರುವೆ. ಈ ಒಂದು ಪ್ರಶ್ನೆಗೆ ನಮ್ಮ ಬಳಿ ಸ್ಪಷ್ಟವಾದಂತಹ ಉತ್ತರವಿಲ್ಲ ಯಾಕೆಂದರೆ ಭಾರತದಲ್ಲಿ ಜಾತಿವ್ಯವಸ್ಥೆ ಇದೆಯೆ? ಎನ್ನು ಗೊಂದಲದ ಪ್ರಶ್ನೆ ಹುಟ್ಟುತ್ತದೆ. ಇಂದಿನ ನಮ್ಮ ಸಮಾಜ ವಿಜ್ಞಾನಗಳಲ್ಲಿ ನಡೆಯುವ ಪ್ರಭಕಾರಿಯಾದ ಸಂಶೋಧನೆಯಲ್ಲಿ ನೋಡುವಂತಹದ್ದು ಐಡಿಯಾಲಾಜಿಕಲ್ ಸ್ವರೂಪದ್ದೆ ವಿನಃ ಯಾವುದೇ ರೀತಿಯಲ್ಲಿ ವೈಜ್ಞಾನಿಕ ಸ್ವರೂಪದಲ್ಲ.     ಇತ್ತೀಚಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾಲ್ಕನಿ ವರ್ಸಸ್ ಗಾಂಧಿಕ್ಲಾಸ್: ಎಚ್.ಕೆ.ಶರತ್

ಬಾಲ್ಕನಿ 1 ಅಲ್ಲೊಂದಿಷ್ಟು ಮಂದಿ ಕುಂತಿದ್ದಾರೆ. ತಮ್ಮನ್ನು ತಾವು ಸುಸಂಸ್ಕøತರೆಂದು ಭಾವಿಸಿದವರು. ಹಾಗವರು ಅಂದುಕೊಳ್ಳಲು ಕಾರಣವೂ ಇದೆ. ಅವರ ಬಳಿ ಕಾಸಿದೆ. ಓದಿ ತಿಳಿದುಕೊಂಡವರು ಎಂಬ ಅಹಂ ಅವರನ್ನು ಅಮರಿಕೊಂಡಿದೆ. 2 ಅವರ ಮೈವಾಸನೆ, ಪೂಸಿಕೊಂಡ ಸೆಂಟಿನ ಸರಳಿನೊಳಗೆ ಬಂಧಿಯಾಗಿದೆ. ಸದ್ಯಕ್ಕೆ ಸೆಂಟು ಸ್ರವಿಸುವ ಸುವಾಸನೆಯೇ ಅವರ ಮೈವಾಸನೆ. 3 ರಂಗು ರಂಗಾದ ದಿರಿಸುಗಳು ಅವರೆಲ್ಲರ ಮೈಯನ್ನು ಆವರಿಸಿವೆ. ಫ್ಯಾನ್ಸಿ ಸೀರೆ ಉಟ್ಟ ಮಹಿಳೆಯರು, ಟೈಟ್ ಜೀನ್ಸ್, ಚೂಡಿದಾರ್ ಇತ್ಯಾದಿ ಇತ್ಯಾದಿ ತೊಟ್ಟುಕೊಂಡ ಹುಡುಗಿಯರು, ಅವರೊಂದಿಗೆ ಡೀಸೆಂಟಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೊ. ಎಂ.ಎಂ. ಕಲ್ಬುರ್ಗಿ ನಾನು ಕಂಡಂತೆ.. : ಗಿರಿಜಾಶಾಸ್ತ್ರಿ, ಮುಂಬಯಿ.

ಸುಮಾರು 1990ರ ಆಸುಪಾಸು. ಪ್ರೊ. ಎಂ.ಎಂ. ಕಲ್ಬುರ್ಗಿ ಯವರು ಒಂದು ಉಪನ್ಯಾಸ ಮಾಡಲು ಮುಂಬಯಿ ವಿ.ವಿಯ ಕನ್ನಡ ವಿಭಾಗಕ್ಕೆ ಬಂದಿದ್ದರು. ಬಹುಶಃ ಅವರ “ಮಾರ್ಗ” ಸಂಪುಟಗಳ ಬಗ್ಗೆ ಮಾತನಾಡಿದರೆನಿಸುತ್ತೆ. ಅದರ ವಿವರಗಳು ಈಗ ಸರಿಯಾಗಿ ನೆನಪಿಲ್ಲದಿದ್ದರೂ, ನಮ್ಮನ್ನೆಲ್ಲಾ ಅಂದು ಬೆರಗುಗೊಳಿಸಿದ್ದ ಅವರ ಪಾಂಡಿತ್ಯದ ಆಳ ಅಗಲಗಳ ವರ್ಚಸ್ಸು, ಆ ಪ್ರಭಾವ ಇನ್ನೂ ಹಸಿಯಾಗಿಯೇ ಇದೆ. ಕಲ್ಬುರ್ಗಿಯವರನ್ನು ನಾನು ಮೊದಲ ಸಲ ನೋಡಿದ್ದು ಹೀಗೆ. ಆಗ ನಮ್ಮ ಮಾರ್ಗದರ್ಶಕರಾಗಿದ್ದ ಪ್ರೊ. ತಾಳ್ತಜೆ ವಸಂತ ಕುಮಾರ್ ಅವರು ಅಲ್ಲಿನ ಎಲ್ಲಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಣಪನ ಚೌತಿಯೂ ರುಬ್ಬುವ ಕಲ್ಲೂ..: ಅನಿತಾ ನರೇಶ್ ಮಂಚಿ.

.  ಎಳ್ಳುಂಡೋಳಿಗೆ ಕಬ್ಬು ಮೆಲುವವಗೇ.. ಎಂದು ಅಪ್ಪ ಸುಶ್ರಾವ್ಯವಾಗಿ ಯಕ್ಷಗಾನೀಯ ಸ್ಟೈಲಿನಲ್ಲಿ ಬೆಳಗ್ಗೆಯೇ ಹಾಡಲು ಶುರು ಮಾಡಿದ್ದರು. ಹಿಮ್ಮೇಳವಾಗಿ ತೆಂಗಿನಕಾಯಿ ಹೆರೆಯುವ ಸದ್ದು ಜೊತೆಗೆ ಕೇಳಿ ಬರುತ್ತಿತ್ತು.  ಅಮ್ಮ ಮೂರ್ನಾಲ್ಕು ತೆಂಗಿನಕಾಯಿಗಳನ್ನು ಒಡೆದು ತಂದು ಅಪ್ಪನ ಮುಂದಿಟ್ಟು ಕ್ಲಿನಿಕ್ಕಿಗೆ ಹೋಗೋ ಮೊದಲು ಇದಿಷ್ಟು ತುರಿದುಕೊಟ್ಟು ಹೋಗಬೇಕು ಅಂತ ಫರ್ಮಾನ್ ಹೊರಡಿಸಿದ್ದಳಲ್ಲಾ.. ಅಪ್ಪನ ಆಲಾಪಕ್ಕೆ ಸರಿಯಾಗಿ ಕಾಯಿ ತುರಿಯುವ ವೇಗ ವೃದ್ಧಿಸುವುದು, ಕಡಿಮೆಯಾಗುವುದು ನಡೆಯುತ್ತಿತ್ತು.  ಈಗ ಅಡುಗೆ ಮನೆಗೆ ಹೋದರೆ ಅಮ್ಮ ಏನಾದರೂ ಕೆಲಸ ಅಂಟಿಸುತ್ತಾಳೆ ಎಂದು ನನಗೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೀಗೊಂದಿಷ್ಟು ಕಥೆಗಳು (ಕಥೆಗಳಾ !!?) … : ಸುನೀತಾ ಮಂಜುನಾಥ್

ಹೀಗೊಂದಿಷ್ಟು ಕಥೆಗಳು ಪುಟ್ಟ ಪಾದಗಳಿಗೆ ಗೆಜ್ಜೆ ತೊಡಿಸಿದ್ದ ಅಪ್ಪ 'ಮಹಾಲಕ್ಷ್ಮಿಯ ಕಾಲು ಅಂತ ಮುತ್ತಿಟ್ಟಿದ್ದ  …  ಮದುವೆಯಾದ ವರ್ಷದೊಳಗೆ ಕುಡಿತ ಚಟವಾಗಿದ್ದ ಮಾವ ತೀರಿ ಹೋದ ಅತ್ತೆ ಮೈದುನಂದಿರು 'ಅದ್ಯಾವ ಘಳಿಗೆಯಲ್ಲಿ ಕಾಲಿಟ್ಟಳೋ ಮಾವನ್ನೇ ತಿಂದ್ಬಿಟ್ಲು' ಅಂತ ಮುಖ ಮುರಿದರು …  **** ಈವತ್ತು ಉಪವಾಸದ ಹಬ್ಬ (ಏಕಾದಶಿ )' ಅಂದ್ಲು ಅಮ್ಮ . ನಕ್ಕುಬಿಟ್ಟಳು   'ಅದೆಷ್ಟೋ ವರ್ಷಗಳಿಂದ  ದಿನಾ ಎರಡ್ಹೊತ್ತು ಉಪವಾಸ ಮಾಡ್ತಾನೆ ಇದ್ದೇವೆ . ಅದಕ್ಕೂ ಒಂದು ಹಬ್ಬ ಬೇಕೇ'   ಎಂಬಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಫ್ಲಾಪಿಬಾಯ್ ಮತ್ತು ಲಗೋರಿಬಾಬಾ-3: ಫ್ಲಾಪಿಬಾಯ್

ಗಣೇಶ ಬಂದ ಫ್ಲಾಪಿಬಾಯ್ ಮಾತಿಂದ ಕರೆಂಟ್ ಕಂಡುಹಿಡಿಯಬೇಕೆಂದು ಶತಾಯಗತಾಯ ಪ್ರಯೋಗನಿರತನಾಗಿದ್ದ. ಲಗೋರಿಬಾಬಾ ಎಲ್ಲಿಂದಲೋ ಒಂದಷ್ಟು ಬೂದಿ ತಂದ್ಕೊಂಡು ಮುಲ್ತಾನಿ ಮಿಟ್ಟಿ ತರಾ ಮೈಗೆಲ್ಲಾ ಹಚ್ಕೊಂಡು ಇಡೀ ಬಾಡಿನೇ ಫೇಷಿಯಲ್ ಮಾಡ್ಕೊಳ್ತಾ ಇದ್ದ. ಅದೇ ಟೈಮಿಗೆ ಬಂದ್ರು ನಾಲ್ಕಾರು ಜನರು- ಕೈಲಿ ರಶೀದಿ ಪುಸ್ತಕ ಹಿಡ್ಕಂಡು! “ಅಣಾ ಏರಿಯಾದಲ್ಲಿ ಗಣೇಶನ್ನ ಕೂರಿಸ್ತಾ ಇದೀವಿ ಚಂದಾ ಕೊಡಿ, ಏಯ್! ಫ್ಲಾಪಿ ಅಣ್ಣನ ಹೆಸ್ರಲ್ಲಿ ಬರ್ಕೊಳೋ ಎರಡು ಸಾವಿರ” ತಮ್ಮವರತ್ರಾನೆ ಹೇಳಿ ಬರ್ಕೊಳೊಕೆ ಅಣಿಯಾದ ಗಣೇಶ ಕೂರಿಸೋ ಕಬಳೇಶ. “ತಡ್ರಪಾ, ನನ್ನತ್ರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಸಿಪಿಲೆ ನಂದಿನಿ, ಸಾವಿತ್ರಿ ವಿ. ಹಟ್ಟಿ, ಅನುರಾಧ ಪಿ. ಸಾಮಗ

ಮಲೆಗಳಲಿ ಮರೆಯಾದದ್ದು ಬೇಸಿಗೆ ಮಲೆಯ  ಕುಳಿರ್ಗಾಳಿ ಶ್ರೀಗಂಧ-ರಕ್ತಚಂದನ ಸುವಾಸನೆ ವನರಾಜಿಗಳಲಿ ಸುಯ್ಯಲು.. ಸೋನೆಗತ್ತಲೊಳಗೆ ಹಸಿರುತಂಗಾಳಿ  ಸಿರಿಗೆ ಕಾನನಗಳು ಶೃಂಗಾರ ಗೊಂಡಿರಲು.. ಎಳೆಬೆಳಕು ಮಲೆಯ ಮುಕುಟವ ತೆರೆಯಲು ಕವಳದ ಸೊಬಗೊಳಗೆ.. ಹಕ್ಕಿ ಇಂಚರ ಅಖಂಡ  ಐಕ್ಯತೆಯೊಳಗೆ ಮುಚ್ಚಲು.. ಮಿಂಚು ತುಂಬಿದ  ಮಹಾಬಯಲು ಅಗೋಚರ  ಮರೆಯಾಕೃತಿಯ ಕಾನನವೆಲ್ಲ ಸಂಚರಿಸಲು ಹರ್ಷಕವಳವೆ ಸುರಿಯಲು ಹಸಿರುಬೇಟೆಗೆ ಹೊಂಚು ಹಾಕುತ್ತಿದ್ದ  ಮುಸುಕಧಾರೆ ರೈಫಲ್‍ಗಳು ಮಲೆಯಸಿರಿಯ ಶೃಂಗಗಳ ಹೆದರಿಸಲು ಹಸಿರೆಲೆಮೇಲೆ ಅತ್ಯಾಚಾರ ಬೆಳಕ ಝರಿಒಡಲಲಿ ಹಸಿರುರಕ್ತದ ನೋವಿಗೊಂದು  ದೊರಕದ ನ್ಯಾಯ ಕಾಡು ಕೆಂಪು ನಕ್ಷತದೇವತೆ  ನರಳಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೌರಿಯ ಕಂದ ಗಜಮುಖ ತಾಯಿಯ ಜೊತೆ ಬಂದ: ಅಭಿಸಾರಿಕೆ

ಸರ್ವ ಮಂಗಳ ಮಾಂಗಲ್ಯೇ  ಶಿವೇ ಸರ್ವಾರ್ಥ ಸಾಧಿಕೇ ತ್ರ್ಯಂಬಕೇ ದೇವಿ ನಾರಾಯಣಿ ನಮೋಸ್ತುತೇಃ ವಕ್ರತುಂಡ ಮಹಾಕಾಯ  ಕೋಟಿಸೂರ್ಯ ಸಮಪ್ರಭ ನಿರ್ವಿಘ್ನಂ ಕುರುಮೇ ದೇವ ಸರ್ವ ಕಾರ್ಯೇಶು ಸರ್ವದಾ….. ಗಣೇಶ, ಗೌರಿ ಹಬ್ಬ ಎಂದರೆ ಮಕ್ಕಳಿಂದ ದೊಡ್ಡವರೆಗೂ ತುಂಬಾ ಸಡಗರದಿಂದ ಹಬ್ಬ. ಗಣೇಶ ಗಂಡು ಮಕ್ಕಳ ಹಬ್ಬವಾದರೆ, ಗೌರಿ ಹೆಣ್ಣುಮಕ್ಕಳ ಹಬ್ಬ, ಗೌರಿ ವ್ರತ ಹೆಣ್ಣು ಮಕ್ಕಳಿಗೆ ಇರುವ ಮಹತ್ತರ ವ್ರತ,ಗೌರಿ ತನಗೆ ಶಿವನನ್ನು ಪಡೆಯಲು ಬಹು ಭಕ್ತಿ ಶ್ರದ್ದೆಯಿಂದ ಈ ಪೂಜೆ ಮಾಡಿದಳಂತೆ, ಇದರಿಂದಾಗಿಯೇ ಮದುವೆಯಾಗದ ಹೆಣ್ಣು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಣೇಶ ಚತುರ್ಥಿ ಮತ್ತು ಪಟಾಕಿ ಕಲಿಸಿದ ಪಾಠ: ಅನಿರುದ್ಧ ಕುಲಕರ್ಣಿ

ಪಟಾಕೀಯ ನೆನೆಪು ಅ೦ದು ಶನಿವಾರ, ನಾನು ಅಕ್ಕ ಶಾಲೆಗೆ ಹೊರಡಲು ಸಿದ್ದರಾಗುತ್ತಿದ್ದೆವು, ಅಷ್ಟರಲ್ಲೆ ಅಜ್ಜ ನನಗೆ ಹಾಗೂ ಅಕ್ಕನಿಗೆ ಕರೆದು ಇವತ್ತು ನಾನು ಊರಿಗೆ ಹೋಗಿ ಬರುತ್ತೇನೆ ಎ೦ದು ತಿಳಿಸಿ, ಅಕ್ಕನಿಗೆ ನನಗೆ ತಲಾ ೫೦ರೂ ಕೊಟ್ಟರು, ನ೦ತರ ನಾವಿಬ್ಬರು ಅಜ್ಜನಿಗೆ ನಮಸ್ಕರಿಸಿದೆವು, ನಾನು ಅಜ್ಜನಿಗೆ ಕೆಳಿದೆ ನೀನು ಈಗ್ಯಾಕ ಊರಿಗೆ ಹೊ೦ಟಿ, ಇನ್ನ ನಾಲ್ಕೇ ದಿನದಾಗ ಗಣೇಶ ಚತುರ್ಥಿ ಅದ, ಅದಕ್ಕೆ ಅಜ್ಜ ಅ೦ದ್ರು ನೋಡು ಹಬ್ಬಕ್ಕ ನಿನಗ, ಅಕ್ಕಗ ಹೊಸ ಡ್ರೆಸ್ ಬೇಕ ಹೌದಿಲ್ಲೋ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾರತೀಯ ಸನ್ನಿವೇಶದಲ್ಲಿ ಹವಾಮಾನ ಬದಲಾವಣೆ – ಒಂದು ನೋಟ – 6: ಅಖಿಲೇಶ್ ಚಿಪ್ಪಳಿ

ಸರ್ಕಾರಗಳು ಏನು ಮಾಡುತ್ತಿವೆ? ಹೃದಯಾಘಾತಗೊಂಡ ಮನುಷ್ಯ, ನಾಳೆಯಿಂದ ನಾನು ನನ್ನ ಬಿರ್ಯಾನಿಯಲ್ಲಿ ಕಡಿಮೆ ಎಣ್ಣೆ ಉಪಯೋಗಿಸುತ್ತೇನೆ ಎಂಬಂತ ಮಾತುಗಳನ್ನು ಭಾರತ ಸರ್ಕಾರ ಆಡುತ್ತಿದೆ. ವಾತಾವರಣಕ್ಕೆ ಸೇರುವ ಸಿತ್ಯಾಜ್ಯದ ತಲಾವಾರು ಪ್ರಮಾಣವನ್ನು 2020ರ ವೇಳೆಗೆ ಶೇ.25% ತಗ್ಗಿಸುತ್ತೇವೆ (ಮಿಟಿಗೇಶನ್) ಎಂಬುದು ಭಾರತದ ಹೇಳಿಕೆಯಾಗಿದೆ. ಆದಾಗ್ಯೂ ಹವಾಗುಣ ವೈಪರೀತ್ಯದ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಅನೇಕ ಸಂW-ಸಂಸ್ಥೆಗಳು ಕೆಲಸ ಮಾಡುತ್ತಿದ್ದು, ಇವೆಲ್ಲವೂ ಶೈಕ್ಷಣಿಕ ಸಂಬಂಧಿ ವಾರ್ಷಿಕವಾದ ಫಲಿತಾಂಶದ ಹಂತದಲ್ಲೇ ಇವೆ. ಕಾಣಬಹುದಾದ ತಳಮಟ್ಟದ ಕೆಲವು ಕೆಲಸಗಳೆಂದರೆ, ಗ್ರಾಮೀಣ ಪ್ರದೇಶದ ಸಣ್ಣ ರೈತರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಣಪನ ವಿಸರ್ಜನೆಯ ‘ವಿಘ್ನ’ಗಳು: ಸಂಗಮೇಶ ಡಿಗ್ಗಿ

ಅವಾಗ ನಾವು ಚಡ್ಡಿ ಹರಿದು ಅಂಡು ಕಾಣುತ್ತಿದ್ದರೂ ತೆಲೆಕೆಡಿಸಿಕೊಳ್ಳದ ವಯಸ್ಸಿನ ಹುಡುಗರು. ಮನೆಗೆ ದಿನಾ ಡಜನ್‍ಗಟ್ಟಲೆ ಜಗಳ ತಂದು ವರದಿ ಒಪ್ಪಿಸುತ್ತಿದ್ದೆವು. ನಮ್ಮ ಗುಂಪಿನಲ್ಲಿ ನಾನೇ ಲೀಡರ್. ಯಾಕೆಂದರೇ ಎಲ್ಲರಿಗಿಂತಲೂ ನಾನು ತುಂಬಾ ಕೆಂಪು. ಹಾಗಾಗಿ ಅವರೆಲ್ಲರೂ ನನ್ನನ್ನು ‘ ಕೆಂಪೇಗೌಡ’ ಎಂದು ಕರೆಯುತ್ತಿದ್ದರು. ಲೇ ಕೆಂಪೇಗೌಡ ಮುಂದಿನ ವಾರ ಗಣಪತಿ ಹಬ್ಬ ಆದಂತ ಗೆಳೆಯ ಒಂದೇ ಉಸಿರಿಗೆ ವರದಿ ಒಪ್ಪಿಸಿದ. ನಾನು ಸರಿ ಅಂತ ನಮ್ ಹೈಕಳಿಗೆ ಹೇಳಿ ಒಂದು ಮೀಟಿಂಗ್ ಮಾಡೋಣ ಅಂತ ನಿರ್ಧರಿಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಮೂವರು ಯಾತ್ರಿಕರ ಕತೆ ಸುದೀರ್ಘವೂ ದಣಿಸಬಲ್ಲದ್ದೂ ಆದ ಯಾತ್ರೆಯ ಅವಧಿಯಲ್ಲಿ ಮೂವರು ಅಪರಿಚಿತರು ಸಂಗಾತಿಗಳಾಗಿ ತಮ್ಮೆಲ್ಲ ಸಂಪನ್ಮೂಲಗಳನ್ನು ಒಟ್ಟುಗೂಡಿಸಿ ಸುಖದುಃಖಗಳನ್ನು ಹಂಚಿಕೊಂಡು ಪಯಣಿಸುತ್ತಿದ್ದರು. ಅನೇಕ ದಿನಗಳು ಪಯಣಿಸಿದ ನಂತರ ಒಂದು ದಿನ ತಮ್ಮ ಹತ್ತಿರ ಒಂದು ತುಣುಕು ಬ್ರೆಡ್‌ ಮತ್ತು ಒಂದು ಗುಟುಕು ನೀರು ಮಾತ್ರ ಉಳಿದಿರುವ ಸಂಗತಿ ಅವರ ಗಮನಕ್ಕೆ ಬಂದಿತು. ಈ ಆಹಾರ ಮೂವರ ಪೈಕಿ ಯಾರಿಗೆ ಸೇರಬೇಕೆಂಬುದರ ಕುರಿತು ಅವರು ಜಗಳವಾಡಲು ಆರಂಭಿಸಿದರು. ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಉಳಿದಿದ್ದ ಬ್ರೆಡ್‌ ಹಾಗು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆರದಿರಲಿ ಬೆಳಕು: ಎಸ್. ಜಿ. ಸೀತಾರಾಮ್, ಮೈಸೂರು.

ಭಾರತ ರಾಷ್ಟ್ರೀಯ ನೇತ್ರದಾನ ಪಾಕ್ಷಿಕೋತ್ಸವ (ಆಗಸ್ಟ್ 25-ಸೆಪ್ಟೆಂಬರ್ 8, 2015) ಮತ್ತು ವಿಶ್ವ ದೃಷ್ಟಿ ದಿನ (8 ಅಕ್ಟೋಬರ್ 2015) ಸಂದರ್ಭಕ್ಕೊಂದು ನುಡಿಕಾಣಿಕೆ ಮಣ್ಣುಪಾಲಾಗುತ್ತಿರುವ ಕಣ್ಣುರಾಶಿ                                                                          … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾರತೀಯ ಸನ್ನಿವೇಶದಲ್ಲಿ ಹವಾಮಾನ ಬದಲಾವಣೆ – ಒಂದು ನೋಟ:ಭಾಗ-5: ಅಖಿಲೇಶ್ ಚಿಪ್ಪಳಿ

[ಶ್ರೀ ನಾಗರಾಜ್ ಅಡ್ವೆಯವರು ದೆಹಲಿಯ ಇಂಡಿಯನ್ ಕ್ಲೈಮೇಟ್ ಜಸ್ಟೀಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಎಂ.ಫಿಲ್. ಪದವಿ ಪಡೆದಿದ್ದಾರೆ. ಇವರು ಅಭ್ಯಸಿಸಿದ ಮುಖ್ಯ ವಿಷಯ “ಹವಾಮಾನ ಬದಲಾವಣೆ” ಕುರಿತೇ ಆಗಿದೆ. ದೇಶದ ಎಲ್ಲಾ ಪ್ರಮುಖ ಪತ್ರಿಕೆಗಳಿಗೂ ಹವಾಮಾನ ಬದಲಾವಣೆ ಕುರಿತ ಲೇಖನಗಳನ್ನು ಬರೆಯುತ್ತಾರೆ. ಇವರು ಇಡೀ ಭಾರತವನ್ನು ಸುತ್ತಾಡಿ, ಹವಾಮಾನ ಬದಲಾವಣೆಯಿಂದಾದ ವ್ಯತ್ಯಾಸಗಳನ್ನು ಗುರುತಿಸಿ, ದಾಖಲಿಸಿದ್ದಾರೆ. ಇದೇ ವರ್ಷದ ಡಿಸೆಂಬರ್‍ನಲ್ಲಿ ಪ್ಯಾರೀಸ್‍ನಲ್ಲಿ ನಡೆಯಲಿರುವ ಜಾಗತಿಕ ಹವಾಮಾನ ವೈಪರೀತ್ಯ ಸಮಾವೇಶದ ಹೊತ್ತಿನಲ್ಲಿ, ಈ ಮಾಹಿತಿಗಳು ಅತ್ಯಂತ ಮಹತ್ವ್ತಪೂರ್ಣವೆನಿಸುತ್ತದೆಯಾದ್ದರಿಂದ ಇಲ್ಲಿ ಅವರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದು ಸಂಜೆ ತಂಪಿಗೆ “ಹುರಿಗಾಳು”: ಅಮರ್ ದೀಪ್ ಪಿ.ಎಸ್.

ಮಳೆಗಾಲ ಸಂಜೆಗೆ ಹೊರಗೆ ಕಾಲಿಡೋಣವೆಂದರೆ, ಅಚಾನಕ್ಕಾಗಿ ಮೋಡಗಳು ಕವಿದು ಸುರಿವ ಮಳೆ, ನಿಲ್ಲುವವರೆಗೆ ಮನೆಯಲ್ಲಿ ಮುದುರಿ ಕುಳಿತು ನಮ್ಮ ಭಾಗದ ಫೇವರಿಟ್ ಬೆಚ್ಚಗಿನ ಮಂಡಾಳು, ಮೇಲೊಂದಿಷ್ಟು ಚುರುಕ್ಕೆನಿಸುವ ಖಾರ, ಈರುಳ್ಳಿ ಓಳು ಮೆಲ್ಲುತ್ತಾ ಕೂಡುವುದು ಜಾಯಮಾನ.   ಅದು ಟೈಂಪಾಸ್ ಗಾಗಿ.  ಹಾಗೇನೇ ಅದು ಬಿಟ್ಟು ಹುರಿಗಡಲೆ, ಕಾಳು, ಇತ್ಯಾದಿ ಖಯಾಲಿಯವರು  ಖಾಲಿ ಮಾಡುವವರಿದ್ದಾರೆ.  ಖಾಲಿಯಾಗುತ್ತಲೇ ಕೈ ಕೊಡವಿ ಮೇಲೆದ್ದು ಮಳೆ ನಿಂತಿತಾ? ಇಲ್ಲವಾ? ಅನ್ನುವುದರ ಕಡೆ ಲಕ್ಷ್ಯ ಹೊರಳುತ್ತದೆ.   ಆದರೆ, ಕೊಪ್ಪಳದಲ್ಲೊಬ್ಬ ನನ್ನ ಸ್ನೇಹಿತರು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಫ್ಲಾಪಿ ಬಾಯ್ ಮತ್ತು ಲಗೋರಿಬಾಬಾ-2: ಫ್ಲಾಪಿ ಬಾಯ್

ಅರ್ಥವಾಗುವವರಿಗೆ ಮಾತ್ರ! ಎಲ್ಲರಿಗಲ್ಲ.. ಅಡಿಗೆ ಮನೆಯಲ್ಲಿ ಫ್ಲಾಪಿಬಾಯ್ ಅಡಿಗೆ ಮನೆಯಲ್ಲಿ ಹೊಸರುಚಿ ಕಂಡು ಹಿಡಿಯಲು ಪ್ರಯೋಗ ನಿರತನಾಗಿದ್ದ. ಲಗೋರಿಬಾಬಾ ಚುಟ್ಟಾ ಹೊಡಿತಾ ಇವ ಮಾಡೋದನ್ನ ನೋಡ್ತಾ ಇದ್ದ. ಆಗ ಫ್ಲಾಪಿಬಾಯ್ “ಬಾಬಾ ಲೈಫಲ್ಲಿ ಹೆಂಗಿರ್ಬೇಕು ಅಂತಾನೇ ಗೊತ್ತಾಗ್ತಿಲ್ಲ ನಂಗೆ! ಹಂಗಿದ್ರೆ ಹಿಂಗಿರು ಅಂತಾರೆ, ಹಿಂಗಿದ್ರೆ ಹಂಗಿರು ಅಂತಾರೆ! ಏನ್ ಮಾಡೋದಂತಾನೇ ತಿಳಿತಿಲ್ಲ ಥತ್!!” ಅಂದ ನಿರಾಸಕ್ತಿಯಿಂದ. “ಸಿಂಪಲ್ಲು ಕಣೋ, ಅದೇನು? ಅಂದ ಲಗೋರಿಬಾಬಾ ಕೈತೋರಿಸ್ತಾ. “ಕ್ಯಾರೆಟ್ಟು” ಅಂದ ಫ್ಲಾಪಿಬಾಯ್.  “ಮತ್ತೆ ಅದು?”- “ಅಷ್ಟೂ ಗೊತ್ತಿಲ್ವಾ ಮೊಟ್ಟೆ, ಎಗ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡವೇ ಇಲ್ಲದ ಆ ವಠಾರದಲ್ಲಿ: ಬಂದೇಸಾಬ ಮೇಗೇರಿ

ಅಲ್ಲಿದ್ದದ್ದು ಈತ 58 ದಿನ ಮಾತ್ರ. ಅದು ಸ್ವಲ್ಪ ಹೆಚ್ಚು ಕಡಿಮೆ ವಿಹ್ವಲ ಮನಸಿನ ಗೂಡಾಗಿತ್ತು ಆ ವಠಾರ. ಅಫ್‍ಕೊರ್ಸ್ ವಾತಾವರಣ ಸಂಪೂರ್ಣ ಗೊಂದಲಮಯ. ಅರೇಬಿಕ್, ಉರ್ದು ಭಾಷೆಗಳಿಂದ ಅದು ಕೂಡಿ ಹೋಗಿತ್ತು. ಅಷ್ಟಕ್ಕೂ ಅದು ಅವನದೇ ಕೋಮಿನ ವಠಾರ. ಅಲ್ಲಿ ಕನ್ನಡದ ಪರಿಮಳ ಸೂಸುತ್ತಿದ್ದರೂ ಅದರ ಗೊಡವೆಗೆ ಹೋಗುವವರು ತುಂಬಾ ವಿರಳ. ಸಲಾಮ್ ಅಲೈಕುಮ್ ಜೀ ಅಂದರೆ ಅವರು ಸ್ವಾಗತಿಸುವ, ನಮಸ್ತೆ ಎನ್ನುವ ಮಾತಿಗೂ ವ್ಯತ್ಯಾಸ ಮಾತ್ರ ತುಂಬಾನೇ ಇತ್ತು. ಪರಿಚಯಸ್ತರಿಂದ ಸಿಕ್ಕ ಆ ರೂಮು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಸಾವಿತ್ರಿ ವಿ. ಹಟ್ಟಿ, ಚಾರುಶ್ರೀ ಕೆ ಎಸ್, ಸಿದ್ರಾಮ ತಳವಾರ

ಕನಸಿಗೊಂದು ವಿನಂತಿ ನಿದ್ದಿ ಬರವಲ್ದವ್ವ ಕನಸು ಕಳೆದೀತೆಂದು ಕಣ್ಣಿಂದ ಜಾರಿ ಬಿದ್ದು ಹೋದೀತೆಂದು ಕಣ್ಣು ಬಡಿಯದೆ ಕುಂತೀನೆ ಕನಸ ಕನವರಿಸುತಲೆ! ಯಾವಾಗನೊ ಮಲಗಿ ಬಿಟ್ಟೆ  ಎಚ್ಚರವಾದಾಗ ಮನಹೊಕ್ಕು ನೋಡಿದೆನು ಎಲ್ಲೂ ಹೋಗದೆ ಕನಸು ಮನದಾಗ ನಿಂತೈತೆ ಮತ್ತಷ್ಟು ರಂಗು ರಂಗಾಗೇತಿ ನೋಡವ್ವ ಕಣ್ತುಂಬ ತುಂಬೇತಿ ಉಲ್ಲಾಸದ ಹೊಳಪು! ಕನಸೆಂಬ ಕುದುರೆಯ ಮ್ಯಾಲೆ ಸವಾರಿ ಹೊಂಟೀನಿ ನಾನು ಬ್ಯಾಸರಿಕೆ ಇಲ್ಲ ಬಾಯಾರಿಕೆ ಇಲ್ಲವ್ವ ಓಡುತೋಡುತ ಇದರ ಓಟ ಹೆಚ್ಚಾಗೇತಿ ಬದುಕಿನ ಹಾಡಿಗೆ ಅಚ್ಚು ಮೆಚ್ಚಾಗೇತಿ! ಏ ಕನಸೇ ನೋಡಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬ್ಯಾಕರವಳ್ಳಿ ಬಸವೇಶ್ವರ ಹೋಟೆಲ್ಲೂ ಮತ್ತು ಮೂರು ಪಂಕ್ಚರ್ರುಗಳ ಕತೆ: ಪ್ರಶಸ್ತಿ

ಹಾಸನಕ್ಕಿಂತ ೪ ಕಿ.ಮೀ ಮೊದಲು ಎಡಕ್ಕೆ ತಿರುಗಿ, ೧೪ ಕಿ.ಮೀ ಸಾಗಿ ನಂತರ ಬಲಕ್ಕೆ ಸಾಗಿ ಹಾಸನ ಗೊರೂರು/ಹಾಸನ ಪೆರಿಯಾಪಟ್ಟಣ ರಸ್ತೆಯಲ್ಲಿ ಸಾಗಿದ್ರೆ ಕೊಟ್ಟಾಯಕ್ಕಿಂತ ಮುಂದೆ ಸಾಗುವಾಗ ಶೆಟ್ಟಿಹಳ್ಳಿ ಸಿಗುತ್ತೆ. ಶೆಟ್ಟಿಹಳ್ಳಿಯ ಚರ್ಚಲ್ಲೊಂದು ಫೋಟೋ ಸೆಷನ್ನು ,ಬೆಳಬೆಳಗ್ಗೆಯೇ ಹೊಳೆದ ಒಂದಿಷ್ಟು ಯೋಗಾಸನಗಳ, ಜಂಪಿಂಗು, ಕ್ಲೈಂಬಿಂಗುಗಳ ಪೂರೈಸುವಾಗ ಹೊಟ್ಟೆ ಚುರುಗೊಟ್ಟಿದ, ಪ್ರಕೃತಿಯು ಕರೆದ ಅನುಭವ. ಬೇಗ ಹಾಸನಕ್ಕೆ ಹೋಗೋಣವೆಂದ್ರೆ ಹೊರಟ ಟಿ.ಟಿ ಎರಡನೇ ಬಾರಿ ಪಂಚರ್ರಾಗಿತ್ತು. ರಾತ್ರಿ ಟೋಲ್ ಗೇಟ್ ಬಳಿಯೇ ಪಂಚರ್ರಾದ ಹಿಂದಿನಿಂದ ಎಡಗಡೆಯ ಟೈರೇ ಈಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಕೋಡಂಗಿ ಒಬ್ಬಾತ ಮನೋವೈದ್ಯರನ್ನು ಭೇಟಿ ಮಾಡಿ ಹೇಳಿದ, “ ಡಾಕ್ಟರೇ, ನಾನು ಯಾವಾಗಲೂ ಮಂಕಾಗಿರುತ್ತೇನೆ. ನಾನೇನೇ ಮಾಡಿದರೂ ಮಂಕಾಗಿಯೇ ಇರುತ್ತೇನೆ. ಇದಕ್ಕೇನು ಪರಿಹಾರ ಎಂಬುದೇ ತಿಳಿಯುತ್ತಿಲ್ಲ.” ಮನೋವೈದ್ಯರು ಅವನನ್ನು ನೇರವಾಗಿ ನೋಡುತ್ತಾ ಹೇಳಿದರು, “ನನ್ನ ಜೊತೆಯಲ್ಲಿ ಕಿಟಕಿಯ ಹತ್ತಿರ ಬಾ.” ಇಬ್ಬರೂ ಕಿಟಕಿಯನ್ನು ಸಮೀಪಿಸಿದಾಗ ಮನೋವೈದ್ಯರು ಹೊರಗೆ ಒಂದು ದಿಕ್ಕಿನತ್ತ ತೋರಿಸುತ್ತಾ ಹೇಳಿದರು, “ಅಲ್ಲೊಂದು ಡೇರೆ ಕಾಣುತ್ತಿದೆಯಲ್ಲವೇ?. ಅದೊಂದು ಸರ್ಕಸ್ಸಿನ ಡೇರೆ. ಆ ಸರ್ಕಸ್‌ ನಿಜವಾಗಿಯೂ ಬಲು ಚೆನ್ನಾಗಿದೆ. ಅದರಲ್ಲೊಬ್ಬ ನಿಜವಾಗಿಯೂ ಜನಗಳನ್ನು ನಗಿಸಬಲ್ಲ ಕೋಡಂಗಿಯೊಬ್ಬನಿದ್ದಾನೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ