ಕಪ್ಪುಸುಂದರಿಯ ಕಿರಿಗೂಡು!!: ಅಖಿಲೇಶ್ ಚಿಪ್ಪಳಿ
ಅನಿವಾರ್ಯ ಕಾರಣಗಳಿಂದಾಗಿ ಮನೆಯಿಂದ ಹೊರಗೆ ಕಾಲಿಡದೇ ವಾರದ ಮೇಲಾಗಿತ್ತು. ಮನೆಯಲ್ಲಿ ಇದ್ದ-ಬದ್ದ ಪುಸ್ತಕಗಳೆಲ್ಲಾ ಓದಿ ಮುಗಿದವು. ಈಡಿಯಟ್ ಪೆಟ್ಟಿಗೆ ವೀಕ್ಷಿಸಲು ವಿದ್ಯುಚ್ಛಕ್ತಿ ಭಾಗ್ಯವಿಲ್ಲವಾಗಿತ್ತು. ಮಳೆಯಿಲ್ಲದ ಮಳೆಗಾಲದಲ್ಲೆ ಬಿರುಬೇಸಿಗೆಗಿಂತ ಸುಡುವ ಬಿಸಿಲು. ಆಕಾಶ, ಗಾಳಿ, ನೆಲವೆಲ್ಲಾ ಬಿಸಿಯ ಝಳದಿಂದ ಕಾದು ಬೆಂದು ಹೋಗಿದ್ದವು. ಮಾಡಲು ಕೆಲಸವಿಲ್ಲದಿದ್ದಾಗ ಸಮಯದ ಸೆಕೆಂಡಿನ ಮುಳ್ಳು ನಿಧಾನಕ್ಕೇ ಚಲಿಸುತ್ತದೆ. ಅದರಲ್ಲೂ ಈ ತರಹದ ವ್ಯತಿರಿಕ್ತ ವಾತಾವರಣ ಮಾನಸಿಕ ಆರೋಗ್ಯವನ್ನೇ ತಿಂದು ಬಿಡುತ್ತದೆ. ಲವಲವಿಕೆಯಿಲ್ಲದೇ ಮರದ ಕೊರಡಿನಂತೆ ಬಿದ್ದುಕೊಂಡಿದ್ದವನಿಗೆ, ಕಾಲಬುಡದಲ್ಲೊಂದು ಹೆಜ್ಜೇನಿಗಿಂತ ಕೊಂಚ ದೊಡ್ಡದಾದ ಕರೀ … Read more