ನೈತಿಕತೆಯಿಲ್ಲದ ಮೇಲೆ ಬಹಳ ಕಠಿಣ ಕಾನೂನು ಕಾಯ್ದೆಗಳ ರೂಪಿಸಿಯೇನು ಫಲ!: ಕೆ ಟಿ ಸೋಮಶೇಖರ ಹೊಳಲ್ಕೆರೆ

ಅಗತ್ಯ, ಯೋಗ್ಯ ಕಾನೂನು ಕಾಯ್ದೆಗಳ ರೂಪಿಸುವುದು ಜವಾಬ್ದಾರಿಯುತ ಆಡಳಿತ ವ್ಯವಸ್ಥೆಗಳ ಕರ್ತವ್ಯ! ಕಾನೂನು, ಕಾಯ್ದೆಗಳು ಸಮಾಜ ಸುವ್ಯವಸ್ಥಿತವಾಗಿರಲು, ನೆಮ್ಮದಿಯಿಂದಿರಲು ಸಹಕಾರಿ. ಅತಿ ಅವಶ್ಯಕ! ಹಾಗಂತ ಎಲ್ಲಾ ಅವುಗಳಿಂದನೇ ಅಲ್ಲಾ! ವ್ಯಕ್ತಿಯ, ಸಮಾಜದ, ದೇಶದ ಉದ್ಧಾರಕ್ಕೆ, ಆತ್ಮೋದ್ಧಾರಕ್ಕೆ ನೈತಿಕತೆಯೇ ಮೂಲ. ತಳಹದಿ! ಹಿಂದಿನವರು ನೈತಿಕತೆಯನ್ನು ಜೀವನದ ಉಸಿರು ಮಾಡಿಕೊಂಡಿದ್ದರಿಂದ ಉತ್ತಮ ಸಮಾಜ ನಿರ್ಮಾಣವಾಗಿತ್ತು. ಜನ ಶಾಂತಿ, ಸಹನೆ, ಸದಾಚಾರ, ಸದ್ಗುಣದಿಂದ ಬದುಕುತ್ತಿದ್ದರು. ಭಗವಂತನ ಮೇಲಿನ ಪರಮ ಭಕ್ತಿಯಿಂದ ಆತ್ಮೋದ್ಧಾರ ಮಾಡಿಕೊಂಡರು! ಅಂದು ಅಪರಾಧಗಳು ಇರಲಿಲ್ಲ ಎನ್ನುವುದಕ್ಕಿಂತ ಅವು ಅಲ್ಪ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೋಲೇ ಗೆಲುವಿನ ಮೆಟ್ಟಿಲು: ವೆಂಕಟೇಶ ಚಾಗಿ

ಜೀವನದಲ್ಲಿ ನಾವು ಒಂದಲ್ಲಾ ಒಂದು ಸ್ಪರ್ಧೆಯನ್ನು ಎದುರಿಸುತ್ತಲೇ ಇರುತ್ತೇವೆ. ಕೆಲವೊಂದು ತುಂಬಾ ಮಹತ್ವದ್ದಾಗಿರುವ ಸ್ಪರ್ಧೆಗಳು ನಮ್ಮ ಗಮನಕ್ಕೆ ಬರುತ್ತವೆ. ಕೆಲವೊಂದು ಸ್ಪರ್ಧೆಗಳಲ್ಲಿ ನಾವು ಸ್ಪರ್ಧಿಸಿದ್ದರೂ ನಮ್ಮ ಗಮನಕ್ಕೆ ಬರುವುದಿಲ್ಲ.ಮಹತ್ವ ಪಡೆದಂತಹ ಸ್ಪರ್ಧೆ ಗಳಲ್ಲಿ ನಾವು ಗೆದ್ದರೆ ತುಂಬಾ ಸಂತೋಷಪಡುತ್ತೇವೆ. ಜಗತ್ತನ್ನೇ ಗೆದ್ದೆವು ಎನ್ನುವ ಖುಷಿಯಲ್ಲಿ ಮುಳುಗಿಬಿಡುತ್ತೇವೆ. ನಮ್ಮ ಎಲ್ಲಾ ಸ್ನೇಹಿತರು ಬಂಧು ಬಾಂಧವರೊಂದಿಗೆ ಆ ಖುಷಿ ಯನ್ನು ಹಂಚಿಕೊಂಡು ನಾವೂ ಸಂತೋಷ ಪಡುತ್ತೇವೆ. ಅದೇ ಸೋಲಾದರೆ ?! ನಮ್ಮವರ ಎದುರು ಅವಮಾನವಾಯಿತಲ್ಲಾ ಎಂದು ಕೊರಗುತ್ತೇವೆ. ದುಃಖದಲ್ಲಿ ಮುಳುಗಿಬಿಡುತ್ತೇವೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಹೋಗಬಾರದಿತ್ತು! ಆತ್ಮೀಯ ಸ್ನೇಹಿತ ರೂಮ ಪಾರ್ಟನರ್‍ ಧೀಢರನೆದ್ದು ಹೊರಟೇ ಹೋದ ಏನನ್ನು ಹೇಳದೆ ಕೇಳದೆ ಎಲ್ಲಿ ಕಳೆದು ಹೋದನೋ ಗೊತ್ತಿಲ್ಲ ಆಕಾಶಕ್ಕೆ ಹಾರಿದನೋ, ಭೂಮಿಯೊಳಕ್ಕೆ ಹೂತು ಹೋದನೋ, ಕಾಡಿಗೆ ಹೋದನೋ, ಸುಡಗಾಡಕ್ಕೆ ಹೋದನೋ ಗೊತ್ತಿಲ್ಲ ಹೋಗಿದಂತೂ ನಿಜ ನಮ್ಮನ್ನು ಬಿಟ್ಟು ಈ ಖೋಲೆ ಬಿಟ್ಟು ಇನ್ನೆಲ್ಲಿಗೋ ಅವನಿಗೆ ಅದೇನಾಯಿತೋ ಯಾಕಾದರು ಮನಸು ಬದಲಿಸಿದನೋ ಇನ್ನೂ ಇರುತ್ತೇನೆಂದವನು ಸಡ್ಡನ್ನಾಗಿ ಎದ್ದು ಹೋಗೇ ಬಿಟ್ಟ ದೈವಾಧೀನನಾದನೆಂದೋ ಸ್ವರ್ಗವಾಸಿಯಾದನೆಂದೋ ಜನ ಹೇಳುತ್ತಿದ್ದಾರೆ ನಂಬಲಾಗುತ್ತಿಲ್ಲ ಆತ್ಮೀಯರು ಅಳುತ್ತಿದ್ದಾರೆ ಆಗದವರು ನಗುತ್ತಿದ್ದಾರೆ ಹೋಗುವದೇ ಆಗಿದ್ದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾಣಸುದ್ದಿ 10: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ ಇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಜ್ಜ ನೆಟ್ಟ ಹಲಸಿನ ಮರ: ಸತೀಶ್ ಶೆಟ್ಟಿ. ವಕ್ವಾಡಿ

ಸೂರ್ಯನ ಬೆಳಗಿನ ಬೆಳಕಿಗೆ ಮಂಜಿನ ಹನಿಗಳ ರಂಗಿನಾಟ ಆಗತಾನೆ ಮುಗಿದಿತ್ತು. ಸೂರ್ಯನ ಬೆಳಕಿನ ಅಟ್ಟಹಾಸ ಹೆಚ್ಚಾದಂತೆ ಮನೆ ಎದುರಿನ ಹುಲ್ಲು ಹಾಸಿನ ಮೇಲೆ ಬೆಚ್ಚನೆ ಮಲಗಿದ್ದ ಮಂಜಿನ ಹನಿಗಳು ಒಂದೊಂದಾಗಿ ಕಾಣದ ಗೂಡು ಸೇರುವ ತವಕದಲ್ಲಿದ್ದವು. ಅದೂ ಬೇರೆ ಕಾರ್ತಿಕ ಮಾಸ. ಚಳಿರಾಯನ ಒಡ್ಡೋಲಗಕ್ಕೆ ಆಗಷ್ಟೇ ರಂಗಸಜ್ಜಿಕೆಯ ಹೂರಣವಾಗಿತ್ತು. ಮನೆಯ ಕಣದಲ್ಲಿ ರಂಗು ಮೂಡಿಸಿದ್ದ ಭತ್ತದ ತಿರಿ ಮತ್ತು ಹುಲ್ಲಿನ ಕುತ್ತರಿಗಳಿಂದ ಮೂಗಿಗೆ ಅಪ್ಪಳಿಸುತ್ತಿದ್ದ ಭತ್ತದ ಸುವಾಸನೆ ಮನದ ಮೂಲೆಯಲ್ಲಿ ಹೊಂಗಿರಣದ ಚಿತ್ತಾರ ಬರೆಸಿದ್ದವು. ಮನೆ ಹಿಂದಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಕ್ಸಿಕೋ ಮೈತ್ರಿ: ಪ್ರಶಸ್ತಿ ಪಿ.

ಕೆಲಸದ ನಿಮಿತ್ತ ಮೆಕ್ಸಿಕೋಗೆ ಬಂದ ಮೊದಲ ದಿನಗಳಲ್ಲಿ ಕಾಡಿದ ದಿಗಿಲುಗಳು ಅಷ್ಟಿಷ್ಟಲ್ಲ. ಭಾರತದ ಮಾಧ್ಯಮಗಳಲ್ಲಿ ಕಂಡ ಹಾದಿಬೀದಿಯಲ್ಲೆಲ್ಲಾ ಡ್ರಗ್ಸ್ ಮಾಡೋ ನಾಡೆಂಬ ಸುದ್ದಿಗಳಾಗಿರಬಹುದು, ರಾತ್ರಿ ಏಳರ ಮೇಲೆ ಹೊರಗೆ ಕಾಲಿಡಬೇಡವೆಂದು ಎಚ್ಚರಿಸುತ್ತಿದ್ದ ಹೋಟೇಲು ರೂಂಮೇಟಾಗಿರಬಹುದು, ಗೊತ್ತಿಲ್ಲದ ಸ್ಪಾನಿಷ್ ಭಾಷೆಯಾಗಿರಬಹುದು, ಇಂಟರ್ ನ್ಯಾಷನಲ್ ರೋಮಿಂಗ್ ಇದ್ದರೂ ಸಿಗ್ನಲ್ ಸಿಗದ ಸಿಮ್ಮಾಗಿರಬಹುದು, ಎಲ್ಲೆಡೆಯೂ ಮಾಂಸದ ಸಾಮ್ರಾಜ್ಯವಾಗಿ ವೆಜ್ಜಿಗಳಿಗೆ ಸಿಗದ ಊಟವಾಗಿರಬಹುದು, ತಮ್ಮ ಕೆಲಸವನ್ನೇ ನೋಡಿಕೊಳ್ಳುತ್ತಾ ಹೆಚ್ಚೇನೂ ನೆರವಾಗದ ಈಗಾಗಲೇ ಅಲ್ಲಿಗೆ ಹೋಗಿದ್ದ ಸಹೋದ್ಯೋಗಿಗಳಾಗಿರಬಹುದು. ಸಿಮ್ಮು ತಗೊಳ್ಳೋಕೆ ನಾಲ್ಕು ದಿನ, ಬ್ಯಾಂಕ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಟಚ್ ಸ್ಕ್ರೀನ್: ಸುದರ್ಶನ್.ವಿ

  “ಹಲೋ ಎಲ್ಲಿದ್ದಿಯೋ? ಎಷ್ಟು ವರ್ಷ ಆಯ್ತು ನಿನ್ನ ನೋಡಿ, ಯಾವಾಗ ಸಿಗೋಣ?” “ಹ್ಯಾಟ್ಸ್ ಆಫ್ ಫೇಸ್ ಬುಕ್‍ಗೆ. ನಿನ್ನ ನಂಬರ್ ಸಿಕ್ತು. ನಿಜಕ್ಕೂ ಥ್ಯಾಂಕ್ಸ್ ಈ ಟೆಕ್ನಾಲಜಿಗೆ” … ಈ ಕಡೆ ಒಂದು ಕ್ಷಣ ಮೌನ. ಹೀಗೆ ಅಚಾನಕ್ಕಾಗಿ ಬಂದ ಹಳೆಯ ಗೆಳೆಯನ ಕರೆ ಕೊಂಚ ನನ್ನನ್ನು ಪಾಪ ಪ್ರಜ್ಞೆ ಗೆ ದೂಡಿತು. ಛೇ ನಾನೆಂಥ ಮನುಷ್ಯ…? ಡಿಗ್ರಿ ಮುಗಿದ ನಂತರ ಎಲ್ಲರ ಜೊತೆಗೂ ಸಂಬಂಧ ಕಡಿದುಕೊಂಡು ಬದುಕುತ್ತಿದ್ದೆನಲ್ಲಾ… ಬಾಲ್ಯದ ಗೆಳೆಯರು ಜಯನಗರದ ಮನೆಯನ್ನು ಬಿಟ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಡಿಲವಾಗುತ್ತಿರುವ ಸಂಬಂಧಗಳು !: ಕೆ ಟಿ ಸೋಮಶೇಖರ ಹೊಳಲ್ಕೆರೆ

ಬದಲಾವಣೆ ಜಗದ ನಿಯಮ! ಪ್ರಕೃತಿ ನಿತ್ಯನೂತನ. ನವನವೀನ! ಬದಲಾಗದಿದ್ದರೆ ಏಕತಾನತೆ ಉಂಟಾಗಿ ಬೇಸರ ಆವರಿಸಿ ಬದುಕಾಗುವುದು ಯಾತನಾಮಯ! ಬದಲಾವಣೆಯ ಗಾಳಿ ತರುವುದು ಉತ್ಸಾಹ. ನವ ಚೇತನ !ಹೊಸ ಚಿಗುರು ಹೂವು ಹಣ್ಣು! ಹೊಸತನ ತುಂಬಿ ಬದುಕಾಗುವುದು ನೂತನ! ಬದಲಾವಣೆಯೇ ಜೀವನಕೆ ಆಗುವುದು ಟಾನಿಕ್ ! ಅವಿಭಕ್ತಕುಟುಂಬಗಳು ಮಾಯವಾಗಿ ವಿಬಕ್ತಕುಟುಂಬಗಳು ಉಂಟಾಗಿರುವುದರಿಂದ, ಜಾತಿ ಧರ್ಮಗಳ ಕಪಿ ಮುಷ್ಟಿಯಿಂದ ಮಾನವ ಮುಕ್ತನಾಗುತ್ತಿರುವುದರಿಂದ, ಆಧುನಿಕ ಬದಲಾದ ಬದುಕಿನಿಂದ, ತಾಂತ್ರಿಕತೆ ಹೆಚ್ಚಾಗಿರುವುದರಿಂದ, ಶಿಕ್ಷಣಕ್ಕೆ, ಹಣಕ್ಕೆ ಪ್ರಾಧಾನ್ಯತೆ ಬಂದುದರಿಂದ, ವೈಯುಕ್ತಿಕ ಸ್ವಾತಂತ್ರ್ಯ ಅತಿಯಾಗಿರುವುದರಿಂದ, ಪಾಶ್ಚಿಮಾತ್ಯರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜ್ಞಾನಕ್ಕಿಂತ ಮಿಗಿಲಾದುದು ಯಾವುದೂ ಇಲ್ಲ: ಮೊಕಾಶಿ ಎಂ.ಎಚ್.

“ನಹೀ ಜ್ಞಾನೇನ ಸದೃಶಂ ಪವಿತ್ರಮಿಹ ವಿದ್ಯತೇ” ಎಂದು ಸಂಸ್ಕøತ ಶ್ಲೋಕದಲ್ಲಿ ತಿಳಿಸಲಾಗಿದೆ. ಇದರರ್ಥ ಜ್ಞಾನಕ್ಕಿಂತ ಮಿಗಿಲಾದುದು ಮತ್ತು ಪವಿತ್ರವಾದುದು ಇನ್ನೊಂದಿಲ್ಲ. ಜ್ಞಾನವೊಂದು ಸಾರ್ವತ್ರಿಕ ಶಕ್ತಿಯಾಗಿದೆ. ಶಿಕ್ಷಣದ ಪ್ರಮುಖ ಗುರಿ ಜ್ಞಾನಾರ್ಜನೆಯಾಗಿದೆ. ಜ್ಞಾನದಿಂದ ವ್ಯಕ್ತಿಯ ಬದುಕಿನ ಎಲ್ಲ ಕ್ಷೇತ್ರಗಳನ್ನು ಬೆಳಗಿಸಬಹುದಾಗಿದೆ. “ಜ್ಞಾನವೇ ಶಕ್ತಿಯಾಗಿದ್ದು ಅದರಿಂದಲೇ ಎಲ್ಲ ಕೆಲಸಕಾರ್ಯಗಳು ಸಾಧ್ಯ” ಎಂದು ಸಾಕ್ರೆಟಿಸ್ ಹೇಳಿದ್ದಾನೆ. ಜ್ಞಾನವೆಂಬುದು ಕೇವಲ ಮಾಹಿತಿ ಸಂಗ್ರಹಣೆಯಲ್ಲ ಇದು ಮಾನವ ಜನಾಂಗದ ಅನುಭವಗಳ ಸಾರವಾಗಿದೆ. ಯಾವುದೇ ವಸ್ತು ಘಟನೆಯನ್ನು ವಸ್ತು ನಿಷ್ಠೆಯಿಂದ ಪರಾಮರ್ಶಿಸಿ ನೋಡುವ ರೀತಿಯೇ ಜ್ಞಾನವಾಗಿದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನಸಿನಲ್ಲು ಕನವರಿಸುವಂತ ಪ್ರೀತಿ ಕೊಟ್ಟವಳೇ..: ಸಿದ್ದುಯಾದವ್ ಚಿರಿಬಿ.

ನೆಲದ ಮಣ್ಣು ಒಲುಮೆ ಕಣ್ಣು ತೆರಯಬಹುದು ಪ್ರೇಮದ ಹೆಣ್ಣು ಕನಸು ಮನಸುಗಳ ಬೆಸಗೆಯಲ್ಲಿ ನಮ್ಮಿಬ್ಬರ ಹೃದಯ ಮಿಲನದ ನವಿಲ ನರ್ತನವು ಪ್ರೇಮ ಕಾಶಿಯಲಿ…., ಜಗತ್ತಿನಲ್ಲಿ ಪ್ರೇಮವೇ ಧರ್ಮವೆಂದು ನಂಬಿಕೊಂಡು ಬಂದವರಲ್ಲಿ ಪ್ರೀತಿಯ ಜಲಪಾತ ಹೃದಯಂತರಾಳದಲ್ಲಿ ಧುಮ್ಮಿಕ್ಕುತ್ತದೆ. ನಿನ್ನೊಲವಿನ ಅಮಲಿನಲ್ಲೂ ಪ್ರೇಮ ನಳನಳಿಸುತ್ತದೆ ಸ್ವೀಟಿ. ಬಿರು ಬೇಸಿಗೆಯಲ್ಲೂ ಮುಂಗಾರಿನ ಅಭಿಷೇಕವಾಗುವಂತೆ ನಿನ್ನ ಒಲವಿನ ಮುಂಗಾರಿನ ಮಳೆ ನನ್ನೆದೆಯ ನೆಲದ ಮೇಲೆ ಸುರಿಯುತ್ತಿದೆ ಸಖಿ. ಕಾಡುವ ಕನಸಾಗಿ, ಪ್ರೀತಿಗೆ ಒಲವಾಗಿ, ಬದುಕಿಗೆ ಛಲವಾಗಿ ನನ್ನ ಜೀವನದ ಜ್ಯೋತಿ ನೀನಾಗಿ, ನನ್ನೊಂದಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬದುಕು ಸ್ನೇಹಮಯವಾಗಿರಲಿ ಬದುಕು ಸುಂದರ!!: ಗೂಳೂರು ಚಂದ್ರು

ಸ್ನೇಹ ಅಂದ ತಕ್ಷಣ ಮನಸ್ಸಿಗೆ ಬರೋದು ಒಂದು ಆಗಾದವಾದ ಸಂಬಂಧ, ಸಂಬಂಧಗಳ ಬಗ್ಗೆ ಗೊತ್ತಿಲ್ಲದವರಿಗೆ ನಿಜವಾಗಿಯೂ ಸ್ನೇಹದ ಮೌಲ್ಯ ಗೊತ್ತಿರಲಿಕ್ಕೆ ಸಾಧ್ಯವೇ ಇಲ್ಲ. ಅದು ಪಕ್ಕಕಿರಲಿ ಬಿಡಿ. ನಮ್ಮನ್ನ ಆಳವಾಗಿ ಅಧ್ಯಯನ ಮಾಡಿ ಅರ್ಥ ಮಾಡಿಕೊಂಡು ಅದಕ್ಕೆ ತಕ್ಕನಾಗಿ ಸ್ಬಂದಿಸಿಕೊಂಡು ಸರಿದೂಗಿಸುವವರು ನಿಜವಾದ ಸ್ನೇಹಿತರು. ಈಗಿನ ಜಮಾನದಲ್ಲಿ ನಮ್ಮನ್ನ ಅರ್ಥ ಮಾಡಿಕೊಂಡವರು ಎಷ್ಟು ಜನ ಅಂತ ಯೋಚನೆ ಮಾಡಿದರೆ ಸಿಗವವರು ಬೆರಳೆಣಿಕೆಗಿಂತ ಕಡಿಮೆ. ಇಲ್ಲಿ ಎಲ್ಲಾ ನಿರೀಕ್ಷೆಗಳನ್ನ ಇಟ್ಟುಕೊಂಡು ಬರುವವರು ಹೆಚ್ಚು. ಮೊನ್ನೆ ನನ್ನ ಸ್ನೇಹಿತ ಫೋನ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಸುಗೆ: ವೇದಾವತಿ ಹೆಚ್.ಎಸ್.

ಪಡುವಣದಂಚಿನಲ್ಲಿ ದಿನಕರನು ಮುಳುಗುತ್ತಿರುವ ಸಮಯದಲ್ಲಿ ಕಟಕಿಯಿಂದ ದೂರಾಚೆಯ ಗಿರಿ ಶಿಖರವನ್ನು ದಿಟ್ಟಿಸಿ ನೋಡುತ್ತಿದ್ದಾಗ ರಾಷ್ಟ್ರಕವಿ ಶಿವರುದ್ರಪ್ಪನವರ ಕವಿತೆ ನೆನಪಾಗುತ್ತದೆ. “ಹತ್ತಿರವಿದ್ದೂ ದೂರ ನಿಲ್ಲುವೆವು ನಮ್ಮ ಅಹಮ್ಮಿನ ಕೋಟೆಯಲಿ ಎಷ್ಟು ಕಷ್ಟವೋ ಹೊಂದಿಕೆ ಎಂಬುದು ನಾಲ್ಕು ದಿನದ ಈ ಬದುಕಿನಲಿ” ಎಷ್ಟೊಂದು ಅರ್ಥವಿದೆ. ಇಲ್ಲೋಬ್ಬರು ನಮ್ಮಲ್ಲಿ ಕೇಳುತ್ತಿದ್ದರು. “ಎಷ್ಟು ವರ್ಷವಾಯಿತು ಕಾರು ತೆಗೆದುಕೊಂಡು?ಇನ್ನೂ ಹೊಸದಾಗಿ ತೆಗೆದುಕೊಂಡು ಬಂದ ಹಾಗೆ ಇದೆಯಲ್ಲ?ವರ್ಷಕ್ಕೆ ಎಷ್ಟು ಬಾರಿ ಸರ್ವೀಸ್ ಮಾಡುತ್ತೀರಾ? ನಮ್ಮ ಕಾರು ನೋಡಿ ಹೇಗಿದೆಯೆಂದು. ಕಂಪನಿ ಚೆನ್ನಾಗಿಲ್ಲ. ಲಕ್ಷಗಟ್ಟಲೆ ಹಣ ಕೊಟ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

2018 ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2018’ ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. 10,000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ. ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜುವಿನ ಯುಗಾದಿ ವಿಶೇಷಾಂಕ

ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳೊಂದಿಗೆ… ಪಂಜುವಿನ ಯುಗಾದಿ ವಿಶೇಷಾಂಕ ನಿಮ್ಮ ಓದಿಗೆ.. ಈ ಸಂಚಿಕೆಯಲ್ಲಿ…. ಕಾವ್ಯಧಾರೆ 1 ಮಮತಾ ಅರಸೀಕೆರೆ ಮೌಲ್ಯ ಎಂ. ಗೋವಿಂದ ಹೆಗಡೆ ಪ್ರವೀಣಕುಮಾರ್ .ಗೋಣಿ ಷಣ್ಮುಖ ತಾಂಡೇಲ್ ಬೀನಾ ಶಿವಪ್ರಸಾದ ಶಿವಕುಮಾರ ಕರನಂದಿ ಮಾ.ವೆಂ.ಶ್ರೀನಾಥ ನಂದೀಶ್ ಮಾಧವ ಕುಲಕರ್ಣಿ, ಪುಣೆ ಸಂದೀಪ ಫಡ್ಕೆ, ಮುಂಡಾಜೆ ವಿಭಾ ವಿಶ್ವನಾಥ್ ಜಹಾನ್ ಆರಾ ಎಚ್.ಕೊಳೂರು ಆದಿತ್ಯಾ ಮೈಸೂರು ರಂಜಿತ ದರ್ಶಿನಿ ಆರ್. ಎಸ್ ಯಲ್ಲಪ್ಪ ಎಮ್ ಮರ್ಚೇಡ್ ಕುರಿಯ ಕಾಲು: ಜೆ.ವಿ.ಕಾರ್ಲೊ ಉದಾತ್ತ ಜೀವಿ ಪ್ಲಾಟಿಪಸ್: … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾವ್ಯಧಾರೆ 1

ಹುಡುಕಾಟ ಜಾರಿಯಲ್ಲಿದೆ …. ಮತ್ತೆ ಮತ್ತೆ ಕೆದಕಿ ವಿಶ್ವಸ್ಥ ಚಹರೆಯನ್ನು ಹುಡುಕುತ್ತೇನೆ ಅರಿವು ಸರಸರನೆ ತೆರೆಯುತ್ತೇನೆ ಪ್ರತೀ ಪುಟದಲ್ಲೂ ಅರಸುತ್ತೇನೆ ಅಲ್ಲಿರಬಹುದು.. ಇಲ್ಲವೇ !!? ಇಲ್ಲಂತೂ ಇದ್ದೇ ಇರಬಹುದು ಘಟ್ಟಿಗಿತ್ತಿಯರ ಮಾದರಿಗಳು ಬಂಡೆಯಂತಹ ಹೆಣ್ಣುಗಳು ಎಲ್ಲೆಲ್ಲಿ..? ಪುರಾಣದಲ್ಲಿ ಉಪನಿಷತ್ತುಗಳ ಕಣಜದಲ್ಲಿ ಭಾರತದಲ್ಲಿ, ರಾಮಾಯಣಗಳ ಹಂದರದಲ್ಲಿ ಮಹಾಕಾವ್ಯಗಳ ರಾಶಿಯಲ್ಲಿ ಬೈಬಲ್ಲು ಕುರಾನುಗಳ ಅಂತರಂಗದಲ್ಲಿ ಎಲ್ಲೆಲ್ಲಿದ್ದಾಳೆ ಆಕೆ ಎಲ್ಲೆ ಮೀರಿದಳೆ? ಚಲ್ಲಾಪಿಲ್ಲಿಯಾದಳೆ? ಮತ್ತೆ… ಮತ್ತೆ… ಧೀರ ಮಹಾಪುರುಷರು ಅಣಿ ಮಾಡಿಟ್ಟ ಗಲ್ಲಿಗೇರಿದಳೆ..? ಸಂಶೋಧನೆ ಕಂಗಾಲಾಗುತ್ತೇನೆ ಯಾವ ಪುಟದಲ್ಲೂ ದಿಟ್ಟೆಯರಿಲ್ಲ ಅಗ್ನಿದಿವ್ಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕುರಿಯ ಕಾಲು: ಜೆ.ವಿ.ಕಾರ್ಲೊ

ಕಿಟಕಿಯ ಪರದೆಗಳು ಇಳಿಬಿದ್ದಿದ್ದ ಬೆಚ್ಚನೆಯ ರೂಮಿನಲ್ಲಿ ಟೇಬಲ್ ಲ್ಯಾಂಪಿನ ಮಂದ ಬೆಳಕು ಒಂದು ವಿಶಿಷ್ಟ ವಾತಾವರಣ ಉಂಟುಮಾಡಿತ್ತು. ಅವಳು ಕುಳಿತಿದ್ದ ಕುರ್ಚಿಯ ಹಿಂಭಾಗದಲ್ಲಿದ್ದ ಸೈಡ್‍ಬೋರ್ಡಿನ ಮೇಲೆ ಒಂದು ಅರೆ ತುಂಬಿದ್ದ ವ್ಹಿಸ್ಕಿ ಬಾಟಲ್, ಎರಡು ಉದ್ದನೆಯ ಗ್ಲಾಸುಗಳು, ಸೋಡ ಮತ್ತು ಐಸ್ ತುಂಡುಗಳ ಥರ್ಮೋ ಬಕೆಟ್ ತಯಾರಾಗಿತ್ತು. ಅವಳ ಎದುರಿನ ಕುರ್ಚಿ ಇನ್ನೂ ಖಾಲಿ ಇತ್ತು. ಮೇರಿ ಮಲೋನಿ, ತನ್ನ ಪತಿ ಕೆಲಸದಿಂದ ಹಿಂದಿರುಗುವುದನ್ನೇ ಕಾಯುತ್ತಿದ್ದಳು. ಗಳಿಗೆಗೊಮ್ಮೆ ಅವಳ ದೃಷ್ಟಿ ಗೋಡೆಯ ಮೇಲಿದ್ದ ಗಡಿಯಾರದ ಕಡೆಗೆ ಹೊರಳುತ್ತಿತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಉದಾತ್ತ ಜೀವಿ ಪ್ಲಾಟಿಪಸ್: ಅರ್ಪಿತ ಮೇಗರವಳ್ಳಿ

ಒ೦ದಾನೊ೦ದು ಕಾಲದಲ್ಲಿ ಆ ದೇವರು ಅನ್ನೋನಿಗೆ ಮೂರು ಬಗೆಯ ವಿಭಿನ್ನ ಜೀವಿಗಳನ್ನು ಸೃಷ್ಟಿಮಾಡುವ ಹುಕಿ ಬ೦ದಿತು. ಆ ಪ್ರಕಾರವಾಗಿ ದೇವರು ಮೊಟ್ಟಮೊದಲಿಗೆ ಸಸ್ತನಿಗಳನ್ನು ಸೃಷ್ಟಿಸಿ ಅವುಗಳಿಗೆ ನೆಲದ ಮೇಲೆ ಬದುಕುವ ಅವಕಾಶಮಾಡಿಕೊಟ್ಟನು. ಹಾಗೆಯೆ ವಾತಾವರಣದ ವಿಪರೀತಗಳಿ೦ದ ರಕ್ಷಿಸಿಕೊಳ್ಳಲು ಅವಕ್ಕೆ ತುಪ್ಪಳವನ್ನು ದಯಪಾಲಿಸಿದನು. ಎರಡನೆಯದಾಗಿ ಮೀನುಗಳನ್ನು ಸೃಷ್ಟಿಸಿದ ಭಗವ೦ತ, ಅವುಗಳನ್ನು ನೀರಿನಲ್ಲಿ ಸರಾಗವಾಗಿ ಈಜಾಡಲು ಬಿಟ್ಟು, ಉಸಿರಾಡಲು ಕಿವಿರುಗಳನ್ನು ನೀಡಿದನು. ತನ್ನ ಸೃಷ್ಟಿಕಲೆಯನ್ನು ಮು೦ದುವರೆಸಿದ ದಯಾಮಯಿ ಮೂರನೆಯದಾಗಿ ಹಕ್ಕಿಗಳನ್ನು ಸೃಷ್ಟಿಸಿ ಆಕಾಶದಲ್ಲಿ ಅನ೦ತವಾಗಿ ಹಾರಡಲು ಅವುಗಳಿಗೆ ರೆಕ್ಕೆಗಳನ್ನು ನೀಡಿದನು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆರತಕ್ಷತೆ: ಅದಿತಿ ಎಂ. ಎನ್.

ದೂರದ ಸಂಬಂಧಿಯಾಗಿದ್ದ ಶಿವರಾಮನ ಮಗನ ಮದುವೆಯ ಕರೆಯೋಲೆ ತಲುಪಿದಾಗಿನಿಂದ ಜಯಣ್ಣ ಮೋಡದ ಮೇಲೆಯೇ ತೇಲುತ್ತಿದ್ದರು. ಹಣಕಾಸಿನ ವಿಚಾರದಲ್ಲಿ ತಾನೆಲ್ಲಿ, ಶಿವರಾಮನೆಲ್ಲಿ? ಆದರೂ ಅವನು ತನಗೆ ಮದುವೆಯ ಕರೆಯೋಲೆಯನ್ನು ಮರೆಯದೇ ಕಳಿಸಬೇಕೆಂದರೆ ತನ್ನ ಮೇಲೆ ಅವನಿಗೆ ಪ್ರೀತಿ, ವಿಶ್ವಾಸ ಇದೆಯೆಂದೇ ಅರ್ಥವಲ್ಲವೇ ಎನ್ನುವುದು ಜಯಣ್ಣನ ತರ್ಕವಾಗಿತ್ತು. ಅವರ ಉತ್ಸಾಹಕ್ಕೆ ತಕ್ಕ, ಮದುವೆಯ ಆರತಕ್ಷತೆ ಕಾರ್ಯಕ್ರಮ ಬೆಂಗಳೂರಿನಲ್ಲಿಯೇ ಇತ್ತು; ಅದೂ ಮನೆಯಿಂದ ಅಂದಾಜು ಐದಾರು ಕಿಲೋಮೀಟರ್ ದೂರದಲ್ಲಿದ್ದ ದೊಡ್ಡ ಛತ್ರದಲ್ಲಿ. ಹಾಗಾಗಿ ಜಯಣ್ಣ, ಮದುವೆಗೆ ಅಲ್ಲದಿದ್ದರೆ ಆರತಕ್ಷತೆಗಾದರೂ ಹೋಗಿಯೇ ಸಿದ್ಧ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ