ಕದಡಿಹೋದ ಮನವ ಹಿಡಿದು: ಲಹರಿ

ಸಂದು ಹೋದವಲ್ಲೇ ಗೆಳತೀ.. ಬದುಕಲ್ಲಿಷ್ಟು ದಿನಗಳು! ಸದ್ದು-ಗದ್ದಲವ ಮಾಡದಂತೆ.. 'ನೀ ಮಾತು ಮರೆತು ಮೌನಕ್ಕೆ ಜಾರಿದಾಗೆಲ್ಲಾ ಹುಡುಕಲು ಹೊರಡುತ್ತೇನೆ ನಾ ನಿನ್ನೊಳಗಿನ ಆ ನನ್ನ ವ್ಯಕ್ತಿತ್ವದ ಛಾಯೆಯನ್ನು' ಎಂದು ಬರೆದಿದ್ದೆ ನಾ ಅಂದು, ನಕ್ಕು ಸುಮ್ಮನಾಗಿದ್ದೆ ನೀ! ನನ್ನ ಈ ವ್ಯಕ್ತಿತ್ವ ನಿನ್ನೊಳಗೆ ಇಳಿದಿದ್ದೇ ಸುಳ್ಳಾ ಎಂದೆನಿಸಲಾರಂಭಿಸಿದೆ ಇಂದು. ತಿಂಗಳಾಯ್ತಲ್ಲೆ ಹುಡುಗಿ ನಾವಿಬ್ಬರೂ ಮಾತು ಮರೆತು , ನಮ್ಮಿಬ್ಬರ ಮನಸು ಮುರಿದು.. 'ದೃಷ್ಟಿಯಾಗತ್ತೆ ಕಣೇ ನಿಮ್ಮಿಬ್ಬರ ಗೆಳೆತನಕ್ಕೆ' ಎನ್ನುತ್ತಿದ್ದ ಗೆಳತಿಯೂ ನೀವ್ಯಾಕೆ ದೂರ ಸರಿಯುತ್ತಿದ್ದೀರ ಎಂದು ಬಿಕ್ಕಲಾರಂಭಿಸಿದ್ದಾಳೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎಪ್ಪತ್ತೇಳು ಮಲೆಯ ಸುಂದರ ಪ್ರವಾಸಿ ತಾಣ ಮಲೆಯ ಮಹದೇಶ್ವರ ಬೆಟ್ಟ: ವಸಂತ ಬಿ ಈಶ್ವರಗೆರೆ

ಅಮೂಲ್ಯ ಸಸ್ಯರಾಶಿ, ಜೀವರಾಶಿಗಳಿಂದ ತುಂಬಿದಂತ ಪ್ರದೇಶ, ಬಿಸಿಲಿನ ಕಿರಣಗಳು ಭುವಿಗೆ ಸೋಂಕದಂತಿರುವ ದಟ್ಟ ಕಾನನ, ಒಂದಾನೊಂದು ಕಾಲದಲ್ಲಿ ಕುಖ್ಯಾತ ನರಹಂತಕ ಕಾಡುಗಳ್ಳ ವೀರಪ್ಪನ್ ಆಶ್ರಯ ತಾಣವೂ ಆಗಿದ್ದ ಪ್ರವಾಸಿ ತಾಣವೇ, ಮಲೆಯ ಮಹದೇಶ್ವರ ಬೆಟ್ಟ. ಒಂದು ಕಾಲದಲ್ಲಿ ವೀರಪ್ಪನ್ ಅಡಗುತಾಣವಾಗಿದ್ದಾಗ, ಮಲೆಯಮಹದೇಶ್ವರ ಬೆಟ್ಟಕ್ಕೆ ಬರೋದಕ್ಕೆ ಜನರು ಭಯ ಪಡುತ್ತಿದ್ದರು. ಸಂಜೆ 6 ಗಂಟೆಯ ನಂತ್ರ ಕೊಳ್ಳೆಗಾಲದಿಂದ, ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗವ ಮಾರ್ಗವನ್ನ ಮುಚ್ಚಲಾಗುತ್ತಿತ್ತು. ಆದರೇ ಆ ಕಾಲ ಹಿಂದೆ ಸರಿಸು, ನರಹಂತಕ ವೀರಪ್ಪನ್ ಇತಿಹಾಸದ ಪುಟಗಳಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಬಿದಲೋಟಿ ರಂಗನಾಥ್, ಪ್ರವೀಣ ಕಾಗಾಲ, ಅಭಿಸಾರಿಕೆ

ನಾನೊಬ್ಬ ಮನುಷ್ಯ ಜಾತಿಯೆಂಬ ಅಡ್ಡಗೋಡೆ ಕಟ್ಟಿ ನನ್ನೆದೆಯೊಳಗಿನ ಜೇನಗೂಡಿಗೆ ಬೆಂಕಿ ಸೂಡಿದ ಬಿರುಸಿಗೆ ಕನಸಿನ ಹಕ್ಕಿ ಸತ್ತೇ ಹೋಯಿತು ನನ್ನದೆನ್ನುವ ಸ್ವಾರ್ಥಕೆ ರೆಕ್ಕೆ ಬಂದು ಪುರ್ರೆಂದು ಹಾರಿತು. ಆದರೂ ಕಾದೆ ತಡೆಯಲಾರದೆ ಸುಮಾರು ದಿನ. ಮತ್ತೆ ಎದೆಯ ಗೂಡೊಳಗೆ ಜೇನಗೂಡ ಕಟ್ಟುತ ನೀನೆ ಬಿಟ್ಟೋಗಿದ್ದ ನೆನಪ ಕೈಲಿಡಿದು ನೋಡುತ ಅದನ್ನೆ. ಬಿರುಸ ಬೆಳದಿಂಗಳಿಗು ಹೇಳಿದೆ ಮನಸು ಕತ್ತಲಾಗಿದೆ ಕೆತ್ತಬೇಕು ಬೆಳದಿಂಗಳ ತುಣಿಕಿನಿಂದ ಒಂದು ಹಣತೆ. ಕೊಡುವುದಾದರೆ ಸಾಲ ಕೊಡು ಬರುವ ಪ್ರೀತಿಯ ಕಣ್ಣಿಗೆ ಕತ್ತಲಾಗುವುದು ಬೇಡ ನನ್ನದೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಬ್ಬವೆಲ್ಲಿದೆ?: ಪ್ರಶಸ್ತಿ

ಮೊನ್ನೆ ವಾಟ್ಸಾಪು, ಫೇಸ್ಬುಕ್ಕುಗಳಲ್ಲಿ ನಾಗರಪಂಚಮಿ ಶುಭಾಶಯಗಳು ಅಂತ ನೋಡಿದ್ಮೇಲೇ ಇವತ್ತು ನಾಗರಪಂಚಮಿ ಅಂತ ನೆನಪಾಗಿದ್ದು. ಊರಲ್ಲಿದ್ದಾಗ ನಾಗರಪಂಚಮಿಯೆಂದ್ರೆ ಅದೆಷ್ಟು ಖುಷಿ. ಅಮ್ಮ ಮಾಡೋ ಮಂಡಕ್ಕಿ ಉಂಡೆಯ ರುಚಿಗಾಗಿ ಕಾಯೋದೇನು, ಪೂಜೆಗಾಗಿ ಹಿಂದಿನ ದಿನವೇ ನಾಗರಬನವನ್ನೆಲ್ಲಾ ಚೊಕ್ಕ ಮಾಡಿ, ಅದಕ್ಕೆ ಹೋಗೋ ದಾರಿಯಲ್ಲಿದ್ದ ಹುಲ್ಲನ್ನೆಲ್ಲಾ ಒಂದಿಷ್ಟು ಸವರಿ ಇಡೋ ಉಮೇದೇನು, ಶಾಲೆಗೊಂದಿನ ರಜೆಯೆಂಬ ಖುಷಿಯೇನು. ಇದರೊಂದಿಗೇ ಹಬ್ಬಗಳ ಸಾಲು ಶುರುವಾಗುತ್ತೆಂಬ ನಿರೀಕ್ಷೆಯೇನು. ಆಹಾ. ಒಂದು ಕಿರುಬೆರಳ ಉಗುರಿಗಾದ್ರೂ ಮದರಂಗಿ ಹಚ್ಚಿಕೊಳ್ಳಬೇಕೆಂಬ ಅಲಿಖಿತ ನಿಯಮದಿಂದಾಗಿ ಹುಡುಗರಾದ ನಮ್ಮ ಬೆರಳುಗಳೂ ಮದರಂಗಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾರತೀಯ ಸನ್ನಿವೇಶದಲ್ಲಿ ಹವಾಮಾನ ಬದಲಾವಣೆ – ಒಂದು ನೋಟ (ಭಾಗ-3): ಅಖಿಲೇಶ್ ಚಿಪ್ಪಳಿ

ಇಲ್ಲಿಯವರೆಗೆ [ಶ್ರೀ ನಾಗರಾಜ್ ಅಡ್ವೆಯವರು ದೆಹಲಿಯ ಇಂಡಿಯನ್ ಕ್ಲೈಮೇಟ್ ಜಸ್ಟೀಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಎಂ.ಫಿಲ್. ಪದವಿ ಪಡೆದಿದ್ದಾರೆ. ಇವರು ಅಭ್ಯಸಿಸಿದ ಮುಖ್ಯ ವಿಷಯ “ಹವಾಮಾನ ಬದಲಾವಣೆ” ಕುರಿತೇ ಆಗಿದೆ. ದೇಶದ ಎಲ್ಲಾ ಪ್ರಮುಖ ಪತ್ರಿಕೆಗಳಿಗೂ ಹವಾಮಾನ ಬದಲಾವಣೆ ಕುರಿತ ಲೇಖನಗಳನ್ನು ಬರೆಯುತ್ತಾರೆ. ಇವರು ಇಡೀ ಭಾರತವನ್ನು ಸುತ್ತಾಡಿ, ಹವಾಮಾನ ಬದಲಾವಣೆಯಿಂದಾದ ವ್ಯತ್ಯಾಸಗಳನ್ನು ಗುರುತಿಸಿ, ದಾಖಲಿಸಿದ್ದಾರೆ. ಇದೇ ವರ್ಷದ ಡಿಸೆಂಬರ್‍ನಲ್ಲಿ ಪ್ಯಾರೀಸ್‍ನಲ್ಲಿ ನಡೆಯಲಿರುವ ಜಾಗತಿಕ ಹವಾಮಾನ ವೈಪರೀತ್ಯ ಸಮಾವೇಶದ ಹೊತ್ತಿನಲ್ಲಿ, ಈ ಮಾಹಿತಿಗಳು ಅತ್ಯಂತ ಮಹತ್ವ್ತಪೂರ್ಣವೆನಿಸುತ್ತದೆಯಾದ್ದರಿಂದ ಇಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯದ ಮಾಣಿಕ್ಯ ನನ್ನಜ್ಜ: ಸಿದ್ರಾಮ ತಳವಾರ

ನಮ್ಮದು ಉತ್ತರ ಕರ್ನಾಟಕವಾದ್ದರಿಂದ ತಂದೆಯ ತಂದೆಗೆ ನಾವು ಅಜ್ಜ ಅಂತಾ ಕರೆಯುವುದು ವಾಡಿಕೆ. ನನ್ನಜ್ಜ ಮರೆಯಾಗಿ ದಶಕಗಳು ಕಳೆಯುತ್ತ ಬಂದರೂ ನನ್ನಜ್ಜನೊಂದಿಗೆ ಕಳೆದ ಕ್ಷಣಗಳು ಮಾತ್ರ ನನ್ನಿಂದ ಮರೆಯಾಗದೇ ಮನದ ಮೂಲೆಯಲ್ಲಿ ಅಚ್ಚೊತ್ತಿದಂತೆ ಚಿರಸ್ಥಾಯಿಯಾಗಿ ಉಳಿದುಬಿಟ್ಟಿದೆ. ಊರಲ್ಲಿ ತಳವಾರಕೀ ಮಾಡುತ್ತಿದ್ದ ನನ್ನಜ್ಜ ಅತೀವ ಬಲಶಾಲಿಯಾದ್ದರಿಂದ ಊರಲ್ಲಿ ಸಲಗನೆಂದೇ (ಗಂಡಾನೆ) ಎಲ್ಲರೂ ಕರೆಯುತ್ತಿದ್ದುದು ವಾಡಿಕೆಯಾಗಿತ್ತು. (ಯಾವಾಗಲೋ ಒಂದು ಸಾರಿ ಈ ಕುರಿತು ನನ್ನಜ್ಜನನ್ನೇ ಕೇಳಿ ತಿಳಿದುಕೊಂಡಿದ್ದು) ಅನಕ್ಷರಸ್ಥನಾದ ನನ್ನಜ್ಜ ಅಕ್ಷರ ಲೋಕವೊಂದನ್ನು ಬಿಟ್ಟು ಮಿಕ್ಕೆಲ್ಲದರಲ್ಲೂ ಎತ್ತಿದ ಕೈ ಎಂದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ವಾನುಕಂಪ ಇರದಿದ್ದರಷ್ಟೇ ಸಾಕು: ಅಮರ್ ದೀಪ್ ಪಿ.ಎಸ್.

ಮನೆಯಲ್ಲಿ ಕೇಬಲ್ ಕನೆಕ್ಷನ್ ಇಲ್ಲ. ಪುಟ್ಟಿ ಇದೆ. ಅದಕ್ಕೆ ತಿಂಗಳಿಗೊಮ್ಮೆ ಹಸಿವು. ಎರಡು ತಿಂಗಳಿಂದ ಉಪವಾಸ ಹಾಕಿದ್ದೇನೆ.  ಮನೆ ಮಾಳಿಗೆಯಿಂದ ಹೊರ ಕಳಿಸಲು ಯೋಚಿಸುತ್ತಿದ್ದೇನೆ.  ದಿನ ಬೆಳಗಾದರೆ ಒಂದಲ್ಲಾ ಒಂದು ಚಾನಲ್ ತಿರುವುತ್ತಾ ಸುದ್ದಿಗಳಿಂದ ಸುದ್ದಿಗೆ ಹಾರುತ್ತಾ ಮಕ್ಕಳ ಶಾಲೆಗೆ, ನನ್ನ ಕಛೇರಿಗೆ ಸಮಯವಾಗುವ ಹತ್ತಿರಕ್ಕೆ ದಿಗಿದಿಗಿ ಟೀವಿ ಬಿಟ್ಟು ಏಳುವುದು, ಸ್ನಾನ, ತಿಂಡಿಯಾಗಿ, ಬೈಕ್ ಕೀ, ಚಾಳೀಸು ಎತ್ತಿಕೊಂಡು ಹೊರಟರೆ ಅವತ್ತಿನ ಮನೆಯ ಬೆಳಗಿನ ದಿನಚರಿ ಸಮಾಪ್ತಿ.  ಅದಕ್ಕೂ ಮುಂಚೆ ಐದುವರೆ ಆರಕ್ಕೆಲ್ಲಾ ಎದ್ದು, ಡಿ.ಸಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಮಂಗಗಳೂ ಟೊಪ್ಪಿಗಳೂ ಒಂದಾನೊಂದು ಕಾಲದಲ್ಲಿ ಜೀವನೋಪಾಯಕ್ಕಾಗಿ ಊರಿಂದೂರಿಗೆ ತಿರುಗುತ್ತಾ  ಟೊಪ್ಪಿಗಳನ್ನು ಮಾರುತ್ತಿದ್ದ ಔರಂಗಝೇಬ್‌ ಎಂಬ ಯುವಕನಿದ್ದ. ಬೇಸಿಗೆಯ ಒಂದು ಅಪರಾಹ್ನ ವಿಶಾಲವಾದ ಬಯಲಿನಲ್ಲಿ ಪಯಣಿಸಿ ಸುಸ್ತಾಗಿದ್ದ ಔರಂಗಝೇಬನು ಯಾವುದಾದರೂ ತಂಪಾದ ಸ್ಥಳದಲ್ಲಿ ವಿರಮಿಸಿ ಒಂದು ಕಿರುನಿದ್ದೆ ಮಾಡುವ ಆಲೋಚನೆ ಮಾಡಿದ. ಸಮೀಪದಲ್ಲಿಯೇ ಇದ್ದ ಮಾವಿನ ಮರವೊಂದರ ಬುಡದಲ್ಲಿ ತನ್ನ ಚೀಲವನ್ನಿಟ್ಟು ಮಲಗಿ ನಿದ್ದೆ ಮಾಡಿದ. ಕೆಲವೇ ಕ್ಷಣಗಳಲ್ಲಿ ಗಾಢ ನಿದ್ದೆಗೆ ಜಾರಿದ. ಸ್ವಲ್ಪ ಸಮಯದ ನಂತರ ಎಚ್ಚರಗೊಂಡು ನೋಡುವಾಗ ಚೀಲದಲ್ಲಿ ಇದ್ದ ಟೊಪ್ಪಿಗಳೆಲ್ಲವೂ ಮಾಯವಾಗಿದ್ದವು. “ಛೇ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಧೀಮಂತ ಚೇತನ ಕವಿ ಕಯ್ಯಾರರಿಗೊಂದು ನುಡಿನಮನ: ಡಾ. ಪೂರ್ಣಿಮಾ ಸುಧಾಕರ ಶೆಟ್ಟಿ

ನಮ್ಮನ್ನಗಲಿದ ತುಳು-ಕನ್ನಡಿಗರ ಹೆಮ್ಮೆಯ ಧೀಮಂತ ಚೇತನ ಕವಿ ಕಯ್ಯಾರರಿಗೊಂದು ನುಡಿನಮನ ದುಡಿತವೇ ನನ್ನ ದೇವರು, ಲೋಕ ದೇವಕುಲ ಬೆವರೆ ಹೂ ಹಣ್ಣು ಕಾಯ್, ಕಣ್ಣೀರ ತೀರ್ಥಂ ಎಮ್ಮೊಂದಿಗರ ಬಾಳ ಸಾವು ನೋವಿನ ಗೋಳ ಉಂದಿಹೆನು ಸಮಪಾಲ-ನನಗದುವೆ ಮೋಕ್ಷಂ ದುಡಿತಕ್ಕೇ ಹೆಚ್ಚು ಪ್ರಾಮುಖ್ಯತೆಯನ್ನು ನೀಡಿದ ಕಾಯಕವೇ ಕೈಲಾಸಂ ಎಂ¨ ಬಸವಣ್ಣನವರ ಸತ್ಪಥದಲ್ಲಿ ಸಾಗಿ ಅದರಂತೆ ಬಾಳಿದವರು ಹಿರಿಯ ಧೀಮಂತ ಚೇತನ, ಕನ್ನಡಾಂಬೆಯ ಪುತ್ರರತ್ನ ಹಿರಿಯ ಚೇತನ ಕೈಯ್ಯಾರ ಕಿಞ್ಞಣ್ಣ ರೈ. ಕಾಸರಗೋಡಿನ ಕನ್ನಡ ಪರ ಹೋರಾಟದಲ್ಲಿ ಕೇಳಿ ಬರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದು ದಿನ ಆರು ಸುತ್ತಾಣ: ವಸಂತ ಬಿ ಈಶ್ವರಗೆರೆ

ಸೂರ್ಯ ಪುತ್ರರಾಗಿ ಬಿಟ್ಟಿರುವ ನಮಗೆಲ್ಲ, ಸಿಗೋದು ಒಂದೇ ಒಂದು ದಿನ ವಾರಾಂತ್ಯ ರಜೆ. ಆ ರಜೆಯನ್ನೇ ಹೊಂದಿಸಿಕೊಂಡ ಪ್ರವಾಸಕ್ಕೆ ಸಿದ್ದವಾದರೇ, ಖಂಡಿತ ಒಂದೇ ದಿನದಲ್ಲಿ ಆರು ಸುತ್ತಾಣಗಳನ್ನ ಬೆಂಗಳೂರಿಗೆ 75 ಕಿಲೋ ಮೀಟರ್ ದೂರದ ಚಿನ್ನದ ನಾಡು ಕೋಲಾರ ಜಿಲ್ಲೆಯ ಸುತ್ತಮುತ್ತಲಿನಲ್ಲಿ ನೋಡಬಹುದು. ಧಾರ್ಮಿಕ ಸ್ಥಳಗಳಾದ ಈ ಪ್ರವಾಸಿತಾಣಗಳಿಗೆ ಭೇಟಿ ಕೊಟ್ಟು, ಭಕ್ತಿಯ ಭಾವನೆಯನ್ನ ಮನದಲ್ಲಿ ತುಂಬಿಕೊಳ್ಳುತ್ತಾ, ಸಂಭ್ರಮದಲ್ಲಿ ಒಂದೇ ಒಂದು ರಜೆಯ ಮಜೆಯನ್ನ ಅನುಭವಿಸಬಹುದು.  ಜಾಲೀ ರೈಡ್ ಮಾಡೋ ಪ್ರವಾಸ ಹೊರಟರೂ, ಸಂಸಾರ ಸಮೇತರಾಗಿ ಹೊರಟರೂ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಪುಕೋಟೆಯ ಮೇಲಿಂದ ತಿರಂಗದ ಕೆಳಗಿಂದ ಕಂಡ ಕನಸಗಳ ಕುರಿತು: ಪ್ರಶಸ್ತಿ

ಇಂದು ಆಗಸ್ಟ್ ಹದಿನೈದು. ಭಾರತಕ್ಕೆ ಸ್ವಾತಂತ್ರ್ಯ ಬಂದು ೬೮ ವರ್ಷ ತುಂಬಿದ ಅಥವಾ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವ ೬೯ ನೇ ದಿನ. ರಜೆಯೆಂದು ಹೊದ್ದು ಮಲಗೋ ಬದಲು ಬೆಳಗಾಗೆದ್ದು ಟಿ.ವಿಯ ಮುಂದೆ ಪ್ರತ್ಯಕ್ಷನಾಗಿ ಕೆಂಪುಕೋಟೆಯ ಮೇಲೆ ನಮ್ಮ ಹೆಮ್ಮೆಯ  ತ್ರಿವರ್ಣ ಧ್ವಜ ರಾರಾಜಿಸುವ ಗಳಿಗೆಗಾಗಿ ಕಾಯೋದು ಈ ದೇಶದ ಅದೆಷ್ಟೋ ಕೋಟಿ ಜನರಲ್ಲೊಬ್ಬ ನಾನು. ಬಿಳಿಬಿಳಿಯ ಸಮವಸ್ತ್ರ ತೊಟ್ಟು ಕೈಗೊಂದು ತ್ರಿವರ್ಣದ ಬ್ಯಾಂಡೋ ಜೇಬಿಗೊಂದು ತ್ರಿವರ್ಣದ ಪಿನ್ನೋ ಚುಚ್ಚಿಕೊಂಡು ಬೋಲೋ ಭಾರತ್ ಮಾತಾ ಕೀ ಜೈ ಎನ್ನುತ್ತಾ ಶಾಲಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಲ್ಲಗಳ ನಡುವೆ..: ಅನಿತಾ ನರೇಶ್ ಮಂಚಿ

ಎರಡೂ ಕೈಯಲ್ಲಿ ಮನೆಗೆ ಬೇಕಾದ ಸಾಮಾನುಗಳನ್ನು ಹಿಡಿದು ಬ್ಯಾಲೆನ್ಸ್ ಮಾಡ್ತಾ ಕಾರು ಪಾರ್ಕ್ ಮಾಡಿದ ಜಾಗಕ್ಕೆ ನಡೆದುಕೊಂಡು ಬರ್ತಾ ಇದ್ದೆ. ಒಂದು ಕೈಯ ಅವಸ್ಥೆ ಹೇಳತೀರದಾಗಿತ್ತು.ಅದರ  ಎಲ್ಲಾ ಬೆರಳುಗಳೂ ಒಂದೊಂದು ಚೀಲವನ್ನು ಹಿಡಿದುಕೊಂಡಿತ್ತು. ಕಾರು ತಲುಪುವಷ್ಟರಲ್ಲಿ ಕೈ ಬೆರಳುಗಳು ಮುರಿದೇ ಹೋಗಬಹುದೇನೋ ಎನ್ನುವ ಹೆದರಿಕೆಯಲ್ಲಿ ಹೆಜ್ಜೆಗಳು ಓಡಿದಂತೆ ಸಾಗುತ್ತಿತ್ತು. ಇನ್ನೇನು ಕಾರು ತಲುಪಲು ಒಂದು ನೂರು ಹೆಜ್ಜೆಗಳು ಇದೆ ಎನ್ನುವಾಗ ಹಿಂದಿನಿಂದ ಪರಿಚಿತ ಸ್ವರವೊಂದು ನನ್ನನ್ನು ಹಿಡಿದು ನಿಲ್ಲಿಸಿತು. “ಹಬ್ಬದ ಶಾಪಿಂಗಾ?”  ಹೌದೆಂದು ತಲೆಯಾಡಿಸುತ್ತಾ ಅವರೊಡನೆಯೂ ಪ್ರಶ್ನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

‘ಜಾಲದಲ್ಲಿ ಸಮಾನತೆ’ (ಕೊನೆಯ ಭಾಗ): ಜೈಕುಮಾರ್.ಹೆಚ್.ಎಸ್

ಭಾರತದಲ್ಲಿ ಜಾಲದಲ್ಲಿ ಸಮಾನತೆ ಕುರಿತ ಪರಿಸ್ಥಿತಿ: ಸ್ಪರ್ಧಾತ್ಮಕ ವ್ಯವಹಾರ ಆಯೋಗವು ಜಾಲದಲ್ಲಿ ಸಮಾನತೆಯನ್ನು ಭಾರತೀಯ ಟೆಲಿಕಾಂ ಆಪರೇಟರ್ ಗಳು ಉಲ್ಲಂಘಿಸುತ್ತಿದ್ದಾರೆಯೇ ಎಂದು ಪರಿಶೀಲನೆ ನಡೆಸುತ್ತಿತ್ತು. ಅದೇ ಸಮಯದಲ್ಲಿ ದುರದೃಷ್ಟವಶಾತ್, ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ವು ಇತ್ತೀಚೆಗೆ ಬಿಡುಗಡೆ ಮಾಡಿರುವ ಒವರ್-ದಿ-ಟಾಪ್ (ಒಟಿಟಿ) ಸೇವೆಗಳನ್ನು ನಿಯಂತ್ರಿಸುವ ಕುರಿತಾದ ಸಮಾಲೋಚನ ಡಾಕ್ಯುಮೆಂಟ್ ಕೇವಲ ಎರಡು ಆಯ್ಕೆಗಳನ್ನು ಮಾತ್ರವೇ ಮುಂದಿಟ್ಟಿದೆ: ಒಂದೋ ಇಂಟರ್ ನೆಟ್ ಸೇವೆಗಳಿಗೆ ಪರವಾನಗಿ ವಿಧಿಸುವುದನ್ನು ಒಪ್ಪುವುದು ಅಥವಾ ಜಾಲದಲ್ಲಿ ಸಮಾನತೆ ಕುರಿತು ರಾಜಿಯಾಗುವುದು. ಟ್ರಾಯ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾರತೀಯ ಸನ್ನಿವೇಶದಲ್ಲಿ ಹವಾಮಾನ ಬದಲಾವಣೆ – ಒಂದು ನೋಟ ಭಾಗ – 2: ಅಖಿಲೇಶ್ ಚಿಪ್ಪಳಿ

ಇಲ್ಲಿಯವರೆಗೆ [ಶ್ರೀ ನಾಗರಾಜ್ ಅಡ್ವೆಯವರು ದೆಹಲಿಯ ಇಂಡಿಯನ್ ಕ್ಲೈಮೇಟ್ ಜಸ್ಟೀಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಎಂ.ಫಿಲ್. ಪದವಿ ಪಡೆದಿದ್ದಾರೆ. ಇವರು ಅಭ್ಯಸಿಸಿದ ಮುಖ್ಯ ವಿಷಯ “ಹವಾಮಾನ ಬದಲಾವಣೆ” ಕುರಿತೇ ಆಗಿದೆ. ದೇಶದ ಎಲ್ಲಾ ಪ್ರಮುಖ ಪತ್ರಿಕೆಗಳಿಗೂ ಹವಾಮಾನ ಬದಲಾವಣೆ ಕುರಿತ ಲೇಖನಗಳನ್ನು ಬರೆಯುತ್ತಾರೆ. ಇವರು ಇಡೀ ಭಾರತವನ್ನು ಸುತ್ತಾಡಿ, ಹವಾಮಾನ ಬದಲಾವಣೆಯಿಂದಾದ ವ್ಯತ್ಯಾಸಗಳನ್ನು ಗುರುತಿಸಿ, ದಾಖಲಿಸಿದ್ದಾರೆ. ಇದೇ ವರ್ಷದ ಡಿಸೆಂಬರ್‍ನಲ್ಲಿ ಪ್ಯಾರೀಸ್‍ನಲ್ಲಿ ನಡೆಯಲಿರುವ ಜಾಗತಿಕ ಹವಾಮಾನ ವೈಪರೀತ್ಯ ಸಮಾವೇಶದ ಹೊತ್ತಿನಲ್ಲಿ, ಈ ಮಾಹಿತಿಗಳು ಅತ್ಯಂತ ಮಹತ್ವ್ತಪೂರ್ಣವೆನಿಸುತ್ತದೆಯಾದ್ದರಿಂದ ಇಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆತ್ಮೀಯ ಎಂದರೆ soulmate ಅಂತ: ಲಾವಣ್ಯ ಆರ್.

ಹಾಯ್ ಆತ್ಮೀಯ, ತಪ್ಪು ತಿಳಿಯಬೇಡ ನಾನಂದದ್ದು ಆತ್ಮೀಯ ಎಂದು ಪ್ರೇಮಿಯೆಂದಲ್ಲ, ನೀನೆಂದು ನನ್ನ ಪ್ರೇಮಿಯಾಗಿರಲಿಲ್ಲ. ಆತ್ಮೀಯ ಎಂದರೆ soulmate ಅಂತ. ಇದೇನು ಇದ್ದಕಿದ್ದ ಹಾಗೆ ನೀನು ಅನ್ನುತ್ತಿದ್ದಾಳೆ ಅಂತ ಹುಬ್ಬು ಗಂಟಿಕ್ಕಬೇಡ ಇದು ಮನಸಿನ ಮಾತು ಇಲ್ಲಿ ಏಕವಚನ ಬಹುವಚನದ ಲೇಪನ ಅನವಶ್ಯಕ. ಅದು ಎಲ್ಲಿದ್ದೊ ತಿಳಿಯದು, ದಿಢೀರನೆ ಪ್ರತ್ಯಕ್ಷವಾದೆ ನನ್ನಲ್ಲಿ ನೂರಾರು ಬದಾಲಾವಣೆ ತಂದೆ, ಯಾರನ್ನು ಕುಡಿ ನೋಟದಲ್ಲು ನೋಡದವಳು ನಿನ್ನ ಕಿರುಗಣ್ಣಿನ ಕೊನೆಯಲ್ಲಿ ನೋಡುವ ಹಾಗೆ ಮಾಡಿದೆ, ಮಾತಿಗಿಂತ ಮೌನವನ್ನೆ ಆಶ್ರಯಿಸುವವಳಲ್ಲಿ ಆಡಿದರು ಮುಗಿಯದಷ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಸಿರಿ, ಶ್ರೀಶೈಲ ಮಗದುಮ್ಮ, ವಿನಾಯಕ ಭಟ್

ಸದ್ದಿಲ್ಲದೇ ಒಳ ನುಗ್ಗಿದವನಿಗೆ ಭದ್ರವಾಗಿ ಮುಚ್ಚಿ, ಕೀಲಿ ಹಾಕಿದ್ದ ನನ್ನೆದೆಯ ಗುಬ್ಬಿ ಬಾಗಿಲನು ನಿನ್ನದೇ ಸ್ವಂತ ಸ್ವತ್ತೆಂಬಂತೆ ರಾಜ ಗಾಂಭೀರ್ಯದಲ್ಲಿ ತೆರೆದು  ಸದ್ದಿಲ್ಲದೇ ಒಳನುಗ್ಗಿ,  ಸಿಂಹಾಸನಾರೂಢನಾದೆಯಲ್ಲೋ ನಿನಗದೆಂತಹ ಸೊಕ್ಕು…? ಇಷ್ಟಾದರೆ ಸಹಿಸಿಕೊಳ್ಳುತ್ತಿದ್ದೆ ಪಾಪ, ಸುಸ್ತಾಗಿದ್ದಿರಬಹುದೇನೋ ಕುಳಿತು ಕೊಂಚ ಸುಧಾರಿಸಿಕೊಳ್ಳಲಿ ಎಂದು ಆದರೆ ಸುಮ್ಮನಿರದ ನೀನು ನನ್ನ ಕನಸುಗಳನ್ನೆಲ್ಲ  ವಶ ಪಡಿಸಿಕೊಂಡೆಯಲ್ಲೋ ನಿನಗದೆಂತಹ ಛಾತಿ…? ಇರಲಿ, ಜುಜೂಬಿ ಕನಸುಗಳಿಗಾಗಿ ಕೊರಗುವುದೇ..? ಹಾಳಾಗಲಿ  ಹೊಸ ಕನಸು ಹೆಣೆದರಾಯಿತು ಎಂದು ನನ್ನ ಮನಸಿಗೆ ಸಮಾಧಾನ ಹೇಳಿ ತಿರುಗಿ ನೋಡುವಷ್ಟರಲ್ಲಿ ನೀನು ನನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ದತ್ತು ಹಕ್ಕಿಮರಿಯ ಕತೆ ಒಂದಾನೊಂದು ಕಾಲದಲ್ಲಿ ಹಾರಲಾರದ ಹೆಣ್ಣು ಪಕ್ಷಿಯೊಂದಿತ್ತು. ಕೋಳಿಯಂತೆ ನೆಲದ ಮೇಲೆ ನಡೆದಾಡುತ್ತಿದ್ದ ಅದಕ್ಕೆ ಕೆಲವು ಪಕ್ಷಿಗಳು ನಿಜವಾಗಿಯೂ ಹಾರುತ್ತಿದ್ದವು ಎಂಬುದು ತಿಳಿದಿತ್ತು. ಒಂದು ದಿನ ಅದು ಹಾರುವ ಪಕ್ಷಿಯ ಪರಿತ್ಯಕ್ತ ಮೊಟ್ಟೆಯೊಂದನ್ನು ನೋಡಿತು. ಮೊಟ್ಟೆಯೊಡೆದು ಮರಿ ಹೊರಬರುವ ವರೆಗೆ ಅದಕ್ಕೆ ಕಾವು ಕೊಡಲು ತೀರ್ಮಾನಿಸಿತು. ಯುಕ್ತ ಸಮಯಾನಂತರ ಮೊಟ್ಟೆಯನ್ನು ಒಡೆದುಕೊಂಡು ಮರಿ ಹೊರಬಂದಿತು. ಅದು ಹಾರುವ ಸಾಮರ್ಥ್ಯವಿದ್ದ ಪಕ್ಷಿಯ ಮೊಟ್ಟಯಿಂದ ಹೊರಬಂದ ಮರಿಯಾದ್ದರಿಂದ ಅದಕ್ಕೂ ಹಾರುವ ಸಾಮರ್ಥ್ಯ ಹುಟ್ಟುವಾಗಲೇ ಇತ್ತು. ತುಸು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇವು ನಮ್ಮ ಕನ್ನಡ ಸಿನೆಮಾಗಳ ಹೆಸರುಗಳು!: ಸೂರಿ ಹಾರ್ದಳ್ಳಿ

ತಮ್ಮದು ಕನ್ನಡ ಸಿನೆಮಾ ಎಂದು ತಾವೇ ಕರೆದುಕೊಳ್ಳುವ ಸಿನೆಮಾಗಳಲ್ಲಿ ಭಾಷೆ ಹೇಗಿದೆಯೋ ಗೊತ್ತಿಲ್ಲವಾದರೂ ಅವು ಹೊಂದಿರುವ ಹೆಸರುಗಳು ಹೇಗಿರುತ್ತವೆ ಗೊತ್ತಾ? ಈ ಕೆಳಗಿನವನ್ನು ಓದಿ. 1.    ಪೂರ್ತಿ ಬೇರೆ ಭಾಷೆಯ ಹೆಸರುಗಳು ದುನಿಯಾ, ಲಾಕಪ್ ಡೆತ್, ಮಾಸ್ಟರ್ ಮೈಂಡ್, ರೈನ್ ಕೋಟ್, ಕೇರ್ ಆಫ್ ಫುಟ್‍ಪಾತ್, ಐ ಆ್ಯಮ್ ಇನ್ ಲವ್, ಲವ್ ಯು ಆಲಿಯಾ, ಲವ್ ಬ್ಯಾಂಡ್, ಫೇರ್ ಅಂಡ್ ಲವ್ಲಿ, ಲವ್ ಈಸ್ ಪಾಯ್ಸನ್, ಲವ್ ಇನ್ ಮಂಡ್ಯ, ಡಾರ್ಲಿಂಗ್, ಕ್ರೇಜಿ ಸ್ಟಾರ್, ಲಿಟಲ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಾಲ್ಫ್ ಕ್ಲಬ್ ಗುಂಡುಗೋಷ್ಠಿಯೂ… ಅಲ್ಲಿನ ರೂಲ್ಸೂ…: ಎಚ್.ಕೆ.ಶರತ್

ಗೆಳೆಯನನ್ನು ಭೇಟಿ ಮಾಡಲು ಇತ್ತೀಚೆಗೆ ಮೈಸೂರಿಗೆ ಹೋಗಿದ್ದೆ. ಹೆಂಡತಿ ತವರು ಮನೆಗೆ ಹೋಗಿದ್ದ ಕಾರಣ ‘ಗುಂಡು ಪಾರ್ಟಿ’ಯಲ್ಲಿ ಪಾಲ್ಗೊಳ್ಳುವ ಅವಕಾಶ ಅವನಿಗೆ ಒಲಿದಿತ್ತು. ಅಪರೂಪಕ್ಕೆ ಸಿಗುವ ಇಂಥ ಚಾನ್ಸ್ ಮಿಸ್ ಮಾಡಿಕೊಳ್ಳಬಾರದೆಂದು ಮೈಸೂರಿನಲ್ಲಿದ್ದ ತನ್ನ ಗೆಳೆಯರಿಗೆಲ್ಲ ಕರೆ ಮಾಡಿ ಪಾರ್ಟಿ ಮಾಡುವ ಪ್ಲ್ಯಾನು ಇರುವುದಾಗಿ ತಿಳಿಸಿದ. ಗಾಲ್ಫ್ ಕ್ಲಬ್ ಮೆಂಬರ್ ಆಗಿರುವವನೊಬ್ಬ, ಕ್ಲಬ್‍ಗೆ ಹೋಗೋಣ ಹಾಗಾದ್ರೆ ಅಂತಂದ. ನಾವು ರೆಡಿಯಾದ್ವಿ. ನಮ್ಮನ್ನು ಕರೆದೊಯ್ಯಲು ಬಂದವನು, ನಮ್ಮ ಅವತಾರ ಕಂಡು ಅವಾಕ್ಕಾದ. ಈ ಡ್ರೆಸ್‍ನಲ್ಲಿ ಬಂದ್ರೆ ನಿಮ್ಮನ್ನು ಕ್ಲಬ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಮನವ ಗೆದ್ದವನೇ ಮಹಾ ಶೂರ!”: ಹೊರಾ.ಪರಮೇಶ್ ಹೊಡೇನೂರು

            ಗಾಳಿಗಿಂತಲೂ ವೇಗವಾಗಿ ಚಲಿಸುವುದು ನಮ್ಮ "ಮನಸ್ಸು" ಎಂಬುದು ಸರ್ವವಿಧಿತ. ಏಕೆಂದರೆ, ನಮ್ಮ ಮನಸ್ಸಿನಲ್ಲಿ ಒಂದು ವಸ್ತು, ನೋಡಿದ ಸ್ಥಳ, ಕಾಡುವ ಹುಡುಗಿ, ಬೇಡುವ ದೇವರು ಮೊದಲಾದವುಗಳನ್ನು ಕಲ್ಪಿಸಿಕೊಂಡು ಮನಸ್ಸನ್ನು ಹರಿಯಬಿಟ್ಟರೆ ಅಥವಾ ಅಂದುಕೊಂಡರೆ ಸಾಕು, ನಮ್ಮ ಸ್ಮೃತಿಯೊಳಗೆ ಅವುಗಳ ಚಿತ್ರಣ ಹಾದು ಹೋಗಿ ಕಣ್ಣೆದುರೇ ಬಂದಂತೆ ಭಾಸವಾಗುವುದು ಸೃಷ್ಟಿಯ ಅದ್ಭುತ ಕೊಡುಗೆಯಾಗಿದೆ. ಇದೇ ಮನಸ್ಥಿತಿಯ ಈ ಸಾಮರ್ಥ್ಯವನ್ನು ಬಳಸಿಕೊಂಡೇ ಇಂದು ನಾವೆಲ್ಲರೂ ಅಪಾರವಾದ ಜ್ಞಾನವನ್ನು, ಅದರೊಳಗೆ ಜೀವನ ಸೊಬಗನ್ನೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಕ್ಕಿ ಭಾಗ್ಯ….: ರಾಘವೇಂದ್ರ ತೆಕ್ಕಾರ್

ನನಗೆ ದೋಸೆ, ಇಡ್ಲಿ, ಕಡುಬು ಈ ತರದ ಅಕ್ಕಿತಿಂಡಿಗಳೆಂದರೆ ಪಂಚ ಪ್ರಾಣ. ಬೆಳಿಗ್ಗಿನ ಉಪಹಾರಕ್ಕೆ ಈ ಚೌ ಚೌ ಬಾತ್, ಬೇಳೆ ಬಾತ್,ಪೂರಿ, ಪಲಾವು, ರೈಸ್ ಬಾತ್ ಇವುಗಳೆಲ್ಲ ಅಷ್ಟಕಷ್ಟೆ. ಏನಿದ್ದರೂ ಅಕ್ಕಿ ರುಬ್ಬಿ ಮಾಡಿದ ತಿಂಡಿಗಳತ್ತಲೆ ನನ್ನೊಲುಮೆ. ಅಪರೂಪಕ್ಕೆ ಅನ್ನವನ್ನು ಲಿಂಬೂ ನೀರು ಹಿಂಡಿದ ಈರುಳ್ಳಿ ವಗ್ಗರಣೆಗೆ ಬೆರೆಸಿದ ಚಿತ್ರಾನ್ನ ತರದೆಂತದ್ದನ್ನೊ ತಿನ್ನುವದು ಇದೆ.ಈ ನನ್ನ ಚಪಲ ನನ್ನ ಮನೆಯಾಕೆಗೆ ನುಂಗಲಾರದ ತುತ್ತು. ಆ ಮಿಕ್ಸಿಯಲ್ಲಿ ಗಿರ ಗಿರ ಸದ್ದು ಮಾಡಿಸುತ್ತಾ ಅಕ್ಕಿ ರುಬ್ಬ ಬೇಕಾದುದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪುಣೇಕರರು ಹಾಗೂ ಅವರ ಆಂಗ್ಲ ಶ್ರೀರಾಮಾಯಣ ದರ್ಶನಂ: ಶ್ರೀನಿವಾಸ ದೇಸಾಯಿ

ಶಂಕರ ಮೊಕಾಶಿ ಪುಣೇಕರ ಕನ್ನಡ ಸಾಹಿತ್ಯದ ವಿಶಿಷ್ಟ ವ್ಯಕ್ತಿ. ಎರಡು ಅಡ್ಡಹೆಸರು ಪಡೆದವರು, ಮಾತೃಭಾಷೆ ಕನ್ನಡ ಹಾಗೂ ವಿಶ್ವಭಾಷೆ ಆಂಗ್ಲಭಾಷೆ ಎರಡರಲ್ಲೂ ಪ್ರತಿಭಾನ್ವಿತರು. ದ್ವಿಭಾಷಾ ಸಾಹಿತಿ ಎಂದು ಪ್ರಸಿದ್ಧರು. ಹಾಗೇ ದೇವಭಾಷೆ ಸಂಸ್ಕೃತವೂ ಚೆನ್ನಾಗಿ ಬರುತ್ತಿತ್ತು. ಪುಣೇಕರರ ಬದುಕಿನ ಪಥವಂತೂ ಅವರೇ ಹೇಳಿಕೊಂಡಂತೆ, ಕಾರವಾನ್(Carvan)ತರಹದ್ದಾಗಿದೆ. ಬಾಲ್ಯದಿಂದಲೂ ಜೀವಕ್ಕೆ ಅಂಟಿಗೊಂಡ ಓದಿನ ಗೀಳು ಬದುಕಿನ ಅಂತ್ಯದವರೆಗೆ ಸಾಗಿತ್ತು. ಬಿ.ಎಂ.ಶ್ರೀ., ಪ್ರೊ. ಮೆನಜಿಸ್, ಡಾ. ಗೋಕಾಕರಂತಹ ಶ್ರೇಷ್ಠ ಶಿಕ್ಷಕರ ಅಡಿಯಲ್ಲಿ ಕಾಲೇಜು ಶಿಕ್ಷಣ ನಡೆದು, ಎಂ.ಎ. (ಇಂಗ್ಲಿಷ್) ಹಾಗೂ ಯೇಟ್ಸ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಮ್ಮನ ನೆನಪಿನ ಧಾರೆ: ಮಾಲಾ

ಅಮ್ಮನ ನೆನಪು, ಸಂಪುಟ ೧,  ಸಂಪಾದನೆ: ಚಂದ್ರಕಾಂತ ವಡ್ಡು,  ಅಂಕುರ ಪ್ರಕಾಶನ, ನಂ. ೧೧೪೮, ೧ನೇ ಮಹಡಿ,  ೨ನೇ ಅಡ್ಡರಸ್ತೆ, ಪಡುವಣ ರಸ್ತೆ,  ಮೈಸೂರು ೫೭೦೦೨೩,  ಪುಟಗಳು ೨೦೦,  ಬೆಲೆ ರೂ. ೧೫೦ ಮಕ್ಕಳ ಪ್ರಪಂಚದಲ್ಲಿ ಮೊದಲಿಗೆ ಅಮ್ಮನಿಗೇ ಸ್ಥಾನ. ಅಮ್ಮ ಎಂಬ ಪದವೇ ಸಾಕು ನಮಗೆ ಹರುಷ ತರಲು.  ಎಲ್ಲ ಮಕ್ಕಳಿಗೂ ಅಮ್ಮನ ನೆನಪು ಅವಳಿಲ್ಲದಿರುವಾಗಲೇ ಹೆಚ್ಚು ಕಾಡುತ್ತದೆ ಎಂದು ನನಗನಿಸುತ್ತದೆ. ಈ ಹೊತ್ತಗೆಯಲ್ಲಿ ೩೬ ಜನ ಮಕ್ಕಳು ಅವರ ತಾಯಿ ಬಗ್ಗೆ ತಮ್ಮ ನೆನಪನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

‘ಜಾಲದಲ್ಲಿ ಸಮಾನತೆ’ (ಭಾಗ 2): ಜೈಕುಮಾರ್.ಹೆಚ್.ಎಸ್

ಇಲ್ಲಿಯವರೆಗೆ ನಂತರದ ದಿನಗಳಲ್ಲಿ ಇಂಟರ್ ನೆಟ್ ನ ವಿನ್ಯಾಸ ರಚನೆ ಕೂಡ ಬದಲಾವಣೆಗೊಂಡಿದೆ. ಈ ಮುಂಚಿನ ಕೇಂದ್ರೀಕೃತ ಸರ್ವರ್ ಗಳು ಮತ್ತು ನೋಡ್ ಗಳಿಲ್ಲದ, ಪ್ರತಿಯೊಬ್ಬರೂ ಪರಸ್ಪರ ನೇರವಾಗಿ ಕಂಪ್ಯೂಟರಿಗೆ ಸಂಪರ್ಕ ಮಾಡಿಕೊಳ್ಳುವ ವಿನ್ಯಾಸ ರಚನೆಯ ಸ್ಥಳದಲ್ಲಿ ಇಂದು ಬಳಕೆದಾರರು ಇಂಟರ್ನೆಟ್ ದೈತ್ಯ ಕಂಪನಿಗಳ ಕೇಂದ್ರೀಕೃತ ಸರ್ವರ್ ಗಳನ್ನು ಅವಲಂಬಿಸುತ್ತಿದ್ದಾರೆ. ಇದನ್ನೇ ಕ್ಲೌಡ್ ಕಂಪ್ಯೂಟಿಂಗ್ ಎಂದು ಕರೆಯುವುದು. ಇಂಟರ್ ನೆಟ್ ನ ಸ್ವರೂಪದಲ್ಲಾಗಿರುವ ಈ ಮೂಲಭೂತ ಬದಲಾವಣೆಯು ಜಾಗತಿಕ ಇಂಟರ್ನೆಟ್ ಕಂಪನಿಗಳ ಏಳಿಗೆಯ ಜೊತೆ ಜೊತೆಗೇ ನಡೆದಿದೆ.  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ವಂತೀ(selpfie): ಪ್ರಶಸ್ತಿ

ಈ ಸ್ವಂತೀ ಅಥವಾ ಸೆಲ್ಪೀ ಅನ್ನೋ ಪದದ ಬಗ್ಗೆ ಕೇಳದ ಸಾಮಾಜಿಕ ತಾಣಗಳ ಬಳಕೆದಾರರು ಇಲ್ಲವೇ ಇಲ್ಲ ಅಂದರೆ ತಪ್ಪಾಗಲಾರದೇನೋ . ಗೆಳೆಯನೊಬ್ಬ ಅಥವಾ ಗೆಳತಿಯೊಬ್ಬಳು ನಮ್ಮ ಪಟ ತೆಗೆಯೋದಕ್ಕೆ ಕಾಯೋ ಬದಲು ನಮ್ಮ ಚಿತ್ರ ನಾವೇ ತೆಗೆದುಕೊಳ್ಳೋದಕ್ಕೆ  ಸೆಲ್ಫೀ ಅಥವಾ ಸ್ವಂತೀ(ಕೃಪೆ: ಮುಖಹೊತ್ತುಗೆಯ "ಪದಾರ್ಥ ಚಿಂತಾಮಣಿ" ಗುಂಪು)ಅಂತ ಕರೆಯುತ್ತಾರೆ ಎಂಬುದು ನಿಮಗೆಲ್ಲಾ ಗೊತ್ತಿರುವಂತದ್ದೇ ಆದರೂ ಆ ಪದವನ್ನು ಮೊದಲು ಹುಟ್ಟುಹಾಕಿದ್ದು ಯಾರಂತ ಗೊತ್ತೇ ? ಆಕ್ಸವರ್ಡ ಪದಕೋಶದಿಂದ ೨೦೧೩ರ "ವರ್ಷದ ಪದ" ಎಂಬ ಬಿರುದು ಪಡೆದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾರತೀಯ ಸನ್ನಿವೇಶದಲ್ಲಿ ಹವಾಮಾನ ಬದಲಾವಣೆ – ಒಂದು ನೋಟ: ಅಖಿಲೇಶ್ ಚಿಪ್ಪಳಿ

ಶ್ರೀ ನಾಗರಾಜ್ ಅಡ್ವೆಯವರು ಇಡೀ ಭಾರತವನ್ನು ಸುತ್ತಾಡಿ, ಹವಾಮಾನ ಬದಲಾವಣೆಯಿಂದಾದ ವ್ಯತ್ಯಾಸಗಳನ್ನು ಗುರುತಿಸಿ, ದಾಖಲಿಸಿದ್ದಾರೆ. ಇದೇ ವರ್ಷದ ಡಿಸೆಂಬರ್‍ನಲ್ಲಿ ಪ್ಯಾರೀಸ್‍ನಲ್ಲಿ ನಡೆಯಲಿರುವ ಜಾಗತಿಕ ಹವಾಮಾನ ವೈಪರೀತ್ಯ ಸಮಾವೇಶದ ಹೊತ್ತಿನಲ್ಲಿ, ಈ ಮಾಹಿತಿಗಳು ಅತ್ಯಂತ ಮಹತ್ವ್ತಪೂರ್ಣವೆನಿಸುತ್ತದೆಯಾದ್ದರಿಂದ ಇಲ್ಲಿ ಅವರು ಬರೆದ ಕಿರುಪುಸ್ತಕದ ಭಾವಾನುವಾದವನ್ನು ನೀಡಲಾಗಿದೆ. ಗುಜರಾತಿನಲ್ಲಿ ಏನು ಹೇಳಿದರು? ಮೂರು ವರ್ಷಗಳ ಹಿಂದೆ ಪೂರ್ವ ಗುಜರಾತಿ ಮೆಕ್ಕೆಜೋಳ ಬೆಳೆಯುವ ರೈತರನ್ನು ಮಾತನಾಡಿಸಲಾಯಿತು. ಕೆಲವು ವರ್ಷಗಳಿಂದ ಬಿಸಿಯಾಗುತ್ತಿರುವ ಚಳಿಗಾಲದಿಂದಾಗಿ, ಅಲ್ಲಿ ಇಬ್ಬನಿ ಬೀಳುವುದು ತೀವ್ರವಾಗಿ ಕಡಿಮೆಯಾಗಿದೆ. ಅತ್ಯಂತ ಕಡಿಮೆ ನೀರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿಯ ಯಾನಕ್ಕೆ: ವಸಂತ ಬಿ ಈಶ್ವರಗೆರೆ

ಪ್ರೀತಿಯ ಯಾನಕ್ಕೆ ಏರಿಳಿತಗಳ ಓಟ, ನನ್ನವಳು ಜೊತೆಗಿದ್ದರೇ ಅದ ಮರೆವ ಆಟ ನನ್ನ(ಅ)ವಳ ಪ್ರೀತಿಗೆ ಇಂದು 8 ವರ್ಷಗಳ ‘ವಸಂತ’. ಎಂದೂ, ಯಾವತ್ತೂ ದೂರಾಗಿದ್ದಿಲ್ಲ. ಭಾವನೆಗಳ ತೋಯ್ದಾಟದಲ್ಲಿ ನಾವಿಬ್ಬರೂ ಎಂದು ಒಂದೆಂಬ ಭಾವನೆ. ಕಲ್ಪನೆಯ ಗೂಡಲ್ಲಿ ಜೋತೆಯಾಗಿ ಹುಟ್ಟಿದ ಹಕ್ಕಿಗಳೆಂಬ ಭಾವನೆ ನಮ್ಮೊಳಗೆ.  ಅದೇಕೋ ಮುನಿಸು ನಮ್ಮಲ್ಲಿಲ್ಲ, ಪ್ರೀತಿಯೇ ನಮ್ಮೊಳಗೆಲ್ಲ. ನೋಡಿದ ಎಲ್ಲರೂ ಕಲಿಯುಗದ ಅಮರ ಪ್ರೇಮಿಗಳು ಎಂಬ ಭಾವನೆಯಿಂದಲೇ ನಮ್ಮನ್ನ ಕಂಡವರು. ಎಲ್ಲರ ಹಾಗೇ ನಾವು ಸುತ್ತಾಟ, ತಿರುಗಾಟ ಮಾಡಿದ್ದು ಅಲ್ಪವೇ, ಅದರೇ ಮನಸ್ಸೆಂಬ ಭಾವನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುರಿದದ್ದು ಮಳೆ, ಕರಗಿದ್ದು ಒಡಲು: ಸಂಗೀತ ರವಿರಾಜ್

ಇಳೆಯು ಬಯಸಿದ ಪ್ರೇಮ ಕಾವ್ಯವೇ ಮಳೆ ಎಂಬುದು ಅವಳಿಗಷ್ಟೆ ತಿಳಿದಿದೆ. ಈ ಕಾವ್ಯಕ್ಕೆ ನದಿ, ತೊರೆಯ ಹಂಗಿಲ್ಲ. ಇಳೆಯಲ್ಲೇ ಇಂಗಿ ಅಲ್ಲೇ ಒರತೆಯಾಗುವ ಹುಮ್ಮಸ್ಸು ಮಾತ್ರ. ಸುಮಧುರ ಮನಸ್ಸಿಗೆ, ಸುಮಧುರ ಕಾವ್ಯದ ಹಿತ ಕೊಡುವ ಮಳೆ ಅವನಿಯಂತೆ ಅಚಲ. ಭೋರ್ಗರೆಯುತ್ತಾ ಸುರಿಯುವ ನಿನಾದಕ್ಕೆ ಮನದ ಸಂಗೀತ ಎಲ್ಲೆ ಮೀರಿ ಹಾಡುತ್ತಿದೆ. ಆ ರಾಗಕ್ಕೆ ಸ್ವರಗಳು ಶ್ರುತಿಯ ಮೀಟುತ್ತಿದೆ. ಪದಗಳಿಲ್ಲದ ಆಲಾಪವೆಂದರೆ ಅದು ವರ್ಷಾಧಾರೆ ಎಂಬುದನ್ನು ಒಂದೇ ಕೊಡೆಯಡಿಯಲ್ಲಿ ನಡೆದಾಡಿದಾಗ ಉಸುರಿದ್ದು ಈಗ ನೆನಪುಗಳು. ಪದಪದಗಳ ಪಲ್ಲವಿ ಕಟ್ಟಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ