ಗಣಪನ ಚೌತಿಯೂ ರುಬ್ಬುವ ಕಲ್ಲೂ..: ಅನಿತಾ ನರೇಶ್ ಮಂಚಿ.
. ಎಳ್ಳುಂಡೋಳಿಗೆ ಕಬ್ಬು ಮೆಲುವವಗೇ.. ಎಂದು ಅಪ್ಪ ಸುಶ್ರಾವ್ಯವಾಗಿ ಯಕ್ಷಗಾನೀಯ ಸ್ಟೈಲಿನಲ್ಲಿ ಬೆಳಗ್ಗೆಯೇ ಹಾಡಲು ಶುರು ಮಾಡಿದ್ದರು. ಹಿಮ್ಮೇಳವಾಗಿ ತೆಂಗಿನಕಾಯಿ ಹೆರೆಯುವ ಸದ್ದು ಜೊತೆಗೆ ಕೇಳಿ ಬರುತ್ತಿತ್ತು. ಅಮ್ಮ ಮೂರ್ನಾಲ್ಕು ತೆಂಗಿನಕಾಯಿಗಳನ್ನು ಒಡೆದು ತಂದು ಅಪ್ಪನ ಮುಂದಿಟ್ಟು ಕ್ಲಿನಿಕ್ಕಿಗೆ ಹೋಗೋ ಮೊದಲು ಇದಿಷ್ಟು ತುರಿದುಕೊಟ್ಟು ಹೋಗಬೇಕು ಅಂತ ಫರ್ಮಾನ್ ಹೊರಡಿಸಿದ್ದಳಲ್ಲಾ.. ಅಪ್ಪನ ಆಲಾಪಕ್ಕೆ ಸರಿಯಾಗಿ ಕಾಯಿ ತುರಿಯುವ ವೇಗ ವೃದ್ಧಿಸುವುದು, ಕಡಿಮೆಯಾಗುವುದು ನಡೆಯುತ್ತಿತ್ತು. ಈಗ ಅಡುಗೆ ಮನೆಗೆ ಹೋದರೆ ಅಮ್ಮ ಏನಾದರೂ ಕೆಲಸ ಅಂಟಿಸುತ್ತಾಳೆ ಎಂದು ನನಗೂ … Read more