ಕ್ಯಾನ್ಸರ್ ಟ್ರೇನ್ – ಭಟಿಂಡಾ ಟೂ ಬಿಕನೇರ್: ಅಖಿಲೇಶ್ ಚಿಪ್ಪಳಿ
ಗೋಧಿಯ ಕಣಜವಾದ ಪಂಜಾಬ್ ರಾಜ್ಯದ ಕ್ಯಾನ್ಸರ್ ಟ್ರೇನ್ ಕತೆ ಗೊತ್ತಿರಬಹುದು. ಆದರೂ ಕೊಂಚದಲ್ಲಿ ಹೇಳಿಬಿಡುತ್ತೇನೆ. ನಮ್ಮಲ್ಲಿ ಹೇಗೆ ಅಕ್ಕಿ ಮುಖ್ಯ ಆಹಾರವೋ ಹಾಗೆ ಉತ್ತರ ಭಾರತದಲ್ಲಿ ಗೋಧಿ ಮುಖ್ಯ ಆಹಾರ. ಅಲ್ಲಿ ಅಕ್ಕಿಯನ್ನು ಬಹು ಅಪರೂಪಕ್ಕೆ ಉಪಯೋಗಿಸುತ್ತಾರೆ. ಅದರಲ್ಲೂ ಡಾಭಾಗಳು ಮೈದಾ ಹಿಟ್ಟಿನ ರೋಟಿಯನ್ನೇ ಮಾಡುತ್ತಾರೆ. ಮೈದಾಹಿಟ್ಟು ತಯಾರಾಗುವುದು ಗೋಧಿಯಿಂದಲೇ. ಶಕ್ತಿಯುತ, ಹೇರಳ ಪ್ರೊಟೀನ್ ಮತ್ತು ನಾರಿನಂಶವಿರುವ ಗೋಧಿಯ ಮೇಲಿನ ಭಾಗ ಬೂಸ ಎಂದು ಕರೆಯಲ್ಪಟ್ಟು ಜಾನುವಾರುಗಳಿಗೆ ಆಹಾರವಾಗುತ್ತದೆ. ಹಾಗೆಯೇ ಗೋಧಿ ರವೆ, ಹಿಟ್ಟು ಆಮೇಲೆ ಗೋಧಿಯ … Read more