ವಿದ್ಯೆ ಮತ್ತು ಸಹೃದಯಿಗರು: ರಾಘವೇಂದ್ರ ತೆಕ್ಕಾರ್

“ಇದು ಸುಮಾರು 2002 ನೆ ಇಸವಿಯ ಘಟನೆಗಳು……” ಬಹುರಾಷ್ಟ್ರೀಯ ಕಂಪೆನಿಯೊಂದು ತನ್ನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸಂದರ್ಶನವೊಂದನ್ನು ನಗರದ ಪ್ರತಿಷ್ಟಿತ ಹೋಟೇಲ್ ಒಂದರಲ್ಲಿ ಕರೆದಿತ್ತು. ಸೂಟು ಬೂಟಲ್ಲಿ ಖಡಕ್ ಇಸ್ತರೀ ಬಟ್ಟೆಗಳ ಮೇಳೈಕೆಗಳ ಜೊತೆ ಕೈಯಲ್ಲಿ ಒಂದೀಟುದ್ದದ ಫೈಲ್ ಹಿಡಿದು ಇದ್ದ ಬದ್ದ ಕಾಗದ ಪತ್ರವನ್ನು ತುಂಬಿ ಸರತಿಯಲ್ಲಿ ಸಂದರ್ಶನವನ್ನು ಎದುರುಗೊಳ್ಳಲು ತಲೆ ಮೇಲೆ ಆಕಾಶ ಉದುರಿಸಿಕೊಂಡಂತೆ ನಿಂತವರ ಮಧ್ಯದಲ್ಲಿ…….. ಕಾಲಿಗೆ ಪ್ಯಾರಗಾನ್ ಹವಾಯಿ ಚಪ್ಪಲ್ ಸಿಗಿಸಿಕೊಂಡು ದೊಗಲೆ ಪ್ಯಾಂಟ್ ಜೋಬಲ್ಲಿ ಒಂದು ಪೆನ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಂಕಣ ನಾಡು ನುಡಿಗಾಗಿ: ಯದುನಂದನ್ ಗೌಡ ಎ.ಟಿ.

     ಹೆಸರೇ ಸೂಚಿಸುವಂತೆ "ಕಂಕಣ" ಎನ್ನುವುದು ಕನ್ನಡಿಗರಿಂದ, ಕನ್ನಡಕ್ಕಾಗಿ ಜನ್ಮ ತಾಳಿರುವ ಒಂದು ಕನ್ನಡಪರ ಬಳಗ. ಖ್ಯಾತ ಚಲನಚಿತ್ರ ಸಾಹಿತಿ “ಕವಿರಾಜ್” ಈ ತಂಡದ ಸಾರಥಿಯಾಗಿದ್ದು ಸುಮಾರು 150 ಸ್ವಯಂ ಪ್ರೇರಿತ ಕನ್ನಡಿಗ ಸದ್ಯಸರು ಈ ಬಳಗದಲ್ಲಿದ್ದಾರೆ.  ಇತ್ತೀಚೆಗೆ ಕರ್ನಾಟಕದಲ್ಲಿ, ಅದರಲ್ಲೂ ನಮ್ಮ ರಾಜಧಾನಿ ಬೆಂಗಳೂರಿನಲ್ಲಿ ದಿನನಿತ್ಯ ಜೀವನದಲ್ಲಿ ಕನ್ನಡ ಬಳಕೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಸಾಗಿದೆ. ಶಾಪಿಂಗ್ ಮಾಲ್ ಗಳು, ಅಂಗಡಿಗಳು, ಹೋಟೆಲ್ ಗಳು, ಬ್ಯಾಂಕ್ ಗಳು, ಬಸ್ ನಿಲ್ದಾಣಗಳು ಮುಂತಾದ ಸ್ಥಳಗಳಲ್ಲಿ ಕನ್ಮಡಿಗರೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಲ್ದಿ ಪ್ಯಾಕ್ ಮಾಡು: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಭಾರತದ ಪ್ರವಾಸದಲ್ಲಿದ್ದ ಜಾನ್ ನಿಂದ ಬಂದ ಸಂದೇಶ ವೆಂಕಟ್ ಗೆ ಗರಬಡಿಸಿತ್ತು. ಅಮೆರಿಕಾದ ಪ್ರವಾಸವನ್ನು ಮೊಟಕುಗೊಳಿಸಿ ಕೂಡಲೇ ವಾಪಸ್ಸು ಬರುವಂತೆ ಒಂದೇ ಸಾಲಿನ ಆದೇಶ ಹೊರಡಿಸಿದ್ದ ಅ ಪತ್ರ ಗತಕಾಲದಲ್ಲಿ ಚಾಲ್ತಿಯಿದ್ದ ಟೆಲಿಗ್ರಾಂ ನಂತೆ ಅವನಿಗೆ ಹೈ ವೋಲ್ಟೇಜ್ ಶಾಕ್ ಕೊಟ್ಟಿತ್ತು! ಅವನಿಗೆ ಆಶ್ಚರ್ಯವಾಗಿದ್ದೆಂದರೆ ಆ ಇಮೇಲ್ ಇವನ ಬಾಸ್ ಸುಧೀರ್ ನಿಂದ ಬರದೆ ಜಾನ್ ಕಡೆಯಿಂದ ಬಂದಿದ್ದು. ಸುಧೀರ್ ಗೆ ಕರೆ ಮಾಡಿ ಕೇಳಲು ಅವನು ತನ್ನ ಸ್ಥಾನಕ್ಕೆ ರಾಜಿನಾಮೆ ಕೊಟ್ಟ ವಿಷಯ ಗೊತ್ತಾಯಿತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇದು ಎಂತಾ ಲೋಕವಯ್ಯ: ಅನಿತಾ ನರೇಶ್ ಮಂಚಿ

ನಮ್ಮ ಮನೆಗೇ ಕಂಪ್ಯೂಟರ್ ಬರುವವರೆಗೆ ಕಂಪ್ಯೂಟರ್ ಎಂಬುದನ್ನು ಅತೀ ಸಮೀಪದಲ್ಲಿ ನೋಡಿಯೇ ಗೊತ್ತಿರಲಿಲ್ಲ.  ಮನೆಗೆ ಕಾಲಿಟ್ಟ ಹೊಸದರಲ್ಲಿ ಅದನ್ನು ಮುಟ್ಟಿದರೆ ಎಲ್ಲಿ ಹೊಗೆ ಏಳುವುದೋ, ಎಲ್ಲಿ ಬಾಂಬ್ ಬ್ಲಾಸ್ಟ್ ಆಗುವುದೋ ಎನ್ನುವಷ್ಟು ಭಯ. ಮಗ ಅದರ ಕೀ ಪ್ಯಾಡನ್ನು ಟಕ ಟಕನೆ ಒತ್ತಿದೊಡನೆ ‘ಕುಲ್ ಜಾ ಸಿಮ್ ಸಿಮ್’ ಎಂದು ಹೇಳಿದಂತಾಗಿ  ಹೊಸ ಲೋಕದ ಬಾಗಿಲು ತೆರೆದುಕೊಳ್ಳುವುದನ್ನು ಸುಮ್ಮನೆ ಕುಳಿತು ನೋಡುವುದೇ ಸಂಭ್ರಮ.  ಕೆಲವು ದಿನಗಳಲ್ಲಿ ಎದುರಿನ ಕುರ್ಚಿಯ ಮೇಲೆ ಕುಳಿತು ಮೆಲ್ಲನೆ ಅದರೊಂದಿಗೆ ಕುಶಲೋಪರಿ ನಡೆಸುವಷ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ನಿರುತ್ತರ ನನ್ನೊಳಗೆ ಕಾಡುವ ತುಮುಲಗಳಿಗೆ ಅಂಕುಶವಿಟ್ಟು, ಹೊರ ನಡೆಯುವ ವೇಳೆ, ಯಾರದೋ ನಿರ್ದಯೆಯಿಂದ ಮುಳ್ಳಿನ ಹಾಸಿಗೆಯ ಮೇಲೆ  ಪವಡಿಸಿದ ಅನುಭವ;  ನಡುಗುಡ್ಡೆಯಲ್ಲಿ ಜೀವ ಸೆರೆಯಿಟ್ಟು, ನನ್ನ ಹೊಸಕಿ, ಬಿಸುಡಿದ್ದಾರೆ. ಅಶೀಲ ಕಲ್ಮಶ ಒಳ ಹೊಕ್ಕಿದೆ. ರಸ್ತೆಯುದ್ದಕ್ಕೂ ಪ್ರತಿಭಟನಾಕಾರರು. ಗೂಟದ ಕಾರುಗಳು ನುಸುಳುತ್ತಿವೆ ನಾನಿರುವೆಡೆ. ಆರಕ್ಷಕರು, ಈರಕ್ಷಕರು ಒಂದಾಗಿದ್ದಾರೆ. ಪ್ರಭಾವಳಿಯಂತೆ ನಿಂತಂತಿದೆ ಬೆನ್ನ ಹಿಂದೆ. ನತದೃಷ್ಟೆಯೆಂದರೆ ನಾನೇ ಇರಬೇಕು. ಅನಾಮಧೇಯಳಾಗಿ ಜನರ ಬಾಯಲ್ಲಿ ಹರಿದಾಡುತ್ತಿದೆ ವಿಕೃತ ಕೃತ್ಯ. ಬದುಕುವಾಸೆಗೆ ಬೆಲೆಕೊಟ್ಟು, ಕಾಡುವ ಆ ರಾತ್ರಿಯ ಕರಿ ಛಾಯೆಯಿಂದ ಬೇರ್ಪಟ್ಟು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾ ಮಳೆಯೆ ಬಾ….: ಸಂಗಮೇಶ ಡಿಗ್ಗಿ ಸಂಗಾಮಿತ್ರ

ಮೂರುಸಂಜೆ ಸಮಯ. ಭೂಮಿಯನ್ನು ಅಪ್ಪಿ ತಬ್ಬಿಕೊಳ್ಳಲು ಮಳೆ ಹನಿಗಳು ಪೈಪೋಟಿಗೆ ಬಿದ್ದಂತೆ ತಾಮುಂದು ನಿ ಮುಂದು ಎಂದು ಧರಣಿಯ ಕೆನ್ನೆಗೆ ಮುತ್ತಿಕ್ಕುತ್ತವೆ. ಕಾದು ಸುಡುವ ಹಂಚಾಗಿದ್ದ ಭೂಮಿಗೆ ತಣ್ಣನೆಯ ಬಟ್ಟೆಯನ್ನು ಹೊದಿಸಿದ ಅನುಭವ. ಊರ ತುಂಬ ಪಸರಿಸಿದ ಮಣ್ಣ ಸುವಾಸನೆಗೆ ಪಾರಿಜಾತದ ಘಮವು ಸಪ್ಪೆಯಾಗಿದೆ. ಯಾವ ಸೀಮೆಯ, ಯಾವ ಊರಿನ, ಯಾವ ಕೇರಿಯ ನೀರು ಆವಿಯಾಗಿ, ಹೆಪ್ಪುಗಟ್ಟಿ, ಮೋಡವಾಗಿ ಕರಗಿ ನೀರಾಗಿ ಪರಿಚಯವಿಲ್ಲದ ಜಾಗದಲ್ಲಿ ನಾಚಿಕೆ ಪಟ್ಟುಕೊಳ್ಳದೆ ಜಂಬವಿಲ್ಲದೆ ಸುರಿಯುವ ಅಮೃತಘಳಿಗೆಗೆ ಮಣ್ಣಿನೊಳಗೆ ಅಡಗಿ ಕುಳಿತ ಬೀಜ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೇರಳೆ ಹಣ್ಣು: ಪ್ರಶಸ್ತಿ

ಸಣ್ಣವರಿದ್ದಾಗ ಜೂನ್ ಜುಲೈ ಅಂದ್ರೆ ನೆನ್ಪಾಗ್ತಿದ್ದಿದ್ದು ಹಸಿರೋ ಹಸಿರು. ಉಧೋ ಅಂತ ಸುರಿಯುತ್ತಿದ್ದ ಮಳೆಯಲ್ಲೊಂದು ಛತ್ರಿ ಹಿಡಿದು ಹಸಿರ ಹುಲ್ಲ ಮಧ್ಯದ ದಾರಿಯಲ್ಲಿ ಪಚಕ್ ಪಚಕ್ ಅಂತ ನೀರು ಹಾರಿಸ್ತಾ ನಡೀತಿದ್ರೆ ಗಮನವೆಲ್ಲಾ ದಾರಿ ಬದಿಯ ಕುನ್ನೇರಲೆ ಗಿಡಗಳ ಮೇಲೇ. ದೊಡ್ಡ ನೇರಳೇ ಮರದಿಂದ ಬಿದ್ದು ರಸ್ತೆಯಲ್ಲೆಲ್ಲಾ ಹಾಸಿ ಹೋದ ನೇರಲೇ ಹಣ್ಣುಗಳಲ್ಲಿ ಒಂದಿಷ್ಟು ಆರಿಸಿ ತಿಂದ, ಸಂಜೆ ಬಂದು ಇನ್ನೊಂದಿಷ್ಟು ಕೊಯ್ಯೋ ಪ್ಲಾನಿದ್ದರೂ ಕಣ್ಣಿಗೆ ಬಿದ್ದ ಕುನ್ನೇರಲೇ ಹಣ್ಣುಗಳು ಕರೆಯದೇ ಬಿಡುತ್ತಿರಲಿಲ್ಲ. ಮಳೆಗಾಲವೆಂದರೆ ತೋಟದಲ್ಲಿ ಕಾಣುತ್ತಿದ್ದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಳೆದಿದೆ ನೋಡಾ ಬೆಂಗಳೂರು ನಗರ!!!: ಅಖಿಲೇಶ್ ಚಿಪ್ಪಳಿ

ಹಿಂದಿನ ಭಾನುವಾರ ಸಾಗರದಲ್ಲಿನ ಸ್ವಸಹಾಯ ಗುಂಪಿನ ವಾರ್ಷಿಕ ಸಭೆ ಕರೆದಿದ್ದರು. ಪೇಟೆಯಲ್ಲಿ ತರಕಾರಿ ಬೆಳೆಯುವ ಬಗ್ಗೆ ಮಾಹಿತಿ ನೀಡಿ ಎಂಬುದು ಅವರ ಕೋರಿಕೆ. ವಾಯುಭಾರ ಕುಸಿತದಿಂದಾಗಿ ಅಂದು ಜೋರು ಮಳೆಯಿತ್ತು, ಕರೆಂಟು ಇರಲಿಲ್ಲ. ಅದೊಂದು ಸುಮಾರು 50-60 ಜನರಿರುವ ಚಿಕ್ಕ ಸಭೆ.  ಸಭೆಯ ವಿಧಿ-ವಿಧಾನಗಳು ಮುಗಿದ ಮೇಲೆ ಮಾತಿಗೆ ಶುರುವಿಟ್ಟುಕೊಂಡಿದ್ದಾಯಿತು. ಆ ಸಭೆಯಲ್ಲಿ ಭಾಗವಹಿಸಿದ ಎಲ್ಲರೂ ಮೂಲತ: ಕೃಷಿ-ಕುಟುಂಬದವರೇ ಆಗಿದ್ದರು. ನಿಮ್ಮ ವಂಶವಾಹಿನಿಯಲ್ಲೇ ಕೃಷಿ-ತೋಟಗಾರಿಕೆಗೆ ಬೇಕಾಗುವ ಅಂಶವಿದೆ ಆದ್ದರಿಂದ ತರಕಾರಿ ಬೆಳೆಯುವ ಬಗ್ಗೆ ಆಮೇಲೆ ಮಾತನಾಡೋಣ ಎಂದು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಾಸದ ಸೋಣೆ – ಶ್ರಾವಣದ ಸೋಣೆ ಆರತಿ: ಬೆಳ್ಳಾಲ ಗೋಪಿನಾಥ ರಾವ್

ಆಶಾಢ ಕಳೆದರೆ ಬರುವುದೇ ಶ್ರಾವಣ ಮಾಸ. ಆಗಾಗ್ಗೆ ಹನಿ ಹನಿದು ಒಮ್ಮೊಮ್ಮೆ ಬೀಡು ಭಿರುಸಾಗಿ ಬೀಳೋ ಮಳೆ ಕೂಡಾ ವಾತಾವರಣವನ್ನು ಆಮೋದ ಕಣವನ್ನಾಗಿ ಮಾಡಿ ಇಡೀ ಭೂರಮೆಯೇ ಹಸಿರುಟ್ಟು ಕಂಗೊಳಿಸೊ ಕಾಲವನ್ನಾಗಿ ಪರಿವರ್ತಿಸಿ ಬಿಡುತ್ತೆ, ಅದರ ಜತೆ ಸಂಘ ಜೀವಿ ಮಾನವನಿಗೂ ತನ್ನ ಸಹೃದಯತೆಯ ಸಂಚಲನೆಯ ಪಾಠ ಹೇಳೊಕೊಡೊದರಲ್ಲಿರುವ ವಸುಂಧರೆ…ಪ್ರಕೃತಿಯ ಮರ ಗಿಡ ಬಳ್ಳಿಗಳು ನಲಿ ನಲಿದು ಪ್ರತಿ ಕ್ಷಣವನ್ನು ಸವಿಯುತ್ತಾ ನಮ್ಮೆಲ್ಲರನ್ನೂ ಇವರೆಲ್ಲರ ಋಣಿಯನ್ನಾಗಿಸಿ ಬಿಡುತ್ತವೆ. ನೋಡಿದಷ್ಟೂ ಉದ್ದಕ್ಕೆ ಕಣ್ಮನ ತಣಿಸುವ ಹಸಿರು ಉಲ್ಲಾಸ ನೀಡುತ್ತದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಸತ್ತ ಹಿರಿಯರಿಗೆ ಗೌರವ ಸೂಚಿಸುವುದು ಚೀನೀ ಮಹಾಶಯನೊಬ್ಬ ತನ್ನ ಹಿರಿಯರ ಸಮಾಧಿಗಳ ಫಲಕಗಳ ಎದುರು ಹಣದ ನೋಟ್‌ಗಳನ್ನು ಸುಡುತ್ತಿರುವುದನ್ನು ಪಾಶ್ಚಾತ್ಯನೊಬ್ಬ ನೋಡಿ ಕೇಳಿದ, “ಕಾಗದದ ಹಣದ ಹೊಗೆಯಿಂದ ನಿಮ್ಮ ಹಿರಿಯರು ಹೇಗೆ ಲಾಭ ಪಡೆಯಲು ಸಾಧ್ಯ?” ಚೀನೀಯನು ಉತ್ತರಿಸಿದ, “ನೀವು ಸಮಾಧಿಯ ಮೇಲೆ ಹೂವುಗಳನ್ನು ಇಟ್ಟಾಗ ಮರಣಿಸಿದ ನಿಮ್ಮ ಹಿರಿಯರು ಹೇಗೆ ಮೆಚ್ಚುಗೆ ವ್ಯಕ್ತ ಪಡಿಸುತ್ತಾರೋ ಅದೇ ರೀತಿ.” ***** ೨. ದಾವಾ ಹಾಕು, ಹಸಿವಿನಿಂದ ಸಾಯಿಸಬೇಡ ರಾಜನೀತಿಜ್ಞ ಡೇನಿಯಲ್‌ ವೆಬ್‌ಸ್ಟರ್‌ ಕುರಿತಾದ ದಂತಕತೆ ಇದು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೆಲ್ಫಿ ಲೋಕದಲ್ಲಿ…: ರಾಘವೇಂದ್ರ ತೆಕ್ಕಾರ್

ಸ್ಮಾರ್ಟ್ ಪೋನ್ ಯುಗದ ಈ ದಿನಗಳಲ್ಲಿ ಬದುಕೆಂಬುದು ಸೆಲ್ಫಿ ಮಯವಾಗಿದೆ. ಇತ್ತೀಚಿನ ದಿನಗಳಲ್ಲಿ ಏನೇನೊ ಕಾರಣಗಳಿಂದ ಈ ಸೆಲ್ಫಿ ಅನ್ನೊದು ಪ್ರಚಲಿತದಲ್ಲಿರೊ ಸುದ್ದಿ. ಆದೇನೆ ಇರಲಿ ಹೊರ ಚಿತ್ರ ಚೆನ್ನಾಗಿರಬೇಕು ಎಂಬ ತುಡಿತದಲ್ಲಿ ಮನಸ್ಸಿಗೆ ಸೆಲ್ಫಿ ಹಿಡಿಯುವ ದಿನಗಳು ಕಳೆದೆ ಹೋಗಿವೆಯೇನು? ಎಂಬ ಆತಂಕ ಇಂದಿನ ಯುವ ಸಮೂಹವನ್ನು ನೋಡಿದಾಗ ಅನಿಸುತ್ತಿದೆ. ಒಬ್ಬ ಗೆಳೆಯ, ಅಕ್ಕ, ತಮ್ಮ, ಸಂಬಂಧಿಕ, ಗುರು ಹೀಗೆ ಎಲ್ಲಾ ಸಂಬಂಧಗಳ ರುಜುವಾತು ಸೆಲ್ಫಿ ಮೂಲಕನೆ ಧೃಢಿಕರಣಗೊಳ್ಳಬೇಕೆನಿಸುವ ಈ ಯುಗದಲ್ಲಿ ಮೇಲಿನ ಆತಂಕವು ಸಹಜ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

‘ಸೋಲು ಗೆದ್ದವನದ್ದು!’ ಕಾದಂಬರಿಯ ಒಂದು ಅಧ್ಯಾಯ: ಮಂಜು ಬನವಾಸೆ

ಅಮ್ಮ-ಅಪ್ಪ ಅದ್ಯಾರ ಕೈಕಾಲು ಹಿಡಿದು ದುಡ್ಡು ತಂದರೋ ಗೊತ್ತಿಲ್ಲ. ಫೀಸು ಎಷ್ಟೋ ಗೊತ್ತಿಲ್ಲ. ನನ್ನನ್ನು ಸಕಲೇಶಪುರದ ಗೌರ್ಮೆಂಟ್ ಪಿಯು ಕಾಲೇಜಿಗೆ ಅಡ್ಮಿಷನ್ ಮಾಡಿಸಲಾಗಿದೆ ಮತ್ತು ಮಡಿಕೆಯೊಂದಿಗೆ ನಾನೂ ಆಟ್ರ್ಸ್ ಫಸ್ಟ್ ಇಯರ್ ಪಿಯುಸಿಗೆ ಹೋಗುತ್ತಿದ್ದೇನೆ ಎಂದು ತಿಳಿದಾಗ ಆದ ಸಂತೋಷ ಅಷ್ಟಿಷ್ಟಲ್ಲ. ಕಾಲೇಜಿನ ಮೊದಲ ದಿನ ಬಹುಶಃ ಅದು ಜುಲೈ 7ನೇ ತಾರೀಖಿರಬಹುದು ಎನ್ನಿಸುತ್ತದೆ. ಆಷಾಢದ ಗಾಳಿ ಜೋರಾಗಿ ಬೀಸುತ್ತಿತ್ತು. ನಮ್ಮ ಮನೆಗಳಂತೂ ಅಕ್ಷರಶಃ ಮಂಜಿನಲ್ಲಿ ಮುಳುಗಿ ಹೋಗಿದ್ದವು. ಮಳೆ ಸ್ವಲ್ಪ ಬಿಡುವು ನೀಡಿದಾಗ ಇದ್ದ ಒಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದಪ್ಪ, ಸಪೂರದ ನಡುವೆ: ಅಕ್ಷಯ ಕಾಂತಬೈಲು

ಮುಂಚೆ ದಪ್ಪ ಇದ್ದಿಯಲ್ಲಾ. ಈಗ ಎಂತ ಸಡನ್ ಆಗಿ ಸಪೂರ ಆದದ್ದು ಹೀಗೆ ಕೇಳಿದರು, ಸಂಬಂಧಿಕರೊಬ್ಬರು. ನನಗೆ ಏನು ಹೇಳಬೇಕೆಂದು ತಿಳಿಯಲಿಲ್ಲ, ಸ್ವಲ್ಪ ತಡವರಿಸುತ್ತಾ ಅವರಿಗೆ ಹೇಳಿದೆ -ನಾನು ಅಷ್ಟೊಂದು ಸಪೂರ ಆಗಿದ್ದೀನಾ…? ಎಂದು. ಆ ಸಂಬಂಧಿಕರು ನನ್ನ ಮೈಕಟ್ಟಿನ ಬಗ್ಗೆ ಹೇಳಿದ್ದು ನಿಜ ಅನ್ನಿಸಿತು. ಏಕೆಂದರೆ ಈ ಮೊದಲು ಹಲವು ಗೆಳೆಯರು ನನಗೆ ಅದೇ ರೀತಿಯಾಗಿ ಹೇಳಿದ್ದರು. ಆದರೆ ಹೇಳಿದ ಕ್ರಮ ಮಾತ್ರ ಬೇರೆ ಇತ್ತು. ಏನೋ ಲವ್ ಫೆಲ್ಯೂರಾ, ಸಿಕ್ಕಾಪಟ್ಟೆ ಓದಿದರೆ ಹೀಗೇ ಆಗೋದು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಾಂತಿ ಮಂತ್ರವೇ?: ಅಖಿಲೇಶ್ ಚಿಪ್ಪಳಿ

ಬಾಹ್ಯಾಕಾಶ ವಿಜ್ಞಾನದಲ್ಲಿ ಎಲ್ಲಾ ದೇಶಗಳೂ ಪ್ರಗತಿ ಸಾಧಿಸಿವೆ. ಹವಾಮಾನ ಮನ್ಸೂಚನೆಗಾಗಿಯೇ ಭಾರತವೂ ಅಂತರಿಕ್ಷದಲ್ಲಿ ಬಾಹ್ಯಾಕಾಶ ನೌಕೆಗಳನ್ನು ಏರಿಸಿಟ್ಟಿದೆ. ಅಲ್ಲಿಂದಲೇ ಹದ್ದುಗಣ್ಣಿನಿಂದ ಭುವಿಯ ಸಕಲ ಆಗು-ಹೋಗುಗಳನ್ನು ಈ ನೌಕೆಗಳು ಹದ್ದುಗಣ್ಣಿನಿಂದ ವೀಕ್ಷಿಸಿ ನಮಗೆ ಕರಾರುವಕ್ಕು ವರದಿ ನೀಡುತ್ತವೆ. ಲಾಗಾಯ್ತಿನಿಂದ ನಮ್ಮ ಹವಾಮಾನ ಇಲಾಖೆ ಸಾಲು-ಸಾಲು ವೈಪಲ್ಯಗಳನ್ನು ಕಾಣುತ್ತಿದೆ. ಜೂನ್ ಹತ್ತಕ್ಕೆ ಬರುವ ಮಳೆಗಾಲ ಈ ಬಾರಿ ಜೂನ್ 1ಕ್ಕೆ ಬರುತ್ತದೆ ಎಂದು ವರದಿ ಮಾಡಿತು. ಅಂತೆಯೇ ಮಳೆಯೂ ಗುಡುಗು-ಸಿಡಿಲಬ್ಬರದ ನಡುವೆ ಧೋ ಎಂದು ಸುರಿಯಿತು. ಹವಾಮಾನ ವರದಿಯನ್ನು ಅಣಕಿಸುವಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಬಿದಲೋಟಿ ರಂಗನಾಥ್, ರಶ್ಮಿ ಹೆಜ್ಜಾಜಿ, ಅಕ್ಷತಾ ಕೃಷ್ಣಮೂರ್ತಿ ಬೇಲೇಕೇರಿ.

ವಿಳಾಸವಿಲ್ಲದ ಮನುಷ್ಯ ದಿಕ್ಕಿಲ್ಲದ ಬದುಕ ಸವೆಸಲು ಎಣಗಾಡುತ ದೇಕಾಡಿ ಹರಕು ಬಟ್ಟೆ ಮುರಕು ಜೀವ ಹೊತ್ತು ನೀರು ನೆರಳಿಲ್ಲದ ಜಾಗದಲಿ ಚಳಿಯಲ್ಲಿ ಗೂಡರಿಸಿ ನ್ಯೂವ್ಸ್ ಪೇಪರ ಹೊದ್ದು  ಮಲಗಿ, ಜೋಕರಿಸುವ ನೊಂದ ಬೇಸತ್ತ ಜೀವಕು ತನ್ನ ಜೀವದ ಮೇಲೆ ಎಲ್ಲಿಲ್ಲದ ಆಸೆ ಅನ್ನ ಹಾಕುವ ಸಿಲವಾರ ತಟ್ಟೆಯಲಿ ನೊಣ ಮುಕರಿ ಗುಂಯ್ ಗುಟ್ಟುತ್ತಿವೆ ಅಳಸಲು ಅನ್ನಕೆ ಆ ದೇಕುವ ಜೀವ ಮನೆ ಮನೆಯ ಗೇಟ ಅಳ್ಳಾಡಿಸುವ ಪರಿ ನೋಡಿ ಜೀವ ಹಿಂಡುತಿದೆ ಯಾರೆತ್ತ ಮಗನೋ ಪಾಪ ಸೊರಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮತ್ತೊಂದು ಹೊಟ್ಟೆ: ಪ್ರಶಸ್ತಿ

ಎಲ್ರಿಗೂ ಒಂದು ಹೊಟ್ಟೆ ಇರೋದು ಗೊತ್ತು. ಈ ಮತ್ತೊಂದು ಹೊಟ್ಟೆ ಯಾವುದು ಅಂದ್ರಾ ? ಒಂದು ಹೊಟ್ಟೆ ತುಂಬಿಸೋದೇ ಕಷ್ಟ, ಇನ್ನು ಈ ತರ ಮತ್ತೊಂದು ಹೊಟ್ಟೆ ಏನಾದ್ರೂ ಇದ್ರೆ ಅದನ್ನು ಹೇಗಪ್ಪಾ ತುಂಬಿಸೋದು ಅಂದ್ರಾ ? ತಾಯಿಯ ಹೊಟ್ಟೆಯೊಳಗಿರುವ ಮಗುವಿನ ಹೊಟ್ಟೆಯನ್ನು ಮತ್ತೊಂದು ಹೊಟ್ಟೆ ಅಂತೇನಾದ್ರೂ ಕರೆಯೋಕೆ ಹೊರಟಿದ್ದೀನಿ ಅಂತೇನಾದ್ರೂ ವಿಚಿತ್ರ ಆಲೋಚನೆ ಬಂತಾ ? ಊಟ ಹೆಚ್ಚಾಗಿ ಹೊಟ್ಟೆ ಕೆಳಗಾಗಿ ಮಲಗೋಕಾಗದೇ ಇದ್ದಾಗೆಲ್ಲಾ ಹೆತ್ತವ್ವ ನನ್ನ ಹೊತ್ತಾಗ ಹೇಗೆ ಹೊಟ್ಟೆ ಕೆಳಗೆ ಮಲಗಲಾಗದೇ ಬೋರಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾವ ಅರಸುತ್ತಾ……..: ರೋಷನ್ ಪೂಜಾರಿ

ಮರಳನ್ನ ಅಗೆದು ಅಗೆದು ರಾಶಿ ಮಾಡಿದ ಕಡೆಯಲ್ಲಿ  ನಿಧಾನವಾಗಿ ಹತ್ತುತ್ತಿರುವ, ಇರುವೆಗಳ ಸಾಲನ್ನ ತುಂಡರಿಸಿ ಹೋಗಿದ್ದು ಸಮುದ್ರದ ನೀರು …. ಅದೆಷ್ಟೋ ಬಾರಿ ಸಾರಿಕಾಳ ಕಾಲುಗಳನ್ನ ಮುಟ್ಟಿ ಹಿಂತಿರುಗಿ ಹೋದರು ಸಹ, ಸಮುದ್ರವನ್ನ ಕ್ಷಮಿಸುವ ಮನಸ್ಸು ಅವಳಿಗಿಲ್ಲವಾಗಿತ್ತು…..ಮದುವೆಯ ನಂತರದ ದಿನಗಳು , ಅವಳು ತನ್ನ ಜೀವನದಲ್ಲಿ ಕಳೆದ ಅತ್ಯಮೂಲ್ಯ ಕ್ಷಣ. ಹನಿಮೂನಿಗೆ ಒಂದು ವಾರ ಮುಂಚೆಯೇ ಇದ್ದ ಖುಷಿ, ಹನಿಮೂನು ಮುಗಿಸಿದ ಒಂದು ವಾರದ ನಂತರ ಇರಲಿಲ್ಲ. ವಿಧಿವಶರಾಗಿದ್ದ ತನ್ನ ಗಂಡನ ನೆನಪನ್ನ ಮರೆಯಲು, ಸಮುದ್ರದ ತಟಕ್ಕಿಂತ ಬೇರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿಯಿ೦ದ “ಜಕ್ಕಣ್ಣ” ಎ೦ದು ಕರೆಸಿಕೊಳ್ಳುವ ಟಾಲಿವುಡ್ ಚಿತ್ರ ನಿರ್ದೇಶಕ: ಸುನಿಲ್ ಕುಮಾರ್

ಇವರ ಹೆಸರು ಎಸ್. ಎಸ್ .ರಾಜಮೌಳಿ ( ಕೊಡುರೂ ಶ್ರೀಶೈಲ ಶ್ರೀ ರಾಜಮೌಳಿ). ಜಕ್ಕಣಾಚಾರ್ಯರು ಅದ್ಬುತವಾಗಿ ಶಿಲ್ಪಗಳನ್ನು ಕೆತ್ತಿದರೆ. ಈ ಅಧುನಿಕ ಜಕ್ಕಣಾಚಾರ್ಯರು ಅದ್ಬುತವಾಗಿ ಚಿತ್ರಗಳನ್ನು ನಿರ್ಮಿಸುತ್ತಾರೆ. ಟಾಲಿವುಡ್ ನಲ್ಲಿ ಇವರನ್ನು ಪ್ರೀತಿಯಿ೦ದ " ಜಕ್ಕಣ್ಣ" ಎ೦ದು ಕರೆಯುತ್ತಾರೆ. ಭಾರತ ಚಿತ್ರರ೦ಗವನ್ನು ವಿಶ್ವಮಟ್ಟಕ್ಕೆ ಎತ್ತರಿಸಿದ ನಿರ್ದೇಶಕರು. ಇವರ ಎಲ್ಲ ಚಿತ್ರಗಳು ಸೂಪರ್ ಹಿಟ್ಟುಗಳೆ. ಇವರು ಟಾಲಿವುಡ್ ನಲ್ಲೆ ಅತಿ ಹೆಚ್ಚು ಬೇಡಿಕೆಯ ಹಾಗೂ ಜನಪ್ರಿಯ ನಿರ್ದೇಶಕರು. ಇವರ ಎಲ್ಲ ಚಿತ್ರಗಳು ಭಾರತೀಯ ಭಾಷೆಗಳಾದ ತಮಿಳು, ಬೋಜ್ ಪುರಿ, ಕನ್ನಡ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಜಿಪುಣಾಗ್ರೇಸರ ಅಬರ್‌ಡೀನ್‌ವಾಸೀ ಜಿಪುಣನೊಬ್ಬ ಗಾಲ್ಫ್‌ ಕಲಿಯಲೋಸುಗ ಗಾಲ್ಫ್‌ಕ್ಲಬ್‌ನ ಸದಸ್ಯನಾದ. ಅವನು ಆಟವಾಡಲು ಉಪಯೋಗಿಸುವ ಚೆಂಡು ಬೇರೆ ಯಾರಿಗಾದರೂ ಸಿಕ್ಕಿದರೆ ಅವರು ಅದನ್ನು ಕ್ಲಬ್‌ನ ಕಛೇರಿಗೆ ತಲುಪಿಸಲು ಅನುಕೂಲವಾಗಲಿ ಎಂಬ ಕಾರಣಕ್ಕಾಗಿ ಅದರ ಮೇಲೆ ಅವನ ಹೆಸರಿನ ಆದ್ಯಕ್ಷರಗಳನ್ನು.ಬರೆಯುವಂತೆ ತರಬೇತುದಾರ ಸೂಚಿಸಿದ. ಚೆಂಡು ಕಛೇರಿಗೆ ತಲುಪಿದರೆ ಅದನ್ನು ಕಛೇರಿಯ ಸಿಬ್ಬಂದಿಯಿಂದ ಆತ ಮರಳಿ ಪಡೆಯಬಹುದಾಗಿತ್ತು. ಈ ಸಲಹೆಯಲ್ಲಿ ಆಟ ಕಲಿಯಬಂದವನಿಗೆ ವಿಶೇಷ ಆಸಕ್ತಿ ಮೂಡಿತು. ಅವನು ತರಬೇತುದಾರನಿಗೆ ಹೇಳಿದ, “ಒಳ್ಳೆಯ ಸಲಹೆ. ನೀವೇ ಅದರ ಮೇಲೆ ನನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಿನ್ನುವ ಅನ್ನಕ್ಕೆ ಕಲ್ಲು ಹಾಕುವ ಮಂದಿ ಮತ್ತು ಇಂಗದ ಹಸಿವು: ಜೈಕುಮಾರ್ ಹೆಚ್.ಎಸ್.

ದೇಶದಲ್ಲಿ ಯಾರ ಹಸಿವು ಇಂಗುತ್ತಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸುವ ಮುನ್ನ ನಮ್ಮ ರಾಜ್ಯದ ಬಹುಸಂಖ್ಯಾತ ಜನತೆಯ ಪರಿಸ್ಥಿತಿಯತ್ತ ಕಣ್ಣು ಹಾಯಿಸೋಣ. 18 ವರ್ಷದೊಳಗಿನ ಲಕ್ಷಾಂತರ ಮಕ್ಕಳು ಇಂದಿಗೂ ಶಾಲೆಯಿಂದ ಹೊರಗುಳಿದಿವೆ. ಯೂನಿಸೆಫ್ ಸಂಸ್ಥೆಯ ಪ್ರಕಾರ ಶೇ. 50 ರಷ್ಟು ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಅಲ್ಲದೆ 3 ವರ್ಷದೊಳಗಿನ ಮಕ್ಕಳ ಪೈಕಿ 10ರಲ್ಲಿ 8 ಮಕ್ಕಳು ರಕ್ತಹೀನತೆ ಹೊಂದಿದ್ದರೆ, 5 ವರ್ಷದೊಳಗಿನ ಮಕ್ಕಳ ಪೈಕಿ 10ರಲ್ಲಿ 4 ಮಕ್ಕಳ ಬೆಳವಣಿಗೆ ಸರಿಯಾದ ಆಹಾರ ಪೋಷಣೆಯಿಲ್ಲದೆ ಕುಂಠಿತಗೊಂಡಿದೆ.  ನಮ್ಮ ರಾಜ್ಯವೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೋನಿಯ ತಪ್ಪು ಯಾವುದು ?: ರಘು ಕೆ.ಟಿ.

ಭಾರತ ತಂಡಕ್ಕೆ 2011 ರಿಂದ ದೋನಿ ನಾಯಕತ್ವ ವಹಿಸಿಕೊಂಡಾಗಿನಿಂದ ಎಲ್ಲ ಮಾದರಿ ಕ್ರಿಕೆಟ್ನಲ್ಲಿ ಭಾರತವು ಅನೇಕ ಯಶಸ್ವಿಗಳನ್ನು ಗಳಿಸಿ, ವಿಶ್ವ ದರ್ಜೆಯ ತಂಡವಾಗಿ ಹೊರಹೊಮ್ಮಿತು. ದೋನಿ ಮಾಡಿದ ಹಲವಾರು ತಂತ್ರಗಾರಿಕೆ, ಬದಲಾವಣೆಗಳು, ಕೈಗೊಂಡ ನಿರ್ಧಾರಗಳಿಂದ ಭಾರತವು 20-20 ವಿಶ್ವಕಪ್, ವಿಶ್ವಕಪ್-2011 ಸೇರಿದಂತೆ ಎಲ್ಲ ಪ್ರಮುಖ ಪಂದ್ಯಾವಳಿಗಳನ್ನು ಜಯಿಸಿ ವಿಶ್ವ ಖ್ಯಾತಿಯನ್ನು ಗಳಿಸಿತ್ತು. ಆಗ ಎಲ್ಲ ಪತ್ರಿಕಾ ಮಾಧ್ಯಮದವರು, ಹಿರಿಯ ಆಟಗಾರರು ದೋನಿಯ ನಿರ್ಧಾರಗಳಿಗೆ ಬೆಂಬಲ ಮತ್ತು ಶ್ರೇಷ್ಠ ನಾಯಕರೆಂದು ಹಾಡಿ ಹೊಗಳಿದರು. ಆದರೆ ಬಾಂಗ್ಲಾ ದೇಶದ ವಿರುದ್ಧ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾನೂ ನಾಚಿದೆ, ನಾಚಿಕೆಯೆಂದು ತಿಳಿಯದೆ: ಚೈತ್ರಾ ಎಸ್.ಪಿ.

ಗೆಳೆಯನೊಬ್ಬ ಮೆಸ್ಸೇಜ್ ಮಾಡಿದ್ದ, "ಮದ್ವೆಗೆ ಹುಡುಗನ್ನೇನಾದ್ರು ನೋಡ್ತಾ ಇದಾರೇನೆ ??", "ಇಲ್ಲಪ್ಪಾ", "ಯಾಕೋ??!!"ಎಂದು ಮರು ಪ್ರಶ್ನೆ ಹಾಕಿದ್ದೆ. "ಸುಮ್ನೆ ಕೇಳ್ದೆ, ನಾಚ್ಕೊಂಡ್ಯೇನೇ ??"ಎಂದಿದ್ದ ಆತ. ನನಗೆ ಸಿಕ್ಕಿದ್ದ ಹೊಸ ಗೆಳೆಯ. ನನ್ನ ಬಗ್ಗೆ ಅಷ್ಟು ತಿಳಿದಿರಲಿಲ್ಲ. ನನ್ನ ಹಳೆಯ ಫ್ರಿಂ ಡ್ಸ್ ಅಂತ ಕರೆಸಿಕೊಂಡವರೆಲ್ಲರೂ, " ನೀನೂ ನಾಚ್ಕೊತೀಯೇನೇ ??!! ಹುಡ್ಗೀರ್ ಮಾತ್ರ ಕಣೇ ನಾಚ್ಕೊಳೋದು ", ಅಂತ ಹೇಳ್ತ ಇದ್ರೇ ವಿನಃ ಯಾರೂ ಈ ಥರ ಕೇಳಿರ್ಲಿಲ್ಲ. ಉತ್ತರಿಸುವ ಗೊಂದಲದಲ್ಲಿದ್ದ ನನ್ನ ಭಾವ ಸರಪಳಿ ಇನ್ನೆಲ್ಲೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಳಗೊಂದು ಆರದ ಹಣತೆ ಹಚ್ಚಿಡುವವಳು: ಅನುರಾಧ ಪಿ. ಸಾಮಗ

ಮೊನ್ನೆ ಅಮ್ಮಂದಿರ ದಿನದಂದು ನನ್ನ ಕಂದಮ್ಮ ನನಗೊಂದು ಕಾರ್ಡ್ ಮಾಡಿ ತಂದುಕೊಟ್ಟಾಗ ಕಣ್ಣಲ್ಲಿ ನೀರಾಡಿತ್ತು. ಅವಳಿಗೆ ತೋರಿಸಬಾರದೆಂದು ಕಣ್ತಪ್ಪಿಸಿದರೂ ಬಾಗಿ ಕಣ್ಣೊಳಗಿಣುಕಿ ಖಾತ್ರಿ ಪಡಿಸಿಕೊಂಡವಳೇ, ಇನ್ನೊಂದು ಮುತ್ತಿಕ್ಕಿ "ಐ ಮೀನ್ ಇಟ್ ಅಮ್ಮಾ.." ಅಂದಳು. "ಅಮ್ಮಾ, ನೀನು ಜಗತ್ತಿನ ಎಲ್ಲ ಅಮ್ಮಂದಿರಿಗಿಂತ ಶ್ರೇಷ್ಠ, ನಾನು ನಿನ್ನನ್ನು ತುಂಬಾ ಅಂದರೆ ತುಂಬಾ, ಜಗತ್ತಿನ ಎಲ್ಲದಕ್ಕಿಂತ ಹೆಚ್ಚು ಪ್ರೀತಿಸುತ್ತೇನೆ.. " ಇದೇ ಆ ಹಾಳೆಯ ಮೇಲಿದ್ದುದರ ಸಾರಾಂಶ. ಎಲ್ಲ ಮಕ್ಕಳೂ ಬರೆಯುವಂಥದ್ದೇ. ಆದರೆ ಆ ಇನ್ನೊಂದು ಸಾಲು ಓದಿ, ಒಮ್ಮೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಶ್ವ ಯೋಗ ದಿನ: ಅನಿತಾ ನರೇಶ್ ಮಂಚಿ.

ಅವರ ಹೆಸರು ಪಾರ್ವತೀಪತಿಯೆಂದು ಗೊತ್ತಿದ್ದದ್ದು ಪೋಸ್ಟ್ ಮ್ಯಾನ್ ಮತ್ತು ಅವರು ಕೆಲಸ ಮಾಡುತ್ತಿದ್ದ ಆಫೀಸಿನ ಬಾಸ್ ಇಬ್ಬರಿಗೇ..  ಇವರೂ ಕೂಡಾ ಆ ಹೆಸರನ್ನು ಕೊಂಚ ತಿರುಚಿ ಪರ್ವತ ಪತಿ ಎಂದು ನಗೆಯಾಡುತ್ತಿದ್ದುದು ಪಾರ್ವತೀಪತಿಯವರಿಗೆ ತಿಳಿಯದ ವಿಷಯವೇನೂ ಆಗಿರಲಿಲ್ಲ. ನಮಗಂತೂ ಅವರ ಹೆಸರು ನಾಮ್ ಕೇ ವಾಸ್ತೆ ಮಾತ್ರ ಬೇಕಾಗುವುದರಿಂದ  ನಾವು  ಆ ಹೆಸರನ್ನು ಬಬ್ಬಲ್ ಗಮ್ಮಿನಂತೆ ಅಷ್ಟುದ್ದ ಎಳೆಯದೇ ಪಿ ಪಿ ಎಂದು ಶಾರ್ಟ್ ಆಗಿ ಕರೆಯೋಣ.   ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಈಗ ಹಲವು ವಿಷಯಗಳಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಿಮಪಾತ: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಇವತ್ಯಾಕೆ ಇಷ್ಟೊಂದು ಬೇಗ ಎಚ್ಚರ ಆಯ್ತು ಅಂತ ಗೊತ್ತಾಗಲಿಲ್ಲ ವೆಂಕಟ್ ಗೆ. ಬೇಗ ಎದ್ದು ಏನು ಮಾಡುವುದೆಂದು ಒಂದು ಕ್ಷಣ ಅವನಿಗೆ ಹೊಳೆಯಲಿಲ್ಲ. ಬೆಂಗಳೂರಿನಲ್ಲಾಗಿದ್ದರೆ ಎದ್ದ ಕೂಡಲೇ ಬಾಗಿಲಿಗೆ ಸಿಗಿಸಿರುತ್ತಿದ್ದ ಪೇಪರ್ ಎತ್ತಿಕೊಂಡು ಓದಬಹುದಿತ್ತು.  ಈ ಪರದೇಶದಲ್ಲಿ ಹಾಗಿಲ್ಲವಲ್ಲ. ಸುದ್ದಿ ತಿಳಿಯಬೇಕೆಂದರೆ  ಒಂದೋ ಟೀವಿ, ಸ್ಮಾರ್ಟ್ ಫೋನ್, ಇಲ್ಲವೇ ಟಚಿಠಿಣoಠಿ ನಲ್ಲೆ ನೋಡಿ ತಿಳಿಯಬೇಕು. ಅವನಿಗೆ ಅಲ್ಲಿಯ ಸ್ಥಳೀಯ ಸುದ್ದಿಯ ತಿಳಿದುಕೊಳ್ಳುವ ಬಗ್ಗೆ ಉತ್ಸಾಹವೇನಿರಲಿಲ್ಲ. ಇಲ್ಲಿನ ಸುದ್ದಿಗಳೂ ಸುದ್ದಿಗಳೇ? ಒಂದು ಸಣ್ಣ ಬಿರುಗಾಳಿ ಬಂದರೇನೇ ಇಡೀ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಲ್ವರ ಕವನಗಳು: ವಿನಾಯಕ ಭಟ್, ಇಂದುತನಯ, ಯದುನಂದನ್ ಗೌಡ ಎ.ಟಿ., ಶ್ರೀದೇವಿ ಕೆರೆಮನೆ

ಅದೇ ರಾಗ, ಬೇರೆ ಹಾಡು.. (ಧಾಟಿ: ಚೆಂದುಟಿಯ ಪಕ್ಕದಲಿ; ಚಿತ್ರ: ಡ್ರಾಮ) ಕಂಗಳಲಿ ಕೋರೈಸೊ ಬೆಳದಿಂಗಳಾ ಹೊಳಪ ಚಂದಿರನ ಮೊಗದಲ್ಲೂ ನಾ ಕಾಣೆ; ಅಂಗಳದಿ ನೀ ಬರೆದ ರಂಗೋಲಿಯ ಹಾಗೇ ಬಾಳನ್ನು ಸಿಂಗರಿಸು ಓ ಜಾಣೆ; ಬರೆದಿರುವೆ ಈ ಗೀತೆ ನಿನಗಾಗಿ.. ಮೂಡಿರುವೆ ನೀ ಇದರ ಶೃತಿಯಾಗಿ.. ಹಾಡೋಣವೇ ಒಮ್ಮೆ ಜೊತೆಯಾಗಿ? ಎತ್ತರದಿ ಅರಳಿರುವ ಚಾಚೊ ಕೈಯ್ಯಿಗೆ ಸಿಗದ ಪಾರಿಜಾತದ ಹೂವು ಬಲು ಚಂದವಂತೆ; ನೀ ದೂರ ಸರಿದಂತೆ ನೆನಪುಗಳು ಸನಿಹಾಗಿ ಗಾಢವಾಗುವ ಮೋಹಕೆ ಕೊನೆಯೆಂಬುದುಂಟೆ? ಎಡರುಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಾಜ್ ಕಥೆ-ಆಗ್ರಾದ ವ್ಯಥೆ: ಅಖಿಲೇಶ್ ಚಿಪ್ಪಳಿ

1990ರ ಜೂನ್ ತಿಂಗಳ ಒಂದು ದಿನ ಮುಂಜಾವು. ಏರ್‍ಪೋರ್ಸ್‍ನಲ್ಲಿ ಸೇವೆ ಸಲ್ಲಿಸುತ್ತಿರುವ ಸ್ನೇಹಿತನ ಹೀರೋಹೊಂಡ ಹತ್ತಿ ದೆಹಲಿಯಿಂದ ಆಗ್ರಾ ಹೊರೆಟೆವು. ಈಗ ನೋಡಿದರೆ ಅದೊಂದು ಹುಚ್ಚು ಸಾಹಸವಾಗಿತ್ತು. ಆಗ್ರಾಕ್ಕೆ ಹೋಗುತ್ತಿರುವ ಉದ್ಧೇಶ ಜಗತ್ಪಸಿದ್ಧ ತಾಜ್ ಮಹಲ್ ನೋಡುವುದಾಗಿತ್ತು. ಸುಮಾರು 400 ಕಿ.ಮಿ. ದೂರ ಪಯಣ. ಕೆಳಗಿನ ಕಪ್ಪು ಟಾರೋಡು ಸೂರ್ಯನ ಎಲ್ಲಾ ಶಾಖ ಹೀರಿಕೊಂಡು ನಿಗಿ ನಿಗಿ ಸುಡುತ್ತಿತ್ತು. ಜೊತೆಗೆ ಬಿಸಿಗಾಳಿ. ಬಹುಷ: ಆಗಿನ ವಯಸ್ಸು ಇಂತದೊಂದು ವಿಲಕ್ಷಣ ಸಾಹಸಕ್ಕೆ ಪ್ರೇರಪಿಸಿತೋ ಏನೋ?. ಆಗ್ರಾ ಎಷ್ಟೊತ್ತಿಗೆ ತಲುಪಿಯೇವು? … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಲೆ: ಗುಂಡುರಾವ್ ದೇಸಾಯಿ

ಇತ್ತೀಚಿಗೆ ನಮ್ಮ ದೇವಸ್ಥಾನಕ್ಕೆ ದರ್ಶನಾರ್ಥವಾಗಿ ಬೆಂಗಳೂರಿನಿಂದ ಬಂದಿದ್ದ ದಂಪತಿಗಳಿಗಾಗಿ ನಮ್ಮ ಸಮಿತಿಯ ಹಿರಿಯರೊಬ್ಬರು ರಾತ್ರಿ ಅಡುಗೆ ಸಿದ್ಧ ಮಾಡುತ್ತಿದ್ದರು. ಆ ದಂಪತಿಗಳ ಪುತ್ರಿ ಅನ್ನ ಮಾಡುವುದನ್ನು ಗಾಬರಿಯಿಂದ ಬಿಟ್ಟ ಕಣ್ಣಿನಿಂದ ನೋಡುತ್ತಿದ್ದಳು. ಅದನ್ನು ಗಮನಿಸಿದ ಹಿರಿಯರು ‘ಯಾಕಮ್ಮ ಹಾಗೆ ನೋಡ್ತಾ ಇದ್ದಿಯಾ ಅಡುಗೆ ಮಾಡೋದು ನೋಡಿಲ್ವೆ? ಅಥವಾ ಹಸಿವೆಯಾಗಿದೆಯಾ?’ ಎಂದು ಕೇಳಿದರು. ‘ಅಂಕಲ್ ಅಡಿಗೆ ಈ ರೀತಿ ಮಾಡ್ತಿರಾ? ಅನ್ನ ಅದ್ಹೇಗೆ ಮಾಡ್ತೀರಿ? ವಿಜಲ್ ಕೇಳ್ತಾ ಇಲ್ಲ ಹಿಂಗೂ ಮಾಡಬಹುದಾ?’ ಎಂದು ಪ್ರಶ್ನೆ ಹಾಕಿದಳು ಹೀಗೂ ಉಂಟೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ