ಪ್ರೌಢಶಾಲಾ ಶಿಕ್ಷಕರಿಗಾಗಿ ಶಿಕ್ಷಣದಲ್ಲಿ ರಂಗಕಲೆ ಕಾರ್ಯಾಗಾರ: ಶ್ರೀಮತಿ. ಶಾರದ. ಎಚ್.ಎಸ್

ದಿನಾಂಕ 13.06.2015ರಂದು ಸರ್ಕಾರಿ ಪ್ರೌಢಶಾಲೆ, ಕುಕ್ಕರಹಳ್ಳಿಯಲ್ಲಿ ಮೈಸೂರು ದಕ್ಷಿಣ ವಲಯ ಮತ್ತು ಮೈಸೂರು ತಾಲ್ಲೂಕಿನ ಆಯ್ದ ಸರ್ಕಾರಿ ಪ್ರೌಢಶಾಲೆಗಳ ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಬೋಧಿಸುವ ಶಿಕ್ಷಕರಿಗಾಗಿ ಶಿಕ್ಷಣದಲ್ಲಿ ರಂಗಕಲೆ ಕುರಿತಂತೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ, ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಆರ್.ಪೂರ್ಣಿಮ ಅವರು ಇಡೀ ಕಾರ್ಯಾಗಾರವನ್ನು ನಡೆಸಿಕೊಡುವ ಜವಾಬ್ದಾರಿಯನ್ನು ಹೊತ್ತಿದ್ದರು. ಸುಪ್ರಸಿದ್ಧ ನಾಟಕಕಾರ ಶೇಕ್ಸ್‍ಪಿಯರ್‍ನ ಜನಪ್ರಿಯ ಉಕ್ತಿ  “ಜೀವನವೆಂಬೀ ನಾಟಕರಂಗದಿ  ಪಾತ್ರಧಾರಿಗಳು ಗಂಡು ಹೆಣ್ಣುಗಳು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ 'ವಿಭಾ ಸಾಹಿತ್ಯ ಪ್ರಶಸ್ತಿ-2015' ಕ್ಕಾಗಿ ಕನ್ನಡದ ಕವಿಗಳಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಈ ಪ್ರಶಸ್ತಿಯು ರೂ.5000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದಗ ದ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲಾಗುವುದು. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ 31.  ವಿ.ಸೂ; ಯಾವುದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರುಕ್ಮಿಣಿಯಾಗದಿದ್ದರೂ ಭಾಮೆಯಾದರೂ ಆಗುತ್ತಿದ್ದೆನೇನೋ: ಲಹರಿ

ಇಂಥದೇ ಒಂದು ಅರೆಬರೆ ಬೆಳಕಿರುವ ಸಂಜೆಯಲ್ಲಲ್ಲವಾ ನೀ ಸಿಕ್ಕಿದ್ದು ನಂಗೆ? ಇನ್ನೂ ಹೆಚ್ಚು ಕೆಂಪಗಿದ್ದ ಸೂರ್ಯ ಮುಳುಗುವ ಹೊತ್ತಲ್ಲೇ ನನ್ನ ಮನಸ್ಸಿನೊಳಗೆ ನಡೆದು ಬಂದಿದ್ದು ನೀನು.. ನಂತರದ್ದೆಲ್ಲಾ ಪ್ರೀತಿಯದ್ದೇ ಪ್ರವಾಹ! ನನ್ನ ಕನಸುಗಳ ಪ್ರಪಂಚದಲ್ಲಿ ನೀ ಕೃಷ್ಣನಾದರೆ , ನಿನ್ನ ನವಿಲುಗರಿಯ ಬದುಕಿನಲ್ಲಿ ರಾಧೆಯಾಗಿದ್ದೆ ನಾ! ರಾಧಾ-ಕೃಷ್ಣರು ಎಂದೂ ಸೇರುವುದಿಲ್ಲವೆಂಬ ಸತ್ಯ ತಿಳಿದಿದ್ದರೆ ಅಂದೇ ರುಕ್ಮಿಣಿಯಾಗುತ್ತಿದ್ದೆನೇನೋ… ಪ್ರೀತಿಸುವುದೊಂದೇ ಗೊತ್ತಿತ್ತು ಈ ಹೃದಯಕ್ಕೆ. ಕಡುನೀಲಿ ಬಣ್ಣದ ಶರ್ಟ್ ತೊಟ್ಟು ಕೈಯಲ್ಲೊಂದು ಸಿಗರೇಟ್ ಹಿಡಿದವನ ನೋಡಿದಾಗ ನನ್ನೊಳಗೊಂದು ಹೂಕಂಪನ ಮೂಡಿತ್ತು.೧೯೯೬ರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಗ್ರಾಸ ಹಿಡಿದ ಹೊತ್ತಲ್ಲಿ….: ಮಹಾದೇವ ಹಡಪದ

ನವಿಲುತೀರ್ಥದ ಈ ಮೂಲೆಯ ಹಳ್ಳಿಗೂ ಆ ಧಾರವಾಡ ಶಹರಕ್ಕೂ ಎಲ್ಲಿಂದೆಲ್ಲಿಯ ನಂಟು..?  ಅಪೂಟ ಮಳೆ ಹೋದಾಗಿನಿಂದ ಒಂದಳತಿ ನೆತ್ತಿ ಮ್ಯಾಗಳ ಸೂರ್ಯ ಇನ್ನೇನು ಬ್ಲಾಸ್ಟ ಆಗ್ತಾನೇನೋ ಅನ್ನೋ ಹಂಗ ಉರಿತಿದ್ದ. ರಸ್ತಾದ ಮ್ಯಾಲ ಬಿಸಿಲಗುದುರೆ ಅವಸರ ಮಾಡಿ ಓಡುತ್ತಿದ್ದರಿಂದ ಎಳೆಬಿಸಿಲು ರಣಹೊಡೆಧಂಗ ಹೊಡಿತಿತ್ತು. ಬಸ್ಸಿನ ಓಟವೂ, ನಿದ್ದಿಗೆಟ್ಟ ಹಸಿವು ಒಂದನಮೂನಿ ಕಸಾರಕಿ ಬಂದವರಂಗ ಹೊಟ್ಟಿಯಳಗ ಸುಳ್ಳಿ ಸುತ್ತುತ್ತಿದ್ದರಿಂದ – ಇದ್ದಬಿದ್ದದ್ದೆಲ್ಲ ಬಾಯಿಗೆ ಬಂದಂತಾಗಿ ವ್ಯಾ..ಕ ಎಂದು ಕಿಟಕಿಯೊಳಗ ಕಾರಿಕೊಂಡಳು. ಆಗ ಫ್ರೆಶ್ ಆಗಿ ಬಸ್ ಹತ್ತಿದವರ ಗರಿಗರಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವ್ವ: ಸತೀಶ್ ಜೋಶಿ

ಅವ್ವ ನನ್ನನ್ನು ಕರೆದು ನನಗ ಸಲ್ಪು ಅಫು ತಂದು ಕೊಡು ಅಂದ್ಳು, ನಾ ಎಲ್ಲೆ ಸಿಗತದವ್ವಾ ಅಂದಾಗ ಬಾಯಿ ಮೇಲೆ ಸೆರಗಿಟ್ಟುಕೊಂಡು ಅಳಲು ಶುರು ಮಾಡಿದಳು. ನನಗೆ ಗಾಬರಿ ಆಗಿತ್ತೋ ಸಿಟ್ಟು ಬಂದಿತ್ತೋ ಈಗ ನೆನಪಿಲ್ಲ. ಅಫು ಅಂದ್ರೇನಂತ ನಾನೂ ಕೇಳ್ಲಿಲ್ಲ, ಅವ್ವನೂ ಹೇಳ್ಲಿಲ್ಲ. ಆ ಅಫು ತರೋ ವಿಚಾರ ಮಾತ್ರ ಅಲ್ಲಿಗೇ ನಿಂತಿತ್ತು. ನಾನು ಆಗ ಪಿಯುಸಿ ಓದ್ತಿದ್ದೆ, ಅಂದ್ರೆ, ಅಷ್ಟು ದೊಡ್ಡವನಿದ್ದೆ, ಆದ್ರೂ ನನಗೆ ಅಫು ಬಗ್ಗೆ ಗೊತ್ತಿರಲಿಲ್ಲ. ಈಗಿನ ಜನರೇಷನ್ ಹುಡುಗರಿಗೆ ಹೋಲಿಸಿದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಖಂಡಕಿಯ ವಿಶಿಷ್ಟ ಕಾರಹುಣ್ಣಿಮೆ: ನಾರಾಯಣ ಬಾಬಾನಗರ

ದಿನಾಂಕ 8-6-2015 ಸೋಮವಾರದಂದು ಕಾಖಂಡಕಿಯಲ್ಲಿ ಕಾರಹುಣ್ಣಿಮೆಯ ಸಂಭ್ರಮ. ತನ್ನಿಮಿತ್ಯ ಈ ಲೇಖನ. ಕರಿ ಆಡಿಸು…ಶೌರ್ಯ ಪ್ರದರ್ಶಿಸು…!! ಹೂಂಕರಿಸುವ ಎತ್ತು, ಮುಂಗಾಲುಗಳಿಂದ ಮಣ್ಣನ್ನು ಹಿಂದಕ್ಕೆ ಚಿಮ್ಮುತ್ತಾ ಎದುರಿಗೆ ನಿಂತವನನ್ನು ಕೆಂಗಣ್ಣಿನಿಂದ ನೋಡುತ್ತ ನಿಂತಿದೆ. ಎತ್ತಿನ ಮುಂದೆ ನಿಂತವನು ‘ಬಾ ಇರಿ. . ! ನೋಡೋಣ’ ಎನ್ನುವಂತೆ ಸವಾಲೆಸೆದು ಕಾದಿದ್ದಾನೆ. ಸುತ್ತಲೂ ಸಾವಿರಾರು ಜನ ನೋಡುತ್ತ ಸಾಕ್ಷಿಯಾಗಿದ್ದಾರೆ.  ಇದು  ಕಾಖಂಡಕಿಯ ಗ್ರಾಮದಲ್ಲಿ ನಡೆಯುವ ವಿಶಿಷ್ಟ ಕಾರಹುಣ್ಣಿಮೆಯ ದೃಷ್ಯ. ರಾಜ್ಯಾದ್ಯಂತ ಕಾರಹುಣ್ಣಿಮೆಯ ಸಂಭ್ರಮ ನಡೆದರೆ, ಅವತ್ತು ಈ ಊರಲ್ಲಿ ಕಾರಹುಣ್ಣಿಮೆಯ ಆಚರಣೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಗೋ ತಗಳ್ಳಿ – ಅಳಿವಿನ ಸವಾಲಿಗೆ ಉಳಿವಿನ ಉತ್ತರ!!!: ಅಖಿಲೇಶ್ ಚಿಪ್ಪಳಿ

ಪ್ರತಿವರ್ಷ ಜೂನ್ 5ರಂದು ಪರಿಸರ ದಿನಾಚರಣೆ. ಇದನ್ನು ಕೆಲವು ಕಡೆ ವಿಜೃಂಭಣೆಯಿಂದ, ಕೆಲವೆಡೆ ಕಾಟಾಚಾರಕ್ಕಾಗಿ, ಕೆಲವೆಡೆ ನೈಜ ಕಾಳಜಿಯಿಂದ, ಹಲವೆಡೆ ಪೋಟೋ ಸೆಷನ್‍ಗಾಗಿ ಆಚರಿಸಲಾಗುತ್ತಿದೆ. ಇದು ಇಲಾಖೆಗೂ ಒಂದು ಸರ್ಕಾರಿ ಶ್ರಾದ್ಧದ ಆಚರಣೆಯಿದ್ದಂತೆ. ಆಚರಿಸದಿದ್ದರೆ ಭಾರೀ ಲೋಪ ಜೊತೆಗೆ ಉಗ್ರ ಟೀಕೆ! ಆಚರಿಸಿ ಸಾರ್ಥಕಗೊಳಿಸಿದ ನಿದರ್ಶನಗಳು ಕಡಿಮೆಯೇ. ನಾವು ಪ್ರತಿವರ್ಷ ವಿಶ್ವಪರಿಸರ ದಿನಾಚರಣೆಯನ್ನು ಒಂದೇ ಕಡೆಯಲ್ಲಿ ಆಚರಿಸುತ್ತೇವೆ. ಗುಂಡಿ-ಹೊಂಡ ತೆಗೆಯುವ ಕೆಲಸವೇ ಇಲ್ಲ. ಹೋದ ವರ್ಷ ನೆಟ್ಟ ಗುಂಡಿಯಲ್ಲೇ ಈ ವರ್ಷವೂ ಗಿಡ ನೆಟ್ಟು ಫೋಟೊ ಹೊಡೆಸಿಕೊಳ್ಳುವುದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಹುಪರಾಕ್!: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಬೆಳಿಗ್ಗೆ ಕೆಲಸಕ್ಕೆ ಹೊತ್ತಾಗಿದ್ದರೂ ಅಂತಹ ಗಡಿಬಿಡಿಯೇನೂ ತೋರಿಸದೆ, ತಾನು ಬೇಗ ಹೋಗಿಯಾದರೂ ಏನು ಮಾಡುವುದು ಅನ್ನುವ ಮನಸ್ಥಿತಿಯಲ್ಲಿ ಆರಾಮವಾಗಿ ಬಂದ ಪ್ರದೀಪ್ ಗೆ ಸ್ವಾಗತಿಸಿದ್ದು ಎಂದಿಗಿಂತಲೂ ಚೊಕ್ಕದಾದ ಆಫೀಸಿನ ಪ್ರಾಂಗಣ. ಅವನಿಗೆ ಆಶ್ಚರ್ಯವಾಗಿತ್ತು. ಅಲ್ಲೇ ನಿಂತು ಅತ್ತಿತ್ತ ಕಣ್ಣಾಡಿಸಿದ. ರಿಸೆಪ್ಶನ್ ನಲ್ಲಿ ಹೂವಿನ ಅಲಂಕಾರ, ಆ ಕಡೆ ಈ ಕಡೆಗೊಂದು ಹೂ ಕುಂಡಲ. ಇದ್ದುದರಲ್ಲೇ ಸುಂದರಿಯರು ಅನಿಸಿಕೊಂಡ ನಾಲ್ಕು ಲಲನೆಯರು, ತಮಗೆ ಪರಿಚಿತವೇ ಅಲ್ಲದ ಸ್ಯಾರಿ ಎಂಬ ದೇಸಿ ಉಡುಗೆಯಲ್ಲಿ ನಿಂತಿದ್ದರು. ಆಗಾಗ ತಮ್ಮ ಸ್ಯಾರಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಜ್ಯೋತಿ ಹೆಗಡೆ, ಬಿದಲೋಟಿ ರಂಗನಾಥ್, ಜಯಶ್ರೀ ದೇಶಪಾಂಡೆ

 ಗೆಳತಿ.. ನೀ ಜೊತೆಯಿದ್ದಾಗ ನಾನಾಗಿದ್ದೆ ಕೇವಲ ಪ್ರೇಮಿ. ನೀ ದೂರಾಗಿ ನೆನಪುಗಳನೆಲ್ಲ ಬಿಟ್ಟು ಹೋದ ಮೇಲೆ ನಾನಾಗಿರುವೆ ಪ್ರೀತಿಯ ಆರಾಧಕ! ಅದೆಷ್ಟೋ ರಾತ್ರಿ ಗರ್ಭವ ಸೀಳಿ ಬರುವ ಮಳೆಯಲಿ ನೆನೆ ನೆನೆದು.. ಮಿಂಚು ಹುಳುಗಳ ಬೆಳಕನೇ ಸಾಲಾಗಿ ಪೋಣಿಸಿ ಬರೆದಿರುವೆ!! ರಾತ್ರಿ ಚಿಮಣಿಯ ಮಂದ ಬೆಳಕಲಿ ರಾಡಿಯೆಬ್ಬಿಸಿದ ಮಳೆ ನೀರಲಿ ನಿನ್ನ ಪ್ರತಿಬಿಂಬವ ಹುಡುಕಿರುವೆ.. ಎಲ್ಲ ವ್ಯರ್ಥ,, ನೀನಿಲ್ಲದ ಪ್ರತಿಬಿಂಬ ನಿನ್ನದೇ ನೆನಪಾಗಿ ಕಾಡಿದೆ.. ​ಎದೆಯಲೆಲ್ಲ ನೆನಪ ನೀರೊಂದೇ ಉಳಿದಿದೆ ಸಾಲು ಕವನವಾಗಿ ನಿನಗಾಗಿ ಕನವರಿಸಿ ಮಲಗಿರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಡೋ ಕಾಡು: ಪ್ರಶಸ್ತಿ

ಅಡವಿ ದೇವಿಯ ಕಾಡು ಜನಗಳ ಈ ಹಾಡು.. ನಾಡಿನ ಜೀವ ತುಂಬಿದೆ..ರಾಯರು ಬಂದರು ಮಾವನ ಮನೆಗೆ ಚಿತ್ರದಲ್ಲಿ ಎಸ್.ಪಿ.ಬಿ ಸಂಗಡಿಗರು ಹಾಡಿದ ಮೇಲಿನ ಹಾಡು ಕೇಳದವರಿಲ್ಲ ಅನಿಸುತ್ತೆ(ಕೊಂಡಿ ೧). ಜಂಗಲ್ ಬುಕ್ಕಿನ ಮೋಗ್ಲಿಯ ಕತೆಗಳನ್ನು ಕೇಳದ ಒಂದು ಪೀಳಿಗೆಯವರೇ ಇಲ್ಲವೆನ್ನುವಷ್ಟು ಪ್ರಸಿದ್ದಿ ಪಡೆದಿತ್ತು ಒಂದು ಪುಸ್ತಕ ಒಂದು ಕಾಲಕ್ಕೆ. ಜೂಲಿಯಾನೆ ಕೊಪ್ಕೆ ಅವರ Girl against the jungle ಪುಸ್ತಕದ ಭಾಗವೊಂದು(ಕೊಂಡಿ ೨)ನಮ್ಮ ಹೈಸ್ಕೂಲಿನ ಇಂಗ್ಲೀಷಿನಲ್ಲಿ ಪಾಠವಾಗಿತ್ತು. ಲಾಕ್ ಹೀಡ್ ಎಲೆಕ್ಟ್ರಾವೆಂಬ ವಿಮಾನದಲ್ಲಿ ತಾಯಿಯ ಜೊತೆಗೆ ಹೊರಟ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಜಗತ್ತನ್ನು ಬದಲಾಯಿಸಿ ಸೂಫಿ ಮುಮುಕ್ಷು ಬಯಾಝಿದ್‌ ತನ್ನ ಜೀವನಚರಿತ್ರೆಯಲ್ಲಿ ಇಂತು ಬರೆದಿದ್ದಾನೆ: ನಾನು ಚಿಕ್ಕವಯಸ್ಸಿನವನಾಗಿದ್ದಾಗ ನನ್ನ ಆಲೋಚನೆಗಳ, ದೇವರಿಗೆ ಮಾಡುತ್ತಿದ್ದ ಕೋರಿಕೆಗಳ, ಹಾಗೂ ಎಲ್ಲ ಪ್ರಾರ್ಥನೆಗಳ ತಿರುಳು “ಜಗತ್ತನ್ನು ಬದಲಿಸಲು ಅಗತ್ಯವಾದ ಶಕ್ತಿಯನ್ನು ನನಗೆ ಕೊಡು” ಎಂಬುದಾಗಿತ್ತು. ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಏನೋ ಒಂದು ಲೋಪ ನನಗೆ ಗೋಚರಿಸುತ್ತಿತ್ತು. ನಾನೊಬ್ಬ ಕ್ರಾಂತಿಕಾರಿಯಾಗಿದ್ದೆ. ಇಡೀ ಪ್ರಪಂಚವನ್ನೇ ಬದಲಿಸುವ ಹಂಬಲ ನನ್ನದಾಗಿತ್ತು. ತುಸು ಪಕ್ವವಾದ ನಂತರ ನನಗನ್ನಿಸುತ್ತಿತ್ತು – ಈ ಬಯಕೆ ತುಸು ಅತಿಯಾಯಿತು. ನನ್ನ ಜೀವನ ನನ್ನ ಕೈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಸಿವು ಮತ್ತು ಊಟ: ಅನಿತಾ ನರೇಶ್ ಮಂಚಿ.

             ‘ಒಂದು ಎರಡು  ಬಾಳೆಲೆ ಹರಡು      ಮೂರು ನಾಲ್ಕು  ಅನ್ನ ಹಾಕು  ಐದು ಆರು  ಬೇಳೆ ಸಾರು  ಏಳು ಎಂಟು  ಪಲ್ಯಕೆ ದಂಟು  ಒಂಬತ್ತು ಹತ್ತು  ಎಲೆ ಮುದುರೆತ್ತು ಒಂದರಿಂದ ಹತ್ತು ಹೀಗಿತ್ತು  ಊಟದ ಆಟವು ಮುಗಿದಿತ್ತು ..’ ಈ ಪದ್ಯವನ್ನು ಚಿಕ್ಕಂದಿನಲ್ಲಿ ನಾವೆಲ್ಲಾ ಕಂಠಪಾಠ ಮಾಡಿದವರೇ .. ಆಗೇನೋ ಇದು ಲೆಕ್ಕ ಕಲಿಸುವ ಹಾಡು ಅನ್ನಿಸುತ್ತಾ ಇದ್ದರೆ ಈಗ ಈ ಹಾಡಿಗೆ ಬೇರೆ0iÉುೀ ಅರ್ಥ ಕಟ್ಟುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವಳು ಮತ್ತು ಅಂಗಡಿ: ಅಕ್ಷಯ ಕಾಂತಬೈಲು

     ಮೊಬೈಲಿನ ಕರೆನ್ಸಿ ಖಾಲಿಯಾದರೆ, ರೀಚಾರ್ಚ್ ಮಾಡುವ ಅಂಗಡಿ ಎಷ್ಟು ದೂರವಿದ್ದರೂ ಅಲ್ಲಿಗೆ ದಾಪುಗಾಲಿಡುತ್ತೇವೆ. ದೇವಸ್ಥಾನದಲ್ಲಿ ಮಂಗಳಾರತಿಯ ಹೊತ್ತು ತಪ್ಪಬಾರದೆಂದು ತುರಾತುರಿಯಿಂದ ಹೊರಡುತ್ತೇವೆ. ಇನ್ನೇನು ಕೆಲವೇ ನಿಮಿಷದಲ್ಲಿ ಬಸ್ಸು ಹೊರಡುತ್ತದೆಂದು ಓಡೋಡಿ ಹೋಗುತ್ತೇವೆ. ಹಾಗೆಯೇ ನಾನಿಲ್ಲಿ ಅವಳನ್ನು ನೋಡಲು, ಉನ್ಮತ್ತನಾಗಿ ಬೆಳಗ್ಗೇ ತಪ್ಪದೆ ಅವಳು ಹೊರಡುವ ಹೊತ್ತ ಗೊತ್ತು ಮಾಡಿ ಹೋಗುತ್ತಿರುವೆ. ನಾನು ಹೋಗುವುದಕ್ಕೆ ಪವಿತ್ರ ಉದ್ದೇಶವಿದೆ ಮತ್ತು ಭಾರಿ ತೃಪ್ತಿಯಿದೆ.  ಅವಳೇನು ನೋಡಲು ಚಿತ್ರ ಸುಂದರಿಯರಾದ ಕತ್ರೀನಾ ಅಲ್ಲ, ಐಶ್ವರ್ಯ ರೈನೂ ಅಲ್ಲ. ಒಬ್ಬಳು; … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಲೆನಾಡಿನ ಕಂದರಗಳ ನಡುವೆ: ವಿನೋದ್ ಕುಮಾರ್

..ಹೇ.. ಆಶೋಕ..ರಾಘು.. ಕವಿತಾ.. ಬೇಗ ಬನ್ರೇ.. ಇಲ್ಲಿದೆ ಅದು.. ಬೇಗ ಬನ್ನಿ.. ಸಕತ್ತಾಗಿದೆ ನೋಡೋಕೆ.. ಅಂತ ಕೂಗಿದಳು ವೀಣಾ.. ಮಲೆನಾಡಿನ ಕಾಡಿನ ಆ ಕಡಿದಾದ ಹಾದಿಯಲ್ಲಿ.. ಅದೂ ಜಾರು ರಸ್ತೆ ಬೇರೆ.. ವೀಣಾಳ ಕೂಗಿಗೆ.. ಕವಿತಾ ಮತ್ತು ರಾಘು ಕೂಡಲೇ ವೀಣಾ ಇದ್ದ ಸ್ಥಳಕ್ಕೆ ತಲುಪಿದರು.. ಎಲ್ಲೇ ವೀಣಾ.. ಎಲ್ಲೇ ತೋರಿಸೇ ಬೇಗ.. ಅದೋ ಅಲ್ಲಿ ನೋಡಿ.. ಆ ಮತ್ತಿ ಮರದ ಬಲಭಾಗದ ದೊಡ್ಡ ಕೊಂಬೆ ಇದೆಯಲ್ಲ.. ಅದರ ತುದಿಯಲ್ಲಿ.. ಕೆಂಪು ಕಾಣ್ತಿದೆ ನೋಡಿ ಅದೇ.. ಮಲಬಾರ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರಣ ತರುವ ಬಿಸಿಗಾಳಿ!: ಅಖಿಲೇಶ್ ಚಿಪ್ಪಳಿ

ಮೇ ತಿಂಗಳೆಂದರೆ ಎಲ್ಲೆಡೆ ಬಿಸಿಲು-ತೀರಲಾರದ ಬೇಸಿಗೆ. ಮುಂಗಾರು ಶುರುವಾಗುವ ಮುಂಚಿನ ತಿಂಗಳು. ಒಂಥರಾ ಅನಾಹುತಗಳ ತಿಂಗಳು. ಕೆಲವಡೆ ಹಿಂಗಾರಿನ ಹೊಡೆತಕ್ಕೆ ಸಿಕ್ಕು ನಲುಗುವವರು, ಮತ್ತೆ ಕೆಲವೆಡೆ ಬಿಸಿಲಿನ ತಾಪಕ್ಕೆ ಕರಗುವವರು. ಫಸಲು ಕೈಗೆ ಬರುವಷ್ಟರಲ್ಲಿ ವರುಣನ ಅವಕೃಪೆಯಿಂದಾಗಿ ಬೆಳೆ ನಷ್ಟ, ರೈತನ ಇಡೀ ಶ್ರಮ ನೀರಿನಲ್ಲಿ ಹೋಮ. ಪ್ರತಿವರ್ಷ ನೈಸರ್ಗಿಕ ವಿಕೋಪಗಳು ಹೆಚ್ಚಾಗುತ್ತಿವೆ. ದಕ್ಷಿಣ ಭಾರತದಲ್ಲೇ ಎರಡು ರೀತಿಯ ನೈಸರ್ಗಿಕ ವಿಕೋಪಗಳ ತಾಂಡವ ನೃತ್ಯ ನಡೆಯಿತು. ಬಳ್ಳಾರಿಯಂತಹ ಬಿರುಬೇಸಿಗೆ ನಾಡಿನಲ್ಲಿ ಆಲಿಕಲ್ಲು ಮಳೆ ಬಂದು ಇಳೆ ಕೊಂಚ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇಹವೆಂದರೆ………..: ಅಮರ್ ದೀಪ್ ಪಿ.ಎಸ್.

ಸಮಾಧಿ ******  ಮಾಂಸ ಮಣ್ಣಲ್ಲಿ ಕರಗಿ  ಬಳಿಕ ಬಿಕರಿಯಾಗದೇ ಉಳಿವ ಸವೆಯದ ಬಿಡಿ ಮೂಳೆಗಳ ಮುಚ್ಚಿದ ದುಖಾನು …. ಒಂದೆರಡು ವರ್ಷಗಳ ಹಿಂದೆ ಈ ಸಾಲುಗಳನ್ನು ಬರೆದಿದ್ದೆ. ಈ ಸಾವು, ಸಮಾಧಿ ಮತ್ತು ಸುಡುಗಾಡು ಅನ್ನುವಾಗೆಲ್ಲಾ ಒಂದು ಬಗೆಯ ಮನಸ್ಥಿತಿಗೆ ಒಳಗಾಗುತ್ತಲೇ ಇರುತ್ತೇನೆ. ನಾವು ಕೆಲವು ಮಾತಿಗೆ ಕೆಟ್ಟ ಬೇಸರ ಮಾಡಿಕೊಂಡು “ಇದೇನ್ ಸುಡುಗಾಡಲೇ” ಅನ್ನುತ್ತಿರುತ್ತೇವೆ.   ಯಾರಾದರೂ ಸತ್ತರೆ ಮಾತ್ರ ಮಣ್ಣು ಮಾಡಲು ನೆನಪಾಗುವ ಸ್ಥಳ.  ಅದು ಬಿಟ್ಟು ಇಷ್ಟ ಪಟ್ಟು ಖುಷಿಯಲ್ಲಿ ಹೋದಂತೆ ಪಾರ್ಕು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವೋಲ್ವೋ: ಪ್ರಶಸ್ತಿ

ವೋಲ್ವೋದ ಜಂಟಿ ಸೀಟಲ್ಲಿ ಒಂಟಿಯಾಗಿ ಕೂತು ಮಳೆಯಿಲ್ಲದ ಬೇಸಿಗೆಯ ತಂಪಾದ ಹವೆಯ ಸವಿ ಅನುಭವಿಸುತ್ತಾ ಹೆಚ್ಚು ಹೊತ್ತೇನಾಗಿರಲಿಲ್ಲ. ಪಕ್ಕದಲ್ಲೊಬ್ಳು ಮುಸುಕಿಣಿ ಅವತರಿಸಿದಳು. ವೈತರಿಣಿ, ಮಂಜೂಷಾ ಕಿಣಿ ಅನ್ನೋ ತರ ಇದ್ಯಾವ ಹುಡುಗಿ ಹೆಸ್ರಪ್ಪಾ ಅಂದ್ಕೊಂಡ್ರಾ ? ಅದು ಹೆಸರಲ್ಲ, ಮುಸುಕು ! ಈ ಮೊದ್ಲು ಹೇಳಿದ ಹೆಸ್ರು ಯಾರು ಅಂದ್ರಾ ? ಅದ್ರ ವಿಚಾರಕ್ಕೆ ಇನ್ನೊಮ್ಮೆ ಬರೋಣ. ಮುಸುಕುಧಾರಿಣಿ ಮುಸುಕು ತೆಗೆಯೋ ತನಕ ಅವಳನ್ನೇ ದುರುಗುಟ್ಟಿ ನೋಡೋದು ಸಜ್ಜನಿಕೆ ಅಲ್ಲವಂತ ಪಕ್ಕದಲ್ಲಿ ಏನೂ ಕಾಣದಿದ್ರೂ ಕಿಟಕಿಯ ಹೊರಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ನೂರುಲ್ಲಾ ತ್ಯಾಮಗೊಂಡ್ಲು, ಅಜ್ಜೀಮನೆ ಗಣೇಶ್, ಬಿದಲೋಟಿ ರಂಗನಾಥ್

ಗೊಹರ್     ಮನದ ಹರಕೆಯು ಕನಸಾಗಿ ಕಾಡಿದೆ ಕಣ್ಣಿನಾಳದಲಿ ಮಗನೆ ನೀ ಬೆಳೆದು ಬಳಕುವ ಬಳ್ಳಿಯೊಡಲಲಿ ಹೂಗಳು ನಗುತಲಿರಲಿ ಘಮ್ಮನೆ. ಬೆಳೆದು ದೊಡ್ಡವನಾಗಿ ಹಾರದಿರು ನಕ್ಷತ್ರದ ಸುಳಿಗೆ  ಇಲ್ಲೆ ಕೂಡಿಬಾಳೊ ಇರುವ ಗುಡಿಯೆ ಸ್ವರ್ಗ  ನಮಗೆ. ಸಾವಿರಾರು ವ್ಯೆಭೋಗದಾಭರಣಗಳು ಸಮುದ್ರ  ದೊಡಲಿನ ಸಿಂಗಾರಕೆ? ಹೃದಯ ಸಮುದ್ರದಲ್ಲಿನ ಮುತ್ತನ್ನು (ಗೊಹರ್) ಹೊತ್ತ ಎನಗೆ ಯಾವುದೇತರಹಂಗೆ? ನಡೆ,ನಿನ್ನ ಅಂಬೆಗಾಲುಗಳಲಿ ಹೊನ್ನಕಿರಣಗಳು ಸೂಸಲಿ ನಾಳಿನಾಸೆಯ ಎಮ್ಮಮನಗಡಲಲಿ ಹರ್ಷದಲೆಗಳು ಏಳಲಿ. -ನೂರುಲ್ಲಾ ತ್ಯಾಮಗೊಂಡ್ಲು         ಜಗತ್ತು …. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಹಂಡೆ ಸತ್ತಿದೆ ಕೋಜಿಯಾ ಒಂದು ದಿನ ಕಂಚುಗಾರನಿಂದ ಹಂಡೆಯೊಂದನ್ನು ಎರವಲು ಪಡೆದು ಮನೆಗೆ ಒಯ್ದನು. ಮರುದಿನ ಅದರೊಳಗೆ ದುಂಡನೆಯ ಪುಟ್ಟ ಬೋಗುಣಿಯೊಂದನ್ನು ಹಾಕಿ ಹಿಂದಿರುಗಿಸಿದ. ಮಾಲಿಕ ಹಂಡೆಯೊಳಗಿದ್ದ ಪುಟ್ಟ ಬೋಗುಣಿಯನ್ನು ತೋರಿಸಿ ಕೇಳಿದ, “ಇದೇನು?” ಅದನ್ನು ನೋಡಿದ ಕೋಜಿಯಾ ಉದ್ಗರಿಸಿದ, “ಇದೇನು? ಹಂಡೆ ಒಂದು ಮರಿ ಹಾಕಿದೆ!”. ಮಾಲಿಕ ಬೋಗುಣಿಯನ್ನೂ ಹಂಡೆಯನ್ನೂ ತನ್ನ ಸುಪರ್ದಿಗೆ ತೆಗೆದುಕೊಂಡ. ಇನ್ನೊಂದು ದಿನ ಕೋಜಿಯಾ ಪುನಃ ಹಂಡೆಯನ್ನು ಎರವಲು ಪಡೆದು ಮನೆಗೆ ಒಯ್ದ. ಐದು ದಿನಗಳಾದರೂ ಅದನ್ನು ಕೋಜಿಯಾ ಹಿಂದಿರುಗಿಸದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಾನಸಿ: ಮಹಾದೇವ ಹಡಪದ

        ಬರೋ…. ಬಂಧು ಬಳಗ ದೊಡ್ಡದು, ಆದ್ದರಿಂದ ಮದುವಿ ಮನಿ ತುಂಬ ಬರೇ ಹೊಯ್ಯ-ನಯ್ಯ ಮಾತುಕತೆ ಜೋರಾಗಿ ನಡೆದಿತ್ತು. ಅತ್ತಿ ಮಾವ ಬಂದ ಮಂದೀನ ಸಂಭಾಳಸಲಿಕ್ಕ ಮತ್ತು ಯಾವ ಅನಾನುಕೂಲ ಆಗಧಂಗ ನೋಡಕೊಳ್ಳಲಿಕ್ಕ ಒದ್ದಾಡೊ ಆ ಹೊತ್ತಿನಾಗ ಮನುಕುಮಾರ ಮತ್ತವನ ವಿಧವೆ ತಾಯಿ ಶಿವಕ್ಕ ಧೂಳಸಂಜಿ ಅಷ್ಟೊತ್ತಿಗೆ ಬಂದ್ರು. ‘ಇದೇನವಾ ಬೆಂಗ್ಳೂರು ಸೇರಿದ್ದ ಮಗರಾಯ ಅಪರೂಪಕ್ಕ ಅತ್ತಿ ಮನೀಗೆ ಬಂದನಲ’್ಲ ಸಣ್ಣತ್ತಿ ಚಾಷ್ಟಿ ಮಾಡಿದಳು. ಹೌದು ನಾಟಕ, ಹಾಡು, ಕುಣಿತ ಅಂತ ತಿರುಗೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿವಿ ಕಚ್ಚುವುದು!: ಎಸ್.ಜಿ.ಶಿವಶಂಕರ್

ಅರೆ..ಹಾಗಂದರೇನು? ಎಂದು ಹುಬ್ಬೇರಿಸಿದ್ದೀರೇನು? ನೀವು ಈ ಮಾತು ಈವರೆಗೆ ಕೇಳಿಯೇ ಇಲ್ಲವೆ?  ‘ಇಲ್ಲ’ ಎಂಬ ನಿಮ್ಮ ಮಾತನ್ನು ನಾನು ಖಂಡಿತಾ ನಂಬುವುದಿಲ್ಲ! ಎಲ್ಲಿಯಾದರೂ ಅಪರೂಪಕ್ಕಾದರೂ ಈ ಮಾತು ನೀವು ಕೇಳಿಯೇ ಇರುತ್ತೀರಿ. ಕೇಳಿದಾಗ ಈ ಪದದ ಅರ್ಥವಾಗಿರಬಹುದು ಇಲ್ಲ ಅರ್ಥವಾಗದೆ ಮರೆತಿರಬಹುದು!  ಕಿವಿಕಚ್ಚುವುದು ಎಂದಾಕ್ಷಣ ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಯ ಕಿವಿಯನ್ನು ಕಚ್ಚುತ್ತಿರುವುದನ್ನು ಕಲ್ಪಿಸಿಕೊಳ್ಳಬೇಡಿ! ಈ ಪದ ನನ್ನ ಕಿವಿಯ ಮೇಲೆ ಬಿದ್ದುದು ಕೇವಲ ವಾರದ ಹಿಂದೆ. ಆಗಿನಿಂದಲೂ ಇದರ ಅರ್ಥ, ವ್ಯಾಪ್ತಿಗಳ ಬಗೆಗೇ ಚಿಂತಿಸುತ್ತಿರುವೆ ಎಂದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗುಜರಿ ಬದುಕಿನ ದಾರಿ: ಅಮರ್ ದೀಪ್ ಪಿ.ಎಸ್.

ಅಲ್ಲಿ ನನಗೊಂದು ಹೊಸ ಬಟ್ಟೆಯಿಂದ ಮುಖ ಒರೆಸಿ ಒರೆಸಿ ಇಕ್ಕಟ್ಟಾದ ಜಾಗದಲ್ಲಿ ಮಲಗಿಸಿದ್ದರು.  ಆ ಜಾಗದಲ್ಲಿ ನನ್ನಂತೆ ಇತರರಿಗೂ ಅದೇ ಸ್ಥಿತಿ.   ಅಲ್ಲಿ ಬಂದು ಹೋಗುವ ನೂರಾರು ಮಂದಿ ನಮ್ಮನ್ನೆಲ್ಲಾ ಮುಟ್ಟಿ, ತಟ್ಟಿ, ತಲೆ ಹಿಡುದು, ತಿರುವ್ಯಾಡಿ, ಕಾಲು ಜಗ್ಗಿ, ಮೈ ಬೆಂಡು ಮಾಡಿ, ನೋಡಿ “ಉಹ್ಞೂಂ. ಬ್ಯಾಡ” ಅನ್ನೋ ಮಂದಿ. ಇನ್ನೂ ಕೆಲವರು “ಇಷ್ಟಕ್ಕಾದ್ರ ಕೊಡು, ಇಲ್ಲಾಂದ್ರ ಬ್ಯಾಡ, ದುಬಾರಿಯಾತು”, ಅನ್ನುವವರು. ಅವರೆಲ್ಲಾ ಬರೀ ಹೆಂಗಸರು.  ಹಿಂಡು ಮಂದಿ ಕಲೆಯುವ ಜಾತ್ರಯೊಳಗೆ ಕೆಟ್ಟ ಬಿಸಿಲಲ್ಲಿ ನನ್ನಂಥವರನ್ನು ಮಲಗಿಸಿ, ಕುಕ್ಕರಗಾಲಲ್ಲಿ ಕುಂದ್ರಿಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಾಣಿಗಳಿಂದ ಪಾಠ ಕಲಿಯುವ ಕಾರ್ಪೋರೇಟ್ ಪ್ರಪಂಚ: ಅಖಿಲೇಶ್ ಚಿಪ್ಪಳಿ

ಬಿರುಬಿಸಿಲಿನ ಈ ದಿನದಲ್ಲಿ ಕಾಗೆಯೊಂದಕ್ಕೆ ಬಾಯಾರಿಕೆಯಾಗಿತ್ತು. ಮಡಿಕೆಯಲ್ಲಿ ಅರ್ಧ ಮಾತ್ರ ನೀರು. ಬುದ್ಧಿವಂತ ಕಾಗೆ ಹತ್ತಿರದಲ್ಲಿದ್ದ ಕಲ್ಲುಗಳನ್ನು ಕೊಕ್ಕಿನಿಂದ ಕಚ್ಚಿಕೊಂಡು ಬಂದು ಮಡಿಕೆಗೆ ಹಾಕುತ್ತದೆ. ಮಡಿಕೆಯಲ್ಲಿದ್ದ ನೀರು ಮೇಲೆ ಬರುತ್ತದೆ. ಕೊಕ್ಕಿನಿಂದ ಆ ನೀರನ್ನು ಹೀರಿ ತನ್ನ ಬಾಯಾರಿಕೆಯನ್ನು ನೀಗಿಸಿಕೊಳ್ಳುತ್ತದೆ. ಇಂತದೊಂದು ಕತೆಯಿತ್ತು. ಈ ಕತೆ ಕಲ್ಪನೆಯದ್ದೇ ಇರಬಹುದು. ಆದರೂ ನಮ್ಮ ಕಲ್ಪನೆಗೂ ಮೀರಿ ಪ್ರಾಣಿಲೋಕ ತನ್ನ ಮಿತಿಯಲ್ಲಿ ಬುದ್ಧಿವಂತಿಕೆ ತೋರುತ್ತವೆ. ಈಗೀಗ ಕಾರ್ಪೋರೇಟ್ ವಲಯದಲ್ಲಿ ಮ್ಯಾನೇಜ್‍ಮೆಂಟಿನದ್ದೇ ಸವಾಲಾಗಿದೆ. ಒಂದು ಕಂಪನಿಯನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗುವುದು ಪೈಪೋಟಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಅಜ್ಜೀಮನೆ ಗಣೇಶ್, ನಗೆಮಲ್ಲಿಗೆ, ಕಮಿ (ಪುಟ್ಟಕ್ಕ)

ದಿಬ್ಬಣದ ಸೂತಕ ಸೇರನೊದೆಯುವ ಹೊತ್ತಲ್ಲಿ ಹೊಸ್ತಿಲಲ್ಲೇ ಸತ್ತು ಬಿದ್ದಿತ್ತು.. ಸುಡುವ ಮನೆ ಹುಡುಗನಿಗೆ ಹೂಳುವ ವಂಶದ ಹೆಣ್ಣನು ಬೆಸದಿದ್ದ ಪ್ರೇಮ.. ಸಂಭ್ರಮ ಸರಿದಲ್ಲೀಗ ಸೂತಕ ಹೊಕ್ಕಿದೆ, ಮೌನ ಮಿಕ್ಕಿದೆ, ಅನುಕಂಪವೂ ಸಾಕಷ್ಟಿದೆ ದುಃಖವೊಂದೇ ಕಾಣುತ್ತಿಲ್ಲ.. ಅಂಗಳದಿ ಸೌದೆ ಸುಟ್ಟು ಚಪ್ಪರದ ಗಳಕಿತ್ತು ಚಟ್ಟಕ್ಕಿಟ್ಟು ತೋರಣವ ತಳದಿ ತುಂಬಿಟ್ಟು ಅಳುವವರ ಕರೆಸಿ ಡಂಕನಕ ಹಾಡಿತು ಬ್ಯಾಂಡ್ಸೆಟ್ಟು.. ಹೂವಿನ ಖರ್ಚಿಲ್ಲ, ಮೈಲಿಗೆಯ ಹಂಗಿಲ್ಲ ಬರುವವರಿಲ್ಲ,ಬಂಧುಗಳ್ಯಾರಿಲ್ಲ ಏನು ಬಂತು ಫಲ ಸಂಜಿಯೊಳಗೆಲ್ಲಾ, ಮುಗಿವ ಲಕ್ಷಣವಿಲ್ಲ ಹೊತ್ತು ಮೀರಿದೆ ಹೊರಡಬೇಕಿದೆ ಮೆರವಣಿಗೆ ಅರಸುತಿಹರಿನ್ನೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವೈರಸ್ಸಿಲ್ಲದ ಲೋಕದಲ್ಲಿ: ಪ್ರಶಸ್ತಿ

ಏ ನನ್ನ ಕಂಪ್ಯೂಟರ್ ಸಿಕ್ಕಾಪಟ್ಟೆ ನಿಧಾನವಾಗ್ಬಿಟ್ಟಿದೆ, ಒಂದು ಫೋಲ್ಡರ್ ತೆರೆಯೋಕೆ ೨-೩ ನಿಮಿಷ ಬೇಕು. ಅದೆಂತದೋ ವೈರಸ್ ಬಂದು ಕೂತ್ಬಿಟ್ಟಿದೆ ಕಣೋ ಅಂತಿದ್ದ ಫ್ರೆಂಡು.ಹೂಂ, ಇವ ಯಾವುದೇ ಜಾಲತಾಣ ತೆರೆದ್ರೂ ಅದೆಂತದೋ ಜಾಹೀರಾತು ಬಂದು ಕುಣ್ಯತ್ತೆ ಮಾರಾಯ. ವೈರಸ್ಸು, ಟ್ರೋಜನ್ನು, ಮಾಲ್ವೇರು.. ಇನ್ನೆಂತೆಂತ ಹಾಳು ಮೂಳು ಬಂದು ಕೂತಿದ್ಯೋ ಇದ್ರಲ್ಲಿ ಅಂದ ಇನ್ನೊಬ್ಬ.ಈ ವಿಂಡೋಸು, ಇದ್ರ ದುಬಾರಿ ದುಡ್ಡು ಕೊಟ್ರೂ ಕೆಲಸ ಮಾಡದ . ಎಂಥದದು ? ಆಂಟಿ ವೈರಸ್ಸಾ ? ಅದ್ನ ಹಾಕೂ ಈ ಕತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವರದಕ್ಷಿಣೆ ಎಂಬ ಉರುಳು: ಲಾವಣ್ಯ ಆರ್.

ಹೀಗೆ ವಾರದ ಹಿಂದೆ ನಡೆದ ಘಟನೆ ನನ್ನ ಹೊಸ ಸೀರೆಗೆ ರವಿಕೆ ಹೊಲೆಸಲು ಬೋಟಿಕ್ ಗೆ ಹೋಗಿದ್ದೆ. ಅಲ್ಲಿಗೆ ಒಂದು ನಡುವಯಸ್ಸಿನ ಹುಡುಗಿ ಮತ್ತು ಆಕೆಯ ತಾಯಿ ಬಂದರು. ಆ ಹುಡುಗಿಯ ನಿಶ್ಚಿತಾರ್ಥಕ್ಕೆ ರವಿಕೆ ಹೊಲಿಸಲು ಬಂದವರು ಸುಮಾರು ತರಹದ ಡಿಸೈನ್ಗಳನ್ನೂ ನೋಡಿ ಅವನ್ನು ಆಕೆ ಮದುವೆಯಾಗುವ ಹುಡುಗನಿಗೆ ವಾಟ್ಸ್ ಆಪ್ನಲ್ಲಿ ಫೋಟೋ ಕಳುಹಿಸಿ ಸೆಲೆಕ್ಟ್ ಮಾಡಲು ಹೇಳಿದಳು.  ನಾನೆಂದುಕೊಂಡೆ ಇಬ್ಬರದು ಲವ್ ಮ್ಯಾರೇಜ್ ಇರಬಹುದು ಅದಕ್ಕಾಗಿಯೆಂದು. ಆದರೆ ನಂತರ ಆತ ಅವರಮ್ಮನ ನಂಬರ್ ಕೊಟ್ಟು ಕೇಳಲು ಹೇಳಿದ. ಆಗಲು ನಾನು ಸಾಮಾನ್ಯವಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಲೇಖನಗಳು: ಅಮರ್ ನಾಥ್ ಪಿ.ಸಿ., ಗಣೇಶ್ ಭಟ್

ಎಂದೆಂದೂ ನಿನ್ನವನು………… ಕಣ್ಣು ಬಿಟ್ಟರೂ ನೀನೆ ಕಣ್ಣು ಮುಚ್ಚಿದರೂ ನೀನೆ! ಯಾಕೇ ಹೀಗೆ ಕಾಡ್ತಿದಿಯಾ..? ಅದ್ಯಾವ ಘಳಿಗೇಲಿ ನಿನ್ನ ನೋಡಿದ್ನೋ ನಿನ್ ರೂಪ ನನ್ ಕಣ್ಣಲ್ಲಿ ಹಾಗೆ ತುಂಬಿಕೊಂಡು ಬಿಟ್ಟಿದೆ. ಆಚೆ ಈಚೆ ಸುಳಿತಾನು ಇಲ್ಲ ಕಣೇ. ಒಂಥರಾ ಸನ್ಯಾಸಿ, ಹೆಚ್ಚೆಚ್ಚು ವನವಾಸಿಯಾಗಿದ್ದೆ ನಾನು. ಕಣ್ಣುಗಳಿಗೂ ಕನಸುಗಳಿಗೂ ಎಣ್ಣೆ ಸೀಗೆಕಾಯಿ ಸಂಬಂಧ ಇತ್ತು. ಎದೆ ಗೂಡು ಹಳೆ ಕಾಲದ ಪಾಳು ಮನೆಯಂತಾಗಿತ್ತು. ಮನಸಂತೂ ಬೆಳಕೇ ಬೀಳದಿರೊ ಕಗ್ಗತ್ತಲ ಕಾಡಾಗಿತ್ತು. ಎಲ್ಲೆಂದರಲ್ಲಿ ಅಲೀತಾ, ಕಾರಣಗಳಿಲ್ಲದ ಕೆಲಸ ಮಾಡ್ತಾ, ಕನಸುಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ