ಮೂವರ ಕವನಗಳು: ಜ್ಯೋತಿ ಹೆಗಡೆ, ಬಿದಲೋಟಿ ರಂಗನಾಥ್, ಜಯಶ್ರೀ ದೇಶಪಾಂಡೆ
ಗೆಳತಿ.. ನೀ ಜೊತೆಯಿದ್ದಾಗ ನಾನಾಗಿದ್ದೆ ಕೇವಲ ಪ್ರೇಮಿ. ನೀ ದೂರಾಗಿ ನೆನಪುಗಳನೆಲ್ಲ ಬಿಟ್ಟು ಹೋದ ಮೇಲೆ ನಾನಾಗಿರುವೆ ಪ್ರೀತಿಯ ಆರಾಧಕ! ಅದೆಷ್ಟೋ ರಾತ್ರಿ ಗರ್ಭವ ಸೀಳಿ ಬರುವ ಮಳೆಯಲಿ ನೆನೆ ನೆನೆದು.. ಮಿಂಚು ಹುಳುಗಳ ಬೆಳಕನೇ ಸಾಲಾಗಿ ಪೋಣಿಸಿ ಬರೆದಿರುವೆ!! ರಾತ್ರಿ ಚಿಮಣಿಯ ಮಂದ ಬೆಳಕಲಿ ರಾಡಿಯೆಬ್ಬಿಸಿದ ಮಳೆ ನೀರಲಿ ನಿನ್ನ ಪ್ರತಿಬಿಂಬವ ಹುಡುಕಿರುವೆ.. ಎಲ್ಲ ವ್ಯರ್ಥ,, ನೀನಿಲ್ಲದ ಪ್ರತಿಬಿಂಬ ನಿನ್ನದೇ ನೆನಪಾಗಿ ಕಾಡಿದೆ.. ಎದೆಯಲೆಲ್ಲ ನೆನಪ ನೀರೊಂದೇ ಉಳಿದಿದೆ ಸಾಲು ಕವನವಾಗಿ ನಿನಗಾಗಿ ಕನವರಿಸಿ ಮಲಗಿರುವ … Read more