ಕಗ್ರಾಸ ಹಿಡಿದ ಹೊತ್ತಲ್ಲಿ….: ಮಹಾದೇವ ಹಡಪದ
ನವಿಲುತೀರ್ಥದ ಈ ಮೂಲೆಯ ಹಳ್ಳಿಗೂ ಆ ಧಾರವಾಡ ಶಹರಕ್ಕೂ ಎಲ್ಲಿಂದೆಲ್ಲಿಯ ನಂಟು..? ಅಪೂಟ ಮಳೆ ಹೋದಾಗಿನಿಂದ ಒಂದಳತಿ ನೆತ್ತಿ ಮ್ಯಾಗಳ ಸೂರ್ಯ ಇನ್ನೇನು ಬ್ಲಾಸ್ಟ ಆಗ್ತಾನೇನೋ ಅನ್ನೋ ಹಂಗ ಉರಿತಿದ್ದ. ರಸ್ತಾದ ಮ್ಯಾಲ ಬಿಸಿಲಗುದುರೆ ಅವಸರ ಮಾಡಿ ಓಡುತ್ತಿದ್ದರಿಂದ ಎಳೆಬಿಸಿಲು ರಣಹೊಡೆಧಂಗ ಹೊಡಿತಿತ್ತು. ಬಸ್ಸಿನ ಓಟವೂ, ನಿದ್ದಿಗೆಟ್ಟ ಹಸಿವು ಒಂದನಮೂನಿ ಕಸಾರಕಿ ಬಂದವರಂಗ ಹೊಟ್ಟಿಯಳಗ ಸುಳ್ಳಿ ಸುತ್ತುತ್ತಿದ್ದರಿಂದ – ಇದ್ದಬಿದ್ದದ್ದೆಲ್ಲ ಬಾಯಿಗೆ ಬಂದಂತಾಗಿ ವ್ಯಾ..ಕ ಎಂದು ಕಿಟಕಿಯೊಳಗ ಕಾರಿಕೊಂಡಳು. ಆಗ ಫ್ರೆಶ್ ಆಗಿ ಬಸ್ ಹತ್ತಿದವರ ಗರಿಗರಿ … Read more