ಮಾನಸಿ: ಮಹಾದೇವ ಹಡಪದ

        ಬರೋ…. ಬಂಧು ಬಳಗ ದೊಡ್ಡದು, ಆದ್ದರಿಂದ ಮದುವಿ ಮನಿ ತುಂಬ ಬರೇ ಹೊಯ್ಯ-ನಯ್ಯ ಮಾತುಕತೆ ಜೋರಾಗಿ ನಡೆದಿತ್ತು. ಅತ್ತಿ ಮಾವ ಬಂದ ಮಂದೀನ ಸಂಭಾಳಸಲಿಕ್ಕ ಮತ್ತು ಯಾವ ಅನಾನುಕೂಲ ಆಗಧಂಗ ನೋಡಕೊಳ್ಳಲಿಕ್ಕ ಒದ್ದಾಡೊ ಆ ಹೊತ್ತಿನಾಗ ಮನುಕುಮಾರ ಮತ್ತವನ ವಿಧವೆ ತಾಯಿ ಶಿವಕ್ಕ ಧೂಳಸಂಜಿ ಅಷ್ಟೊತ್ತಿಗೆ ಬಂದ್ರು. ‘ಇದೇನವಾ ಬೆಂಗ್ಳೂರು ಸೇರಿದ್ದ ಮಗರಾಯ ಅಪರೂಪಕ್ಕ ಅತ್ತಿ ಮನೀಗೆ ಬಂದನಲ’್ಲ ಸಣ್ಣತ್ತಿ ಚಾಷ್ಟಿ ಮಾಡಿದಳು. ಹೌದು ನಾಟಕ, ಹಾಡು, ಕುಣಿತ ಅಂತ ತಿರುಗೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿವಿ ಕಚ್ಚುವುದು!: ಎಸ್.ಜಿ.ಶಿವಶಂಕರ್

ಅರೆ..ಹಾಗಂದರೇನು? ಎಂದು ಹುಬ್ಬೇರಿಸಿದ್ದೀರೇನು? ನೀವು ಈ ಮಾತು ಈವರೆಗೆ ಕೇಳಿಯೇ ಇಲ್ಲವೆ?  ‘ಇಲ್ಲ’ ಎಂಬ ನಿಮ್ಮ ಮಾತನ್ನು ನಾನು ಖಂಡಿತಾ ನಂಬುವುದಿಲ್ಲ! ಎಲ್ಲಿಯಾದರೂ ಅಪರೂಪಕ್ಕಾದರೂ ಈ ಮಾತು ನೀವು ಕೇಳಿಯೇ ಇರುತ್ತೀರಿ. ಕೇಳಿದಾಗ ಈ ಪದದ ಅರ್ಥವಾಗಿರಬಹುದು ಇಲ್ಲ ಅರ್ಥವಾಗದೆ ಮರೆತಿರಬಹುದು!  ಕಿವಿಕಚ್ಚುವುದು ಎಂದಾಕ್ಷಣ ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಯ ಕಿವಿಯನ್ನು ಕಚ್ಚುತ್ತಿರುವುದನ್ನು ಕಲ್ಪಿಸಿಕೊಳ್ಳಬೇಡಿ! ಈ ಪದ ನನ್ನ ಕಿವಿಯ ಮೇಲೆ ಬಿದ್ದುದು ಕೇವಲ ವಾರದ ಹಿಂದೆ. ಆಗಿನಿಂದಲೂ ಇದರ ಅರ್ಥ, ವ್ಯಾಪ್ತಿಗಳ ಬಗೆಗೇ ಚಿಂತಿಸುತ್ತಿರುವೆ ಎಂದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗುಜರಿ ಬದುಕಿನ ದಾರಿ: ಅಮರ್ ದೀಪ್ ಪಿ.ಎಸ್.

ಅಲ್ಲಿ ನನಗೊಂದು ಹೊಸ ಬಟ್ಟೆಯಿಂದ ಮುಖ ಒರೆಸಿ ಒರೆಸಿ ಇಕ್ಕಟ್ಟಾದ ಜಾಗದಲ್ಲಿ ಮಲಗಿಸಿದ್ದರು.  ಆ ಜಾಗದಲ್ಲಿ ನನ್ನಂತೆ ಇತರರಿಗೂ ಅದೇ ಸ್ಥಿತಿ.   ಅಲ್ಲಿ ಬಂದು ಹೋಗುವ ನೂರಾರು ಮಂದಿ ನಮ್ಮನ್ನೆಲ್ಲಾ ಮುಟ್ಟಿ, ತಟ್ಟಿ, ತಲೆ ಹಿಡುದು, ತಿರುವ್ಯಾಡಿ, ಕಾಲು ಜಗ್ಗಿ, ಮೈ ಬೆಂಡು ಮಾಡಿ, ನೋಡಿ “ಉಹ್ಞೂಂ. ಬ್ಯಾಡ” ಅನ್ನೋ ಮಂದಿ. ಇನ್ನೂ ಕೆಲವರು “ಇಷ್ಟಕ್ಕಾದ್ರ ಕೊಡು, ಇಲ್ಲಾಂದ್ರ ಬ್ಯಾಡ, ದುಬಾರಿಯಾತು”, ಅನ್ನುವವರು. ಅವರೆಲ್ಲಾ ಬರೀ ಹೆಂಗಸರು.  ಹಿಂಡು ಮಂದಿ ಕಲೆಯುವ ಜಾತ್ರಯೊಳಗೆ ಕೆಟ್ಟ ಬಿಸಿಲಲ್ಲಿ ನನ್ನಂಥವರನ್ನು ಮಲಗಿಸಿ, ಕುಕ್ಕರಗಾಲಲ್ಲಿ ಕುಂದ್ರಿಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಾಣಿಗಳಿಂದ ಪಾಠ ಕಲಿಯುವ ಕಾರ್ಪೋರೇಟ್ ಪ್ರಪಂಚ: ಅಖಿಲೇಶ್ ಚಿಪ್ಪಳಿ

ಬಿರುಬಿಸಿಲಿನ ಈ ದಿನದಲ್ಲಿ ಕಾಗೆಯೊಂದಕ್ಕೆ ಬಾಯಾರಿಕೆಯಾಗಿತ್ತು. ಮಡಿಕೆಯಲ್ಲಿ ಅರ್ಧ ಮಾತ್ರ ನೀರು. ಬುದ್ಧಿವಂತ ಕಾಗೆ ಹತ್ತಿರದಲ್ಲಿದ್ದ ಕಲ್ಲುಗಳನ್ನು ಕೊಕ್ಕಿನಿಂದ ಕಚ್ಚಿಕೊಂಡು ಬಂದು ಮಡಿಕೆಗೆ ಹಾಕುತ್ತದೆ. ಮಡಿಕೆಯಲ್ಲಿದ್ದ ನೀರು ಮೇಲೆ ಬರುತ್ತದೆ. ಕೊಕ್ಕಿನಿಂದ ಆ ನೀರನ್ನು ಹೀರಿ ತನ್ನ ಬಾಯಾರಿಕೆಯನ್ನು ನೀಗಿಸಿಕೊಳ್ಳುತ್ತದೆ. ಇಂತದೊಂದು ಕತೆಯಿತ್ತು. ಈ ಕತೆ ಕಲ್ಪನೆಯದ್ದೇ ಇರಬಹುದು. ಆದರೂ ನಮ್ಮ ಕಲ್ಪನೆಗೂ ಮೀರಿ ಪ್ರಾಣಿಲೋಕ ತನ್ನ ಮಿತಿಯಲ್ಲಿ ಬುದ್ಧಿವಂತಿಕೆ ತೋರುತ್ತವೆ. ಈಗೀಗ ಕಾರ್ಪೋರೇಟ್ ವಲಯದಲ್ಲಿ ಮ್ಯಾನೇಜ್‍ಮೆಂಟಿನದ್ದೇ ಸವಾಲಾಗಿದೆ. ಒಂದು ಕಂಪನಿಯನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗುವುದು ಪೈಪೋಟಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಅಜ್ಜೀಮನೆ ಗಣೇಶ್, ನಗೆಮಲ್ಲಿಗೆ, ಕಮಿ (ಪುಟ್ಟಕ್ಕ)

ದಿಬ್ಬಣದ ಸೂತಕ ಸೇರನೊದೆಯುವ ಹೊತ್ತಲ್ಲಿ ಹೊಸ್ತಿಲಲ್ಲೇ ಸತ್ತು ಬಿದ್ದಿತ್ತು.. ಸುಡುವ ಮನೆ ಹುಡುಗನಿಗೆ ಹೂಳುವ ವಂಶದ ಹೆಣ್ಣನು ಬೆಸದಿದ್ದ ಪ್ರೇಮ.. ಸಂಭ್ರಮ ಸರಿದಲ್ಲೀಗ ಸೂತಕ ಹೊಕ್ಕಿದೆ, ಮೌನ ಮಿಕ್ಕಿದೆ, ಅನುಕಂಪವೂ ಸಾಕಷ್ಟಿದೆ ದುಃಖವೊಂದೇ ಕಾಣುತ್ತಿಲ್ಲ.. ಅಂಗಳದಿ ಸೌದೆ ಸುಟ್ಟು ಚಪ್ಪರದ ಗಳಕಿತ್ತು ಚಟ್ಟಕ್ಕಿಟ್ಟು ತೋರಣವ ತಳದಿ ತುಂಬಿಟ್ಟು ಅಳುವವರ ಕರೆಸಿ ಡಂಕನಕ ಹಾಡಿತು ಬ್ಯಾಂಡ್ಸೆಟ್ಟು.. ಹೂವಿನ ಖರ್ಚಿಲ್ಲ, ಮೈಲಿಗೆಯ ಹಂಗಿಲ್ಲ ಬರುವವರಿಲ್ಲ,ಬಂಧುಗಳ್ಯಾರಿಲ್ಲ ಏನು ಬಂತು ಫಲ ಸಂಜಿಯೊಳಗೆಲ್ಲಾ, ಮುಗಿವ ಲಕ್ಷಣವಿಲ್ಲ ಹೊತ್ತು ಮೀರಿದೆ ಹೊರಡಬೇಕಿದೆ ಮೆರವಣಿಗೆ ಅರಸುತಿಹರಿನ್ನೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವೈರಸ್ಸಿಲ್ಲದ ಲೋಕದಲ್ಲಿ: ಪ್ರಶಸ್ತಿ

ಏ ನನ್ನ ಕಂಪ್ಯೂಟರ್ ಸಿಕ್ಕಾಪಟ್ಟೆ ನಿಧಾನವಾಗ್ಬಿಟ್ಟಿದೆ, ಒಂದು ಫೋಲ್ಡರ್ ತೆರೆಯೋಕೆ ೨-೩ ನಿಮಿಷ ಬೇಕು. ಅದೆಂತದೋ ವೈರಸ್ ಬಂದು ಕೂತ್ಬಿಟ್ಟಿದೆ ಕಣೋ ಅಂತಿದ್ದ ಫ್ರೆಂಡು.ಹೂಂ, ಇವ ಯಾವುದೇ ಜಾಲತಾಣ ತೆರೆದ್ರೂ ಅದೆಂತದೋ ಜಾಹೀರಾತು ಬಂದು ಕುಣ್ಯತ್ತೆ ಮಾರಾಯ. ವೈರಸ್ಸು, ಟ್ರೋಜನ್ನು, ಮಾಲ್ವೇರು.. ಇನ್ನೆಂತೆಂತ ಹಾಳು ಮೂಳು ಬಂದು ಕೂತಿದ್ಯೋ ಇದ್ರಲ್ಲಿ ಅಂದ ಇನ್ನೊಬ್ಬ.ಈ ವಿಂಡೋಸು, ಇದ್ರ ದುಬಾರಿ ದುಡ್ಡು ಕೊಟ್ರೂ ಕೆಲಸ ಮಾಡದ . ಎಂಥದದು ? ಆಂಟಿ ವೈರಸ್ಸಾ ? ಅದ್ನ ಹಾಕೂ ಈ ಕತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವರದಕ್ಷಿಣೆ ಎಂಬ ಉರುಳು: ಲಾವಣ್ಯ ಆರ್.

ಹೀಗೆ ವಾರದ ಹಿಂದೆ ನಡೆದ ಘಟನೆ ನನ್ನ ಹೊಸ ಸೀರೆಗೆ ರವಿಕೆ ಹೊಲೆಸಲು ಬೋಟಿಕ್ ಗೆ ಹೋಗಿದ್ದೆ. ಅಲ್ಲಿಗೆ ಒಂದು ನಡುವಯಸ್ಸಿನ ಹುಡುಗಿ ಮತ್ತು ಆಕೆಯ ತಾಯಿ ಬಂದರು. ಆ ಹುಡುಗಿಯ ನಿಶ್ಚಿತಾರ್ಥಕ್ಕೆ ರವಿಕೆ ಹೊಲಿಸಲು ಬಂದವರು ಸುಮಾರು ತರಹದ ಡಿಸೈನ್ಗಳನ್ನೂ ನೋಡಿ ಅವನ್ನು ಆಕೆ ಮದುವೆಯಾಗುವ ಹುಡುಗನಿಗೆ ವಾಟ್ಸ್ ಆಪ್ನಲ್ಲಿ ಫೋಟೋ ಕಳುಹಿಸಿ ಸೆಲೆಕ್ಟ್ ಮಾಡಲು ಹೇಳಿದಳು.  ನಾನೆಂದುಕೊಂಡೆ ಇಬ್ಬರದು ಲವ್ ಮ್ಯಾರೇಜ್ ಇರಬಹುದು ಅದಕ್ಕಾಗಿಯೆಂದು. ಆದರೆ ನಂತರ ಆತ ಅವರಮ್ಮನ ನಂಬರ್ ಕೊಟ್ಟು ಕೇಳಲು ಹೇಳಿದ. ಆಗಲು ನಾನು ಸಾಮಾನ್ಯವಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಲೇಖನಗಳು: ಅಮರ್ ನಾಥ್ ಪಿ.ಸಿ., ಗಣೇಶ್ ಭಟ್

ಎಂದೆಂದೂ ನಿನ್ನವನು………… ಕಣ್ಣು ಬಿಟ್ಟರೂ ನೀನೆ ಕಣ್ಣು ಮುಚ್ಚಿದರೂ ನೀನೆ! ಯಾಕೇ ಹೀಗೆ ಕಾಡ್ತಿದಿಯಾ..? ಅದ್ಯಾವ ಘಳಿಗೇಲಿ ನಿನ್ನ ನೋಡಿದ್ನೋ ನಿನ್ ರೂಪ ನನ್ ಕಣ್ಣಲ್ಲಿ ಹಾಗೆ ತುಂಬಿಕೊಂಡು ಬಿಟ್ಟಿದೆ. ಆಚೆ ಈಚೆ ಸುಳಿತಾನು ಇಲ್ಲ ಕಣೇ. ಒಂಥರಾ ಸನ್ಯಾಸಿ, ಹೆಚ್ಚೆಚ್ಚು ವನವಾಸಿಯಾಗಿದ್ದೆ ನಾನು. ಕಣ್ಣುಗಳಿಗೂ ಕನಸುಗಳಿಗೂ ಎಣ್ಣೆ ಸೀಗೆಕಾಯಿ ಸಂಬಂಧ ಇತ್ತು. ಎದೆ ಗೂಡು ಹಳೆ ಕಾಲದ ಪಾಳು ಮನೆಯಂತಾಗಿತ್ತು. ಮನಸಂತೂ ಬೆಳಕೇ ಬೀಳದಿರೊ ಕಗ್ಗತ್ತಲ ಕಾಡಾಗಿತ್ತು. ಎಲ್ಲೆಂದರಲ್ಲಿ ಅಲೀತಾ, ಕಾರಣಗಳಿಲ್ಲದ ಕೆಲಸ ಮಾಡ್ತಾ, ಕನಸುಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಝೆನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಿನ್ನ ಬಟ್ಟಲನ್ನು ತೊಳೆ ಹೊಸದಾಗಿ ಸಂನ್ಯಾಸತ್ವ ಸ್ವೀಕರಿಸಿದವನೊಬ್ಬ ಗುರು ಜೋಶುವಿನ ಬಳಿಗೆ ಬಂದು ಕೇಳಿದ, “ನಾನು ಈಗ ತಾನೇ ಈ ಆಶ್ರಮಕ್ಕೆ ಸೇರಿದ್ದೇನೆ. ಝೆನ್‌ನ ಮೊದಲನೇ ತತ್ವವನ್ನು ಕಲಿಯಲು ನಾನು ಕಾತುರನಾಗಿದ್ದೇನೆ.” ಜೋಶು ಕೇಳಿದ, “ನಿನ್ನ ಊಟವಾಯಿತೇ?”  ನವಶಿಷ್ಯ ಉತ್ತರಿಸಿದ, “ನನ್ನ ಊಟವಾಯಿತು.” ಜೋಶು ಹೇಳಿದ, “ಸರಿ ಹಾಗದರೆ, ಈಗ ನಿನ್ನ ಬಟ್ಟಲನ್ನು ತೊಳೆ.” ***** ೨. ದಣಿದಾಗ ವಿದ್ಯಾರ್ಥಿಯೊಬ್ಬ ಗುರುವನ್ನು ಕೇಳಿದ, “ಗುರುಗಳೇ, ನಿಜವಾದ ಅರಿವು ಅಂದರೇನು?” ಗುರುಗಳು ಉತ್ತರಿಸಿದರು, “ಹಸಿವಾದಾಗ ಊಟ ಮಾಡು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೈನ್ ರೋಡ್ನಲ್ಲೊಂದು ಮನೆ ಮಾಡಿ..!: ಎಸ್.ಜಿ.ಶಿವಶಂಕರ್

"ಏ..ಏ…" ನಾನು ಕೂಗುತ್ತಲೇ ಇದ್ದೆ! ನನ್ನ ಮಾತಿಗೆ ಕ್ಯಾರೇ ಅನ್ನದೆ, ಹಿಂದಿನ ಮನೆಯ ಕಾಂಪೌಂಡಿನಿಂದ ಕಸ ತುಂಬಿದ ಪ್ಲಾಸ್ಟಿಕ್ ಕವರು ದೊಪ್ಪನೆ ಖಾಲಿ ಸೈಟಿಗೆ ಬಿತ್ತು! ಅದರಿಂದ ನಿಮಗೇನು ತೊಂದರೆ? ಎನ್ನುತ್ತೀರಾ? ಆ ಖಾಲಿ ಸೈಟು ಪಕ್ಕದ್ದೇ ನನ್ನ ಮನೆ! ಹಿಂದಿನ ಮನೆಯವರು ಪ್ರತಿ ದಿನ ಹೀಗೆ ಫಾಸ್ಟ್ ಬೌಲರುಗಳತೆ ದಿನವೂ ಎಸೆಯುತ್ತಿದ್ದ ಕಸ ರಾಶಿಯಾಗಿತ್ತು! ಅದು ಹರಡಿದ್ದ ಸೈಟಿನಲ್ಲ್ಲಿ ತಿಪ್ಪೆ   ಸೃಷ್ಟಿಯಾಗಿತ್ತು! ದುರಾದೃಷ್ಟಕ್ಕೆ ನನ್ನ ಮನೆಯ ಎರಡು ಪಕ್ಕದ ಸೈಟುಗಳು ಖಾಲಿಯೇ! ಎಡ ಪಕ್ಕದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾನ್ ಎಂಬ ಬಿರುಗಾಳಿಯ ಮುನ್ಸೂಚನೆ…: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಜಾನ್ ಆಯೋಜಿಸಿದ್ದ ಪಾರ್ಟಿ ಮುಗಿಸಿ ಮನೆಗೆ ಬಂದ ವೆಂಕಣ್ಣನ ಮುಖ ತುಂಬಾ ಚಿಂತೆಯಲ್ಲಿದ್ದಂತೆ ಕಂಡು ಬಂದದ್ದರಿಂದ ಜಾನು ಗೆ ಕಳವಳವಾಯಿತು.  “ಯಾಕ್ರೀ ಪಾರ್ಟಿಯೊಳಗ ಯಾರರೆ ಏನರೆ ಅಂದರೋ ಏನು?” ಅಂತ ಹತ್ತಿರಕ್ಕೆ ಹೋಗಿ ವಿಚಾರಿಸಿದಳು. ಹಾಗೆ ಹತ್ತಿರ ಹೋಗಿದ್ದಕ್ಕೆ ಇನ್ನೊಂದು ಕಾರಣವೂ ಇತ್ತು. ಗಂಡ ವಿದೇಶಕ್ಕೆ ಬಂದು ಅವರ ತರಹವೇ ಪಾರ್ಟಿಲಿ ಗುಂಡು ಹಾಕೋಕೂ ಶುರು ಹಚ್ಚಿಕೊಂಡನೋ ಹೇಗೆ ಎಂಬ ಪರೀಕ್ಷೆ ಅದಾಗಿತ್ತು. “ಯಾರೇನ್ ಅಂದ್ರೂ ನಾ ತಲಿ ಕೆಡಿಸ್ಕೊಳೋದಿಲ್ಲ ಬಿಡು. ಆದ್ರ ಆ ಜೇ.ಸಿ.ಬಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಮೂ..ಊ ..ಊ..: ಅನಿತಾ ನರೇಶ್ ಮಂಚಿ

ಕಾಮೂ..ಊ ..ಊ.. ನನ್ನನ್ಯಾರು ಈ ರೀತಿ ಹೆಸರು ಹಿಡಿದು ಕರೆಯುವವರು ಎಂದು ಸಿಟ್ಟಿನಲ್ಲೇ ಒಳಮನೆಯಿಂದ ಸೌಟುಧಾರಿಣಿಯಾಗಿಯೇ ಹೊರ ಬಂದಳು ಕಾಮಾಕ್ಷಮ್ಮ.. ಹೊರ ಬಾಗಿಲಲ್ಲಿ ವರದರಾಜ ರಾಯರು ದೊಡ್ಡ ಹೂವಿನ ಹಾರ ಹಾಕಿಸಿಕೊಂಡು ಒಂದು ಕೈಯಲ್ಲಿ  ಹೂವಿನ ಬುಕೆ,   ಹೆಗಲ ಮೇಲೆ ಶಾಲು, ಪ್ಲಾಸ್ಟಿಕ್ ಚೀಲದ ತುಂಬಾ ಹಣ್ಣುಗಳು ಮತ್ತು  ಬಣ್ಣದ ಕಾಗದದಿಂದ ಸುತ್ತಿದ್ದ ದೊಡ್ಡದೊಂದು ಡಬ್ಬ ಹಿಡಿದು ನಿಂತಿದ್ದರು. ಯಾಕ್ರೀ ಏನಾಯ್ತು? ಈ ಅವತಾರದಲ್ಯಾಕೆ ಈ ಹೊತ್ತಲ್ಲಿ ಮನೆಗೆ ಬಂದಿರಿ? ಇವತ್ತು ಆಫೀಸ್ ಇಲ್ವಾ ಎಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಡಹಾದಿ: ಮಹಾದೇವ ಹಡಪದ

ಆಷಾಢದ ಒಂದು ದಿನ ಹೊರಡಲು ನಿರ್ಧರಿಸಿ ಕೌದಿಯೊಳಗೆ ಮುಖವಿಟ್ಟು ಮಲಗಿದ. ಬಣ್ಣ-ಬಣ್ಣದ ಚೌಕಡಿಯೊಳಗೆ ಚಂದಮಾಮನ ಚಿತ್ರದಂತೆ ಗುಂಗುರು ಗುಂಗುರವಾಗಿ ನೂರಾರು ಆಲೋಚನೆಗಳು. ಸಗಣಿ ಸಾರಿಸಿದ್ದ ತಂವಟು ವಾಸನೆಯ ಕೋಣೆಯೊಳಗೆ ಬೀಡಿ ತುಂಡುಗಳೇ ನೆಲಹಾಸಿಗೆ. ಗುದ್ದು ಮುಚ್ಚಿದಷ್ಟು ನೆಲಗೆಬರಿ ತೂತು ಮಾಡುವ ಇಲಿಗಳು ಹಾಡಹಗಲಲ್ಲಿ ನಿರ್ಭಿಡೆಯಿಂದ ಓಡಾಡುತ್ತಲಿದ್ದವು. ಸತತ ಒಂಭತ್ತು ಸಲ ಪ್ರಯತ್ನಿಸಿ ಮೇಲೇರಿದ್ದ ಮಹ್ಮದನ ಕಾಲದ ಜೇಡ, ಜಂತಿ ತುಂಬೆಲ್ಲ ತನ್ನ ಹರಕು-ಮುರುಕು ಸಂಸ್ಥಾನಗಳ ಬಲೆ ಹೆಣೆದಿತ್ತು. ಹೂಸದಾಗಿ ಬಾಡಿಗೆಗೆ ಬಂದಾಗ ಸುಣ್ಣದ ಗೋಡೆಗೆ ಹಸಿರು ಡಿಸ್ಟೆಂಪರ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೊಬೈಲ್ ಫ್ಯಾಷನ್ನೋ ಕಾಡೋ ರೇಡಿಯೇಷನ್ನೋ ?: ಪ್ರಶಸ್ತಿ

  ಏ ಈ ಮೊಬೈಲ್ ತಗಳನ ಕಣೋ. ೨ ಜಿಬಿ ರ್ಯಾಮು,೮ ಎಂ.ಪಿ ಕ್ಯಾಮು, ಆಂಡ್ರಾಯ್ಡು ಇದೆ. ಇನ್ನೇನ್ ಬೇಕು ? ಹತ್ತು ಸಾವ್ರದ ಒಳಗೆ ಇಷ್ಟೆಲ್ಲಾ ದಕ್ಕೋವಾಗ ಬಿಡೋದ್ಯಾಕೆ ಅಂತ ತಗಂಡವನಿಗೆ ಈಗ ವಾರ ಕಳೆಯೋದ್ರೊಳಗೆ ಫುಲ್ ತಲೆ ನೋವು. ಯಾವಾಗ ನೋಡಿದ್ರೂ ಕಣ್ಣೆಲ್ಲಾ ಕೆಂಪಾಗಿಸಿಕೊಂಡು , ಹಾಸಿ ಕೊಟ್ರೆ ಇಲ್ಲೇ ಮಲಗಿಬಿಡೋಷ್ಟು ಸುಸ್ತಾದವನಂತೆ ಕಾಣ್ತಿದ್ದವನಿಗೆ ಏನಾಯ್ತಪ್ಪ ಅಂದ್ರೆ ಎಲ್ಲಾ ಮೊಬೈಲ್ ಮಾಯೆ. ಮೊಬೈಲ ಹೊರಗಣ ನೋಟಕ್ಕೆ ಮನಸೋತಿದ್ದ ಅವ ಅದರಿಂದಾಗೋ ರೇಡಿಯೇಷನ್ನಿನ ಬಗ್ಗೆ ನೋಡೋಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಅಜ್ಜೀಮನೆ ಗಣೇಶ್, ಯದುನಂದನ್ ಗೌಡ ಎ.ಟಿ., ಮಂಜುನಾಥ ಹನಮಂತಪ್ಪ ವರಗಾ

ಸಮಾದಿಯ ಹೂವು ಚಂದಿರನ ಕೀಟಲೆಗೆ ಮೈಜುಮ್ಮೆಂದು ಕತ್ತಲ ಹಟ್ಟಿಯಲ್ಲಿ ಮೈನೆರೆದಿದ್ದೆ.. ಮುಂಜಾವಿನ ರವಿ ಮೂಡಿ ಇಬ್ಬನಿಯ ನೀರೇರದು ಹಗಲ ಕಡಲಲಿ ತೇಲಿಬಿಡುವವರೆಗೂ ಮೈಮರೆತೇ ಇದ್ದೆ… ಯೌವ್ವನ ಹರಿವ ಹೊಳೆ ಎದೆಯಲಿ ಒಲವ ಮಳೆ ಕುಡಿಯರಳಿ ನಿಂತವಳಿಗೆ ದಿನದ ಬೆಳಕು ಹಿತವಾದ ಹಗೆ.. ಹಾಡ್ತೀರಿ, ಆಡ್ಕೋತೀರಿ ಸ್ವಂತಕ್ಕೆಂದು ಕಿತ್ತಿಡ್ಕೊತೀರಿ ನಾಚಿಕೆಯಿಲ್ಲ.. ಥೂ.! ನನ್ನ ಹಾದಿಗೆ ನಿಮ್ಮದೇನು ಅಣತಿ.? ಯಾಕೀ..ಮೈಮುಟ್ಟೋ ಸಲುಗೆ,.? ದುಂಬಿ, ಜೇನು, ಚಿಟ್ಟೆ ಮತ್ತು ನೀವು, ಮೈಪರಚೋ ಕಂಬಳಿ ಹುಳಗಳೆ ಎಲ್ಲಾ… ಬಲವಂತದ ಹಾದರಕೆ ನಿಸರ್ಗ ಸೃಷ್ಟಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೌರಶಕ್ತಿ v/s ಸೀಮೆಎಣ್ಣೆ: ಅಖಿಲೇಶ್ ಚಿಪ್ಪಳಿ

ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ, ಗಂಡ-ಅತ್ತೆ-ಮಾವರಿಂದ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸೊಸೆಯ ಕೊಲೆ. ಕೊಲೆಗಾರರ ಮೇಲೆ ಪೋಲೀಸರು ವರದಕ್ಷಿಣೆ ಕೇಸು ದಾಖಲಿಸಿಕೊಂಡಿದ್ದಾರೆ ಎಂಬಂತಹ ಸುದ್ಧಿಗಳು ಈಗೊಂದು ಹತ್ತು ವರ್ಷಗಳ ಹಿಂದೆ ಮಾಮೂಲಿಯಾಗಿದ್ದವು. ಸೀಮೆಎಣ್ಣೆ ಮಾಫಿಯಾಗಳು ಮಾಡಿದ ಕೊಲೆಗಳು ಲೆಕ್ಕಕ್ಕೆ ಸಿಗುತ್ತಿರಲಿಲ್ಲ. ಸರಕಾರ ಸೀಮೆಎಣ್ಣೆಯನ್ನು ಮುಕ್ತವಾಗಿ ಮಾರುವುದಕ್ಕೆ ನಿಷೇಧ ಹೇರಿದ್ದರಿಂದ ಅಂತೂ ಕೆಲವು ಜೀವಗಳಾದರೂ ಬದುಕಿರಬಹುದು. ಆದರೂ ಉನ್ನತ ಮಟ್ಟದಲ್ಲಿ ಸೀಮೆಎಣ್ಣೆಯ ಬಲುದೊಡ್ಡ ವ್ಯಾಪಾರವಿದೆ. ಹೊರದೇಶಗಳಿಂದ ಬರುವ ಹಡಗಿನ ಪೆಟ್ರೋಲ್ ತುಂಬಿದ ಕಂಟೈನರ್‍ಗಳಿಗೆ ಸೀಮೆಎಣ್ಣೆಯನ್ನು ಮಿಶ್ರಣ ಮಾಫಿಯಾಗಳೂ ಇವತ್ತೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಿಂದಿಗಿ ಭೂತ: ಗುಂಡುರಾವ್ ದೇಸಾಯಿ

ಪದ್ದು ನಿತ್ಯದಂತೆ ವಾಕಿಂಗ್‍ಗೆ ಊರ ಹೊವಲಯದಲ್ಲಿ ಹೋಗಿದ್ದಾಗ ಕಾಲಿಗೆ ಕಲ್ಲುತಾಗಿ ಎಡವಿ ಬಿದ್ದ, ಎಡವಿದ ಸ್ಥಳದಲ್ಲಿ ನೋಡತಾನೆ ಹೊಳೆಯುವ ವಸ್ತುವೊಂದು ಕಾಣಿಸ್ತು.  ಪುರಾತನ ವಸ್ತು ಇರಬಹುದೆಂದು ತೆಗ್ಗು ತೊಡಿ ತೆಗೆದ ಪುಟ್ಟ ಬಿಂದಿಗಿ ತರಹ ಇತ್ತು. ಒಳಗೆ ಏನು ಇರಬಹುದೆಂದು ತೆಗೆದು  ನೋಡಿದ ಬಸ್ ಎಂದು ಹೊಗೆ ಹೊರಗೆ ಬಂದು ದೈತ್ಯಾಕಾರದ ವಿಚಿತ್ರ ಆಕೃತಿ ಕೈಕಟ್ಟಿಕೊಂಡು ದೈನ್ಯತೆಯಿಂದ ‘ಸ್ವಾಮಿ ತಾವು ನನ್ನನ್ನು ಬಂಧ ಮುಕ್ತರನ್ನಾಗಿ ಮಾಡಿದಿರಿ. ನಿಮಗೆ ಏನು ಸಹಾಯ ಬೇಕು ಕೇಳಿ’ ಎಂತು. ಅಲ್ಲಾವುದ್ದೀನನ ಅಧ್ಭುತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಝೆನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಚಹಾ ಕಪ್‌ಗಳು ಸುಝುಕಿ ರೋಶಿಯನ್ನು ವಿದ್ಯಾರ್ಥಿಯೊಬ್ಬ ಕೇಳಿದ, “ಜಪಾನೀಯರು ಸುಲಭವಾಗಿ ಒಡೆದು ಹೋಗುವಷ್ಟು ತೆಳುವಾಗಿಯೂ ನಾಜೂಕಾಗಿಯೂ ಇರುವಂತೆ ತಮ್ಮ ಚಹಾ ಕಪ್‌ಗಳನ್ನೇಕೆ ತಯಾರಿಸುತ್ತಾರೆ?”  ರೋಶಿ ಉತ್ತಿರಿಸಿದರು, “ಅವು ಅತೀ ನಾಜೂಕಾಗಿವೆ ಅನ್ನುವುದು ವಿಷಯವಲ್ಲ. ಅವನ್ನು ಸರಿಯಾಗಿ ಬಳಕೆ ಮಾಡುವುದು ಹೇಗೆಂಬುದು ನಿನಗೆ ತಿಳಿದಿಲ್ಲ ಅನ್ನುವುದು ವಿಷಯ. ನೀನು ಪರಿಸರದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳ ಬೇಕೇ ವಿನಾ ಪರಿಸರ ನಿನ್ನೊಂದಿಗೆ ಅಲ್ಲ.” ***** ೨. ಹಂಗಾಮಿ ಅತಿಥಿ ಖ್ಯಾತ ಆಧ್ಯಾತ್ಮಿಕ ಗುರುವೊಬ್ಬ ರಾಜನ ಅರಮನೆಯ ಮುಂದಿನ ಮಹಾದ್ವಾರದ ಬಳಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಸರಕ್ಕೊಂದು ಬ್ಯಾಸರದ ನೆನಪು: ಮಹಾದೇವ ಹಡಪದ

ಶ್ರಾವಣದ ಜಿಟಿಜಿಟಿ ಮಳೀಗೆ ಧಾರವಾಡದ ಓಣಿಗಳೊಳಗೆ ರಾಡಿ ಹಿಡಿದಿತ್ತು. ಹಿಂಗ ನಿಂತ ಮಳಿ ಹಾಂಗ ಸುಳ್ಳಿ ಸುತಗೊಂಡು ರಪರಪ ಹೊಡಿತಿತ್ತು. ಬರೊ ತಿಂಗಳ ಒಂದನೇ ತಾರೀಖಿಗೆ ಖೋಲಿಯ ಬಾಡಿಗೆ ವಾಯಿದೆ ಮುಗಿಯೋದು ಇದ್ದುದ್ದರಿಂದ ನಾನು ಮತ್ತೊಂದು ಖೋಲಿ ತಪಾಸ ಮಾಡಲೇಬೇಕಿತ್ತು. ಅಗಸಿ ಓಣಿಯ ಕಡೀ ಮನಿ ಇದಾದುದರಿಂದ ಪ್ಯಾಟೀಗೂ ಮನೀಗೂ ಭಾಳ ದೂರ ಆಗ್ತಿತ್ತು. ಆಫಿಸಿನಿಂದ ಮಧ್ಯಾಹ್ನದ ಆಸರ-ಬ್ಯಾಸರಾ ಕಳಿಲಿಕ್ಕ ಮನಿಗೆ ಹೋಗಬೇಕಂದ್ರೂ ಅಡ್ಯಾಡೋದು ದೊಡ್ಡ ತ್ರಾಸ ಆಗತಿತ್ತು. ಹಂಗಾಗಿ ಎನ್.ಟಿ.ಟಿ,ಎಫ್, ಸಂಗಮ ಟಾಕೀಜ್ ಸುತ್ತಹರದು ಖೋಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬುಡ್ಡಿ ದೀಪ: ಪ್ರಶಸ್ತಿ ಪಿ.

ವಿಭಿನ್ನ ಧೃವಗಳಂತೆ ಭಿನ್ನವಾಗಿರುತಿತ್ತು ಆ ಕೊಳ್ಳ ಹಗಲಿರುಳುಗಳ ಹೊತ್ತಿನಲ್ಲಿ. ಬೆಳಗಿನಲ್ಲಿ ಬಿಡುವಿಲ್ಲದಷ್ಟು ಚಟುವಟಿಕೆಯ ಚಿಲಿಪಿಲಿಯಾದರೆ ಸಂಜೆಯೆಂದರದು  ಕತ್ತಲ ತವರು . ಕಪ್ಪೆಗಳ ವಟರುವಿಕೆ, ಝೀರುಂಡೆಗಳ ಝೀಂಕಾರವ ಬಿಟ್ಟರೆ ಕೊಳ್ಳದೆಲ್ಲೆಡೆ ಸ್ಮಶಾನ ಮೌನ. ಮನೆಗಳ ಮಧ್ಯದಲ್ಲಿನ ಬುಡ್ಡಿದೀಪಗಳ ಬೆಳಕು ಹಂಚ ಸಂದಿಯಿಂದ ಹೊರಬರಲೋ ಬೇಡವೋ ಎಂಬಂತೆ ಅಲ್ಲಿಲ್ಲಿ ಹಣಿಕಿದ್ದು ಬಿಟ್ಟರೆ ಬೇರೆಲ್ಲೆಡೆ ಕತ್ತಲ ಸಾಮ್ರಾಜ್ಯ. ಚಂದ್ರ ಮೋಡಗಳ ಮರೆಯಿಂದ ಹೊರಬಂದು ಕರುಣೆ ತೋರಿ ಊರಿಗೊಂದಿಷ್ಟು ಬೆಳಗ ತೋರಿದರೆ ರಾತ್ರಿಯಲ್ಲಿ ಬೆಳಕೇ ಹೊರತು ಬೇರೇನೂ ಬೆಳಕಿಲ್ಲವಲ್ಲಿ. ಮನೆಯೊಳಗೆ ಬುಡ್ಡಿದೀಪ, ಲಾಂದ್ರಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಡಿ.ವಿ.ಪಿ., ಉರ್ಬಾನ್ ಡಿಸೋಜ, ಅನುರಾಧಾ ಪಿ. ಎಸ್.

ಹೀಗೊಂದು ಹಾದಿ.!! ಬಿಮ್ಮನೆ ಧ್ಯಾನಸ್ಥ ಭಂಗಿಯಲ್ಲಿ ಹರವಿಕೊಂಡ ಹಾದಿ., ಅದೆಷ್ಟೋ ಚೈತ್ರಗಳ  ಹೂ ಅರಳುವಿಕೆಯನ್ನು ಕಂಡಿದೆಯಂತೆ. ಮುಳ್ಳುಗಳ ಸೋಕಿ ಸುರಿದ ನೆತ್ತರ ಪಸೆಯನ್ನು ಇಂಗಿಸಿಕೊಂಡಿದೆಯಂತೆ. ಹಾದಿ ಮೀರಿ ಬಂದವರೆಷ್ಟೋ ತಾವಾಗೇ ಉಳಿಯದೇ ಮಾರ್ಪಾಡಾಗಿದ್ದಾರೆ ಎನ್ನುವ ವರ್ತಮಾನ.!! ಮೌನವನ್ನೇ ಮೈಮೇಲೇರಿಕೊಂಡಂತೆ ನಿರ್ಲಿಪ್ತವಾಗಿ ಮಲಗಿದೆ ಹಾದಿ ಬದಲಾವಣೆಗಳಿಗೆ ಸಾಕ್ಷಿಯಾಗಿ.!!  ಉಬುಕಿ ಬಂದ ಹಸಿವ ನುಂಗಿ ಬಸವಳಿದವರೆಷ್ಟೋ ಹಾದಿಯ ಕ್ರಮಿಸಿ ಬಂದು ನೋಡಿದರೆ, ಹಸಿವೇ ರಾಗವಾಗಿದೆಯಂತೆ.!! ಅಳಲುಗಳೊಳಗೆ ತಾ ಮುಳುಗಿ ನಿಶ್ಚಲ ಗೋಡೆಗೊರಗಿ ಬಿಟ್ಟ ನಿಟ್ಟುಸಿರು, ಹಾದಿಯ ಕ್ರಮಿಸಿದೊಡನೆ ಕೊಳಲಾಗಿದೆಯಂತೆ.!! ಯುದ್ಧ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಲೆಯ ಬೀದಿಯಲ್ಲೊಂದು ಹುಡುಗಾಟದ ಹುಡುಕಾಟ: ಭಾಗ್ಯಾ ಭಟ್.

  ಹಸಿರ ನಾಡಲ್ಲಿ, ಕಾಫೀ ಘಮದಲ್ಲಿ, ಸುರಿವ ತುಂತುರು ಮಳೆಯಲ್ಲಿ, ಬೀಳೋ ಮಂಜು ಹನಿಗಳ ಜೊತೆ ಆಟವಾಡೋ ತವಕದಲ್ಲಿ. ಎಲ್ಲವೂ ಇದೆ ಈ ಊರಲ್ಲಿ. ಖುಷಿಯಾದಾಗ ಕುಣಿಯೋಕೆ, ಬೇಜಾರಾದಾಗ ಸುಮ್ಮನೇ ಕೂರೋಕೆ, ಪ್ರಶಾಂತವಾಗಿ ಮನದೊಟ್ಟಿಗೆ ಮಾತಾಡೋಕೆ, ವಾರಾಂತ್ಯಕ್ಕೊಂದು ಚಂದದ ಅಪ್ಪುಗೆಯ ವಿದಾಯ ಹೇಳೋಕೆ, ಸ್ನೇಹಿತರ ಜೊತೆ ಮಸ್ತಿ ಮಾಡೋಕೆ. ..ಎಲ್ಲಾ ಭಾವಗಳಿಗೂ ಸಾಥ್ ನೀಡೋಕೆ ಬೇರೆ ಬೇರೆಯದೇ ಸ್ಥಳಗಳಿವೆ ಇಲ್ಲಿ ಎಲ್ಲಾ ಭಾವಗಳನ್ನೂ ಅದರದರದೇ ರೀತಿ ಜೋಪಾನ ಮಾಡೋಕೆ. ..ಪ್ರಕೃತಿಯ ಜೊತೆಗಿನ ಒಡನಾಡಿಗಳಿಗೆ ತೀರಾ ಖುಷಿ ಆಗೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಸುರು ಮುಕ್ತ ಭಾರತ!?: ಅಖಿಲೇಶ್ ಚಿಪ್ಪಳಿ

ಕುವೆಂಪುರವರ ನಾಡಗೀತೆಯಲ್ಲಿ ಕರ್ನಾಟಕದ ನಿಸರ್ಗ ಸಂಪತ್ತಿನ ಕುರಿತಾದ ಮನದಣಿಸುವ ಸಾಲುಗಳಿವೆ ಹಾಗೆಯೇ  ರಾಷ್ಟ್ರಗೀತೆಯಲ್ಲಿಯೂ ವಿಂಧ್ಯ-ಹಿಮಾಚಲ ಯಮುನಾ-ಗಂಗಾ. . . ಇಡೀ ಭಾರತದ ಎಲ್ಲೆಗಳಲ್ಲಿ ಹಬ್ಬಿರುವ ಹಸುರು ಕಾಡುಗಳ, ನದಿ, ಝರಿಗಳ ವರ್ಣನೆಯಿದೆ. ಇರಲಿ, ಈಗ ಹೇಳ ಹೊರಟಿರುವುದಕ್ಕೂ ಈ ಮೇಲೆ ಹೇಳಿದ್ದಕ್ಕೂ ಸಂಬಂಧವಿರುವುದರಿಂದ ಇಲ್ಲಿ ಉದ್ಧರಿಸಬೇಕಾಯಿತು. ಸಂಸತ್ತಿನ ಹೆಬ್ಬಾಗಿಲಿಗೆ ಹಣೆಯಿಟ್ಟು ನಮಸ್ಕರಿಸಿ ಪ್ರವೇಶ ಮಾಡಿ ವಿಶಿಷ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ ದೇಶದ ಪ್ರಧಾನಿ ಮೋದಿ ಮೊದಲು ಮಾಡಿದ ಕೆಲಸವೆಂದರೆ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸದಸ್ಯರ ಸಂಖ್ಯೆಯನ್ನು 15 … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಝೆನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಆತ್ಮಸಂಯಮ (Self-control) ಇಡೀ ಝೆನ್‌ ದೇವಾಲಯ ಅಲುಗಾಡುವಷ್ಟು ತೀವ್ರತೆಯ ಭೂಕಂಪ ಒಂದು ದಿನ ಆಯಿತು. ಅದರ ಕೆಲವು ಭಾಗಗಳು ಕುಸಿದೂ ಬಿದ್ದವು. ಅನೇಕ ಸನ್ಯಾಸಿಗಳು ಭಯಗ್ರಸ್ತರಾಗಿದ್ದರು. ಭೂಕಂಪನ ನಿಂತಾಗ ಗುರುಗಳು ಹೇಳಿದರು, “ಅಪಾಯ ಕಾಲದಲ್ಲಿ ಝೆನ್ ಮನುಷ್ಯ ಹೇಗೆ ವರ್ತಿಸುತ್ತಾನೆ ಎಂಬುದನ್ನು ನೋಡುವ ಅವಕಾಶ ನಿಮಗೆ ಈಗ ದೊರಕಿತು. ಆತುರದ ವ್ಯವಹಾರಕ್ಕೆ ಎಡೆ ಕೊಡುವ ತೀವ್ರ ಭಯ ನನ್ನನ್ನು ಬಾಧಿಸಲಿಲ್ಲ ಎಂಬುದನ್ನು ನೀವು ಗಮನಿಸಿರಬಹುದು. ದೇವಾಲಯದ ಅತ್ಯಂತ ಗಟ್ಟಿಮುಟ್ಟಾದ ಭಾಗವಾಗಿರುವ ಅಡುಗೆಮನೆಗೆ ನಿಮ್ಮೆಲ್ಲರನ್ನು ನಾನು ಕರೆದೊಯ್ದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೀಗೊಂದು ಧರ್ಮ, ಜಾತಿ: ಪಾರ್ಥಸಾರಥಿ ಎನ್

’ನಿಮ್ಮದು ಯಾವ ಧರ್ಮ? ’  ’…. ಧರ್ಮವೆ?  ಹಿಂದೂ ಇರಬಹುದು’  ಆಕೆ ನನ್ನ ಮುಖವನ್ನು ವಿಚಿತ್ರವಾಗಿ ನೋಡಿದಳು.  ’ಇರಬಹುದು , ಅಂದರೆ ಏನು ಸಾರ್ ಸರಿಯಾಗಿ ಹೇಳಿ’  ಆಕೆಯ ಮುಖದಲ್ಲಿ ಅಸಹನೆ. ’ಸರಿ, ಹಿಂದೂ ಎಂದು ಬರೆದುಕೊಳ್ಳಿ’  ’ಮತ್ತೆ ಜಾತಿ ಯಾವುದು ಸಾರ್, ಅದರಲ್ಲಿ ಪಂಗಡ ಯಾವುದು ತಿಳಿಸಿ’  ’ಜಾತಿಯೆ ? ಯಾವುದೆಂದು ಸರಿಯಾಗಿ ತಿಳಿಯದು. ಪಂಗಡವು ಗೊತ್ತಿಲ್ಲ’  ಆಕೆಗೆ ನನ್ನ ಉತ್ತರದಿಂದ ರೇಗಿಹೋಯಿತು, ಆಕೆಯ ಸಹನೆಯೂ ಮೀರಿಹೋಗಿತ್ತು. ಬಿಸಿಲಿನಲ್ಲಿ ಅಲೆಯುತ್ತ ಮನೆಯಿಂದ ಮನೆಗೆ ಸುತ್ತುತ್ತ ಇದ್ದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚುಟುಕಗಳು: ಮಂಜುನಾಥ ಹನಮಂತಪ್ಪ ವರಗಾ

೧) ನಿನ್ನಷ್ಟು ಸ್ವಾರ್ಥಿಯಲ್ಲ ನೀ ಮುಡಿದ ಮಲ್ಲಿಗೆ! ಸುವಾಸನೆ ಚಲ್ಲುತಿದೆ ನನ್ನೆಡೆಗೆ ಮೆಲ್ಲಗೆ!! ೨) ಮೇಷ್ಟು ಮಾತು! ಮರೆತುಬಿಡು ಎಂದು ಹೇಳಿ  ಹೋದವಳಿಗೇನು ಗೊತ್ತು? ನನಗೆ ನೆನಪಿನ ಶಕ್ತಿ ಜಾಸ್ತಿ ಇದೆ ಎಂದ ನಮ್ಮ ಮೇಷ್ಟ್ರ ಮಾತು!! ೩) ಸಾಂತ್ವನ! ಜೈಲಿಂದ ಬಿಡುಗಡೆಯಾದ ಕಳ್ಳ ರಾಜಕಾರಣಿಗೆ ಊರಿನ ಜನರಿಂದ ಅದ್ಧೂರಿ ಸ್ವಾಗತ ಸನ್ಮಾನ! ದೇಶಕ್ಕಾಗಿ ದುಡಿದು ಮಡಿದ ವೀರಯೋಧನ ಮನೆಯವರಿಗೆ ಸಿಗಲಿಲ್ಲ ಅದೇ ರಾಜಕಾರಣಿಯಿಂದ ಚೂರು ಸಾಂತ್ವನ:-P ೪) ಸೈನಿಕ- ಕೋಟಿ ಜನಗಳ ರಕ್ಷಣೆಯ ದಿಟ್ಟ ನಾಯಕ:-O … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೀರ್ತಿಶೇಷರಾಗಲು ದಾರಿ: ರಾಘವೇಂದ್ರ ಈ. ಹೊರಬೈಲು

ಭಾರತವು ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳ ದೇಶ. ಇವುಗಳಿಂದಾಗಿಯೇ ಪ್ರಪಂಚದಲ್ಲಿ ಒಂದು ವಿಭಿನ್ನ, ವಿಶಿಷ್ಟ ದೇಶವಾಗಿ ಗುರುತಿಸಿಕೊಂಡಿದೆ. ಆಚರಣೆ-ಸಂಪ್ರದಾಯಗಳ ಹೆಸರಿನಲ್ಲಿ ಕೆಲವೇ ಕೆಲವು ಹೀನ ಮತ್ತು ಅಸಹ್ಯಕರವಾದ ಮೂಢನಂಬಿಕೆಗಳಿವೆ. ಉದಾಹರಣೆಗೆ ಯಾರೋ ತಿಂದು ಬಿಟ್ಟಿರುವ ಎಂಜಲು ಎಲೆಗಳ ಮೇಲೆ ಉರುಳು ಸೇವೆ ಮಾಡಿದರೆ ರೋಗ-ರುಜಿನಗಳು ಕಡಿಮೆಯಾಗುತ್ತವೆ ಎಂಬ ನಂಬಿಕೆ ಇರುವ ‘ಮಡೆ ಸ್ನಾನ’ ಮುಂತಾದವು. ಅವುಗಳನ್ನು ಹೊರತುಪಡಿಸಿ ನೋಡಿದರೆ ನಮ್ಮ ದೇಶದ್ದು ಮಹಾನ್ ಶ್ರೀಮಂತ ಸಂಸ್ಕೃತಿ. ಇಂಥ ಸಂಸ್ಕೃತಿಯ ಜೊತೆಗೆ “ಸತ್ತ ಮೇಲೆ ಅಂಗಾಂಗಗಳ ದಾನ” ಎಂಬುದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ