ಸುಮ್ ಸುಮನಾ ಅಂಕಣ

ಮನೆಯೆ ಮೊದಲ ಪಾಠಶಾಲೆ: ಸುಮನ್ ದೇಸಾಯಿ

ಮೊನ್ನೆ ಗದಗ ಜಿಲ್ಲೆಯ ೬ನೇ ಸಾಹಿತ್ಯ ಸಮ್ಮೆಳನಕ್ಕ ಹೋಗಿದ್ದೆ. ಅಲ್ಲೆ ಮಕ್ಕಳ ಕಾವ್ಯವಿಹಾರ ಅನ್ನೊ ಒಂದು ಮಕ್ಕಳ ಕವಿಗೊಷ್ಠಿ ಎರ್ಪಡಿಸಿದ್ರು. ಮಕ್ಕಳು ಏನ ಕವಿತೆ ಬರಿಬಹುದು ಅಂತ ಕೂತುಹಲದಿಂದ ನೋಡ್ಲಿಕತ್ತಿದ್ದೆ. ವೇದಿಕೆ ಮ್ಯಾಲೆ ಒಂದ ಹತ್ತು ಮಕ್ಕಳಿದ್ರು. ಕವಿಗೊಷ್ಠಿ ಶುರುವಾದ ಮ್ಯಾಲೆ ಅ ಮಕ್ಕಳ ಪ್ರತಿಭೆ ನೋಡಿ ಆಶ್ಚರ್ಯ ಅನಿಸ್ತು. ಒಬ್ಬರಕಿಂತಾ ಒಬ್ಬರು ಸುಂದರವಾದ ಕವನಗಳನ್ನ ರಚಿಸಿದ್ರು. ಆ ಕವನಗಳಳೊಗ ಬೆರಗು, ಸೊಗಸು, ಮತ್ತ ಪ್ರಸ್ತುತ ಸಮಾಜದಲ್ಲಿಯ ಸಮಸ್ಯೆಗಳ ನೆರಳಿತ್ತು. ಮಕ್ಕಳ ಈ ಸೂಷ್ಮ ಗ್ರಹಣ ಶಕ್ತಿ […]

ಸುಮ್ ಸುಮನಾ ಅಂಕಣ

ಮರೆಯಾಗುತ್ತಿರುವ ಜಾನಪದ ಸೊಗಡು: ಸುಮನ್ ದೇಸಾಯಿ

  ಇಂದಿನ ದಿವಸಗಳೊಳಗ ನವ್ಯಕಾವ್ಯಗಳ ಆರ್ಭಟಗಳ ಅಡಿಯೊಳಗ ಜಾನಪದ ಕಾವ್ಯಗಳ ಸೊಗಡು ಮರಿಯಾಕ್ಕೊತ ಹೊಂಟದ. ಈ ಜನಪದ ಸಿರಿ ಹೆಚ್ಚಾಗಿ ಹಳ್ಳಿಗೊಳೊಳಗ ನೋಡಲಿಕ್ಕೆ ಸಿಗತದ. ಹಳ್ಳಿಗಳೊಳಗ ಜೀವನ ಶೂರುವಾಗೊದ ಈ ಜನಪದ ಸೊಗಡಿನ ಹಾಡುಗಳಿಂದ. ಹಳ್ಳಿ ಜನರಲ್ಲೆ ಅಕ್ಷರಜ್ಞಾನ ಇಲ್ಲಂದ್ರು ಜೀವನದ ಅನುಭವಗೊಳ ಲಾಲಿತ್ಯವನ್ನ ಪದಕಟ್ಟಿ ಹಾಡುವ ಕಲೆ ಇರ್‍ತದ. "ಮುಂಝಾನೆ ಎದ್ದು ನಾ ಯಾರನ್ನ ನೆನೆಯಲಿ" ಅಂತ ದೈವಿಕ ಭಾವನೆಯಿಂದ ದಿನ ನಿತ್ಯದ ಬದುಕಿನ ಬಂಡಿ ಎಳಿಲಿಕ್ಕೆ ಅನುವಾಗ್ತಾರ. ದೈನಂದಿನ ಕೆಲಸಗಳಿಗೆ ಜಾನಪದದ ಸಾಹಿತ್ಯದ ರೂಪ ಕೊಟ್ಟು […]

ಸುಮ್ ಸುಮನಾ ಅಂಕಣ

ಕಳ್ಳೆ-ಮಳ್ಳೆ ಕಪಾಟ ಮಳ್ಳೆ: ಸುಮನ್ ದೇಸಾಯಿ

ಮನ್ನೆ ರವಿವಾರ ಮಧ್ಯಾನಾ ಉರಿ ಉರಿ ಬಿಸಲ ಝಳಾ ತಡಕೊಳ್ಳಾರ್ದಕ್ಕ ಬಾಗಿಲಿಗೆ ತಲಿಕೊಟ್ಟ ಮಲಕೊಂಡ್ಡಿದ್ದೆ, ಹಿಂಗ ಜಂಪ ಹತ್ತ್ಲಿಕತ್ತಿತ್ತು ಅಷ್ಟರಾಗ ತಂಪಸೂಸ ಗಾಳಿ ಬಿಸಲಿಕತ್ತು. ಕಣ್ಣ ತಗದು ನೋಡೊದ್ರಾಗ ಮಳಿ ಬರೊಹಂಗಾಗಿ ಜೋರ ಮಾಡ ಹಾಕಿತ್ತು. ಇನ್ನೆನು ಹಿತ್ತಲಕ್ಕ ಹೋಗಿ ಒಣಗಿದ್ದ ಅರಬಿ ತಕ್ಕೊಂಡ ಬರೊದ್ರಾಗ ಹನಿ ಹನಿ ಮಳಿ ಶುರು ಆಗೆಬಿಡ್ತು. ನೋಡ್ ನೋಡೊದ್ರಾಗ ದಪ್ಪ ದಪ್ಪ ಹನಿ ಜೊಡಿ ಆಣಿಕಲ್ಲು ಬಿಳಿಕ್ಕತ್ವು.ಕಣ್ಣ ಮುಚ್ಚಿ ಕಣ್ಣ ತಗಿಯೋದ್ರಾಗ ಅಂಗಳದ ತುಂಬ ಬೆಳ್ಳಗ ಮಲ್ಲಿಗಿ ಹೂವಿನ ರಾಶಿ […]

ಸುಮ್ ಸುಮನಾ ಅಂಕಣ

ಜಾಗತಿಕರಣದಲ್ಲಿ ಮಹಿಳೆಯ ಸ್ಥಿತಿ-ಗತಿ: ಸುಮನ್ ದೇಸಾಯಿ

             ಜಾಗತಿಕರಣ ಪ್ರವೇಶಿಸಿದ ಈ ಹೊತ್ತನೊಳಗ ಭಾರತದ ಮಹಿಳೆಯರ ಸ್ಥಿತಿಗತಿಯೊಳಗ  ಇತ್ಯಾತ್ಮಕ ಬದಲಾವಣೆಗಳಾಗ್ಯಾವೆನು ಅನ್ನೊ ಪ್ರಶ್ನೆಗೆ ಸಮರ್ಪಕವಾದ ಉತ್ತರ ಸಿಗೊದೆಯಿಲ್ಲಾ. ಯಾಕಂದ್ರ ಜಾಗತಿಕರಣ ಯಜಮಾನ ಸಂಸ್ಕೃತಿಯನ್ನ ಪೋಷಿಸಲಿಕತ್ತದ. ಗಂಡಸಿಗೆ ಮುಕ್ತವಾದ ವಾತಾವರಣ ಕಲ್ಪಿಸಿಕೊಟ್ಟು, ಹೆಣ್ಣನ್ನ ಮತ್ತದೆ ಹಳೆಯ ಚೌಕಟ್ಟಿನೊಳಗ ಕೂಡಿಸೊ ಪ್ರಯತ್ನ ನಡದದ.  ನಮ್ಮ ದೇಶದ ಬಹಳಷ್ಟು ಕಾನೂನು ಮತ್ತ ಕಾಯಿದೆಗಳು ಶೋಷಿತರ, ಮಹಿಳೆಯರ ಪರವಾಗಿ ಅವ ಆದ್ರ ಅವೆಲ್ಲಾ ಕಾಗದದ ಮ್ಯಾಲಿನ ಹುಲಿಗಳಾಗಿನ ಉಳಕೊಂಡಾವ. ಸಂವಿಧಾನ ಬಂದು ಇಷ್ಟು […]

ಸುಮ್ ಸುಮನಾ ಅಂಕಣ

ಕಾಣುವ ಅನಾಚಾರಕ್ಕೆ, ಕಾಣದ ಅಸಮಂಜಸ ಉಪಮೆಗಳೇಕೆ?: ಸುಮನ್ ದೇಸಾಯಿ

   ಈಗೀಗ ದೇಶದೊಳಗ ಅತ್ಯಾಚಾರದ ಪ್ರಕರಣಗೊಳು ಅತೀ ಸರ್ವೆ ಸಾಮಾನ್ಯ ಅನ್ನೊ ಹಂಗ ನಡಿಲಿಕತ್ತಾವ. ಮನುಷ್ಯನ ಮನಸ್ಥಿತಿ ಎಷ್ಟು ವಿಕೃತಿಗಳ ಕಡೆಗೆ ವಾಲೆದಂದ್ರ ಇವತ್ತ ಸಂಬಂಧಗಳ ಪವಿತ್ರತೆಯನ್ನು ಸುದ್ಧಾ ಮರೆತು ಮನುಷ್ಯ ಮೃಗಗಳಂಗ ವರ್ತಿಸ್ಲಿಕತ್ತಾನ. ಇಂಥಾ ವಿಕೃತ ಮನಸಿಗೆ, ಸಣ್ಣ ಮಕ್ಕಳು, ಅಕ್ಕ ತಂಗಿ, ಕಡಿಕ ತಾ ಹಡದ ಮಗಳು ಅನ್ನೊದನ್ನು ಮರೆತು ಕಾಮಾಂಧ ಆಗ್ಯಾನ. ಗಾಂಧೀ ಅಜ್ಜನ ರಾಮ ರಾಜ್ಯದ ಕನಸು ನೆನಸಾಗೊ ಯಾವ ಲಕ್ಷಣಗಳು ಈ ಯುಗಾಂತ್ಯದ ತನಕಾ ಇಲ್ಲಾ ಅನಿಸ್ತದ.  ರಾಮ ರಾಜ್ಯ […]

ಸುಮ್ ಸುಮನಾ ಅಂಕಣ

ಮಸಣದಲ್ಲಿ ಮಿಲನ: ಸುಮನ್ ದೇಸಾಯಿ

ಫೆಬ್ರುವರಿ ತಿಂಗಳ ಒಂದು ಸಂಜೆ. ಇತ್ಲಾಗ ಬ್ಯಾಸಗಿನು ಅಲ್ಲ, ಅತ್ಲಾಗ ಚಳಿಗಾಲನು ಅಲ್ಲಾ ಅಂಥ ದಿನಗಳವು. ಒಂಥರಾ ನಸುಸೆಖೆ ಬರೆತ ತಂಪಿನ ವಾತಾವರಣ. ಹುಣ್ಣಿವಿ ಇತ್ತಂತ ಕಾಣಸ್ತದ ಸಂಜಿ ಸರಿಧಂಗ ಬೆಳದಿಂಗಳ ಹೂವು ಹಾಸಲಿಕತ್ತಿತ್ತು. ಊರ ಹೊರಗಿನ ಸುಡಗಾಡಿನ್ಯಾಗ ಒಂದ ನಮೂನಿ ಅತೃಪ್ತಭಾವದ ತಂಗಾಳಿಯೊಂದು ಮಂದವಾಗಿ ಬಿಸಲಿಕ್ಕೆ ಶೂರುವಾತು. ಮಸಣದೊಳಗ ಹರಡಿದ್ದ ತರಗೆಲಿಗೊಳು ಹವರಗ ಸರಿದಾಡಲಿಕತ್ವು. ಸೂಂಯ್ಯನ್ನೊ ಸುಳಿಗಾಳಿ ಮಲಗಿದ ಆತ್ಮಗಳನ್ನ ಎಬ್ಬಿಸೊ ಅಲಾರಾಂನಂಗ ಅನಿಸ್ತಿತ್ತು. ಅದಕ್ಕಾಗಿನ ಕಾಯ್ಲಿಕತ್ತಿತ್ತು ಅನ್ನೊಹಂಗ ಸುಡಗಾಡಿನ ನಡುವಿದ್ದ ಸಮಾಧಿಯಿಂದ ಒಂದು ಆಕೃತಿ […]

ಸುಮ್ ಸುಮನಾ ಅಂಕಣ

ಕಾಲೇಜಿನ ಆ ದಿನಗಳು: ಸುಮನ್ ದೇಸಾಯಿ

ನೆನಪುಗಳ ಹಾರದ ಗುಚ್ಛವನ್ನು ಹೇಂಗ ಬಿಡಸಬೇಕೊ ತಿಳಿಯಂಗಿಲ್ಲ,.. ಯಾವ ಎಳಿ ಹಿಡದರು ಇದ ಮೊದಲು ಇದ ಮೊದಲು ಅನಿಸ್ತದ. ಹೀಂಗ ಒಂದ ದಿನಾ ಸಂಜಿ ಮುಂದ ಮನಿ ಹತ್ರ ನ ಇದ್ದ ಪಾರ್ಕಿಗೆ ವಾಕಿಂಗ ಹೋಗಿದ್ದೆ. ನನ್ನ ಮಗ ಮತ್ತು ಮಗಳು ಆಟ ಆಡಲಿಕತ್ತಿದ್ರು, ಸ್ವಲ್ಪ ಹೊತ್ತು ಅವರ ಜೊತಿಗೆ ಆಡಿ ಬಂದು ಅಲ್ಲೇ ಇದ್ದ ಒಂದು ಬೇಂಚ್ ಮ್ಯಾಲೆ ಕುತೆ. ಎಷ್ಟು ಛಂದ ಬಾಲ್ಯ ಅಲ್ಲಾ? ಯಾವ ಕಪಟತನ ಇರಂಗಿಲ್ಲಾ.ಎಷ್ಟ ಹಿತಾ ಇರತದ ಗತಿಸಿಹೊದ ನೆನಪುಗಳನ್ನು […]

ಸುಮ್ ಸುಮನಾ ಅಂಕಣ

ಬಾದಾಮಿಯ ಬನಶಂಕರಿ ಜಾತ್ರಿ ಸಂಭ್ರಮ: ಸುಮನ್ ದೇಸಾಯಿ

      'ಬನದಹುಣ್ಣಿಮಿ’ ಮುಂದ ಬನಶಂಕರಿ ಜಾತ್ರಿ ಭಾಳ ದೊಡ್ಡ ಪ್ರಮಾಣದಾಗ ಆಗತದ, 1 ತಿಂಗಳ ತನಕಾ ಇರ್ತದ,ಎಲ್ಲೆಲ್ಲಿಂದೊ ಜನಾ ಬರ್ತದ,ನೋಡಬೇಕ ಆ ಛಂದಾನ, ಸುತ್ತಮುತ್ತಲ ಹಳ್ಳ್ಯಾಗಿನ ಮಂದಿ ಬಂಡಿ ಕಟಗೊಂಡ ಜಾತ್ರಿ ಮಾಡಲಿಕ್ಕೆ ಬರತಾರ. ಬಂಡಿಯೊಳಗ ವ್ಯವಸ್ಥಾ ಹೆಂಗಿರತದ ಗೊತ್ತೇನ ಈಗಿನ ನಿಮ್ಮ ವಿಮಾನದಾಗ ಹೊದ್ರು ಅದರಷ್ಟ ಆರಾಮ ಅನಸಂಗಿಲ್ಲ, ಬಂಡ್ಯಾಗ ಮೆತ್ತಗ ಹುಲ್ಲ ಹಾಸಿ ಮ್ಯಾಲೆ ಜಮಖಾನಿ ಹಾಸಿ ಕುಡಲಿಕ್ಕೆ ಎಷ್ಟ ಮಸ್ತ ಮೆತ್ತಗ ಹಾಸಿಗಿ ಮಾಡಕೊಂಡಿರತಾರ ಮತ್ತ ಅಡಗಿ ಮಾಡಲಿಕ್ಕೆ ಎನೇನು […]

ಸುಮ್ ಸುಮನಾ ಅಂಕಣ

ಗೊಂಜಾಳ ಮಾರೊ ಹುಡುಗ: ಸುಮನ್ ದೇಸಾಯಿ ಅಂಕಣ

ಎಷ್ಟೊ ವರ್ಷಗಳ ಮ್ಯಾಲೆ ಅಜ್ಜಿ ಊರಿಗೆ ಬಂದಿದ್ದೆ. ಖುಷಿ ಆಗಿತ್ತ ಆಕಿಗೆ ನನ್ನಕಿಂತಾ, ಮರಿಮೊಮ್ಮಕ್ಕಳನ್ನ ನೋಡಿ. ನನ್ನ ಮದವಿ ಆದಮ್ಯಾಲೆ ಬಂದಿದ್ದೇನ ಇಲ್ಲಾ ನಾನು. ಆಡಿಬೆಳೆದ ಊರಿನ ಮಣ್ಣಿನ ವಾಸನಿಗೆ ಮನಸು ಅರಳಿತ್ತು. ನನಗ ಅಜ್ಜಿ ಊರಾಗ ಭಾಳ ಮಂದಿ ಗೇಳತ್ಯಾರ ಇದ್ರು. ಎಷ್ಟು ನಕ್ಕು ನಲಿತಿದ್ವಿ ದಿನಾಪೂರ್ತಿ. ವಾಪಸ್ ಊರಿಗೆ ಹೋಗಬೇಕಾದ್ರ ಮುಂದಿನ ಸರತೆ ಬರೊತನಕಾ ಆಗೊವಷ್ಟು ಖುಷಿಯ ಕ್ಷಣಗಳ ನೆನಪಿನ ದೊಡ್ಡ ಗಂಟನ್ನ ಮನಸಿನ್ಯಾಗ ಹೊತಗೊಂಡ ಹೋಗ್ತಿದ್ದೆ. ಅದನ್ನೆಲ್ಲಾ ಈಗ ನೆನಪ ಮಾಡಕೊಂಡ್ರ ಎಷ್ಟ […]

ಸುಮ್ ಸುಮನಾ ಅಂಕಣ

ಸತ್ತವರ ಬಾಯಾಗ ಮಣ್ಣು-ಇದ್ದವರ ಬಾಯಾಗ ಹೋಳಿಗಿ-ತುಪ್ಪಾ: ಸುಮನ್ ದೇಸಾಯಿ

ಈಗ ಸ್ವಲ್ಪ ದಿವಸದ್ದ ಹಿಂದ ಒಂದರಮ್ಯಾಲೊಂದ ಗಣ್ಯರ ನಿಧನದ ಸುದ್ದಿ ಕೇಳಿದ್ವಿ. ಒಂದ ಘಳಿಗಿ ಹಿಂಗಾಗಬಾರದಿತ್ತು ಅನಿಸಿದ್ರು, ರಜಾ ಸಿಕ್ತಲ್ಲಾ ಅಂತ ಖುಷಿ ಆದವರ ಹೆಚ್ಚು. ಎಲ್ಲಾರು ಸೂಟಿ ಸಿಕ್ಕಿದ್ದಕ್ಕ ಒಂದ ನಮುನಿ ಖುಷಿಯ ಮುಗುಳ್ನಗಿ ಮುಖದಮ್ಯಾಲೆ  ತಂದಕೊಂಡು “ ಅಯ್ಯ ಪಾಪ ಹಿಂಗಾಗಬಾರದಿತ್ತ ” ಅಂತ ಅಂದವರ ಭಾಳ ಮಂದಿ. ಜಗತ್ತು ಎಷ್ಟ ವಿಚಿತ್ರ ಅಲ್ಲಾ? ನಮ್ಮ ಉತ್ತರ ಕರ್ನಾಟಕದ್ದ ಕಡೆ ಒಂದು ಆಡು ಮಾತದ ಎನಂದ್ರ “ ಸತ್ತವರ ಬಾಯಾಗ ಅಷ್ಟ ಮಣ್ಣು, ಉಳಿದವರಿಗೆ […]

ಸುಮ್ ಸುಮನಾ ಅಂಕಣ

ಮರೆಯಾಗುತ್ತಿರುವ ಮದುವೆಮನೆಯ ಸಂಭ್ರಮಗಳು: ಸುಮನ್ ದೇಸಾಯಿ

ಮೊನ್ನೆ ಸಂಜಿಮುಂದ ಮನಿ ಹತ್ರ ಇರೊ ವೇಂಕಪ್ಪನ ಗುಡಿಗೆ ಹೋಗಿದ್ವಿ. ಅಲ್ಲೆ ಇದ್ದ ಕಲ್ಯಾಣಮಂಟಪದಾಗ ಮದುವಿ ಇತ್ತಂತ ಕಾಣಸ್ತದ. ಬ್ಯಾಂಡ ಭಂಜಂತ್ರಿಯವರು ಮಸ್ತ ಯಾವದೊ ಒಂದ ಸಿನೇಮಾ ಹಾಡಿನ ಬಾಜಾ ಬಾರಿಸ್ಲಿಕತ್ತಿದ್ರು. ಈಗೆಲ್ಲಾ ಕಡೆ ಒಂದ ಹೊಸಾ ಪಧ್ಧತಿ ಎದ್ದದ ಎನಂದ್ರ ಈ ಉತ್ತರಭಾರತದ ಕಡೆ ಮದುವಿಗೊಳೊಳನ್ಯಾಗ ಹೆಂಗ ವರನ್ನ ಕುದರಿಮ್ಯಾಲೆ ಕೂಡಿಸಿಕೊಂಢ ಬ್ಯಾಂಡ ಬಾಜಾ ಬಾರಿಸ್ಕೊತ, ಡ್ಯಾನ್ಸ ಮಾಡ್ಕೊತ ಕರ್ಕೊಂಡ ಬರತಾರ ಹಂಗ ಇಲ್ಲೆನು ವೇಂಕಪ್ಪನ ಗುಡಿಯಿಂದ ಕುದರಿಮ್ಯಾಲ ವರನ್ನ ಕುಡಿಸಿ ಬ್ಯಾಂಡ ಬಾಜಾ ಬಾರಿಸ್ಕೋತ,ಸಣ್ಣ […]

ಸುಮ್ ಸುಮನಾ ಅಂಕಣ

ಛೂಕು ಭೂಕು ರೈಲು: ಸುಮನ್ ದೇಸಾಯಿ

ಮಧ್ಯಾಹ್ನ ೧.೩೦ ಆಗಿತ್ತು, ಮಂತ್ರಾಲಯದ ರೇಲ್ವೆ ಸ್ಟೆಷನ್ನ್ಯಾಗ ಗುಲಬರ್ಗಾಕ್ಕ ಹೋಗೊ ಟ್ರೇನಿನ ಸಲುವಾಗಿ ಕಾಯಕೊತ ನಿಂತಿದ್ವಿ. ಮಂತ್ರಾಲಯದಾಗ ರಾಯರ ಸನ್ನಿಧಿಯೊಳಗ ಹೆಂಗ ಮೂರ ದಿನಾ ಕಳದ್ವು ಗೊತ್ತಾಗಲೆಯಿಲ್ಲಾ. ರಾಯರ ಸನ್ನಿಧಿ ಅಂದ್ರ ಅಮ್ಮನ ಮಡಿಲಿನ್ಯಾಗ ಮಲ್ಕೊಂಡಷ್ಟ ಹಿತಾ ಇರತದ.ಮನಸ್ಸು ಪ್ರಶಾಂತ ಇರತದ. ವಾಪಸ ಊರಿಗೆ ಹೋಗ್ಲಿಕ್ಕೆ ಮನಸಾಗಲಾರದ ಒಲ್ಲದ ಮನಿಸಿನಿಂದ ಸ್ಟೇಷನ್ನಿಗೆ ಬಂದ ನಿಂತಿದ್ವಿ. ಮುಂಬೈಕ್ಕ ಹೋಗೊ ಟ್ರೇನ್ ಬಂತು ನಾವು ಲೇಡಿಸ್ ಬೋಗಿಯೊಳಗ ಹತ್ತಿದ್ವಿ. ಬೋಗಿ ಪೂರ್ತಿ ಖಾಲಿನ ಇತ್ತು. ನಮ್ಮ ಫ್ಯಾಮಿಲಿಯವರ ಮಾತ್ರ ಇದ್ವಿ. […]

ಸುಮ್ ಸುಮನಾ ಅಂಕಣ

ಆ ಕಾಲಾ ಹಂಗ ರೀ.. ಈ ಕಾಲಾ ಹಿಂಗ ರೀ.. ಯಾವ ಕಾಲಾ ಛಂದ ರೀ…..?: ಸುಮನ್ ದೇಸಾಯಿ

ಮನ್ನೆ ಮಧ್ಯಾನ್ಹಾ ಆಫೀಸನ್ಯಾಗ ಹಿಂಗ ಸುಮ್ನ ಕೂತಿದ್ವಿ. ಅಂಥಾದ್ದೇನು ಕೆಲಸಾ ಇದ್ದಿದ್ದಿಲ್ಲಾ. ನಮ್ಮ ಜೋಡಿ ಕೆಲಸಾ ಮಾಡೊ ಹುಡಗಿ ಸವಿತಾ ಇಂಟರನೇಟ್ ನ್ಯಾಗ ಇ-ಪೇಪರ ಓದ್ಲಿಕತ್ತಿದ್ಲು. ಹಂಗ ಓದಕೊತ, ” ಮೆಡಮ್ಮ ರಿ ಬಂಗಾರದ ರೇಟ್ ಮೂವತ್ತೆರಡು ಸಾವಿರದಾ ಐದುನೂರಾ ಚಿಲ್ಲರ ಆಗೇತಂತ  ನೋಡ್ರಿ. ಹಿಂಗಾದ್ರ ಎನ ಬಂಗಾರದ ಸಾಮಾನ ಮಾಡಿಸ್ಕೊಳ್ಳಾಕ ಆಕ್ಕೇತರಿ. ಹಿಂದಕಿನ ಮಂದಿ ತಲ್ಯಾಗ ಬಂಗಾರದ ಹೂವಿನ ಚಕ್ಕರ  ಮತ್ತ ಭಂಗಾರದ ಕ್ಯಾದಗಿ, ಹೆರಳಮಾಲಿ ಮಾಡಿಸಿಕೊಂಡ ಹಾಕ್ಕೊತ್ತಿದ್ರಂತ ರಿ, ಈಗ ನಮಗ ಲಗೂಮಾಡಿ ಕಿವ್ಯಾಗ […]

ಸುಮ್ ಸುಮನಾ ಅಂಕಣ

ಪಿನ್ನಿ-ಪಲ್ಲು ಪ್ರಹಸನ: ಸುಮನ್ ದೇಸಾಯಿ ಅಂಕಣ

  ಪಿನ್ನಿ ಮಾಡಿಕೊಟ್ಟ ದಪ್ಪ ದಪ್ಪ ಥಾಲಿಪೆಟ್ಟಿನ ನಾಷ್ಟಾ ಗಡದ್ದಾಗಿ ತಿಂದು ಪೆಪರ್ ಓದಕೊತ ಕುತಿದ್ದಾ ಪಲ್ಲ್ಯಾ (ಪಲ್ಲಣ್ಣ). ಅಲ್ಲೆ ಅವನ ಬಾಜುಕ್ಕ ಪಿನ್ನಿ ಸಾಕಿದ್ದ ನಾಯಿ “ ಬ್ರೌನಿ “ ನು ಕೂತು ತುಕಡಿಸ್ಲಿಕತ್ತಿತ್ತು. ಒಬ್ಬರಿಗೊಂದ ಇನ್ನೊಬ್ಬರಿಗೊಂದ ಎಲ್ಲೆ ಬ್ಯಾರೆ ಬ್ಯಾರೆ ಮಾಡೊದಂತ, ಪಿನ್ನಿ ನಾಯಿಗು ಮತ್ತ ಪಲ್ಲ್ಯಾಗು ಒಂದಸಲಾ ದಪ್ಪ ದಪ್ಪನ್ನು 4 ಥಾಲಿಪೆಟ್ಟ ಮಾಡಿ ತಿನ್ನಿಸಿ ಕೈಬಿಟ್ಟಿದ್ಲು. ಗಡದ್ದ ಹೊಟ್ಟಿ ತುಂಬಿದ್ರಿಂದ ನಾಯಿಗು ಮೈ ವಝ್ಝಾ ಆಗಿ ಅಲ್ಲೆ ಮೆತ್ತನ್ನ ಕಾರ್ಪೇಟ್ ಮ್ಯಾಲೆ […]

ಸುಮ್ ಸುಮನಾ ಅಂಕಣ

ಉಡಪಿ ರಾಯನ್ ಹೋಟೆಲ್: ಸುಮನ್ ದೇಸಾಯಿ ಅಂಕಣ

ಒಂದು ದಿನಾ ಉಡಪಿರಾಯನ ಹೋಟೆಲು ತೆರೆದಿತ್ತ….. ಮಸಾಲಿ ದ್ವಾಸಿ ವಾಸನೆ ನಮ್ಮ ಮೂಗಿಗೆ ಬಡಿತಿತ್ತಾ….. ಖಾರಾ ಚಕ್ಕುಲಿ ಶೇವು ಚಿವಡಾ ಗೆಳತನ ಮಾಡಿದ್ವ… ಬುಟ್ಟ್ಯಾಗಿನ ಉದ್ದಿನವಡಿ ಎದ್ದೆದ್ದ ಬರ್ತಿದ್ವ….. ಅಂಟಿನ ಉಂಡಿ ಶಟಗೊಂಡ ಹೋಗಿ ಡಬ್ಬ್ಯಾಗ ಕೂತಿತ್ತ…….. ಚಹಾ ಕುಡಿದರ ಪಾನಪಟ್ಟಿ ಓಡೊಡಿ ಬರತಿತ್ತ……. ಇದೇಲ್ಲಾ ಆದಮ್ಯಾಲೆ ನಾಲ್ಕ ರೂಪಾಯಿ ಬಿಲ್ಲ ಆಗಿತ್ತ…. ಅದನ್ನ ನೋಡಿ ನನ್ನ ಎದಿ ಝಲ್ಲ ಅಂದಿತ್ತ………….. ಈ ಹಾಡನ ನಮ್ಮ ಅಮ್ಮ ಸಣ್ಣವರಿದ್ದಾಗ ತಮ್ಮ ವಾರಿಗಿ ಗೇಳ್ತ್ಯಾರ ಜೋಡಿ ಹಾಡತಿದ್ರಂತ… ಆವಾಗಿನ್ನು […]

ಸುಮ್ ಸುಮನಾ ಅಂಕಣ

ತೇಲಿದ ಹೆಣ: ಸುಮನ್ ದೇಸಾಯಿ

ಮಧ್ಯಾಹ್ನ ಹನ್ನೆರಡು ಗಂಟೆದ ಹೊತ್ತು, ವೈಶಾಖ ಮಾಸದ ಖಡಕ ಬಿಸಿಲಿನ್ಯಾಗ ನಮ್ಮ ಊರಿನ ಬಸ್ಸಿನ್ಯಾಗ ಕೂತು ಯಾವಾಗ ಊರ ಮುಟ್ಟತೇನೊ ಅಂತ ಚಡಪಡಿಸ್ಕೊತ ಕೂತಿದ್ದೆ. ಮುಂಝಾನೆ ಹತ್ತು ಘಂಟೆ ಆಗಿದ್ರು ಬಿಸಲು ಭಾಳ ಚುರುಕ್ಕ ಇತ್ತು. ಹೌದು ಎಷ್ಟ ವರ್ಷ ಆಗಿಹೊದ್ವು ಹಳ್ಳಿಕಡೆ ಹೋಗಲಾರದ, ಒಂದ ಏಳೆಂಟ ವರ್ಷರ ಆಗಿರಬೇಕು. ಖಿಡಕ್ಯಾಗಿಂದ ಬಿಸಿ ಗಾಳಿ ಒಳಗ ಬಂದು ಮಾರಿಗೆ ಬಡಿಲಿಕತ್ತಿತು, ಮನಸ್ಸು ಹಿಂದಿನ ನೆನಪುಗಳ ಹತ್ರ ಓಡಿ ಓಡಿ ಹೊಂಟಿತ್ತು. ಎಂಥಾ ಆರಾಮದ ದಿನಗೊಳವು. ನನ್ನ ಮದುವಿಯಾದ […]

ಸುಮ್ ಸುಮನಾ ಅಂಕಣ

ಒಲವಿನ ಶಾಪ:ಸುಮನ್ ದೇಸಾಯಿ ಅಂಕಣ

ಮೂರುಸಂಜಿ ಆರು ಘಂಟೆ ಆಗಿತ್ತು. ಮಾಗಿಯ ಕಾಲ ಇದ್ದದ್ದರಿಂದ ಲಗೂನ ಕತ್ತಲಿ ಆವರಿಸಲಿಕತ್ತಿತ್ತು. ಎಂಟು ದಿನದಿಂದ ಒಂದ ಸಮನಾ ಕಾಯ್ದ ಜ್ವರದಿಂದ ಮೈಯ್ಯಾಗ ನಿಶಕ್ತಿ, ಆಯಾಸ ತುಂಬಿದ್ವು. ಮಕ್ಕಳು ಇನ್ನು ಟ್ಯೂಶನ್ ನಿಂದ ಬಂದಿರಲಿಲ್ಲ. ಅವರು ಕೆಲಸದ ಮ್ಯಾಲೆ ಊರಿಗೆ ಹೋಗಿದ್ರು. ಏಕಾಂಗಿಯಾಗಿರೊದು ನಂಗ ಹೊಸದೆನಲ್ಲಾ. ಆದ್ರ ಯಾಕೊ ಇವತ್ತ ಈ ಏಕಾಂಗಿತನ ಅಸಹನೀಯ ಆಗಿತ್ತು. ಸಣ್ಣಾಗಿ ತಲಿಶೂಲಿ ಶುರುವಾಗಿತ್ತು. ಬಿಸಿ ಚಹಾ ಬೇಕನಿಸಿತ್ತು. ಎದ್ದು ಕೂತ್ರ ಕಡಕೊಂಡ ಬಿಳತೇನೊ ಅನ್ನೊ ಅಷ್ಟು ಆಯಾಸ. ಯಾರರ ಹತ್ರ […]

ಸುಮ್ ಸುಮನಾ ಅಂಕಣ

ಮದ್ಲ ಮನಿ ಗೆದ್ದು, ಆಮ್ಯಾಲೆ ಮಾರ ಗೆದೀಬೇಕು!:ಸುಮನ್ ದೇಸಾಯಿ ಅಂಕಣ

          ಮೊನ್ನೆ ಟಿವ್ಹಿ ಒಳಗ ಒಂದ ಕ್ವಿಜ್ ಶೋ ನೋಡ್ಲಿಕತ್ತಿದ್ದೆ. ಭಾಗವಹಿಸಿದವರು ಸುಮಾರು ೧೬ ರಿಂದ್ ೧೮ ವಯಸ್ಸಿನ ಒಟ್ಟು ಎಂಟ ಮಂದಿ ಇದ್ರು. ನಾಲ್ಕ ಗುಂಪ ಮಾಡಿದ್ರು. ಒಂದ ಗುಂಪಿನ್ಯಾಗ ಇಬ್ಬರು, ಭಾಗವಹಿಸಿದ ಹುಡುಗರ ಪರಿಚಯ ಮಾಡಿಕೊಟ್ಟು, ಪ್ರಶ್ನೆಗಳನ್ನ ಕೇಳಲಿಕ್ಕೆ ಶುರು ಮಾಡಿದ್ರು. ಎಷ್ಟ ಸರಳ ಪ್ರಶ್ನೆ ಅದು," ಕೌರವರ ತಂದೆ ಯಾರು?" ಅದಕ್ಕ ಅವರು ಕೊಟ್ಟ ಉತ್ತರಾ "ಅರ್ಜುನ" ಅಂತ. ಅದನ್ನ ಕೇಳಿ ನಾ ದಂಗ ಬಡಧಂಗ ಕುತಿದ್ದೆ. ನಮ್ಮ […]

ಸುಮ್ ಸುಮನಾ ಅಂಕಣ

ಅಂತರಂಗದ ಗೆಳೆಯ: ಸುಮನ್ ದೇಸಾಯಿ ಅಂಕಣ

ಸಂಜಿಮುಂದ ದೇವರಿಗೆ ದೀಪಾ ಹಚ್ಚಿ. ಅಂಗಳದಾಗಿನ ತುಳಸಿ ಕಟ್ಟಿ ಮ್ಯಾಲೆ ಕೂತು ಮಕ್ಕಳಿಗೆ ಸಾಯಂಕಾಲದ ಪೂರೋಚಿ(ಸಾಯಂಕಾಲದ ಸ್ತೊತ್ರಗಳು) ಹೇಳಿಕೊಡಲಿಕತ್ತಿದ್ದೆ. ಮೊಬೈಲ್ ರಿಂಗಾಗಿದ್ದು ಕೇಳಿ ಎದ್ದು ಒಳಗ ಹೋದೆ. ಯಾವದೊ ಅಪರಿಚಿತ ನಂಬರ್ ಇತ್ತು. ಅಂಥಾಪರಿ ಏನು ಕೂತುಹಲ ಇಲ್ಲದ ಫೋನ್ ತಗೊಂಡು ಹಲೊ ಅಂದೆ. ಅತ್ಲಾಕಡೆಯಿಂದ ಬಂದ ಧ್ವನಿ ನನ್ನ ಉಸಿರಿಗೆ ಪರಿಚಿತ ಅದ ಅನ್ನೊ ಭಾವನೆ ಬರಲಿಕತ್ತು. ಕ್ಷಣ ಮಾತ್ರ ಆಧ್ವನಿಯ ಒಡತಿ ನನ್ನ ಬಾಲ್ಯದ ಗೆಳತಿ ಜಾನು ದು ಅಂತ ಗೊತ್ತಾತು. ಎಷ್ಟು ವರ್ಷದ […]

ಸುಮ್ ಸುಮನಾ ಅಂಕಣ

ಕಿಟ್ಟುಮಾಮಾನ ದೀಪಾವಳಿ: ಸುಮನ್ ದೇಸಾಯಿ ಅಂಕಣ

  ಚುಮುಚುಮು ಛಳಿಗಾಲದಾಗ  ಬರೊ ದೀಪದ ಹಬ್ಬ ದೀಪಾವಳಿ ನೆನಿಸಿಕೊಂಡ್ರನ ಎನೊ ಒಂಥರಾ ಖುಷಿ ಆಗತದ. ನರಕಚತುರ್ದಶಿ ಹಿಂದಿನ ದಿನದಿಂದನ ದೀಪಾವಳಿ ಹಬ್ಬದ ಸಂಭ್ರಮ ಸುರು ಆಗತದ. ಅಂದ್ರ ನಮ್ಮ ಉತ್ತರ ಕರ್ನಾಟಕದ ಕಡೆ ನರಕಚತುರ್ದಶಿ ಹಿಂದಿನ ದಿನಾ ನೀರು ತುಂಬೊ ಹಬ್ಬ ಅಂತ ಮಾಡತೇವಿ. ಅವತ್ತ ಸಂಜಿಮುಂದ ಎಲ್ಲಾರು ಅಂಗಳಾ  ಸಾರಿಸಿ ಥಳಿ ಹೋಡದು ಛಂದನ ದೊಡ್ಡ ದೊಡ್ಡ ರಂಗೋಲಿ ಹಾಕಿ,ಮನಿಮುಂದ ಬಣ್ಣ ಬಣ್ಣದ ಆಕಾಶಬುಟ್ಟಿ ಕಟ್ಟಿರತಾರ. ಮನ್ಯಾಗಿನ ಹಿತ್ತಾಳಿ ತಾಮ್ರದ ಹಂಡೆ ಮತ್ತ ಕೊಡಗೊಳನ […]

ಸುಮ್ ಸುಮನಾ ಅಂಕಣ

ಪುನರ್ ಮಿಲನ: ಸುಮನ್ ದೇಸಾಯಿ ಅಂಕಣ

ಮದವಿಮನಿ ಅಂದ್ರ ಅದರ ಕಳೆನ ಬ್ಯಾರೆ ಇರತದ. ಹೆಣ್ಣು ಮಕ್ಕಳ ಹರಟಿ, ಸಣ್ಣ ಮಕ್ಕಳ ನಗುವಿನ ಕಲರವ. ಹಸಿರು ತೋರಣ, ಮಂಗಳಕರ ಚಪ್ಪರ. ನಗು, ಹಾಸ್ಯ, ಗಡಿಬಿಡಿಯಿಂದ ತುಂಬಿರತದ. ಅದರೊಳಗಂತು ಹಳ್ಳಿಯೊಳಗಿನ ಮದುವಿ ಸಂಭ್ರಮ ಅಂತು ಒಂಥರಾ ಬ್ಯಾರೆನ ಇರತದ.ಅದೊಂದ ಹಳೆಕಾಲದ್ದ ದೊಡ್ಡಂಕಣದ್ದ ಮನಿ. ಯಾವ ಆಡಂಬರ ಇಲ್ಲದ ಬಿಳಿಸುಣ್ಣದಿಂದ ಸಾರಿಸಿ ಅಲ್ಲಲ್ಲೆ ಇಳಿಬಿಟ್ಟ ಕೆಂಪು ಕ್ಯಾಂವಿ ಮಣ್ಣಿನ ಜೋರು. ಬಾಗಲಿಗೆ ಕಟ್ಟಿದ ಮಾವಿನ ತೊಳಲಿನ ತೊರಣ, ಮನಿಮುಂದ ಓಣಿಯ ತುಂಬ ಹಾಕಿದ ಹಂದರ ಹಂದರದೊಳಗ ಬಳೆಗಾರರು […]

ಸುಮ್ ಸುಮನಾ ಅಂಕಣ

ಕಾಕ ಸ್ಪರ್ಷ: ಸುಮನ್ ದೇಸಾಯಿ ಅಂಕಣ

ಮುಂಝಾನಿಂದ ಯಾಕೊ ಮನಸ್ಸು ಭಾಳ ತಳಮಳಸ್ಲಿಕತ್ತಿತ್ತು. ಇವತ್ತ ಆಂವಾ ಬರಾಂವ ಇದ್ದಾ. ಯಥಾಪ್ರಕಾರ ಕೈ ತಮ್ಮ ಕೆಲಸಾ ಮಾಡಲಿಕತ್ತಿದ್ವು. ಆದ್ರ ಮನಸ್ಸು ಮಾತ್ರಾ ಆಂವನ್ನ ನೆನಿಕೊಳ್ಳಿಕತ್ತಿತ್ತು. ಆಂವಗ ಇಷ್ಟ ಆಗೊ ಅಡಿಗಿ ಎಲ್ಲಾ ಮಾಡಿದ್ದೆ. ಆಂವಗ ನನ್ನ ಕೈ ಅಡಿಗಿ ಅಂದ್ರ ಭಾಳ ಸೇರತದ. ಊರಾಗ ಇದ್ದಾಗ ಎಷ್ಟ ಹೊತ್ತಾದ್ರು , ಹಸಿವ್ಯಾದ್ರು ಹೊರಗ ಏನು ತಿನ್ನಲಾರದ ಉಪವಾಸ ಮನಿಗೆನ ಊಟಕ್ಕ ಬರತಿದ್ದಾ. ನನ್ನ ಮುಂದ ಕೂಡಿಸಿಕೊಂಡು ನನ್ನ ಜೋಡಿ ಸರಸವಾಡಕೊತ ಊಟಾ ಮಾಡೊದಂದ್ರ ಆಂವಗ ಭಾಳ […]

ಸುಮ್ ಸುಮನಾ ಅಂಕಣ

ಶೀಗೀ ಹುಣ್ಣಿಮಿ ಮುಂದಾ | ಸೋಗಿನಾ ಚಂದ್ರಮ: ಸುಮನ್ ದೇಸಾಯಿ ಅಂಕಣ

             ನಮ್ಮ ಪಾರಂಪರಿಕ ಪಧ್ಧತಿಗೊಳು ಮರಿಯಾಗಿ ಹೋಗಲಿಕತ್ತ ಈ ದಿನಮಾನಗಳೊಳಗ ಎಲ್ಲೋ ಒಂದ ಕಡೆ ಮಿಣುಕ ಮಿಣುಕಾಗಿ ಕಾಣಸಿಗತಾವ ಅಂದ್ರ ಅದು ಹಳ್ಳಿಗಳೊಳಗ ಮಾತ್ರ. ನಮ್ಮ ಉತ್ತರ ಕರ್ನಾಟಕದ ಹಳ್ಳಿಗೊಳೊಳಗ ಇಂಥಾ ಭಾಳಷ್ಟು ಆಚರಣೆಗಳವ. ನೆರೆಹೊರೆಯವರು ಕೂಡಿ ಭಾಳ ಸಂತೋಷದಿಂದ ಆಚರಿಸ್ತಾರ. ವಿಶೇಷತಃ ಹೆಣ್ಣು ಮಕ್ಕಳು ಆಚರಿಸೊ ಪಧ್ಧತಿಗಳೆ ಭಾಳ ಇರತಾವ. ಶಹರದೊಳಗಾದ್ರ ಹೆಣ್ಣು ಮಕ್ಕಳಿಗೆ, ಓದು, ಕಲೆ, ನೌಕರಿ, ಮಹಿಳಾ ಮಂಡಳ, ಸಮಾಜಸೇವೆ, ರಾಜಕೀಯ ಅಂತೆಲ್ಲಾ ತಮ್ಮನ್ನ ತಾವು ತೊಡಗಿಸಿಕೊಂಡಿರತಾರ. ಇನ್ನ ಮನೊರಂಜನೆಗೆ ಅಂತ ಸಿನೇಮಾ, […]

ಸುಮ್ ಸುಮನಾ ಅಂಕಣ

ನೆನಪಿನ ಜೋಕಾಲಿ: ಸುಮನ್ ದೇಸಾಯಿ ಅಂಕಣ

ಎಲ್ಲಾರ ಜೀವನದೊಳಗು ಈ ಬಾಲ್ಯ ಅನ್ನೊದು ಅಮೂಲ್ಯವಾಗಿದ್ದಿರತದ. ಯಾವ ಕಲ್ಮಷ ಇಲ್ಲದ, ನಾಳಿನ ಚಿಂತೆ, ನೋವು ಇಲ್ಲದ ಆಡಿ ಬೆಳದ ಸಮಯ ಅದಾಗಿರತದ. ಈ ಬಾಲ್ಯದೊಳಗ ಏನೆ ಮಾಡಿದ್ರು ಛಂದನ ಇರತದ.” ಬಾರಾ ಖೂನಿ ಮಾಫ” ಅಂತಾರಲ್ಲಾ ಹಂಗ ಎಂಥಾ ಮಂಗ್ಯಾನಾಟಾ ಮಾಡಿದ್ರು ನಡಿತಿರತದ. ಅದರೊಳಗ ಈ ಹತ್ತರಿಂದ ಹದಿನಾರನೇ ವಯಸ್ಸಿನೊಳಗಿನ ಮನಸ್ಸಂತು ಯಾರ ಕೈಗು ಸಿಗದ ಬೀಸೊಗಾಳಿ ಹಂಗಿರತದ ಬಿಂದಾಸಾಗಿ ಆಡಿಕೊಂಡ ಎದುರಿಗೆ ಸಿಕ್ಕಿದ್ದನ ತನ್ನ ತುಂಟಾಟದ ರಭಸಕ್ಕ ನಡುಗಿಸೊ ಹಂಗ. ಬಾಲ್ಯ ಎಷ್ಟು ದಟ್ಟವಾಗಿರತದೊ […]

ಸುಮ್ ಸುಮನಾ ಅಂಕಣ

ಕಾಗಿ ಕಾಗಿ ಕವ್ವಾ…:ಸುಮನ್ ದೇಸಾಯಿ ನಗೆ ಅಂಕಣ

ಮುಂಝಾನೆ ಹತ್ತು ಗಂಟೆ ಸುಮಾರ ನಾ ಆಫೀಸನ್ಯಾಗ ಇದ್ದೆ. ನಮ್ಮ ತಮ್ಮನ ಫೋನ್ ಬಂತು. ಇಗ ಇನ್ನ ಹೊಸದಾಗಿ ಮದುವಿ ಮಾಡಕೊಂಡಾನ. ಮದ್ವಿಕಿಂತಾ ಮದಲ ಯಾವಾಗರೆ ಒಮ್ಮೆ ಫೋನ್ ಮಾಡಾಂವಾ ಈಗೀಗ ಎರಡ ದಿನಕ್ಕ ಒಮ್ಮೆ ಮಾಡತಿದ್ದಾ. ತನ್ನ ಗೋಳ ತೋಡ್ಕೊತಿದ್ದಾ.  ಪಾಪ ಇತ್ಲಾಕಡೆ ಅಮ್ಮ ಮತ್ತ ಅತ್ಲಾಕಡೆ ಹೆಂಡ್ತಿ ಕೈಯ್ಯಾಗ ಸಿಕ್ಕು ’ಧೋಬಿ ಕಾ ಕುತ್ತಾ ನಾ ಘರ್ ಕಾ ನ ಘಾಟ್ ಕ’ ಅನ್ನೊಹಂಗ ಆಗಿತ್ತು ನನ್ನ ತಮ್ಮನ ಬಾಳು. ಆವತ್ತು ಫೋನ್ ಮಾಡಿದಾಗನೂ […]

ಸುಮ್ ಸುಮನಾ ಅಂಕಣ

ಅಂತಿಮ ನಮನ: ಸುಮನ್ ದೇಸಾಯಿ ಅಂಕಣ

        ಮುಂಜಾನೆ  ನಸಿಕಲೇ 5 ಗಂಟೆ ಆಗಿತ್ತು. ಅದ ಇನ್ನು ಜಂಪ ಹತ್ತಲಿಕತ್ತಿತ್ತು. ಅತ್ತಿಯವರ ನರಳಾಟ ಕೇಳಿ ಸುಧಾಗ ಎಚ್ಚರಾತು. ರಾತ್ರಿಯೆಲ್ಲಾ ಮಲಗಿದ್ದೆಯಿಲ್ಲ. ಅದೇನ ಸಂಕಟಾ ಆಗಲಿಕತ್ತಿತ್ತೊ ಅವರಿಗೆ ಗೊತ್ತು. ಸಾಯೋ ಮುಂದಿನ ಸಂಕಟಾ ಭಾಳ ಕೆಟ್ಟ ಇರತದಂತಾರ ಇದ ಏನೊ ಅನಿಸ್ತು. ಆದ್ರ ಸುಧಾಗ ಅದ ಕ್ಷಣಾ ಅಂಥಾ ಪರಿಸ್ಥಿತಿಯೊಳಗ ನಗುನು ಬಂತು. ಅಲ್ಲಾ ತಮ್ಮಷ್ಟಕ್ಕ ತಾವು ಅತೀ ಶಾಣ್ಯಾರ ಅನಕೊಂಡ ದೀಡ ಪಂಡಿತರು “ ಸಾಯೊ ಸಂಕಟಾ ಭಾಳ ಕೆಟ್ಟ ಇರತದ “ ಅಂತ […]

ಸುಮ್ ಸುಮನಾ ಅಂಕಣ

ಚುನಾವಣೆ:ಸುಮನ್ ದೇಸಾಯಿ

ಲೊಕಲ ಎಲೆಕ್ಷನ್ ದಿನಗೊಳ ಹತ್ರ ಬರಲಿಕತ್ತಿದ್ವು.ಜಬರದಸ್ತ ಪ್ರಚಾರ ಶೂರು ಆಗಿದ್ವು. ಸಣ್ಣ ಮಕ್ಕಳಿಂದ ಹಿಡದು ಹರೆದ ಹುಡುಗುರು ಸುಧ್ಧಾ ಓಣ್ಯಾಗೆಲ್ಲಾ " ಅಕ್ಕಾ ಅಕ್ಕಾ ಶಾಣ್ಯಾಕಿ… ಪಕ್ಷಕ್ಕ ಓಟ ಹಾಕಾಕಿ, ಮಾಮಾ ಭಾಳ ಶಾಣ್ಯಾಂವಾ… ಪಕ್ಷಕ್ಕ ಓಟ ಹಾಕಾಂವಾ, ಅಂಥೇಳಿ ಒದರಿಕೊತ ಪ್ರಚಾರ ಮಾಡಕೊತ ಅಡ್ಯಾಡಲಿಕತ್ತಿದ್ರು. ಎಲೆಕ್ಷನ್ ಅಂದ್ರ ಎಲ್ಲಾಕಡೆ ಅದೊಂದ ಥರಾ ಲಹರಿನ ಬ್ಯಾರೆ ಇರತದ. ಮನಿ ಮನಿಗೆ ಹೋಗಿ ಪ್ರಚಾರ ಮಾಡೊದು ನಡದಿತ್ತು. ಒಳಗಿಂದೊಳಗ ನಮಗ ಓಟ ಹಾಕ್ರಿ ಅಂಥೇಳಿ ಆಣಿ ಪ್ರಮಾಣಾ ಮಾಡಿಸ್ಕೊಳ್ಳೊದು […]

ಸುಮ್ ಸುಮನಾ ಅಂಕಣ

ಸುಮನ್ ದೇಸಾಯಿ ಅಂಕಣದಲ್ಲಿ ನೆನಪಿನ ಲಹರಿ…

ಒಂದ ವಾರ ಹಚ್ಚಿ ಹೊಡದ ಮಳಿ ಅವತ್ತ ಒಂದ ಸ್ವಲ್ಪ ಹೊರಪಾಗಿತ್ತು. ಇಡಿ ದಿನಾ ಬಿದ್ದ ಬಿಸಲಿಂದ ಹಸಿಯಾಗಿದ್ದ ನೆಲ ಎಲ್ಲ ಒಣಗಿ ಬೆಚ್ಚಗಿನ ವಾತಾವರಣ ಇತ್ತು. ಒಂದ ವಾರದಿಂದ ಮನ್ಯಾಗ ಕೂತು ಕೂತು ಬ್ಯಾಸರಾಗಿತ್ತು. ಸಂಜಿಮುಂದ ವಾಕಿಂಗ್ ಹೋಗಬೇಕನಿಸಿ ನಮ್ಮ ಕಾಲೋನಿಯೊಳಗಿದ್ದ ಪಾರ್ಕಿಗೆ ಮಕ್ಕಳನ್ನ ಕರಕೊಂಡು ಹೋದೆ. ಅದೊಂದು ಸಣ್ಣ ಪಾರ್ಕು. ಅಷ್ಟರೊಳಗನ ಮಕ್ಕಳಿಗೆ ಆಡಲಿಕ್ಕೆ ಜಾರಬಂಡಿ, ಜೋಕಾಲಿ, ಒಂದ ಸಣ್ಣ ಪರ್ಣಕುಟಿರ, ಹೆಣ್ಣಮಕ್ಕಳಿಗೆ ಒಂದ ಕಡೆ ಗುಂಪಾಗಿ ಕೂತು ಹರಟಿಹೊಡಿಲಿಕ್ಕೆ ಹೇಳಿ ಮಾಡಿಸಿದಂಗ ಸುತ್ತಲೂ […]

ಸುಮ್ ಸುಮನಾ ಅಂಕಣ

ಕಣ್ಣಂಚಿನ ಪ್ರೀತಿ:ಸುಮನ್ ದೇಸಾಯಿ ಅಂಕಣದಲ್ಲಿ ಕತೆ

 ನನ್ನ ಮಕ್ಕಳ ಕ್ರಿಸ್ ಮಸ್ ಸೂಟಿ ಶೂರು ಆಗಿದ್ವು. ಹದಿನೈದ ದಿನಾ ರಜಾ ಇದ್ವು. ನನ್ನ ಮಕ್ಕಳಿಬ್ಬರು ಎಲ್ಲೆರೆ ಪ್ರವಾಸಕ್ಕ ಹೋಗೊಣ ಅಂತ ಗಂಟಬಿದ್ದಿದ್ರು. ನನ್ನ ಮಗಳು "ಅಮ್ಮಾ ಗೋವಾಕ್ಕ ಹೋಗೊಣು ಅಲ್ಲೆ ಕ್ರಿಸ್ ಮಸ್ ಹಬ್ಬಾನ ಭಾಳ ಮಸ್ತ ಸೆಲೆಬ್ರೇಟ್ ಮಾಡತಾರಂತ, ಮತ್ತ ಗೋವಾದಾಗ ಬೀಚನ್ಯಾಗ ಮಸ್ತ ಆಟಾನು ಆಡಬಹುದು" ಅಂದ್ಲು. ಪ್ರೀತಿ ಮಗಳು ಕೇಳಿದ್ದನ್ನ ಇಲ್ಲಾ ಅನ್ಲಿಕಾಗ್ಲಿಲ್ಲಾ ನಾ ಯೆಸ್ ಅಂದೆ. ಇನ್ನ ಹೆಂಡತಿ ಡಿಸೈಡ ಮಾಡಿದ್ದನ್ನ ಬ್ಯಾಡ ಅನ್ಲಿಕ್ಕೆ ಸಾಧ್ಯನ ಇಲ್ಲಂತ ನಮ್ಮನಿಯವರನು […]

ಸುಮ್ ಸುಮನಾ ಅಂಕಣ

ಮೂಲಂಗಿ ಪಚಡಿ: ಸುಮನ್ ದೇಸಾಯಿ ಬರೆವ ನಗೆ ಅಂಕಣ

ಭಾಳ ದಿವಸದ್ದ ಮ್ಯಾಲೆ ನಾವು ಗೆಳತ್ಯಾರೆಲ್ಲಾ ಒಂದ ಕಡೆ ಸೇರಿದ್ವಿ. ದಿನಾ ಒಂದಕ್ಕು ಮನ್ಯಾಗ ಗಂಡಾ ಮಕ್ಕಳಿಗೆ ನಾಷ್ಟಾ,ಊಟಾ ಅಂಥೇಳಿ  ದಿನಾ ಮುಂಝಾನೆದ್ದ ಕೂಡಲೆ ಚಪಾತಿ ಹಿಟ್ಟಿನ್ ಮುದ್ದಿ ನೋಡಿ ನೋಡಿ ನಮಗೂ  ಸಾಕಾಗಿತ್ತು. ಇವರಿಗೆಲ್ಲಾ ಹೊಟ್ಟಿತುಂಬ ಮಾಡಿ ಹಾಕಿ ಮತ್ತ ಮ್ಯಾಲೆ ಇವರ ಕಡೆ ದಿನಾ ಮಾಡಿದ್ದ ಮಾಡತಿ ಅಂತ ಬೈಸ್ಕೊಳ್ಳೊದ ಬ್ಯಾರೆ . ಅದಕ್ಕ ಬ್ಯಾಸರಾಗಿ ನಾವೆಲ್ಲಾ ಫ್ರೇಂಡ್ಸ್ ಮಾತಾಡಕೊಂಡ ಎಲ್ಲೆರೆ ಹೊರಗ ಸೇರಿ ” ಗೇಟ್ ಟುಗೆದರ್ ” ಮಾಡೊದಂತ ಡಿಸೈಡ್ ಮಾಡಿದ್ವಿ. […]