ಕಾಲೇಜ್ ಕಹಾನಿ: ಪ್ರಶಸ್ತಿ ಅಂಕಣ

ನೀರವ ರಾತ್ರಿ. ಜೀವನವೇ ಜಿಗುಪ್ಸೆಯಾಗಿ , ಮನಶ್ಯಾಂತಿಯನ್ನು ಹುಡುಕಿ ಅಲೆಯುತ್ತಿರೋ ಅಲೆಮಾರಿಯಂತೆ ಒಬ್ಬ ಕೆರೆಯನ್ನೇ ದಿಟ್ಟಿಸುತ್ತಾ ಅದರ ದಡದಲ್ಲಿ ಕುಳಿತಿದ್ದ. ಬೆಳದಿಂಗಳ ರಾತ್ರಿ. ಕೆರೆಯ ಅಲೆಗಳಲ್ಲಿ ಪ್ರತಿಬಿಂಬಿಸುತ್ತಿದ್ದ ಚಂದ್ರನ ಬಿಂಬ ನೋಡುತ್ತಿದ್ದರೆ ಆಗಸದ ಆ ಶಶಿ ಈತನಿಗೆ ಸಾಂತ್ವನ ಹೇಳಲೆಂದೇ ಭುವಿಗಿಳಿದು ಬಂದು ಕೆರೆಯಲ್ಲಿ ಈಜಾಡುತ್ತಿದ್ದಾನೇನೋ ಅನಿಸುತ್ತಿತ್ತು. ರೋಹಿಣೀಪತಿ ಪ್ರಭೆಯ ರಾತ್ರಿ ಸಭೆಗೆ ಆಗಮಿಸಿದ್ದ ತಾರೆಗಳೆಲ್ಲಾ ಮಿಂಚುತ್ತಾ ಆಗಸದಲ್ಲಿ ಚಿತ್ರ ವಿಚಿತ್ರ ಆಕೃತಿಗಳನ್ನು ಮೂಡಿಸುತ್ತಿದ್ದವು. ಸೃಷ್ಟಿಕರ್ತನ ಚುಕ್ಕಿಯಾಟಕ್ಕೋ , ರಂಗೋಲಿಗೋ ಅಂಗಳವಾದಂತಿದ್ದವು. ತಂಗಾಳಿಗೆ ಗತ್ತು ಬಂದಂತೆ ಕೊಂಬೆಗಳನ್ನು … Read more

ಅನಿರೀಕ್ಷಿತ: ಪ್ರಶಸ್ತಿ ಅಂಕಣ

ನಗರದ ದೊಡ್ಡ ಆಸ್ಪತ್ರೆ ಎಂದೇ ಖ್ಯಾತ ಜಗರಾಂ ಆಸ್ಪತ್ರೆಯ ಡಾ|| ಜಗರಾಂಗೆ ರಾತ್ರಿ ನಿದ್ದೆಯಲ್ಲೆಲ್ಲಾ ಏನೋ ಕಸಿವಿಸಿ. ನಿದ್ದೆಯಲ್ಲೆಲ್ಲಾ ಮೈಮೇಲೆ ಬಿದ್ದಂತೆ ಬಂದು ಕಾಡಿದ ದುಸ್ವಪ್ನಗಳಿಂದ ನಾಳೆ ಏನೋ ಗಂಡಾಂತರ ಕಾದಿದೆ ಎಂದೇ ಅಂಜಿಕೆ ಶುರುವಾಯ್ತು. Dreams are modified versions of memory ಎನ್ನುತ್ತಾರೆ. ಅಂದರೆ ನಾವು ನೋಡಿದ್ದು, ಯೋಚಿಸಿದ್ದೇ ರೂಪಾಂತರವಾಗಿ ಕನಸಾಗುತ್ತೆ ಅಂತ.. ಆದರೆ ತಾವು ನೋಡದ್ದು ಯಾಕೆ ಕನಸಾಗ್ತಿದೆ ಅಂತ ನಿದ್ದೆ ಬಾರದೇ ಎದ್ದು ಕುಳಿತ ಜಗರಾಂ ಯೋಚಿಸುತ್ತಾ ಕುಳಿತು ,ಕುಳಿತಲ್ಲಿಯೇ ತೂಕಡಿಸಿ … Read more

ಮೈಸೂರು ದಸರಾ ಎಷ್ಟೊಂದು ಸುಂದರ: ಪ್ರಶಸ್ತಿ ಅಂಕಣ

ಮೈಸೂರು ದಸರಾ. ಎಷ್ಟೊಂದು ಸುಂದರ.. ಎಂಬ ಹಾಡನ್ನು ಕೇಳಿದ್ನೇ ಹೊರತು ಅದ್ನ ಕಣ್ಣಾರೆ ನೋಡೋ ಭಾಗ್ಯ ಇತ್ತೀಚೆಗಿನವರೆಗೂ ಸಿಕ್ಕಿರಲಿಲ್ಲ. ತೀರಾ ಸಣ್ಣವನಿದ್ದಾಗ ನನ್ನಪ್ಪ, ನನ್ನ ಮುತ್ತಜ್ಜ(ಅಜ್ಜಿಯ ಅಪ್ಪ) ಮೈಸೂರು ದಸರಾಕ್ಕೆ ಹೋದ ಕತೆ, ಅಲ್ಲಿ ನನ್ನ ಮುತ್ತಜ್ಜನ ಒಳಜೇಬನ್ನೇ ಕತ್ತರಿಸಿದ ಕಳ್ಳರ ಕಥೆ , ಮೈಸೂರಿಗೆ ದಸರಾ ಸಮಯದಲ್ಲಿ ಹೋದ್ರೆ ಕಾಲಿಡೋಕೂ ಆಗಲ್ಲ ದಸರಾನಾ ರಸ್ತೆ ಮೇಲೆ ನೋಡೋದು ಹೋಗ್ಲಿ ಮನೆ ಮಹಡಿ ಮೇಲೆ ನಿತ್ತು ನೋಡೋದಕ್ಕೂ ಕಷ್ಟಪಡ್ಬೇಕು ಎಂಬ ಮಾತುಗಳೇ ದಸರಾಕ್ಕೆ ಹೋಗದಂತೆ ತಡೀತಿದ್ವಾ ಅಥವಾ … Read more

ಗಲ್ಲಿ ಕ್ರಿಕೆಟ್ಟು, ಲಗೋರಿ ಹಾಗೂ ಫೆರಾರಿ:ಪ್ರಶಸ್ತಿ ಅಂಕಣ

ಇತ್ತೀಚೆಗೆ ಹಿಂದಿಯ "ಫೆರಾರಿ ಕಿ ಸವಾರಿ" ಅನ್ನೋ ಚಿತ್ರ ನೋಡ್ತಾ ಇದ್ದಾಗ ಯಾಕೋ ಬಾಲ್ಯದ ದಿನಗಳು ಬೇಡವೆಂದರೂ ನೆನಪಾದವು. ಬಾಲ್ಯದ ನೆನೆಪುಗಳೆಂದ ತಕ್ಷಣ ನೆನಪಾಗಿದ್ದು ಶಾಲೆಯ ಮಾಸ್ತರೋ, ತಿಂದ ಏಟುಗಳೋ, ಸುತ್ತಿದ ನೆಂಟರ ಮನೆಗಳೋ, ಅಪ್ಪ-ಅಮ್ಮನ ಬೆಚ್ಚನೆ ಬೈಗುಳ/ಅಪ್ಪುಗೆಗಳೋ ಅಲ್ಲ. ಆ ಸಿನಿಮಾ ನೆನೆಸಿದ್ದು ನಮ್ಮ ಬಾಲ್ಯದ ಲಗೋರಿ, ಗೋಲಿ, ಕ್ರಿಕೆಟ್ಟುಗಳ ನೆನಪುಗಳನ್ನ. MRF, ಬ್ರಿಟಾನಿಯ ಬ್ಯಾಟುಗಳನ್ನ ಟೀವಿಯಲ್ಲಿ ಮಾತ್ರ ನೋಡುತ್ತಾ ನಮ್ಮದೇ ದಬ್ಬೆ (ಅಡಿಕೆ ಮರವನ್ನು ಕೊಯ್ದು ಮಾಡಿದ), ಮರದ ದಿಮ್ಮಿಯ ಬ್ಯಾಟುಗಳಲ್ಲಿ, ಅದೂ ಇಲ್ಲದಿದ್ದಾಗ … Read more

ಲೂಸಿಯಾ: ಪ್ರಶಸ್ತಿ ಅಂಕಣ

ಫಿಲ್ಮಿಗೆ ಹೋಗಿ ಕೂತಿದ್ವಿ. ನಿನ್ನೊಳೆಗೆ ಮಾಯೆಯೋ, ಮಾಯೆಯೊಳಗೆ ನೀನೋ ಅಂತ ಶುರುವಾಯ್ತು..ಹೆಸರು ತೋರಿಸುವವ ಹೊತ್ತಿಗೆ ಹೂವೊಳಗೆ ಸುಗಂಧವೋ, ಸುಗಂಧದೊಳಗೆ ಹೂವೋ, ಜಿಘ್ರಾಣಿಸುವುದರೊಳಗೆ ಇವೆರಡೋ.. ಅಂತ ಮುಂದುವರಿಯೋ ಅಲ್ಲಮಪ್ರಭುವಿನ ವಚನ. ಅದು ಕನಕದಾಸರ ರಚನೆ ಅಂತ ಆಮೇಲೆ ತೋರಿಸುವವರಿಗೂ ಕೆಲವರಿಗೆ ಪಕ್ಕಾ ಕನ್ಫ್ಯೂಷನ್ನು. ಸರಿ, ನಿರ್ದೇಶಕ ಪವನ, ನಿರ್ಮಾಪಕರು .. ? ಏನಿದು, ಹತ್ತಾರು ಹೆಸರುಗಳು, ಸಹ ನಿರ್ಮಾಪಕರು, ನೂರಾರು ಹೆಸರುಗಳು.. ಯಪ್ಪಾ.. ಒಟ್ಟು ನೂರಾ ಏಳು ಜನ ನಿರ್ಮಾಪಕರು ಸೇರಿ ನಿರ್ಮಿಸಿದ ಚಿತ್ರ.ಅಂದರೆ ಜನರ ಚಿತ್ರ..ನಾನು ಯಾವ ಚಿತ್ರದ ಬಗ್ಗೆ … Read more

ಚಿಲ್ರೆ ಸಮಸ್ಯೆಯೂ, ಗುಂಡಣ್ಣನ ಗ್ಯಾಂಗೂ:ಪ್ರಶಸ್ತಿ ಅಂಕಣ

ಕಾಲೇಜ್ ಗ್ರೌಂಡಲ್ಲಿ ಎಂದಿನಂತೆ ಇಳಾ ಮಂಗಳೂರು ಮಂಜ ಮತ್ತು ಸರಿತಾ ಮಾತಾಡ್ತಾ ಕೂತಿದ್ದಾಗ "ಏನ್ ಚಿಲ್ರೆ ಸಮಸ್ಯೆ ಗುರೂ, ಥೂ..!" ಅಂತ ಗುಂಡಣ್ಣ ಮತ್ತು ಟಾಂಗ್ ತಿಪ್ಪ ಅಲಿಯಾಸ್ ತಿಪ್ಪೇಶಿ ಎಂಟ್ರಿ ಕೊಟ್ರು. "ತಿಪ್ಪ ಅವ್ರು ಬೆಳಬೆಳಗ್ಗೆ ಯಾರ್ಗೋ ಬಯ್ತಾ ಇರೋ ಹಾಗೆ ಉಂಟಲ್ಲಾ ಮಾರ್ರೆ" ಅಂದ ಮಂಜ. "ಹೂಂ ಕಣೋ ಮಂಜ. ಈ ಬಸ್ಸೋರು ಒಂದ್ರೂಪಾಯಿ, ಎರಡ್ರೂಪಾಯಿ ಚಿಲ್ರೆ ಇದ್ರೆ ಕೊಡಂಗೇ ಇಲ್ಲ. ಟಿಕೇಟ್ ಹಿಂದ್ಗಡೆ ಬರ್ದೇನೋ ಕೊಡ್ತಾರೆ, ಆದ್ರೆ ಇಳಿಯೋ ಹೊತ್ಗೆ ರಷ್ಷಾಗಿದ್ದಾಗ್ಲೇ ಕಂಡೆಕ್ಟರ್ … Read more

ಕೋಪಾಗ್ನಿಕುಂಡ: ಪ್ರಶಸ್ತಿ ಬರೆವ ಅಂಕಣ

  ಓದುಗ ಮಿತ್ರರಿಗೆಲ್ಲಾ ಗೌರಿ ಗಣೇಶ ಹಬ್ಬದ ಶುಭಾಶಯಗಳು. ನೀವು ಈ ಲೇಖನ ಓದೋ ಹೊತ್ತಿಗೆ ನಿಮ್ಮ ಮನೆಗೆ ಗಣಪತಿ ಬಂದಿರಬಹುದು. ಮನೆಯಲ್ಲಿ ಗಣಪತಿ ತರದಿದ್ದರೂ ನೆಂಟರ ಮನೆಯ, ಬೀದಿಯಲ್ಲಿಟ್ಟ ಗಣಪತಿ ಪೆಂಡಾಲಿನ, ಮೈಕಿನ , ಟೀವಿಗಳ ಕಲರ್ ಕಲರ್ ವಾರ್ತೆ, ಶುಭಾಶಯ, ಸ್ನೇಹಿತರ ಶುಭ ಹಾರೈಕೆಗಳಿಂದ, ಮಕ್ಕಳಿಗೆ ಸಿಕ್ಕಿರೋ ಹಬ್ಬದ ರಜೆಯಿಂದ.. ಹೀಗೆ ತರಹೇವಾರಿ ತರದಿಂದ ಹಬ್ಬದ ಕಳೆ ಮೂಡಿರಬಹುದು.ಹಬ್ಬಕ್ಕೆ ಬಸ್ ಬುಕ್ ಮಾಡಲಾಗದೇ, ಸಿಕ್ಕಾಪಟ್ಟೆ ರಶ್ಷಿನ ಬಸ್ಸು, ಟ್ರೈನುಗಳಲ್ಲಿ ಎದ್ದೂ ಬಿದ್ದು ಬೇರೆ ಊರಿನ … Read more

ರೂಪಾಯಿ, ಪೆಟ್ರೋಲು ಮತ್ತು ಸ್ವದೇಶಿ:ಪ್ರಶಸ್ತಿ ಬರೆವ ಅಂಕಣ

ರೂಪಾಯಿ ಮೌಲ್ಯ ಅಪಮೌಲ್ಯ ಆಗ್ತಾ ಆಗ್ತಾ ಅದ್ರ ಬೆಲೆ ಅರವತ್ತೆಂಟು ದಾಟಾಯ್ತು.. ಇನ್ನಾದ್ರೂ ನಾವು ಎಚ್ಚೆತ್ತಿಲ್ಲ. ಮನೆಗೊಂದು ಕಾರು, ತೆಲೆಗೊಂದು ಬೈಕು ಅಂತ ಜುಂ ಜಾಮಾಗಿರೋ ನಾವು ನಮ್ಮೀ ವೈಭವದಿಂದಲೇ ಪೆಟ್ರೋಲ್ ದರ ಗಗನಕ್ಕೇರಿರೋದು ಅಂತಲೂ ತಿಳೀತಿಲ್ಲ. ಪೆಟ್ರೋಲ್ ಬೆಲೆ ಏನಾದ್ರಾಗ್ಲಿ, ಅದ್ರಿಂದ ಡಾಲರ್ ದರ ಅರವತ್ತಲ್ಲ ನೂರು ಮುಟ್ಟಿದ್ರೂ ನಮಗೇನು ಅಂದ್ರಾ ? ಡಾಲರ್ ದರ ಹೆಚ್ಚಾದಷ್ಟೂ ಟೆಕ್ಕಿಗಳಿಗೆ, ರಫ್ತು ಮಾಡೋರಿಗೆ ಲಾಭವೇ ಅಲ್ವಾ ? ದೇಶಕ್ಕೇನಾದ್ರೆ ನಮಗೇನು ಅಂದ್ರಾ ? ! ರಫ್ತೆಂದರೆ ಚೀನಾದಂತೆ … Read more

ಒಂದು ಹಳ್ಳಿಯ ಕತೆ: ಪ್ರಶಸ್ತಿ ಅಂಕಣ

ಈತನದು ಮುಂಬಯಿಯ ನವಿ ಮುಂಬಯಿಯಲ್ಲೊಂದು ದುಖಾನು. ದುಖಾನೆಂದರೆ ಸಣ್ಣ ಕಿರಾಣಿ ಅಂಗಡಿಯೇನಲ್ಲ.ಈತ ತನ್ನೂರಿನವರಿಗೆ ಹೇಳಿದ್ದ ಹೆಸರಷ್ಟೆ. ಅದು ದೊಡ್ಡದೇ. ದುಡ್ಡಿರೋರಿಗೆ ಸಣ್ಣ ಸಣ್ಣ ಮನೆಗಳನ್ನೂ ದೊಡ್ಡ ಬೆಲೆಗೆ ಮಾರೋ ಅದೇನೋ ಅಂತಾರಲ್ಲಾ, ಹಾ ರಿಯಲ್ ಎಸ್ಟೇಟು.. ಆ ತರದ್ದು. ನವಿ ಮುಂಬಯಿಯಲ್ಲಿ ಒಂದು ಶಯನ ಗೃಹ, ಒಂದು ಅಡುಗೆ ಮನೆಯಿರೋ ಮನೆಗೇ ೩೦ ಸಾವಿರ ದಾಟಿಸಿದ್ದರಲ್ಲಿ ಈತನ ತರದ ಅದೆಷ್ಟೋ ದುಖಾನುಗಳ ಸಾಥ್ ಇತ್ತು. ಮುಂಬಯಿ ಬೋರ್ ಬಂತಾ ಅಥವಾ ನಿನ್ನ ನೋಡ್ದೇ ವರ್ಷಗಟ್ಲೇ ಆಗೋಯ್ತು, ಯಾವಾಗ … Read more

ಸಾಮಾಜಿಕ ಮಾಧ್ಯಮಗಳು ಮತ್ತು ಸಮಾಜ:ಪ್ರಶಸ್ತಿ ಅಂಕಣ

ಈ ಫೇಸ್ಬುಕ್ಕು, ಟ್ವಿಟ್ಟರ್ರು, ಆರ್ಕುಟ್ಗಳಂತಹ ಸಾಮಾಜಿಕ ಮಾಧ್ಯಮಗಳು ಅಂದರೆ ಬರೀ ಟೈಂಪಾಸಿಗೆ ಅನ್ನೋ ಮನೋಭಾವ ಹಲವರಲ್ಲಿದೆ. ಏನಪ್ಪಾ ಇಪ್ಪತ್ನಾಲ್ಕು ಘಂಟೆ ಫೇಸ್ಬುಕ್ಕಲ್ಲಿ ಇರ್ತೀಯ ಅನ್ನೋದು ಮುಂಚೆ  "ಇಡೀ ದಿನ ಊರೂರು ಅಲಿತಿರ್ತಾನೆ, ಅಬ್ಬೇಪಾರಿ .. "ಅಂತ ಬಯ್ತಿದ್ದ ಶೈಲಿಯ ಬಯ್ಗುಳವಾಗಿಬಿಟ್ಟಿದೆ. ಒಟ್ನಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸ್ತಾ ಇರೋರು ಅಂದ್ರೆ ಬರೀ ಕಾಲಹರಣ ಮಾಡೋರು, ಬೇರೆ ಯಾವ್ದೂ ಕೆಲಸ ಇಲ್ದೇ ಇದ್ದೋರು ಅನ್ನೋ ಭಾವ. ಅವು ತಕ್ಕಮಟ್ಟಿಗೆ ನಿಜವಾದ್ರೂ ಅದೇ ನಿಜವಲ್ಲ. ಈ ಸಾಮಾಜಿಕ ಮಾಧ್ಯಮಗಳಿಂದ ಸಖತ್ ಲಾಭಗಳಾಗೋದೂ … Read more

ಹೀಗೊಂದು ರಾತ್ರಿ:ಪ್ರಶಸ್ತಿ ಅಂಕಣದಲ್ಲಿ ಸಣ್ಣಕಥೆ

ಹೀಗೇ ಒಂದು ರಾತ್ರಿ. ಬೆಂಕಿಪಟ್ಟಣದಂತಹ ಬಾಡಿಗೆ ರೂಮಿನಲ್ಲೂ ಸುಖನಿದ್ರೆಯಲ್ಲಿದ್ದ ಬ್ಯಾಚುಲರ್ ಗುಂಡನಿಗೆ ಯಾರೋ ಬಾಗಿಲು ಕೆರೆದಂತಾಗಿ ದಡಕ್ಕನೆ ಎಚ್ಚರವಾಯಿತು. ಪಕ್ಕನೆ ಪಕ್ಕಕ್ಕಿದ್ದ ಲೈಟು ಹಾಕಿದರೂ ಅದು ಹತ್ತಲಿಲ್ಲ.  ಎಷ್ಟೆಷ್ಟೊತ್ತಿಗೋ ಕರೆಂಟು ತೆಗಿಯೋ ಕೆಯಿಬಿಯವರಿಗೆ ಬಯ್ಯುತ್ತಾ ಯಾರು ಅಂದ. ಶಬ್ದವಿಲ್ಲ. ಯಾರಿರಬಹುದು ಈ ನಡು ರಾತ್ರಿಯಲ್ಲಿ ಅಂದುಕೊಂಡ. ನಡುರಾತ್ರಿಯೇ ? ಗೊತ್ತಿಲ್ಲ. ಕಾಲೇಜಿಂದ ಸಂಜೆ ಸುಸ್ತಾಗಿ ಬಂದವನಿಗೆ ಹಾಗೇ ಜೊಂಪು ಹತ್ತಿತ್ತು. ಮೈಮರೆತು ಹಾಗೆಯೇ ಎಷ್ಟೊತ್ತು ಮಲಗಿದ್ದನೋ ಗೊತ್ತಿಲ್ಲ. ಈ ಬಾಗಿಲು ಕೆರೆಯೋ ಶಬ್ದದಿಂದಲೇ ದಡಕ್ಕನೆ ಎಚ್ಚರವಾಗಿ ಒಮ್ಮೆ … Read more

ಸಾಮಾಜಿಕ ಸ್ಪಂದನೆ:ಪ್ರಶಸ್ತಿ ಅಂಕಣ

ನಾಳೆಯಿಂದ ಪೆಟ್ರೋಲ್ ದರ  ಮತ್ತೆ ತುಟ್ಟಿ.ಪಾಕಿಸ್ತಾನದಲ್ಲಿ ಅಷ್ಟಿದೆ, ಇನ್ನೆಲ್ಲೋ ಮತ್ತೆಷ್ಟೋ ಇದೆ. ಇಲ್ಲಿ ಮಾತ್ರ ಹೆಚ್ಚೆಂಬ ಮಾತು ಎಲ್ಲರ ಬಾಯಲ್ಲೂ. ಪೆಟ್ರೋಲ್ ದರ ಹೆಚ್ಚಳ, ಪದವೀಧರರಿಗೆ ಹೆಚ್ಚುತ್ತಿರೋ ನಿರೂದ್ಯೋಗ ಸಮಸ್ಯೆ,  ಹೆಚ್ಚುತ್ತಿರೋ ತಲೆಗಂದಾಯ, ಕೆಟ್ಟಿರೋ ರಸ್ತೆ  ಹೀಗೆ ಹುಡುಕ್ತಾ ಹೋದ್ರೆ ನೂರೆಂಟು ಅವ್ಯವಸ್ಥೆಗಳು ಇಲ್ಲಿ. ಭ್ರಷ್ಟ ಅಧಿಕಾರಿಗಳಿಂದ ಹಿಡಿದು ಬೇಜವಬ್ದಾರಿ ಸಹೋದ್ಯೋಗಿಯ ತನಕ , ಅಭಿವೃದ್ಧಿ ಸಹಿಸದ ನೆರೆಯವರಿಂದ ಹೆಜ್ಜೆಹೆಜ್ಜೆಗೂ ಮೂಗು ತಿವಿಯೋ ಜನರ ತನಕ  ಈ ಸಮಾಜದ ಬಗ್ಗೆ ಬಯ್ತಾ ಹೋದ್ರೆ ಅದು ಮುಗಿಯದ ಪಟ್ಟಿ. … Read more

ಪುಸ್ತಕಗಳ ಲೋಕದಲ್ಲಿ:ಪ್ರಶಸ್ತಿ ಅಂಕಣ

ಮಹಾತ್ಮ ಗಾಂಧಿಯವರ ಮಾತೊಂದು ನೆನಪಾಗ್ತಿದೆ."ಪುಸ್ತಕ ಓದೋ ಹವ್ಯಾಸವುಳ್ಳವನು ಎಲ್ಲಿ ಹೋದರೂ ಖುಷಿಯಾಗಿರಬಲ್ಲ" ಎಂದು. ಚಿಕ್ಕವನಿದ್ದಾಗಿಂದ್ಲೂ ಪುಸ್ತಕ ಒಂದಿದ್ರೆ ಸಾಕು. ಎಲ್ಲಿಗೆ ಬೇಕಾದ್ರೂ ಬರ್ತಾನೆ ಈ ಮಾಣಿ ಅಂತ ನಮ್ಮ ನೆಂಟರೆಲ್ಲಾ ತಮಾಷೆ ಮಾಡೋವಷ್ಟು ಪುಸ್ತಕಗಳ ಪ್ರೀತಿ ನನಗೆ. ನನ್ನ ಅಪ್ಪ, ದೊಡ್ಡಪ್ಪಂದಿರಲ್ಲದೇ, ಅಜ್ಜ, ಮಾವಂದಿರಲ್ಲೂ ಇದ್ದ ಸಾಮಾನ್ಯ ಹವ್ಯಾಸ ಪುಸ್ತಕಪ್ರೀತಿ. ಈ ವಾತಾವರಣದ ಪ್ರಭಾವವೇ ನನ್ನ ಮೇಲೆ ಬಿದ್ದಿರಲೂ ಸಾಕು. ನನ್ನ ಮಾವ ಅಂದಾಕ್ಷಣ ಒಂದು ಮಜೆಯ ಪ್ರಸಂಗ ನೆನಪಾಗುತ್ತೆ. ಅವರ ಬಾಲ್ಯದ ಕಾಲ. ಹಳ್ಳಿಯಲ್ಲಿದ್ದ  ನಮ್ಮಜ್ಜಿ … Read more

ಬದುಕು: ಪ್ರಶಸ್ತಿ ಅಂಕಣ

ಮಳೆಯೆಂದ್ರೆ ಘೋರ ಮಳೆ. ಮಾರಿಕೊಪ್ಪೆಗೆ ತನ್ನ ಮೋರೆ ತೋರಿಸಲೂ ಬೇಸರಿಸಿದ ರವಿ ಮನೆಯೊಳಗೆ ಬೆಚ್ಚಗೆ ಮಲಗಿದ್ದಾನಾ ಎಂಬ ಭ್ರಮೆ ಮೂಡಿಸುವಂತಹ ವಾತಾವರಣ. ಊರ ಮುಂದೊಂದು ಮಾರಿಗುಡಿಯಿಂದ ಹಳ್ಳಿಗೆ ಮಾರಿಕೊಪ್ಪ ಎಂಬ ಹೆಸರು ಬಂತೇ ಅಥವಾ ಮುಳುಗಡೆಯ ವೇಳೆ ಆ ಊರ ಜನರೆಲ್ಲಾ ತಮ್ಮ ಪಿರ್ತಾರ್ಜಿತ ಜಮೀನನ್ನು ಮಾರಿ ಇಲ್ಲಿಗೆ ಗುಳೆ ಬಂದಿದ್ದರಿಂದ ಇಂತಾ ಹೆಸರೇ ಎಂದು ಅಲ್ಲಿನ ಈಗಿನ ತಲೆಮಾರಿನವರಿಗೆ ತಿಳಿದಿಲ್ಲ. ಅದೇ ಮಾರಿಗುಡಿಯ ಮುಂದೆ ಒಂದೈದು ಅಡಿ ದೂರದಲ್ಲೊಬ್ಬ ಬೋರಲು ಬಿದ್ದಿದ್ದಾನೆ. ಮಾರಿಗುಡಿಯ ಎದುರಿಗೆ ಹುಗಿದಿದ್ದ … Read more

ಪಯಣ : ಪ್ರಶಸ್ತಿ ಅಂಕಣ

ರೈಲು ಸುರಂಗದಲ್ಲಿ ಸಾಗ್ತಾ ಇತ್ತು. ಕತ್ತಲೆಯ ತೀರ್ವತೆ ತಿಳಿಯಲೆಂದೇ ಎಲ್ಲಾ ಲೈಟುಗಳನ್ನೂ ಆಫ್ ಮಾಡಿದ್ದರು. ರೈಲು ಸುರಂಗದಲ್ಲಿ ಸಾಗ್ತಿರೋ ಸದ್ದು ಬಿಟ್ಟರೆ ಬೇರೇನೂ ಇಲ್ಲ. ಎಷ್ಟುದ್ದದ ಸುರಂಗವೋ ತಿಳಿಯದು. ಜೀವನವೇ ಮರಳದ ಕತ್ತಲೆಯ ಕೂಪಕ್ಕೆ ಧುಮುಕಿದಂತೆ ಎಲ್ಲೆಡೆ ಗಾಢಾಂಧಕಾರ. ಕಣ್ಣು ತೆರೆದರೂ , ಮುಚ್ಚಿದರೂ ಒಂದೇ ಎನಿಸುವಂತಹ ಕತ್ತಲು. ಕೆಲ ಕ್ಷಣಗಳ ಮೌನದ ನಂತರ ಎಲ್ಲಾ ಕಿರಿಚತೊಡಗಿದರು. ಕತ್ತಲೆಯನ್ನು ಎಂದೂ ಕಾಣದಂತೆ ಕಂಡ ಖುಷಿಗೋ ಅಥವಾ ಪಕ್ಕದವರು ಕಿರಿಚುತ್ತಿದ್ದಾರೆಂದೋ ತಿಳಿಯದು. ಎಲ್ಲೆಡೆ ಹೋ  ಎಂಬ ಕೂಗು. ಈ … Read more

ಆರ್ಕೆಸ್ಟ್ರಾಗಳೂ ಎಕ್ಸಾಮುಗಳೂ: ಪ್ರಶಸ್ತಿ ಅಂಕಣ

ಮೊನ್ನೆ ಬೆಳಗ್ಗೆ ಟೀವಿ ಹಾಕ್ತಿದ್ದ ಹಾಗೇ ಯಾವ್ದೋ ಕಾರ್ಯಕ್ರಮ. ನಿಮ್ಮ ಆರ್ಮ್ ನ ರೈಟ್ಗೆ ೪೫ ಡಿಗ್ರಿ ರೊಟೇಟ್ ಮಾಡಿ. ಆಮೇಲೆ ಲೆಗ್ಸ ನ ಹಾಗೇ ಪುಷ್ ಮಾಡಿ. ಹಾಗೇ ೨೦ ರೌಂಡ್ಸ್ ರಿಪೀಟ್ ಮಾಡಿ… ಯಪ್ಪಾ, ಇದ್ಯಾವ ಭಾಷೆಯೋ ಶಿವನೇ. ಬೆಂಗ್ಳೂರ ಕನ್ನಡ ಇಷ್ಟು ಕರಾಬ್ ಆಯ್ತಾ ಅಂತ ಬೇಜಾರಾಗಿ ಟೀವೀನೆ ಆಫ್ ಮಾಡ್ತೆ. ಸಂಜೆ ಮನೆಗೆ ವಾಫಾಸ್ ಬಂದ್ರೂ ಮತ್ತೆ ಟೀವಿ ಹಾಕೋ ಮಸಸ್ಸಾಗಿರ್ಲಿಲ್ಲ. ಮುಖಹೊತ್ತಿಗೆ(FB 🙂 ) ತೆಗಿತಾ ಇದ್ದೆ. ಅದೇ ಸಮಯಕ್ಕೆ … Read more

ಗಡ್ಡ: ಪ್ರಶಸ್ತಿ ಅಂಕಣ

ಹಾಡ್ತಾ ಹಾಡ್ತಾ ರಾಗ, ನರಳತಾ ನರಳಾತಾ ರೋಗ ಅಂದಗೇನೇ ನೆನಿತಾ ನೆನಿತಾ ನೆನಪು ಅಂತನೂ ಹೇಳ್ಬೋದೇನೋ. ಸುಮ್ನೆ ಎಲ್ಲೋ ಹೊಳೆದ ಎಳೆಯೊಂದು ಕತೆಯಾಗಿಯೋ, ಕವಿತೆಯಾಗಿಯೋ ರೂಪುಗೊಳ್ಳಬಹುದು. ಕೆಲವೊಂದು ಎಳೆಗಳು ನೆನಪಿನಾಳಕ್ಕಿಳಿದು ನೋವ ಅಲೆಗಳನ್ನ ಕೆದಕಬಹುದು. ತನ್ನನ್ನೇ ಹಾಸ್ಯವಾಗಿಸಿ ನಗುವ ಕಡಲಲ್ಲಿ ತೇಲಿಸಲೂಬಹುದು. ಆ ಕ್ಷಣಕ್ಕೆ ಅದೇ ದೊಡ್ಡ ಹಾಸ್ಯ. ಮಿಸ್ಸಾದರೆ ಏನೂ ಇಲ್ಲ.  ತೆರೆಗಳು ಸರಿದಾಗ ಮರಳ ತಡಿಯಲ್ಲಿ ಮೂಡೋ ಚಿತ್ರಗಳಂತೆ.. ಮತ್ತೊಂದು ಅಲೆ ಬಂದು ಅದನ್ನು ತೊಳೆದು ಹಾಕೋ ತನಕ.. ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೋ … Read more

ಪೀಜಿ ಪುರಾಣ: ಪ್ರಶಸ್ತಿ ಅಂಕಣ

  ಅ: ಹಾಯ್, ನೀವೆಲ್ಲಿರೋದು ? ಬ: ಬೆಂಗ್ಳೂರು ಅ: ಓ. ಹೌದಾ.. ಬೆಂಗ್ಳೂರಲ್ಲೇನ್ ಮಾಡ್ಕೊಂಡಿದೀರಿ ? ಬ:ಪೀಜಿ ಅ:ಪೀಜಿ ಅಂದ್ರೆ ಪೋಸ್ಟ್ ಗ್ರಾಜುಯೇಷನ್ನಾ ? ಬ:ಅಲ್ಲ ಮಾರ್ರೆ.ಪೇಯಿಂಗ್ ಗೆಸ್ಟು !:-) ಈ ಬೆಂದಕಾಳೂರಿಗೆ ಬಂದು ಬಾಳ ಬೇಳೆ ಬೇಯಿಸ್ಕೊಳೋಕೆ ಶುರು ಮಾಡಿದಾಗಿನಿಂದ ಮೇಲಿನ ಪೀಜಿ PJ ಬೇಜಾರ್ ಬರೋವಷ್ಟು ಕಾಮನ್ನಾಗಿ ಹೋಗಿದೆ 🙁 ಅಲ್ಲ, ಈ ಕಾಲ ಅನ್ನೋದು ನಮ್ಮ ಕಲ್ಪನೆ, ನಂಬಿಕೆಗಳನ್ನೆಲ್ಲಾ ಎಷ್ಟು ಬದಲಾಯಿಸತ್ತೆ ಅಲ್ವಾ ? ಕೆಲವೊಂದು ಸಲ ನಂಬಿಕೆಗಳನ್ನ  ಬುಡಮೇಲೇ ಮಾಡ್ಬಿಡುತ್ತೆ. ನಾವು ಎಷ್ಟೇ ಅಂದ್ಕೊಂಡ್ರೂ … Read more

ಸಾರಿ ರೀ.. ಥ್ಯಾಂಕ್ಯೂ: ಪ್ರಶಸ್ತಿ ಅಂಕಣ

ತಪ್ಪು ಮಾಡದೋರು ಯಾರವ್ರೇ, ತಪ್ಪೇ ಮಾಡದವ್ರು ಯಾರವ್ರೇ ಅಂತ ನಮ್ಮ ಜಗ್ಗೇಶ್ ಮಠ ಫಿಲ್ಮಲ್ಲಿ ಕುಣಿದಿದ್ದು ಎಲ್ರಿಗೂ ಗೊತ್ತಿದ್ದೆ. ತಿಳಿದೋ, ತಿಳೀದೆನೋ ಏನಾರೂ ತಪ್ಪು ಮಾಡ್ತಾನೆ ಇರ್ತೀವಿ. ನಮಗೆ ಸರಿಯೆನಿಸಿದ್ದು ಯಾರಿಗೋ ತಪ್ಪೆನಿಸಿ ಅವರ ಮನ ನೋಯಿಸಿರ್ತೀವಿ. ಸುಮ್ಮನೇ ತಪ್ಪೆಣಿಸಿ ಮುಗ್ದ ಮನವನ್ನ ನೋಯಿಸಿರ್ತೀವಿ. ಯಾರೋ ತಪ್ಪು ತಿಳೀಬೋದೆಂದು ತಪ್ಪಾಗಿ ಭಾವಿಸಿ ಹೇಳಬೇಕಾದ ಮಾತು, ಮಾಡಬೇಕಾದ ಕೆಲಸ ಮಾಡದೇ ತಪ್ಪೆಸಗಿರ್ತೀವಿ. ಹೀಗೇ ಹೆಜ್ಜೆ ಹೆಜ್ಜೆಗೆ ತಪ್ಪು, ಕೂತಿದ್ದು-ನಿಂತಿದ್ದು ತಪ್ಪೆಂದು ಕಾಡಿ ಎಷ್ಟೋ ಜೀವಗಳ ಕಣ್ಣೀರಿಳಿಸಿರ್ತೀವಿ. ಕೆಲವೊಮ್ಮೆಯಂತೂ ನಾವು … Read more

ಓ ಮನಸೇ, ಸ್ವಲ್ಪ ರಿಲ್ಯಾಕ್ಸ್ ಪ್ಲೀಸ್:ಪ್ರಶಸ್ತಿ ಅಂಕಣ

ಇವತ್ತಿನ ಯಶಸ್ಸನ್ನು ನಾಳೆಯ ಗುರಿಗಳೆದುರು ನಿಲ್ಲಿಸಿ ಕಡೆಗಣಿಸೋ ಮುನ್ನ.. ಜೀವನದೋಟದಲಿ ಎಲ್ಲರಿಗಿಂತ ಮುಂದಿರೋ ಬಯಕೆಯಲಿ ದಾಟಿದ ಎಷ್ಟೋ ಮೈಲುಗಳ ಮರೆಯೋ ಮುನ್ನ.. ಜತೆಗಿದ್ದವರ ನೋವಲ್ಲಿ ದನಿಯಾಗಿ, ನಲಿವಲ್ಲಿ ಅನಾಥನಾಗೋ ಮುನ್ನ.. ಓ ಮನಸ್ಸೇ ರಿಲ್ಯಾಕ್ಸ್ ಪ್ಲೀಸ್.. ಯಶವೆಂಬುದು ಗುರಿಯಲ್ಲ, ಅನುದಿನದ ದಾರಿ.. ಓ ಮನಸ್ಸೇ ರಿಲ್ಯಾಕ್ಸ್ ಪ್ಲೀಸ್ 🙂 ಬಾಳು, ಗೋಳು, ನೋವು, ನಲಿವು .. ಉಫ್ ಏನಪ್ಪಾ ಇದು ವೇದಾಂತ ಅಂದ್ಕೊಂಡ್ರಾ ? ಹಾಗೇನಿಲ್ಲ. ಪ್ರತೀ ವಾರದಂತೆಯೇ.. ಆದರೆ ಸ್ವಲ್ಪ ಭಿನ್ನವಾಗಿ. ಸ್ವಗತದ ಮಾತುಗಳನ್ನು ಪದಗಳಿಗಿಳಿಸೋ … Read more